Homeಅಂಕಣಗಳುಆಘಾತವಾಣಿ : ಅಟ್ಯಾಕ್ ಹನ್ಮಂತ

ಆಘಾತವಾಣಿ : ಅಟ್ಯಾಕ್ ಹನ್ಮಂತ

- Advertisement -
- Advertisement -

ಕೇಳುಗರಿಗೆಲ್ಲ ಸ್ವಾಗತ, ಆಘಾತವಾಣಿ ವಾರ್ತೆಗಳಿಗೆ ಸ್ವಾಗತ, ಓದುತ್ತಿರುವವರು ನಿಮ್ಮ ಪ್ರೀತಿಯ ಅಟ್ಯಾಕ್ ಹನ್ಮಂತ. ಈಗ ವಾರ್ತೆಗಳ ವಿವರ.

ಜಯನಗರದಲ್ಲಿ ತಮ್ಮ ಪಕ್ಷದ ಅಭ್ಯರ್ಥಿಯ ಸಾವಿನಿಂದಾಗಿ ಮುಂದೂಡಲ್ಪಟ್ಟ ಚುನಾವಣೆಯ ಫಲಿತಾಂಶದಲ್ಲಿ ಹೀನಾಯವಾಗಿ ಸೋತುಹೋದ ಕಾರಣದಿಂದ ಸನ್ಮಾನ್ಯ ಧಡಿಯೂರಪ್ಪನವರ ಎದೆ ಧಸಕ್ ಪುಸುಕ್ ಎಂದ ಸುದ್ದಿ ಬಂದಿದೆ. ಈ ಚಿಂತಾಜನಕ ಸಂದರ್ಭದಲ್ಲಿ ಮನೆ ಸೇರಿಕೊಂಡಿರೋ ಧಡಿಯೂರಪ್ಪನವರು ನಾನು ಯಾರಿಗೂ ಮುಖ ತೋರಿಸೋದಿಲ್ಲವೆಂದು ಕಂಬಳಿ ಹೊದ್ದು ಕಾಲೆತ್ತಿಕೊಂಡು ಮಲಗಿದ್ದಾರೆ. ಮಾತನಾಡಿಸಿ ಪ್ರತಿಕ್ರಿಯೆ ಕೇಳಲು ಹೋದ ಮಾಧ್ಯಮದವರ ಮೇಲೆ ನಾಯಿ ಛೂಬಿಟ್ಟು ಓಡಿಸಲು ತಮ್ಮ ಸಹಾಯಕರಿಗೆ ತಿಳಿಸಿರುವ ಅವರು, ತಮ್ಮ ಪಕ್ಷದ ಮುಖಂಡರು ಬಂದರೆ ಅವರನ್ನು ನೆಲಕ್ಕೆ ಕೆಡವಿ, ಅವರ ಮುಖ ಮತ್ತು ಹೊಟ್ಟೆಗೆ ಕಚ್ಚಿ ಓಡಿಸಲು ತಮ್ಮ ಭದ್ರತಾ ಸಿಬ್ಬಂದಿಗೆ ತಿಳಿಸಿದ್ದಾರೆಂದು ಸುದ್ದಿಮೂಲಗಳು ಸ್ಪಷ್ಟ ಪಡಿಸಿವೆ. ಹಾಸಿಗೆ ಹಿಡಿದಿರುವ ಧಡಿಯೂರಪ್ಪನವರಿಗೆ ಸ್ಕೋಪಕ್ಕ ತಮ್ಮ ಸೆರಗಿನಿಂದ ಗಾಳಿ ಬೀಸಿಕೊಂಡು ಶುಶ್ರೂಷೆ ಮಾಡುತ್ತಿದ್ದಾರೆಂದು ಬಲ್ಲ ಮೂಲಗಳು ತಿಳಿಸಿವೆ.

****

ನೋಟ್ ಬ್ಯಾನ್‍ನಿಂದಾಗಿ ದೇಶದಲ್ಲಿ ಭಯೋತ್ಪಾದಕರು, ನಕ್ಸಲೈಟರೆಲ್ಲರೂ ಕೈಯಲ್ಲಿ ಕಾಸಿಲ್ಲದೆ ಸಾಮೂಹಿಕವಾಗಿ ಶಸ್ತ್ರತ್ಯಾಗ ಮಾಡಿ ತಪಸ್ಸಿಗೆ ಕುಳಿತುಬಿಟ್ಟಿದ್ದಾರೆ ಎಂದಿದ್ದ ಫೇಕಪ್ಪನ ಸುಳ್ಳು ಮತ್ತೊಮ್ಮೆ ಮಕಾಡೆ ಮಲಗಿದೆ. ನಕ್ಸಲೈಟರು ಫೇಕಪ್ಪನನ್ನು ಕೊಲ್ಲಲು ಸಂಚು ಮಾಡಿದ್ದಾರೆ, ಇದರ ಬಗ್ಗೆ ನಕ್ಸಲೈಟರು “ಪಕೋಡೇಂದ್ರ ಮಟ್ಯಾಶ್ ಸ್ವಾಹ” ಎಂಬ ಕಾದಂಬರಿಯನ್ನು ಬರೆದು, ಅದರಲ್ಲಿ ತಮ್ಮ ಒರಿಜಿನಲ್ ಹೆಸರುಗಳನ್ನೂ ಬರೆದು ಪೊಲೀಸರ ಕೈಗೆ ಸಿಗುವಂತೆ ಇಟ್ಟಿದ್ದಾರೆ ಎಂಬ ನಗೆಪಾಟಲು ಪ್ರಚಾರಕ್ಕೆ ಫೇಕಪ್ಪ ಇಳಿದಿರುವುದು ಇದಕ್ಕೆ ಪುಷ್ಟಿ ನೀಡಿದೆ. ನನ್ನನ್ನ ಸಾಯಿಸ್ತಾರೆ, ಆದ್ರಿಂದ ಓಟು ಕೊಡಿ ಅಂತ ಗೋಳಾಡ್ತಿರೋ ಫೇಕಪ್ಪನ 3ನೇ ದರ್ಜೆ ಡ್ರಾಮೇಬಾಜಿ ಸರ್ಕಸ್ಸಿಗೆ ಜನ ಬಿದ್ದೂ ಬಿದ್ದೂ ನಗುತ್ತಿದ್ದಾರೆಂದು ತಿಳಿದುಬಂದಿದೆ.

****

ಸಲ್ಮಾನ್ ಖಾನ್ ‘ಚುಲ್‍ಬುಲ್ ಪಾಂಡೆ’ ಅವತಾರದಲ್ಲಿ ದಬಾಂಗ್ ಚಿತ್ರದಲ್ಲಿ ರಂಜಿಸಿದ ನಂತರ ಅದೇ ರೇಂಜಿಗೆ ‘ಬೋಂಡಾ ಪಾಂಡೆ’ ಎಂದು ರಾಜ್ಯದಾದ್ಯಂತ ಫೇಮಸ್ಸಾಗಿರುವ ಆರುವಿ ದೋಶಪಾಂಡೆ ಬಗ್ಗೆ ಹೊಸ ಸುದ್ದಿಯೊಂದು ಲಭ್ಯವಾಗಿದೆ. ಉದ್ಯೋಗಕ್ಕಾಗಿ ನಮ್ಮನ್ನು ನೆಚ್ಚಿಕೊಳ್ಳಬೇಡಿ, ಬೋಂಡಾ ಬಜ್ಜಿ ಮಾರುವ ಗೌರವಯುತ ಕೆಲಸ ಮಾಡಿ ಕೋಟಿಗಟ್ಟಲೆ ಸಂಪಾದನೆ ಮಾಡಿ ಎಂದು ಶ್ರೀ ಬೋಂಡಾಪಾಂಡೆಯವರು ವದರಿದ್ದಾರೆ. ಈ ತಲೆಕೆಟ್ಟ ಹೇಳಿಕೆಯ ಗಮನಿಸಿದರೆ, ‘ಉದ್ಯೋಗ ಕೊಟ್ಟು ಸಾಯ್ರಿ’ ಎಂಬ ಜನರ ಬೇಡಿಕೆಗೆ ಪಕೋಡ ಮಾರಿ, ಪಂಚರ್ ಹಾಕಿ ಅಂತ ಬಡಬಡಿಸುತ್ತಿದ್ದ ಫೇಕೇಂದ್ರನೇನಾದ್ರೂ ಈ ‘ದೋಶಪಾಂಡೆ’ಯ ಆಯಕಟ್ಟಿನ ಭಾಗಕ್ಕೆ ಕಚ್ಚಿರಬಹುದಾ ಎಂಬ ಅನುಮಾನ ಎಲ್ಲೆಡೆ ವ್ಯಕ್ತವಾಗಿದೆ.

****

ಗೌರಿ ಲಂಕೇಶ್ ಹತ್ಯೆಯ ಒಬ್ಬೊಬ್ಬ ಪಾತಕಿಗಳನ್ನೂ ಎರಡೂ ಕಾಲಿಗೆ ಹಗ್ಗ ಕಟ್ಟಿ ಸತ್ತನಾಯಿಗಳಂತೆ ದರದರ ಎಳೆದು ತಂದು ರುಬ್ಬುತ್ತಿರುವ ರಾಜ್ಯದ ಸ್ಪೆಷಲ್ ಇನ್ವೆಸ್ಟಿಗೇಷನ್ ಟೀಂ ಜನರ ಪ್ರಶಂಸೆಗೆ ಪಾತ್ರವಾಗಿದೆ. ರೌಡಿಗಳು ಕೊಲೆಗಡುಕರ ಕೈಗೆ ಧರ್ಮದ ಹೆಂಡ ಕೊಟ್ಟು ತಮಗಾಗದವರನ್ನು ಕೊಲ್ಲಿಸೋ ಸಣಕಲು ತೊಡೆಯ ಹೇಡಿಪಡೆಗಳ ಪಂಚೆ ಲಳಲಳನೆ ಒದ್ದೆಯಾಗುತ್ತಿರುವುದು ಕೇಳಿಬರುತ್ತಿದೆ. ಗೌರಿಹತ್ಯೆಯ ಕೇಸಿನಲ್ಲಿ ಆ ಸೇನೆ ಈ ಸೇನೆ, ಈ ಜಾಗೃತಿ, ಆ ವಿಕೃತಿ ಅಂತ ಮಕಮೂತಿ ನೋಡದೇ ಎಸ್.ಐ.ಟಿ ತಂಡವು ಒಬ್ಬೊಬ್ಬರನ್ನೇ ಹಿಡಿದುತಂದು ಬೋನಿಗೆ ಬಿಸಾಕುತ್ತಿದ್ದರೆ, ಅತ್ತ ದಾಬೋಲ್ಕರ್, ಪನ್ಸಾರೆ ಕೊಲೆ ಕೇಸನ್ನು ಏನೋ ಕಿತ್ತು ದಬಾಕ್ತೀವಿ ಎಂದು ಕೈಗೆತ್ತಿಕೊಂಡ ಸಿಬಿಐ ಪೊಮೇರಿಯನ್‍ಗಳು ಸರ್ಕಾರಿ ದುಡ್ಡಲ್ಲಿ ಕುಷ್ಕ ಕಬಾಬ್ ಮುಕ್ಕಿಕೊಂಡು ಓತ್ಲಾ ಹೊಡೆಯುತ್ತಿದ್ದಾರೆಂದು ಜನರು ಆಡಿಕೊಂಡು ನಗುತ್ತಿರುವ ವರದಿಗಳು ಬರುತ್ತಿವೆ.

****

ಭೂಮಿಯ ಮೇಲೆ ಇನ್ನೆಲ್ಲೂ ಕಾಣಸಿಗದ ಮಾಸ್ಟರ್ ಪೀಸ್ ಮೆಂಟ್ಲು ಗಿರಾಕಿಗಳಾದ ಉತ್ತರ ಕೊರಿಯಾದ ಕಿಮ್‍ಜಾಂಗ್ ಉನ್ನೇಶ ಮತ್ತು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪೇಶ ಅವರು ಸಿಂಗಪೂರ್‍ನಲ್ಲಿ ಭೇಟಿಯಾಗಿದ್ದಾರೆ. ಈ ಸಂದರ್ಭದಲ್ಲಿ ‘ನಿನ್ ಮೇಲೆ ನಾನು ಬಾಂಬ್ ಹಾಕಲ್ಲ, ನನ್ ಮೇಲೆ ನೀನು ಬಾಂಬ್ ಹಾಕ್ಬೇಡ’ ಅಂತ ಒಪ್ಪಂದ ಮಾಡಿಕೊಂಡಿದ್ದಾರೆ. ಈ ಐತಿಹಾಸಿಕ ತಲೆತಿಕ್ಕಲರ ಸಂಗಮದಲ್ಲಿ ನಮ್ ಹಾಫ್ ಮೆಂಟ್ಲು ಫೇಕಪ್ಪನೂ ಇದ್ದಿದ್ರೆ ಈ ಶುದ್ದ ಮುಠ್ಠಾಳರ ಸಮ್ಮೇಳನ ಸಂಪೂರ್ಣವಾಗುತ್ತಿತ್ತೆಂದು ತೇಜಾವರ ಶ್ರೀಗಳು ನಿದ್ದೆಯಲ್ಲೇ ಕಣ್ಣನ್ನೆಲ್ಲ ತೇವ ಮಾಡಿಕೊಂಡು ಕನವರಿಸಿಕೊಳ್ಳುತ್ತಿದ್ದರೆಂದು ಅವರ ಕಾರ್ ಡ್ರೈವರ್ ಫೇಸ್ಬುಕ್ಕಲ್ಲಿ ಪೋಸ್ಟ್ ಹಾಕಿದ್ದಾನೆ.

****

ಹೋರಿಯ ಹಿಂದೆ ನಡೆಯುತ್ತ ಅದರ ಯಾವುದಾದರೊಂದು ಪಾರ್ಟು ಲೂಸಾಗಿ ಕಳಚಿಕೊಂಡು ಉದುರಬಹುದೆಂದು ಆಸೆಯಿಂದ ಫಾಲೋ ಮಾಡುತ್ತಿರೋ ಗುಳ್ಳೆನರಿಯಂತೆ ಧಡಿಯೂರಪ್ಪನವರು ರಾಜ್ಯದ ಬೆರಕೆ ಸರ್ಕಾರದ ಹಿಂದೆ ಬಿದ್ದಿರುವುದು ತಿಳಿದ ಸಂಗತಿ. ದಿನಕಳೆದಂತೆ ಬೆರಕೆ ಸರ್ಕಾರದ ಮಂದಿ ಕೇರಳದ ಮಾಟಮಂತ್ರ ತಜ್ಞರೂ ನಾಚಿ ನೀರಾಗುವ ಹಾಗೆ ಬುರುಡೆ ಮಂತ್ರವಾದಿಗಳಂತೆ ಆಡುತ್ತಿರುವುದನ್ನು ಕಂಡು ಧಡಿಯೂರಪ್ಪ ಗಾಬರಿಯಾಗಿದ್ದಾರೆಂದು ಸುದ್ದಿ ಲಭ್ಯವಾಗಿದೆ. ತಮ್ಮ ಪಕ್ಷವೇ ಅಧಿಕಾರದಲ್ಲಿದ್ರೆ ಏನೇನು ನೌಟಂಕಿ ಆಟವಾಡುತ್ತಿದ್ದೆವೋ, ಅದೆಲ್ಲವನ್ನೂ ತಮ್ಮ ಎದುರಾಳಿಗಳೇ ಕಚ್ಚೆ ಬಿಚ್ಚಿಕೊಂಡು ಆಡುತ್ತಿರುವುದನ್ನು ಕಂಡು ಧಡಿಯೂರಪ್ಪ, ತಮ್ಮ ಪಕ್ಷದೋರು ಯಾರು? ಬೆರಕೆ ಸರ್ಕಾರದ ಪಕ್ಷದೋರು ಯಾರು? ಎಂದು ಗುರುತಿಸಲಾಗದ ಸಂಕಷ್ಟಕ್ಕೆ ಸಿಲುಕಿಕೊಂಡಿದ್ದಾರೆಂದು ಸ್ಕೋಪಕ್ಕನವರು ಚೀಟಿ ರೆವಿಗೆ ವಾಟ್ಸಾಪ್ ಮೆಸೇಜ್ ಮಾಡಿದ್ದಾರೆಂದು ಗೊತ್ತಾಗಿದೆ.

****

ಭೀಮ ಕೊರೆಗಾಂವ್ ಮೆರವಣಿಗೆಯಲ್ಲಿ ತನ್ನ ಪಟಾಲಂನಿಂದ ದಲಿತರ ಮೇಲೆ ಹಲ್ಲೆ ನಡೆಸಿದ್ದ ಮಹಾರಾಷ್ಟ್ರದ ಪೊರಕೆ ಮೀಸೆ ಸಂಘಿ ಮುದುಕನೊಬ್ಬ ತಾನು ತನ್ನ ತೋಟದಲ್ಲಿ ಬೆಳೆಯೋ ಮಾವಿನಹಣ್ಣು ತಿಂದ್ರೆ ಗಂಡು ಮಕ್ಕಳಾಗ್ತವೆ, ಅಂಥ ವಿಶೇಷ ಶಕ್ತಿ ತನ್ನ ಮ್ಯಾಂಗೋಗಳಿಗೆ ಇದೆಯೆಂದು ಕಕ್ಕಿಕೊಂಡಿದ್ದಾನೆ. ಸಂಘಿ ಮಂಗಿಗಳ ಈ ಮ್ಯಾಂಗೋ ಸಂತಾನ ಪ್ರಾಪ್ತಿ ಮ್ಯಾಜಿಕ್ ಥಿಯರಿ ಕೇಳಿದ ದೇಶದ ಜನರು ನಗಬಾರದ ಜಾಗದಲ್ಲೆಲ್ಲ ನಗುತ್ತ “ಅಲ್ಲಾ ಕಣೋ ಬುಡ್ಡಾ, ಮ್ಯಾಂಗೋ ತಿಂದ್ರೆ ಮಕ್ಕಳಾಗ್ತವೆ ಅಂದ್ರೆ ಜನ ಬಾಟಾ ಕಂಪನಿ ಮೆಟ್ಟು ತಗೊಂಡು ಅಟ್ಟಿಸಿಕೊಂಡು ಬಂದು ಬಡೀತಾರೆ” ಎಂದು ಆಡಿಕೊಳ್ಳುತ್ತಿರುವ ಸುದ್ದಿ ತಡವಾಗಿ ವರದಿಯಾಗಿದೆ. ಬೆದರಿದ ಸಂಘಿ ಮುದುಕನು ಮಹಾರಾಷ್ಟ್ರ ಸಿಎಂ ಭಡ್ನಊಸು ಕಚೇರಿಯ ಶೌಚಾಲಯದಲ್ಲಿ ಕದ್ದು ಕುಳಿತಿದ್ದಾನೆ ಎಂದು ಗುಪ್ತಚರ ಮೂಲಗಳು ತಿಳಿಸಿವೆ.
ಇಲ್ಲಿಗೆ ಆಘಾತಕಾರಿ ಸುದ್ದಿಗಳನ್ನು ನಿಮ್ಮ ಮುಂದಿಡುವ ‘ಆಘಾತವಾಣಿ’ ವಾರ್ತೆಗಳು ಮುಕ್ತಾಯವಾಯಿತು. ಮತ್ತೆ ನಮ್ಮ ನಿಮ್ಮ ಭೇಟಿ ಮುಂದಿನ ವಾರ. ನಮಸ್ತೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...