Homeಅಂಕಣಗಳುಆಘಾತವಾಣಿ : ಅಟ್ಯಾಕ್ ಹನ್ಮಂತ

ಆಘಾತವಾಣಿ : ಅಟ್ಯಾಕ್ ಹನ್ಮಂತ

- Advertisement -
- Advertisement -

ಕೇಳುಗರಿಗೆಲ್ಲ ಸ್ವಾಗತ, ಆಘಾತವಾಣಿ ವಾರ್ತೆಗಳಿಗೆ ಸ್ವಾಗತ, ಓದುತ್ತಿರುವವರು ನಿಮ್ಮ ಪ್ರೀತಿಯ ಅಟ್ಯಾಕ್ ಹನ್ಮಂತ. ಈಗ ವಾರ್ತೆಗಳ ವಿವರ.

ಜಯನಗರದಲ್ಲಿ ತಮ್ಮ ಪಕ್ಷದ ಅಭ್ಯರ್ಥಿಯ ಸಾವಿನಿಂದಾಗಿ ಮುಂದೂಡಲ್ಪಟ್ಟ ಚುನಾವಣೆಯ ಫಲಿತಾಂಶದಲ್ಲಿ ಹೀನಾಯವಾಗಿ ಸೋತುಹೋದ ಕಾರಣದಿಂದ ಸನ್ಮಾನ್ಯ ಧಡಿಯೂರಪ್ಪನವರ ಎದೆ ಧಸಕ್ ಪುಸುಕ್ ಎಂದ ಸುದ್ದಿ ಬಂದಿದೆ. ಈ ಚಿಂತಾಜನಕ ಸಂದರ್ಭದಲ್ಲಿ ಮನೆ ಸೇರಿಕೊಂಡಿರೋ ಧಡಿಯೂರಪ್ಪನವರು ನಾನು ಯಾರಿಗೂ ಮುಖ ತೋರಿಸೋದಿಲ್ಲವೆಂದು ಕಂಬಳಿ ಹೊದ್ದು ಕಾಲೆತ್ತಿಕೊಂಡು ಮಲಗಿದ್ದಾರೆ. ಮಾತನಾಡಿಸಿ ಪ್ರತಿಕ್ರಿಯೆ ಕೇಳಲು ಹೋದ ಮಾಧ್ಯಮದವರ ಮೇಲೆ ನಾಯಿ ಛೂಬಿಟ್ಟು ಓಡಿಸಲು ತಮ್ಮ ಸಹಾಯಕರಿಗೆ ತಿಳಿಸಿರುವ ಅವರು, ತಮ್ಮ ಪಕ್ಷದ ಮುಖಂಡರು ಬಂದರೆ ಅವರನ್ನು ನೆಲಕ್ಕೆ ಕೆಡವಿ, ಅವರ ಮುಖ ಮತ್ತು ಹೊಟ್ಟೆಗೆ ಕಚ್ಚಿ ಓಡಿಸಲು ತಮ್ಮ ಭದ್ರತಾ ಸಿಬ್ಬಂದಿಗೆ ತಿಳಿಸಿದ್ದಾರೆಂದು ಸುದ್ದಿಮೂಲಗಳು ಸ್ಪಷ್ಟ ಪಡಿಸಿವೆ. ಹಾಸಿಗೆ ಹಿಡಿದಿರುವ ಧಡಿಯೂರಪ್ಪನವರಿಗೆ ಸ್ಕೋಪಕ್ಕ ತಮ್ಮ ಸೆರಗಿನಿಂದ ಗಾಳಿ ಬೀಸಿಕೊಂಡು ಶುಶ್ರೂಷೆ ಮಾಡುತ್ತಿದ್ದಾರೆಂದು ಬಲ್ಲ ಮೂಲಗಳು ತಿಳಿಸಿವೆ.

****

ನೋಟ್ ಬ್ಯಾನ್‍ನಿಂದಾಗಿ ದೇಶದಲ್ಲಿ ಭಯೋತ್ಪಾದಕರು, ನಕ್ಸಲೈಟರೆಲ್ಲರೂ ಕೈಯಲ್ಲಿ ಕಾಸಿಲ್ಲದೆ ಸಾಮೂಹಿಕವಾಗಿ ಶಸ್ತ್ರತ್ಯಾಗ ಮಾಡಿ ತಪಸ್ಸಿಗೆ ಕುಳಿತುಬಿಟ್ಟಿದ್ದಾರೆ ಎಂದಿದ್ದ ಫೇಕಪ್ಪನ ಸುಳ್ಳು ಮತ್ತೊಮ್ಮೆ ಮಕಾಡೆ ಮಲಗಿದೆ. ನಕ್ಸಲೈಟರು ಫೇಕಪ್ಪನನ್ನು ಕೊಲ್ಲಲು ಸಂಚು ಮಾಡಿದ್ದಾರೆ, ಇದರ ಬಗ್ಗೆ ನಕ್ಸಲೈಟರು “ಪಕೋಡೇಂದ್ರ ಮಟ್ಯಾಶ್ ಸ್ವಾಹ” ಎಂಬ ಕಾದಂಬರಿಯನ್ನು ಬರೆದು, ಅದರಲ್ಲಿ ತಮ್ಮ ಒರಿಜಿನಲ್ ಹೆಸರುಗಳನ್ನೂ ಬರೆದು ಪೊಲೀಸರ ಕೈಗೆ ಸಿಗುವಂತೆ ಇಟ್ಟಿದ್ದಾರೆ ಎಂಬ ನಗೆಪಾಟಲು ಪ್ರಚಾರಕ್ಕೆ ಫೇಕಪ್ಪ ಇಳಿದಿರುವುದು ಇದಕ್ಕೆ ಪುಷ್ಟಿ ನೀಡಿದೆ. ನನ್ನನ್ನ ಸಾಯಿಸ್ತಾರೆ, ಆದ್ರಿಂದ ಓಟು ಕೊಡಿ ಅಂತ ಗೋಳಾಡ್ತಿರೋ ಫೇಕಪ್ಪನ 3ನೇ ದರ್ಜೆ ಡ್ರಾಮೇಬಾಜಿ ಸರ್ಕಸ್ಸಿಗೆ ಜನ ಬಿದ್ದೂ ಬಿದ್ದೂ ನಗುತ್ತಿದ್ದಾರೆಂದು ತಿಳಿದುಬಂದಿದೆ.

****

ಸಲ್ಮಾನ್ ಖಾನ್ ‘ಚುಲ್‍ಬುಲ್ ಪಾಂಡೆ’ ಅವತಾರದಲ್ಲಿ ದಬಾಂಗ್ ಚಿತ್ರದಲ್ಲಿ ರಂಜಿಸಿದ ನಂತರ ಅದೇ ರೇಂಜಿಗೆ ‘ಬೋಂಡಾ ಪಾಂಡೆ’ ಎಂದು ರಾಜ್ಯದಾದ್ಯಂತ ಫೇಮಸ್ಸಾಗಿರುವ ಆರುವಿ ದೋಶಪಾಂಡೆ ಬಗ್ಗೆ ಹೊಸ ಸುದ್ದಿಯೊಂದು ಲಭ್ಯವಾಗಿದೆ. ಉದ್ಯೋಗಕ್ಕಾಗಿ ನಮ್ಮನ್ನು ನೆಚ್ಚಿಕೊಳ್ಳಬೇಡಿ, ಬೋಂಡಾ ಬಜ್ಜಿ ಮಾರುವ ಗೌರವಯುತ ಕೆಲಸ ಮಾಡಿ ಕೋಟಿಗಟ್ಟಲೆ ಸಂಪಾದನೆ ಮಾಡಿ ಎಂದು ಶ್ರೀ ಬೋಂಡಾಪಾಂಡೆಯವರು ವದರಿದ್ದಾರೆ. ಈ ತಲೆಕೆಟ್ಟ ಹೇಳಿಕೆಯ ಗಮನಿಸಿದರೆ, ‘ಉದ್ಯೋಗ ಕೊಟ್ಟು ಸಾಯ್ರಿ’ ಎಂಬ ಜನರ ಬೇಡಿಕೆಗೆ ಪಕೋಡ ಮಾರಿ, ಪಂಚರ್ ಹಾಕಿ ಅಂತ ಬಡಬಡಿಸುತ್ತಿದ್ದ ಫೇಕೇಂದ್ರನೇನಾದ್ರೂ ಈ ‘ದೋಶಪಾಂಡೆ’ಯ ಆಯಕಟ್ಟಿನ ಭಾಗಕ್ಕೆ ಕಚ್ಚಿರಬಹುದಾ ಎಂಬ ಅನುಮಾನ ಎಲ್ಲೆಡೆ ವ್ಯಕ್ತವಾಗಿದೆ.

****

ಗೌರಿ ಲಂಕೇಶ್ ಹತ್ಯೆಯ ಒಬ್ಬೊಬ್ಬ ಪಾತಕಿಗಳನ್ನೂ ಎರಡೂ ಕಾಲಿಗೆ ಹಗ್ಗ ಕಟ್ಟಿ ಸತ್ತನಾಯಿಗಳಂತೆ ದರದರ ಎಳೆದು ತಂದು ರುಬ್ಬುತ್ತಿರುವ ರಾಜ್ಯದ ಸ್ಪೆಷಲ್ ಇನ್ವೆಸ್ಟಿಗೇಷನ್ ಟೀಂ ಜನರ ಪ್ರಶಂಸೆಗೆ ಪಾತ್ರವಾಗಿದೆ. ರೌಡಿಗಳು ಕೊಲೆಗಡುಕರ ಕೈಗೆ ಧರ್ಮದ ಹೆಂಡ ಕೊಟ್ಟು ತಮಗಾಗದವರನ್ನು ಕೊಲ್ಲಿಸೋ ಸಣಕಲು ತೊಡೆಯ ಹೇಡಿಪಡೆಗಳ ಪಂಚೆ ಲಳಲಳನೆ ಒದ್ದೆಯಾಗುತ್ತಿರುವುದು ಕೇಳಿಬರುತ್ತಿದೆ. ಗೌರಿಹತ್ಯೆಯ ಕೇಸಿನಲ್ಲಿ ಆ ಸೇನೆ ಈ ಸೇನೆ, ಈ ಜಾಗೃತಿ, ಆ ವಿಕೃತಿ ಅಂತ ಮಕಮೂತಿ ನೋಡದೇ ಎಸ್.ಐ.ಟಿ ತಂಡವು ಒಬ್ಬೊಬ್ಬರನ್ನೇ ಹಿಡಿದುತಂದು ಬೋನಿಗೆ ಬಿಸಾಕುತ್ತಿದ್ದರೆ, ಅತ್ತ ದಾಬೋಲ್ಕರ್, ಪನ್ಸಾರೆ ಕೊಲೆ ಕೇಸನ್ನು ಏನೋ ಕಿತ್ತು ದಬಾಕ್ತೀವಿ ಎಂದು ಕೈಗೆತ್ತಿಕೊಂಡ ಸಿಬಿಐ ಪೊಮೇರಿಯನ್‍ಗಳು ಸರ್ಕಾರಿ ದುಡ್ಡಲ್ಲಿ ಕುಷ್ಕ ಕಬಾಬ್ ಮುಕ್ಕಿಕೊಂಡು ಓತ್ಲಾ ಹೊಡೆಯುತ್ತಿದ್ದಾರೆಂದು ಜನರು ಆಡಿಕೊಂಡು ನಗುತ್ತಿರುವ ವರದಿಗಳು ಬರುತ್ತಿವೆ.

****

ಭೂಮಿಯ ಮೇಲೆ ಇನ್ನೆಲ್ಲೂ ಕಾಣಸಿಗದ ಮಾಸ್ಟರ್ ಪೀಸ್ ಮೆಂಟ್ಲು ಗಿರಾಕಿಗಳಾದ ಉತ್ತರ ಕೊರಿಯಾದ ಕಿಮ್‍ಜಾಂಗ್ ಉನ್ನೇಶ ಮತ್ತು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪೇಶ ಅವರು ಸಿಂಗಪೂರ್‍ನಲ್ಲಿ ಭೇಟಿಯಾಗಿದ್ದಾರೆ. ಈ ಸಂದರ್ಭದಲ್ಲಿ ‘ನಿನ್ ಮೇಲೆ ನಾನು ಬಾಂಬ್ ಹಾಕಲ್ಲ, ನನ್ ಮೇಲೆ ನೀನು ಬಾಂಬ್ ಹಾಕ್ಬೇಡ’ ಅಂತ ಒಪ್ಪಂದ ಮಾಡಿಕೊಂಡಿದ್ದಾರೆ. ಈ ಐತಿಹಾಸಿಕ ತಲೆತಿಕ್ಕಲರ ಸಂಗಮದಲ್ಲಿ ನಮ್ ಹಾಫ್ ಮೆಂಟ್ಲು ಫೇಕಪ್ಪನೂ ಇದ್ದಿದ್ರೆ ಈ ಶುದ್ದ ಮುಠ್ಠಾಳರ ಸಮ್ಮೇಳನ ಸಂಪೂರ್ಣವಾಗುತ್ತಿತ್ತೆಂದು ತೇಜಾವರ ಶ್ರೀಗಳು ನಿದ್ದೆಯಲ್ಲೇ ಕಣ್ಣನ್ನೆಲ್ಲ ತೇವ ಮಾಡಿಕೊಂಡು ಕನವರಿಸಿಕೊಳ್ಳುತ್ತಿದ್ದರೆಂದು ಅವರ ಕಾರ್ ಡ್ರೈವರ್ ಫೇಸ್ಬುಕ್ಕಲ್ಲಿ ಪೋಸ್ಟ್ ಹಾಕಿದ್ದಾನೆ.

****

ಹೋರಿಯ ಹಿಂದೆ ನಡೆಯುತ್ತ ಅದರ ಯಾವುದಾದರೊಂದು ಪಾರ್ಟು ಲೂಸಾಗಿ ಕಳಚಿಕೊಂಡು ಉದುರಬಹುದೆಂದು ಆಸೆಯಿಂದ ಫಾಲೋ ಮಾಡುತ್ತಿರೋ ಗುಳ್ಳೆನರಿಯಂತೆ ಧಡಿಯೂರಪ್ಪನವರು ರಾಜ್ಯದ ಬೆರಕೆ ಸರ್ಕಾರದ ಹಿಂದೆ ಬಿದ್ದಿರುವುದು ತಿಳಿದ ಸಂಗತಿ. ದಿನಕಳೆದಂತೆ ಬೆರಕೆ ಸರ್ಕಾರದ ಮಂದಿ ಕೇರಳದ ಮಾಟಮಂತ್ರ ತಜ್ಞರೂ ನಾಚಿ ನೀರಾಗುವ ಹಾಗೆ ಬುರುಡೆ ಮಂತ್ರವಾದಿಗಳಂತೆ ಆಡುತ್ತಿರುವುದನ್ನು ಕಂಡು ಧಡಿಯೂರಪ್ಪ ಗಾಬರಿಯಾಗಿದ್ದಾರೆಂದು ಸುದ್ದಿ ಲಭ್ಯವಾಗಿದೆ. ತಮ್ಮ ಪಕ್ಷವೇ ಅಧಿಕಾರದಲ್ಲಿದ್ರೆ ಏನೇನು ನೌಟಂಕಿ ಆಟವಾಡುತ್ತಿದ್ದೆವೋ, ಅದೆಲ್ಲವನ್ನೂ ತಮ್ಮ ಎದುರಾಳಿಗಳೇ ಕಚ್ಚೆ ಬಿಚ್ಚಿಕೊಂಡು ಆಡುತ್ತಿರುವುದನ್ನು ಕಂಡು ಧಡಿಯೂರಪ್ಪ, ತಮ್ಮ ಪಕ್ಷದೋರು ಯಾರು? ಬೆರಕೆ ಸರ್ಕಾರದ ಪಕ್ಷದೋರು ಯಾರು? ಎಂದು ಗುರುತಿಸಲಾಗದ ಸಂಕಷ್ಟಕ್ಕೆ ಸಿಲುಕಿಕೊಂಡಿದ್ದಾರೆಂದು ಸ್ಕೋಪಕ್ಕನವರು ಚೀಟಿ ರೆವಿಗೆ ವಾಟ್ಸಾಪ್ ಮೆಸೇಜ್ ಮಾಡಿದ್ದಾರೆಂದು ಗೊತ್ತಾಗಿದೆ.

****

ಭೀಮ ಕೊರೆಗಾಂವ್ ಮೆರವಣಿಗೆಯಲ್ಲಿ ತನ್ನ ಪಟಾಲಂನಿಂದ ದಲಿತರ ಮೇಲೆ ಹಲ್ಲೆ ನಡೆಸಿದ್ದ ಮಹಾರಾಷ್ಟ್ರದ ಪೊರಕೆ ಮೀಸೆ ಸಂಘಿ ಮುದುಕನೊಬ್ಬ ತಾನು ತನ್ನ ತೋಟದಲ್ಲಿ ಬೆಳೆಯೋ ಮಾವಿನಹಣ್ಣು ತಿಂದ್ರೆ ಗಂಡು ಮಕ್ಕಳಾಗ್ತವೆ, ಅಂಥ ವಿಶೇಷ ಶಕ್ತಿ ತನ್ನ ಮ್ಯಾಂಗೋಗಳಿಗೆ ಇದೆಯೆಂದು ಕಕ್ಕಿಕೊಂಡಿದ್ದಾನೆ. ಸಂಘಿ ಮಂಗಿಗಳ ಈ ಮ್ಯಾಂಗೋ ಸಂತಾನ ಪ್ರಾಪ್ತಿ ಮ್ಯಾಜಿಕ್ ಥಿಯರಿ ಕೇಳಿದ ದೇಶದ ಜನರು ನಗಬಾರದ ಜಾಗದಲ್ಲೆಲ್ಲ ನಗುತ್ತ “ಅಲ್ಲಾ ಕಣೋ ಬುಡ್ಡಾ, ಮ್ಯಾಂಗೋ ತಿಂದ್ರೆ ಮಕ್ಕಳಾಗ್ತವೆ ಅಂದ್ರೆ ಜನ ಬಾಟಾ ಕಂಪನಿ ಮೆಟ್ಟು ತಗೊಂಡು ಅಟ್ಟಿಸಿಕೊಂಡು ಬಂದು ಬಡೀತಾರೆ” ಎಂದು ಆಡಿಕೊಳ್ಳುತ್ತಿರುವ ಸುದ್ದಿ ತಡವಾಗಿ ವರದಿಯಾಗಿದೆ. ಬೆದರಿದ ಸಂಘಿ ಮುದುಕನು ಮಹಾರಾಷ್ಟ್ರ ಸಿಎಂ ಭಡ್ನಊಸು ಕಚೇರಿಯ ಶೌಚಾಲಯದಲ್ಲಿ ಕದ್ದು ಕುಳಿತಿದ್ದಾನೆ ಎಂದು ಗುಪ್ತಚರ ಮೂಲಗಳು ತಿಳಿಸಿವೆ.
ಇಲ್ಲಿಗೆ ಆಘಾತಕಾರಿ ಸುದ್ದಿಗಳನ್ನು ನಿಮ್ಮ ಮುಂದಿಡುವ ‘ಆಘಾತವಾಣಿ’ ವಾರ್ತೆಗಳು ಮುಕ್ತಾಯವಾಯಿತು. ಮತ್ತೆ ನಮ್ಮ ನಿಮ್ಮ ಭೇಟಿ ಮುಂದಿನ ವಾರ. ನಮಸ್ತೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...