Homeಮುಖಪುಟದೂರದರ್ಶನದ ಲೋಗೋ ಬಣ್ಣ ಬದಲಾವಣೆ ಕೇಸರೀಕರಣದ ಭಾಗ: ಎಂಕೆ ಸ್ಟಾಲಿನ್

ದೂರದರ್ಶನದ ಲೋಗೋ ಬಣ್ಣ ಬದಲಾವಣೆ ಕೇಸರೀಕರಣದ ಭಾಗ: ಎಂಕೆ ಸ್ಟಾಲಿನ್

- Advertisement -
- Advertisement -

ದೂರದರ್ಶನದ ಲೋಗೋವನ್ನು ಕೆಂಪು ಬಣ್ಣದಿಂದ ಕೇಸರಿ ಬಣ್ಣಕ್ಕೆ ಬದಲಾಯಿಸಿರುವುದನ್ನು ಟೀಕಿಸಿರುವ ಡಿಎಂಕೆ ಅಧ್ಯಕ್ಷ ಮತ್ತು ತಮಿಳುನಾಡು ಮುಖ್ಯಮಂತ್ರಿ ಎಂ ಕೆ ಸ್ಟಾಲಿನ್, ಎಲ್ಲವನ್ನೂ ಕೇಸರಿಮಯಗೊಳಿಸುವ ಬಿಜೆಪಿಯ ಪಿತೂರಿಯ ಪೂರ್ವಭಾವಿ ಪ್ರಯತ್ನ ಎಂದು ಹೇಳಿದ್ದಾರೆ.

ದೂರದರ್ಶನದ ಲೋಗೋ ಬದಲಾವಣೆ ಕುರಿತು ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿರುವ ಎಂ ಕೆ ಸ್ಟಾಲಿನ್, ದೂರದರ್ಶನಕ್ಕೆ ‘ಕೇಸರಿ ಕಲೆ’ ನೀಡಲಾಗಿದೆ. ಎಲ್ಲವನ್ನೂ ಕೇಸರಿಮಯಗೊಳಿಸುವ ಬಿಜೆಪಿಯ ಷಡ್ಯಂತ್ರ ಇದು ಎಂದು ಚುನಾವಣಾ ಪ್ರಚಾರದ ವೇಳೆ ಹೇಳಿರುವ ಹೇಳಿಕೆಯನ್ನು ಸ್ಟಾಲಿನ್‌ ಉಲ್ಲೇಖಿಸಿದ್ದಾರೆ. ಲೋಗೋ ಬದಲಾವಣೆಯಂತಹ ಕ್ರಮಗಳು ಕೇಸರೀಕರಣದ ಪೂರ್ವಭಾವಿಯಾಗಿವೆ. 2024ರ ಲೋಕಸಭಾ ಚುನಾವಣಾ ಫಲಿತಾಂಶವು ಅಂತಹ ಫ್ಯಾಸಿಸಂ ಶಕ್ತಿಗಳ ವಿರುದ್ಧ ಸಾರ್ವಜನಿಕ ಪ್ರತಿರೋಧವನ್ನು ತೋರಿಸಲಿದೆ ಎಂದು ಹೇಳಿದ್ದಾರೆ.

ಈ ಹಿಂದೆ ತಮಿಳು ಸಂತ ಕವಿ ತಿರುವಳ್ಳುವರ್ ಅವರನ್ನು ‘ಕೇಸರಿಮಯ’ಗೊಳಿಸಿದ್ದನ್ನು ಸ್ಮರಿಸಿದ ಅವರು, ತಮಿಳುನಾಡಿನ ಮಹಾನ್ ನಾಯಕರ ಪ್ರತಿಮೆಗಳಿಗೆ ಕೇಸರಿ ಬಣ್ಣವನ್ನು ಸುರಿಯಲಾಗಿತ್ತು ಎಂದು ಹೇಳಿದ್ದಾರೆ.

ಸರಕಾರಿ ಸ್ವಾಮ್ಯದ ದೂರದರ್ಶನ ಚಾನೆಲ್ ಡಿಡಿ ಲೋಗೋ ಬಣ್ಣ ಬದಲಾವಣೆಯು ಕಾನೂನುಬಾಹಿರ ಎಂದು ಪ್ರತಿಪಕ್ಷಗಳು ಈಗಾಗಲೇ ಟೀಕಿಸಿವೆ. ಸರ್ಕಾರಿ ಸ್ವಾಮ್ಯದ ಸಾರ್ವಜನಿಕ ಸುದ್ದಿ ದೂರದರ್ಶನ ಚಾನೆಲ್ ಡಿಡಿ ನ್ಯೂಸ್‌ನ ಲೋಗೋವನ್ನು ಕೆಂಪು ಬಣ್ಣದಿಂದ- ಕೇಸರಿ ಬಣ್ಣಕ್ಕೆ ಮರುಬ್ರಾಂಡ್ ಮಾಡಲಾಗಿದೆ. ಡಿಡಿ ನ್ಯೂಸ್‌ನ ಅಧಿಕೃತ ಎಕ್ಸ್  ಹ್ಯಾಂಡಲ್ ಮೂಲಕ ಬದಲಾವಣೆ ಬಗ್ಗೆ ಪ್ರಕಟಣೆಯನ್ನು ಹೊರಡಿಸಲಾಗಿತ್ತು. ನಮ್ಮ ಮೌಲ್ಯಗಳಲ್ಲಿ ಯಾವುದೇ ಬದಲಾವಣೆಗಳಿಲ್ಲ, ಆದರೆ ನಾವು ಈಗ ಹೊಸ ಅವತಾರದಲ್ಲಿ ಲಭ್ಯವಿದ್ದೇವೆ ಎಂದು ಪೋಸ್ಟ್‌ ಮೂಲಕ ದೂರದರ್ಶನ ಮಾಹಿತಿ ನೀಡಿತ್ತು.

ದೂರದರ್ಶನದ ಲೋಗೋ ಬದಲಾವಣೆಯ ಬಗ್ಗೆ ರಾಜ್ಯಸಭಾ ಸದಸ್ಯ ಮತ್ತು ಪ್ರಸಾರ ಭಾರತಿಯ ಮಾಜಿ ಸಿಇಒ ಜವಾಹರ್ ಸಿರ್ಕಾರ್ ಅವರು ಟೀಕಿಸಿದ್ದಾರೆ. ದೂರದರ್ಶನವು ತನ್ನ ಬಣ್ಣವನ್ನು ಕೇಸರಿಗೆ ಬದಲಿಸಿಕೊಂಡಿದ್ದು ಅಕ್ಷಮ್ಯ ಅಪರಾಧ ಎಂದು ಹೇಳಿದ್ದಾರೆ. ದೂರದರ್ಶನದಲ್ಲಿ ಆಗುತ್ತಿರುವ ಕೇಸರೀಕರಣದ ಬದಲಾವಣೆಯನ್ನು ನೋಡಿಕೊಂಡು ಬರುತ್ತಿದ್ದೇನೆ. ಪ್ರಸಾರ ಭಾರತಿ ಈಗ ಹಿಂದಿನ ಮೌಲ್ಯಗಳನ್ನು ಉಳಿಸಿಕೊಂಡಿಲ್ಲ. ಈಗ, ಅದು ಪ್ರಚಾರ ಭಾರತಿ ಆಗಿದೆ ಎಂದು ಜವಾಹರ್ ಸಿರ್ಕಾರ್ ಹೇಳಿದ್ದರು.

2012ರಿಂದ 2014ರ ಅವಧಿಯಲ್ಲಿ ಕೇಂದ್ರ ಮಾಹಿತಿ ಮತ್ತು ತಂತ್ರಜ್ಞಾನ ಸಚಿವರಾಗಿದ್ದ ಕಾಂಗ್ರೆಸ್‌ನ ಮನೀಶ್ ತಿವಾರಿ, ದೂರದರ್ಶನದ ಲೋಗೋ ಬಣ್ಣ ಬದಲಾವಣೆಯು ಸರ್ಕಾರಿ ಸಂಸ್ಥೆಗಳನ್ನು ವಶಪಡಿಸಿಕೊಳ್ಳುವ ಸರ್ಕಾರದ ಪ್ರಯತ್ನದ ಒಂದು ಭಾಗವಾಗಿದೆ ಎಂದು ಆರೋಪಿಸಿದ್ದರು.

ಇದನ್ನು ಓದಿ: ಕನ್ನಡಿಗರಿಗೆ ಕೊಟ್ಟ ‘ಖಾಲಿ ಚೊಂಬಿ’ಗೆ ಕನ್ನಡಿಗರಿಂದ ‘ಖಾಲಿ ಕುರ್ಚಿ’ಯ ಉತ್ತರ: ಮೋದಿ ಸಭೆಯಲ್ಲಿ ಕುರ್ಚಿಗಳು ಖಾಲಿ-ಖಾಲಿ; ವಿಡಿಯೋ ಹಂಚಿಕೊಂಡ ಕಾಂಗ್ರೆಸ್

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತಮಿಳುನಾಡು| ರಸ್ತೆ ಅಪಘಾತದಲ್ಲಿ ಇಬ್ಬರು ದಲಿತ ಯುವಕರು ಸಾವು; ಜಾತಿ ವೈಷಮ್ಯ ಆರೋಪ

ತಮಿಳುನಾಡಿನ ಧರ್ಮಪುರಿಯಲ್ಲಿ ಬುಧವಾರ ರಾತ್ರಿ ಚಿನ್ನಾರ್ಥಳ್ಳಿ ಕೂಟ್ ರಸ್ತೆಯ ಬಳಿ ಅಪರಿಚಿತ ವಾಹನವೊಂದು ಮೋಟಾರ್ ಸೈಕಲ್‌ಗೆ ಡಿಕ್ಕಿ ಹೊಡೆದ ಪರಿಣಾಮ ಸೊನ್ನಂಪಟ್ಟಿ ಗ್ರಾಮದ ಪರಿಶಿಷ್ಟ ಜಾತಿಗೆ ಸೇರಿದ ಇಬ್ಬರು ಯುವಕರು ಸಾವನ್ನಪ್ಪಿದ್ದಾರೆ ಎಂದು...

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...