Homeಮುಖಪುಟಜನದ್ರೋಹಿ ಬಿಜೆಪಿ ಸರಕಾರವನ್ನು ಸೋಲಿಸಿ, ಜನಪರ ಸರ್ಕಾರವನ್ನು ಅಧಿಕಾರಕ್ಕೆ ತರಬೇಕು: ಸಂವಿಧಾನ ಪರ ಸಂಘಟನೆಗಳ ಒಕ್ಕೂಟ...

ಜನದ್ರೋಹಿ ಬಿಜೆಪಿ ಸರಕಾರವನ್ನು ಸೋಲಿಸಿ, ಜನಪರ ಸರ್ಕಾರವನ್ನು ಅಧಿಕಾರಕ್ಕೆ ತರಬೇಕು: ಸಂವಿಧಾನ ಪರ ಸಂಘಟನೆಗಳ ಒಕ್ಕೂಟ ಆಗ್ರಹ

- Advertisement -
- Advertisement -

ಪ್ರಜಾಪ್ರಭುತ್ವ ಹಾಗೂ ಗಣತಂತ್ರದ ಕೊಲೆ ಮಾಡಲು ಹವಣಿಸುತ್ತಿರುವ ಜನದ್ರೋಹಿ ಸರಕಾರವನ್ನು ಸೋಲಿಸಿ, ಜನಪರವಾದ ಪ್ರಗತಿಪರ ಸರ್ಕಾರವನ್ನು ಅಧಿಕಾರಕ್ಕೆ ತರಬೇಕು, ಬಸವಣ್ಣನವರು ಹಾಗೂ ಸರ್ವಸಮತೆಯ ಬಂಧುತ್ವದ ಸ್ವಾಭಿಮಾನಿ ದೇಶವನ್ನು ಕಟ್ಟುವ ಅಭಿಲಾಷೆ ಹೊಂದಿದ್ದ ಡಾ. ಬಿ.ಆರ್. ಅಂಬೇಡ್ಕರ್ ಅವರ ಕನಸಿನ ದೇಶವನ್ನು ನಿರ್ಮಿಸಲು ಜನದ್ರೋಹಿ ಬಿಜೆಪಿಯನ್ನು ಸೋಲಿಸಲು ಎಲ್ಲರೂ ಒಂದಾಗಬೇಕು ಎಂದು ಸಂವಿಧಾನ ಪರ ಸಂಘಟನೆಗಳ ಒಕ್ಕೂಟ ಪ್ರಕಟಣೆಯಲ್ಲಿ ತಿಳಿಸಿದೆ.

2014ರ ಲೋಕಸಭೆಯ ಚುನಾವಣೆಯ ಸಂದರ್ಭದಲ್ಲಿ, ಭಾರೀ ಕಾರ್ಪೊರೇಟ್ ಮತ್ತು ಹಣಬೆಂಬಲ
ಹಾಗೂ ಗುಲಾಮಿ ಸ್ವಭಾವದ ಮಾಧ್ಯಮಗಳ ಸಹಾಯದ ಮೂಲಕ ಮನಮೋಹನ್‌ ಸಿಂಗ್ ನೇತೃತ್ವದ ಮೇಲೆ ಸುಳ್ಳು ಆರೋಪ, ಅಪಪ್ರಚಾರ ಮಾಡಿ, ಸುಳ್ಳು ಆಶ್ವಾಸನೆ ನೀಡಿ ಬಿಜೆಪಿ ಅಧಿಕಾರಕ್ಕೆ ಬಂದಿತು. ಕಳೆದ ಹತ್ತು ವರ್ಷಗಳ ಅವಧಿಯಲ್ಲಿ ಮೋದಿ ಸರ್ಕಾರ, ಇಡೀ ಭಾರತ ದೇಶವನ್ನು ವಿನಾಶದ ಅಂಚಿಗೆ ತಂದು ನಿಲ್ಲಿಸಿದೆ. ಹಿಂದೆ ಅವರ ಕೈಗೆ ಅಧಿಕಾರ ಕೊಟ್ಟಿದ್ದ ಜನ ಈಗ ಪಶ್ಚಾತಾಪ ಪಡುವಂತಾಗಿದೆ. ಮೋದಿಯ ಕ್ರೂರ, ಭ್ರಷ್ಟ, ಫ್ಯಾಶಿಸ್ಟ್‌ ಸರಕಾರ ಸೋಲಬೇಕೆಂದು ದೇಶದ ಜನರು ಬಯಸುತ್ತಿದ್ದಾರೆ ಎಂದು ಪ್ರಕಟಣೆಯಲ್ಲಿ ಹೇಳಲಾಗಿದೆ.

ದೇಶದ ಸಮಸ್ತ ರೈತರು, ದಲಿತ, ದಮನಿತರು, ಮಧ್ಯಮ ವರ್ಗದವರು, ರಾಷ್ಟ್ರದ ಸಣ್ಣ ಉದ್ದಿಮೆದಾರರು ಮತ್ತು ವ್ಯಾಪಾರಿಗಳು, ಮಹಿಳೆಯರು, ವಿದ್ಯಾರ್ಥಿಗಳು, ಕೃಷಿಕರು, ಜನಸಾಮಾನ್ಯರು ಮೋದಿ ಸೋಲಬೇಕೆಂದು ಬಯಸುತ್ತಿದ್ದಾರೆ.

ಬಿಜೆಪಿ ಒಂದು ಸ್ವತಂತ್ರವಾದ ರಾಜಕೀಯ ಪಕ್ಷವಲ್ಲ. ಅದು ನಿಜವಾಗಿ ಫ್ಯಾಶಿಸ್ಟ್ ಧೋರಣೆಯ
ಆರ್.ಎಸ್.ಎಸ್.ನ ರಾಜಕೀಯ ಶಾಖೆಯಾಗಿದೆ. ಹಾಗಾಗಿ ಅದು, ಸಂಘೀ ಗ್ಯಾಂಗಿನ ವೈದಿಕಶಾಹಿ
ನಿರ್ದೇಶನದಲ್ಲಿಯೇ ನಡೆಯುವ ಕೊಳಕು ಚಿಂತನೆಯ ಕೋಮುವಾದಿ ಪಕ್ಷವಾಗಿದೆ. ಜನರಲ್ಲಿ ಪರಸ್ಪರ
ದ್ವೇಷಭಾವನೆ ಹುಟ್ಟಿಸುವ ವಿಚ್ಛಿದ್ರಕಾರಿ ಒಡಕಿನ ಕುತಂತ್ರವೇ ಅದರ ಜೀವಾಳವಾಗಿದೆ. ನೋಟ್‍ ಬ್ಯಾನ್‌ ಮೂಲಕ ದೇಶದ ಕೋಟ್ಯಾಂತರ ಜನರ ಬದುಕನ್ನು ಬಿಜೆಪಿ ಮೂರಾಬಟ್ಟೆ ಮಾಡಿದ್ದು, ಜಿಎಸ್‌ಟಿ ಮೂಲಕ
ಸಮಸ್ತ ಬಡಜನರನ್ನು ದರೋಡೆ ಮಾಡಿದೆ. ದೇಶದ ಅನ್ನದಾತರಾದ ರೈತರನ್ನು ಕಂಗಾಲಾಗಿಸಿ, ಭಿಕಾರಿಗಳನ್ನಾಗಿ ಮಾಡಿ, ಬಂಡವಾಳಶಾಹಿಗಳ ಸುಲಿಗೆ ತೆಕ್ಕೆಗೆ ನೂಕುವ ಉದ್ದೇಶದಿಂದ ರೈತ ವಿರೋಧಿ ಕಾನೂನು ಜಾರಿಗೆ ತಂದಿದೆ.

ಒಂದೆಡೆ ಭೇಟಿ ಬಚಾವೋ, ಭೇಟಿ ಪಡಾವೋ ಎಂದು ಘೋಷಿಸುತ್ತಲೇ ಮಣಿಪುರದಲ್ಲಿ ಮಹಿಳೆಯರನ್ನು
ಅಮಾನಿಸಿದಾಗ, ದೇಶಕ್ಕೆ ಕೀರ್ತಿ ತಂದ ಒಲಿಂಪಿಕ್ಸ್ ಮಹಿಳಾ ಕುಸ್ತಿಪಟುಗಳ ಮೇಲೆ ಲೈಂಗಿಕ ದೌರ್ಜನ್ಯ
ನಡೆದಾಗ, ಬಿಲ್ಕೀಸ್ ಬಾನು ಪ್ರಕರಣದ ಅಪರಾಧಿಗಳನ್ನು ಶಿಕ್ಷೆಯ ಅರ್ಧಾವಧಿಯಲ್ಲಿಯೇ ಬಿಡುಗಡೆ
ಮಾಡಿದ್ದಾಗ ಬಿಜೆಪಿ ಬಾಯಿ ಮುಚ್ಚಿಕೊಂಡಿದೆ. ಬಿಜೆಪಿ ಭ್ರಷ್ಟಾಚಾರವನ್ನು ಕೊನೆಗೊಳಿಸುತ್ತದೆ ಎಂದು ಹೇಳುತ್ತಾ ಬಂದಿತ್ತು, ಇದೀಗ ಭ್ರಷ್ಟರನ್ನೆಲ್ಲ ಪಕ್ಷಕ್ಕೆ ಸೇರಿಸಿಕೊಂಡಿದೆ. ಯುವಕರಿಗೆ 2 ಕೋಟಿ ಉದ್ಯೋಗ ಕೊಡುತ್ತೇವೆಂದು ಸುಳ್ಳು ಹೇಳಿ ಅಧಿಕಾರಕ್ಕೆ ಬಂದು ಪಕೋಡ ಮಾರಿ ಎಂದು ಅವಮಾನಿಸಿದ್ದಾರೆ, ಉದ್ಯೋಗವನ್ನು ಬಿಜೆಪಿ ನಾಶಪಡಿಸಿದೆ. ಬೆಲಯೇರಿಕೆಯಿಂದ ದೇಶದ ಜನರ ಬದುಕನ್ನ ಬರ್ಬರವನ್ನಾಗಿಸಿದೆ. ಕೋಮುವಾದವನ್ನು ಬಿತ್ತುತ್ತ ಅಲ್ಪಸಂಖ್ಯಾತರು, ದಲಿತರ ಬದುಕನ್ನು ನರಕವನ್ನಾಗಿಸಿದೆ.

ವಿದ್ಯಾರ್ಥಿಗಳ ಸ್ಕಾಲರ್‌ ಶಿಪ್‌ ನಿಲ್ಲಿಸಿ ಶಿಕ್ಷಣಕ್ಕೆ ಅಡ್ಡಿಪಡಿಸಿದೆ. ಇಡಿ, ಸಿಬಿಐ ಸೇರಿದಂತೆ ಸರಕಾರಿ ಸಂಸ್ಥೆಗಳನ್ನು ಬಳಸಿಕೊಂಡು ರಾಜಕೀಯ ವಿರೋಧಿಗಳನ್ನು ಜೈಲಿಗೆ ತಳ್ಳಿದೆ. ಚುನಾವಣಾ ಬಾಂಡ್‌ ಇಡೀ ದೇಶವನ್ನು ಕೊಳ್ಳೆ ಹೊಡೆದ ಕೋಟ್ಯಾಂತರ ಹಣವನ್ನು ಕಳ್ಳ ಮಾರ್ಗದ ಮೂಲಕ  ಸಂಗ್ರಹಿಸಿದೆ. ಕಾರ್ಪೋರೇಟರ್ಗಳ ಸಾಲವನ್ನು ಬಿಜೆಪಿ ಸರಕಾರ ಮನ್ನಾ ಮಾಡಿದ್ದು, ಬಡ, ರೈತರ ವಿದ್ಯಾರ್ಥಿಗಳಿಂದ ಬಲವಂತವಾಗಿ ಸಾಲ ವಸೂಲಾತಿಯನ್ನು ಮಾಡುತ್ತಿದೆ, ಆದ್ದರಿಂದ ಎಲ್ಲರೂ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ವಿರುದ್ಧ ಮತ ಚಲಾಯಿಸಬೇಕು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಇದನ್ನು ಓದಿ: ಅದಾನಿ ಮಾಲಿಕತ್ವದ ಬಂದರಿನ ವಿರುದ್ಧ ಪ್ರತಿಭಟಿಸಿದ ಚರ್ಚ್‌ನ ಬ್ಯಾಂಕ್ ಖಾತೆಗಳನ್ನು ಸ್ಥಗಿತಗೊಳಿಸಿದ ಮೋದಿ ಸರಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳದ ಸೋಲಿನ ಬಳಿಕ ‘ಇಂಡಿಯಾದ ಆಸರೆ’ ಬಯಸಿದ ಮಮತಾ

2026ರ ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ಸೋಲಿನ ನಂತರ ಮಮತಾ ಬ್ಯಾನರ್ಜಿ ಅವರು ಇದ್ದಕ್ಕಿದ್ದಂತೆ ‘ಇಂಡಿಯಾ’ (INDIA) ಒಕ್ಕೂಟ ಮತ್ತು ರಾಷ್ಟ್ರೀಯ ಮಟ್ಟದ ವಿರೋಧ ಪಕ್ಷಗಳ ಒಗ್ಗಟ್ಟಿಗೆ ಇಷ್ಟೊಂದು ಪ್ರಾಮುಖ್ಯತೆ ನೀಡುತ್ತಿರುವುದು ಏಕೆ? ದೀರ್ಘಕಾಲದವರೆಗೆ...

ಪಶ್ಚಿಮ ಬಂಗಾಳ| ಮತದಾರರ ಪಟ್ಟಿಯಿಂದ ಡಿಲೀಟ್‌ ಆದವರಿಗೆ ಪಡಿತರ ಪ್ರಯೋಜನಗಳಿಲ್ಲ

ಚುನಾವಣಾ ಆಯೋಗದ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಯಿಂದಾಗಿ ಪಶ್ಚಿಮ ಬಂಗಾಳದ ಚುನಾವಣಾ ಪ್ರಕ್ರಿಯೆಯಿಂದ ಹೊರಗುಳಿದವರಿಗೆ ಈಗ ಎರಡು ಹೊಡೆತ ಎದುರಾಗಿದೆ. ರಾಜ್ಯ ಸರ್ಕಾರವು ಈಗ ಅವರ ಪಡಿತರ ಚೀಟಿಗಳನ್ನು ಸಹ ನಿಷ್ಕ್ರಿಯಗೊಳಿಸಲು...

ಇಂಡಿಯಾ ಮೈತ್ರಿಕೂಟದ ಸಭೆ: ಎಸ್‌ಐಆರ್, ಬೆಲೆ ಏರಿಕೆ, ನಿರುದ್ಯೋಗದ ಕುರಿತು ಖರ್ಗೆ ಕಳವಳ; ಒಗ್ಗಟ್ಟಿನ ಹೋರಾಟಕ್ಕೆ ಕರೆ

ರಾಜಕೀಯ, ಆರ್ಥಿಕ, ಸಾಮಾಜಿಕ ಮತ್ತು ವಿದೇಶಾಂಗ ನೀತಿ ರಂಗಗಳಲ್ಲಿ ಮೋದಿ ಸರ್ಕಾರದ ವೈಫಲ್ಯಗಳನ್ನು ಎದುರಿಸಲು ತನ್ನ ಒಗ್ಗಟ್ಟನ್ನು ಬಲಪಡಿಸಿಕೊಳ್ಳುವಂತೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸೋಮವಾರ (ಜೂ.8) ಇಂಡಿಯಾ ಮೈತ್ರಿಕೂಟಕ್ಕೆ ಕರೆ...

ಟೆಹ್ರಾನ್ ಮೇಲಿನ ದಾಳಿಗೆ ಪ್ರತೀಕಾರ: ಇಸ್ರೇಲ್ ಮೇಲೆ ಕ್ಷಿಪಣಿ ಹಾರಿಸಿದ ಇರಾನ್

ಟೆಹ್ರಾನ್, ತಬ್ರಿಜ್ ಮತ್ತು ಇಸ್ಫಹಾನ್‌ ಮೇಲಿನ ದಾಲಿಗಳಿಗೆ ಪ್ರತೀಕಾರವಾಗಿ, ಇರಾನ್ ಸೇನೆಯು ಇಸ್ರೇಲ್‌ ಮೇಲೆ ಎರಡನೇ ತರಂಗದ ಕ್ಷಿಪಣಿಗಳನ್ನು ಹಾರಿಸಿದೆ. ದೇಶಾದ್ಯಂತ ಸೈರನ್‌ಗಳು ಮೊಳಗುತ್ತಿವೆ ಎಂದು ಇಸ್ರೇಲ್ ಮಿಲಿಟರಿ ಹೇಳಿದೆ ಎಂದು ಅಂತರಾಷ್ಟ್ರೀಯ...

ಭಾರತದಲ್ಲಿ ಬೆಂಕಿ ದುರಂತ ‘ದಿನವೊಂದಕ್ಕೆ ಬಲಿಯಾಗುತ್ತಿವೆ 16 ಜೀವಗಳು’ NCRB ವರದಿ

ಇತ್ತೀಚೆಗೆ ದೆಹಲಿಯ ಮಾಳವೀಯ ನಗರದ ಹೋಟೆಲ್‌ ಒಂದರಲ್ಲಿ ನಡೆದ ಭೀಕರ ಬೆಂಕಿ ದುರಂತ (ಇದರಲ್ಲಿ 22 ಜನರು ಸಜೀವ ದಹನವಾಗಿದ್ದರು) ಇಡೀ ದೇಶವನ್ನೇ ನಡುಗಿಸಿದೆ. ಈ ದುರಂತದ ಬೆನ್ನಲ್ಲೇ ಕರ್ನಾಟಕದಲ್ಲೂ ವಾಣಿಜ್ಯ ಮತ್ತು...

ಈದ್ ಹಬ್ಬದ ವೇಳೆ ಮುಸ್ಲೀಮರನ್ನು ಗುರಿಯಾಗಿಸಿ 46 ದ್ವೇಷ ಅಪರಾಧಗಳು, ಮೂವರ ಹತ್ಯೆ: APCR ಆತಂಕಕಾರಿ ವರದಿ

ಇತ್ತೀಚಿನ ಬಕ್ರೀದ್ (ಈದ್ ಉಲ್-ಅಧಾ) ಹಬ್ಬದ ಆಚರಣೆಯ ಸಂದರ್ಭದಲ್ಲಿ ದೇಶದ ವಿವಿಧೆಡೆ ಅಲ್ಪಸಂಖ್ಯಾತರನ್ನು ಗುರಿಯಾಗಿಸಿಕೊಂಡು ನಡೆದ ಕೋಮು ಕಿರುಕುಳ, ದ್ವೇಷ ಭಾಷಣ ಹಾಗೂ ಹಿಂಸಾಚಾರದ ಘಟನೆಗಳ ಕುರಿತು 'ನಾಗರಿಕ ಹಕ್ಕುಗಳ ರಕ್ಷಣಾ ಸಂಘ'...

ಗ್ರೇಟ್ ನಿಕೋಬಾರ್ : ಕಾರ್ಪೊರೇಟ್ ಹಿತಾಸಕ್ತಿಗೆ ಬಲಿಯಾಗುತ್ತಿರುವ ಪರಿಸರ, ಆದಿವಾಸಿಗಳ ಅಸ್ತಿತ್ವ

ಬಂಗಾಳಕೊಲ್ಲಿಯಲ್ಲಿರುವ ಭಾರತದ ದಕ್ಷಿಣ ತುದಿಯ ದ್ವೀಪದ ಸಮಗ್ರ ಅಭಿವೃದ್ಧಿಯ ಹೆಸರಿನಲ್ಲಿ ಕೇಂದ್ರ ಸರ್ಕಾರ ಬರೋಬ್ಬರಿ 72 ಸಾವಿರದಿಂದ 81 ಸಾವಿರ ಕೋಟಿ ರೂಪಾಯಿ ವೆಚ್ಚದ ’ಗ್ರೇಟ್ ನಿಕೋಬಾರ್ ದ್ವೀಪ ಅಭಿವೃದ್ಧಿ ಯೋಜನೆ’ಯನ್ನು ರೂಪಿಸಿದೆ.ಈ...

ಅಸ್ಸಾಂನ ನಾಲ್ವರು ಮುಸ್ಲಿಂ ಮಹಿಳೆಯರ ಗಡೀಪಾರು ಪ್ರಕ್ರಿಯೆಗೆ ಸುಪ್ರೀಂ ತಡೆ: ಕೇಂದ್ರ, ರಾಜ್ಯ ಸರ್ಕಾರಗಳಿಗೆ ನೋಟಿಸ್‌

ಅಸ್ಸಾಂನಲ್ಲಿ 'ವಿದೇಶಿಯರು' ಎಂದು ಘೋಷಿತರಾಗಿ ಗಡೀಪಾರು ಭೀತಿ ಎದುರಿಸುತ್ತಿದ್ದ ನಾಲ್ವರು ಮುಸ್ಲಿಂ ಮಹಿಳೆಯರ ವಿಚಾರದಲ್ಲಿ ಭಾರತದ ಸುಪ್ರೀಂ ಕೋರ್ಟ್ ಮಹತ್ವದ ಮಧ್ಯಪ್ರವೇಶ ಮಾಡಿದೆ. ಈ ಮಹಿಳೆಯರನ್ನು ದೇಶದಿಂದ ಹೊರಹಾಕುವ (ಗಡೀಪಾರು ಮಾಡುವ) ಪ್ರಕ್ರಿಯೆಗೆ...

ದೆಹಲಿಗೆ ಬಂದಿಳಿದ ಕಾಕ್ರೋಚ್ ಪಾರ್ಟಿ ಸಂಸ್ಥಾಪಕ ಅಭಿಜೀತ್ ದೀಪ್ಕೆ : ಜಂತರ್‌ ಮಂತರ್‌ನಲ್ಲಿ ಪ್ರತಿಭಟಿಸಲು ಪೊಲೀಸರಿಂದ ಅನುಮತಿ

ಶನಿವಾರ (ಜೂ.6) ಬೆಳಿಗ್ಗೆ ದೆಹಲಿಗೆ ಆಗಮಿಸಿದ ಕಾಕ್ರೋಚ್ ಜನತಾ ಪಾರ್ಟಿಯ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ, ಪ್ರತಿಭಟನೆಗೆ ದೆಹಲಿ ಪೊಲೀಸರು ಅನುಮತಿ ನೀಡಿದ್ದಾರೆ ಎಂದು ತಿಳಿಸಿದ್ದು, ಯೋಜಿತ ಆಂದೋಲನಕ್ಕಾಗಿ ನೇರವಾಗಿ ಜಂತರ್ ಮಂತರ್‌ನಲ್ಲಿ...

ಜಾಗತಿಕವಾಗಿ ಮೂರು ವರ್ಷಗಳಲ್ಲಿ 600 ಪರಿಸರ ರಕ್ಷಕರ ಹತ್ಯೆ: ವಿಶ್ವಸಂಸ್ಥೆ ತೀವ್ರ ಕಳವಳ: ಜಾಗತಿಕ ತಾಪಮಾನಕ್ಕೆ ಸಾಕ್ಷಿಯಾಗುತ್ತಿರುವ ಭಾರತ

ಜೂನ್ 5 ವಿಶ್ವ ಪರಿಸರ ದಿನ. ಜಗತ್ತಿನಾದ್ಯಂತ ಗಿಡ ನೆಡುವ, ಹಸಿರು ಭಾಷಣ ಬಿಗಿಯುವ ಮತ್ತು ಪರಿಸರ ಕಾಳಜಿಯ ಸಡಗರದ ಆಚರಣೆಗಳು ಎಲ್ಲೆಡೆ ವಿಭಿನ್ನ ರೀತಿಗಳಲ್ಲಿ ವಿಜೃಂಭಿಸುತ್ತಿವೆ. ಆದರೆ, ಇದೇ ಹೊತ್ತಿನಲ್ಲಿ ವಿಶ್ವಸಂಸ್ಥೆಯು...