Homeಮುಖಪುಟಮುಂದುವರಿದ ಬಿಜೆಪಿ ನಾಯಕರ ದ್ವೇಷ ಭಾಷಣ; 'ಕಾಂಗ್ರೆಸ್ ದೇಶದಲ್ಲಿ ಷರಿಯಾ ಕಾನೂನು ಜಾರಿಗೆ ತರಲಿದೆ' ಎಂದ...

ಮುಂದುವರಿದ ಬಿಜೆಪಿ ನಾಯಕರ ದ್ವೇಷ ಭಾಷಣ; ‘ಕಾಂಗ್ರೆಸ್ ದೇಶದಲ್ಲಿ ಷರಿಯಾ ಕಾನೂನು ಜಾರಿಗೆ ತರಲಿದೆ’ ಎಂದ ಯುಪಿ ಸಿಎಂ

- Advertisement -
- Advertisement -

ಸಂಪತ್ತು ಮರು ಹಂಚಿಕೆ ಕುರಿತು ದ್ವೇಷ ಭಾಷಣ ಮಾಡಿದ್ದ ಪ್ರಧಾನಿ ನರೇಂದ್ರ ಮೋದಿಯವರ ನಂತರ, ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಕೂಡ ಮಂಗಳವಾರ ಕಾಂಗ್ರೆಸ್ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ. ‘ಕಾಂಗ್ರೆಸ್ ಪಕ್ಷವು ತನ್ನ ಚುನಾವಣಾ ಪ್ರಣಾಳಿಕೆಯಲ್ಲಿ ದೇಶದಲ್ಲಿ ‘ಷರಿಯಾ ಕಾನೂನನ್ನು’ ಜಾರಿಗೊಳಿಸುವ ಮತ್ತು ಜನರ ಆಸ್ತಿಯನ್ನು ಮರುಹಂಚಿಕೆ ಮಾಡುವ ಉದ್ದೇಶವನ್ನು ವ್ಯಕ್ತಪಡಿಸಿದೆ’ ಎಂದು ಹೇಳಿದ್ದಾರೆ.

ಅಮ್ರೋಹಾದಲ್ಲಿ ಚುನಾವಣಾ ರ್ಯಾಲಿಯನ್ನುದ್ದೇಶಿಸಿ ಮಾತನಾಡಿದ ಆದಿತ್ಯನಾಥ್, “ಕಾಂಗ್ರೆಸ್ ಮತ್ತು ಅದರ ಮಿತ್ರ ಪಕ್ಷಗಳು ದೇಶಕ್ಕೆ ದ್ರೋಹ ಬಗೆದಿವೆ ಮತ್ತು ಮತ್ತೊಮ್ಮೆ ತಮ್ಮ ಸುಳ್ಳು ಪ್ರಣಾಳಿಕೆಯೊಂದಿಗೆ ನಿಮ್ಮ ಬಳಿಗೆ ಬಂದಿವೆ. ನೀವು ಕಾಂಗ್ರೆಸ್‌ನ ಪ್ರಣಾಳಿಕೆಯನ್ನು ನೋಡಿದರೆ, ಅವರು ಸರ್ಕಾರ ರಚಿಸಿದರೆ, ನಾವು ಷರಿಯಾ ಕಾನೂನನ್ನು ಜಾರಿಗೆ ತರುತ್ತೇವೆ ಎಂದಿದ್ದಾರೆ. ನೀವು ಹೇಳಿ, ಈ ದೇಶವನ್ನು ಬಾಬಾ ಸಾಹೇಬ್ ಭೀಮರಾವ್ ಅಂಬೇಡ್ಕರ್ ರಚಿಸಿದ ಸಂವಿಧಾನದಿಂದ ನಡೆಸುತ್ತದೆಯೇ ಅಥವಾ ಶರಿಯತ್ ಮೂಲಕ ನಡೆಸುತ್ತದೆಯೇ” ಎಂದಿದ್ದಾರೆ.

“ಕಾಂಗ್ರೆಸ್ ಜನರು ತಮ್ಮ ಪ್ರಣಾಳಿಕೆಯಲ್ಲಿ ‘ವ್ಯಕ್ತಿಗಾತ್ ಕಾನೂನ್’ (ವೈಯಕ್ತಿಕ ಕಾನೂನುಗಳನ್ನು ಜಾರಿಗೆ ತರುವುದಾಗಿ ಹೇಳುತ್ತಾರೆ) ಅಂದರೆ, ಮೋದಿಯವರು ತ್ರಿವಳಿ ತಲಾಖ್ ಪದ್ಧತಿಯನ್ನು ನಿಲ್ಲಿಸಿದ ಕಾರಣ ಷರಿಯಾ ಕಾನೂನನ್ನು ಜಾರಿಗೆ ತರಲಾಗುವುದು” ಎಂದು ಆದಿತ್ಯನಾಥ್ ಹೇಳಿದರು.

“ನಾವು ಮತ್ತೆ ವೈಯಕ್ತಿಕ ಕಾನೂನನ್ನು ಮರುಸ್ಥಾಪಿಸುತ್ತೇವೆ ಎಂದು ಅವರು ಹೇಳುತ್ತಾರೆ. ಈ ಜನರು ಷರಿಯಾ ಕಾನೂನನ್ನು ಜಾರಿಗೊಳಿಸುತ್ತಾರೆ” ಎಂದು ಆದಿತ್ಯನಾಥ್ ದಾರಿತಪ್ಪಿಸುವ ಹೇಳಿಕೆ ನೀಡಿದ್ದಾರೆ.

“ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಜನರ ಆಸ್ತಿಯನ್ನು ತೆಗೆದುಕೊಂಡು ಹಂಚುತ್ತೇವೆ ಎಂದು ಹೇಳಲಾಗಿದೆ. ನಿಮ್ಮ ಆಸ್ತಿಯನ್ನು ಕಾಂಗ್ರೆಸ್ ಮತ್ತು ಸಮಾಜವಾದಿ ಪಕ್ಷಕ್ಕೆ ಲೂಟಿ ಮಾಡಲು ನೀವು ಅನುಮತಿಸುತ್ತೀರಾ? ಈ ನಾಚಿಕೆಯಿಲ್ಲದವರ ಸ್ಥಿತಿ ನೋಡಿ, ಒಂದು ಕಡೆ ನಿಮ್ಮ ಆಸ್ತಿಯ ಮೇಲೆ ಕಣ್ಣಿಟ್ಟು, ಮತ್ತೊಂದೆಡೆ ಮಾಫಿಯಾ ಮತ್ತು ಕ್ರಿಮಿನಲ್‌ಗಳನ್ನು ತಮ್ಮ ಹಾರವನ್ನಾಗಿ ಮಾಡಿಕೊಂಡು, ಅವರ ಹೆಸರಿನಲ್ಲಿ ಫಾತಿಹಾ ಓದುತ್ತಿದ್ದಾರೆ” ಎಂದು ಅವರು ಹೇಳಿದರು.

2006ರಲ್ಲಿ ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್ ಹೇಳಿದ್ದಾರೆ ಎನ್ನಲಾದ ಮಾತುಗಳನ್ನು ಉಲ್ಲೇಖಿಸಿದ ಯೋಗಿ ಆದಿತ್ಯನಾಥ್, “ಡಾ.ಮನಮೋಹನ್ ಸಿಂಗ್ ಅವರು ಪ್ರಧಾನಿಯಾಗಿದ್ದಾಗ ದೇಶದ ಸಂಪನ್ಮೂಲಗಳ ಮೇಲೆ ಮುಸ್ಲಿಮರಿಗೆ ಮೊದಲ ಹಕ್ಕಿದೆ ಎಂದು ಹೇಳಿದ್ದರು… ಹಾಗಾದರೆ, ಎಲ್ಲಿ ನಮ್ಮ ದಲಿತರು, ಹಿಂದುಳಿದವರು, ಖರಗವಂಶಿಗಳು, ಬಡವರು ಮತ್ತು ರೈತರು ಎಲ್ಲಿಗೆ ಹೋಗುತ್ತಾರೆ, ತಾಯಂದಿರು ಮತ್ತು ಸಹೋದರಿಯರು ಎಲ್ಲಿಗೆ ಹೋಗುತ್ತಾರೆ” ಎಂದು ಪ್ರಶ್ನಿಸಿದ್ದಾರೆ.

ಮೋದಿ ಸರ್ಕಾರದ ಅವಧಿಯಲ್ಲಿ ಭಾರತದಲ್ಲಿ ಭಯೋತ್ಪಾದನೆ ಅಂತ್ಯಗೊಂಡಿದೆ ಎಂದು ಹೇಳಿದ ಅವರು, “10 ವರ್ಷಗಳ ಹಿಂದೆ ದೇಶದಲ್ಲಿ ಭಯ ಮತ್ತು ಭಯೋತ್ಪಾದನೆಯ ವಾತಾವರಣವಿತ್ತು, ಜನರು ಭಯಭೀತರಾಗಿದ್ದರು, 2014 ರ ನಂತರ ಭಯೋತ್ಪಾದನೆಯನ್ನು ನಿಯಂತ್ರಿಸಲಾಯಿತು. 2019 ರ ಹೊತ್ತಿಗೆ ಭಯೋತ್ಪಾದನೆಯ ಮೂಲ ಜಮ್ಮು ಕಾಶ್ಮೀರದ 370 ನೇ ವಿಧಿಯನ್ನು ರದ್ದುಪಡಿಸುವಂಥ ಕೆಲಸವನ್ನು ಮೋದಿಜಿ ಮಾಡಿದರು. ಇಂದು ಭಾರತದಲ್ಲಿ ಭಯೋತ್ಪಾದನೆ ನಾಶವಾಗಿದೆ” ಎಂದು ಅವರು ಹೇಳಿದರು.

ಇದನ್ನೂ ಓದಿ; FACT CHECK: ‘ದೇಶದ ಸಂಪತ್ತಿನಲ್ಲಿ ಮೊದಲ ಅಧಿಕಾರ ಮುಸ್ಲಿಮರಿಗೆ’ ಎಂದು ಮನಮೋಹನ್ ಸಿಂಗ್ ಹೇಳಿಲ್ಲ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ. ಬಂಗಾಳ | ಬಿಜೆಪಿ ಪ್ರಚಾರ ಸಾಮಗ್ರಿ ಸಜ್ಜುಗೊಳಿಸಿದ ವಿಡಿಯೋ ವೈರಲ್ : ಚುನಾವಣಾ ಕರ್ತವ್ಯದಲ್ಲಿದ್ದ ಅಧಿಕಾರಿ ಅಮಾನತು

ಬಿಜೆಪಿ ಪ್ರಚಾರ ಸಾಮಗ್ರಿಗಳನ್ನು ತಯಾರಿಸಲು ಸಹಾಯ ಮಾಡಿದ ಆರೋಪದ ಮೇಲೆ ಪಶ್ಚಿಮ ಬಂಗಾಳದ ಉತ್ತರ 24 ಪರಗಣ ಜಿಲ್ಲೆಯ ಪಾಣಿಹಟಿ ವಿಧಾನಸಭಾ ಕ್ಷೇತ್ರದ ಅಧಿಕಾರಿಯೊಬ್ಬರನ್ನು ಚುನಾವಣಾ ಆಯೋಗ ಅಮಾನತುಗೊಳಿಸಿದೆ ಎಂದು ದಿ ಇಂಡಿಯನ್...

ಮುಸ್ಲಿಮರ ವಿರುದ್ಧ ದ್ವೇಷ ಕಾರುವ ಅಸ್ಸಾಂ ಸಿಎಂ ಪತ್ನಿ ಬಳಿ 2 ಮುಸ್ಲಿಂ ದೇಶಗಳ ಪಾಸ್‌ಪೋರ್ಟ್ ಇದೆ : ಕಾಂಗ್ರೆಸ್ ಆರೋಪ

ಮತದಾನಕ್ಕೆ ಇನ್ನೇನು ಮೂರು ದಿನಗಳು ಬಾಕಿ ಇರುವಾಗ, ಅಸ್ಸಾಂನಲ್ಲಿ ಕಾಂಗ್ರೆಸ್‌-ಬಿಜೆಪಿ ನಡುವೆ ವೈಯಕ್ತಿಕ ವಿಚಾರಗಳ ಕುರಿತ ವಾಗ್ಯುದ್ಧ ತಾರಕಕ್ಕೇರಿದೆ. ಸಿಎಂ ಹಿಮಂತ ಬಿಸ್ವಾ ಶರ್ಮಾ ಮತ್ತು ಅವರ ಪತ್ನಿ ರಿನಿಕಿ ಭುಯಾನ್ ಶರ್ಮಾ...

ದಟ್ಟಾರಣ್ಯದೊಳಗೆ ಮೂರು ದಿನಗಳನ್ನು ಕಳೆದಿದ್ದು ಹೇಗೆ..ದಾರಿ ತಪ್ಪಿದ ಬಳಿಕ ಏನಾಯ್ತು? ನಾಪತ್ತೆ ವಿಚಾರ ಬಿಚ್ಚಿಟ್ಟ ಶರಣ್ಯ

ಕಳೆದ ಗುರುವಾರ (ಏಪ್ರಿಲ್ 2, 2026) ಕೊಡಗಿನ ತಡಿಯಂಡಮೋಳ್ ಬೆಟ್ಟಕ್ಕೆ ಚಾರಣಕ್ಕೆ ತೆರಳಿ ನಾಪತ್ತೆಯಾಗಿದ್ದ ಕೇರಳದ ಯುವತಿ ಶರಣ್ಯ, ಮೂರು ದಿನಗಳ ಬಳಿಕ, ಅಂದರೆ ನಾಪತ್ತೆಯಾದ ನಾಲ್ಕನೇ ದಿನ ಭಾನುವಾರ (ಏಪ್ರಿಲ್ 4,...

ಮಗಳ ವಿಚ್ಛೇದನ: ಸಿಹಿ ಹಂಚಿ, ಮೆರವಣಿಗೆಯಲ್ಲಿ ಆಕೆಯನ್ನು ಮನೆಗೆ ಕರೆತಂದ ನೀವೃತ್ತ ನ್ಯಾಯಾದೀಶ ಮತ್ತು ಕುಟುಂಬ

ಮೀರತ್: ಕೌಟುಂಬಿಕ ನ್ಯಾಯಾಲಯದಲ್ಲಿ ಮಗಳ ವಿಚ್ಛೇದನ ಅಂತಿಮವಾದ ನಂತರ ಆಕೆಯನ್ನು ಡೋಲು, ನೃತ್ಯಗಳ ಮೆರವಣಿಗೆಯಲ್ಲಿ ಸಂಭ್ರಮದಿಂದ ತಂದೆ ಮನೆಗೆ ಕರೆತಂದ ಘಟನೆ ಮೀರನ್ ನಲ್ಲಿ ನಡೆದಿದೆ.  ಪೋಷಕರ ಬೆಂಬಲದ ಅಪರೂಪದ ಮತ್ತು ಹೃದಯಸ್ಪರ್ಶಿ ಪ್ರದರ್ಶನದಲ್ಲಿ,...

“ನೀನು ನಿಜವಾಗಿಯೂ ಅಂಬೇಡ್ಕರ್ ಮಗಳಾ ಎಂದು ತಿಳಿಯಲು ನಾವು ನಿನ್ನ ಡಿಎನ್‌ಎ ಟೆಸ್ಟ್ ಮಾಡುತ್ತೇವೆ” ದೆಹಲಿ ಸಭೆಯಲ್ಲಿ ದಲಿತ ಟ್ರಾನ್ಸ್ ಹೋರಾಟಗಾರ್ತಿ ಗ್ರೇಸ್ ಬಾನುಗೆ ಜಾತಿ ನಿಂದನೆ ಆರೋಪ

ಕೇಂದ್ರ ಸರ್ಕಾರದ ವಿವಾದಾತ್ಮಕ ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಕಾಯ್ದೆ, 2026ರ ವಿರುದ್ಧ ಕಳೆದ ಕೆಲ ವಾರಗಳಿಂದ ಇಡೀ ಟ್ರಾನ್ಸ್‌ಜೆಂಡರ್ ಮತ್ತು ಪ್ರಗತಿಪರ ಸಮುದಾಯ ಪ್ರತಿಭಟನೆ ನಡೆಸುತ್ತಿದೆ. ಈ ನಡುವೆ ಶುಕ್ರವಾರ...

‘ಮೋದಿ ಕ್ರಿಶ್ಚಿಯನ್ ಸಂಸ್ಥೆಗಳಲ್ಲಿ ಭಯ ಹುಟ್ಟಿಸಲು ಪ್ರಯತ್ನಿಸುತ್ತಿದ್ದಾರೆ’: ಎಫ್‌ಸಿಆರ್‌ಎ ತಿದ್ದುಪಡಿ ಕುರಿತು ಮಲ್ಲಿಕಾರ್ಜುನ ಖರ್ಗೆ

ಇಡುಕ್ಕಿ (ಕೇರಳ): ಸಾರ್ವಜನಿಕ ಮತ್ತು ಸಾಮಾಜಿಕ ಕಲ್ಯಾಣ ಕ್ಷೇತ್ರದಲ್ಲಿ ಕೆಲಸ ಮಾಡುವ ಕ್ರಿಶ್ಚಿಯನ್ ಸಂಸ್ಥೆಗಳು, ಎನ್‌ಜಿಒಗಳು ಮತ್ತು ನಾಗರಿಕ ಸಮಾಜದ ಮೇಲೆ ದಾಳಿ ಮಾಡಲು ಪ್ರಧಾನಿ ನರೇಂದ್ರ ಮೋದಿ ಎಫ್‌ಸಿಆರ್‌ಎ (ವಿದೇಶಿ ದೇಣಿಗೆ...

ವೈದ್ಯಕೀಯ, ತಾಂತ್ರಿಕ ಶಿಕ್ಷಣದಲ್ಲಿ ಎಸ್‌ಸಿ/ಎಸ್‌ಟಿ ಮೀಸಲಾತಿ ಹೆಚ್ಚಿಸಿದ ಒಡಿಶಾ ಸರ್ಕಾರ, ಒಬಿಸಿ ವಿದ್ಯಾರ್ಥಿಗಳಿಗೆ ಹೊಸ ಕೋಟಾ

ಮಹತ್ವದ ನಿರ್ಧಾರ ಕೈಗೊಂಡಿರುವ ಒಡಿಶಾ ಸರ್ಕಾರ, ವೈದ್ಯಕೀಯ, ಇಂಜಿನಿಯರಿಂಗ್ ಮತ್ತು ಇತರ ತಾಂತ್ರಿಕ ಹಾಗೂ ವೃತ್ತಿಪರ ಶಿಕ್ಷಣ ಕೋರ್ಸ್‌ಗಳಲ್ಲಿ ಪರಿಶಿಷ್ಟ ಪಂಗಡ (ಎಸ್‌ಟಿ), ಪರಿಶಿಷ್ಟ ಜಾತಿ (ಎಸ್‌ಸಿ) ಅಭ್ಯರ್ಥಿಗಳಿಗೆ ಮೀಸಲಾತಿಯನ್ನು ಗಣನೀಯವಾಗಿ ಹೆಚ್ಚಿಸಿದೆ....

ಶಾಲಾ ವಾರ್ಷಿಕೋತ್ಸವದಲ್ಲಿ ಲವಲವಿಕೆಯಿಂದ ಭಾಗವಹಿಸಿದ್ದ 6 ಮಕ್ಕಳು, ತಡರಾತ್ರಿ ಹೊತ್ತಿಗೆ ಶವವಾದರು : ಮಹಾರಾಷ್ಟ್ರದಲ್ಲೊಂದು ಹೃದಯ ವಿದ್ರಾವಕ ಘಟನೆ

ಶಾಲಾ ವಾರ್ಷಿಕೋತ್ಸವದಲ್ಲಿ ಬಹಳ ಉತ್ಸಾಹದಿಂದ ಭಾಗವಹಿಸಿದ್ದ ಆರು ಮಂದಿ ಮಕ್ಕಳು, ತಡ ರಾತ್ರಿ ಹೊತ್ತಿಗೆ ಶವವಾದ ಹೃದಯ ವಿದ್ರಾವಕ ಘಟನೆಯೊಂದು ಮಹಾರಾಷ್ಟ್ರದ ದಿಂಡೋರಿಯಲ್ಲಿ ಶುಕ್ರವಾರ (ಏ.3) ನಡೆದಿದೆ. ನಾಸಿಕ್‌ ನಗರದಿಂದ 20 ಕಿಲೋ...

ಕೇರಳ: ಕೊಲ್ಲಂನಲ್ಲಿ ಟಿವಿ ಚಾನೆಲ್ ಕಚೇರಿ ಮೇಲೆ ಸ್ಫೋಟಕ ವಸ್ತು ಎಸೆತ

ಕೊಲ್ಲಂ: ಇಲ್ಲಿನ ಟಿವಿ ಚಾನೆಲ್ ಒಂದರ ಕಚೇರಿಯ ಮೇಲೆ ಭಾನುವಾರ ಬೆಳಿಗ್ಗೆ ಸ್ಫೋಟಕ ವಸ್ತು ಎಸೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಪೊಲೀಸರ ಪ್ರಕಾರ, ಆ ಪ್ರದೇಶ ಮತ್ತು ಚಾನೆಲ್ ಕಚೇರಿಯ ಸಿಸಿಟಿವಿ ದೃಶ್ಯಗಳಲ್ಲಿ ಇಬ್ಬರು...

ಹತ್ಯೆಯಾದ ಇರಾನ್ ಕಮಾಂಡರ್ ಖಾಸಿಮ್ ಸುಲೈಮಾನಿ ಅವರ ಸೊಸೆ, ಮೊಮ್ಮಗಳನ್ನು ಬಂಧಿಸಿದ ಅಮೆರಿಕ

ನವದೆಹಲಿ: ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರೂಬಿಯೊ ಶುಕ್ರವಾರ ತಮ್ಮ ಶಾಶ್ವತ ನಿವಾಸಿ ಸ್ಥಾನಮಾನವನ್ನು ರದ್ದುಗೊಳಿಸಿದ ನಂತರ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (ಐಆರ್‌ಜಿಸಿ) ನ ದಿವಂಗತ ನಾಯಕ ಖಾಸಿಮ್ ಸೊಲೈಮಾನಿ ಅವರ...