Homeಫ್ಯಾಕ್ಟ್‌ಚೆಕ್FACT CHECK: 'ದೇಶದ ಸಂಪತ್ತಿನಲ್ಲಿ ಮೊದಲ ಅಧಿಕಾರ ಮುಸ್ಲಿಮರಿಗೆ' ಎಂದು ಮನಮೋಹನ್ ಸಿಂಗ್ ಹೇಳಿಲ್ಲ

FACT CHECK: ‘ದೇಶದ ಸಂಪತ್ತಿನಲ್ಲಿ ಮೊದಲ ಅಧಿಕಾರ ಮುಸ್ಲಿಮರಿಗೆ’ ಎಂದು ಮನಮೋಹನ್ ಸಿಂಗ್ ಹೇಳಿಲ್ಲ

- Advertisement -
- Advertisement -

ಭಾನುವಾರ (ಏ.22) ರಾಜಸ್ಥಾನದ ಬನ್‌ಸ್ವಾರಾದಲ್ಲಿ ಬಿಜೆಪಿಯ ಚುನಾವಣಾ ಪ್ರಚಾರ ಸಭೆಯನ್ನು ಉದ್ದೇಶಿಸಿ ಮಾತನಾಡಿದ್ದ ಪ್ರಧಾನಿ ನರೇಂದ್ರ ಮೋದಿ, ಮಾಜಿ ಪ್ರಧಾನಿ ಮನಮೋಹನ್ ಅವರ ಹಳೆಯ ಹೇಳಿಕೆಯೊಂದನ್ನು ಉಲ್ಲೇಖಿಸಿದ್ದಾರೆ.

‘ದೇಶದ ಸಂಪತ್ತಿನಲ್ಲಿ ಮುಸ್ಲಿಮರಿಗೆ ಮೊದಲ ಅಧಿಕಾರ’ ಇರುವುದಾಗಿ ಮನಮೋಹನ್ ಸಿಂಗ್‌ ಹೇಳಿದ್ದಾರೆ ಎಂದು ಮೋದಿ ಪ್ರಸ್ತಾಪಿಸಿದ್ದಾರೆ. ಮೋದಿಯವರ ಭಾಷಣದ 1 ನಿಮಿಷ 13 ಸೆಕೆಂಡ್‌ಗಳ ವಿಡಿಯೋ ವೈರಲ್ ಆಗಿದೆ.

“ಈ ಹಿಂದಿನ ಸರ್ಕಾರದವರು ಹೇಳಿದ್ದರು. ಈ ದೇಶದ ಸಂಪತ್ತಿನ ಮೇಲಿನ ಮೊದಲ ಅಧಿಕಾರ ಮುಸ್ಲಿಮರಿಗಾಗಿದೆ. ಇದರರ್ಥ, ಈ ಸಂಪತ್ತನ್ನೆಲ್ಲಾ ಒಟ್ಟು ಮಾಡಿ, ಯಾರಿಗೆ ಹಂಚ್ತೀವಿ? ಯಾರಿಗೆ ಹೆಚ್ಚು ಮಕ್ಕಳಿದ್ದಾವೋ, ಅವರಿಗೆ ಹಂಚ್ತೀವಿ. ನುಸುಳುಕೋರರಿಗೆ ಹಂಚ್ತೀವಿ. ನಿಮ್ಮ ಶ್ರಮದ ಹಣವನ್ನು ನುಸುಳುಕೋರರಿಗೆ ಕೊಡಬಹುದಾ? ಇದಕ್ಕೆ ನಿಮ್ಮ ಒಪ್ಪಿಗೆ ಇದೆಯಾ? ಇದು ಕಾಂಗ್ರೆಸ್‌ನ ಪ್ರಣಾಳಿಕೆ ಹೇಳ್ತಿದೆ. ತಾಯಂದಿರು, ಸೋದರಿಯರ ಬಳಿಯ ಚಿನ್ನದ ಲೆಕ್ಕ ಹಾಕ್ತಾರೆ. ಅದನ್ನು ಜಪ್ತಿ ಮಾಡ್ತಾರೆ ಮತ್ತು ಆ ಸಂಪತ್ತನ್ನು ಹಂಚಿ ಬಿಡ್ತಾರೆ. ಯಾರಿಗೆ ಹಂಚ್ತಾರೆ ಅಂದ್ರೆ, ಮನಮೋಹನ್‌ ಸಿಂಗ್‌ ಹೇಳಿದ್ರಲ್ಲ, ‘ಸಂಪತ್ತಿನ ಮೇಲೆ ಮೊದಲ ಅಧಿಕಾರ ಇದೆ’ ಅಂತ ಅವರಿಗೆ ಹಂಚ್ತಾರೆ! ಈ ಅರ್ಬನ್‌ ನಕ್ಸಲ್‌ ಚಿಂತನೆ ತಾಯಂದಿರು, ಸೋದರಿಯರ ಮಂಗಳ ಸೂತ್ರವನ್ನೂ ಉಳಿಸುವುದಿಲ್ಲ!” ಎಂದು ಪ್ರಧಾನಿ ತನ್ನ ಭಾಷಣದಲ್ಲಿ ಹೇಳಿದ್ದಾರೆ.

ಫ್ಯಾಕ್ಟ್‌ಚೆಕ್ : ಪ್ರಧಾನಿ ನರೇಂದ್ರ ಮೋದಿ ಭಾಷಣದಲ್ಲಿ ಹೇಳಿದಂತೆ, ದೇಶದ ಸಂಪತ್ತಿನಲ್ಲಿ ಮೊದಲ ಅಧಿಕಾರ ಮುಸ್ಲಿಮರಿಗಿದೆ ಎಂದು ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಹೇಳಿದ್ದಾರಾ? ಎಂಬುವುದರ ಕುರಿತು ನಾನುಗೌರಿ.ಕಾಂ ಸತ್ಯಾಸತ್ಯತೆ ಪರಿಶೀಲನೆ ನಡೆಸಿದೆ.

ಇದಕ್ಕಾಗಿ ನಾವು ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ಹಳೆಯ ಭಾಷಣ ಹುಡುಕಾಡಿದ್ದೇವೆ. ಈ ವೇಳೆ ಏಪ್ರಿಲ್ 22,2024ರಂದು ಇಂಡಿಯಾ ಟುಡೇ ಚಾನೆಲ್ ತನ್ನ ಯೂಟ್ಯೂಬ್‌ನಲ್ಲಿ ಸಿಂಗ್ ಅವರ ಹಳೆ ಭಾಷಣ ಮತ್ತು ಮೋದಿಯವರ ವಿವಾದಾತ್ಮಕ ಹೇಳಿಕೆಯ ಕುರಿತು ಅಪ್ಲೋಡ್ ಮಾಡಿರುವ ವಿಡಿಯೋ ದೊರೆತಿದೆ.

ಯೂಟ್ಯೂಬ್ ವಿಡಿಯೋ ಲಿಂಕ್ ಇಲ್ಲಿದೆ

ಇಂಡಿಯಾ ಟುಡೇಯಲ್ಲಿ ಅಪ್ಲೋಡ್ ಮಾಡಲಾದ ವಿಡಿಯೋದಲ್ಲಿ ಮನಮೋಹನ್ ಸಿಂಗ್ ಅವರು, “ಅಲ್ಪ ಸಂಖ್ಯಾತರು, ವಿಶೇಷವಾಗಿ ಮುಸ್ಲಿಂ ಅಲ್ಪ ಸಂಖ್ಯಾತರ ಅಭಿವೃದ್ದಿಗಾಗಿ ನಾವು ಹೊಸ ಹೊಸ ಯೋಜನೆಗಳನ್ನು ರೂಪಿಸಬೇಕು. ಸಂಪತ್ತಿನ ಸಮಾನ ಹಂಚಿಕೆಯಾಗಬೇಕು. ನಮ್ಮ ಸಂಪತ್ತಿನಲ್ಲಿ ಅವರಿಗೂ(ಮುಸ್ಲಿಮರಿಗೂ) ಮೊದಲ ಹಕ್ಕು ಇರಬೇಕು” ಎಂದಿದ್ದಾರೆ.

ನಾವು ವಿಡಿಯೋದಲ್ಲಿ ಗಮನಿಸಿದಂತೆ ಮನಮೋಹನ್ ಸಿಂಗ್ ಅವರು “ದೇಶದ ಸಂಪತ್ತಿನ ಹಂಚಿಕೆಯಲ್ಲಿ ಮುಸ್ಲಿಮರಿಗೆ ಮೊದಲ ಹಕ್ಕು ಇರಬೇಕು ಎಂದಿದ್ದಾರೆಯೇ ಹೊರತು, ಮುಸ್ಲಿಮರಿಗೆ ಮೊದಲ ಅಧಿಕಾರ ಇದೆ” ಎಂದಿಲ್ಲ.

ಪ್ರಧಾನಿ ಕಚೇರಿಯ ವೆಬ್‌ಸೈಟ್‌ನ ಆರ್ಕೈವ್‌ನಲ್ಲಿ ಮನಮೋಹನ್ ಸಿಂಗ್ ಅವರ ಭಾಷಣದ ಅಧಿಕೃತ ಲಿಖಿತ ರೂಪ ನಮಗೆ ದೊರೆತಿದೆ. ಆರ್ಕೈವ್‌ ಪ್ರಕಾರ, ಪ್ರಧಾನಿ ಮೋದಿ ಉಲ್ಲೇಖಿಸಿದ್ದು, 2006ರ ಡಿಸೆಂಬರ್ 9ರಂದು ನವದೆಹಲಿಯಲ್ಲಿ ನಡೆದ ರಾಷ್ಟ್ರೀಯ ಅಭಿವೃದ್ಧಿ ಮಂಡಳಿಯ 52ನೇ ಸಭೆಯನ್ನು ಉದ್ದೇಶಿಸಿ ಮನಮೋಹನ್ ಸಿಂಗ್ ಅವರು ಮಾಡಿದ್ದ ಭಾಷಣದ ಕುರಿತು ಎಂಬುವುದು ಗೊತ್ತಾಗಿದೆ.

ತನ್ನ ಭಾಷಣದಲ್ಲಿ 11ನೇ ಪಂಚವಾರ್ಷಿಕ ಯೋಜನೆಯ ಪ್ರಸ್ತಾವನೆಯನ್ನು ಉಲ್ಲೇಖಿಸುತ್ತಾ “ವೇಗದ ಮತ್ತು ಸರ್ವರನ್ನು ಒಳಗೊಂಡ ಅಭಿವೃದ್ಧಿಯೆಡೆಗೆ” ಎಂಬ ವಿಷಯದ ಬಗ್ಗೆ ಸವಿಸ್ತಾರವಾಗಿ ಮನಮೋಹನ್ ಸಿಂಗ್ ಮಾತನಾಡಿದ್ದರು.

ಭಾಷಣದ ಕೊನೆಯಲ್ಲಿ “ನಮ್ಮ ಸಾಮೂಹಿಕ ಆದ್ಯತೆಗಳು ಸ್ಪಷ್ಟವಾಗಿವೆ ಎಂದು ನನಗೆ ನಂಬಿಕೆ ಇದೆ. ಕೃಷಿ, ನೀರಾವರಿ ಮತ್ತು ಜಲಸಂಪನ್ಮೂಲ, ಆರೋಗ್ಯ, ಶಿಕ್ಷಣ, ಗ್ರಾಮೀಣ ಮೂಲಸೌಕರ್ಯದಲ್ಲಿ ನಿರ್ಣಾಯಕ ಹೂಡಿಕೆ ಮತ್ತು ಸಾಮಾನ್ಯ ಮೂಲಸೌಕರ್ಯಗಳ ಅಗತ್ಯ ಸಾರ್ವಜನಿಕ ಹೂಡಿಕೆ ಅಗತ್ಯಗಳು, ಎಸ್‌ಸಿ/ಎಸ್‌ಟಿ, ಇತರ ಹಿಂದುಳಿದ ವರ್ಗಗಳು, ಅಲ್ಪಸಂಖ್ಯಾತರು ಮತ್ತು ಮಹಿಳೆಯರು ಮತ್ತು ಮಕ್ಕಳ ಉನ್ನತಿಗಾಗಿ ಕಾರ್ಯಕ್ರಮಗಳ ಜೊತೆಗೆ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಘಟಕ ಯೋಜನೆಗಳನ್ನು ಪುನಶ್ಚೇತನಗೊಳಿಸಬೇಕಾಗಿದೆ. ಅಲ್ಪಸಂಖ್ಯಾತರು, ವಿಶೇಷವಾಗಿ ಮುಸ್ಲಿಂ ಅಲ್ಪಸಂಖ್ಯಾತರು, ಅಭಿವೃದ್ಧಿಯ ಫಲಗಳಲ್ಲಿ ಸಮಾನ ಪಾಲು ಪಡೆಯುವ ಹಕ್ಕು ಹೊಂದಲು ನಾವು ನವೀನ ಯೋಜನೆಗಳನ್ನು ರೂಪಿಸಬೇಕಾಗಿದೆ. ಸಂಪನ್ಮೂಲಗಳಲ್ಲಿ ಪಾಲು ಪಡೆಯುವ ಮೊದಲ ಹಕ್ಕು ಅವರಿಗೂ ಇರಬೇಕು” ಎಂದಿದ್ದರು.

ಮನಮೋಹನ್ ಸಿಂಗ್ ಅವರ ಭಾಷಣದ ಆರ್ಖೈವ್ ಇಲ್ಲಿದೆ 

‘ದಿ ಲಲ್ಲನ್‌ಟಾಪ್‌’ನ ಸೌರಭ್ ದ್ವಿವೇದಿ ಅವರು ಮೋದಿ ಉಲ್ಲೇಖಿಸಿದ ಮನಮೋಹನ್ ಸಿಂಗ್ ಅವರ ಭಾಷಣದ ನಿಜವಾದ ಅಂಶವನ್ನು ವಿಡಿಯೋ ಮೂಲಕ ವಿವರಿಸಿದ್ದಾರೆ. ಆ ವಿಡಿಯೋ ಲಿಂಕ್ ಕೆಳಗಿದೆ.

ಮೇಲೆ ನಾವು ಉಲ್ಲೇಖಿಸಿದ ಮೂಲಗಳ ಪ್ರಕಾರ, ಮನಮೋಹನ್ ಸಿಂಗ್ ಅವರು “ದೇಶದ ಸಂಪತ್ತಿನಲ್ಲಿ ಮೊದಲ ಅಧಿಕಾರ ಮುಸ್ಲಿಮರಿಗಿದೆ ಎಂದು ಹೇಳಿಲ್ಲ. ಬದಲಾಗಿ, ಸಂಪತ್ತಿನ ಸಮಾನ ಹಂಚಿಕೆಯಾಗಬೇಕು. ದೇಶದ ಸಂಪತ್ತಿನಲ್ಲಿ ಮುಸ್ಲಿಮರಿಗೂ ಮೊದಲ ಹಕ್ಕು ಇರಬೇಕು” ಎಂದಿದ್ದಾರೆ.

ಇದರರ್ಥ ಇತರ ಧರ್ಮಿಯರಿಗೆ ಇರುವಂತೆ ಮುಸ್ಲಿಮರಿಗೂ ದೇಶದ ಸಂಪತ್ತಿನಲ್ಲಿ ಮೊದಲ ಹಕ್ಕು ಇರಬೇಕು. ಈ ಮೂಲಕ ಸಂಪತ್ತಿನ ಸಮಾನ ಹಂಚಿಕೆಯಾಗಬೇಕು. ತಾರತಮ್ಯ ಇರಬಾರದು ಎಂಬುವುದಾಗಿದೆ.

ಇದನ್ನೂ ಓದಿ : FACT CHECK: ಉತ್ತರ ಪ್ರದೇಶದಲ್ಲಿ ಬುರ್ಖಾಧಾರಿ ಮಹಿಳೆಯರಿಂದ ನಕಲಿ ಮತದಾನ ಎಂದು ಹಳೆಯ ವಿಡಿಯೋ ಹಂಚಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...