Homeಫ್ಯಾಕ್ಟ್‌ಚೆಕ್FACT CHECK : ಕಾಂಗ್ರೆಸ್ ಪ್ರಣಾಳಿಕೆ ಕುರಿತು ಬಿಜೆಪಿ ಹಾಕಿರುವ ಪೋಸ್ಟ್ ಸುಳ್ಳು

FACT CHECK : ಕಾಂಗ್ರೆಸ್ ಪ್ರಣಾಳಿಕೆ ಕುರಿತು ಬಿಜೆಪಿ ಹಾಕಿರುವ ಪೋಸ್ಟ್ ಸುಳ್ಳು

- Advertisement -
- Advertisement -

“ಕಾಂಗ್ರೆಸ್ ಪ್ರಾಣಾಳಿಕೆಯಾ ಅಥವಾ ಮುಸ್ಲಿಂ ಲೀಗ್ ಪ್ರಣಾಳಿಕೆಯಾ?”

“ಶಿಕ್ಷಣ ಸಂಸ್ಥೆಗಳಲ್ಲಿ ಹಿಜಾಬ್ ಜಾರಿ, ಮುಸ್ಲಿಮರಿಗೆ ಸಂಪತ್ತಿನ ಹಂಚಿಕೆ, ಮುಸ್ಲಿಮರಿಗೆ ವಿಶೇಷ ಮೀಸಲಾತಿ, ವೈಯಕ್ತಿಕ ಕಾನೂನುಗಳನ್ನು ಅಭ್ಯಾಸ ಮಾಡುವ ಸ್ವಾತಂತ್ರ್ಯ, ಮುಸ್ಲಿಮರನ್ನು ನೇರವಾಗಿ ನ್ಯಾಯಾಧೀಶರಾಗಿ ನೇಮಿಸಬೇಕು, ಮುಸ್ಲಿಮರನ್ನು ನೇಮಿಸಿಕೊಳ್ಳಲು ಸಾರ್ವಜನಿಕ ಮತ್ತು ಖಾಸಗಿ ಸಂಸ್ಥೆಗಳಿಗೆ ಆದೇಶ ಮತ್ತು ಇನ್ನೂ ಅನೇಕ ವಿಭಜಿಸುವ ಕಾರ್ಯಸೂಚಿಗಳು”

“ಕಾಂಗ್ರೆಸ್‌ನ ಕೆಟ್ಟ ಉದ್ದೇಶ ಸ್ಪಷ್ಟವಾಗಿದೆ: ಭಾರತೀಯರು ಕಷ್ಟಪಟ್ಟು ದುಡಿದ ಹಣವನ್ನು ತೆಗೆದುಕೊಂಡು ಅದನ್ನು ಮುಸ್ಲಿಮರಿಗೆ ಉಡುಗೊರೆಯಾಗಿ ನೀಡುವುದು. ಅವರು ನಮ್ಮ ಭೂಮಿ, ಸಂಪತ್ತು ಮತ್ತು ಹಕ್ಕುಗಳನ್ನು ವಶಪಡಿಸಿಕೊಳ್ಳುತ್ತಾರೆ, ಅವುಗಳನ್ನು ‘ಶಾಂತಿಯುತರಿಗೆ’ ಉಡುಗೊರೆಯಾಗಿ ನೀಡುತ್ತಾರೆ”

“ವಾಸ್ತವವಾಗಿ, ಸಿಎಂ ಸಿದ್ದರಾಮಯ್ಯ ಅವರು ಈಗಾಗಲೇ ಎಸ್‌ಸಿ/ಎಸ್‌ಟಿ ನಿಧಿಯನ್ನು ಕಸಿದುಕೊಂಡು ಮುಸ್ಲಿಮರಿಗೆ ‘ಸಂಪತ್ತು ವಿತರಣೆ’ ಆರಂಭಿಸಿದ್ದಾರೆ” ಈ ರೀತಿ ಪೋಸ್ಟ್ ಒಂದನ್ನು ಬಿಜೆಪಿ ಕರ್ನಾಟಕ ತನ್ನ ಅಧಿಕೃತ ಎಕ್ಸ್ ಖಾತೆಯಲ್ಲಿ ಹಾಕಿದೆ. ಜೊತೆಗೆ ಕಾಂಗ್ರೆಸ್ ಪಕ್ಷದ ಚುನಾವಣಾ ಪ್ರಣಾಳಿಕೆಯ ಕೆಲ ಸ್ಕ್ರೀನ್ ಶಾಟ್‌ಗಳನ್ನು ಹಂಚಿಕೊಂಡಿದೆ.

ಪೋಸ್ಟ್ ಲಿಂಕ್ ಇಲ್ಲಿದೆ 

ಫ್ಯಾಕ್ಟ್‌ಚೆಕ್ : ಬಿಜೆಪಿ ಹೇಳಿರುವಂತೆ ಕಾಂಗ್ರೆಸ್ ಪ್ರಾಣಾಳಿಕೆಯಲ್ಲಿ ಮುಸ್ಲಿಂ ಪರ ಭರವಸೆಗಳನ್ನು ನೀಡಲಾಗಿದೆಯಾ? ಎಂಬುವುದರ ಸತ್ಯಾಸತ್ಯತೆಯನ್ನು ನಾನುಗೌರಿ.ಕಾಂ ಪರಿಶೀಲನೆ ನಡೆಸಿದೆ.

ಇದಕ್ಕಾಗಿ ನಾವು, ಕಾಂಗ್ರೆಸ್‌ ಬಿಡುಗಡೆ ಮಾಡಿರುವ ಲೋಕಸಭೆ ಚುನಾವಣೆಯ ಪ್ರಣಾಳಿಕೆಯನ್ನು ಪರಿಶೀಲಿಸಿದ್ದೇವೆ. ಕಾಂಗ್ರೆಸ್‌ ಅಧಿಕೃತ ವೆಬ್‌ಸೈಟ್‌ನಲ್ಲಿರುವ ಪ್ರಣಾಳಿಕೆಯ 7 ಮತ್ತು 8ನೇ ಪುಟಗಳಲ್ಲಿ ‘ಭಾಷೆ ಮತ್ತು ಧಾರ್ಮಿಕ ಅಲ್ಪ ಸಂಖ್ಯಾತರಿಗೆ’ ಸಂಬಂಧಪಟ್ಟಂತೆ ಭರವಸೆಗಳನ್ನು ನೀಡಲಾಗಿದೆ. ಅವುಗಳು ಹೀಗಿವೆ..

1. ಸಂವಿಧಾನದ 15, 16, 25, 26, 28, 29 ಮತ್ತು 30ನೇ ವಿಧಿಗಳ ಅಡಿಯಲ್ಲಿ ಒಬ್ಬರ ನಂಬಿಕೆಯನ್ನು ಆಚರಿಸುವ ಮೂಲಭೂತ ಹಕ್ಕು ಮತ್ತು ಧಾರ್ಮಿಕ ಅಲ್ಪಸಂಖ್ಯಾತರಿಗೆ ಖಾತರಿಪಡಿಸಿದ ಹಕ್ಕುಗಳನ್ನು ನಾವು ಗೌರವಿಸುತ್ತೇವೆ ಮತ್ತು ಎತ್ತಿ ಹಿಡಿಯುತ್ತೇವೆ.

2. ಸಂವಿಧಾನದ 15, 16, 29 ಮತ್ತು 30 ನೇ ವಿಧಿಗಳ ಅಡಿಯಲ್ಲಿ ಖಾತರಿಪಡಿಸಿದ ಭಾಷಾ ಅಲ್ಪಸಂಖ್ಯಾತರ ಹಕ್ಕುಗಳನ್ನು ನಾವು ಗೌರವಿಸುತ್ತೇವೆ ಮತ್ತು ಎತ್ತಿ ಹಿಡಿಯುತ್ತೇವೆ.

3. ಶಿಕ್ಷಣ, ಉದ್ಯೋಗ, ವ್ಯವಹಾರ, ಸೇವೆಗಳು, ಕ್ರೀಡೆ, ಕಲೆ ಮತ್ತು ಇತರ ಕ್ಷೇತ್ರಗಳಲ್ಲಿ ಹೆಚ್ಚುತ್ತಿರುವ ಅವಕಾಶಗಳ ಸಂಪೂರ್ಣ ಲಾಭವನ್ನು ಪಡೆಯಲು ಅಲ್ಪಸಂಖ್ಯಾತರಿಗೆ ಸೇರಿದ ವಿದ್ಯಾರ್ಥಿಗಳು ಮತ್ತು ಯುವಕರನ್ನು ನಾವು ಪ್ರೋತ್ಸಾಹಿಸುತ್ತೇವೆ ಮತ್ತು ಸಹಾಯ ಮಾಡುತ್ತೇವೆ.

4. ನಾವು ವಿದೇಶದಲ್ಲಿ ಅಧ್ಯಯನಕ್ಕಾಗಿ ಮೌಲಾನಾ ಆಜಾದ್ ವಿದ್ಯಾರ್ಥಿವೇತನವನ್ನು ಪುನಃ ಸ್ಥಾಪಿಸುತ್ತೇವೆ ಮತ್ತು ವಿದ್ಯಾರ್ಥಿವೇತನದ ಸಂಖ್ಯೆಯನ್ನು ಹೆಚ್ಚಿಸುತ್ತೇವೆ.

5. ಅಲ್ಪಸಂಖ್ಯಾತರ ಆರ್ಥಿಕ ಸಬಲೀಕರಣವು ಭಾರತವು ತನ್ನ ಸಂಪೂರ್ಣ ಸಾಮರ್ಥ್ಯವನ್ನು ಅರಿತುಕೊಳ್ಳಲು ಅಗತ್ಯವಾದ ಹೆಜ್ಜೆಯಾಗಿದೆ. ಬ್ಯಾಂಕ್‌ಗಳು ಅಲ್ಪಸಂಖ್ಯಾತರಿಗೆ ಯಾವುದೇ ತಾರತಮ್ಯವಿಲ್ಲದೆ ಸಾಂಸ್ಥಿಕ ಸಾಲವನ್ನು ಒದಗಿಸುತ್ತವೆ ಎಂದು ನಾವು ಖಚಿತಪಡಿಸುತ್ತೇವೆ.

6. ಅಲ್ಪಸಂಖ್ಯಾತರು ಶಿಕ್ಷಣ, ಆರೋಗ್ಯ, ಸಾರ್ವಜನಿಕ ಉದ್ಯೋಗ, ಲೋಕೋಪಯೋಗಿ ಒಪ್ಪಂದಗಳು, ಕೌಶಲ್ಯ ಅಭಿವೃದ್ಧಿ, ಕ್ರೀಡೆ ಮತ್ತು ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ತಾರತಮ್ಯವಿಲ್ಲದೆ ತಮ್ಮ ನ್ಯಾಯಯುತ ಪಾಲನ್ನು ಪಡೆಯುವುದನ್ನು ನಾವು ಖಚಿತಪಡಿಸುತ್ತೇವೆ.

7. ಪ್ರತಿಯೊಬ್ಬ ನಾಗರಿಕನಂತೆ, ಅಲ್ಪಸಂಖ್ಯಾತರಿಗೂ ಉಡುಗೆ, ಆಹಾರ, ಭಾಷೆ ಮತ್ತು ವೈಯಕ್ತಿಕ ಕಾನೂನುಗಳ ಆಯ್ಕೆಯ ಸ್ವಾತಂತ್ರ್ಯವಿದೆ ಎಂದು ಕಾಂಗ್ರೆಸ್ ಖಚಿತಪಡಿಸುತ್ತೇವೆ.

8. ನಾವು ವೈಯಕ್ತಿಕ ಕಾನೂನುಗಳ ಸುಧಾರಣೆಯನ್ನು ಪ್ರೋತ್ಸಾಹಿಸುತ್ತೇವೆ. ಅಂತಹ ಸುಧಾರಣೆಯನ್ನು ಸಂಬಂಧಪಟ್ಟ ಸಮುದಾಯಗಳ ಭಾಗವಹಿಸುವಿಕೆ ಮತ್ತು ಒಪ್ಪಿಗೆಯೊಂದಿಗೆ ಕೈಗೊಳ್ಳಬೇಕು.

9. ಸಂವಿಧಾನದ ಎಂಟನೇ ಪರಿಚ್ಛೇದಕ್ಕೆ ಹೆಚ್ಚಿನ ಭಾಷೆಗಳನ್ನು ಸೇರಿಸುವ ದೀರ್ಘಕಾಲದ ಬೇಡಿಕೆಗಳನ್ನು ಈಡೇರಿಸುವುದಾಗಿ ಕಾಂಗ್ರೆಸ್ ಭರವಸೆ ನೀಡಿದೆ.

‘ನ್ಯಾಯಪತ್ರ’ ಎಂಬ ಹೆಸರಿನ 48 ಪುಟಗಳ ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಎಲ್ಲೂ ಬಿಜೆಪಿ ಹೇಳಿದಂತೆ “ಶಿಕ್ಷಣ ಸಂಸ್ಥೆಗಳಲ್ಲಿ ಹಿಜಾಬ್ ಜಾರಿ, ಮುಸ್ಲಿಮರಿಗೆ ಸಂಪತ್ತಿನ ಹಂಚಿಕೆ, ಮುಸ್ಲಿಮರಿಗೆ ವಿಶೇಷ ಮೀಸಲಾತಿ, ವೈಯಕ್ತಿಕ ಕಾನೂನುಗಳನ್ನು ಅಭ್ಯಾಸ ಮಾಡುವ ಸ್ವಾತಂತ್ರ್ಯ, ಮುಸ್ಲಿಮರನ್ನು ನೇರವಾಗಿ ನ್ಯಾಯಾಧೀಶರಾಗಿ ನೇಮಿಸಬೇಕು, ಮುಸ್ಲಿಮರನ್ನು ನೇಮಿಸಿಕೊಳ್ಳಲು ಸಾರ್ವಜನಿಕ ಮತ್ತು ಖಾಸಗಿ ಸಂಸ್ಥೆಗಳಿಗೆ ಆದೇಶ” ಎಂಬ ಭರವಸೆಗಳನ್ನು ನೀಡಿಲ್ಲ.

ಬಿಜೆಪಿ ತನ್ನ ಎಕ್ಸ್ ಪೋಸ್ಟ್‌ನಲ್ಲಿ ಕಾಂಗ್ರೆಸ್ ಪ್ರಣಾಳಿಕೆಯ 5 ಸ್ಕ್ರೀನ್‌ ಶಾಟ್‌ಗಳನ್ನು ಹಂಚಿಕೊಂಡಿದೆ. ಅದರಲ್ಲೂ ಬಿಜೆಪಿ ಉಲ್ಲೇಖಿಸಿದ ಅಂಶಗಳು ಇಲ್ಲ.

1. ಬಿಜೆಪಿ ಹಂಚಿಕೊಂಡ ಸ್ಕ್ರೀನ್ ಶಾಟ್‌ಗಳಲ್ಲಿ ಸಾಮಾಜಿಕ ಆರ್ಥಿಕ ಮತ್ತು ಜಾತಿ ಗಣತಿ ನಡೆಸುತ್ತೇವೆ. ಅದರ ಆಧಾರದ ಮೇಲೆ ಯೋಜನೆಗಳನ್ನು ರೂಪಿಸುತ್ತೇವೆ.

2. ಸಂವಿಧಾನಕ್ಕೆ ತಿದ್ದುಪಡಿ ತಂದು ಎಸ್‌ಸಿ, ಎಸ್‌ಟಿ, ಒಬಿಸಿ ಮೀಸಲಾತಿಯ 50 ಶೇ. ಮಿತಿಯನ್ನು ತೆಗೆಯುತ್ತೇವೆ.

3. ಅಲ್ಪಸಂಖ್ಯಾತರ ಆರ್ಥಿಕ ಸಬಲೀಕರಣವು ಭಾರತವು ತನ್ನ ಸಂಪೂರ್ಣ ಸಾಮರ್ಥ್ಯವನ್ನು ಅರಿತುಕೊಳ್ಳಲು ಅಗತ್ಯವಾದ ಹೆಜ್ಜೆಯಾಗಿದೆ. ಬ್ಯಾಂಕ್‌ಗಳು ಅಲ್ಪಸಂಖ್ಯಾತರಿಗೆ ಯಾವುದೇ ತಾರತಮ್ಯವಿಲ್ಲದೆ ಸಾಂಸ್ಥಿಕ ಸಾಲವನ್ನು ಒದಗಿಸುತ್ತವೆ ಎಂದು ನಾವು ಖಚಿತಪಡಿಸುತ್ತೇವೆ.

4. ಕಾಂಗ್ರೆಸ್ ವೈವಿಧ್ಯ ಆಯೋಗ ಸ್ಥಾಪಿಸಲಿದೆ, ಮಹಿಳೆಯರು ಮತ್ತು ಎಸ್‌ಸಿ ,ಎಸ್‌ಟಿ ಮತ್ತು ಒಬಿಸಿ ಮತ್ತು ಅಲ್ಪ ಸಂಖ್ಯಾತ ವರ್ಗದ ಹೆಚ್ಚು ಜನರನ್ನು ಹೈಕೋರ್ಟ್ ಮತ್ತು ಸುಪ್ರೀಂ ಕೋರ್ಟ್ ನ್ಯಾಯಾಧೀಶರನ್ನಾಗಿ ನೇಮಿಸುತ್ತೇವೆ ಎಂದು ಭರವಸೆ ನೀಡುತ್ತೇವೆ ಎಂದು ಹೇಳಿದೆ.

ಪ್ರಮುಖ ವಿಷಯವೆಂದರೆ, ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಭಾಷೆ ಮತ್ತು ಧಾರ್ಮಿಕ ಅಲ್ಪ ಸಂಖ್ಯಾತರಿಗೆ ನೀಡಿದ ಭರವಸೆಗಳಲ್ಲಿ ಎಸ್‌ಸಿ, ಎಸ್‌ಟಿ, ಒಬಿಸಿ ಮತ್ತು ಇತರ ಅಲ್ಪ ಸಂಖ್ಯಾತರು ಎಂದು ಉಲ್ಲೇಖಿಸಿದೆಯೇ ಹೊರತು, ಎಲ್ಲೂ ಮುಸ್ಲಿಮರಿಗೆ ಎಂದು ಹೇಳಿಲ್ಲ. ಭಾರತದಲ್ಲಿ ಅಲ್ಪ ಸಂಖ್ಯಾತರು ಎಂದರೆ ಕೇವಲ ಮುಸ್ಲಿಮರಲ್ಲ. ಮುಸ್ಲಿಂ, ಕ್ರಿಶ್ಚಿಯನ್, ಜೈನ, ಬೌದ್ಧ, ಪಾರ್ಸಿಗಳು ಈ ದೇಶದ ಅಲ್ಪ ಸಂಖ್ಯಾತರು. ಹಾಗಾಗಿ, ಪ್ರಣಾಳಿಕೆಯಲ್ಲಿ ಅಲ್ಪ ಸಂಖ್ಯಾತರು ಎಂದರೂ, ಅದು ಕೇವಲ ಮುಸ್ಲಿಮರು ಎಂದು ಆಗುವುದಿಲ್ಲ.

ಹಾಗಾಗಿ, ಬಿಜೆಪಿ ತನ್ನ ಎಕ್ಸ್ ಖಾತೆಯಲ್ಲಿ ಕಾಂಗ್ರೆಸ್ ಪ್ರಣಾಳಿಕೆ ಕುರಿತು ಹಾಕಿರುವ ಪೋಸ್ಟ್ ಸಂಪೂರ್ಣ ಸುಳ್ಳು. ಇದೇ ರೀತಿಯ ಸುಳ್ಳು ಪೋಸ್ಟ್ ಅನ್ನು ಕೆಲ ದಿನಗಳ ಹಿಂದೆ ಸ್ಟಾರ್ ಬಾಯ್ ತರುಣ್ ಎಂಬ ಎಕ್ಸ್ ಬಳಕೆದಾರನೊಬ್ಬ ಹಾಕಿದ್ದ. “ಕಾಂಗ್ರೆಸ್ ಪ್ರಣಾಳಿಕೆ ಭಯಾನಕವಾಗಿದೆ. ನನ್ನ ಜೀವನದಲ್ಲಿ ಇಂತಹ ಅಪಾಯಕಾರಿ ಪ್ರಣಾಳಿಕೆಯನ್ನು ನೋಡಿಲ್ಲ” ಎಂದಿದ್ದ. ಆಗ ನಾನುಗೌರಿ. ಕಾಂ ಸತ್ಯಾಸತ್ಯತೆ ಪರಿಶೀಲನೆ ನಡೆಸಿದೆ. ಅದರ ಲಿಂಕ್ ಕೆಳಗಿದೆ.

Fact Check: ಕಾಂಗ್ರೆಸ್‌ ಪ್ರಣಾಳಿಕೆ ದೇಶಕ್ಕೆ ಅಪಾಯಕಾರಿ ಎಂದು ಸುಳ್ಳು ಸುದ್ದಿ ಹಂಚಿಕೆ

ಬಿಜೆಪಿ ತನ್ನ ಪೋಸ್ಟ್‌ನಲ್ಲಿ “ವಾಸ್ತವವಾಗಿ, ಸಿಎಂ ಸಿದ್ದರಾಮಯ್ಯ ಅವರು ಈಗಾಗಲೇ ಎಸ್‌ಸಿ/ಎಸ್‌ಟಿ ನಿಧಿಯನ್ನು ಕಸಿದುಕೊಂಡು ಮುಸ್ಲಿಮರಿಗೆ ‘ಸಂಪತ್ತು ವಿತರಣೆ’ ಆರಂಭಿಸಿದ್ದಾರೆ” ಎಂದು ಹೇಳಿದೆ. ಈ ಆರೋಪಕ್ಕೆ ಯಾವುದೇ ಪುರಾವೆಗಳಿಲ್ಲ.

ಆದರೆ, “ದೇಶದ ಸಂಪತ್ತನ್ನು ಮುಸಲ್ಮಾನರಿಗೆ ಹಂಚುತ್ತೇನೆ” ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ ಎಂದು ಟಿವಿ9 ಸುದ್ದಿ ವಾಹಿನಿಯ ಹಳೆಯ ವಿಡಿಯೋವೊಂದನ್ನು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಹಂಚಿಕೊಂಡಿದ್ದರು. ಈ ಬಗ್ಗೆಯೂ ನಾನುಗೌರಿ.ಕಾಂ ಸತ್ಯಾಸತ್ಯತೆ ಪರಿಶೀಲನೆ ನಡೆಸಿದೆ. ಅದರ ಲಿಂಕ್ ಕೆಳಗಿದೆ.

FACT CHECK : ‘ದೇಶದ ಸಂಪತ್ತನ್ನು ಮುಸಲ್ಮಾನರಿಗೆ ಹಂಚುತ್ತೇನೆ’ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ರಾ?  

ಇದನ್ನೂ ಓದಿ : FACT CHECK: ದೇವೇಗೌಡರ ಕುರಿತು ಸಚಿವ ರಾಜಣ್ಣ ಕೀಳು ಮಟ್ಟದ ಹೇಳಿಕೆ ನೀಡಿದ್ದಾರೆಂದು ಹಳೆಯ ವಿಡಿಯೋ ಹಂಚಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...