Homeಮುಖಪುಟನಿರುದ್ಯೋಗ ಯುವಜನರ ಅತಿ ದೊಡ್ಡ ಸಮಸ್ಯೆ, INDIA ಮೈತ್ರಿಕೂಟ ಅಧಿಕಾರಕ್ಕೆ ಬಂದರೆ ಉದ್ಯೋಗ ಕ್ರಾಂತಿ: ...

ನಿರುದ್ಯೋಗ ಯುವಜನರ ಅತಿ ದೊಡ್ಡ ಸಮಸ್ಯೆ, INDIA ಮೈತ್ರಿಕೂಟ ಅಧಿಕಾರಕ್ಕೆ ಬಂದರೆ ಉದ್ಯೋಗ ಕ್ರಾಂತಿ: ಮಲ್ಲಿಕಾರ್ಜುನ ಖರ್ಗೆ

- Advertisement -
- Advertisement -

ದೇಶದ ಯುವ ಜನತೆಗೆ ನಿರುದ್ಯೋಗವೇ ಅತಿ ದೊಡ್ಡ ಸಮಸ್ಯೆಯಾಗಿದ್ದು, ಇಂಡಿಯಾ ಮೈತ್ರಿಕೂಟ ಅಧಿಕಾರಕ್ಕೆ ಬಂದರೆ ‘ಉದ್ಯೋಗ ಕ್ರಾಂತಿ’ಯನ್ನು ತರಲಿದೆ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.

ಈ ಕುರಿತು ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿರುವ ಮಲ್ಲಿಕಾರ್ಜುನ ಖರ್ಗೆ, ಪ್ರಧಾನಿ ನರೇಂದ್ರ ಮೋದಿಯವರ ನೂರಾರು ರ್ಯಾಲಿಗಳನ್ನು ನೀವು ನೋಡಿರಬಹುದು, ಆದರೆ ಅವರ ಸರ್ಕಾರವು ಕಳೆದ 10 ವರ್ಷಗಳಲ್ಲಿ ಎಷ್ಟು ಉದ್ಯೋಗಗಳನ್ನು ನೀಡಿದೆ ಎಂದು ಹೇಳುವುದನ್ನು ನೀವು ಕೇಳಿರಲಿಕ್ಕಿಲ್ಲ. 10 ವರ್ಷಗಳಲ್ಲಿ 20 ಕೋಟಿ ಉದ್ಯೋಗಗಳನ್ನು ನೀಡಬೇಕಿತ್ತು, ಆದರೆ 12 ಕೋಟಿಗೂ ಹೆಚ್ಚು ಉದ್ಯೋಗಗಳನ್ನು ಕಿತ್ತುಕೊಂಡಿದ್ದಾರೆ ಎಂದು ಖರ್ಗೆ ಹೇಳಿದ್ದಾರೆ.

“ಯುವ ನ್ಯಾಯ” ಗ್ಯಾರಂಟಿಯಡಿಯಲ್ಲಿ ಕಾಂಗ್ರೆಸ್ ಉದ್ಯೋಗ ಕ್ರಾಂತಿಯನ್ನು ಉಂಟು ಮಾಡಲಿದೆ, ಇದಕ್ಕಾಗಿ ನೇಮಕಾತಿ ಪರೀಕ್ಷೆಗಳಿಂದ ಉದ್ಯೋಗ ಪಡೆಯುವ ಪ್ರಕ್ರಿಯೆ ಸುಲಭಗೊಳಿಸಲಾಗುವುದು. 30 ಲಕ್ಷ ಸರ್ಕಾರಿ  ಹುದ್ದೆಗಳನ್ನು ಭರ್ತಿ ಮಾಡಲಾಗುವುದು. ಪೇಪರ್ ಸೋರಿಕೆಯಿಂದ ಮುಕ್ತಿ ನೀಡಲಾಗುವುದು. ನೇಮಕಾತಿ ಪರೀಕ್ಷೆಗಳಲ್ಲಿ ಪೇಪರ್ ಸೋರಿಕೆಯ ಪ್ರಕರಣಗಳನ್ನು ವಿಚಾರಣೆಗೆ ಕಾಂಗ್ರೆಸ್‌ ತ್ವರಿತ ನ್ಯಾಯಾಲಯಗಳನ್ನು ಸ್ಥಾಪಿಸಲಿದೆ ಮತ್ತು ಸಂತ್ರಸ್ತರಿಗೆ ಆರ್ಥಿಕ ಪರಿಹಾರವನ್ನು ನೀಡಲಾಗುವುದು ಎಂದು ಹೇಳಿದ್ದಾರೆ.

ಗಿಗ್ ಆರ್ಥಿಕತೆಯಲ್ಲಿ ಕೆಲಸ ಮಾಡುವ ಕಾರ್ಮಿಕರ ಹಕ್ಕುಗಳನ್ನು ರಕ್ಷಿಸಲು ನಾವು ಸಾಮಾಜಿಕ ಭದ್ರತಾ ಕಾನೂನನ್ನು ಜಾರಿಗೊಳಿಸುತ್ತೇವೆ. 40 ವರ್ಷದೊಳಗಿನ ಯುವಕರಿಗೆ ತಮ್ಮದೇ ಆದ ಉದ್ಯೋಗವನ್ನು ಸೃಷ್ಟಿಸಲು ಮತ್ತು ವಿಸ್ತರಿಸಲು ಸಹಕರಿಸುವುದು. ಬಿಜೆಪಿ ನೇತೃತ್ವದ ಎನ್‌ಡಿಎ ಸರಕಾರ ಜಾರಿಗೆ ತಂದಿರುವ ಅಗ್ನಿಪಥ್ ಸೇನಾ ನೇಮಕಾತಿ ಯೋಜನೆಯನ್ನು ಕಾಂಗ್ರೆಸ್ ನಿಲ್ಲಿಸಲಿದೆ. ವ್ಯಾಪಕವಾದ ನಿರುದ್ಯೋಗದ ಕಾರಣ, ಕಾಂಗ್ರೆಸ್ ಮಾರ್ಚ್ 15, 2024ರವರೆಗಿನ ವಿದ್ಯಾರ್ಥಿಗಳ ಶೈಕ್ಷಣಿಕ ಸಾಲವನ್ನು ಬಡ್ಡಿಸಮೇತ ಮನ್ನಾ ಮಾಡುತ್ತದೆ ಮತ್ತು ಬ್ಯಾಂಕ್‌ಗಳಿಗೆ ಸರ್ಕಾರ ಲೋನ್‌ ಹಣವನ್ನು ಮರುಪಾವತಿ ಮಾಡುತ್ತದೆ ಎಂದು ಹೇಳಿದ್ದಾರೆ.

21 ವರ್ಷದೊಳಗಿನ ಪ್ರತಿಭಾವಂತ ಮತ್ತು ಉದಯೋನ್ಮುಖ ಕ್ರೀಡಾಪಟುಗಳಿಗೆ ಕಾಂಗ್ರೆಸ್ ತಿಂಗಳಿಗೆ 10,000 ರೂ.ಗಳ ಕ್ರೀಡಾ ವಿದ್ಯಾರ್ಥಿ ವೇತನವನ್ನು ನೀಡಲಿದೆ. ಕಾಂಗ್ರೆಸ್‌ ಪಕ್ಷವು ಸರ್ಕಾರಿ ಪರೀಕ್ಷೆಗಳು ಮತ್ತು ಹುದ್ದೆಗಳಿಗೆ ಅರ್ಜಿ ಶುಲ್ಕವನ್ನು ರದ್ದುಪಡಿಸಲಿದೆ ಎಂದು ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.

ಇದನ್ನು ಓದಿ; ಎನ್‌ಡಿಎ ಮೈತ್ರಿ ಕೂಟದ ಏಕೈಕ ಮುಸ್ಲಿಂ ಸಂಸದ ಆರ್‌ಜೆಡಿಗೆ ಸೇರ್ಪಡೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...