Homeಕರ್ನಾಟಕಬಿಜೆಪಿಯಿಂದ ಉಚ್ಛಾಟನೆ: ಇದಕ್ಕೆಲ್ಲ ನಾನು ಹೆದರುವುದಿಲ್ಲ ಎಂದ ಕೆಎಸ್ ಈಶ್ವರಪ್ಪ

ಬಿಜೆಪಿಯಿಂದ ಉಚ್ಛಾಟನೆ: ಇದಕ್ಕೆಲ್ಲ ನಾನು ಹೆದರುವುದಿಲ್ಲ ಎಂದ ಕೆಎಸ್ ಈಶ್ವರಪ್ಪ

- Advertisement -
- Advertisement -

ಮಾಜಿ ಸಚಿವ, ಬಿಜೆಪಿಯ ಹಿರಿಯ ನಾಯಕ, ಶಿವಮೊಗ್ಗ ಕ್ಷೇತ್ರದ ಬಿಜೆಪಿಯ ಬಂಡಾಯ ಅಭ್ಯರ್ಥಿ ಕೆ.ಎಸ್‌ ಈಶ್ವರಪ್ಪ ಅವರನ್ನು ಬಿಜೆಪಿ ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ಉಚ್ಛಾಟನೆ ಮಾಡಲಾಗಿದೆ.

ರಾಜ್ಯ ಶಿಸ್ತು ಸಮಿತಿ ಅಧ್ಯಕ್ಷ ಲಿಂಗರಾಜ ಪಾಟೀಲ್ ಹೊರಡಿಸಿದ ಆದೇಶದಲ್ಲಿ, ಶಿವಮೊಗ್ಗ ಲೋಕಸಭಾ ಕ್ಷೇತ್ರದಿಮದ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸಿ, ಪಕ್ಷದ ಮುಜುಗರಕ್ಕೆ ಕಾರಣರಾಗಿದ್ದೀರಿ, ಆದ್ದರಿಂದ ತಕ್ಷಣದಿಂದ ಜಾರಿಗೆ ಬರುವಂತೆ ಪಕ್ಷದ ಎಲ್ಲ ಜವಾಬ್ದಾರಿಗಳಿಂದ ಮುಕ್ತಗೊಳಿಸಿ 6 ವರ್ಷಗಳ ಕಾಲ ಪಕ್ಷದಿಂದ ಉಚ್ಚಾಟಿಸಲಾಗಿದೆ ಎಂದು ಆದೇಶ ಹೊರಡಿಸಿದ್ದಾರೆ.

ಲೋಕಸಭಾ ಚುನಾವಣೆಯಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹಾಗೂ  ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ತಮ್ಮ ಪುತ್ರ ಕಾಂತೇಶ್‌ಗೆ ಹಾವೇರಿ ಕ್ಷೇತ್ರದಿಂದ ಟಿಕೆಟ್ ಕೈ ತಪ್ಪುವಂತೆ ಮಾಡಿದ್ದಾರೆ ಎಂದು ಬಿಜೆಪಿ ವಿರುದ್ಧ ಈಶ್ವರಪ್ಪ ಬಂಡಾಯವೆದ್ದು ಶಿವಮೊಗ್ಗ ಕ್ಷೇತ್ರದಿಂದ ಬಂಡಾಯ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದರು.

ಶಿವಮೊಗ್ಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ, ಯಡಿಯೂರಪ್ಪ ಹಿರಿಯ ಪುತ್ರ ಹಾಗೂ ಹಾಲಿ ಸಂಸದ ಬಿ.ವೈ.ರಾಘವೇಂದ್ರ ಅವರನ್ನು ಸೋಲಿಸುವುದಾಗಿ ಈ ಮೊದಲು ಈಶ್ವರಪ್ಪ ಶಪಥ ಮಾಡಿದ್ದರು. ಈಶ್ವರಪ್ಪ ಅವರ ಮನವೊಲಿಕೆಗೆ ಸಂಘಪರಿವಾರ ಮತ್ತು ಬಿಜೆಪಿ ನಾಯಕರು ಪ್ರಯತ್ನಿಸಿದ್ದರು. ಆದರೆ ಈಶ್ವರಪ್ಪ ಚುನಾವಣಾ ಕಣದಿಂದ ಹಿಂದೆ ಸರಿಯಲು ನಿರಾಕರಿಸಿದ್ದರು.

ಚುನಾವಣಾ ಆಯೋಗ ಶಿವಮೊಗ್ಗ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಈಶ್ವರಪ್ಪ ಅವರಿಗೆ ಚುನಾವಣೆ ಚಿಹ್ನೆ ನೀಡಿದ್ದು, ”ಕೈ ಕಟ್ಟಿಕೊಂಡ ರೈತ ಮತ್ತು ಎರಡು ಕಬ್ಬುಗಳು” ಇರುವ ಚಿಹ್ನೆಯನ್ನು ನೀಡಿತ್ತು.

ಈಶ್ವರಪ್ಪ ಪ್ರತಿಕ್ರಿಯೆ: ಬಿಜೆಪಿಯಿಂದ ತಮ್ಮನ್ನು ಉಚ್ಚಾಟಿಸಿರುವುದಕ್ಕೆ ಹೆದರುವುದಿಲ್ಲ, ಆದರೆ ಉಚ್ಚಾಟನೆಯ ಆದೇಶ ನನಗೆ ಇನ್ನೂ ತಲುಪಿಲ್ಲ. ಉಚ್ಛಾಟನೆ ಬಗ್ಗೆ ಮಾಹಿತಿ ಮಾಧ್ಯಮಗಳಿಂದ ಗೊತ್ತಾಗಿದೆ. ನಾನು  ಚುನಾವಣೆಗೆ ಸ್ಪರ್ಧಿಸುವುದು ಶತಃಸಿದ್ಧ. ಗೆಲ್ಲುವುದು ನಿಶ್ಚಿತ ಎಂದು ಹೇಳಿದ್ದೆ, ಅದರಂತೆ ನಾಮಪತ್ರ ಹಿಂತೆಗೆದುಕೊಳ್ಳದೆ ಕಣದಲ್ಲಿಯೇ ಉಳಿದಿದ್ದೇನೆ. ನಾಳೆಯಿಂದ ಇನ್ನಷ್ಟು ಬಿರುಸಾಗಿ ಚುನಾವಣೆ ಪ್ರಚಾರದಲ್ಲಿ ತೊಡಗಿಕೊಳ್ಳುತ್ತೇನೆ ಎಂದು ಹೇಳಿದ್ದಾರೆ.

ಬಿಜೆಪಿಯಿಂದ 6 ವರ್ಷ ಉಚ್ಚಾಟನೆ ಬೆನ್ನಲ್ಲೇ ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಪ್ಪ, ಮಕ್ಕಳು ಆರಂಭದಿಂದ ಸುಳ್ಳು ಹೇಳುತ್ತಾ, ಷಡ್ಯಂತ್ರ ಮಾಡುತ್ತಾ ಬಂದಿದ್ದಾರೆ. ಅವರು ಯಾವ ಮುಖ ಇಟ್ಟುಕೊಂಡು ಉತ್ತರ ನೀಡುತ್ತಾರೆ. ಅವರು ಪ್ರತಿಕ್ರಿಯೆ ನೀಡಲಿ, ನಂತರ ನಾನು ಅವರಿಗೆ ಉತ್ತರ ನೀಡುತ್ತೇನೆ ಎಂದು ವಾಗ್ದಾಳಿ ಮಾಡಿದ್ದಾರೆ.

ಬಿಎಸ್ ಯಡಿಯೂರಪ್ಪ ಕುಟುಂಬ ದಿಕ್ಕು ತಪ್ಪಿಸುವ ಪ್ರಯತ್ನ ಮಾಡಿದೆ, ಪ್ರಧಾನಿ ಮೋದಿ ಕಾರ್ಯಕ್ರಮಕ್ಕೆ ಈಶ್ವರಪ್ಪ ಬರುತ್ತಾರೆ ಎಂದಿದ್ದರು, ಬಳಿಕ ನಾಮಪತ್ರ ಹಾಕುವುದಿಲ್ಲ ಎಂದಿದ್ದರು. ಇಂದು ನಾಮಪತ್ರ ವಾಪಸ್​​ಗೆ ಕೊನೆಯ ದಿನ. ಇಂದು ನಾನು ಕಣದಲ್ಲಿದ್ದೇನೆ ಎಂದು ಹೇಳಿದ್ದಾರೆ.

ಈಶ್ವರಪ್ಪ ಮತ್ತು ಯಡಿಯೂರಪ್ಪನವರ ನಡುವೆ ಭಿನ್ನಮತ ಇಂದು ನಿನ್ನೆಯದಲ್ಲ. ಇಬ್ಬರು ನಾಯಕರು ತಮ್ಮ ರಾಜಕೀಯ ವೃತ್ತಿ ಜೀವನದಲ್ಲಿ  ಹಲವು ಬಾರಿ ಮುನುಸಿಕೊಂಡಿದ್ದರು, ಆ ಬಳಿಕ ಒಂದಾಗಿದ್ದರು. ಈಶ್ವರಪ್ಪ ಮತ್ತು ಯಡಿಯೂರಪ್ಪನವರ ನಡುವೆ ಭಿನ್ನಮತ ಉಂಟಾದಾಗ ಸಂಘಪರಿವಾರ ಮಧ್ಯಸ್ಥಿಕೆ ವಹಿಸಿ ಸಮಾಧಾನ ಪಡಿಸುತ್ತಿತ್ತು. ಆದರೆ ಈ ಬಾರಿ ಯಾವುದೂ ಫಲ ಕೊಡಲಿಲ್ಲ.

ಇದನ್ನು ಓದಿ: ಅದಾನಿ ಮಾಲಿಕತ್ವದ ಬಂದರಿನ ವಿರುದ್ಧ ಪ್ರತಿಭಟಿಸಿದ ಚರ್ಚ್‌ನ ಬ್ಯಾಂಕ್ ಖಾತೆಗಳನ್ನು ಸ್ಥಗಿತಗೊಳಿಸಿದ ಮೋದಿ ಸರಕಾರ

 

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...