Homeಮುಖಪುಟಜನದ್ರೋಹಿ ಬಿಜೆಪಿ ಸರಕಾರವನ್ನು ಸೋಲಿಸಿ, ಜನಪರ ಸರ್ಕಾರವನ್ನು ಅಧಿಕಾರಕ್ಕೆ ತರಬೇಕು: ಸಂವಿಧಾನ ಪರ ಸಂಘಟನೆಗಳ ಒಕ್ಕೂಟ...

ಜನದ್ರೋಹಿ ಬಿಜೆಪಿ ಸರಕಾರವನ್ನು ಸೋಲಿಸಿ, ಜನಪರ ಸರ್ಕಾರವನ್ನು ಅಧಿಕಾರಕ್ಕೆ ತರಬೇಕು: ಸಂವಿಧಾನ ಪರ ಸಂಘಟನೆಗಳ ಒಕ್ಕೂಟ ಆಗ್ರಹ

- Advertisement -
- Advertisement -

ಪ್ರಜಾಪ್ರಭುತ್ವ ಹಾಗೂ ಗಣತಂತ್ರದ ಕೊಲೆ ಮಾಡಲು ಹವಣಿಸುತ್ತಿರುವ ಜನದ್ರೋಹಿ ಸರಕಾರವನ್ನು ಸೋಲಿಸಿ, ಜನಪರವಾದ ಪ್ರಗತಿಪರ ಸರ್ಕಾರವನ್ನು ಅಧಿಕಾರಕ್ಕೆ ತರಬೇಕು, ಬಸವಣ್ಣನವರು ಹಾಗೂ ಸರ್ವಸಮತೆಯ ಬಂಧುತ್ವದ ಸ್ವಾಭಿಮಾನಿ ದೇಶವನ್ನು ಕಟ್ಟುವ ಅಭಿಲಾಷೆ ಹೊಂದಿದ್ದ ಡಾ. ಬಿ.ಆರ್. ಅಂಬೇಡ್ಕರ್ ಅವರ ಕನಸಿನ ದೇಶವನ್ನು ನಿರ್ಮಿಸಲು ಜನದ್ರೋಹಿ ಬಿಜೆಪಿಯನ್ನು ಸೋಲಿಸಲು ಎಲ್ಲರೂ ಒಂದಾಗಬೇಕು ಎಂದು ಸಂವಿಧಾನ ಪರ ಸಂಘಟನೆಗಳ ಒಕ್ಕೂಟ ಪ್ರಕಟಣೆಯಲ್ಲಿ ತಿಳಿಸಿದೆ.

2014ರ ಲೋಕಸಭೆಯ ಚುನಾವಣೆಯ ಸಂದರ್ಭದಲ್ಲಿ, ಭಾರೀ ಕಾರ್ಪೊರೇಟ್ ಮತ್ತು ಹಣಬೆಂಬಲ
ಹಾಗೂ ಗುಲಾಮಿ ಸ್ವಭಾವದ ಮಾಧ್ಯಮಗಳ ಸಹಾಯದ ಮೂಲಕ ಮನಮೋಹನ್‌ ಸಿಂಗ್ ನೇತೃತ್ವದ ಮೇಲೆ ಸುಳ್ಳು ಆರೋಪ, ಅಪಪ್ರಚಾರ ಮಾಡಿ, ಸುಳ್ಳು ಆಶ್ವಾಸನೆ ನೀಡಿ ಬಿಜೆಪಿ ಅಧಿಕಾರಕ್ಕೆ ಬಂದಿತು. ಕಳೆದ ಹತ್ತು ವರ್ಷಗಳ ಅವಧಿಯಲ್ಲಿ ಮೋದಿ ಸರ್ಕಾರ, ಇಡೀ ಭಾರತ ದೇಶವನ್ನು ವಿನಾಶದ ಅಂಚಿಗೆ ತಂದು ನಿಲ್ಲಿಸಿದೆ. ಹಿಂದೆ ಅವರ ಕೈಗೆ ಅಧಿಕಾರ ಕೊಟ್ಟಿದ್ದ ಜನ ಈಗ ಪಶ್ಚಾತಾಪ ಪಡುವಂತಾಗಿದೆ. ಮೋದಿಯ ಕ್ರೂರ, ಭ್ರಷ್ಟ, ಫ್ಯಾಶಿಸ್ಟ್‌ ಸರಕಾರ ಸೋಲಬೇಕೆಂದು ದೇಶದ ಜನರು ಬಯಸುತ್ತಿದ್ದಾರೆ ಎಂದು ಪ್ರಕಟಣೆಯಲ್ಲಿ ಹೇಳಲಾಗಿದೆ.

ದೇಶದ ಸಮಸ್ತ ರೈತರು, ದಲಿತ, ದಮನಿತರು, ಮಧ್ಯಮ ವರ್ಗದವರು, ರಾಷ್ಟ್ರದ ಸಣ್ಣ ಉದ್ದಿಮೆದಾರರು ಮತ್ತು ವ್ಯಾಪಾರಿಗಳು, ಮಹಿಳೆಯರು, ವಿದ್ಯಾರ್ಥಿಗಳು, ಕೃಷಿಕರು, ಜನಸಾಮಾನ್ಯರು ಮೋದಿ ಸೋಲಬೇಕೆಂದು ಬಯಸುತ್ತಿದ್ದಾರೆ.

ಬಿಜೆಪಿ ಒಂದು ಸ್ವತಂತ್ರವಾದ ರಾಜಕೀಯ ಪಕ್ಷವಲ್ಲ. ಅದು ನಿಜವಾಗಿ ಫ್ಯಾಶಿಸ್ಟ್ ಧೋರಣೆಯ
ಆರ್.ಎಸ್.ಎಸ್.ನ ರಾಜಕೀಯ ಶಾಖೆಯಾಗಿದೆ. ಹಾಗಾಗಿ ಅದು, ಸಂಘೀ ಗ್ಯಾಂಗಿನ ವೈದಿಕಶಾಹಿ
ನಿರ್ದೇಶನದಲ್ಲಿಯೇ ನಡೆಯುವ ಕೊಳಕು ಚಿಂತನೆಯ ಕೋಮುವಾದಿ ಪಕ್ಷವಾಗಿದೆ. ಜನರಲ್ಲಿ ಪರಸ್ಪರ
ದ್ವೇಷಭಾವನೆ ಹುಟ್ಟಿಸುವ ವಿಚ್ಛಿದ್ರಕಾರಿ ಒಡಕಿನ ಕುತಂತ್ರವೇ ಅದರ ಜೀವಾಳವಾಗಿದೆ. ನೋಟ್‍ ಬ್ಯಾನ್‌ ಮೂಲಕ ದೇಶದ ಕೋಟ್ಯಾಂತರ ಜನರ ಬದುಕನ್ನು ಬಿಜೆಪಿ ಮೂರಾಬಟ್ಟೆ ಮಾಡಿದ್ದು, ಜಿಎಸ್‌ಟಿ ಮೂಲಕ
ಸಮಸ್ತ ಬಡಜನರನ್ನು ದರೋಡೆ ಮಾಡಿದೆ. ದೇಶದ ಅನ್ನದಾತರಾದ ರೈತರನ್ನು ಕಂಗಾಲಾಗಿಸಿ, ಭಿಕಾರಿಗಳನ್ನಾಗಿ ಮಾಡಿ, ಬಂಡವಾಳಶಾಹಿಗಳ ಸುಲಿಗೆ ತೆಕ್ಕೆಗೆ ನೂಕುವ ಉದ್ದೇಶದಿಂದ ರೈತ ವಿರೋಧಿ ಕಾನೂನು ಜಾರಿಗೆ ತಂದಿದೆ.

ಒಂದೆಡೆ ಭೇಟಿ ಬಚಾವೋ, ಭೇಟಿ ಪಡಾವೋ ಎಂದು ಘೋಷಿಸುತ್ತಲೇ ಮಣಿಪುರದಲ್ಲಿ ಮಹಿಳೆಯರನ್ನು
ಅಮಾನಿಸಿದಾಗ, ದೇಶಕ್ಕೆ ಕೀರ್ತಿ ತಂದ ಒಲಿಂಪಿಕ್ಸ್ ಮಹಿಳಾ ಕುಸ್ತಿಪಟುಗಳ ಮೇಲೆ ಲೈಂಗಿಕ ದೌರ್ಜನ್ಯ
ನಡೆದಾಗ, ಬಿಲ್ಕೀಸ್ ಬಾನು ಪ್ರಕರಣದ ಅಪರಾಧಿಗಳನ್ನು ಶಿಕ್ಷೆಯ ಅರ್ಧಾವಧಿಯಲ್ಲಿಯೇ ಬಿಡುಗಡೆ
ಮಾಡಿದ್ದಾಗ ಬಿಜೆಪಿ ಬಾಯಿ ಮುಚ್ಚಿಕೊಂಡಿದೆ. ಬಿಜೆಪಿ ಭ್ರಷ್ಟಾಚಾರವನ್ನು ಕೊನೆಗೊಳಿಸುತ್ತದೆ ಎಂದು ಹೇಳುತ್ತಾ ಬಂದಿತ್ತು, ಇದೀಗ ಭ್ರಷ್ಟರನ್ನೆಲ್ಲ ಪಕ್ಷಕ್ಕೆ ಸೇರಿಸಿಕೊಂಡಿದೆ. ಯುವಕರಿಗೆ 2 ಕೋಟಿ ಉದ್ಯೋಗ ಕೊಡುತ್ತೇವೆಂದು ಸುಳ್ಳು ಹೇಳಿ ಅಧಿಕಾರಕ್ಕೆ ಬಂದು ಪಕೋಡ ಮಾರಿ ಎಂದು ಅವಮಾನಿಸಿದ್ದಾರೆ, ಉದ್ಯೋಗವನ್ನು ಬಿಜೆಪಿ ನಾಶಪಡಿಸಿದೆ. ಬೆಲಯೇರಿಕೆಯಿಂದ ದೇಶದ ಜನರ ಬದುಕನ್ನ ಬರ್ಬರವನ್ನಾಗಿಸಿದೆ. ಕೋಮುವಾದವನ್ನು ಬಿತ್ತುತ್ತ ಅಲ್ಪಸಂಖ್ಯಾತರು, ದಲಿತರ ಬದುಕನ್ನು ನರಕವನ್ನಾಗಿಸಿದೆ.

ವಿದ್ಯಾರ್ಥಿಗಳ ಸ್ಕಾಲರ್‌ ಶಿಪ್‌ ನಿಲ್ಲಿಸಿ ಶಿಕ್ಷಣಕ್ಕೆ ಅಡ್ಡಿಪಡಿಸಿದೆ. ಇಡಿ, ಸಿಬಿಐ ಸೇರಿದಂತೆ ಸರಕಾರಿ ಸಂಸ್ಥೆಗಳನ್ನು ಬಳಸಿಕೊಂಡು ರಾಜಕೀಯ ವಿರೋಧಿಗಳನ್ನು ಜೈಲಿಗೆ ತಳ್ಳಿದೆ. ಚುನಾವಣಾ ಬಾಂಡ್‌ ಇಡೀ ದೇಶವನ್ನು ಕೊಳ್ಳೆ ಹೊಡೆದ ಕೋಟ್ಯಾಂತರ ಹಣವನ್ನು ಕಳ್ಳ ಮಾರ್ಗದ ಮೂಲಕ  ಸಂಗ್ರಹಿಸಿದೆ. ಕಾರ್ಪೋರೇಟರ್ಗಳ ಸಾಲವನ್ನು ಬಿಜೆಪಿ ಸರಕಾರ ಮನ್ನಾ ಮಾಡಿದ್ದು, ಬಡ, ರೈತರ ವಿದ್ಯಾರ್ಥಿಗಳಿಂದ ಬಲವಂತವಾಗಿ ಸಾಲ ವಸೂಲಾತಿಯನ್ನು ಮಾಡುತ್ತಿದೆ, ಆದ್ದರಿಂದ ಎಲ್ಲರೂ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ವಿರುದ್ಧ ಮತ ಚಲಾಯಿಸಬೇಕು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಇದನ್ನು ಓದಿ: ಅದಾನಿ ಮಾಲಿಕತ್ವದ ಬಂದರಿನ ವಿರುದ್ಧ ಪ್ರತಿಭಟಿಸಿದ ಚರ್ಚ್‌ನ ಬ್ಯಾಂಕ್ ಖಾತೆಗಳನ್ನು ಸ್ಥಗಿತಗೊಳಿಸಿದ ಮೋದಿ ಸರಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....