Homeಮುಖಪುಟಮೋದಿ ದ್ವೇಷ ಭಾಷಣ: ಪ್ರಧಾನಮಂತ್ರಿಯ ವೆಬ್‌ಸೈಟ್‌ನಲ್ಲಿನ ಸಾರಾಂಶದಲ್ಲಿ ವಿವಾದಿತ ಹೇಳಿಕೆಗಳು ಕಾಣೆ!

ಮೋದಿ ದ್ವೇಷ ಭಾಷಣ: ಪ್ರಧಾನಮಂತ್ರಿಯ ವೆಬ್‌ಸೈಟ್‌ನಲ್ಲಿನ ಸಾರಾಂಶದಲ್ಲಿ ವಿವಾದಿತ ಹೇಳಿಕೆಗಳು ಕಾಣೆ!

- Advertisement -
- Advertisement -

ಬುಡಕಟ್ಟು ಜನಾಂಗದ ಜನರೇ ಬಹುಸಂಖ್ಯಾತರಾಗಿರುವ ರಾಜಸ್ಥಾನದ ಭನ್ಸ್ವಾರಾದಲ್ಲಿ ಬಿಜೆಪಿಯ ಚುನಾವಣಾ ಪ್ರಚಾರದ ವೇಳೆ ಮೋದಿ ಮುಸ್ಲಿಮರ ವಿರುದ್ಧ ದ್ವೇಷ ಭಾಷಣವನ್ನು ಮಾಡಿದ್ದರು. ಈ ಬಗ್ಗೆ ಯಾವುದೇ ಕ್ರಮ ಕೈಗೊಳ್ಳದೆ ಚುನಾವಣಾ ಆಯೋಗ ಮೌನವಾಗಿದೆ. ಆದರೆ, ಇದು ಚುನಾವಣಾ ನೀತಿ ಸಂಹಿತೆಯ ಸ್ಪಷ್ಟವಾದ ಉಲ್ಲಂಘನೆಯಾಗಿದೆ. ಈ ಬಗ್ಗೆ ವ್ಯಾಪಕ ಟೀಕೆ ವ್ಯಕ್ತವಾಗಿತ್ತು. ಇದೀಗ ಪ್ರಧಾನ ಮಂತ್ರಿಯ ವೆಬ್‌ಸೈಟ್‌ನಲ್ಲಿನ ಇಂಗ್ಲಿಷ್ ಸಾರಾಂಶದಿಂದ ನೀತಿ ಸಂಹಿತೆ ಉಲ್ಲಂಘಿಸಿರುವ ಮೋದಿಯ ಭಾಷಣದ ತುಣುಕುಗಳು ಕಾಣೆಯಾಗಿವೆ.

ಮೋದಿ ಮುಸ್ಲಿಂ ಸಮುದಾಯವನ್ನು ಹೆಚ್ಚು ಮಕ್ಕಳನ್ನು ಹೊಂದಿರುವವರು, ನುಸುಳುಕೋರರು ಎಂದು ಉಲ್ಲೇಖಿಸಿದ್ದಾರೆ. ಇದಲ್ಲದೆ ಮನಮೋಹನ್ ಸಿಂಗ್ ಅವರ ಸರ್ಕಾರವು ದೇಶದ ಆಸ್ತಿಯಲ್ಲಿ ಮುಸ್ಲಿಮರಿಗೆ ಮೊದಲ ಹಕ್ಕು ಎಂದು ಹೇಳಿದ್ದರು ಎಂದು ಸುಳ್ಳು ಹೇಳಿದ್ದರು.

ಚುನಾವಣಾ ನೀತಿ ಸಂಹಿತೆಯನ್ನು ಉಲ್ಲಂಘಿಸುವ ಆ ವಿವಾದಾತ್ಮಕ ಭಾಗಗಳು ಅವರ ವೈಯಕ್ತಿಕ ವೆಬ್‌ಸೈಟ್ www.narendramodi.in ನಲ್ಲಿ ಇಂಗ್ಲಿಷ್‌ನಲ್ಲಿ ಅಪ್‌ಲೋಡ್ ಮಾಡಲಾದ ಮೋದಿಯವರ ಚುನಾವಣಾ ಭಾಷಣದ ದೀರ್ಘ ಸಾರಾಂಶದಿಂದ ಕಾಣೆಯಾಗಿದೆ.

ಭಾಷಣಗಳ ಇಂಗ್ಲಿಷ್ ಸಾರಾಂಶವು ಕೊನೆಯ ಪ್ಯಾರಾಗ್ರಾಫ್‌ನಲ್ಲಿ ಪ್ರಚೋದನಕಾರಿ ಭಾಗವನ್ನು ಉಲ್ಲೇಖಿಸಿದೆ, ಆದರೆ ‘ನುಸುಳುಕೋರರು’ ಮತ್ತು ‘ಮುಸ್ಲಿಮ್‌ಗಳಂತಹ ಪದಗಳನ್ನು ಒಳಗೊಂಡಂತೆ ಗಮನಾರ್ಹ ವಿವರಗಳನ್ನು ನಮೂದಿಸಿಲ್ಲ ಮತ್ತು ‘ಹೆಚ್ಚು ಮಕ್ಕಳನ್ನು ಹೊಂದಿರುವವರು’ ಮುಂತಾದ ಪದಗುಚ್ಛಗಳನ್ನು ಪ್ರಧಾನಿ ಬಳಸಿದ್ದಾರೆ. ಕಾಂಗ್ರೆಸ್ ನಮ್ಮ ತಾಯಂದಿರು ಮತ್ತು ಸಹೋದರಿಯರ ಮಂಗಳಸೂತ್ರವನ್ನು ಕಸಿದುಕೊಂಡು ಮುಸ್ಲಿಂ ಸಮುದಾಯಕ್ಕೆ ನೀಡಲಿದೆ ಎಂದು ಅವರು ಹೇಳಿರುವುದನ್ನು ಉಲ್ಲೇಖಿಸಿಲ್ಲ.

ಭನ್ಸ್ವಾರಾದಲ್ಲಿ ಕಾಂಗ್ರೆಸ್‌ ವಿರುದ್ಧ ತೀವ್ರವಾಗಿ ವಾಗ್ಧಾಳಿ ನಡೆಸಿದ ಪ್ರಧಾನಿ ಮೋದಿ, ಕಾಂಗ್ರೆಸ್ ಎಡಪಂಥೀಯರು ಮತ್ತು ನಗರ ನಕ್ಸಲರ ಕಪಿಮುಷ್ಠಿಯಲ್ಲಿ ಸಿಕ್ಕಿಹಾಕಿಕೊಂಡಿದೆ. ಕಾಂಗ್ರೆಸ್ ತನ್ನ ಪ್ರಣಾಳಿಕೆಯಲ್ಲಿ ಹೇಳಿರುವುದು ಗಂಭೀರ ಮತ್ತು ಆತಂಕಕಾರಿ ವಿಚಾರ, ಅವರು ಸರ್ಕಾರ ರಚಿಸಿದರೆ ಪ್ರತಿಯೊಬ್ಬ ವ್ಯಕ್ತಿಗೆ ಸೇರಿದ ಆಸ್ತಿಯ ಸಮೀಕ್ಷೆ ನಡೆಸಲಾಗುವುದು ಎಂದು ಹೇಳಿದ್ದಾರೆ. ನಮ್ಮ ಸಹೋದರಿಯರು ಎಷ್ಟು ಚಿನ್ನ ಹೊಂದಿದ್ದಾರೆ, ಸರ್ಕಾರಿ ನೌಕರರು ಎಷ್ಟು ಹಣ ಹೊಂದಿದ್ದಾರೆ ಎಂಬುದನ್ನು ಪರಿಶೀಲಿಸಲಾಗುವುದು. ನಮ್ಮ ಸಹೋದರಿಯರ ಚಿನ್ನಾಭರಣಗಳನ್ನು ಸಮಾನವಾಗಿ ವಿತರಿಸಲಾಗುವುದು ಎಂದು ಅವರು ಹೇಳಿದ್ದಾರೆ. ನಮ್ಮ ಆಸ್ತಿಯನ್ನು ಸ್ವಾಧೀನಪಡಿಸಿಕೊಳ್ಳುವ ಹಕ್ಕು ಸರ್ಕಾರಕ್ಕೆ ಇದೆಯೇ? ಎಂದು ಉಲ್ಲೇಖಿಸಲಾಗಿದೆ.

www.narendramodi.in ವೆಬ್‌ಸೈಟ್ ಪ್ರಧಾನಿಯ ಪ್ರಚಾರ ಪೋರ್ಟಲ್ ಆಗಿ ಕಾರ್ಯನಿರ್ವಹಿಸುತ್ತದೆ. ಆದರೆ, ಮೋದಿಯವರು ಹಿಂದಿಯಲ್ಲಿ ಮಾಡಿದ ವಿವಾದಾತ್ಮಕ ಭಾಷಣಗಳ ವಿಡಿಯೋಗಳನ್ನು ಲಗತ್ತಿಸಿದೆ. ಜಾಲೋರ್‌ನಲ್ಲಿ ಮೋದಿ ಭಾಷಣದ ಪೂರ್ಣ ಹಿಂದಿ ಭಾಗವನ್ನು ವೆಬ್‌ಸೈಟ್‌ನಲ್ಲಿ ಅಪ್‌ಲೋಡ್ ಮಾಡಲಾಗಿದೆ. ಆದರೆ ಅವರ ಭನ್ಸ್ವಾರಾದ ಭಾಷಣದ ಭಾಗ ಸ್ಪಷ್ಟವಾಗಿ ಕಾಣೆಯಾಗಿದೆ. ವೆಬ್‌ಸೈಟ್‌ಗೆ ಭೇಟಿ ನೀಡುವ ಇಂಗ್ಲಿಷ್‌ನಲ್ಲಿ ಮಾತ್ರ ಬಲ್ಲವರಿಗೆ ಪ್ರಧಾನಿ ಮಾಡಿದ ದ್ವೇಷದ ಭಾಷಣದ ಬಗ್ಗೆ ತಿಳಿಯುವುದು ಅಸಾಧ್ಯ, ಹಿಂದಿಯನ್ನು ಅರ್ಥಮಾಡಿಕೊಳ್ಳುವವರಿಗೆ ಮಾತ್ರ ವೀಡಿಯೊ ಕ್ಲಿಕ್ ಮಾಡಿದ ನಂತರ ಅವರ ನಿಖರವಾದ ಮಾತುಗಳನ್ನು ಕೇಳಬಹುದು.

ಏಪ್ರಿಲ್ 22ರ ಮಧ್ಯಾಹ್ನದವರೆಗೂ ಮೋದಿ ಅವರ ವಾಟ್ಸಾಪ್ ಚಾನೆಲ್ ಕೂಡ ಭಾಷಣವನ್ನು ಅಪ್‌ಲೋಡ್ ಮಾಡಿರಲಿಲ್ಲ ಎಂದು ವರದಿ ಉಲ್ಲೇಖಿಸಿದೆ. ಮೋದಿಯ ದ್ವೇಷದ ಭಾಷಣ ರಾಜಕೀಯ ವೀಕ್ಷಕರಲ್ಲಿ ಕುತೂಹಲ ಮೂಡಿಸಿದೆ. ಏಕೆಂದರೆ ಮೋದಿ ಪ್ರಧಾನಿಯಾದಾಗಿನಿಂದ ಇಲ್ಲಿಯವರೆಗೆ ಹಿಂದೂ ಮತಗಳನ್ನು ಸೆಳೆಯಲು ತಮ್ಮ ಚುನಾವಣಾ ಭಾಷಣಗಳಲ್ಲಿ ನೇರವಾಗಿ ಮುಸ್ಲಿಂ ಸಮುದಾಯವನ್ನು ಉಲ್ಲೇಖಿಸಿರಲಿಲ್ಲ. ಆದರೆ ಈ ಬಾರಿ ನೇರವಾಗಿ ಮುಸ್ಲಿಮರ ವಿರುದ್ಧ ದ್ವೇಷ ಭಾಷಣವನ್ನು ಮಾಡಿದ್ದಾರೆ. ಭಾರತದ ಚುನಾವಣಾ ಆಯೋಗವು ಈ ವಿಷಯದಲ್ಲಿ ಮೌನವಾಗಿದೆ.

ಇದನ್ನು ಓದಿ: ಮುಸ್ಲಿಂ ಸಮುದಾಯದ ಬಗ್ಗೆ ಪ್ರಧಾನಿ ದ್ವೇಷ ಭಾಷಣ: ಮೋದಿ ವಿರುದ್ಧ ರಾಹುಲ್‌, ಖರ್ಗೆ ಸೇರಿ ಪ್ರತಿಪಕ್ಷಗಳ ನಾಯಕರಿಂದ ವಾಗ್ಧಾಳಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ಯಾಲೆಸ್ತೀನ್ ಜನರೊಂದಿಗೆ ಒಗ್ಗಟ್ಟು ಪ್ರದರ್ಶನ: ದೆಹಲಿಯ ಮೆಕ್‌ಡೊನಾಲ್ಡ್ಸ್ ಹೊರಗೆ ಪ್ರತಿಭಟನೆ

ಪ್ಯಾಲೆಸ್ಟೈನ್ ಜೊತೆ ಒಗ್ಗಟ್ಟಿನ ಭಾರತೀಯ ಜನರು (ಐಪಿಎಸ್‌ಪಿ) ಗುಂಪಿನ ಸದಸ್ಯರು (ಏ.3) ಜನಪಥ್ ಪ್ರದೇಶದ ಮೆಕ್‌ಡೊನಾಲ್ಡ್ಸ್ ಔಟ್‌ಲೆಟ್‌ನ ಹೊರಗೆ ದಿಢೀರ್ ಪ್ರತಿಭಟನೆಯನ್ನು ಆಯೋಜಿಸಿದ್ದರು. ಪ್ಯಾಲೆಸ್ತೀನಿಯನ್ನರನ್ನು ಒಳಗೊಂಡ ನಡೆಯುತ್ತಿರುವ ಸಂಘರ್ಷದಲ್ಲಿ ಮೆಕ್‌ಡೊನಾಲ್ಡ್ಸ್ ಮತ್ತು ಕೋಕಾ-ಕೋಲಾದಂತಹ ಬಹುರಾಷ್ಟ್ರೀಯ...

‘ಇರಾನಿಯನ್ನರು ಸ್ಮಾರ್ಟ್ ಚೆಸ್ ಆಡುತ್ತಿದ್ದು, ಟ್ರಂಪ್ ಭ್ರಮಾಲೋಕದಲ್ಲಿದ್ದಾರೆ..’; ಮಾಜಿ ರಾಜತಾಂತ್ರಿಕ ಅಧಿಕಾರಿ ಕೆ.ಪಿ. ಫ್ಯಾಬಿಯನ್

ಪ್ರಸ್ತುತ ನಡೆಯುತ್ತಿರುವ ಪಶ್ಚಿಮ ಏಷ್ಯಾ ಸಂಘರ್ಷದ ಬಗ್ಗೆ ಮಾತನಾಡಿದ ಭಾರತದ ಮಾಜಿ ರಾಯಭಾರಿ ಕೆ.ಪಿ. ಫ್ಯಾಬಿಯನ್, "ಇರಾನಿಯನ್ನರು ಸ್ಮಾರ್ಟ್ ಚೆಸ್ ಆಟವನ್ನು ಆಡುತ್ತಿದ್ದಾರೆ. ಆದರೆ, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗಳು...

‘ನಾನು ಸಂಸತ್ತಿಗೆ ಹೋಗುವುದು ಗದ್ದಲ ಸೃಷ್ಟಿಸಲು ಅಲ್ಲ’ : ಎಎಪಿ ಆರೋಪಗಳನ್ನು ತಳ್ಳಿ ಹಾಕಿದ ರಾಘವ್ ಚಡ್ಡಾ

ತನ್ನ ವಿರುದ್ದ ಆಮ್‌ ಆದ್ಮಿ ಪಕ್ಷ (ಎಎಪಿ) ಮಾಡಿರುವ ಎಲ್ಲಾ ಆರೋಪಗಳನ್ನು ರಾಘವ್ ಚಡ್ಡಾ ಶನಿವಾರ (ಏ.4) ಅಲ್ಲಗಳೆದಿದ್ದು, "ಅವೆಲ್ಲವೂ ಸುಳ್ಳು ಮತ್ತು ಸಂಘಟಿತ ಅಭಿಯಾನದ ಭಾಗ" ಎಂದಿದ್ದಾರೆ. "ಸಂಸತ್ತಿನಲ್ಲಿ ನನ್ನ ಉದ್ದೇಶ...

ಎಡರಂಗದಲ್ಲಿ ಎಡಪಂಥೀಯರೇ ಇಲ್ಲ; ದ್ವೇಷ ಹರಡುವ ಜನರೊಂದಿಗೆ ಪಿಣರಾಯಿ ಪಾಲುದಾರಿಕೆ ಹೊಂದಿದ್ದಾರೆ: ರಾಹುಲ್ ಗಾಂಧಿ

ಕೇರಳ ವಿಧಾನಸಭಾ ಚುನಾವಣೆ ಪ್ರಚಾರವು ಅಂತಿಮ ಹಂತಕ್ಕೆ ತಲುಪುತ್ತಿದ್ದಂತೆ ತೀಕ್ಷ್ಣವಾದ ರಾಜಕೀಯ ದಾಳಿಯನ್ನು ಆರಂಭಿಸಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, "ಸಿಪಿಐ-ಎಂ ನೇತೃತ್ವದ ಎಡಪಕ್ಷವು ತನ್ನ ಸೈದ್ಧಾಂತಿಕ ತಿರುಳನ್ನು ಕಳೆದುಕೊಳ್ಳುತ್ತಿದೆ" ಎಂದು ಆರೋಪಿಸಿದ್ದಾರೆ. "ಎಲ್‌ಡಿಎಫ್...

ಬಿಜೆಪಿ ಟಿಕೆಟ್ ನಿರಾಕರಿಸಿಲ್ಲ, ನಾನೇ ಸ್ಪರ್ಧಿಸಲ್ಲ ಅಂದಿದ್ದೆ : ಅಣ್ಣಾಮಲೈ

"ವಿಧಾನಸಭಾ ಚುನಾವಣೆಗೆ ಬಿಜೆಪಿ ನನಗೆ ಟಿಕೆಟ್ ನಿರಾಕರಿಸಿಲ್ಲ, ನಾನೇ ಸ್ಪರ್ಧಿಸಲ್ಲ ಎಂದು ಮುಂಚಿತವಾಗಿ ಹೈಕಮಾಂಡ್‌ಗೆ ತಿಳಿಸಿದ್ದೆ" ಎಂದು ತಮಿಳುನಾಡು ಬಿಜೆಪಿಯ ಮಾಜಿ ರಾಜ್ಯಾಧ್ಯಕ್ಷ ಕೆ. ಅಣ್ಣಾಮಲೈ ಹೇಳಿದ್ದಾರೆ. ಚೆನ್ನೈ ವಿಮಾನ ನಿಲ್ದಾಣದಲ್ಲಿ ಶನಿವಾರ...

ಸುರಕ್ಷಿತವಾಗಿ ಹಾರ್ಮುಜ್ ದಾಟಿದ 7ನೇ ಎಲ್‌ಪಿಜಿ ಹಡಗು; ಸರದಿಯಲ್ಲಿ ಕಾಯುತ್ತಿವೆ ಭಾರತದ 17 ಟ್ಯಾಂಕರ್‌ಗಳು

ಭಾರತದ ಧ್ವಜ ಹೊಂದಿದ್ದ ಮತ್ತೊಂದು ದ್ರವೀಕೃತ ಪೆಟ್ರೋಲಿಯಂ ಅನಿಲ (ಎಲ್‌ಪಿಜಿ) ಟ್ಯಾಂಕರ್, ಗ್ರೀನ್ ಸಾನ್ವಿ ಹೆಸರಿನ ಹಡಗು ಹಾರ್ಮುಜ್ ಜಲಸಂಧಿಯ ಪೂರ್ವಕ್ಕೆ ಯಶಸ್ವಿಯಾಗಿ ತಲುಪಿದೆ. ಹಡಗು ಟ್ರ್ಯಾಕಿಂಗ್ ದತ್ತಾಂಶದ ಪ್ರಕಾರ, ನಡೆಯುತ್ತಿರುವ ಪಶ್ಚಿಮ...

ಸಿಬಿಎಸ್‌ಇ ಹಿಂದಿ ಹೇರಿಕೆಯು ತ್ರಿಭಾಷಾ ಸೂತ್ರ ಜಾರಿಯ ‘ರಹಸ್ಯ ಕಾರ್ಯವಿಧಾನ’: ಸ್ಟಾಲಿನ್ ಆರೋಪ

ಸಿಬಿಎಸ್‌ಇ ಇತ್ತೀಚೆಗೆ ಅನಾವರಣಗೊಳಿಸಿದ ಪಠ್ಯಕ್ರಮ ಚೌಕಟ್ಟಿನ ಕುರಿತು ಮಾತನಾಡಿದ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್, "ಮೂರು ಭಾಷಾ ಸೂತ್ರ ಎಂದು ಕರೆಯಲ್ಪಡುವುದು ವಾಸ್ತವದಲ್ಲಿ ಹಿಂದಿ ಮಾತನಾಡದ ಪ್ರದೇಶಗಳಿಗೆ ಹಿಂದಿ ವಿಸ್ತರಿಸುವ ರಹಸ್ಯ ಕಾರ್ಯವಿಧಾನವಾಗಿದೆ"...

‘ತಿಂದ ಮನೆಗೆ ಕನ್ನ ಹಾಕುವುದು ತರವಲ್ಲ, ನಿಮ್ಮ ಅಧಿಕ ಪ್ರಸಂಗ ಕರ್ನಾಟಕದ ಜನತೆ ಒಪ್ಪುವುದಿಲ್ಲ’ : ರಾಜ್ಯಪಾಲರ ವಿರುದ್ಧ ಕರವೇ ಕಿಡಿ

ರಾಜ್ಯದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳಲ್ಲಿ ತೃತೀಯ ಭಾಷೆಗೆ ಗ್ರೇಡಿಂಗ್ ನೀಡುವ ಸರ್ಕಾರದ ನಿರ್ಧಾರವನ್ನು ಮರುಪರಿಶೀಲಿಸುವಂತೆ ಮುಖ್ಯ ಕಾರ್ಯದರ್ಶಿಗಳಿಗೆ ಪತ್ರ ಬರೆದಿರುವ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ವಿರುದ್ಧ ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ರಾಜ್ಯಾಧ್ಯಕ್ಷ...

‘ತಪ್ಪಾಗಿದೆ’ : ಕೇಂದ್ರ ಸರ್ಕಾರದ ಟ್ರಾನ್ಸ್‌ಜೆಂಡರ್‌ ವಿಧೇಯಕದ ಕುರಿತ ಟೀಕೆಗಳನ್ನು ಕೈಬಿಟ್ಟ ರಾಜಸ್ಥಾನ ಹೈಕೋರ್ಟ್

ಟ್ರಾನ್ಸ್‌ಜೆಂಡರ್ ಕಾಯ್ದೆ, 2019ರಲ್ಲಿ ಬದಲಾವಣೆಗಳನ್ನು ತರಲಿರುವ ಕೇಂದ್ರ ಸರ್ಕಾರದ ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ವಿಧೇಯ, 2026ರ ಕುರಿತು ಈ ಹಿಂದೆ ಮಾಡಿದ್ದ ವಿಮರ್ಶಾತ್ಮಕ ಟಿಪ್ಪಣಿಗಳನ್ನು ರಾಜಸ್ಥಾನ ಹೈಕೋರ್ಟ್ ತೆಗೆದುಹಾಕಿದೆ ಎಂದು...

ಯುಸಿಸಿ ಜಾರಿ ನಂತರ ‘ಜನಸಂಖ್ಯಾ ನಿಯಂತ್ರಣ’ ಕಾನೂನಿಗೆ ಮುಂದಾದ ಉತ್ತರಾಖಂಡ ಬಿಜೆಪಿ ಸರ್ಕಾರ

ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತಂದ ನಂತರ, ಉತ್ತರಾಖಂಡ ಸರ್ಕಾರ ಈಗ ಜನಸಂಖ್ಯಾ ನಿಯಂತ್ರಣ ಕಾನೂನನ್ನು ತರುವ ಬಗ್ಗೆ ಯೋಚಿಸುತ್ತಿದೆ ಎಂದು ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಶುಕ್ರವಾರ ಸೂಚಿಸಿದ್ದಾರೆ. ಪ್ರಸ್ತಾವಿತ ಕ್ರಮದ...