Homeಮುಖಪುಟದೂರದರ್ಶನದ ಲೋಗೋ ಬಣ್ಣ ಬದಲಾವಣೆ ಕೇಸರೀಕರಣದ ಭಾಗ: ಎಂಕೆ ಸ್ಟಾಲಿನ್

ದೂರದರ್ಶನದ ಲೋಗೋ ಬಣ್ಣ ಬದಲಾವಣೆ ಕೇಸರೀಕರಣದ ಭಾಗ: ಎಂಕೆ ಸ್ಟಾಲಿನ್

- Advertisement -
- Advertisement -

ದೂರದರ್ಶನದ ಲೋಗೋವನ್ನು ಕೆಂಪು ಬಣ್ಣದಿಂದ ಕೇಸರಿ ಬಣ್ಣಕ್ಕೆ ಬದಲಾಯಿಸಿರುವುದನ್ನು ಟೀಕಿಸಿರುವ ಡಿಎಂಕೆ ಅಧ್ಯಕ್ಷ ಮತ್ತು ತಮಿಳುನಾಡು ಮುಖ್ಯಮಂತ್ರಿ ಎಂ ಕೆ ಸ್ಟಾಲಿನ್, ಎಲ್ಲವನ್ನೂ ಕೇಸರಿಮಯಗೊಳಿಸುವ ಬಿಜೆಪಿಯ ಪಿತೂರಿಯ ಪೂರ್ವಭಾವಿ ಪ್ರಯತ್ನ ಎಂದು ಹೇಳಿದ್ದಾರೆ.

ದೂರದರ್ಶನದ ಲೋಗೋ ಬದಲಾವಣೆ ಕುರಿತು ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿರುವ ಎಂ ಕೆ ಸ್ಟಾಲಿನ್, ದೂರದರ್ಶನಕ್ಕೆ ‘ಕೇಸರಿ ಕಲೆ’ ನೀಡಲಾಗಿದೆ. ಎಲ್ಲವನ್ನೂ ಕೇಸರಿಮಯಗೊಳಿಸುವ ಬಿಜೆಪಿಯ ಷಡ್ಯಂತ್ರ ಇದು ಎಂದು ಚುನಾವಣಾ ಪ್ರಚಾರದ ವೇಳೆ ಹೇಳಿರುವ ಹೇಳಿಕೆಯನ್ನು ಸ್ಟಾಲಿನ್‌ ಉಲ್ಲೇಖಿಸಿದ್ದಾರೆ. ಲೋಗೋ ಬದಲಾವಣೆಯಂತಹ ಕ್ರಮಗಳು ಕೇಸರೀಕರಣದ ಪೂರ್ವಭಾವಿಯಾಗಿವೆ. 2024ರ ಲೋಕಸಭಾ ಚುನಾವಣಾ ಫಲಿತಾಂಶವು ಅಂತಹ ಫ್ಯಾಸಿಸಂ ಶಕ್ತಿಗಳ ವಿರುದ್ಧ ಸಾರ್ವಜನಿಕ ಪ್ರತಿರೋಧವನ್ನು ತೋರಿಸಲಿದೆ ಎಂದು ಹೇಳಿದ್ದಾರೆ.

ಈ ಹಿಂದೆ ತಮಿಳು ಸಂತ ಕವಿ ತಿರುವಳ್ಳುವರ್ ಅವರನ್ನು ‘ಕೇಸರಿಮಯ’ಗೊಳಿಸಿದ್ದನ್ನು ಸ್ಮರಿಸಿದ ಅವರು, ತಮಿಳುನಾಡಿನ ಮಹಾನ್ ನಾಯಕರ ಪ್ರತಿಮೆಗಳಿಗೆ ಕೇಸರಿ ಬಣ್ಣವನ್ನು ಸುರಿಯಲಾಗಿತ್ತು ಎಂದು ಹೇಳಿದ್ದಾರೆ.

ಸರಕಾರಿ ಸ್ವಾಮ್ಯದ ದೂರದರ್ಶನ ಚಾನೆಲ್ ಡಿಡಿ ಲೋಗೋ ಬಣ್ಣ ಬದಲಾವಣೆಯು ಕಾನೂನುಬಾಹಿರ ಎಂದು ಪ್ರತಿಪಕ್ಷಗಳು ಈಗಾಗಲೇ ಟೀಕಿಸಿವೆ. ಸರ್ಕಾರಿ ಸ್ವಾಮ್ಯದ ಸಾರ್ವಜನಿಕ ಸುದ್ದಿ ದೂರದರ್ಶನ ಚಾನೆಲ್ ಡಿಡಿ ನ್ಯೂಸ್‌ನ ಲೋಗೋವನ್ನು ಕೆಂಪು ಬಣ್ಣದಿಂದ- ಕೇಸರಿ ಬಣ್ಣಕ್ಕೆ ಮರುಬ್ರಾಂಡ್ ಮಾಡಲಾಗಿದೆ. ಡಿಡಿ ನ್ಯೂಸ್‌ನ ಅಧಿಕೃತ ಎಕ್ಸ್  ಹ್ಯಾಂಡಲ್ ಮೂಲಕ ಬದಲಾವಣೆ ಬಗ್ಗೆ ಪ್ರಕಟಣೆಯನ್ನು ಹೊರಡಿಸಲಾಗಿತ್ತು. ನಮ್ಮ ಮೌಲ್ಯಗಳಲ್ಲಿ ಯಾವುದೇ ಬದಲಾವಣೆಗಳಿಲ್ಲ, ಆದರೆ ನಾವು ಈಗ ಹೊಸ ಅವತಾರದಲ್ಲಿ ಲಭ್ಯವಿದ್ದೇವೆ ಎಂದು ಪೋಸ್ಟ್‌ ಮೂಲಕ ದೂರದರ್ಶನ ಮಾಹಿತಿ ನೀಡಿತ್ತು.

ದೂರದರ್ಶನದ ಲೋಗೋ ಬದಲಾವಣೆಯ ಬಗ್ಗೆ ರಾಜ್ಯಸಭಾ ಸದಸ್ಯ ಮತ್ತು ಪ್ರಸಾರ ಭಾರತಿಯ ಮಾಜಿ ಸಿಇಒ ಜವಾಹರ್ ಸಿರ್ಕಾರ್ ಅವರು ಟೀಕಿಸಿದ್ದಾರೆ. ದೂರದರ್ಶನವು ತನ್ನ ಬಣ್ಣವನ್ನು ಕೇಸರಿಗೆ ಬದಲಿಸಿಕೊಂಡಿದ್ದು ಅಕ್ಷಮ್ಯ ಅಪರಾಧ ಎಂದು ಹೇಳಿದ್ದಾರೆ. ದೂರದರ್ಶನದಲ್ಲಿ ಆಗುತ್ತಿರುವ ಕೇಸರೀಕರಣದ ಬದಲಾವಣೆಯನ್ನು ನೋಡಿಕೊಂಡು ಬರುತ್ತಿದ್ದೇನೆ. ಪ್ರಸಾರ ಭಾರತಿ ಈಗ ಹಿಂದಿನ ಮೌಲ್ಯಗಳನ್ನು ಉಳಿಸಿಕೊಂಡಿಲ್ಲ. ಈಗ, ಅದು ಪ್ರಚಾರ ಭಾರತಿ ಆಗಿದೆ ಎಂದು ಜವಾಹರ್ ಸಿರ್ಕಾರ್ ಹೇಳಿದ್ದರು.

2012ರಿಂದ 2014ರ ಅವಧಿಯಲ್ಲಿ ಕೇಂದ್ರ ಮಾಹಿತಿ ಮತ್ತು ತಂತ್ರಜ್ಞಾನ ಸಚಿವರಾಗಿದ್ದ ಕಾಂಗ್ರೆಸ್‌ನ ಮನೀಶ್ ತಿವಾರಿ, ದೂರದರ್ಶನದ ಲೋಗೋ ಬಣ್ಣ ಬದಲಾವಣೆಯು ಸರ್ಕಾರಿ ಸಂಸ್ಥೆಗಳನ್ನು ವಶಪಡಿಸಿಕೊಳ್ಳುವ ಸರ್ಕಾರದ ಪ್ರಯತ್ನದ ಒಂದು ಭಾಗವಾಗಿದೆ ಎಂದು ಆರೋಪಿಸಿದ್ದರು.

ಇದನ್ನು ಓದಿ: ಕನ್ನಡಿಗರಿಗೆ ಕೊಟ್ಟ ‘ಖಾಲಿ ಚೊಂಬಿ’ಗೆ ಕನ್ನಡಿಗರಿಂದ ‘ಖಾಲಿ ಕುರ್ಚಿ’ಯ ಉತ್ತರ: ಮೋದಿ ಸಭೆಯಲ್ಲಿ ಕುರ್ಚಿಗಳು ಖಾಲಿ-ಖಾಲಿ; ವಿಡಿಯೋ ಹಂಚಿಕೊಂಡ ಕಾಂಗ್ರೆಸ್

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...