Homeಫ್ಯಾಕ್ಟ್‌ಚೆಕ್FACT CHECK : 'ದೇಶದ ಸಂಪತ್ತನ್ನು ಮುಸಲ್ಮಾನರಿಗೆ ಹಂಚುತ್ತೇನೆ' ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ರಾ?

FACT CHECK : ‘ದೇಶದ ಸಂಪತ್ತನ್ನು ಮುಸಲ್ಮಾನರಿಗೆ ಹಂಚುತ್ತೇನೆ’ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ರಾ?

- Advertisement -
- Advertisement -

“ದೇಶದ ಸಂಪತ್ತನ್ನು ಮುಸಲ್ಮಾನರಿಗೆ ಹಂಚುತ್ತೇನೆ: ಸಿದ್ದರಾಮಯ್ಯ.. ಅವಕಾಶವಾದಿಗಳಿಗೆ, ಓಲೈಕೆ; ಭಾಗ್ಯ, ಗ್ಯಾರಂಟಿ ರಾಜಕಾರಣ ಮಾಡುತ್ತ ದೇಶದ ಸಂಪತ್ತನ್ನು ಲೂಟಿ ಮತ ನೀಡಬೇಡಿ. ಮತದಾನದ ದಿನದಂದು ಮೈಮರೆಯದಿರಿ” ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಟಿವಿ9 ಸುದ್ದಿ ವಾಹಿನಿಯ ವಿಡಿಯೋವೊಂದನ್ನು ತನ್ನ ಎಕ್ಸ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.

ಫ್ಯಾಕ್ಟ್‌ಚೆಕ್ : ಶಾಸಕ ಯತ್ನಾಳ್ ಅವರು ವಿಡಿಯೋ ಹಂಚಿಕೊಂಡಂತೆ ದೇಶದ ಸಂಪತ್ತನ್ನು ಮುಸಲ್ಮಾನರಿಗೆ ಹಂಚುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರಾ? ಎಂಬುವುದರ ಕುರಿತು ನಾನುಗೌರಿ.ಕಾಂ ಸತ್ಯಾಸತ್ಯತೆ ಪರಿಶೀಲನೆ ನಡೆಸಿದೆ.

ಟಿವಿ9 ಸುದ್ದಿಯ ವಿಡಿಯೋ ಗಮನಿಸಿದಾಗ, ಅದು ಡಿಸೆಂಬರ್ 4, 2023ರಂದು ಹುಬ್ಬಳ್ಳಿ ತಾಲೂಕಿನ ಪಾಳ ಗ್ರಾಮದಲ್ಲಿ ದಕ್ಷಿಣ ಭಾರತದ ಮುಸ್ಲಿಂ ಧರ್ಮಗಳ ಸಮಾವೇಶದ್ದು ಎಂದು ತಿಳಿದು ಬಂದಿದೆ.

ಕಾರ್ಯಕ್ರಮದಲ್ಲಿ ಭಾಷಣ ಮಾಡಿದ್ದ ಸಿಎಂ ಸಿದ್ದರಾಮಯ್ಯ ಅವರು, “ನಿಮಗೂ ಶಿಕ್ಷಣ ಸಿಗಬೇಕು, ನಿಮ್ಮ ಧಾರ್ಮಿಕ ಕೇಂದ್ರಗಳ ಅಭಿವೃದ್ದಿ ಆಗಬೇಕು. ನಿಮಗೂ ಈ ದೇಶದ ಸಂಪತ್ತಿನಲ್ಲಿ ಪಾಲು ಸಿಗಬೇಕು. ನೀವು ಕೂಡ ಭಾರತೀಯರಲ್ವಾ? ಈ ದೇಶ ನಿಮಗೂ ಸೇರಬೇಕು, ನನಗೂ ಸೇರಬೇಕು. ಈ ದೇಶದ ಸಂಪತ್ತು ನಿಮಗೂ ಸಿಗಬೇಕು, ನನಗೂ ಸಿಗಬೇಕು. ಈ ದೇಶದ ಸಂಪತ್ತನ್ನು ನಿಮಗೂ ಹಂಚುವ ಕೆಲಸ ಮಾಡುತ್ತೇನೆ. ನಿಮಗೆ ಯಾವುದೇ ಕಾರಣಕ್ಕೆ ಕೂಡ ಅನ್ಯಾಯ ಆಗಲು ಬಿಡಲ್ಲ. ನಿಮ್ಮ ರಕ್ಷಣೆ ಮಾಡುವಂತಹ ಕೆಲಸ ಮಾಡುತ್ತೇನೆ. ಆದೇ ರೀತಿ ಎಲ್ಲಾ ಧರ್ಮ, ಜಾತಿಯವರಿಗೂ ರಕ್ಷಣೆ ಕೊಡುವಂತಹ ಕೆಲಸ ಮಾಡುತ್ತೇನೆ” ಎಂದಿದ್ದರು.

ಇದೇ ವಿಷಯವನ್ನು ಡಿಸೆಂಬರ್ 5, 2023ರಂದು “Siddaramaiah: ಯಾವುದೇ ಕಾರಣಕ್ಕೂ ಅನ್ಯಾಯ ಆಗೋಕೆ ಬಿಡಲ್ಲ: ಮುಸ್ಲಿಮರಿಗೆ ಸಿಎಂ ಭರವಸೆ” ಎಂಬ ಶೀರ್ಷಿಕೆಯಲ್ಲಿ ನ್ಯೂಸ್‌ 18 ಕನ್ನಡ ಮಾಡಿದ್ದ ವರದಿಯಲ್ಲೂ ಉಲ್ಲೇಖಿಸಿದೆ.

ವರದಿ ಲಿಂಕ್ ಇಲ್ಲಿದೆ 

ಇಲ್ಲಿ ಸಿಎಂ ಸಿದ್ದರಾಮಯ್ಯ ಅವರು, ಮುಸ್ಲಿಮರಿಗೂ ಈ ದೇಶದ ಸಂಪತ್ತಿನಲ್ಲಿ ಹಕ್ಕಿದೆ. ನ್ಯಾಯಯುತವಾಗಿ ಮುಸ್ಲಿಮರಿಗೆ ಸಿಗಬೇಕಾದ ಸಂಪತ್ತನ್ನು ಮುಖ್ಯಮಂತ್ರಿಯಾಗಿ ಕೊಡಿಸುವಂತ ಕೆಲಸ ಮಾಡುತ್ತೇನೆ ಎಂಬರ್ಥದಲ್ಲಿ ಮಾತನಾಡಿದ್ದಾರೆ.

ಅಲ್ಲದೆ, ಈ ದೇಶದ ಸಂಪತ್ತನ್ನು ಸಂಪೂರ್ಣವಾಗಿ ಮುಸ್ಲಿಮರಿಗೆ ಹಂಚುತ್ತೇನೆ ಎಂದಿಲ್ಲ. ಸಿಎಂ ತನ್ನ ಭಾಷಣದಲ್ಲಿ “ಎಲ್ಲಾ ಧರ್ಮ, ಜಾತಿಯವರಿಗೂ ರಕ್ಷಣೆ ಕೊಡುವಂತಹ ಕೆಲಸ ಮಾಡುತ್ತೇನೆ” ಎಂದಿರುವುದು ಗಮನಿಸಬಹುದು. ಸಿಎಂ ಮುಸ್ಲಿಂ ಧರ್ಮ ಗುರುಗಳ ಸಮಾವೇಶದಲ್ಲಿ ಭಾಷಣ ಮಾಡಿದ್ದರಿಂದ ಮುಸ್ಲಿಂ ಸಮುದಾಯಕ್ಕೆ ಸಿಗಬೇಕಾದ ಹಕ್ಕುಗಳ ಬಗ್ಗೆ ಮಾತನಾಡಿದ್ದಾರೆ. ಆಯಾ ಸಮುದಾಯದ ಕಾರ್ಯಕ್ರಮದಲ್ಲಿ ಸಮುದಾಯಕ್ಕೆ ಸರ್ಕಾರದಿಂದ ಸಿಗಬೇಕಾದ ಹಕ್ಕು, ಸೌಲಭ್ಯಗಳ ಬಗ್ಗೆ ಜನ ಪ್ರತಿನಿಧಿಗಳು ಮಾತನಾಡುವುದು, ಭರವಸೆ ಕೊಡುವುದು ಸಾಮಾನ್ಯ ಪ್ರಕ್ರಿಯೆ.

ಗಮನಾರ್ಹವಾಗಿ, ಶಾಸಕ ಯತ್ನಾಳ್ ಅವರು ಹಂಚಿಕೊಂಡ ವಿಡಿಯೋ 5 ತಿಂಗಳು ಹಳೆಯದು. ಈಗ ಲೋಕಸಭೆ ಚುನಾವಣೆ ಹತ್ತಿರ ಬರುತ್ತಿರುವುದರಿಂದ ಹಳೆಯ ವಿಡಿಯೋ ಹಂಚಿಕೊಂಡಿದ್ದಾರೆ.

ಇದನ್ನೂ ಓದಿ : FACT CHECK: ‘ದೇಶದ ಸಂಪತ್ತಿನಲ್ಲಿ ಮೊದಲ ಅಧಿಕಾರ ಮುಸ್ಲಿಮರಿಗೆ’ ಎಂದು ಮನಮೋಹನ್ ಸಿಂಗ್ ಹೇಳಿಲ್ಲ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...