Homeಮುಖಪುಟದೂರದರ್ಶನದ ಲೋಗೋ ಬಣ್ಣ ಬದಲಾವಣೆ ಕೇಸರೀಕರಣದ ಭಾಗ: ಎಂಕೆ ಸ್ಟಾಲಿನ್

ದೂರದರ್ಶನದ ಲೋಗೋ ಬಣ್ಣ ಬದಲಾವಣೆ ಕೇಸರೀಕರಣದ ಭಾಗ: ಎಂಕೆ ಸ್ಟಾಲಿನ್

- Advertisement -
- Advertisement -

ದೂರದರ್ಶನದ ಲೋಗೋವನ್ನು ಕೆಂಪು ಬಣ್ಣದಿಂದ ಕೇಸರಿ ಬಣ್ಣಕ್ಕೆ ಬದಲಾಯಿಸಿರುವುದನ್ನು ಟೀಕಿಸಿರುವ ಡಿಎಂಕೆ ಅಧ್ಯಕ್ಷ ಮತ್ತು ತಮಿಳುನಾಡು ಮುಖ್ಯಮಂತ್ರಿ ಎಂ ಕೆ ಸ್ಟಾಲಿನ್, ಎಲ್ಲವನ್ನೂ ಕೇಸರಿಮಯಗೊಳಿಸುವ ಬಿಜೆಪಿಯ ಪಿತೂರಿಯ ಪೂರ್ವಭಾವಿ ಪ್ರಯತ್ನ ಎಂದು ಹೇಳಿದ್ದಾರೆ.

ದೂರದರ್ಶನದ ಲೋಗೋ ಬದಲಾವಣೆ ಕುರಿತು ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿರುವ ಎಂ ಕೆ ಸ್ಟಾಲಿನ್, ದೂರದರ್ಶನಕ್ಕೆ ‘ಕೇಸರಿ ಕಲೆ’ ನೀಡಲಾಗಿದೆ. ಎಲ್ಲವನ್ನೂ ಕೇಸರಿಮಯಗೊಳಿಸುವ ಬಿಜೆಪಿಯ ಷಡ್ಯಂತ್ರ ಇದು ಎಂದು ಚುನಾವಣಾ ಪ್ರಚಾರದ ವೇಳೆ ಹೇಳಿರುವ ಹೇಳಿಕೆಯನ್ನು ಸ್ಟಾಲಿನ್‌ ಉಲ್ಲೇಖಿಸಿದ್ದಾರೆ. ಲೋಗೋ ಬದಲಾವಣೆಯಂತಹ ಕ್ರಮಗಳು ಕೇಸರೀಕರಣದ ಪೂರ್ವಭಾವಿಯಾಗಿವೆ. 2024ರ ಲೋಕಸಭಾ ಚುನಾವಣಾ ಫಲಿತಾಂಶವು ಅಂತಹ ಫ್ಯಾಸಿಸಂ ಶಕ್ತಿಗಳ ವಿರುದ್ಧ ಸಾರ್ವಜನಿಕ ಪ್ರತಿರೋಧವನ್ನು ತೋರಿಸಲಿದೆ ಎಂದು ಹೇಳಿದ್ದಾರೆ.

ಈ ಹಿಂದೆ ತಮಿಳು ಸಂತ ಕವಿ ತಿರುವಳ್ಳುವರ್ ಅವರನ್ನು ‘ಕೇಸರಿಮಯ’ಗೊಳಿಸಿದ್ದನ್ನು ಸ್ಮರಿಸಿದ ಅವರು, ತಮಿಳುನಾಡಿನ ಮಹಾನ್ ನಾಯಕರ ಪ್ರತಿಮೆಗಳಿಗೆ ಕೇಸರಿ ಬಣ್ಣವನ್ನು ಸುರಿಯಲಾಗಿತ್ತು ಎಂದು ಹೇಳಿದ್ದಾರೆ.

ಸರಕಾರಿ ಸ್ವಾಮ್ಯದ ದೂರದರ್ಶನ ಚಾನೆಲ್ ಡಿಡಿ ಲೋಗೋ ಬಣ್ಣ ಬದಲಾವಣೆಯು ಕಾನೂನುಬಾಹಿರ ಎಂದು ಪ್ರತಿಪಕ್ಷಗಳು ಈಗಾಗಲೇ ಟೀಕಿಸಿವೆ. ಸರ್ಕಾರಿ ಸ್ವಾಮ್ಯದ ಸಾರ್ವಜನಿಕ ಸುದ್ದಿ ದೂರದರ್ಶನ ಚಾನೆಲ್ ಡಿಡಿ ನ್ಯೂಸ್‌ನ ಲೋಗೋವನ್ನು ಕೆಂಪು ಬಣ್ಣದಿಂದ- ಕೇಸರಿ ಬಣ್ಣಕ್ಕೆ ಮರುಬ್ರಾಂಡ್ ಮಾಡಲಾಗಿದೆ. ಡಿಡಿ ನ್ಯೂಸ್‌ನ ಅಧಿಕೃತ ಎಕ್ಸ್  ಹ್ಯಾಂಡಲ್ ಮೂಲಕ ಬದಲಾವಣೆ ಬಗ್ಗೆ ಪ್ರಕಟಣೆಯನ್ನು ಹೊರಡಿಸಲಾಗಿತ್ತು. ನಮ್ಮ ಮೌಲ್ಯಗಳಲ್ಲಿ ಯಾವುದೇ ಬದಲಾವಣೆಗಳಿಲ್ಲ, ಆದರೆ ನಾವು ಈಗ ಹೊಸ ಅವತಾರದಲ್ಲಿ ಲಭ್ಯವಿದ್ದೇವೆ ಎಂದು ಪೋಸ್ಟ್‌ ಮೂಲಕ ದೂರದರ್ಶನ ಮಾಹಿತಿ ನೀಡಿತ್ತು.

ದೂರದರ್ಶನದ ಲೋಗೋ ಬದಲಾವಣೆಯ ಬಗ್ಗೆ ರಾಜ್ಯಸಭಾ ಸದಸ್ಯ ಮತ್ತು ಪ್ರಸಾರ ಭಾರತಿಯ ಮಾಜಿ ಸಿಇಒ ಜವಾಹರ್ ಸಿರ್ಕಾರ್ ಅವರು ಟೀಕಿಸಿದ್ದಾರೆ. ದೂರದರ್ಶನವು ತನ್ನ ಬಣ್ಣವನ್ನು ಕೇಸರಿಗೆ ಬದಲಿಸಿಕೊಂಡಿದ್ದು ಅಕ್ಷಮ್ಯ ಅಪರಾಧ ಎಂದು ಹೇಳಿದ್ದಾರೆ. ದೂರದರ್ಶನದಲ್ಲಿ ಆಗುತ್ತಿರುವ ಕೇಸರೀಕರಣದ ಬದಲಾವಣೆಯನ್ನು ನೋಡಿಕೊಂಡು ಬರುತ್ತಿದ್ದೇನೆ. ಪ್ರಸಾರ ಭಾರತಿ ಈಗ ಹಿಂದಿನ ಮೌಲ್ಯಗಳನ್ನು ಉಳಿಸಿಕೊಂಡಿಲ್ಲ. ಈಗ, ಅದು ಪ್ರಚಾರ ಭಾರತಿ ಆಗಿದೆ ಎಂದು ಜವಾಹರ್ ಸಿರ್ಕಾರ್ ಹೇಳಿದ್ದರು.

2012ರಿಂದ 2014ರ ಅವಧಿಯಲ್ಲಿ ಕೇಂದ್ರ ಮಾಹಿತಿ ಮತ್ತು ತಂತ್ರಜ್ಞಾನ ಸಚಿವರಾಗಿದ್ದ ಕಾಂಗ್ರೆಸ್‌ನ ಮನೀಶ್ ತಿವಾರಿ, ದೂರದರ್ಶನದ ಲೋಗೋ ಬಣ್ಣ ಬದಲಾವಣೆಯು ಸರ್ಕಾರಿ ಸಂಸ್ಥೆಗಳನ್ನು ವಶಪಡಿಸಿಕೊಳ್ಳುವ ಸರ್ಕಾರದ ಪ್ರಯತ್ನದ ಒಂದು ಭಾಗವಾಗಿದೆ ಎಂದು ಆರೋಪಿಸಿದ್ದರು.

ಇದನ್ನು ಓದಿ: ಕನ್ನಡಿಗರಿಗೆ ಕೊಟ್ಟ ‘ಖಾಲಿ ಚೊಂಬಿ’ಗೆ ಕನ್ನಡಿಗರಿಂದ ‘ಖಾಲಿ ಕುರ್ಚಿ’ಯ ಉತ್ತರ: ಮೋದಿ ಸಭೆಯಲ್ಲಿ ಕುರ್ಚಿಗಳು ಖಾಲಿ-ಖಾಲಿ; ವಿಡಿಯೋ ಹಂಚಿಕೊಂಡ ಕಾಂಗ್ರೆಸ್

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಿಜೆಪಿ ಪ್ರತಿಭಟನೆ: ವಿದ್ಯಾರ್ಥಿಗಳ ಮೇಲೆ ‘ಪೆಲೆಟ್‌ ಗನ್’ ದಾಳಿ ದೃಢ; ನಿಯಮಾವಳಿಗಳನ್ನು ಉಲ್ಲಂಘಿಸಿ ಬಲಪ್ರಯೋಗ ನಡೆಸಿರುವ RAF

ನವದೆಹಲಿ: ತಮ್ಮ ಹಕ್ಕುಗಳಿಗಾಗಿ ಪ್ರಜಾಸತ್ತಾತ್ಮಕವಾಗಿ ಧ್ವನಿ ಎತ್ತುತ್ತಿದ್ದ ವಿದ್ಯಾರ್ಥಿ ಸಮುದಾಯದ ಮೇಲೆ ಕೇಂದ್ರದ ಸಶಸ್ತ್ರ ಪಡೆಗಳು ಎಸಗಿದ ದೌರ್ಜನ್ಯದ ಕರಾಳ ಮುಖ ಕೊನೆಗೂ ಅನಾವರಣಗೊಂಡಿದೆ. ಜುಲೈ 20ರಂದು ದೆಹಲಿಯ ಕನ್ಹಾಟ್ ಪ್ಲೇಸ್ ಪ್ರದೇಶದಲ್ಲಿ...

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...