Homeಮುಖಪುಟಬಿಜೆಪಿಗೆ ನಿರ್ಗಮನ ಹಾದಿ ತೋರಿಸುತ್ತೇವೆ: ರಾಂಚಿಯಲ್ಲಿ ಇಂಡಿಯಾ ಮೈತ್ರಿಕೂಟದಿಂದ ಬೃಹತ್‌ ರ್‍ಯಾಲಿ

ಬಿಜೆಪಿಗೆ ನಿರ್ಗಮನ ಹಾದಿ ತೋರಿಸುತ್ತೇವೆ: ರಾಂಚಿಯಲ್ಲಿ ಇಂಡಿಯಾ ಮೈತ್ರಿಕೂಟದಿಂದ ಬೃಹತ್‌ ರ್‍ಯಾಲಿ

- Advertisement -
- Advertisement -

ಬಿಜೆಪಿ ಪಕ್ಷವು ಇಡಿ ಮತ್ತು ಸಿಬಿಐಯನ್ನು ತನ್ನ ವಿಸ್ತೃತ ಇಲಾಖೆಯಾಗಿ ಪರಿವರ್ತಿಸಿ ವಿರೋಧ ಪಕ್ಷದ ನಾಯಕರ ಮೇಲೆ ದಬ್ಬಾಳಿಕೆಗೆ ಬಳಕೆ ಮಾಡುತ್ತಿದೆ, ನಾವು ಬಿಜೆಪಿಗೆ ನಿರ್ಗಮನ ದಾರಿಯನ್ನು ತೋರಿಸುತ್ತೇವೆ ಎಂದು ಜಾರ್ಖಾಂಡ್‌ನ ರಾಂಚಿಯಲ್ಲಿ ನಡೆದ ಇಂಡಿಯಾ ಮೈತ್ರಿಕೂಟದ ಸಭೆಯಲ್ಲಿ ಪ್ರತಿಪಕ್ಷದ ನಾಯಕರು ಹೇಳಿದ್ದಾರೆ.

ಜಾರ್ಖಂಡ್ ರಾಜಧಾನಿ ರಾಂಚಿಯಲ್ಲಿ ಲೋಕಸಭೆ ಚುನಾವಣೆಯ ಹಿನ್ನೆಲೆ ಇಂಡಿಯಾ ಮೈತ್ರಿ ಪಕ್ಷದ ನಾಯಕರು ಒಟ್ಟಾಗಿ ಶಕ್ತಿ ಪ್ರದರ್ಶನವನ್ನು ಮಾಡಿದ್ದಾರೆ. ಜಾರ್ಖಂಡ್‌ನ  ಪ್ರಭಾತ್ ತಾರಾ ಮೈದಾನದಲ್ಲಿ ನಡೆದ ‘ಉಲ್ಗುಲನ್ ನ್ಯಾಯ್ ರ್ಯಾಲಿ’ಯಲ್ಲಿ ಒಟ್ಟು 28 ರಾಜಕೀಯ ಪಕ್ಷಗಳ ಮುಖಂಡರು ಭಾಗವಹಿಸಿದ್ದಾರೆ.

ಎಎಪಿ ರಾಜ್ಯಸಭಾ ಸಂಸದ ಸಂಜಯ್ ಸಿಂಗ್ ಮಾತನಾಡಿ, ಪ್ರಧಾನಿ ನರೇಂದ್ರ ಮೋದಿ ಬಳಿ ಭ್ರಷ್ಟಾಚಾರವನ್ನು ತಕ್ಷಣವೇ ಸ್ವಚ್ಛಗೊಳಿಸುವ ವಾಷಿಂಗ್ ಪೌಡರ್ ಇದೆ. ಯಾವುದೇ ಭ್ರಷ್ಟರನ್ನು ಬಿಡುವುದಿಲ್ಲ ಎಂದು ಮೋದಿ ಹೇಳುತ್ತಾರೆ. ಇದು ಮೋದಿಯವರ ಗ್ಯಾರಂಟಿ. ಎಲ್ಲ ಭ್ರಷ್ಟರನ್ನು ಬಿಜೆಪಿಗೆ ಸೇರಿಸಿಕೊಳ್ಳುತ್ತೇವೆ ಎಂದರೆ ಅದು ಅವರ ಗ್ಯಾರಂಟಿ. ಇಂದು ಎಲ್ಲಾ ಭ್ರಷ್ಟ ನಾಯಕರು ಬಿಜೆಪಿಯಲ್ಲಿದ್ದಾರೆ ಎಂದು ಹೇಳಿದ್ದಾರೆ.

ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಮಾತನಾಡಿ, ಕಳೆದ 10 ವರ್ಷಗಳಲ್ಲಿ ದೇಶವನ್ನು ನಾಶಪಡಿಸಿದ ಬಿಜೆಪಿಯನ್ನು ತೊಡೆದುಹಾಕಲು ಈ ಉಲಗುಲನ್ ರ‍್ಯಾಲಿ ಹಮ್ಮಿಕೊಳ್ಳಲಾಗಿದೆ ಎಂದು ಹೇಳಿದ್ದಾರೆ.

ಜಾರಿ ನಿರ್ದೇಶನಾಲಯ (ಇಡಿ), ಸಿಬಿಐ ಮತ್ತು ಐಟಿ ಬಿಜೆಪಿಯ ವಿಸ್ತೃತ ಇಲಾಖೆಗಳಾಗಿದ್ದು, ವಿರೋಧ ಪಕ್ಷಗಳು ಆಳುವ ರಾಜ್ಯಗಳಲ್ಲಿ ಸರ್ಕಾರಗಳನ್ನು ಹತ್ತಿಕ್ಕಲು ಅವುಗಳನ್ನು ಬಳಸಿಕೊಳ್ಳಲಾಗುತ್ತಿದೆ ಎಂದು ಶಿವಸೇನೆಯ ನಾಯಕಿ (ಯುಬಿಟಿ) ಪ್ರಿಯಾಂಕಾ ಚತುರ್ವೇದಿ ಆರೋಪಿಸಿದ್ದಾರೆ.

ದೇಶದಲ್ಲಿ ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯನ್ನು ಸೋಲಿಸಲು ಪ್ರತಿ ಮತವನ್ನು ಬಳಸಬೇಕು ಎಂದು ಟಿಎಂಸಿ ನಾಯಕ ವಿವೇಕ್ ಗುಪ್ತಾ ಹೇಳಿದ್ದಾರೆ.

ಬಿಜೆಪಿ ಮತ್ತು ಆರೆಸ್ಸೆಸ್ ಜಾರ್ಖಂಡ್ ಹೆಸರನ್ನು ‘ವನಂಚಲ್’ ಎಂದು ಬದಲಾಯಿಸಲು ಬಯಸಿವೆ ಎಂದು ಸಿಪಿಐ(ಎಂಎಲ್) ನಾಯಕ ದೀಪಂಕರ್ ಭಟ್ಟಾಚಾರ್ಯ ಹೇಳಿದ್ದಾರೆ.

ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಅವರು ಮಾತನಾಡಿ, ಬಿಜೆಪಿ ವಾಸ್ತವವಾಗಿ ‘ಭಾರತೀಯ ಜುಮ್ಲಾ ಪಕ್ಷ’ ಮತ್ತು ಜೈಲಿನಲ್ಲಿರುವ ಜಾರ್ಖಂಡ್ ಮಾಜಿ ಮುಖ್ಯಮಂತ್ರಿ ಹೇಮಂತ್ ಸೊರೆನ್ ಮತ್ತು ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಕೇಸರಿ ಪಕ್ಷವನ್ನು ಅಳಿಸಿಹಾಕಲು ಸಮರ್ಥ ನಾಯಕರು. ಐ.ಎನ್.ಡಿ.ಐ.ಎ. ಮೈತ್ರಿ ಕೂಟವು ಏಪ್ರಿಲ್ 19ರಂದು ಮುಕ್ತಾಯಗೊಂಡ ಮೊದಲ ಹಂತದ ಚುನಾವಣೆಯಲ್ಲಿ 80 ರಿಂದ 90 ಸ್ಥಾನಗಳನ್ನು ಪಡೆಯಲಿದೆ ಎಂದು ಹೇಳಿದ್ದಾರೆ.

ಹೇಮಂತ್‌ ಸೊರೆನ್‌ ಸಂದೇಶ ಓದಿದ ಪತ್ನಿ:

ಬಿಜೆಪಿಯು ಪ್ರತಿಪಕ್ಷಗಳ ಆಡಳಿತವಿರುವ ರಾಜ್ಯಗಳಲ್ಲಿ ಸರ್ಕಾರಗಳನ್ನು ಉರುಳಿಸಲು ಪ್ರಯತ್ನಿಸುತ್ತಿದೆ ಆದರೆ ಪ್ರಜಾಪ್ರಭುತ್ವವನ್ನು ವಿಫಲಗೊಳಿಸಲು ಬಿಡಲಾಗುವುದಿಲ್ಲ ಎಂದು ಜಾರ್ಖಂಡ್ ಮಾಜಿ ಸಿಎಂ ಹೇಮಂತ್ ಸೊರೆನ್ ಜೈಲಿನಿಂದ ನೀಡಿದ ಸಂದೇಶವನ್ನು ರ್ಯಾಲಿಯಲ್ಲಿ ಅವರ ಪತ್ನಿ ಕಲ್ಪನಾ ಓದಿದ್ದಾರೆ.

ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಮತ್ತು ನನ್ನ ಪತಿ ಹೇಮಂತ್ ಸೋರೆನ್ ಅವರನ್ನು ಚುನಾವಣೆಗೆ ಕೆಲವೇ ತಿಂಗಳ ಮುನ್ನ ಬಂಧಿಸಲಾಗಿದೆ. ಇದು ಸರ್ಕಾರದ ವಿರುದ್ಧ ಪಿತೂರಿ ನಡೆಸುತ್ತಿದ್ದ ಶಕ್ತಿಗಳಿಂದ ನಡೆದ ಪಿತೂರಿ ಎಂದು ಹೇಳಿದ್ದಾರೆ. ಪ್ರತಿಪಕ್ಷಗಳ ಧ್ವನಿಯನ್ನು ಹತ್ತಿಕ್ಕಲು ಇಡಿ ಮತ್ತು ಸಿಬಿಐನಂತಹ ಕೇಂದ್ರೀಯ ಸಂಸ್ಥೆಗಳನ್ನು ದುರುಪಯೋಗಪಡಿಸಿಕೊಳ್ಳಲಾಗುತ್ತಿದೆ, ಆದರೆ ಬಿಜೆಪಿ ಮತ್ತು ಅಂತಹ ಶಕ್ತಿಗಳನ್ನು ಜಾರ್ಖಂಡ್‌ನಿಂದ ಓಡಿಸಲಾಗುವುದು ಎಂದು ಅವರು ಪತಿಯ ಸಂದೇಶವನ್ನು ಓದಿದ್ದಾರೆ. ಬಿಜೆಪಿಗೆ “ನಿರ್ಗಮನ ಬಾಗಿಲು” ತೋರಿಸಲು ಜನರನ್ನು ಒತ್ತಾಯಿಸಿದ ಕಲ್ಪನಾ, ಈ ಚುನಾವಣೆಯಲ್ಲಿ ಪಕ್ಷವು ಗೆದ್ದರೆ ಅದು ಆದಿವಾಸಿಗಳಿಗೆ “ದೊಡ್ಡ ಅಪಾಯ” ಎದುರಾಗಲಿದೆ ಎಂದು ಹೇಳಿದ್ದಾರೆ.

ಇದನ್ನು ಓದಿ: ಸೂರತ್‌ನಲ್ಲಿ ಕಾಂಗ್ರೆಸ್‌ ಅಭ್ಯರ್ಥಿಯ ನಾಮಪತ್ರ ತಿರಸ್ಕರಿಸಿದ ಚುನಾವಣಾಧಿಕಾರಿ: ಹೈಕೋರ್ಟ್‌ ಮೊರೆ ಹೋಗಲು ನಿರ್ಧಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...