Homeಮುಖಪುಟಜನದ್ರೋಹಿ ಬಿಜೆಪಿ ಸರಕಾರವನ್ನು ಸೋಲಿಸಿ, ಜನಪರ ಸರ್ಕಾರವನ್ನು ಅಧಿಕಾರಕ್ಕೆ ತರಬೇಕು: ಸಂವಿಧಾನ ಪರ ಸಂಘಟನೆಗಳ ಒಕ್ಕೂಟ...

ಜನದ್ರೋಹಿ ಬಿಜೆಪಿ ಸರಕಾರವನ್ನು ಸೋಲಿಸಿ, ಜನಪರ ಸರ್ಕಾರವನ್ನು ಅಧಿಕಾರಕ್ಕೆ ತರಬೇಕು: ಸಂವಿಧಾನ ಪರ ಸಂಘಟನೆಗಳ ಒಕ್ಕೂಟ ಆಗ್ರಹ

- Advertisement -
- Advertisement -

ಪ್ರಜಾಪ್ರಭುತ್ವ ಹಾಗೂ ಗಣತಂತ್ರದ ಕೊಲೆ ಮಾಡಲು ಹವಣಿಸುತ್ತಿರುವ ಜನದ್ರೋಹಿ ಸರಕಾರವನ್ನು ಸೋಲಿಸಿ, ಜನಪರವಾದ ಪ್ರಗತಿಪರ ಸರ್ಕಾರವನ್ನು ಅಧಿಕಾರಕ್ಕೆ ತರಬೇಕು, ಬಸವಣ್ಣನವರು ಹಾಗೂ ಸರ್ವಸಮತೆಯ ಬಂಧುತ್ವದ ಸ್ವಾಭಿಮಾನಿ ದೇಶವನ್ನು ಕಟ್ಟುವ ಅಭಿಲಾಷೆ ಹೊಂದಿದ್ದ ಡಾ. ಬಿ.ಆರ್. ಅಂಬೇಡ್ಕರ್ ಅವರ ಕನಸಿನ ದೇಶವನ್ನು ನಿರ್ಮಿಸಲು ಜನದ್ರೋಹಿ ಬಿಜೆಪಿಯನ್ನು ಸೋಲಿಸಲು ಎಲ್ಲರೂ ಒಂದಾಗಬೇಕು ಎಂದು ಸಂವಿಧಾನ ಪರ ಸಂಘಟನೆಗಳ ಒಕ್ಕೂಟ ಪ್ರಕಟಣೆಯಲ್ಲಿ ತಿಳಿಸಿದೆ.

2014ರ ಲೋಕಸಭೆಯ ಚುನಾವಣೆಯ ಸಂದರ್ಭದಲ್ಲಿ, ಭಾರೀ ಕಾರ್ಪೊರೇಟ್ ಮತ್ತು ಹಣಬೆಂಬಲ
ಹಾಗೂ ಗುಲಾಮಿ ಸ್ವಭಾವದ ಮಾಧ್ಯಮಗಳ ಸಹಾಯದ ಮೂಲಕ ಮನಮೋಹನ್‌ ಸಿಂಗ್ ನೇತೃತ್ವದ ಮೇಲೆ ಸುಳ್ಳು ಆರೋಪ, ಅಪಪ್ರಚಾರ ಮಾಡಿ, ಸುಳ್ಳು ಆಶ್ವಾಸನೆ ನೀಡಿ ಬಿಜೆಪಿ ಅಧಿಕಾರಕ್ಕೆ ಬಂದಿತು. ಕಳೆದ ಹತ್ತು ವರ್ಷಗಳ ಅವಧಿಯಲ್ಲಿ ಮೋದಿ ಸರ್ಕಾರ, ಇಡೀ ಭಾರತ ದೇಶವನ್ನು ವಿನಾಶದ ಅಂಚಿಗೆ ತಂದು ನಿಲ್ಲಿಸಿದೆ. ಹಿಂದೆ ಅವರ ಕೈಗೆ ಅಧಿಕಾರ ಕೊಟ್ಟಿದ್ದ ಜನ ಈಗ ಪಶ್ಚಾತಾಪ ಪಡುವಂತಾಗಿದೆ. ಮೋದಿಯ ಕ್ರೂರ, ಭ್ರಷ್ಟ, ಫ್ಯಾಶಿಸ್ಟ್‌ ಸರಕಾರ ಸೋಲಬೇಕೆಂದು ದೇಶದ ಜನರು ಬಯಸುತ್ತಿದ್ದಾರೆ ಎಂದು ಪ್ರಕಟಣೆಯಲ್ಲಿ ಹೇಳಲಾಗಿದೆ.

ದೇಶದ ಸಮಸ್ತ ರೈತರು, ದಲಿತ, ದಮನಿತರು, ಮಧ್ಯಮ ವರ್ಗದವರು, ರಾಷ್ಟ್ರದ ಸಣ್ಣ ಉದ್ದಿಮೆದಾರರು ಮತ್ತು ವ್ಯಾಪಾರಿಗಳು, ಮಹಿಳೆಯರು, ವಿದ್ಯಾರ್ಥಿಗಳು, ಕೃಷಿಕರು, ಜನಸಾಮಾನ್ಯರು ಮೋದಿ ಸೋಲಬೇಕೆಂದು ಬಯಸುತ್ತಿದ್ದಾರೆ.

ಬಿಜೆಪಿ ಒಂದು ಸ್ವತಂತ್ರವಾದ ರಾಜಕೀಯ ಪಕ್ಷವಲ್ಲ. ಅದು ನಿಜವಾಗಿ ಫ್ಯಾಶಿಸ್ಟ್ ಧೋರಣೆಯ
ಆರ್.ಎಸ್.ಎಸ್.ನ ರಾಜಕೀಯ ಶಾಖೆಯಾಗಿದೆ. ಹಾಗಾಗಿ ಅದು, ಸಂಘೀ ಗ್ಯಾಂಗಿನ ವೈದಿಕಶಾಹಿ
ನಿರ್ದೇಶನದಲ್ಲಿಯೇ ನಡೆಯುವ ಕೊಳಕು ಚಿಂತನೆಯ ಕೋಮುವಾದಿ ಪಕ್ಷವಾಗಿದೆ. ಜನರಲ್ಲಿ ಪರಸ್ಪರ
ದ್ವೇಷಭಾವನೆ ಹುಟ್ಟಿಸುವ ವಿಚ್ಛಿದ್ರಕಾರಿ ಒಡಕಿನ ಕುತಂತ್ರವೇ ಅದರ ಜೀವಾಳವಾಗಿದೆ. ನೋಟ್‍ ಬ್ಯಾನ್‌ ಮೂಲಕ ದೇಶದ ಕೋಟ್ಯಾಂತರ ಜನರ ಬದುಕನ್ನು ಬಿಜೆಪಿ ಮೂರಾಬಟ್ಟೆ ಮಾಡಿದ್ದು, ಜಿಎಸ್‌ಟಿ ಮೂಲಕ
ಸಮಸ್ತ ಬಡಜನರನ್ನು ದರೋಡೆ ಮಾಡಿದೆ. ದೇಶದ ಅನ್ನದಾತರಾದ ರೈತರನ್ನು ಕಂಗಾಲಾಗಿಸಿ, ಭಿಕಾರಿಗಳನ್ನಾಗಿ ಮಾಡಿ, ಬಂಡವಾಳಶಾಹಿಗಳ ಸುಲಿಗೆ ತೆಕ್ಕೆಗೆ ನೂಕುವ ಉದ್ದೇಶದಿಂದ ರೈತ ವಿರೋಧಿ ಕಾನೂನು ಜಾರಿಗೆ ತಂದಿದೆ.

ಒಂದೆಡೆ ಭೇಟಿ ಬಚಾವೋ, ಭೇಟಿ ಪಡಾವೋ ಎಂದು ಘೋಷಿಸುತ್ತಲೇ ಮಣಿಪುರದಲ್ಲಿ ಮಹಿಳೆಯರನ್ನು
ಅಮಾನಿಸಿದಾಗ, ದೇಶಕ್ಕೆ ಕೀರ್ತಿ ತಂದ ಒಲಿಂಪಿಕ್ಸ್ ಮಹಿಳಾ ಕುಸ್ತಿಪಟುಗಳ ಮೇಲೆ ಲೈಂಗಿಕ ದೌರ್ಜನ್ಯ
ನಡೆದಾಗ, ಬಿಲ್ಕೀಸ್ ಬಾನು ಪ್ರಕರಣದ ಅಪರಾಧಿಗಳನ್ನು ಶಿಕ್ಷೆಯ ಅರ್ಧಾವಧಿಯಲ್ಲಿಯೇ ಬಿಡುಗಡೆ
ಮಾಡಿದ್ದಾಗ ಬಿಜೆಪಿ ಬಾಯಿ ಮುಚ್ಚಿಕೊಂಡಿದೆ. ಬಿಜೆಪಿ ಭ್ರಷ್ಟಾಚಾರವನ್ನು ಕೊನೆಗೊಳಿಸುತ್ತದೆ ಎಂದು ಹೇಳುತ್ತಾ ಬಂದಿತ್ತು, ಇದೀಗ ಭ್ರಷ್ಟರನ್ನೆಲ್ಲ ಪಕ್ಷಕ್ಕೆ ಸೇರಿಸಿಕೊಂಡಿದೆ. ಯುವಕರಿಗೆ 2 ಕೋಟಿ ಉದ್ಯೋಗ ಕೊಡುತ್ತೇವೆಂದು ಸುಳ್ಳು ಹೇಳಿ ಅಧಿಕಾರಕ್ಕೆ ಬಂದು ಪಕೋಡ ಮಾರಿ ಎಂದು ಅವಮಾನಿಸಿದ್ದಾರೆ, ಉದ್ಯೋಗವನ್ನು ಬಿಜೆಪಿ ನಾಶಪಡಿಸಿದೆ. ಬೆಲಯೇರಿಕೆಯಿಂದ ದೇಶದ ಜನರ ಬದುಕನ್ನ ಬರ್ಬರವನ್ನಾಗಿಸಿದೆ. ಕೋಮುವಾದವನ್ನು ಬಿತ್ತುತ್ತ ಅಲ್ಪಸಂಖ್ಯಾತರು, ದಲಿತರ ಬದುಕನ್ನು ನರಕವನ್ನಾಗಿಸಿದೆ.

ವಿದ್ಯಾರ್ಥಿಗಳ ಸ್ಕಾಲರ್‌ ಶಿಪ್‌ ನಿಲ್ಲಿಸಿ ಶಿಕ್ಷಣಕ್ಕೆ ಅಡ್ಡಿಪಡಿಸಿದೆ. ಇಡಿ, ಸಿಬಿಐ ಸೇರಿದಂತೆ ಸರಕಾರಿ ಸಂಸ್ಥೆಗಳನ್ನು ಬಳಸಿಕೊಂಡು ರಾಜಕೀಯ ವಿರೋಧಿಗಳನ್ನು ಜೈಲಿಗೆ ತಳ್ಳಿದೆ. ಚುನಾವಣಾ ಬಾಂಡ್‌ ಇಡೀ ದೇಶವನ್ನು ಕೊಳ್ಳೆ ಹೊಡೆದ ಕೋಟ್ಯಾಂತರ ಹಣವನ್ನು ಕಳ್ಳ ಮಾರ್ಗದ ಮೂಲಕ  ಸಂಗ್ರಹಿಸಿದೆ. ಕಾರ್ಪೋರೇಟರ್ಗಳ ಸಾಲವನ್ನು ಬಿಜೆಪಿ ಸರಕಾರ ಮನ್ನಾ ಮಾಡಿದ್ದು, ಬಡ, ರೈತರ ವಿದ್ಯಾರ್ಥಿಗಳಿಂದ ಬಲವಂತವಾಗಿ ಸಾಲ ವಸೂಲಾತಿಯನ್ನು ಮಾಡುತ್ತಿದೆ, ಆದ್ದರಿಂದ ಎಲ್ಲರೂ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ವಿರುದ್ಧ ಮತ ಚಲಾಯಿಸಬೇಕು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಇದನ್ನು ಓದಿ: ಅದಾನಿ ಮಾಲಿಕತ್ವದ ಬಂದರಿನ ವಿರುದ್ಧ ಪ್ರತಿಭಟಿಸಿದ ಚರ್ಚ್‌ನ ಬ್ಯಾಂಕ್ ಖಾತೆಗಳನ್ನು ಸ್ಥಗಿತಗೊಳಿಸಿದ ಮೋದಿ ಸರಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...