Homeಮುಖಪುಟದ್ವೇಷ ಭಾಷಣ: ಮೋದಿ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಚುನಾವಣಾ ಆಯೋಗಕ್ಕೆ ಪತ್ರ ಬರೆದ 2,200ಕ್ಕೂ ಹೆಚ್ಚು...

ದ್ವೇಷ ಭಾಷಣ: ಮೋದಿ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಚುನಾವಣಾ ಆಯೋಗಕ್ಕೆ ಪತ್ರ ಬರೆದ 2,200ಕ್ಕೂ ಹೆಚ್ಚು ನಾಗರಿಕರು

- Advertisement -
- Advertisement -

ರಾಜಸ್ಥಾನದ ಬನ್ಸ್ವಾರದಲ್ಲಿ ಮುಸ್ಲಿಮರ ವಿರುದ್ಧ ದ್ವೇಷದ ಹೇಳಿಕೆಗಳನ್ನು ನೀಡಿದ ಬಿಜೆಪಿಯ ಸ್ಟಾರ್ ಪ್ರಚಾರಕ, ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಕ್ರಮ ಕೈಗೊಳ್ಳುವಂತೆ 2,200ಕ್ಕೂ ಹೆಚ್ಚು ನಾಗರಿಕರು ಚುನಾವಣಾ ಆಯೋಗಕ್ಕೆ ಪತ್ರ ಬರೆದಿದ್ದಾರೆ. ಆದರೆ ಚುನಾವಣಾ ಆಯೋಗ ಈವರೆಗೆ ಪ್ರಧಾನಿ ವಿರುದ್ಧ ಯಾವುದೇ ಕ್ರಮವನ್ನು ಕೈಗೊಳ್ಳದೆ ಮೌನವನ್ನು ಮುಂದುವರಿಸಿದೆ.

ಮೋದಿಯ ದ್ವೇಷ ಪೂರಿತ ಹೇಳಿಕೆಯು ಭಾರತದ ಮುಸ್ಲಿಮರ ಮೇಲಿನ ಅಪಾಯಕಾರಿ ಮತ್ತು ನೇರ ದಾಳಿ ಎಂದು ಕರೆದ ನಾಗರಿಕರ ಗುಂಪು ಚುನಾವಣಾ ಆಯೋಗಕ್ಕೆ ಸಲ್ಲಿಸಿದ ಮನವಿಯಲ್ಲಿ ಹೇಳಿದೆ. ಇದು ಸಂವಿಧಾನವನ್ನು ಗೌರವಿಸುವ ಲಕ್ಷಾಂತರ ನಾಗರಿಕರ ಭಾವನೆಗಳಿಗೆ ಘಾಸಿಗೊಳಿಸಿದೆ ಎಂದು ಚುನಾವಣಾ ಆಯೋಗಕ್ಕೆ ಹೇಳಲಾಗಿದೆ.

ರಾಜಸ್ಥಾನದ ಬನ್ಸ್ವಾರದಲ್ಲಿ ಚುನಾವಣಾ ಸಮಾವೇಶದಲ್ಲಿ ಮಾತನಾಡಿದ ನರೇಂದ್ರ ಮೋದಿ, ಈ ದೇಶದ ಸಂಪತ್ತನ್ನು ಹೆಚ್ಚು ಮಕ್ಕಳನ್ನು ಹೆರುವ ಮುಸ್ಲಿಮ್ ಸಮುದಾಯಕ್ಕೆ ನೀಡುವುದೇ ಕಾಂಗ್ರೆಸ್‌ನ ಗ್ಯಾರಂಟಿ ಎಂದು ಹೇಳಿದ್ದು, ಮುಸ್ಲಿಂ ಅಲ್ಪಸಂಖ್ಯಾತರನ್ನು “ಒಳನುಸುಳುವವರು” ಮತ್ತು “ಹೆಚ್ಚು ಮಕ್ಕಳನ್ನು ಹೊಂದಿರುವವರು” ಎಂದು ಹೇಳಿದ್ದಾರೆ. ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ದೇಶದ ಸಂಪತ್ತನ್ನು “ಒಳನುಸುಳುಕೋರರು” ಮತ್ತು “ಹೆಚ್ಚು ಮಕ್ಕಳನ್ನು ಹೊಂದಿರುವವರಿಗೆ” ಹಂಚಬಹುದು ಎಂದು ಹೇಳಿ ವಿವಾದವನ್ನು ಸೃಷ್ಟಿಸಿದ್ದರು.

ದೇಶದ ವೈಯಕ್ತಿಕ ಆಸ್ತಿಗಳನ್ನು ಕಸಿದು, ಅದನ್ನು ಮುಸ್ಲಿಮರಿಗೆ ಕಾಂಗ್ರೆಸ್ ಹಂಚಲಿದೆ. ಇದು ನಗರ ನಕ್ಸಲರ ಯೋಜನೆಯಾಗಿದೆ. ಈ ‘ನಗರ ನಕ್ಸಲ್’ ಮನಸ್ಥಿತಿಯಿಂದ ತಾಯಂದಿರೇ ಮತ್ತು ಸಹೋದರಿಯರೇ, ಅವರು ನಿಮ್ಮ ‘ಮಂಗಲಸೂತ್ರ’ವನ್ನು ಸಹ ಬಿಡುವುದಿಲ್ಲ. ಅವರು ಆ ಮಟ್ಟಕ್ಕೆ ಹೋಗಬಹುದು. ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಅವರು ತಾಯಿ ಮತ್ತು ಸಹೋದರಿಯರ ಚಿನ್ನವನ್ನು ಲೆಕ್ಕ ಹಾಕುತ್ತಾರೆ, ಅದರ ಬಗ್ಗೆ ಮಾಹಿತಿ ಪಡೆದು ನಂತರ ಆ ಆಸ್ತಿಯನ್ನು ಹಂಚುತ್ತಾರೆ. ಅವರು ಅದನ್ನು ಯಾರಿಗೆ ಹಂಚುತ್ತಾರೆ? ಮನಮೋಹನ್ ಸಿಂಗ್ ಅವರ ಸರ್ಕಾರವು ದೇಶದ ಆಸ್ತಿಯಲ್ಲಿ ಮುಸ್ಲಿಮರಿಗೆ ಮೊದಲ ಹಕ್ಕು ಎಂದು ಹೇಳಿತ್ತು. ಇದನ್ನು ನುಸುಳುಕೋರರಿಗೆ ವಿತರಿಸಲಾಗುವುದು. ನೀವು ಕಷ್ಟಪಟ್ಟು ಸಂಪಾದಿಸಿದ ಹಣ ನುಸುಳುಕೋರರಿಗೆ ಹೋಗಬೇಕೇ? ನೀವು ಇದನ್ನು ಅನುಮೋದಿಸುತ್ತೀರಾ? ಇದು ನಿಮಗೆ ಸ್ವೀಕಾರಾರ್ಹವೇ? ನೀವು ಕಷ್ಟಪಟ್ಟು ಸಂಪಾದಿಸಿದ ನಿಮ್ಮ ಆಸ್ತಿಯನ್ನು ಮುಟ್ಟುಗೋಲು ಹಾಕಿಕೊಳ್ಳುವ ಹಕ್ಕು ಸರ್ಕಾರಗಳಿಗೆ ಇದೆಯೇ? ತಾಯಂದಿರ ಮಂಗಳಸೂತ್ರದ ಮೌಲ್ಯವು ಚಿನ್ನ ಅಥವಾ ಅದರ ಬೆಲೆಯಲ್ಲಿಲ್ಲ, ಆದರೆ ಜೀವನದಲ್ಲಿ ಅವಳ ಕನಸುಗಳಿಗೆ ಸಂಬಂಧಿಸಿದೆ ಮತ್ತು ನೀವು ಅದನ್ನು ಕಸಿದುಕೊಳ್ಳುವ ಬಗ್ಗೆ ಮಾತನಾಡುತ್ತಿದ್ದೀರಾ? ಎಂದು ಪ್ರಧಾನಿ ಮೋದಿ ಪ್ರಶ್ನಿಸಿದ್ದರು.

ಈ ಬಗ್ಗೆ ಚುನಾವಣಾ ಆಯೋಗದ ಗಮನವನ್ನು ಸೆಳೆದ ನಾಗರಿಕರ ಗುಂಪು, ಮತಗಳನ್ನು ಹುಡುಕುವ ಪ್ರಯತ್ನದಲ್ಲಿ ಮೋದಿಯವರ ಭಾಷೆ ವಿಶ್ವದಲ್ಲಿ ಪ್ರಜಾಪ್ರಭುತ್ವದ ತಾಯಿ ಎಂದು ಕರೆಯಲ್ಪಡುವ ಭಾರತದ ಘನತೆಗೆ ಗಂಭೀರ ಹಾನಿಯನ್ನುಂಟು ಮಾಡುತ್ತದೆ ಎಂದು ಹೇಳಿದ್ದಾರೆ.

ಇಂತಹ ದ್ವೇಷ ಭಾಷಣದ ವಿರುದ್ಧ ಯಾವುದೇ ಕ್ರಮ ಕೈಗೊಳ್ಳಲು ಚುನಾವಣಾ ಆಯೋಗದ ವಿಫಲತೆಯು ಅದರ ವಿಶ್ವಾಸಾರ್ಹತೆ ಮತ್ತು ಸ್ವಾಯತ್ತತೆಯನ್ನು ದುರ್ಬಲಗೊಳಿಸುತ್ತದೆ ಎಂದು ಪತ್ರದಲ್ಲಿ ಹೇಳಲಾಗಿದೆ.

ಇದಲ್ಲದೆ ಕಮ್ಯುನಿಸ್ಟ್ ಫಾರ್ಟಿ ಆಫ್ ಇಂಡಿಯಾ (ಮಾರ್ಕ್ಸ್‌ವಾದಿ) ಮೋದಿ ಭಾಷಣದ ವಿರುದ್ಧ ದೆಹಲಿಯ ಪೊಲೀಸ್ ಆಯುಕ್ತರಿಗೆ ದೂರು ಸಲ್ಲಿಸಿದೆ. ಎಡಪಕ್ಷಗಳು ಈ ಹಿಂದೆ ತಮ್ಮ ದೂರು ದಾಖಲಿಸಲು ದೆಹಲಿಯ ಮಂದಿರ್ ಮಾರ್ಗ್ ಪೊಲೀಸ್ ಠಾಣೆಯನ್ನು ಸಂಪರ್ಕಿಸಿದ್ದರು. ಆದರೆ ದೂರು ಸ್ವೀಕರಿಸಲು ನಿರಾಕರಿಸಿದ ಕಾರಣ ದೂರನ್ನು ದೆಹಲಿ ಪೊಲೀಸ್‌ ಆಯುಕ್ತರಿಗೆ ನೀಡಲಾಗಿದೆ.

21.04.2024ರಂದು ರಾಜಸ್ಥಾನದ ಭನ್ಸ್ವಾರಾದಲ್ಲಿ ಚುನಾವಣಾ ರ್ಯಾಲಿಯಲ್ಲಿ ಮೋದಿ ಮಾಡಿದ ಭಾಷಣದಲ್ಲಿ, ಉದ್ದೇಶಪೂರ್ವಕವಾಗಿ ಮುಸ್ಲಿಂ ವಿರೋಧಿ ಹೇಳಿಕೆಗಳನ್ನು ನೀಡಲಾಗಿದೆ. ಪ್ರಧಾನಿ ಮಾಡಿದಂತೆ ದ್ವೇಷ ಭಾಷಣದ ಮೂಲಕ ಮತ ಯಾಚನೆ ಮಾಡುವುದು ಸಂಪೂರ್ಣ ಕಾನೂನುಬಾಹಿರವಾಗಿದೆ ಎಂದು ಸಿಪಿಐ (ಎಂ) ತನ್ನ ಪತ್ರದಲ್ಲಿ ತಿಳಿಸಿತ್ತು.

ಕಾಂಗ್ರೆಸ್‌ ಪಕ್ಷದ ‘ಸಂಪತ್ತು ಮರು ಹಂಚಿಕೆ’ ಭರವಸೆಯನ್ನು ಟೀಕಿಸುವ ಭರದಲ್ಲಿ ಮುಸ್ಲಿಂ ಸಮುದಾಯದ ಕುರಿತು ವಿವಾದಾತ್ಮಕ ಹೇಳಿಕೆ ನೀಡಿದ್ದ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಚುನಾವಣಾ ಆಯೋಗಕ್ಕೆ ಕಾಂಗ್ರೆಸ್ ಪಕ್ಷ ಕೂಡ ದೂರು ನೀಡಿತ್ತು.

ಇದನ್ನು ಓದಿ: ಜನದ್ರೋಹಿ ಬಿಜೆಪಿ ಸರಕಾರವನ್ನು ಸೋಲಿಸಿ, ಜನಪರ ಸರ್ಕಾರವನ್ನು ಅಧಿಕಾರಕ್ಕೆ ತರಬೇಕು: ಸಂವಿಧಾನ ಪರ ಸಂಘಟನೆಗಳ ಒಕ್ಕೂಟ ಆಗ್ರಹ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...