Homeಮುಖಪುಟನಿರುದ್ಯೋಗ ಯುವಜನರ ಅತಿ ದೊಡ್ಡ ಸಮಸ್ಯೆ, INDIA ಮೈತ್ರಿಕೂಟ ಅಧಿಕಾರಕ್ಕೆ ಬಂದರೆ ಉದ್ಯೋಗ ಕ್ರಾಂತಿ: ...

ನಿರುದ್ಯೋಗ ಯುವಜನರ ಅತಿ ದೊಡ್ಡ ಸಮಸ್ಯೆ, INDIA ಮೈತ್ರಿಕೂಟ ಅಧಿಕಾರಕ್ಕೆ ಬಂದರೆ ಉದ್ಯೋಗ ಕ್ರಾಂತಿ: ಮಲ್ಲಿಕಾರ್ಜುನ ಖರ್ಗೆ

- Advertisement -
- Advertisement -

ದೇಶದ ಯುವ ಜನತೆಗೆ ನಿರುದ್ಯೋಗವೇ ಅತಿ ದೊಡ್ಡ ಸಮಸ್ಯೆಯಾಗಿದ್ದು, ಇಂಡಿಯಾ ಮೈತ್ರಿಕೂಟ ಅಧಿಕಾರಕ್ಕೆ ಬಂದರೆ ‘ಉದ್ಯೋಗ ಕ್ರಾಂತಿ’ಯನ್ನು ತರಲಿದೆ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.

ಈ ಕುರಿತು ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿರುವ ಮಲ್ಲಿಕಾರ್ಜುನ ಖರ್ಗೆ, ಪ್ರಧಾನಿ ನರೇಂದ್ರ ಮೋದಿಯವರ ನೂರಾರು ರ್ಯಾಲಿಗಳನ್ನು ನೀವು ನೋಡಿರಬಹುದು, ಆದರೆ ಅವರ ಸರ್ಕಾರವು ಕಳೆದ 10 ವರ್ಷಗಳಲ್ಲಿ ಎಷ್ಟು ಉದ್ಯೋಗಗಳನ್ನು ನೀಡಿದೆ ಎಂದು ಹೇಳುವುದನ್ನು ನೀವು ಕೇಳಿರಲಿಕ್ಕಿಲ್ಲ. 10 ವರ್ಷಗಳಲ್ಲಿ 20 ಕೋಟಿ ಉದ್ಯೋಗಗಳನ್ನು ನೀಡಬೇಕಿತ್ತು, ಆದರೆ 12 ಕೋಟಿಗೂ ಹೆಚ್ಚು ಉದ್ಯೋಗಗಳನ್ನು ಕಿತ್ತುಕೊಂಡಿದ್ದಾರೆ ಎಂದು ಖರ್ಗೆ ಹೇಳಿದ್ದಾರೆ.

“ಯುವ ನ್ಯಾಯ” ಗ್ಯಾರಂಟಿಯಡಿಯಲ್ಲಿ ಕಾಂಗ್ರೆಸ್ ಉದ್ಯೋಗ ಕ್ರಾಂತಿಯನ್ನು ಉಂಟು ಮಾಡಲಿದೆ, ಇದಕ್ಕಾಗಿ ನೇಮಕಾತಿ ಪರೀಕ್ಷೆಗಳಿಂದ ಉದ್ಯೋಗ ಪಡೆಯುವ ಪ್ರಕ್ರಿಯೆ ಸುಲಭಗೊಳಿಸಲಾಗುವುದು. 30 ಲಕ್ಷ ಸರ್ಕಾರಿ  ಹುದ್ದೆಗಳನ್ನು ಭರ್ತಿ ಮಾಡಲಾಗುವುದು. ಪೇಪರ್ ಸೋರಿಕೆಯಿಂದ ಮುಕ್ತಿ ನೀಡಲಾಗುವುದು. ನೇಮಕಾತಿ ಪರೀಕ್ಷೆಗಳಲ್ಲಿ ಪೇಪರ್ ಸೋರಿಕೆಯ ಪ್ರಕರಣಗಳನ್ನು ವಿಚಾರಣೆಗೆ ಕಾಂಗ್ರೆಸ್‌ ತ್ವರಿತ ನ್ಯಾಯಾಲಯಗಳನ್ನು ಸ್ಥಾಪಿಸಲಿದೆ ಮತ್ತು ಸಂತ್ರಸ್ತರಿಗೆ ಆರ್ಥಿಕ ಪರಿಹಾರವನ್ನು ನೀಡಲಾಗುವುದು ಎಂದು ಹೇಳಿದ್ದಾರೆ.

ಗಿಗ್ ಆರ್ಥಿಕತೆಯಲ್ಲಿ ಕೆಲಸ ಮಾಡುವ ಕಾರ್ಮಿಕರ ಹಕ್ಕುಗಳನ್ನು ರಕ್ಷಿಸಲು ನಾವು ಸಾಮಾಜಿಕ ಭದ್ರತಾ ಕಾನೂನನ್ನು ಜಾರಿಗೊಳಿಸುತ್ತೇವೆ. 40 ವರ್ಷದೊಳಗಿನ ಯುವಕರಿಗೆ ತಮ್ಮದೇ ಆದ ಉದ್ಯೋಗವನ್ನು ಸೃಷ್ಟಿಸಲು ಮತ್ತು ವಿಸ್ತರಿಸಲು ಸಹಕರಿಸುವುದು. ಬಿಜೆಪಿ ನೇತೃತ್ವದ ಎನ್‌ಡಿಎ ಸರಕಾರ ಜಾರಿಗೆ ತಂದಿರುವ ಅಗ್ನಿಪಥ್ ಸೇನಾ ನೇಮಕಾತಿ ಯೋಜನೆಯನ್ನು ಕಾಂಗ್ರೆಸ್ ನಿಲ್ಲಿಸಲಿದೆ. ವ್ಯಾಪಕವಾದ ನಿರುದ್ಯೋಗದ ಕಾರಣ, ಕಾಂಗ್ರೆಸ್ ಮಾರ್ಚ್ 15, 2024ರವರೆಗಿನ ವಿದ್ಯಾರ್ಥಿಗಳ ಶೈಕ್ಷಣಿಕ ಸಾಲವನ್ನು ಬಡ್ಡಿಸಮೇತ ಮನ್ನಾ ಮಾಡುತ್ತದೆ ಮತ್ತು ಬ್ಯಾಂಕ್‌ಗಳಿಗೆ ಸರ್ಕಾರ ಲೋನ್‌ ಹಣವನ್ನು ಮರುಪಾವತಿ ಮಾಡುತ್ತದೆ ಎಂದು ಹೇಳಿದ್ದಾರೆ.

21 ವರ್ಷದೊಳಗಿನ ಪ್ರತಿಭಾವಂತ ಮತ್ತು ಉದಯೋನ್ಮುಖ ಕ್ರೀಡಾಪಟುಗಳಿಗೆ ಕಾಂಗ್ರೆಸ್ ತಿಂಗಳಿಗೆ 10,000 ರೂ.ಗಳ ಕ್ರೀಡಾ ವಿದ್ಯಾರ್ಥಿ ವೇತನವನ್ನು ನೀಡಲಿದೆ. ಕಾಂಗ್ರೆಸ್‌ ಪಕ್ಷವು ಸರ್ಕಾರಿ ಪರೀಕ್ಷೆಗಳು ಮತ್ತು ಹುದ್ದೆಗಳಿಗೆ ಅರ್ಜಿ ಶುಲ್ಕವನ್ನು ರದ್ದುಪಡಿಸಲಿದೆ ಎಂದು ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.

ಇದನ್ನು ಓದಿ; ಎನ್‌ಡಿಎ ಮೈತ್ರಿ ಕೂಟದ ಏಕೈಕ ಮುಸ್ಲಿಂ ಸಂಸದ ಆರ್‌ಜೆಡಿಗೆ ಸೇರ್ಪಡೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪೊಲೀಸ್ ತುರ್ತು ವಾಹನದ ಚಾಲಕ ಸೇರಿ ಐವರಿಂದ ಯುವತಿ ಮೇಲೆ ಅತ್ಯಾಚಾರ!

ಪೊಲೀಸ್ ತುರ್ತು ಸೇವೆ (112) ವಾಹನದ ಚಾಲಕ ಸೇರಿದಂತೆ ಐವರು ಪುರುಷರು 19 ವರ್ಷದ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ಛತ್ತೀಸ್‌ಗಢದ ಕೋರ್ಬಾ ಜಿಲ್ಲೆಯ ಬಂಕಿಮೊಂಗ್ರ ಪ್ರದೇಶದಲ್ಲಿ ನಡೆದಿದೆ. ಜನವರಿ...

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...