Homeಮುಖಪುಟಮೋದಿ ದ್ವೇಷ ಭಾಷಣ: ಪ್ರಧಾನಮಂತ್ರಿಯ ವೆಬ್‌ಸೈಟ್‌ನಲ್ಲಿನ ಸಾರಾಂಶದಲ್ಲಿ ವಿವಾದಿತ ಹೇಳಿಕೆಗಳು ಕಾಣೆ!

ಮೋದಿ ದ್ವೇಷ ಭಾಷಣ: ಪ್ರಧಾನಮಂತ್ರಿಯ ವೆಬ್‌ಸೈಟ್‌ನಲ್ಲಿನ ಸಾರಾಂಶದಲ್ಲಿ ವಿವಾದಿತ ಹೇಳಿಕೆಗಳು ಕಾಣೆ!

- Advertisement -
- Advertisement -

ಬುಡಕಟ್ಟು ಜನಾಂಗದ ಜನರೇ ಬಹುಸಂಖ್ಯಾತರಾಗಿರುವ ರಾಜಸ್ಥಾನದ ಭನ್ಸ್ವಾರಾದಲ್ಲಿ ಬಿಜೆಪಿಯ ಚುನಾವಣಾ ಪ್ರಚಾರದ ವೇಳೆ ಮೋದಿ ಮುಸ್ಲಿಮರ ವಿರುದ್ಧ ದ್ವೇಷ ಭಾಷಣವನ್ನು ಮಾಡಿದ್ದರು. ಈ ಬಗ್ಗೆ ಯಾವುದೇ ಕ್ರಮ ಕೈಗೊಳ್ಳದೆ ಚುನಾವಣಾ ಆಯೋಗ ಮೌನವಾಗಿದೆ. ಆದರೆ, ಇದು ಚುನಾವಣಾ ನೀತಿ ಸಂಹಿತೆಯ ಸ್ಪಷ್ಟವಾದ ಉಲ್ಲಂಘನೆಯಾಗಿದೆ. ಈ ಬಗ್ಗೆ ವ್ಯಾಪಕ ಟೀಕೆ ವ್ಯಕ್ತವಾಗಿತ್ತು. ಇದೀಗ ಪ್ರಧಾನ ಮಂತ್ರಿಯ ವೆಬ್‌ಸೈಟ್‌ನಲ್ಲಿನ ಇಂಗ್ಲಿಷ್ ಸಾರಾಂಶದಿಂದ ನೀತಿ ಸಂಹಿತೆ ಉಲ್ಲಂಘಿಸಿರುವ ಮೋದಿಯ ಭಾಷಣದ ತುಣುಕುಗಳು ಕಾಣೆಯಾಗಿವೆ.

ಮೋದಿ ಮುಸ್ಲಿಂ ಸಮುದಾಯವನ್ನು ಹೆಚ್ಚು ಮಕ್ಕಳನ್ನು ಹೊಂದಿರುವವರು, ನುಸುಳುಕೋರರು ಎಂದು ಉಲ್ಲೇಖಿಸಿದ್ದಾರೆ. ಇದಲ್ಲದೆ ಮನಮೋಹನ್ ಸಿಂಗ್ ಅವರ ಸರ್ಕಾರವು ದೇಶದ ಆಸ್ತಿಯಲ್ಲಿ ಮುಸ್ಲಿಮರಿಗೆ ಮೊದಲ ಹಕ್ಕು ಎಂದು ಹೇಳಿದ್ದರು ಎಂದು ಸುಳ್ಳು ಹೇಳಿದ್ದರು.

ಚುನಾವಣಾ ನೀತಿ ಸಂಹಿತೆಯನ್ನು ಉಲ್ಲಂಘಿಸುವ ಆ ವಿವಾದಾತ್ಮಕ ಭಾಗಗಳು ಅವರ ವೈಯಕ್ತಿಕ ವೆಬ್‌ಸೈಟ್ www.narendramodi.in ನಲ್ಲಿ ಇಂಗ್ಲಿಷ್‌ನಲ್ಲಿ ಅಪ್‌ಲೋಡ್ ಮಾಡಲಾದ ಮೋದಿಯವರ ಚುನಾವಣಾ ಭಾಷಣದ ದೀರ್ಘ ಸಾರಾಂಶದಿಂದ ಕಾಣೆಯಾಗಿದೆ.

ಭಾಷಣಗಳ ಇಂಗ್ಲಿಷ್ ಸಾರಾಂಶವು ಕೊನೆಯ ಪ್ಯಾರಾಗ್ರಾಫ್‌ನಲ್ಲಿ ಪ್ರಚೋದನಕಾರಿ ಭಾಗವನ್ನು ಉಲ್ಲೇಖಿಸಿದೆ, ಆದರೆ ‘ನುಸುಳುಕೋರರು’ ಮತ್ತು ‘ಮುಸ್ಲಿಮ್‌ಗಳಂತಹ ಪದಗಳನ್ನು ಒಳಗೊಂಡಂತೆ ಗಮನಾರ್ಹ ವಿವರಗಳನ್ನು ನಮೂದಿಸಿಲ್ಲ ಮತ್ತು ‘ಹೆಚ್ಚು ಮಕ್ಕಳನ್ನು ಹೊಂದಿರುವವರು’ ಮುಂತಾದ ಪದಗುಚ್ಛಗಳನ್ನು ಪ್ರಧಾನಿ ಬಳಸಿದ್ದಾರೆ. ಕಾಂಗ್ರೆಸ್ ನಮ್ಮ ತಾಯಂದಿರು ಮತ್ತು ಸಹೋದರಿಯರ ಮಂಗಳಸೂತ್ರವನ್ನು ಕಸಿದುಕೊಂಡು ಮುಸ್ಲಿಂ ಸಮುದಾಯಕ್ಕೆ ನೀಡಲಿದೆ ಎಂದು ಅವರು ಹೇಳಿರುವುದನ್ನು ಉಲ್ಲೇಖಿಸಿಲ್ಲ.

ಭನ್ಸ್ವಾರಾದಲ್ಲಿ ಕಾಂಗ್ರೆಸ್‌ ವಿರುದ್ಧ ತೀವ್ರವಾಗಿ ವಾಗ್ಧಾಳಿ ನಡೆಸಿದ ಪ್ರಧಾನಿ ಮೋದಿ, ಕಾಂಗ್ರೆಸ್ ಎಡಪಂಥೀಯರು ಮತ್ತು ನಗರ ನಕ್ಸಲರ ಕಪಿಮುಷ್ಠಿಯಲ್ಲಿ ಸಿಕ್ಕಿಹಾಕಿಕೊಂಡಿದೆ. ಕಾಂಗ್ರೆಸ್ ತನ್ನ ಪ್ರಣಾಳಿಕೆಯಲ್ಲಿ ಹೇಳಿರುವುದು ಗಂಭೀರ ಮತ್ತು ಆತಂಕಕಾರಿ ವಿಚಾರ, ಅವರು ಸರ್ಕಾರ ರಚಿಸಿದರೆ ಪ್ರತಿಯೊಬ್ಬ ವ್ಯಕ್ತಿಗೆ ಸೇರಿದ ಆಸ್ತಿಯ ಸಮೀಕ್ಷೆ ನಡೆಸಲಾಗುವುದು ಎಂದು ಹೇಳಿದ್ದಾರೆ. ನಮ್ಮ ಸಹೋದರಿಯರು ಎಷ್ಟು ಚಿನ್ನ ಹೊಂದಿದ್ದಾರೆ, ಸರ್ಕಾರಿ ನೌಕರರು ಎಷ್ಟು ಹಣ ಹೊಂದಿದ್ದಾರೆ ಎಂಬುದನ್ನು ಪರಿಶೀಲಿಸಲಾಗುವುದು. ನಮ್ಮ ಸಹೋದರಿಯರ ಚಿನ್ನಾಭರಣಗಳನ್ನು ಸಮಾನವಾಗಿ ವಿತರಿಸಲಾಗುವುದು ಎಂದು ಅವರು ಹೇಳಿದ್ದಾರೆ. ನಮ್ಮ ಆಸ್ತಿಯನ್ನು ಸ್ವಾಧೀನಪಡಿಸಿಕೊಳ್ಳುವ ಹಕ್ಕು ಸರ್ಕಾರಕ್ಕೆ ಇದೆಯೇ? ಎಂದು ಉಲ್ಲೇಖಿಸಲಾಗಿದೆ.

www.narendramodi.in ವೆಬ್‌ಸೈಟ್ ಪ್ರಧಾನಿಯ ಪ್ರಚಾರ ಪೋರ್ಟಲ್ ಆಗಿ ಕಾರ್ಯನಿರ್ವಹಿಸುತ್ತದೆ. ಆದರೆ, ಮೋದಿಯವರು ಹಿಂದಿಯಲ್ಲಿ ಮಾಡಿದ ವಿವಾದಾತ್ಮಕ ಭಾಷಣಗಳ ವಿಡಿಯೋಗಳನ್ನು ಲಗತ್ತಿಸಿದೆ. ಜಾಲೋರ್‌ನಲ್ಲಿ ಮೋದಿ ಭಾಷಣದ ಪೂರ್ಣ ಹಿಂದಿ ಭಾಗವನ್ನು ವೆಬ್‌ಸೈಟ್‌ನಲ್ಲಿ ಅಪ್‌ಲೋಡ್ ಮಾಡಲಾಗಿದೆ. ಆದರೆ ಅವರ ಭನ್ಸ್ವಾರಾದ ಭಾಷಣದ ಭಾಗ ಸ್ಪಷ್ಟವಾಗಿ ಕಾಣೆಯಾಗಿದೆ. ವೆಬ್‌ಸೈಟ್‌ಗೆ ಭೇಟಿ ನೀಡುವ ಇಂಗ್ಲಿಷ್‌ನಲ್ಲಿ ಮಾತ್ರ ಬಲ್ಲವರಿಗೆ ಪ್ರಧಾನಿ ಮಾಡಿದ ದ್ವೇಷದ ಭಾಷಣದ ಬಗ್ಗೆ ತಿಳಿಯುವುದು ಅಸಾಧ್ಯ, ಹಿಂದಿಯನ್ನು ಅರ್ಥಮಾಡಿಕೊಳ್ಳುವವರಿಗೆ ಮಾತ್ರ ವೀಡಿಯೊ ಕ್ಲಿಕ್ ಮಾಡಿದ ನಂತರ ಅವರ ನಿಖರವಾದ ಮಾತುಗಳನ್ನು ಕೇಳಬಹುದು.

ಏಪ್ರಿಲ್ 22ರ ಮಧ್ಯಾಹ್ನದವರೆಗೂ ಮೋದಿ ಅವರ ವಾಟ್ಸಾಪ್ ಚಾನೆಲ್ ಕೂಡ ಭಾಷಣವನ್ನು ಅಪ್‌ಲೋಡ್ ಮಾಡಿರಲಿಲ್ಲ ಎಂದು ವರದಿ ಉಲ್ಲೇಖಿಸಿದೆ. ಮೋದಿಯ ದ್ವೇಷದ ಭಾಷಣ ರಾಜಕೀಯ ವೀಕ್ಷಕರಲ್ಲಿ ಕುತೂಹಲ ಮೂಡಿಸಿದೆ. ಏಕೆಂದರೆ ಮೋದಿ ಪ್ರಧಾನಿಯಾದಾಗಿನಿಂದ ಇಲ್ಲಿಯವರೆಗೆ ಹಿಂದೂ ಮತಗಳನ್ನು ಸೆಳೆಯಲು ತಮ್ಮ ಚುನಾವಣಾ ಭಾಷಣಗಳಲ್ಲಿ ನೇರವಾಗಿ ಮುಸ್ಲಿಂ ಸಮುದಾಯವನ್ನು ಉಲ್ಲೇಖಿಸಿರಲಿಲ್ಲ. ಆದರೆ ಈ ಬಾರಿ ನೇರವಾಗಿ ಮುಸ್ಲಿಮರ ವಿರುದ್ಧ ದ್ವೇಷ ಭಾಷಣವನ್ನು ಮಾಡಿದ್ದಾರೆ. ಭಾರತದ ಚುನಾವಣಾ ಆಯೋಗವು ಈ ವಿಷಯದಲ್ಲಿ ಮೌನವಾಗಿದೆ.

ಇದನ್ನು ಓದಿ: ಮುಸ್ಲಿಂ ಸಮುದಾಯದ ಬಗ್ಗೆ ಪ್ರಧಾನಿ ದ್ವೇಷ ಭಾಷಣ: ಮೋದಿ ವಿರುದ್ಧ ರಾಹುಲ್‌, ಖರ್ಗೆ ಸೇರಿ ಪ್ರತಿಪಕ್ಷಗಳ ನಾಯಕರಿಂದ ವಾಗ್ಧಾಳಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...