Homeಮುಖಪುಟಸಿಎಎ ನಿಬಂಧನೆಗಳು ಭಾರತೀಯ ಸಂವಿಧಾನದ ವಿಧಿಗಳನ್ನು ಉಲ್ಲಂಘಿಸುತ್ತದೆ: ಯುಎಸ್ ಕಾಂಗ್ರೆಸ್ ವರದಿ

ಸಿಎಎ ನಿಬಂಧನೆಗಳು ಭಾರತೀಯ ಸಂವಿಧಾನದ ವಿಧಿಗಳನ್ನು ಉಲ್ಲಂಘಿಸುತ್ತದೆ: ಯುಎಸ್ ಕಾಂಗ್ರೆಸ್ ವರದಿ

- Advertisement -
- Advertisement -

ಭಾರತದಲ್ಲಿ ಬಿಜೆಪಿ ನೇತೃತ್ವದ ಕೇಂದ್ರ ಸರಕಾರ ಕಾನೂನಾಗಿ ಜಾರಿಗೆ ತಂದಿರುವ ಪೌರತ್ವ ತಿದ್ದುಪಡಿ ಕಾಯ್ದೆ(ಸಿಎಎ)ಯ ಪ್ರಮುಖ ನಿಬಂಧನೆಗಳು ಭಾರತದ ಸಂವಿಧಾನದ ಕೆಲವು ನಿಬಂಧನೆಗಳನ್ನು ಉಲ್ಲಂಘಿಸುತ್ತದೆ ಎಂದು ಯುಎಸ್ ಕಾಂಗ್ರೆಸ್‌ನ ಸ್ವತಂತ್ರ ಸಂಶೋಧನಾ ವಿಭಾಗವು ಬಿಡುಗಡೆ ಮಾಡಿದ ವರದಿ ಹೇಳಿದೆ.

ಭಾರತದಲ್ಲಿ 1955ರ ಪೌರತ್ವ ತಿದ್ದುಪಡಿ ಕಾಯ್ದೆಯನ್ನು ತಿದ್ದುಪಡಿ ಮಾಡುವ CAA, ಈ ವರ್ಷ ಮಾರ್ಚ್‌ನಲ್ಲಿ ಜಾರಿಗೆ ಬಂದಿದೆ. CAAಯ ಪ್ರಮುಖ ನಿಬಂಧನೆಗಳು, ಮುಸ್ಲಿಮರನ್ನು ಹೊರತುಪಡಿಸಿ ಮೂರು ದೇಶಗಳಿಂದ ಆಗಮಿಸಿದ ಆರು ಧರ್ಮಗಳ ವಲಸಿಗರಿಗೆ ಪೌರತ್ವ ಪಡೆಯುವ ಹಾದಿಯನ್ನು ಸುಗಮಗೊಳಿಸಿದೆ. ಈ ಕಾಯ್ದೆಯು ಭಾರತದ ಸಂವಿಧಾನದ ಕೆಲವು ವಿಧಿಗಳನ್ನು ಉಲ್ಲಂಘಿಸಬಹುದು ಎಂದು ‘ಕಾಂಗ್ರೆಷನಲ್ ರಿಸರ್ಚ್ ಸರ್ವಿಸ್’ (CRS)ತನ್ನ ಸಂಕ್ಷಿಪ್ತ ವರದಿಯಲ್ಲಿ ತಿಳಿಸಿದೆ.

CRS ಎಂಬುವುದು US ಕಾಂಗ್ರೆಸ್‌ನ ಸ್ವತಂತ್ರ ಸಂಶೋಧನಾ ವಿಭಾಗವಾಗಿದ್ದು, ಅದು ಯುಎಸ್‌ ಕಾಂಗ್ರೆಸ್ ಸದಸ್ಯರಿಗೆ ಆಸಕ್ತಿದಾಯಕ ವಿಷಯಗಳ ಕುರಿತು ವರದಿಗಳನ್ನು ಸಿದ್ಧಪಡಿಸುತ್ತದೆ.

ಭಾರತ ಸರ್ಕಾರವು ಯೋಜಿಸಿರುವ ರಾಷ್ಟ್ರೀಯ ನಾಗರಿಕರ ನೋಂದಣಿ (NRC) ಜೊತೆಗೆ, CAA ಸುಮಾರು 200 ಮಿಲಿಯನ್ ಭಾರತದ ದೊಡ್ಡ ಅಲ್ಪಸಂಖ್ಯಾತರಾದ ಮುಸ್ಲಿಮರ ಹಕ್ಕುಗಳಿಗೆ ಬೆದರಿಕೆ ಹಾಕಬಹುದು ಎಂದು ಮೂರು ಪುಟಗಳ ವರದಿಯಲ್ಲಿ ಉಲ್ಲೇಖಿಸಲಾಗಿದೆ.

ಕಾಂಗ್ರೆಸ್‌ನ ಕೆಲವು ಸದಸ್ಯರು ‘118ನೇ ಕಾಂಗ್ರೆಸ್‌’ನ ಸಭೆಯಲ್ಲಿ ಈ ಬಗ್ಗೆ ಕಳವಳಗಳನ್ನು ವ್ಯಕ್ತಪಡಿಸಿದ್ದಾರೆ, ಹೌಸ್ ರೆಸಲ್ಯೂಶನ್ 542ರಲ್ಲಿ ಭಾರತದಲ್ಲಿ ಮಾನವ ಹಕ್ಕುಗಳ ಉಲ್ಲಂಘನೆ ಮತ್ತು ಅಂತರಾಷ್ಟ್ರೀಯ ಧಾರ್ಮಿಕ ಸ್ವಾತಂತ್ರ್ಯದ ಉಲ್ಲಂಘನೆಗಳನ್ನು ಖಂಡಿಸುತ್ತದೆ ಮತ್ತು ಸೆನೆಟ್ ನಿರ್ಣಯ 424ರಲ್ಲಿ ಈ ಕುರಿತ ಹಿಂಸೆಗೆ ತ್ವರಿತ ಅಂತ್ಯವನ್ನು ಬಯಸುತ್ತದೆ ಮತ್ತು ಭಾರತದಲ್ಲಿ ಧಾರ್ಮಿಕ ಅಲ್ಪಸಂಖ್ಯಾತರು ಮತ್ತು ಮಾನವ ಹಕ್ಕುಗಳ ಹೋರಾಟಗಾರರ ವಿರುದ್ಧದ ಹಿಂಸಾಚಾರಕ್ಕೆ ವಿರಾಮ ಹಾಕಬೇಕು ಮತ್ತು ಸಿಎಎಯಂತಹ ತಾರತಮ್ಯಯುತ ಕಾನೂನುಗಳನ್ನು ತಿದ್ದುಪಡಿ ಮಾಡಲು ಭಾರತವನ್ನು ಒತ್ತಾಯಿಸುತ್ತದೆ ಎಂದು ವರದಿ ಹೇಳಿದೆ.

ಪ್ರಧಾನಿ ನರೇಂದ್ರ ಮೋದಿ ಮತ್ತು ಅವರ ಹಿಂದೂ ರಾಷ್ಟ್ರೀಯವಾದಿ ಭಾರತೀಯ ಜನತಾ ಪಕ್ಷ (ಬಿಜೆಪಿ) ಹಿಂದೂ ಬಹುಸಂಖ್ಯಾತ, ಮುಸ್ಲಿಂ ವಿರೋಧಿ ಅಜೆಂಡಾವನ್ನು ಅನುಸರಿಸುತ್ತಿದೆ ಎಂದು ಕಾಯ್ದೆಯ ವಿರೋಧಿಗಳು ಎಚ್ಚರಿಸಿದ್ದಾರೆ. ಇದು ಅಧಿಕೃತವಾಗಿ ಜಾತ್ಯತೀತ ಗಣರಾಜ್ಯವಾಗಿ ಭಾರತದ ಸ್ಥಾನಮಾನಕ್ಕೆ ಬೆದರಿಕೆ ಹಾಕುತ್ತದೆ ಮತ್ತು ಅಂತರಾಷ್ಟ್ರೀಯ ಮಾನವ ಹಕ್ಕುಗಳ ನಿಯಮಗಳು ಮತ್ತು ಕಟ್ಟುಪಾಡುಗಳನ್ನು ಉಲ್ಲಂಘಿಸುತ್ತದೆ ಎಂದು ವರದಿ ಹೇಳಿದೆ.

ಈ ಮಧ್ಯೆ ಪಶ್ಚಿಮ ಬಂಗಾಳದ ಚುನಾವಣಾ ರ್ಯಾಲಿಯಲ್ಲಿ ಮಾತನಾಡಿದ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್, ಸಿಎಎಯನ್ನು ಸಮರ್ಥಿಸಿಕೊಂಡಿದ್ದು, ಸಿಎಎ ಅನುಷ್ಠಾನವನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ ಎಂದು ಹೇಳಿದ್ದಾರೆ. ಸಿಎಎ ಯಾರೊಬ್ಬರ ಪೌರತ್ವವನ್ನು ಕಸಿದುಕೊಳ್ಳಲು ಉದ್ದೇಶಿಸಿಲ್ಲ, ಆದರೆ  ಇದು ಧರ್ಮದ ಆಧಾರದ ಮೇಲೆ ಪಾಕಿಸ್ತಾನ, ಬಾಂಗ್ಲಾದೇಶ ಮತ್ತು ಅಫ್ಘಾನಿಸ್ತಾನದಿಂದ ಸ್ಥಳಾಂತರಗೊಂಡ ಜನರಿಗೆ ಭಾರತೀಯ ಪೌರತ್ವವನ್ನು ನೀಡುತ್ತದೆ ಎಂದು ಹೇಳಿದ್ದಾರೆ.

ಪೌರತ್ವ ಕಾಯಿದೆ- 1955 ಏನು ಹೇಳುತ್ತದೆ?

ಪೌರತ್ವ ಕಾಯಿದೆ, 1955ರ ಪ್ರಕಾರ ಭಾರತದಲ್ಲಿ ಐದು ವಿಧಾನಗಳ ಮೂಲಕ ಪೌರತ್ವವನ್ನು ಪಡೆಯಬಹುದು. ಪೌರತ್ವವನ್ನು ಹುಟ್ಟಿನಿಂದ, ಭಾರತೀಯ ಮೂಲದವರಾಗಿದ್ದು ಹೊರದೇಶಗಳಲ್ಲಿ ನೆಲೆಸಿದ್ದರೆ, ವಿದೇಶದವರಾಗಿದ್ದರೂ ಭಾರತದಲ್ಲಿ ಸರ್ಕಾರಿ ಸೇವೆಯಲ್ಲಿದ್ದರೆ, ಭಾರತ ಮೂಲದವರಾಗಿದ್ದು ಭಾರತದಲ್ಲಿ ಈಗಾಗಲೇ ವಾಸ್ತವ್ಯ ಹೂಡಿದ್ದರೆ ಅಥವಾ ಭಾರತದೊಳಗೆ ಸೇರಿಸಿಕೊಳ್ಳಲಾದ ಅನ್ಯದೇಶದ ಭೂಭಾಗದ ನಿವಾಸಿಯಾಗಿದ್ದರೆ, ಅಸ್ಸಾಂ ಒಪ್ಪಂದಕ್ಕೆ ಸೇರಿದ ಜನರಿಗೆ ಪೌರತ್ವ ಅವಕಾಶವನ್ನು ನೀಡಲಾಗಿತ್ತು, ಈ ಕಾಯಿದೆಯು ವಿದೇಶಿ ಅಕ್ರಮ ವಲಸಿಗರು ಭಾರತೀಯ ಪೌರತ್ವವನ್ನು ಪಡೆದುಕೊಳ್ಳುವುದನ್ನು ನಿಷೇಧಿಸಿದೆ. ಇದಲ್ಲದೆ 1955ರ ಕಾಯ್ದೆಯ ಪ್ರಕಾರ ಪೌರತ್ವವನ್ನು ಪಡೆಯಬೇಕಿದ್ದರೆ ಆತ ಭಾರತದಲ್ಲಿ ಕನಿಷ್ಠ 11ವರ್ಷ ವಾಸಿಸಿರಬೇಕು.

ಪೌರತ್ವ (ತಿದ್ದುಪಡಿ) ಮಸೂದೆ-2019

ಈ ಕಾಯ್ದೆಯಡಿಯಲ್ಲಿ ಅಫ್ಘಾನಿಸ್ತಾನ, ಬಾಂಗ್ಲಾದೇಶ ಅಥವಾ ಪಾಕಿಸ್ತಾನದಿಂದ ಭಾರತಕ್ಕೆ ಬಂದಿರುವ ಮುಸ್ಲಿಮೇತರರು ಅಂದರೆ ಹಿಂದೂ, ಸಿಖ್, ಬೌದ್ಧ, ಜೈನ್, ಪಾರ್ಸಿ ಅಥವಾ ಕ್ರಿಶ್ಚಿಯನ್ ಧಾರ್ಮಿಕ ಸಮುದಾಯಗಳಿಗೆ ಸೇರಿದ ಅಕ್ರಮ ವಲಸಿಗರು ಡಿಸೆಂಬರ್ 31, 2014ರಂದು ಅಥವಾ ಅದಕ್ಕೂ ಮೊದಲು ಭಾರತಕ್ಕೆ ಪ್ರವೇಶಿಸಿದರೆ ಅವರಿಗೆ ಪೌರತ್ವವನ್ನು ನೀಡಬಹುದು. ಕಾಯಿದೆಯ ಮೂರನೇ ಶೆಡ್ಯೂಲ್‌ನ ಸೆಕ್ಷನ್ 5 ರ ಅಡಿಯಲ್ಲಿನ ಷರತ್ತುಗಳಿಗೆ ಸಮ್ಮತಿಸಿದರೆ ಒಬ್ಬ ವ್ಯಕ್ತಿಗೆ ನೋಂದಣಿ ಪ್ರಮಾಣಪತ್ರ ನೀಡಬಹುದು. ಇದಲ್ಲದೆ ಆ ವ್ಯಕ್ತಿ ಭಾರತದಲ್ಲಿ ಕಡ್ಡಾಯವಾಗಿ ನೆಲೆಸಿದವನಾಗಿರಬೇಕಾಗಿರುವ ವರ್ಷಗಳ ಸಂಖ್ಯೆಯನ್ನು 11 ವರ್ಷದಿಂದ 5 ವರ್ಷಕ್ಕೆ ಇಳಿಸಲಾಗಿದೆ.

ಇದನ್ನು ಓದಿ: ಬಿಜೆಪಿಗೆ ನಿರ್ಗಮನ ಹಾದಿ ತೋರಿಸುತ್ತೇವೆ: ರಾಂಚಿಯಲ್ಲಿ ಇಂಡಿಯಾ ಮೈತ್ರಿಕೂಟದಿಂದ ಬೃಹತ್‌ ರ್‍ಯಾಲಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...