Homeಮುಖಪುಟಬಿಹಾರ್: ವೈದ್ಯರ ಅನುಪಸ್ಥಿತಿಯಲ್ಲಿ ಸಂತಾನಹರಣ ಶಸ್ತ್ರಚಿಕಿತ್ಸೆ ನಡೆಸಿದ ಕಾಂಪೌಂಡರ್; ಮಹಿಳೆ ಸಾವು

ಬಿಹಾರ್: ವೈದ್ಯರ ಅನುಪಸ್ಥಿತಿಯಲ್ಲಿ ಸಂತಾನಹರಣ ಶಸ್ತ್ರಚಿಕಿತ್ಸೆ ನಡೆಸಿದ ಕಾಂಪೌಂಡರ್; ಮಹಿಳೆ ಸಾವು

- Advertisement -
- Advertisement -

ವೈದ್ಯರ ಅನುಪಸ್ಥಿತಿಯಲ್ಲಿ ಖಾಸಗಿ ಆರೋಗ್ಯ ಕೇಂದ್ರದ ಕಿರಿಯ ಸಿಬ್ಬಂದಿ ಮಹಿಳೆಯೊಬ್ಬರಿಗೆ ಸಂತಾನಹರಣ ಶಸ್ತ್ರಚಿಕಿತ್ಸೆ ನಡೆಸಿದ ನಂತರ ಆಕೆ ಮೃತಪಟ್ಟಿದ್ದಾರೆ ಎಂದು ಪೋಷಕರು ಆರೋಪಿಸಿದ್ದು, ಈ ಬಗ್ಗೆ ತನಿಖೆ ನಡೆಸುತ್ತಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

ಬಿಹಾರದ ಸಮಸ್ತಿಪುರ್‌ನಲ್ಲಿ 28 ವರ್ಷದ ಮಹಿಳೆಯೊಬ್ಬರು ಸಾವನ್ನಪ್ಪಿದ್ದು, ರಾಜ್ಯದ ರಾಜಧಾನಿ ಪಾಟ್ನಾದಿಂದ ಸುಮಾರು 80 ಕಿಮೀ ದೂರದಲ್ಲಿರುವ ಜಿಲ್ಲೆಯ ಮುಸ್ರಿಘರಾರಿ ಎಂಬ ಸಣ್ಣ ಪಟ್ಟಣದಲ್ಲಿ ಈ ಘಟನೆ ವರದಿಯಾಗಿದೆ. ಸಂತಾನಹರಣ ಶಸ್ತ್ರಚಿಕಿತ್ಸೆಗಾಗಿ ಅನಿಶಾ ಆರೋಗ್ಯ ಕೇಂದ್ರಕ್ಕೆ ಕರೆತಂದಿದ್ದೇವೆ ಎಂದು ಬಬಿತಾ ದೇವಿ ಸಂಬಂಧಿಕರು ಹೇಳಿದ್ದಾರೆ. ಸಣ್ಣ ಆರೋಗ್ಯ ಕೇಂದ್ರವು ಎರಡು ಅಂತಸ್ತಿನ ಕಟ್ಟಡದ ಮೊದಲ ಮಹಡಿಯಲ್ಲಿದೆ.

‘ವೈದ್ಯರು ಲಭ್ಯವಿಲ್ಲ ಎಂದು ಕೇಂದ್ರದ ಸಿಬ್ಬಂದಿ ಹೇಳಿದ ನಂತರ ಕಾಂಪೌಂಡರ್ ಶಸ್ತ್ರಚಿಕಿತ್ಸೆ ನಡೆಸಲು ಮುಂದಾದರು’ ಎಂದು ಮಹಿಳೆಯ ಸಂಬಂಧಿಕರು ಹೇಳಿದ್ದಾರೆ.

“ನಾವು ಅವಳನ್ನು 9 ಗಂಟೆಗೆ ಇಲ್ಲಿಗೆ ಕರೆತಂದೆವು, ಅವರು ಅವಳಿಗೆ ಲವಣಯುಕ್ತ ನೀರನ್ನು ನೀಡಿದರು. ಸುಮಾರು 11 ಗಂಟೆಗೆ, ಅವರು ಆರಪೇಷನ್ ಪ್ರಾರಂಭಿಸಿದರು. ಸುಮಾರು ಒಂದು ಗಂಟೆಯ ನಂತರ, ಅವರು ಅವಳನ್ನು ಆಂಬ್ಯುಲೆನ್ಸ್‌ಗೆ ಸೇರಿಸಿದರು ಮತ್ತು ಮೋಹನ್‌ಪುರದ ಆಸ್ಪತ್ರೆಗೆ (ಸುಮಾರು 10 ಕಿ.ಮೀ ದೂರ) ಕರೆದೊಯ್ದರು” ಎಂದು ಮಹಿಳೆಯ ಚಿಕ್ಕಪ್ಪ ವಿವರಿಸಿದ್ದಾರೆ.

ಆಕೆಯ ಸ್ಥಿತಿಯ ಬಗ್ಗೆ ಕುಟುಂಬ ಸದಸ್ಯರಿಗೆ ಏನನ್ನೂ ಹೇಳಿಲ್ಲ. ಆದರೆ, ಪೋಷಕರು ಆಕೆಯನ್ನು ಪರೀಕ್ಷಿಸಲು ದೇಹ ಮುಟ್ಟಿದಾಗ ತಂಪಾಗಿತ್ತು ಎಂದು ಅವರು ಹೇಳಿದರು. “ಅವಳು ಇಲ್ಲಿಯೇ ಸತ್ತಳು. ಆದರೆ ಅವರು ನಮಗೆ ಹೇಳದೆ ಮೋಹನಪುರಕ್ಕೆ ಸಾಗಿಸಿದರು” ಎಂದು ಮೃತ ಮಹಿಳೆಯ ಚಿಕ್ಕಪ್ಪ ಆರೋಪ ಮಾಡಿದ್ದಾರೆ.

ಬಬಿತಾ ದೇವಿ ಸಾವು ಖಚಿತವಾದ ಬಳಿಕ ಆಕೆಯ ಸಂಬಂಧಿಕರು ಮೃತದೇಹವನ್ನು ಅನಿಶಾ ಆರೋಗ್ಯ ಕೇಂದ್ರಕ್ಕೆ ತಂದು ಪ್ರತಿಭಟನೆ ನಡೆಸಿದರು. ಮುಸ್ರಿಘರಾರಿ ಪಟ್ಟಣದ ಯಾವುದೇ ಆರೋಗ್ಯ ಕೇಂದ್ರದಲ್ಲಿ ವೈದ್ಯರಿಲ್ಲ ಮತ್ತು ಕಾಂಪೌಂಡರ್‌ಗಳು ಎಂದು ಕರೆಯಲ್ಪಡುವ ಕಿರಿಯ ಸಿಬ್ಬಂದಿ ಎಲ್ಲಾ ವೈದ್ಯಕೀಯ ಕಾರ್ಯವಿಧಾನಗಳನ್ನು ನಿರ್ವಹಿಸುತ್ತಿದ್ದಾರೆ ಮತ್ತು ರೋಗಿಗಳ ಜೀವಕ್ಕೆ ಅಪಾಯವನ್ನುಂಟುಮಾಡುತ್ತಿದ್ದಾರೆ ಎಂದು ಕುಟುಂಬ ಆರೋಪಿಸಿದೆ.

ಅನಿಶಾ ಆರೋಗ್ಯ ಕೇಂದ್ರದ ಸಿಬ್ಬಂದಿ ಪರಾರಿಯಾಗಿದ್ದಾರೆ; ಪ್ರತಿಯೊಬ್ಬರ ವಿರುದ್ಧವೂ ಪೊಲೀಸ್ ಕೇಸ್ ಹಾಕುವಂತೆ ಮಹಿಳೆಯ ಸಂಬಂಧಿಕರು ಒತ್ತಾಯಿಸಿದ್ದಾರೆ. ಈ ಕುರಿತು ತನಿಖೆ ನಡೆಸುತ್ತಿದ್ದು, ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಸ್ಥಳೀಯ ಪೊಲೀಸ್ ಠಾಣೆ ಪ್ರಭಾರಿ ಫೈಜುಲ್ ಅನ್ಸಾರಿ ತಿಳಿಸಿದ್ದಾರೆ.

ಇದನ್ನೂ ಓದಿ; ಮುಖ್ಯವಾಹಿನಿಯ ಮಾಧ್ಯಮಗಳು ಎಡಪಕ್ಷಗಳನ್ನು ಬಹಿಷ್ಕರಿಸುತ್ತಿವೆ: ಪಿಣರಾಯಿ ವಿಜಯನ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಜೆಪಿ ನಿಯೋಗದಿಂದ ಕರ್ನಾಟಕ ರಾಜ್ಯಪಾಲರ ಭೇಟಿ: ‘ದ್ವೇಷ ಭಾಷಣ ತಡೆ’ ಮಸೂದೆಗೆ ಒಪ್ಪಿಗೆ ನೀಡದಂತೆ ಮನವಿ

ಬೆಂಗಳೂರು: ದ್ವೇಷ ಭಾಷಣ ಮಸೂದೆಯನ್ನು"ವಾಕ್ ಸ್ವಾತಂತ್ರ್ಯದ ಮೇಲಿನ ನೇರ ದಾಳಿ" ಮತ್ತು "ರಾಜಕೀಯ ಸೇಡಿನ ಸಾಧನ" ಎಂದು ಕರೆದಿರುವ ಬಿಜೆಪಿ ನಾಯಕರ ನಿಯೋಗವು ಸೋಮವಾರ ಕರ್ನಾಟಕ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಅವರನ್ನು ಭೇಟಿ...

ಟೆಕ್ಕಿ ಶರ್ಮಿಳಾ ಕೊಲೆ ಪ್ರಕರಣ : ಪಿಯು ವಿದ್ಯಾರ್ಥಿಯನ್ನು ಬಂಧಿಸಿದ ಪೊಲೀಸರು

ಬೆಂಗಳೂರಿನ ರಾಮಮೂರ್ತಿ ನಗರದ ಸುಬ್ರಹ್ಮಣ್ಯ ಬಡಾವಣೆಯಲ್ಲಿ 2026ರ ಜನವರಿ 3ರಂದು ರಾತ್ರಿ ನಡೆದ ಮಂಗಳೂರು ಮೂಲದ ಸಾಫ್ಟ್‌ವೇರ್ ಇಂಜಿನಿಯರ್ ಶರ್ಮಿಳಾ ಕುಶಾಲಪ್ಪ (34) ಅವರ ಕೊಲೆ ಪ್ರಕರಣವನ್ನು ಪೊಲೀಸರು ಬೇಧಿಸಿದ್ದಾರೆ. ಆರಂಭದಲ್ಲಿ, ಫ್ಲ್ಯಾಟ್‌ಗೆ ಬೆಂಕಿ...

ಎಸ್‌ಎಸ್‌ಎಲ್‌ಸಿ ಪ್ರಶ್ನೆ ಪತ್ರಿಕೆ ಸೋರಿಕೆ: ಸಾಮಾಜಿಕ ಮಾಧ್ಯಮದಲ್ಲಿ 200-500 ರೂ.ಗೆ ಮಾರಾಟ: ಆರು ಶಿಕ್ಷಕರು, ಇಬ್ಬರು ಅಪ್ರಾಪ್ತ ವಿದ್ಯಾರ್ಥಿಗಳ ಬಂಧನ

ಬೆಂಗಳೂರು: ಎಸ್‌ಎಸ್‌ಎಲ್‌ಸಿ ಪೂರ್ವಸಿದ್ಧತಾ ಪರೀಕ್ಷೆಯ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದ ತನಿಖೆಯ ಸಂದರ್ಭದಲ್ಲಿ ಆಘಾತಕಾರಿ ಮಾಹಿತಿಗಳು ಹೊರಬಿದ್ದಿವೆ. ವಿದ್ಯಾರ್ಥಿಗಳು ಪ್ರಶ್ನೆಪತ್ರಿಕೆಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಬಹಿರಂಗವಾಗಿ ಜಾಹೀರಾತು ಮಾಡಿ ಖಾಸಗಿ ಸಂದೇಶಗಳ ಮೂಲಕ 200 ರಿಂದ...

ಕರೂರ್ ಕಾಲ್ತುಳಿತ : ಸಿಬಿಐ ಮುಂದೆ ವಿಚಾರಣೆಗೆ ಹಾಜರಾದ ನಟ ವಿಜಯ್

ಕರೂರ್ ಕಾಲ್ತುಳಿತ ಘಟನೆಗೆ ಸಂಬಂಧಪಟ್ಟಂತೆ ನಟ ಹಾಗೂ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ಮುಖ್ಯಸ್ಥ ವಿಜಯ್ ಸೋಮವಾರ (ಜ.12) ದೆಹಲಿಯ ಕೇಂದ್ರ ತನಿಖಾ ದಳ (ಸಿಬಿಐ) ಕಚೇರಿಗೆ ವಿಚಾರಣೆಗೆ ಹಾಜರಾಗಿದ್ದಾರೆ. ಚಾರ್ಟರ್ಡ್ ವಿಮಾನದಲ್ಲಿ...

ಜೂನ್‌ ಅಂತ್ಯದೊಳಗೆ ಜಿಬಿಎ ವ್ಯಾಪ್ತಿಯ ಪಾಲಿಕೆಗಳಿಗೆ ಚುನಾವಣೆ : ಗಡುವು ವಿಧಿಸಿದ ಸುಪ್ರೀಂ ಕೋರ್ಟ್

ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ವ್ಯಾಪ್ತಿಯ ಐದು ನಗರ ಪಾಲಿಕೆಗಳಿಗೆ ಜೂನ್ ಅಂತ್ಯದೊಳಗೆ ಚುನಾವಣೆ ನಡೆಸುವಂತೆ ರಾಜ್ಯ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಸೋಮವಾರ (ಜ.12) ನಿರ್ದೇಶನ ನೀಡಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ಮತ್ತು...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಸುಪ್ರೀಂ ಕೋರ್ಟ್ ನಲ್ಲಿ ಮಮತಾ ವಿರುದ್ಧ ಎಫ್‌ಐಆರ್ ದಾಖಲಿಸಲು ನಿರ್ದೇಶನ ಕೋರಿ ಅರ್ಜಿ ಸಲ್ಲಿಸಿದ ಇಡಿ

ನವದೆಹಲಿ: ಐ-ಪಿಎಸಿ ವಿರುದ್ಧದ ಬಹು-ರಾಜ್ಯ ಹಣ ವರ್ಗಾವಣೆ ಪ್ರಕರಣದಲ್ಲಿ ತನಿಖೆಗೆ ಅಡ್ಡಿಪಡಿಸಿದ, ಸಾಕ್ಷ್ಯಗಳನ್ನು ತಿರುಚಿದ ಮತ್ತು ನಾಶಪಡಿಸಿದ ಆರೋಪದ ಮೇಲೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಡಿಜಿಪಿ ಮತ್ತು ಕೋಲ್ಕತ್ತಾ ಪೊಲೀಸ್...

ಭಾರತಕ್ಕಿಂತ ಯಾವುದೇ ಪಾಲುದಾರ ದೇಶ ಮುಖ್ಯವಲ್ಲ, ವ್ಯಾಪಾರ ಮಾತುಕತೆ ಪುನರಾರಂಭ: ಅಮೆರಿಕ ರಾಯಭಾರಿ ಸೆರ್ಗಿಯೊ ಗೋರ್

"ವಾಷಿಂಗ್ಟನ್‌ಗೆ ಭಾರತಕ್ಕಿಂತ ಅಗತ್ಯವಾದ ದೇಶ ಇನ್ನೊಂದಿಲ್ಲ ಮತ್ತು ಎರಡೂ ಕಡೆಯವರು ವ್ಯಾಪಾರ ಒಪ್ಪಂದವನ್ನು ದೃಢೀಕರಿಸುವಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ" ಎಂದು ಅಮೆರಿಕದ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್ ಸೋಮವಾರ ಹೇಳಿದ್ದಾರೆ. ಅಮೆರಿಕ ರಾಯಭಾರ ಕಚೇರಿಯ ನೌಕರರು...

ಬಿಷಪ್ ಫ್ರಾಂಕೊ ಮುಲಕ್ಕಲ್ ಅತ್ಯಾಚಾರ ಪ್ರಕರಣ : ಒಂಬತ್ತು ವರ್ಷಗಳ ಬಳಿಕ ಮೌನ ಮುರಿದ ಸಂತ್ರಸ್ತೆ, ಕಾನೂನು ಹೋರಾಟ ಮುಂದುವರಿಸುವುದಾಗಿ ಹೇಳಿಕೆ

ಬಿಷಪ್ ಫ್ರಾಂಕೊ ಮುಲಕ್ಕಲ್ ವಿರುದ್ದದ ಅತ್ಯಾಚಾರ ಪ್ರಕರಣದ ಸಂತ್ರಸ್ತೆ ಕ್ರೈಸ್ತ ಸನ್ಯಾಸಿನಿ ಒಂಬತ್ತು ವರ್ಷಗಳ ನಂತರ ಮೊದಲ ಬಾರಿಗೆ ಸಾರ್ವಜನಿಕವಾಗಿ ಮಾತನಾಡಿದ್ದು, ಫ್ರಾಂಕೊ ಮುಲಕ್ಕಲ್ ಅವರನ್ನು ನ್ಯಾಯಾಲಯ ಖುಲಾಸೆಗೊಳಿಸಿದ್ದಕ್ಕೆ ನಾನು ದಂಗಾಗಿದ್ದೇನೆ. ನ್ಯಾಯಕ್ಕಾಗಿ...

‘ವೆನೆಜುವೆಲಾದ ಹಂಗಾಮಿ ಅಧ್ಯಕ್ಷ’ ಎಂದು ಘೋಷಿಸಿಕೊಂಡ ಡೊನಾಲ್ಡ್ ಟ್ರಂಪ್ 

ಸೋಮವಾರ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಟ್ರುತ್ ಸೋಶಿಯಲ್‌ನಲ್ಲಿ ತಮ್ಮದೇ ಆದ ವಿಕಿಪೀಡಿಯಾ ಪುಟದ ಫೋಟೋವನ್ನು ಪೋಸ್ಟ್ ಮಾಡಿದ್ದಾರೆ, ಅದರಲ್ಲಿ "ವೆನೆಜುವೆಲಾದ ಹಂಗಾಮಿ ಅಧ್ಯಕ್ಷ" ಎಂಬ ಹುದ್ದೆಯನ್ನು ಹೊಂದಿರುವ ಅವರ ಚಿತ್ರವಿದೆ. ಪೋಸ್ಟ್‌ನಲ್ಲಿ ಟ್ರಂಪ್...

ಪೊಲೀಸ್ ತುರ್ತು ವಾಹನದ ಚಾಲಕ ಸೇರಿ ಐವರಿಂದ ಯುವತಿ ಮೇಲೆ ಅತ್ಯಾಚಾರ!

ಪೊಲೀಸ್ ತುರ್ತು ಸೇವೆ (112) ವಾಹನದ ಚಾಲಕ ಸೇರಿದಂತೆ ಐವರು ಪುರುಷರು 19 ವರ್ಷದ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ಛತ್ತೀಸ್‌ಗಢದ ಕೋರ್ಬಾ ಜಿಲ್ಲೆಯ ಬಂಕಿಮೊಂಗ್ರ ಪ್ರದೇಶದಲ್ಲಿ ನಡೆದಿದೆ. ಜನವರಿ...