Homeಮುಖಪುಟಜನದ್ರೋಹಿ ಬಿಜೆಪಿ ಸರಕಾರವನ್ನು ಸೋಲಿಸಿ, ಜನಪರ ಸರ್ಕಾರವನ್ನು ಅಧಿಕಾರಕ್ಕೆ ತರಬೇಕು: ಸಂವಿಧಾನ ಪರ ಸಂಘಟನೆಗಳ ಒಕ್ಕೂಟ...

ಜನದ್ರೋಹಿ ಬಿಜೆಪಿ ಸರಕಾರವನ್ನು ಸೋಲಿಸಿ, ಜನಪರ ಸರ್ಕಾರವನ್ನು ಅಧಿಕಾರಕ್ಕೆ ತರಬೇಕು: ಸಂವಿಧಾನ ಪರ ಸಂಘಟನೆಗಳ ಒಕ್ಕೂಟ ಆಗ್ರಹ

- Advertisement -
- Advertisement -

ಪ್ರಜಾಪ್ರಭುತ್ವ ಹಾಗೂ ಗಣತಂತ್ರದ ಕೊಲೆ ಮಾಡಲು ಹವಣಿಸುತ್ತಿರುವ ಜನದ್ರೋಹಿ ಸರಕಾರವನ್ನು ಸೋಲಿಸಿ, ಜನಪರವಾದ ಪ್ರಗತಿಪರ ಸರ್ಕಾರವನ್ನು ಅಧಿಕಾರಕ್ಕೆ ತರಬೇಕು, ಬಸವಣ್ಣನವರು ಹಾಗೂ ಸರ್ವಸಮತೆಯ ಬಂಧುತ್ವದ ಸ್ವಾಭಿಮಾನಿ ದೇಶವನ್ನು ಕಟ್ಟುವ ಅಭಿಲಾಷೆ ಹೊಂದಿದ್ದ ಡಾ. ಬಿ.ಆರ್. ಅಂಬೇಡ್ಕರ್ ಅವರ ಕನಸಿನ ದೇಶವನ್ನು ನಿರ್ಮಿಸಲು ಜನದ್ರೋಹಿ ಬಿಜೆಪಿಯನ್ನು ಸೋಲಿಸಲು ಎಲ್ಲರೂ ಒಂದಾಗಬೇಕು ಎಂದು ಸಂವಿಧಾನ ಪರ ಸಂಘಟನೆಗಳ ಒಕ್ಕೂಟ ಪ್ರಕಟಣೆಯಲ್ಲಿ ತಿಳಿಸಿದೆ.

2014ರ ಲೋಕಸಭೆಯ ಚುನಾವಣೆಯ ಸಂದರ್ಭದಲ್ಲಿ, ಭಾರೀ ಕಾರ್ಪೊರೇಟ್ ಮತ್ತು ಹಣಬೆಂಬಲ
ಹಾಗೂ ಗುಲಾಮಿ ಸ್ವಭಾವದ ಮಾಧ್ಯಮಗಳ ಸಹಾಯದ ಮೂಲಕ ಮನಮೋಹನ್‌ ಸಿಂಗ್ ನೇತೃತ್ವದ ಮೇಲೆ ಸುಳ್ಳು ಆರೋಪ, ಅಪಪ್ರಚಾರ ಮಾಡಿ, ಸುಳ್ಳು ಆಶ್ವಾಸನೆ ನೀಡಿ ಬಿಜೆಪಿ ಅಧಿಕಾರಕ್ಕೆ ಬಂದಿತು. ಕಳೆದ ಹತ್ತು ವರ್ಷಗಳ ಅವಧಿಯಲ್ಲಿ ಮೋದಿ ಸರ್ಕಾರ, ಇಡೀ ಭಾರತ ದೇಶವನ್ನು ವಿನಾಶದ ಅಂಚಿಗೆ ತಂದು ನಿಲ್ಲಿಸಿದೆ. ಹಿಂದೆ ಅವರ ಕೈಗೆ ಅಧಿಕಾರ ಕೊಟ್ಟಿದ್ದ ಜನ ಈಗ ಪಶ್ಚಾತಾಪ ಪಡುವಂತಾಗಿದೆ. ಮೋದಿಯ ಕ್ರೂರ, ಭ್ರಷ್ಟ, ಫ್ಯಾಶಿಸ್ಟ್‌ ಸರಕಾರ ಸೋಲಬೇಕೆಂದು ದೇಶದ ಜನರು ಬಯಸುತ್ತಿದ್ದಾರೆ ಎಂದು ಪ್ರಕಟಣೆಯಲ್ಲಿ ಹೇಳಲಾಗಿದೆ.

ದೇಶದ ಸಮಸ್ತ ರೈತರು, ದಲಿತ, ದಮನಿತರು, ಮಧ್ಯಮ ವರ್ಗದವರು, ರಾಷ್ಟ್ರದ ಸಣ್ಣ ಉದ್ದಿಮೆದಾರರು ಮತ್ತು ವ್ಯಾಪಾರಿಗಳು, ಮಹಿಳೆಯರು, ವಿದ್ಯಾರ್ಥಿಗಳು, ಕೃಷಿಕರು, ಜನಸಾಮಾನ್ಯರು ಮೋದಿ ಸೋಲಬೇಕೆಂದು ಬಯಸುತ್ತಿದ್ದಾರೆ.

ಬಿಜೆಪಿ ಒಂದು ಸ್ವತಂತ್ರವಾದ ರಾಜಕೀಯ ಪಕ್ಷವಲ್ಲ. ಅದು ನಿಜವಾಗಿ ಫ್ಯಾಶಿಸ್ಟ್ ಧೋರಣೆಯ
ಆರ್.ಎಸ್.ಎಸ್.ನ ರಾಜಕೀಯ ಶಾಖೆಯಾಗಿದೆ. ಹಾಗಾಗಿ ಅದು, ಸಂಘೀ ಗ್ಯಾಂಗಿನ ವೈದಿಕಶಾಹಿ
ನಿರ್ದೇಶನದಲ್ಲಿಯೇ ನಡೆಯುವ ಕೊಳಕು ಚಿಂತನೆಯ ಕೋಮುವಾದಿ ಪಕ್ಷವಾಗಿದೆ. ಜನರಲ್ಲಿ ಪರಸ್ಪರ
ದ್ವೇಷಭಾವನೆ ಹುಟ್ಟಿಸುವ ವಿಚ್ಛಿದ್ರಕಾರಿ ಒಡಕಿನ ಕುತಂತ್ರವೇ ಅದರ ಜೀವಾಳವಾಗಿದೆ. ನೋಟ್‍ ಬ್ಯಾನ್‌ ಮೂಲಕ ದೇಶದ ಕೋಟ್ಯಾಂತರ ಜನರ ಬದುಕನ್ನು ಬಿಜೆಪಿ ಮೂರಾಬಟ್ಟೆ ಮಾಡಿದ್ದು, ಜಿಎಸ್‌ಟಿ ಮೂಲಕ
ಸಮಸ್ತ ಬಡಜನರನ್ನು ದರೋಡೆ ಮಾಡಿದೆ. ದೇಶದ ಅನ್ನದಾತರಾದ ರೈತರನ್ನು ಕಂಗಾಲಾಗಿಸಿ, ಭಿಕಾರಿಗಳನ್ನಾಗಿ ಮಾಡಿ, ಬಂಡವಾಳಶಾಹಿಗಳ ಸುಲಿಗೆ ತೆಕ್ಕೆಗೆ ನೂಕುವ ಉದ್ದೇಶದಿಂದ ರೈತ ವಿರೋಧಿ ಕಾನೂನು ಜಾರಿಗೆ ತಂದಿದೆ.

ಒಂದೆಡೆ ಭೇಟಿ ಬಚಾವೋ, ಭೇಟಿ ಪಡಾವೋ ಎಂದು ಘೋಷಿಸುತ್ತಲೇ ಮಣಿಪುರದಲ್ಲಿ ಮಹಿಳೆಯರನ್ನು
ಅಮಾನಿಸಿದಾಗ, ದೇಶಕ್ಕೆ ಕೀರ್ತಿ ತಂದ ಒಲಿಂಪಿಕ್ಸ್ ಮಹಿಳಾ ಕುಸ್ತಿಪಟುಗಳ ಮೇಲೆ ಲೈಂಗಿಕ ದೌರ್ಜನ್ಯ
ನಡೆದಾಗ, ಬಿಲ್ಕೀಸ್ ಬಾನು ಪ್ರಕರಣದ ಅಪರಾಧಿಗಳನ್ನು ಶಿಕ್ಷೆಯ ಅರ್ಧಾವಧಿಯಲ್ಲಿಯೇ ಬಿಡುಗಡೆ
ಮಾಡಿದ್ದಾಗ ಬಿಜೆಪಿ ಬಾಯಿ ಮುಚ್ಚಿಕೊಂಡಿದೆ. ಬಿಜೆಪಿ ಭ್ರಷ್ಟಾಚಾರವನ್ನು ಕೊನೆಗೊಳಿಸುತ್ತದೆ ಎಂದು ಹೇಳುತ್ತಾ ಬಂದಿತ್ತು, ಇದೀಗ ಭ್ರಷ್ಟರನ್ನೆಲ್ಲ ಪಕ್ಷಕ್ಕೆ ಸೇರಿಸಿಕೊಂಡಿದೆ. ಯುವಕರಿಗೆ 2 ಕೋಟಿ ಉದ್ಯೋಗ ಕೊಡುತ್ತೇವೆಂದು ಸುಳ್ಳು ಹೇಳಿ ಅಧಿಕಾರಕ್ಕೆ ಬಂದು ಪಕೋಡ ಮಾರಿ ಎಂದು ಅವಮಾನಿಸಿದ್ದಾರೆ, ಉದ್ಯೋಗವನ್ನು ಬಿಜೆಪಿ ನಾಶಪಡಿಸಿದೆ. ಬೆಲಯೇರಿಕೆಯಿಂದ ದೇಶದ ಜನರ ಬದುಕನ್ನ ಬರ್ಬರವನ್ನಾಗಿಸಿದೆ. ಕೋಮುವಾದವನ್ನು ಬಿತ್ತುತ್ತ ಅಲ್ಪಸಂಖ್ಯಾತರು, ದಲಿತರ ಬದುಕನ್ನು ನರಕವನ್ನಾಗಿಸಿದೆ.

ವಿದ್ಯಾರ್ಥಿಗಳ ಸ್ಕಾಲರ್‌ ಶಿಪ್‌ ನಿಲ್ಲಿಸಿ ಶಿಕ್ಷಣಕ್ಕೆ ಅಡ್ಡಿಪಡಿಸಿದೆ. ಇಡಿ, ಸಿಬಿಐ ಸೇರಿದಂತೆ ಸರಕಾರಿ ಸಂಸ್ಥೆಗಳನ್ನು ಬಳಸಿಕೊಂಡು ರಾಜಕೀಯ ವಿರೋಧಿಗಳನ್ನು ಜೈಲಿಗೆ ತಳ್ಳಿದೆ. ಚುನಾವಣಾ ಬಾಂಡ್‌ ಇಡೀ ದೇಶವನ್ನು ಕೊಳ್ಳೆ ಹೊಡೆದ ಕೋಟ್ಯಾಂತರ ಹಣವನ್ನು ಕಳ್ಳ ಮಾರ್ಗದ ಮೂಲಕ  ಸಂಗ್ರಹಿಸಿದೆ. ಕಾರ್ಪೋರೇಟರ್ಗಳ ಸಾಲವನ್ನು ಬಿಜೆಪಿ ಸರಕಾರ ಮನ್ನಾ ಮಾಡಿದ್ದು, ಬಡ, ರೈತರ ವಿದ್ಯಾರ್ಥಿಗಳಿಂದ ಬಲವಂತವಾಗಿ ಸಾಲ ವಸೂಲಾತಿಯನ್ನು ಮಾಡುತ್ತಿದೆ, ಆದ್ದರಿಂದ ಎಲ್ಲರೂ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ವಿರುದ್ಧ ಮತ ಚಲಾಯಿಸಬೇಕು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಇದನ್ನು ಓದಿ: ಅದಾನಿ ಮಾಲಿಕತ್ವದ ಬಂದರಿನ ವಿರುದ್ಧ ಪ್ರತಿಭಟಿಸಿದ ಚರ್ಚ್‌ನ ಬ್ಯಾಂಕ್ ಖಾತೆಗಳನ್ನು ಸ್ಥಗಿತಗೊಳಿಸಿದ ಮೋದಿ ಸರಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...