Homeಮುಖಪುಟಲೋಕಸಭಾ ಚುನಾವಣೆ 2024: ಸೂರತ್ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಅವಿರೋಧ ಆಯ್ಕೆ

ಲೋಕಸಭಾ ಚುನಾವಣೆ 2024: ಸೂರತ್ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಅವಿರೋಧ ಆಯ್ಕೆ

- Advertisement -
- Advertisement -

ಕಣದಲ್ಲಿದ್ದ ಎಲ್ಲ ಅಭ್ಯರ್ಥಿಗಳು ತಮ್ಮ ನಾಮಪತ್ರಗಳನ್ನು ಹಿಂತೆಗೆದುಕೊಂಡ ನಂತರ, ಬಿಜೆಪಿಯ ಮುಖೇಶ್ ದಲಾಲ್ ಅವರು ಸೂರತ್ ಲೋಕಸಭಾ ಕ್ಷೇತ್ರದಿಂದ ಅವಿರೋಧವಾಗಿ ಆಯ್ಕೆಯಾಗಿದ್ದು, ಅಚ್ಚರಿಗೆ ಕಾರಣವಾಗಿದೆ.

ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ನೀಲೇಶ್ ಕುಂಭಾಣಿ ಅವರ ನಾಮಪತ್ರ ತಿರಸ್ಕೃತಗೊಂಡ ಒಂದು ದಿನದ ನಂತರ ಈ ಬೆಳವಣಿಗೆ ಸಂಭವಿಸಿದೆ. ಅವರ ಪರವಾಗಿ ಮೂವರು ಸೂಚಕರು ನಾಮಪತ್ರಕ್ಕೆ ಸಹಿ ಮಾಡಿಲ್ಲ ಎಂದು ಜಿಲ್ಲಾ ಚುನಾವಣಾಧಿಕಾರಿ ಅಫಿಡವಿಟ್‌ನಲ್ಲಿ ಹೇಳಿದ್ದಾರೆ.

ಏಪ್ರಿಲ್ 21 ರಂದು, ಜಿಲ್ಲಾ ಚುನಾವಣಾ ಅಧಿಕಾರಿ (ಡಿಎಒ) ಸೌರಭ್ ಪಾರ್ಧಿ ಅವರು ಕಾಂಗ್ರೆಸ್ ಅಭ್ಯರ್ಥಿಯ ನಾಮಪತ್ರವನ್ನು ತಿರಸ್ಕರಿಸಿದರು. ಅವರ ಪರವಾಗಿ ಮೂವರು ಸೂಚಕರು ಸಹಿ ಮಾಡದೇ ಇರುವುದು ನಾಮಪತ್ರವನ್ನು ತಿರಸ್ಕರಿಸಲು ಕಾರಣ ಎನ್ನಲಾಗುತ್ತಿದೆ.

ಗುಜರಾತ್‌ನಲ್ಲಿ ಕಾಂಗ್ರೆಸ್ ಮತ್ತು ಎಎಪಿ ಮೈತ್ರಿ ಮಾಡಿಕೊಂಡು ಚುನಾವಣೆ ಎದುರಿಸುತ್ತಿವೆ. 26 ಸ್ಥಾನಗಳ ಪೈಕಿ 24 ಸ್ಥಾನಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದ್ದು, ಎಎಪಿ ಭಾವನಗರ ಮತ್ತು ಭರೂಚ್‌ನಲ್ಲಿ ಸ್ಪರ್ಧಿಸುತ್ತಿದೆ.

ಭಾರತೀಯ ಚುನಾವಣಾ ಆಯೋಗದ ವೆಬ್‌ಸೈಟ್ ಪ್ರಕಾರ, ಕಾಂಗ್ರೆಸ್ ಮತ್ತು ಬಿಜೆಪಿ ಹೊರತುಪಡಿಸಿ, ಬಹುಜನ ಸಮಾಜ ಪಕ್ಷವು ಸೂರತ್ ಸ್ಥಾನಕ್ಕೆ ಅಭ್ಯರ್ಥಿಯನ್ನು ನಿಲ್ಲಿಸಿದ ಏಕೈಕ ರಾಷ್ಟ್ರೀಯ ಪಕ್ಷವಾಗಿತ್ತು. ಮಾಯಾವತಿ ಪಕ್ಷದ ಅಭ್ಯರ್ಥಿಯೂ ನಾಮಪತ್ರ ವಾಪಸ್ ಪಡೆದಿರುವುದು ಬಿಜೆಪಿ ಅಭ್ಯರ್ಥಿ ಗೆಲುವಿಗೆ ಕಾರಣವಾಗಿದೆ.

ಕಳೆದ ತಿಂಗಳು ಅರುಣಾಚಲ ಪ್ರದೇಶದಲ್ಲಿಯೂ ಕೂಡ, 10 ಜನ ಬಿಜೆಪಿ ಶಾಸಕರು ಅವಿರೋಧವಾಗಿ ಆಯ್ಕೆಯಾಗಿದ್ದರು. ಚುನಾವಣೆ ನಂತರ ನಡೆಯುತ್ತಿದ್ದ ಆಪರೇಷನ್ ಕಮಲ, ಇದೀಗ ಚುನಾವಣೆ ಪೂರ್ವದಲ್ಲಿ ನಡೆಯುತ್ತಿರುವುದಕ್ಕೆ ಹಲವರು ಆತಂಕ ವ್ಯಕ್ತಪಡಿಸುತ್ತಿದ್ದಾರೆ.

ಇದನ್ನೂ ಓದಿ; ನೈಜ ಸಮಸ್ಯೆಗಳ ಗಮನ ಬೇರೆಡೆ ಸೆಳೆಯಲು ಮೋದಿಯಿಂದ ಹೊಸ ತಂತ್ರ: ಕಾಂಗ್ರೆಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...