Homeಮುಖಪುಟ'ನಾನು ನನ್ನ ಸಿದ್ಧಾಂತಗಳನ್ನು ಬಿಟ್ಟಿಲ್ಲ..'; ಜಾತಿ ಗಣತಿಗೆ ಅಜಿತ್ ಪವಾರ್ ಬೆಂಬಲ

‘ನಾನು ನನ್ನ ಸಿದ್ಧಾಂತಗಳನ್ನು ಬಿಟ್ಟಿಲ್ಲ..’; ಜಾತಿ ಗಣತಿಗೆ ಅಜಿತ್ ಪವಾರ್ ಬೆಂಬಲ

- Advertisement -
- Advertisement -

ಅಜಿತ್ ಪವಾರ್ ನೇತೃತ್ವದ ನ್ಯಾಶನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ತನ್ನ ಪ್ರಣಾಳಿಕೆಯಲ್ಲಿ ಜಾತಿ ಆಧಾರಿತ ಜನಗಣತಿಯ ಬೇಡಿಕೆಯನ್ನು ಬೆಂಬಲಿಸುತ್ತದೆ ಎಂದು ಹೇಳಿದೆ.

“ನಮ್ಮ ಪಕ್ಷವು ಜಾತಿ, ಮತ ಮತ್ತು ಧರ್ಮವನ್ನು ಲೆಕ್ಕಿಸದೆ ಮನುಷ್ಯನಾಗಿ ಬದುಕುವ ಹಕ್ಕಿನಲ್ಲಿ ನಂಬಿಕೆ ಹೊಂದಿದೆ. ಅದು ಸಮಾನತೆ ಮತ್ತು ಏಕತೆಯನ್ನು ನಂಬುತ್ತದೆ. ಸಮಾಜ ಸುಧಾರಕ ಸಾನೆ ಗುರೂಜಿ ಅವರ ಉಲ್ಲೇಖದಲ್ಲಿ ಎನ್‌ಸಿಪಿ ನಂಬಿಕೆ ಹೊಂದಿದೆ, ‘ಜಗತ್ತಿಗೆ ಪ್ರೀತಿಯನ್ನು ಅರ್ಪಿಸುವುದೇ ನಿಜವಾದ ಧರ್ಮ. ‘ ಸಮಾಜದ ವಂಚಿತ ಮತ್ತು ಹಿಂದುಳಿದ ವರ್ಗಗಳನ್ನು ಮುಖ್ಯವಾಹಿನಿಗೆ ತರಬೇಕು ಎಂದು ನಾವು ಜಾತಿ ಆಧಾರಿತ ಜನಗಣತಿಗೆ ಒತ್ತಾಯಿಸುತ್ತೇವೆ” ಎಂದು ಅಜಿತ್ ಹೇಳಿದ್ದಾರೆ.

ತನ್ನ ಚಿಕ್ಕಪ್ಪ ಮತ್ತು ಎನ್‌ಸಿಪಿ ಮುಖ್ಯಸ್ಥ ಶರದ್ ಪವಾರ್ ವಿರುದ್ಧ ದಂಗೆಯನ್ನು ಮುನ್ನಡೆಸಿದ್ದ ಮತ್ತು ಪಕ್ಷದಲ್ಲಿ ವಿಭಜನೆಯನ್ನು ಉಂಟುಮಾಡಿದ ಅಜಿತ್ ಪವಾರ್, ಬಿಜೆಪಿ ಮತ್ತು ಏಕನಾಥ್ ಶಿಂಧೆ ನೇತೃತ್ವದ ಶಿವಸೇನೆಯೊಂದಿಗೆ ಕೈ ಜೋಡಿಸಿದರು. ಬಿಜೆಪಿ ಜಾತಿಗಣತಿಯನ್ನು ವಿರೋಧಿಸಿದ್ದು, ಅಜಿತ್ ಮಾತ್ರ “ನಾನು ನಮ್ಮ ಸಿದ್ಧಾಂತಗಳನ್ನು ಬಿಟ್ಟಿಲ್ಲ” ಎಂದು ಹೇಳಿದ್ದಾರೆ.

“ನಾನು ಮತ್ತೊಮ್ಮೆ ಹೇಳಲು ಬಯಸುತ್ತೇನೆ, ನಾನು ಮಹಾಯುತಿಯ (ಬಿಜೆಪಿ, ಸೇನಾ ಮತ್ತು ಎನ್‌ಸಿಪಿ ಮೈತ್ರಿ) ಭಾಗವಾಗಿದ್ದರೂ, ನಾನು ನನ್ನ ಸಿದ್ಧಾಂತಗಳನ್ನು ಬಿಟ್ಟಿಲ್ಲ. ನಾವು ಅದಕ್ಕೆ ಬದ್ಧರಾಗಿದ್ದೇವೆ ಮತ್ತು ಅದರಂತೆ ಕೆಲಸ ಮಾಡುತ್ತಿದ್ದೇವೆ” ಎಂದು ಮಹಾರಾಷ್ಟ್ರ ಉಪಮುಖ್ಯಮಂತ್ರಿ ಹೇಳಿದ್ದಾರೆ.

ತನ್ನ ಮಿತ್ರ ಪಕ್ಷವಾದ ಬಿಜೆಪಿಗೆ ಹೆಚ್ಚು ಹೊಂದಿಕೆಯಾಗುವ ಭರವಸೆಯಲ್ಲಿ, ಎನ್‌ಸಿಪಿ “ಸಬ್ಕಾ ಸಾಥ್, ಸಬ್ಕಾ ವಿಕಾಸ್, ಸಬ್ಕಾ ವಿಶ್ವಾಸ್” ನಲ್ಲಿ ನಂಬಿಕೆ ಇದೆ ಎಂದು ಹೇಳಿದೆ.

ಮಾಜಿ ಕೇಂದ್ರ ಗೃಹ ಸಚಿವ ಹಾಗೂ ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ದಿವಂಗತ ಯಶವಂತರಾವ್ ಚವ್ಹಾಣ್ ಅವರಿಗೆ ಭಾರತ ರತ್ನ ನೀಡುವಂತೆ ಒತ್ತಾಯಿಸುವುದಾಗಿ ಎನ್‌ಸಿಪಿ ಪ್ರಣಾಳಿಕೆ ಹೇಳುತ್ತದೆ. ಮರಾಠಿಗೆ ಶಾಸ್ತ್ರೀಯ ಭಾಷೆಯ ಟ್ಯಾಗ್‌ಗಾಗಿ ಎನ್‌ಸಿಪಿ ಒತ್ತಾಯಿಸುತ್ತದೆ ಎಂದು ಪ್ರಣಾಳಿಕೆ ಹೇಳುತ್ತದೆ.

ಪಕ್ಷದ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದ ಅಜಿತ್ ಪವಾರ್, ಕಳೆದ 10 ವರ್ಷಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ದೇಶಕ್ಕೆ ನೀಡಿದ ಕೊಡುಗೆಯನ್ನು ಶ್ಲಾಘಿಸಿದರು. “ಮೋದಿ ಅವರ ನಾಯಕತ್ವವು ಚುನಾವಣೆಯಲ್ಲಿ ನಮ್ಮ ಗೆಲುವನ್ನು ಖಾತ್ರಿಪಡಿಸುತ್ತದೆ. ಅವರಿಗೆ ಸ್ಪರ್ಧಿಸಲು ವಿರೋಧ ಪಕ್ಷದವರು ಯಾರೂ ಇಲ್ಲ, ಅವರು ಎನ್‌ಡಿಎ ಮುಖ” ಎಂದರು.

“ಅಧಿಕಾರಕ್ಕೆ ಬಂದರೆ, ಜಾತಿಗಳು ಮತ್ತು ಉಪಜಾತಿಗಳು ಮತ್ತು ಅವರ ಸಾಮಾಜಿಕ-ಆರ್ಥಿಕ ಪರಿಸ್ಥಿತಿಗಳನ್ನು ಎಣಿಸಲು ರಾಷ್ಟ್ರವ್ಯಾಪಿ ಸಾಮಾಜಿಕ-ಆರ್ಥಿಕ ಮತ್ತು ಜಾತಿ ಗಣತಿಯನ್ನು ನಡೆಸುತ್ತದೆ” ಎಂದು ಕಾಂಗ್ರೆಸ್ ತನ್ನ ಪ್ರಣಾಳಿಕೆಯಲ್ಲಿ ಹೇಳಿದೆ. “ದತ್ತಾಂಶವನ್ನು ಆಧರಿಸಿ, ನಾವು ದೃಢೀಕರಿಸುವ ಕ್ರಮಕ್ಕಾಗಿ ಕಾರ್ಯಸೂಚಿಯನ್ನು ಬಲಪಡಿಸುತ್ತೇವೆ” ಎಂದು ಅದು ಹೇಳಿದೆ. ಪಕ್ಷದ ನಾಯಕ ರಾಹುಲ್ ಗಾಂಧಿ ಈ ವಿಚಾರದಲ್ಲಿ ಕಾಂಗ್ರೆಸ್ ನಿಲುವನ್ನು ಪದೇ ಪದೇ ಸ್ಪಷ್ಟಪಡಿಸುತ್ತಿದ್ದಾರೆ.

ಬಿಜೆಪಿಯು ಜಾತಿ ಗಣತಿಯನ್ನು ಸಂಪೂರ್ಣವಾಗಿ ವಿರೋಧಿಸದಿದ್ದರೂ, ಈ ವಿಷಯದಲ್ಲಿ ತಾನು “ರಾಜಕೀಯ” ಮಾಡುವುದಿಲ್ಲ ಎಂದು ಸಮರ್ಥಿಸಿಕೊಂಡಿದೆ.

ಕಳೆದ ವರ್ಷ ಛತ್ತೀಸ್‌ಗಢ ಚುನಾವಣೆಗೆ ಮುನ್ನ, ಗೃಹ ಸಚಿವ ಅಮಿತ್ ಶಾ ಅವರು, “ನಾವು ರಾಷ್ಟ್ರೀಯ ರಾಜಕೀಯ ಪಕ್ಷವಾಗಿದ್ದು, ಈ ವಿಷಯದಲ್ಲಿ ನಾವು ಮತಗಳ ರಾಜಕೀಯ ಮಾಡುವುದಿಲ್ಲ, ನಾವು ಎಲ್ಲರ ಸಲಹೆ ಪಡೆದು ಸೂಕ್ತ ನಿರ್ಧಾರ ತೆಗೆದುಕೊಳ್ಳುತ್ತೇವೆ ಮತ್ತು (ನಿಮಗೆ) ಹೇಳುತ್ತೇವೆ. ಆದರೆ, ಅದರ ಆಧಾರದ ಮೇಲೆ ಚುನಾವಣೆಗೆ ಸ್ಪರ್ಧಿಸುವುದು ಸರಿಯಲ್ಲ ಎಂದಿದ್ದರು.

ಕಳೆದ ವರ್ಷ ಅಕ್ಟೋಬರ್‌ನಲ್ಲಿ ಬಿಹಾರದ ಅಂದಿನ ಜೆಡಿಯು-ಆರ್‌ಜೆಡಿ-ಕಾಂಗ್ರೆಸ್ ಸರ್ಕಾರ ಜಾತಿ ಸಮೀಕ್ಷೆ ನಡೆಸಿದಾಗ ಪ್ರಧಾನಿ ಮೋದಿ ಅವರು ಪ್ರಮುಖ ವಿರೋಧ ಪಕ್ಷದ ವಿರುದ್ಧ ಮುಸುಕಿನ ಗುದ್ದಾಟ ನಡೆಸಿದ್ದರು. ದಶಕಗಳ ಕಾಲ ಅಧಿಕಾರದಲ್ಲಿದ್ದರೂ ಕಾಂಗ್ರೆಸ್‌ಗೆ ತ್ವರಿತ ಅಭಿವೃದ್ಧಿ ಸಾಧ್ಯವಾಗಲಿಲ್ಲ. ಏಕೆಂದರೆ, ಅವರು ಬಡವರ ಭಾವನೆಗಳೊಂದಿಗೆ ಆಟವಾಡಿದರು ಮತ್ತು ಜಾತಿಯ ಆಧಾರದ ಮೇಲೆ ಸಮಾಜವನ್ನು ಒಡೆದರು ಎಂದು ಪ್ರಧಾನಿ ಆಗ ಹೇಳಿದ್ದರು.

ಇದನ್ನೂ ಓದಿ; ಮೋದಿ ದ್ವೇಷ ಭಾಷಣ: ಪ್ರಧಾನಮಂತ್ರಿಯ ವೆಬ್‌ಸೈಟ್‌ನಲ್ಲಿನ ಸಾರಾಂಶದಲ್ಲಿ ವಿವಾದಿತ ಹೇಳಿಕೆಗಳು ಕಾಣೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐದು ರಾಜ್ಯಗಳ ವಿಧಾನಸಭೆ ಚುನಾವಣೆ ದಿನಾಂಕ ಪ್ರಕಟ; ಬಂಗಾಳದಲ್ಲಿ ಮಾತ್ರ ಎರಡು ಹಂತದ ಮತದಾನ

ಅಸ್ಸಾಂ, ಪಶ್ಚಿಮ ಬಂಗಾಳ, ತಮಿಳುನಾಡು, ಕೇರಳ ಮತ್ತು ಪುದುಚೇರಿ ವಿಧಾನಸಭಾ ಚುನಾವಣೆಗಳ ವೇಳಾಪಟ್ಟಿಯನ್ನು ಭಾರತೀಯ ಚುನಾವಣಾ ಆಯೋಗದ (ಇಸಿಐ) ಮುಖ್ಯಸ್ಥರಾದ ಜ್ಞಾನೇಶ್ ಕುಮಾರ್ ಪ್ರಕಟಿಸಿದರು. ದೆಹಲಿಯಲ್ಲಿ ಇಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮುಖ್ಯ...

ಫ್ಲಿಪ್‌ಕಾರ್ಟ್‌ನಿಂದ 1 ರೂ.ಗೆ ಹಾಲು ಮಾರಾಟ; ಪ್ರಧಾನಿ ಮೋದಿ ಮಧ್ಯಸ್ಥಿಕೆಗೆ ಬಮುಲ್‌ ಆಗ್ರಹ

ಫ್ಲಿಪ್‌ಕಾರ್ಟ್‌ ಸಂಸ್ಥೆಯು ಆನ್‌ಲೈನ್‌ ಮೂಲಕ 1 ರೂ.ಗೆ ಲೀಟರ್‌ ಹಾಲನ್ನು ಮಾರಾಟ ಮಾಡಿರುವುದು ಭಾರಿ ಜನಾಕ್ರೋಶಕ್ಕೆ ಕಾರಣವಾಗಿದೆ. ಈ ಬಗ್ಗೆ, ಬೆಂಗಳೂರು ನಗರ, ಗ್ರಾಮೀಣ ಮತ್ತು ರಾಮನಗರ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ...

“ಮಕ್ಕಳ ಹಂತಕನನ್ನು ಹುಡುಕಿ ಹತ್ಯೆ ಮಾಡುತ್ತೇವೆ” : ನೆತನ್ಯಾಹು ಸುರಕ್ಷಿತವಾಗಿದ್ದಾರೆ ಎಂಬ ಇಸ್ರೇಲ್ ಸ್ಪಷ್ಟನೆ ಬೆನ್ನಲ್ಲೆ ಐಆರ್‌ಜಿಸಿ ಹೇಳಿಕೆ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರನ್ನು ಹುಡುಕಿ ಹತ್ಯೆ ಮಾಡುತ್ತೇವೆ ಎಂದು ಇರಾನ್‌ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (ಐಆರ್‌ಜಿಸಿ) ಹೇಳಿರುವುದಾಗಿ ವರದಿಯಾಗಿದೆ. ನೆತನ್ಯಾಹು ಅವರ ಹತ್ಯೆಯ ವದಂತಿಗಳನ್ನು ಇಸ್ರೇಲ್ ನಿರಾಕರಿಸಿದ ಬೆನ್ನಲ್ಲೇ, ಐಆರ್‌ಜಿಸಿ ಈ...

ಮಹಾರಾಷ್ಟ್ರ| ಇಫ್ತಾರ್ ಕೂಟಕ್ಕೆ ಸೇರಿದ್ದ ಮುಸ್ಲಿಮರ ಮೇಲೆ ಹಿಂದುತ್ವವಾದಿ ಗುಂಪಿನಿಂದ ದಾಳಿ

ರಂಜಾನ್‌ ಮಾಸದ ಉಪವಾಸ ಮುರಿಯಲು ನೆರೆದಿದ್ದ ಜನರ ಮೇಲೆ ಅಪರಿಚಿತ ವ್ಯಕ್ತಿಗಳ ಗುಂಪೊಂದು ದಾಳಿ ನಡೆಸಿರುವ ಘಟನೆ ಮಹಾರಾಷ್ಟ್ರದ ಪುಣೆಯಲ್ಲಿ ನಡೆದಿದೆ. ಇಫ್ತಾರ್ ಕೂಟಕ್ಕೆ ಸಿದ್ಧತೆ ನಡೆಸುತ್ತಿದ್ದಾಗ, ಸುಮಾರು 100 ಕ್ಕೂ ಹೆಚ್ಚು...

ಆಸ್ಕರ್‌ ಅಂತಿಮ ಪಟ್ಟಿಗೆ ಆಯ್ಕೆಯಾದ ‘ದಿ ವಾಯ್ಸ್ ಆಫ್ ಹಿಂದ್ ರಜಬ್’

ಗಾಝಾದ ಆರು ವರ್ಷದ ಬಾಲಕಿ ಹಿಂದ್ ರಜಬ್‌ ಮತ್ತು ಆಕೆಯ ಸಂಬಂಧಿಕರನ್ನು ಇಸ್ರೇಲಿ ಸೈನಿಕರು ಭೀಕರವಾಗಿ ಹತ್ಯೆ ಮಾಡಿದ ಕಥೆಯನ್ನು ಹೇಳುವ 'ದಿ ವಾಯ್ಸ್ ಆಫ್ ಹಿಂದ್ ರಜಬ್' ಚಲನಚಿತ್ರವು 2026ರ ಆಸ್ಕರ್...

ಉತ್ತರ ಪ್ರದೇಶ| ದಲಿತ ಕುಟುಂಬದ ಮದುವೆ ಮನೆಯಲ್ಲಿ ಸವರ್ಣಿಯರಿಂದ ಹಲ್ಲೆ; ಬಂದೂಕಿನಿಂದ ಬೆದರಿಕೆ

ಮಾರ್ಚ್ 10 ರಂದು ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಟಿಕುನಿಯಾ ಪೊಲೀಸ್ ಠಾಣೆ ಪ್ರದೇಶದಲ್ಲಿ ಜಾತಿ ಆಧಾರಿತ ಹಿಂಸಾಚಾರದ ತೀವ್ರ ಆತಂಕಕಾರಿ ಘಟನೆ ಬೆಳಕಿಗೆ ಬಂದಿದೆ. 24 ಗಂಟೆಗಳ ಒಳಗೆ ಎಫ್‌ಐಆರ್...

’70 ಲಕ್ಷ ಬಂಗಾಳಿ ಮುಸ್ಲಿಮರನ್ನು ಹೊರದಬ್ಬಲು ಸಾಧ್ಯವಿಲ್ಲ..ಅವರೇ ದೇಶ ಬಿಡುವಂತಹ ಪರಿಸ್ಥಿತಿ ಸೃಷ್ಟಿಸುತ್ತೇವೆ’: ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮಾ

ಸುಮಾರು 70 ಲಕ್ಷ 'ಬಂಗಾಳಿ ಮುಸ್ಲಿಮರ'ನ್ನು ಭಾರತದಿಂದ ಹೊರಹಾಕುವುದು 'ಮಾನವೀಯವಾಗಿ ಸಾಧ್ಯವಿಲ್ಲ'. ಹಾಗಾಗಿ, ಅವರಾಗಿಯೇ ದೇಶ ತೊರೆಯುವಂತಹ ಪರಿಸ್ಥಿತಿಯನ್ನು ನಾವು ಸೃಷ್ಟಿಸುತ್ತೇವೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಹೇಳಿದ್ದಾರೆ. ಈ...

ಮೋದಿಯವರ ವಿದೇಶಾಂಗ ನೀತಿ ಸಂಪೂರ್ಣವಾಗಿ ದಿಕ್ಕು ತಪ್ಪಿದೆ, ನಗೆಪಾಟಲಿಗೆ ಈಡಾಗಿದೆ, ಅನೈತಿಕತೆಯಿಂದ ಕೂಡಿದೆ. ಇದು ಜಗಜ್ಜಾಹೀರಾಗಿದೆ – ಶ್ರೀಪಾದ್‌ ಭಟ್

ತಮ್ಮ ಸ್ಥಳೀಯ ಮತಬ್ಯಾಂಕ್ ರಾಜಕಾರಣದ ಜೊತೆಗೆ ವಿದೇಶಿ ನೀತಿಯನ್ನು ತಳುಕು ಹಾಕುವುದು. ಉದಾಹರಣೆಗೆ ಅಮೆರಿಕ-ಇಸ್ರೇಲ್ ಜಂಟಿಯಾಗಿ ನಡೆಸುತ್ತಿರುವ ಇರಾನ್ ಮೇಲಿನ ಯುದ್ಧದ ಸಮಯದಲ್ಲಿ ಮೋದಿ ನೇತೃತ್ವದ ಸರ್ಕಾರವು ತಾನು ಇರಾನ್ ಪರ ನಿಲುವು ತಾಳಿದರೆ...

ದೆಹಲಿ ಪೊಲೀಸರಿಂದ 10 ಮಂದಿ ಹೋರಾಟಗಾರರ ಅಪಹರಣ ಆರೋಪ : ಹೈಕೋರ್ಟ್‌ಗೆ ಹೇಬಿಯಸ್ ಕಾರ್ಪಸ್ ಅರ್ಜಿ

ಸಿವಿಲ್ ಸೊಸೈಟಿಯ ಹತ್ತು ಮಂದಿ ಹೋರಾಟಗಾರರನ್ನು ದೆಹಲಿ ಪೊಲೀಸರು ಅಪಹರಿಸಿದ್ದಾರೆ ಅಥವಾ ಅಕ್ರಮವಾಗಿ ಬಂಧಿಸಿದ್ದಾರೆ ಎಂದು ಮಾನವ ಹಕ್ಕುಗಳ ಗುಂಪುಗಳು ಆರೋಪಿಸಿವೆ. ಹತ್ತು ಮಂದಿಯನ್ನು ದೆಹಲಿ ಪೊಲೀಸರು ಮತ್ತು ಇತರ ರಾಜ್ಯಗಳ ಏಜೆನ್ಸಿಗಳು ಅಪಹರಿಸಿವೆ...

ಗುಜರಾತ್‌: 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ: ವಿಧಾನಸಭೆಗೆ ಮಾಹಿತಿ ನೀಡಿದ ಸರ್ಕಾರ

ಗಾಂಧಿನಗರ: ರಾಜ್ಯದ 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ ಮತ್ತು ಪರಿಸ್ಥಿತಿಯನ್ನು ಸುಧಾರಿಸಲು ವಿವಿಧ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದು ಗುಜರಾತ್ ಸರ್ಕಾರ ಶನಿವಾರ ವಿಧಾನಸಭೆಗೆ...