Homeಫ್ಯಾಕ್ಟ್‌ಚೆಕ್FACT CHECK : ಕರ್ನಾಟಕ ಸರ್ಕಾರ ಗ್ಯಾರಂಟಿ ಯೋಜನೆಗಳಿಗೆ ಕೇಂದ್ರದ ಅನುದಾನ ಕೇಳುತ್ತಿದೆ ಎಂಬುವುದು ಸುಳ್ಳು

FACT CHECK : ಕರ್ನಾಟಕ ಸರ್ಕಾರ ಗ್ಯಾರಂಟಿ ಯೋಜನೆಗಳಿಗೆ ಕೇಂದ್ರದ ಅನುದಾನ ಕೇಳುತ್ತಿದೆ ಎಂಬುವುದು ಸುಳ್ಳು

- Advertisement -
- Advertisement -

“ಕರ್ನಾಟಕದಲ್ಲಿ ಏನಾಗ್ತಿದೆಯೋ, ಅದು ಪಾಕಿಸ್ತಾನದ ಟೆಕ್ನಿಕ್. ಪಾಕಿಸ್ತಾನ ತನ್ನ ಹಣೆಗೆ ಗನ್ ಇಟ್ಟುಕೊಳ್ಳುತ್ತದೆ . ಆಮೇಲೆ ಪಾಕಿಸ್ತಾನ ಸರ್ಕಾರ ಅಮೆರಿಕದ ಕಡೆ ನೋಡಿ ಹೇಳುತ್ತದೆ, ‘ನೀವು ನಮಗೆ ದುಡ್ಡು ಕೊಟ್ಟಿಲ್ಲಾ ಅಂದ್ರೆ ನಾವು ನಮ್ಮನ್ನೇ ಶೂಟ್ ಮಾಡಿಕೊಳ್ಳುತ್ತೇವೆ’ ಎಂದು. ಪಾಕಿಸ್ತಾನ ತಾನೇ ಸತ್ತು ಹೋಗುವೆ ಅನ್ನುತ್ತೆ. ಅಮೆರಿಕ ಹೆದರಿ ದುಡ್ಡು ಕೊಡುತ್ತೆ. ಕರ್ನಾಟಕದ ಕಾಂಗ್ರೆಸ್ ಸರ್ಕಾರ ಮಾಡ್ತಿರೋದು ಅದೇ. ಭರವಸೆ ಕೊಟ್ಟಿರುವುದು ನೀವು, ಗ್ಯಾರಂಟಿ ಕೊಡ್ತಿರುವುದು ನೀವು. ಈಗ ಕೇಂದ್ರ ಸರ್ಕಾರ ಅದಕ್ಕೆ ಯಾಕೆ ಸಹಾಯ ಮಾಡಬೇಕು? ನೀವು ಸಂಪನ್ಮೂಲ ಕ್ರೂಡೀಕರಿಸಿ, ನೀವು ಮಾಡಿ ತೋರಿಸಿ. ಈ ಗ್ಯಾರಂಟಿಗಳಿಂದ ರಾಜ್ಯ ನಡೆಸೋಕಾಗುತ್ತದೆ ಅಂತ ತೋರಿಸಿ ನೋಡೋಣ. ನೀವು ಬಿಟ್ಟಿ ಭಾಗ್ಯಗಳೆಲ್ಲಾ ಕೊಟ್ಟು, ಈಗ ನಿಮ್ಮ ಹಣೆಗೆ ಗನ್ ಇಟ್ಟು ನಮ್ಮನ್ನು ಹೆದರಿಸ್ತೀರಾ? ಪಾಕಿಸ್ತಾನ ಅಮೆರಿಕಕ್ಕೆ ಮಾಡಿದಂತೆಯೇ, ಕರ್ನಾಟಕ ಕೇಂದ್ರ ಸರ್ಕಾರಕ್ಕೆ ಮಾಡ್ತಿದೆ” ಎಂದು ತಮಿಳುನಾಡು ರಾಜ್ಯ ಬಿಜೆಪಿ ಘಟಕದ ಅಧ್ಯಕ್ಷ ಅಣ್ಣಾಮಲೈ ನೀಡಿರುವ ಹೇಳಿಕೆಯೊಂದು ವೈರಲ್ ಆಗಿದೆ.

ಸುದ್ದಿ ಸಂಸ್ಥೆ ಎಎನ್‌ಐ ಸಂಪಾದಕಿ ಸ್ಮಿತಾ ಪ್ರಕಾಶ್ ಅವರೊಂದಿಗಿನ ವಿಶೇಷ ಸಂದರ್ಶನದಲ್ಲಿ ಅಣ್ಣಾಮಲೈ ಈ ಮಾತುಗಳನ್ನು ಹೇಳಿದ್ದಾರೆ. ಸಂದರ್ಶನ ಯೂಟ್ಯೂಬ್ ಲಿಂಕ್ ಕೆಳಗಿದೆ.

ಯೂಟ್ಯೂಬ್ ಲಿಂಕ್ ಇಲ್ಲಿದೆ 

ಫ್ಯಾಕ್ಟ್‌ಚೆಕ್‌ : ಅಣ್ಣಾಮಲೈ ಹೇಳಿದಂತೆ ಕರ್ನಾಟಕದ ಕಾಂಗ್ರೆಸ್ ಸರ್ಕಾರ ತನ್ನ ಗ್ಯಾರಂಟಿ ಯೋಜನೆಗಳಿಗೆ ಕೇಂದ್ರದಿಂದ ಹಣ ಕೇಳುತ್ತಿದೆಯಾ? ಹಣ ಕೊಡದಿದ್ದರೆ ಶೂಟ್ ಮಾಡಿಕೊಳ್ಳುತ್ತೀನಿ ಎಂಬ ರೀತಿಯಲ್ಲಿ ಪಾಕಿಸ್ತಾನದಂತೆ ಕೇಂದ್ರವನ್ನು ಹೆದರಿಸುತ್ತಿದೆಯಾ? ಎಂಬುವುದರ ಕುರಿತು ನಾನುಗೌರಿ.ಕಾಂ ಸತ್ಯಾಸತ್ಯತೆಯನ್ನು ಪರಿಶೀಲನೆ ನಡೆಸಿದೆ.

ಬೆಂಗಳೂರಿನಲ್ಲಿ ಮಾರ್ಚ್ 24ರಂದು ಆಯೋಜಿಸಿದ್ದ ಕಾರ್ಯಕ್ರವೊಂದರಲ್ಲಿ ಮಾತನಾಡಿದ್ದ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ರಾಜ್ಯ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳನ್ನು ‘ಬಿಟ್ಟಿ ಭಾಗ್ಯ’ ಎಂದಿದ್ದರು. ಆ ಬಿಟ್ಟಿ ಭಾಗ್ಯಗಳಿಗೆ ಕೇಂದ್ರ ಹಣ ನೀಡಲ್ಲ ಎಂದು ಹೇಳಿದ್ದರು. ಅದೇ ರೀತಿಯ ಹೇಳಿಕೆಯನ್ನು ಅಣ್ಣಾಮಲೈ ನೀಡಿದ್ದಾರೆ.

ನಿರ್ಮಲಾ ಸೀತಾರಾಮನ್ ಹೇಳಿಕೆಗೆ ಸಂಬಂಧಪಟ್ಟಂತೆ ಮಾರ್ಚ್ 25ರಂದು ಸುದ್ದಿಗೋಷ್ಠಿ ನಡೆಸಿ ತಿರುಗೇಟು ನೀಡಿದ್ದ ಸಚಿವ ಕೃಷ್ಣಬೈರೇಗೌಡ ಅವರು, ಕೇಂದ್ರದಿಂದ ರಾಜ್ಯಕ್ಕೆ ಬರಬೇಕಿರುವ ಬಾಕಿ ಹಣ ಎಷ್ಟು? ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳಿಗೆ ಕೇಂದ್ರ ಹಣ ನೀಡುತ್ತಿದೆಯಾ? ಇತ್ಯಾದಿ ಮಾಹಿತಿಗಳನ್ನು ಅಂಕಿ ಅಂಶ ಸಹಿತ ವಿವರಿಸಿದ್ದರು.

ಸಚಿವರು ನೀಡಿರುವ ಅಂಕಿ ಅಂಶಗಳ ಪ್ರಕಾರ, ರಾಜ್ಯಕ್ಕೆ ಕೇಂದ್ರದಿಂದ 2020-21ನೇ ಸಾಲಿನ ತೆರಿಗೆ ಬಾಕಿ ರೂ. 5,495 ಕೋಟಿ ಮತ್ತು 2021-26ನೇ ಸಾಲಿನಲ್ಲಿ ಹಣಕಾಸು ಆಯೋಗ ಶಿಫಾರಸ್ಸು ಮಾಡಿರುವ ರೂ.6,000 ಕೋಟಿ ಸೇರಿ ಒಟ್ಟು ರೂ.11,495 ಕೋಟಿ ಬರಬೇಕಿದೆ.

ಐದು ಗ್ಯಾರಂಟಿ ಯೋಜನೆಗಳಿಗೆ 2024-25 ಸಾಲಿನ ಬಜೆಟ್‌ನಲ್ಲಿ ರಾಜ್ಯ ಸರ್ಕಾರ 52 ಸಾವಿರ ಕೋಟಿ ರೂ. ಮೀಸಲಿಟ್ಟಿದೆ. ಈ ಪೈಕಿ ಗೃಹಜ್ಯೋತಿ ಯೋಜನೆಗೆ 9,657 ಕೋಟಿ ರೂ., ಅನ್ನಭಾಗ್ಯ ಯೋಜನೆಗೆ 8,079 ಕೋಟಿ ರೂ., ಶಕ್ತಿ ಯೋಜನೆಗೆ 5,015 ಕೋಟಿ ರೂ., ಯುವನಿಧಿ ಯೋಜನೆಗೆ 650 ಕೋಟಿ ರೂ., ಮತ್ತು ಗೃಹಲಕ್ಷ್ಮಿ ಯೋಜನೆಗೆ 28,608 ಕೋಟಿ ರೂ. ನೀಡಿದೆ. ಹಾಗಾಗಿ, ಇಲ್ಲಿ ಗ್ಯಾರಂಟಿ ಯೋಜನೆಗಳಿಗೆ ಕೇಂದ್ರದ ಅನುದಾನದ ಅವಶ್ಯಕತೆ ಇಲ್ಲ.

ಅಣ್ಣಾಮಲೈ ಕೂಡ ನಿರ್ಮಲಾ ಸೀತಾರಾಮನ್ ರೀತಿಯೇ ಆರೋಪ ಮಾಡಿರುವುದರಿಂದ ಕೃಷ್ಣ ಬೈರೇಗೌಡರು ಬಿಡುಗಡೆ ಮಾಡಿರುವ ಅಂಕಿ ಅಂಶವನ್ನು ನಾವು ಇಲ್ಲಿಯೂ ಉಲ್ಲೇಖಿಸಬಹುದು. ಕೃಷ್ಣ ಬೈರೇಗೌಡರ ಸುದ್ದಿಗೋಷ್ಠಿಗೆ ಸಂಬಂಧಪಟ್ಟಂತೆ ನಾನುಗೌರಿ.ಕಾಂ ಮಾರ್ಚ್ 26, 2024 ರಂದು ಫ್ಯಾಕ್ಟ್‌ ಸುದ್ದಿಯನ್ನು ಪ್ರಕಟಿಸಿದೆ.

 ಸುದ್ದಿ ಲಿಂಕ್ ಇಲ್ಲಿದೆ

ಏಪ್ರಿಲ್ 3, 2024ರಂದು “ಲೋಕಸಭೆ ಚುನಾವಣೆ ಬಳಿಕ ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳು ಸ್ಥಗಿತಗೊಳ್ಳಲಿದೆಯಾ?’ ಎಂಬ ಶೀರ್ಷಿಕೆಯಲ್ಲಿ ನಾನುಗೌರಿ.ಕಾಂ ಮತ್ತೊಂದು ಫ್ಯಾಕ್ಟ್‌ಚೆಕ್ ಸುದ್ದಿಯನ್ನು ಪ್ರಕಟಿಸಿದೆ. ಈ ಸುದ್ದಿಯಲ್ಲೂ ರಾಜ್ಯ ಸರ್ಕಾರ 2022-23ನೇ ಹಣಕಾಸು ವರ್ಷದಲ್ಲಿ ಗ್ಯಾರಂಟಿ ಯೋಜನೆಗಳಿಗೆ ಎಷ್ಟು ಹಣ ಖರ್ಚು ಮಾಡಿತ್ತು. 2023-24ನೇ ಹಣಕಾಸು ವರ್ಷದ ಬಜೆಟ್‌ನಲ್ಲಿ ಗ್ಯಾರಂಟಿ ಯೋಜನೆಗಳಿಗೆ ಎಷ್ಟು ಹಣ ಮೀಸಲಿಟ್ಟಿದೆ ಎಂಬುವುದರ ಕುರಿತು ವಿವರವಾಗಿ ಬರೆದಿದೆ.

ಸುದ್ದಿಯ ಲಿಂಕ್ ಇಲ್ಲಿದೆ

ಗಮನಾರ್ಹ ವಿಷಯವೆಂದರೆ, ಸಚಿವ ಕೃಷ್ಣ ಬೈರೇಗೌಡರು ದಾಖಲೆ ಸಹಿತ ವಿವರಿಸಿದಂತೆ ಮತ್ತು ರಾಜ್ಯ ಸರ್ಕಾರ 2023-24ನೇ ಸಾಲಿನ ಬಜೆಟ್‌ನಲ್ಲಿ ಹಣ ಮೀಸಲಿಟ್ಟಂತೆ, ರಾಜ್ಯ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳಿಗೆ ಕೇಂದ್ರದ ಅನುದಾನ ಬಳಸುತ್ತಿಲ್ಲ. ರಾಜ್ಯ ಕೇಳುತ್ತಿರುವುದು ಜಿಎಸ್‌ಟಿ ಪಾಲಿನ ಹಣ, ಹಣಕಾಸು ಆಯೋಗ ಶಿಫಾರಸು ಮಾಡಿದ ಬಾಕಿ ಹಣ ಮತ್ತು ರಾಜ್ಯಕ್ಕೆ ಎನ್‌ಡಿಆರ್‌ಎಫ್‌ ನಿದಿಯಡಿ ಬರಬೇಕಿರುವ ಬರ ಪರಿಹಾರದ ಹಣವಾಗಿದೆ.

2019-20ರಲ್ಲಿ ರಾಜ್ಯಕ್ಕೆ ಕೇಂದ್ರದಿಂದ ರೂ. 36,675 ಕೋಟಿ ತೆರಿಗೆ ಪಾಲು ಬಂದಿತ್ತು. 2020-21ಕ್ಕೆ ರೂ.31,180 ಕೋಟಿಗೆ ಕುಸಿದಿದೆ. ಹೀಗಾಗಿ, ರಾಜ್ಯಕ್ಕೆ ಆಗಿರುವ ನಷ್ಟ ರೂ. 5,495 ಕೋಟಿ ಹಣವನ್ನು ಕೇಂದ್ರ ಸರ್ಕಾರ ನೀಡಬೇಕು ಎಂದು ಹಣಕಾಸು ಆಯೋಗ ಶಿಫಾರಸು ಮಾಡಿದೆ. ಆದರೆ, ಈ ಹಣ ಈವರೆಗೆ ರಾಜ್ಯಕ್ಕೆ ಬಂದಿಲ್ಲ. ಇನ್ನು ಜಲಮೂಲಗಳ ಪುನರುಜ್ಜೀವನಕ್ಕೆ 3 ಸಾವಿರ ಕೋಟಿ ರೂ. ಮತ್ತು ಪೆರಿಫೆರಲ್ ರಿಂಗ್ ರಸ್ತೆಗೆ 3 ಸಾವಿರ ಕೋಟಿ ರೂ. ಸೇರಿ ಬೆಂಗಳೂರಿಗೆ ಒಟ್ಟು ರೂ.6,000 ಕೋಟಿ ಶಿಫಾರಸು ಮಾಡಲಾಗಿದೆ. ಹಳೆ ಬಾಕಿ ಸೇರಿ ಒಟ್ಟಾರೆ, ರೂ.11,495 ಕೋಟಿ ಹಣ ರಾಜ್ಯಕ್ಕೆ ಬರಬೇಕಿದೆ

ಕೇಂದ್ರದಿಂದ ರಾಜ್ಯಕ್ಕೆ ಬರ ಬೇಕಿದ್ದ ಬರ ಪರಿಹಾರದ 35,162 ಕೋಟಿ ಬಿಡುಗಡೆ ಮಾಡುವಂತೆ ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡಲು ಕೋರಿ ಕರ್ನಾಟಕ ಸರ್ಕಾರ ಸುಪ್ರೀಂ ಕೋರ್ಟ್ ಮೊರೆ ಹೋಗಿತ್ತು. ರಾಜ್ಯದ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್‌, ಈ ವಿವಾದವನ್ನು ಸೌಹಾರ್ದಯುತವಾಗಿ ಬಗೆಹರಿಸುವಂತೆ ಏಪ್ರಿಲ್ 22ರಂದು ಕೇಂದ್ರ ಸರ್ಕಾರಕ್ಕೆ ಸೂಚಿಸಿದೆ. ಚುನಾವಣಾ ಆಯೋಗವು ಸಮಸ್ಯೆಯನ್ನು ನಿಭಾಯಿಸಲು ಕೇಂದ್ರಕ್ಕೆ ಅನುಮತಿ ನೀಡಿದೆ ಎಂದು ಕೇಂದ್ರ ಸರ್ಕಾರ ಸುಪ್ರೀಂಕೋರ್ಟ್‌ ಗಮನಕ್ಕೆ ತಂದಿದೆ.

ಸುದ್ದಿ ಲಿಂಕ್ ಇಲ್ಲಿದೆ

ಹಾಗಾಗಿ, ನಿರ್ಮಲಾ ಸೀತಾರಾಮನ್ ಮತ್ತು ಅಣ್ಣಾಮಲೈ ಹೇಳಿದಂತೆ ಕರ್ನಾಟಕದ ಕಾಂಗ್ರೆಸ್ ಸರ್ಕಾರ ತನ್ನ ಗ್ಯಾರಂಟಿ ಯೋಜನೆಗಳಿಗೆ ಕೇಂದ್ರದಿಂದ ಹಣ ಕೇಳುತ್ತಿದೆ ಎಂಬುವುದು ಸುಳ್ಳು.

ಇದನ್ನೂ ಓದಿ : FACT CHECK : ‘ದೇಶದ ಸಂಪತ್ತನ್ನು ಮುಸಲ್ಮಾನರಿಗೆ ಹಂಚುತ್ತೇನೆ’ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ರಾ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳದ ಸೋಲಿನ ಬಳಿಕ ‘ಇಂಡಿಯಾದ ಆಸರೆ’ ಬಯಸಿದ ಮಮತಾ

2026ರ ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ಸೋಲಿನ ನಂತರ ಮಮತಾ ಬ್ಯಾನರ್ಜಿ ಅವರು ಇದ್ದಕ್ಕಿದ್ದಂತೆ ‘ಇಂಡಿಯಾ’ (INDIA) ಒಕ್ಕೂಟ ಮತ್ತು ರಾಷ್ಟ್ರೀಯ ಮಟ್ಟದ ವಿರೋಧ ಪಕ್ಷಗಳ ಒಗ್ಗಟ್ಟಿಗೆ ಇಷ್ಟೊಂದು ಪ್ರಾಮುಖ್ಯತೆ ನೀಡುತ್ತಿರುವುದು ಏಕೆ? ದೀರ್ಘಕಾಲದವರೆಗೆ...

ಪಶ್ಚಿಮ ಬಂಗಾಳ| ಮತದಾರರ ಪಟ್ಟಿಯಿಂದ ಡಿಲೀಟ್‌ ಆದವರಿಗೆ ಪಡಿತರ ಪ್ರಯೋಜನಗಳಿಲ್ಲ

ಚುನಾವಣಾ ಆಯೋಗದ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಯಿಂದಾಗಿ ಪಶ್ಚಿಮ ಬಂಗಾಳದ ಚುನಾವಣಾ ಪ್ರಕ್ರಿಯೆಯಿಂದ ಹೊರಗುಳಿದವರಿಗೆ ಈಗ ಎರಡು ಹೊಡೆತ ಎದುರಾಗಿದೆ. ರಾಜ್ಯ ಸರ್ಕಾರವು ಈಗ ಅವರ ಪಡಿತರ ಚೀಟಿಗಳನ್ನು ಸಹ ನಿಷ್ಕ್ರಿಯಗೊಳಿಸಲು...

ಇಂಡಿಯಾ ಮೈತ್ರಿಕೂಟದ ಸಭೆ: ಎಸ್‌ಐಆರ್, ಬೆಲೆ ಏರಿಕೆ, ನಿರುದ್ಯೋಗದ ಕುರಿತು ಖರ್ಗೆ ಕಳವಳ; ಒಗ್ಗಟ್ಟಿನ ಹೋರಾಟಕ್ಕೆ ಕರೆ

ರಾಜಕೀಯ, ಆರ್ಥಿಕ, ಸಾಮಾಜಿಕ ಮತ್ತು ವಿದೇಶಾಂಗ ನೀತಿ ರಂಗಗಳಲ್ಲಿ ಮೋದಿ ಸರ್ಕಾರದ ವೈಫಲ್ಯಗಳನ್ನು ಎದುರಿಸಲು ತನ್ನ ಒಗ್ಗಟ್ಟನ್ನು ಬಲಪಡಿಸಿಕೊಳ್ಳುವಂತೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸೋಮವಾರ (ಜೂ.8) ಇಂಡಿಯಾ ಮೈತ್ರಿಕೂಟಕ್ಕೆ ಕರೆ...

ಟೆಹ್ರಾನ್ ಮೇಲಿನ ದಾಳಿಗೆ ಪ್ರತೀಕಾರ: ಇಸ್ರೇಲ್ ಮೇಲೆ ಕ್ಷಿಪಣಿ ಹಾರಿಸಿದ ಇರಾನ್

ಟೆಹ್ರಾನ್, ತಬ್ರಿಜ್ ಮತ್ತು ಇಸ್ಫಹಾನ್‌ ಮೇಲಿನ ದಾಲಿಗಳಿಗೆ ಪ್ರತೀಕಾರವಾಗಿ, ಇರಾನ್ ಸೇನೆಯು ಇಸ್ರೇಲ್‌ ಮೇಲೆ ಎರಡನೇ ತರಂಗದ ಕ್ಷಿಪಣಿಗಳನ್ನು ಹಾರಿಸಿದೆ. ದೇಶಾದ್ಯಂತ ಸೈರನ್‌ಗಳು ಮೊಳಗುತ್ತಿವೆ ಎಂದು ಇಸ್ರೇಲ್ ಮಿಲಿಟರಿ ಹೇಳಿದೆ ಎಂದು ಅಂತರಾಷ್ಟ್ರೀಯ...

ಭಾರತದಲ್ಲಿ ಬೆಂಕಿ ದುರಂತ ‘ದಿನವೊಂದಕ್ಕೆ ಬಲಿಯಾಗುತ್ತಿವೆ 16 ಜೀವಗಳು’ NCRB ವರದಿ

ಇತ್ತೀಚೆಗೆ ದೆಹಲಿಯ ಮಾಳವೀಯ ನಗರದ ಹೋಟೆಲ್‌ ಒಂದರಲ್ಲಿ ನಡೆದ ಭೀಕರ ಬೆಂಕಿ ದುರಂತ (ಇದರಲ್ಲಿ 22 ಜನರು ಸಜೀವ ದಹನವಾಗಿದ್ದರು) ಇಡೀ ದೇಶವನ್ನೇ ನಡುಗಿಸಿದೆ. ಈ ದುರಂತದ ಬೆನ್ನಲ್ಲೇ ಕರ್ನಾಟಕದಲ್ಲೂ ವಾಣಿಜ್ಯ ಮತ್ತು...

ಈದ್ ಹಬ್ಬದ ವೇಳೆ ಮುಸ್ಲೀಮರನ್ನು ಗುರಿಯಾಗಿಸಿ 46 ದ್ವೇಷ ಅಪರಾಧಗಳು, ಮೂವರ ಹತ್ಯೆ: APCR ಆತಂಕಕಾರಿ ವರದಿ

ಇತ್ತೀಚಿನ ಬಕ್ರೀದ್ (ಈದ್ ಉಲ್-ಅಧಾ) ಹಬ್ಬದ ಆಚರಣೆಯ ಸಂದರ್ಭದಲ್ಲಿ ದೇಶದ ವಿವಿಧೆಡೆ ಅಲ್ಪಸಂಖ್ಯಾತರನ್ನು ಗುರಿಯಾಗಿಸಿಕೊಂಡು ನಡೆದ ಕೋಮು ಕಿರುಕುಳ, ದ್ವೇಷ ಭಾಷಣ ಹಾಗೂ ಹಿಂಸಾಚಾರದ ಘಟನೆಗಳ ಕುರಿತು 'ನಾಗರಿಕ ಹಕ್ಕುಗಳ ರಕ್ಷಣಾ ಸಂಘ'...

ಗ್ರೇಟ್ ನಿಕೋಬಾರ್ : ಕಾರ್ಪೊರೇಟ್ ಹಿತಾಸಕ್ತಿಗೆ ಬಲಿಯಾಗುತ್ತಿರುವ ಪರಿಸರ, ಆದಿವಾಸಿಗಳ ಅಸ್ತಿತ್ವ

ಬಂಗಾಳಕೊಲ್ಲಿಯಲ್ಲಿರುವ ಭಾರತದ ದಕ್ಷಿಣ ತುದಿಯ ದ್ವೀಪದ ಸಮಗ್ರ ಅಭಿವೃದ್ಧಿಯ ಹೆಸರಿನಲ್ಲಿ ಕೇಂದ್ರ ಸರ್ಕಾರ ಬರೋಬ್ಬರಿ 72 ಸಾವಿರದಿಂದ 81 ಸಾವಿರ ಕೋಟಿ ರೂಪಾಯಿ ವೆಚ್ಚದ ’ಗ್ರೇಟ್ ನಿಕೋಬಾರ್ ದ್ವೀಪ ಅಭಿವೃದ್ಧಿ ಯೋಜನೆ’ಯನ್ನು ರೂಪಿಸಿದೆ.ಈ...

ಅಸ್ಸಾಂನ ನಾಲ್ವರು ಮುಸ್ಲಿಂ ಮಹಿಳೆಯರ ಗಡೀಪಾರು ಪ್ರಕ್ರಿಯೆಗೆ ಸುಪ್ರೀಂ ತಡೆ: ಕೇಂದ್ರ, ರಾಜ್ಯ ಸರ್ಕಾರಗಳಿಗೆ ನೋಟಿಸ್‌

ಅಸ್ಸಾಂನಲ್ಲಿ 'ವಿದೇಶಿಯರು' ಎಂದು ಘೋಷಿತರಾಗಿ ಗಡೀಪಾರು ಭೀತಿ ಎದುರಿಸುತ್ತಿದ್ದ ನಾಲ್ವರು ಮುಸ್ಲಿಂ ಮಹಿಳೆಯರ ವಿಚಾರದಲ್ಲಿ ಭಾರತದ ಸುಪ್ರೀಂ ಕೋರ್ಟ್ ಮಹತ್ವದ ಮಧ್ಯಪ್ರವೇಶ ಮಾಡಿದೆ. ಈ ಮಹಿಳೆಯರನ್ನು ದೇಶದಿಂದ ಹೊರಹಾಕುವ (ಗಡೀಪಾರು ಮಾಡುವ) ಪ್ರಕ್ರಿಯೆಗೆ...

ದೆಹಲಿಗೆ ಬಂದಿಳಿದ ಕಾಕ್ರೋಚ್ ಪಾರ್ಟಿ ಸಂಸ್ಥಾಪಕ ಅಭಿಜೀತ್ ದೀಪ್ಕೆ : ಜಂತರ್‌ ಮಂತರ್‌ನಲ್ಲಿ ಪ್ರತಿಭಟಿಸಲು ಪೊಲೀಸರಿಂದ ಅನುಮತಿ

ಶನಿವಾರ (ಜೂ.6) ಬೆಳಿಗ್ಗೆ ದೆಹಲಿಗೆ ಆಗಮಿಸಿದ ಕಾಕ್ರೋಚ್ ಜನತಾ ಪಾರ್ಟಿಯ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ, ಪ್ರತಿಭಟನೆಗೆ ದೆಹಲಿ ಪೊಲೀಸರು ಅನುಮತಿ ನೀಡಿದ್ದಾರೆ ಎಂದು ತಿಳಿಸಿದ್ದು, ಯೋಜಿತ ಆಂದೋಲನಕ್ಕಾಗಿ ನೇರವಾಗಿ ಜಂತರ್ ಮಂತರ್‌ನಲ್ಲಿ...

ಜಾಗತಿಕವಾಗಿ ಮೂರು ವರ್ಷಗಳಲ್ಲಿ 600 ಪರಿಸರ ರಕ್ಷಕರ ಹತ್ಯೆ: ವಿಶ್ವಸಂಸ್ಥೆ ತೀವ್ರ ಕಳವಳ: ಜಾಗತಿಕ ತಾಪಮಾನಕ್ಕೆ ಸಾಕ್ಷಿಯಾಗುತ್ತಿರುವ ಭಾರತ

ಜೂನ್ 5 ವಿಶ್ವ ಪರಿಸರ ದಿನ. ಜಗತ್ತಿನಾದ್ಯಂತ ಗಿಡ ನೆಡುವ, ಹಸಿರು ಭಾಷಣ ಬಿಗಿಯುವ ಮತ್ತು ಪರಿಸರ ಕಾಳಜಿಯ ಸಡಗರದ ಆಚರಣೆಗಳು ಎಲ್ಲೆಡೆ ವಿಭಿನ್ನ ರೀತಿಗಳಲ್ಲಿ ವಿಜೃಂಭಿಸುತ್ತಿವೆ. ಆದರೆ, ಇದೇ ಹೊತ್ತಿನಲ್ಲಿ ವಿಶ್ವಸಂಸ್ಥೆಯು...