Homeಫ್ಯಾಕ್ಟ್‌ಚೆಕ್FACT CHECK : ಕಾಂಗ್ರೆಸ್ ಪ್ರಣಾಳಿಕೆ ಕುರಿತು ಬಿಜೆಪಿ ಹಾಕಿರುವ ಪೋಸ್ಟ್ ಸುಳ್ಳು

FACT CHECK : ಕಾಂಗ್ರೆಸ್ ಪ್ರಣಾಳಿಕೆ ಕುರಿತು ಬಿಜೆಪಿ ಹಾಕಿರುವ ಪೋಸ್ಟ್ ಸುಳ್ಳು

- Advertisement -
- Advertisement -

“ಕಾಂಗ್ರೆಸ್ ಪ್ರಾಣಾಳಿಕೆಯಾ ಅಥವಾ ಮುಸ್ಲಿಂ ಲೀಗ್ ಪ್ರಣಾಳಿಕೆಯಾ?”

“ಶಿಕ್ಷಣ ಸಂಸ್ಥೆಗಳಲ್ಲಿ ಹಿಜಾಬ್ ಜಾರಿ, ಮುಸ್ಲಿಮರಿಗೆ ಸಂಪತ್ತಿನ ಹಂಚಿಕೆ, ಮುಸ್ಲಿಮರಿಗೆ ವಿಶೇಷ ಮೀಸಲಾತಿ, ವೈಯಕ್ತಿಕ ಕಾನೂನುಗಳನ್ನು ಅಭ್ಯಾಸ ಮಾಡುವ ಸ್ವಾತಂತ್ರ್ಯ, ಮುಸ್ಲಿಮರನ್ನು ನೇರವಾಗಿ ನ್ಯಾಯಾಧೀಶರಾಗಿ ನೇಮಿಸಬೇಕು, ಮುಸ್ಲಿಮರನ್ನು ನೇಮಿಸಿಕೊಳ್ಳಲು ಸಾರ್ವಜನಿಕ ಮತ್ತು ಖಾಸಗಿ ಸಂಸ್ಥೆಗಳಿಗೆ ಆದೇಶ ಮತ್ತು ಇನ್ನೂ ಅನೇಕ ವಿಭಜಿಸುವ ಕಾರ್ಯಸೂಚಿಗಳು”

“ಕಾಂಗ್ರೆಸ್‌ನ ಕೆಟ್ಟ ಉದ್ದೇಶ ಸ್ಪಷ್ಟವಾಗಿದೆ: ಭಾರತೀಯರು ಕಷ್ಟಪಟ್ಟು ದುಡಿದ ಹಣವನ್ನು ತೆಗೆದುಕೊಂಡು ಅದನ್ನು ಮುಸ್ಲಿಮರಿಗೆ ಉಡುಗೊರೆಯಾಗಿ ನೀಡುವುದು. ಅವರು ನಮ್ಮ ಭೂಮಿ, ಸಂಪತ್ತು ಮತ್ತು ಹಕ್ಕುಗಳನ್ನು ವಶಪಡಿಸಿಕೊಳ್ಳುತ್ತಾರೆ, ಅವುಗಳನ್ನು ‘ಶಾಂತಿಯುತರಿಗೆ’ ಉಡುಗೊರೆಯಾಗಿ ನೀಡುತ್ತಾರೆ”

“ವಾಸ್ತವವಾಗಿ, ಸಿಎಂ ಸಿದ್ದರಾಮಯ್ಯ ಅವರು ಈಗಾಗಲೇ ಎಸ್‌ಸಿ/ಎಸ್‌ಟಿ ನಿಧಿಯನ್ನು ಕಸಿದುಕೊಂಡು ಮುಸ್ಲಿಮರಿಗೆ ‘ಸಂಪತ್ತು ವಿತರಣೆ’ ಆರಂಭಿಸಿದ್ದಾರೆ” ಈ ರೀತಿ ಪೋಸ್ಟ್ ಒಂದನ್ನು ಬಿಜೆಪಿ ಕರ್ನಾಟಕ ತನ್ನ ಅಧಿಕೃತ ಎಕ್ಸ್ ಖಾತೆಯಲ್ಲಿ ಹಾಕಿದೆ. ಜೊತೆಗೆ ಕಾಂಗ್ರೆಸ್ ಪಕ್ಷದ ಚುನಾವಣಾ ಪ್ರಣಾಳಿಕೆಯ ಕೆಲ ಸ್ಕ್ರೀನ್ ಶಾಟ್‌ಗಳನ್ನು ಹಂಚಿಕೊಂಡಿದೆ.

ಪೋಸ್ಟ್ ಲಿಂಕ್ ಇಲ್ಲಿದೆ 

ಫ್ಯಾಕ್ಟ್‌ಚೆಕ್ : ಬಿಜೆಪಿ ಹೇಳಿರುವಂತೆ ಕಾಂಗ್ರೆಸ್ ಪ್ರಾಣಾಳಿಕೆಯಲ್ಲಿ ಮುಸ್ಲಿಂ ಪರ ಭರವಸೆಗಳನ್ನು ನೀಡಲಾಗಿದೆಯಾ? ಎಂಬುವುದರ ಸತ್ಯಾಸತ್ಯತೆಯನ್ನು ನಾನುಗೌರಿ.ಕಾಂ ಪರಿಶೀಲನೆ ನಡೆಸಿದೆ.

ಇದಕ್ಕಾಗಿ ನಾವು, ಕಾಂಗ್ರೆಸ್‌ ಬಿಡುಗಡೆ ಮಾಡಿರುವ ಲೋಕಸಭೆ ಚುನಾವಣೆಯ ಪ್ರಣಾಳಿಕೆಯನ್ನು ಪರಿಶೀಲಿಸಿದ್ದೇವೆ. ಕಾಂಗ್ರೆಸ್‌ ಅಧಿಕೃತ ವೆಬ್‌ಸೈಟ್‌ನಲ್ಲಿರುವ ಪ್ರಣಾಳಿಕೆಯ 7 ಮತ್ತು 8ನೇ ಪುಟಗಳಲ್ಲಿ ‘ಭಾಷೆ ಮತ್ತು ಧಾರ್ಮಿಕ ಅಲ್ಪ ಸಂಖ್ಯಾತರಿಗೆ’ ಸಂಬಂಧಪಟ್ಟಂತೆ ಭರವಸೆಗಳನ್ನು ನೀಡಲಾಗಿದೆ. ಅವುಗಳು ಹೀಗಿವೆ..

1. ಸಂವಿಧಾನದ 15, 16, 25, 26, 28, 29 ಮತ್ತು 30ನೇ ವಿಧಿಗಳ ಅಡಿಯಲ್ಲಿ ಒಬ್ಬರ ನಂಬಿಕೆಯನ್ನು ಆಚರಿಸುವ ಮೂಲಭೂತ ಹಕ್ಕು ಮತ್ತು ಧಾರ್ಮಿಕ ಅಲ್ಪಸಂಖ್ಯಾತರಿಗೆ ಖಾತರಿಪಡಿಸಿದ ಹಕ್ಕುಗಳನ್ನು ನಾವು ಗೌರವಿಸುತ್ತೇವೆ ಮತ್ತು ಎತ್ತಿ ಹಿಡಿಯುತ್ತೇವೆ.

2. ಸಂವಿಧಾನದ 15, 16, 29 ಮತ್ತು 30 ನೇ ವಿಧಿಗಳ ಅಡಿಯಲ್ಲಿ ಖಾತರಿಪಡಿಸಿದ ಭಾಷಾ ಅಲ್ಪಸಂಖ್ಯಾತರ ಹಕ್ಕುಗಳನ್ನು ನಾವು ಗೌರವಿಸುತ್ತೇವೆ ಮತ್ತು ಎತ್ತಿ ಹಿಡಿಯುತ್ತೇವೆ.

3. ಶಿಕ್ಷಣ, ಉದ್ಯೋಗ, ವ್ಯವಹಾರ, ಸೇವೆಗಳು, ಕ್ರೀಡೆ, ಕಲೆ ಮತ್ತು ಇತರ ಕ್ಷೇತ್ರಗಳಲ್ಲಿ ಹೆಚ್ಚುತ್ತಿರುವ ಅವಕಾಶಗಳ ಸಂಪೂರ್ಣ ಲಾಭವನ್ನು ಪಡೆಯಲು ಅಲ್ಪಸಂಖ್ಯಾತರಿಗೆ ಸೇರಿದ ವಿದ್ಯಾರ್ಥಿಗಳು ಮತ್ತು ಯುವಕರನ್ನು ನಾವು ಪ್ರೋತ್ಸಾಹಿಸುತ್ತೇವೆ ಮತ್ತು ಸಹಾಯ ಮಾಡುತ್ತೇವೆ.

4. ನಾವು ವಿದೇಶದಲ್ಲಿ ಅಧ್ಯಯನಕ್ಕಾಗಿ ಮೌಲಾನಾ ಆಜಾದ್ ವಿದ್ಯಾರ್ಥಿವೇತನವನ್ನು ಪುನಃ ಸ್ಥಾಪಿಸುತ್ತೇವೆ ಮತ್ತು ವಿದ್ಯಾರ್ಥಿವೇತನದ ಸಂಖ್ಯೆಯನ್ನು ಹೆಚ್ಚಿಸುತ್ತೇವೆ.

5. ಅಲ್ಪಸಂಖ್ಯಾತರ ಆರ್ಥಿಕ ಸಬಲೀಕರಣವು ಭಾರತವು ತನ್ನ ಸಂಪೂರ್ಣ ಸಾಮರ್ಥ್ಯವನ್ನು ಅರಿತುಕೊಳ್ಳಲು ಅಗತ್ಯವಾದ ಹೆಜ್ಜೆಯಾಗಿದೆ. ಬ್ಯಾಂಕ್‌ಗಳು ಅಲ್ಪಸಂಖ್ಯಾತರಿಗೆ ಯಾವುದೇ ತಾರತಮ್ಯವಿಲ್ಲದೆ ಸಾಂಸ್ಥಿಕ ಸಾಲವನ್ನು ಒದಗಿಸುತ್ತವೆ ಎಂದು ನಾವು ಖಚಿತಪಡಿಸುತ್ತೇವೆ.

6. ಅಲ್ಪಸಂಖ್ಯಾತರು ಶಿಕ್ಷಣ, ಆರೋಗ್ಯ, ಸಾರ್ವಜನಿಕ ಉದ್ಯೋಗ, ಲೋಕೋಪಯೋಗಿ ಒಪ್ಪಂದಗಳು, ಕೌಶಲ್ಯ ಅಭಿವೃದ್ಧಿ, ಕ್ರೀಡೆ ಮತ್ತು ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ತಾರತಮ್ಯವಿಲ್ಲದೆ ತಮ್ಮ ನ್ಯಾಯಯುತ ಪಾಲನ್ನು ಪಡೆಯುವುದನ್ನು ನಾವು ಖಚಿತಪಡಿಸುತ್ತೇವೆ.

7. ಪ್ರತಿಯೊಬ್ಬ ನಾಗರಿಕನಂತೆ, ಅಲ್ಪಸಂಖ್ಯಾತರಿಗೂ ಉಡುಗೆ, ಆಹಾರ, ಭಾಷೆ ಮತ್ತು ವೈಯಕ್ತಿಕ ಕಾನೂನುಗಳ ಆಯ್ಕೆಯ ಸ್ವಾತಂತ್ರ್ಯವಿದೆ ಎಂದು ಕಾಂಗ್ರೆಸ್ ಖಚಿತಪಡಿಸುತ್ತೇವೆ.

8. ನಾವು ವೈಯಕ್ತಿಕ ಕಾನೂನುಗಳ ಸುಧಾರಣೆಯನ್ನು ಪ್ರೋತ್ಸಾಹಿಸುತ್ತೇವೆ. ಅಂತಹ ಸುಧಾರಣೆಯನ್ನು ಸಂಬಂಧಪಟ್ಟ ಸಮುದಾಯಗಳ ಭಾಗವಹಿಸುವಿಕೆ ಮತ್ತು ಒಪ್ಪಿಗೆಯೊಂದಿಗೆ ಕೈಗೊಳ್ಳಬೇಕು.

9. ಸಂವಿಧಾನದ ಎಂಟನೇ ಪರಿಚ್ಛೇದಕ್ಕೆ ಹೆಚ್ಚಿನ ಭಾಷೆಗಳನ್ನು ಸೇರಿಸುವ ದೀರ್ಘಕಾಲದ ಬೇಡಿಕೆಗಳನ್ನು ಈಡೇರಿಸುವುದಾಗಿ ಕಾಂಗ್ರೆಸ್ ಭರವಸೆ ನೀಡಿದೆ.

‘ನ್ಯಾಯಪತ್ರ’ ಎಂಬ ಹೆಸರಿನ 48 ಪುಟಗಳ ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಎಲ್ಲೂ ಬಿಜೆಪಿ ಹೇಳಿದಂತೆ “ಶಿಕ್ಷಣ ಸಂಸ್ಥೆಗಳಲ್ಲಿ ಹಿಜಾಬ್ ಜಾರಿ, ಮುಸ್ಲಿಮರಿಗೆ ಸಂಪತ್ತಿನ ಹಂಚಿಕೆ, ಮುಸ್ಲಿಮರಿಗೆ ವಿಶೇಷ ಮೀಸಲಾತಿ, ವೈಯಕ್ತಿಕ ಕಾನೂನುಗಳನ್ನು ಅಭ್ಯಾಸ ಮಾಡುವ ಸ್ವಾತಂತ್ರ್ಯ, ಮುಸ್ಲಿಮರನ್ನು ನೇರವಾಗಿ ನ್ಯಾಯಾಧೀಶರಾಗಿ ನೇಮಿಸಬೇಕು, ಮುಸ್ಲಿಮರನ್ನು ನೇಮಿಸಿಕೊಳ್ಳಲು ಸಾರ್ವಜನಿಕ ಮತ್ತು ಖಾಸಗಿ ಸಂಸ್ಥೆಗಳಿಗೆ ಆದೇಶ” ಎಂಬ ಭರವಸೆಗಳನ್ನು ನೀಡಿಲ್ಲ.

ಬಿಜೆಪಿ ತನ್ನ ಎಕ್ಸ್ ಪೋಸ್ಟ್‌ನಲ್ಲಿ ಕಾಂಗ್ರೆಸ್ ಪ್ರಣಾಳಿಕೆಯ 5 ಸ್ಕ್ರೀನ್‌ ಶಾಟ್‌ಗಳನ್ನು ಹಂಚಿಕೊಂಡಿದೆ. ಅದರಲ್ಲೂ ಬಿಜೆಪಿ ಉಲ್ಲೇಖಿಸಿದ ಅಂಶಗಳು ಇಲ್ಲ.

1. ಬಿಜೆಪಿ ಹಂಚಿಕೊಂಡ ಸ್ಕ್ರೀನ್ ಶಾಟ್‌ಗಳಲ್ಲಿ ಸಾಮಾಜಿಕ ಆರ್ಥಿಕ ಮತ್ತು ಜಾತಿ ಗಣತಿ ನಡೆಸುತ್ತೇವೆ. ಅದರ ಆಧಾರದ ಮೇಲೆ ಯೋಜನೆಗಳನ್ನು ರೂಪಿಸುತ್ತೇವೆ.

2. ಸಂವಿಧಾನಕ್ಕೆ ತಿದ್ದುಪಡಿ ತಂದು ಎಸ್‌ಸಿ, ಎಸ್‌ಟಿ, ಒಬಿಸಿ ಮೀಸಲಾತಿಯ 50 ಶೇ. ಮಿತಿಯನ್ನು ತೆಗೆಯುತ್ತೇವೆ.

3. ಅಲ್ಪಸಂಖ್ಯಾತರ ಆರ್ಥಿಕ ಸಬಲೀಕರಣವು ಭಾರತವು ತನ್ನ ಸಂಪೂರ್ಣ ಸಾಮರ್ಥ್ಯವನ್ನು ಅರಿತುಕೊಳ್ಳಲು ಅಗತ್ಯವಾದ ಹೆಜ್ಜೆಯಾಗಿದೆ. ಬ್ಯಾಂಕ್‌ಗಳು ಅಲ್ಪಸಂಖ್ಯಾತರಿಗೆ ಯಾವುದೇ ತಾರತಮ್ಯವಿಲ್ಲದೆ ಸಾಂಸ್ಥಿಕ ಸಾಲವನ್ನು ಒದಗಿಸುತ್ತವೆ ಎಂದು ನಾವು ಖಚಿತಪಡಿಸುತ್ತೇವೆ.

4. ಕಾಂಗ್ರೆಸ್ ವೈವಿಧ್ಯ ಆಯೋಗ ಸ್ಥಾಪಿಸಲಿದೆ, ಮಹಿಳೆಯರು ಮತ್ತು ಎಸ್‌ಸಿ ,ಎಸ್‌ಟಿ ಮತ್ತು ಒಬಿಸಿ ಮತ್ತು ಅಲ್ಪ ಸಂಖ್ಯಾತ ವರ್ಗದ ಹೆಚ್ಚು ಜನರನ್ನು ಹೈಕೋರ್ಟ್ ಮತ್ತು ಸುಪ್ರೀಂ ಕೋರ್ಟ್ ನ್ಯಾಯಾಧೀಶರನ್ನಾಗಿ ನೇಮಿಸುತ್ತೇವೆ ಎಂದು ಭರವಸೆ ನೀಡುತ್ತೇವೆ ಎಂದು ಹೇಳಿದೆ.

ಪ್ರಮುಖ ವಿಷಯವೆಂದರೆ, ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಭಾಷೆ ಮತ್ತು ಧಾರ್ಮಿಕ ಅಲ್ಪ ಸಂಖ್ಯಾತರಿಗೆ ನೀಡಿದ ಭರವಸೆಗಳಲ್ಲಿ ಎಸ್‌ಸಿ, ಎಸ್‌ಟಿ, ಒಬಿಸಿ ಮತ್ತು ಇತರ ಅಲ್ಪ ಸಂಖ್ಯಾತರು ಎಂದು ಉಲ್ಲೇಖಿಸಿದೆಯೇ ಹೊರತು, ಎಲ್ಲೂ ಮುಸ್ಲಿಮರಿಗೆ ಎಂದು ಹೇಳಿಲ್ಲ. ಭಾರತದಲ್ಲಿ ಅಲ್ಪ ಸಂಖ್ಯಾತರು ಎಂದರೆ ಕೇವಲ ಮುಸ್ಲಿಮರಲ್ಲ. ಮುಸ್ಲಿಂ, ಕ್ರಿಶ್ಚಿಯನ್, ಜೈನ, ಬೌದ್ಧ, ಪಾರ್ಸಿಗಳು ಈ ದೇಶದ ಅಲ್ಪ ಸಂಖ್ಯಾತರು. ಹಾಗಾಗಿ, ಪ್ರಣಾಳಿಕೆಯಲ್ಲಿ ಅಲ್ಪ ಸಂಖ್ಯಾತರು ಎಂದರೂ, ಅದು ಕೇವಲ ಮುಸ್ಲಿಮರು ಎಂದು ಆಗುವುದಿಲ್ಲ.

ಹಾಗಾಗಿ, ಬಿಜೆಪಿ ತನ್ನ ಎಕ್ಸ್ ಖಾತೆಯಲ್ಲಿ ಕಾಂಗ್ರೆಸ್ ಪ್ರಣಾಳಿಕೆ ಕುರಿತು ಹಾಕಿರುವ ಪೋಸ್ಟ್ ಸಂಪೂರ್ಣ ಸುಳ್ಳು. ಇದೇ ರೀತಿಯ ಸುಳ್ಳು ಪೋಸ್ಟ್ ಅನ್ನು ಕೆಲ ದಿನಗಳ ಹಿಂದೆ ಸ್ಟಾರ್ ಬಾಯ್ ತರುಣ್ ಎಂಬ ಎಕ್ಸ್ ಬಳಕೆದಾರನೊಬ್ಬ ಹಾಕಿದ್ದ. “ಕಾಂಗ್ರೆಸ್ ಪ್ರಣಾಳಿಕೆ ಭಯಾನಕವಾಗಿದೆ. ನನ್ನ ಜೀವನದಲ್ಲಿ ಇಂತಹ ಅಪಾಯಕಾರಿ ಪ್ರಣಾಳಿಕೆಯನ್ನು ನೋಡಿಲ್ಲ” ಎಂದಿದ್ದ. ಆಗ ನಾನುಗೌರಿ. ಕಾಂ ಸತ್ಯಾಸತ್ಯತೆ ಪರಿಶೀಲನೆ ನಡೆಸಿದೆ. ಅದರ ಲಿಂಕ್ ಕೆಳಗಿದೆ.

Fact Check: ಕಾಂಗ್ರೆಸ್‌ ಪ್ರಣಾಳಿಕೆ ದೇಶಕ್ಕೆ ಅಪಾಯಕಾರಿ ಎಂದು ಸುಳ್ಳು ಸುದ್ದಿ ಹಂಚಿಕೆ

ಬಿಜೆಪಿ ತನ್ನ ಪೋಸ್ಟ್‌ನಲ್ಲಿ “ವಾಸ್ತವವಾಗಿ, ಸಿಎಂ ಸಿದ್ದರಾಮಯ್ಯ ಅವರು ಈಗಾಗಲೇ ಎಸ್‌ಸಿ/ಎಸ್‌ಟಿ ನಿಧಿಯನ್ನು ಕಸಿದುಕೊಂಡು ಮುಸ್ಲಿಮರಿಗೆ ‘ಸಂಪತ್ತು ವಿತರಣೆ’ ಆರಂಭಿಸಿದ್ದಾರೆ” ಎಂದು ಹೇಳಿದೆ. ಈ ಆರೋಪಕ್ಕೆ ಯಾವುದೇ ಪುರಾವೆಗಳಿಲ್ಲ.

ಆದರೆ, “ದೇಶದ ಸಂಪತ್ತನ್ನು ಮುಸಲ್ಮಾನರಿಗೆ ಹಂಚುತ್ತೇನೆ” ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ ಎಂದು ಟಿವಿ9 ಸುದ್ದಿ ವಾಹಿನಿಯ ಹಳೆಯ ವಿಡಿಯೋವೊಂದನ್ನು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಹಂಚಿಕೊಂಡಿದ್ದರು. ಈ ಬಗ್ಗೆಯೂ ನಾನುಗೌರಿ.ಕಾಂ ಸತ್ಯಾಸತ್ಯತೆ ಪರಿಶೀಲನೆ ನಡೆಸಿದೆ. ಅದರ ಲಿಂಕ್ ಕೆಳಗಿದೆ.

FACT CHECK : ‘ದೇಶದ ಸಂಪತ್ತನ್ನು ಮುಸಲ್ಮಾನರಿಗೆ ಹಂಚುತ್ತೇನೆ’ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ರಾ?  

ಇದನ್ನೂ ಓದಿ : FACT CHECK: ದೇವೇಗೌಡರ ಕುರಿತು ಸಚಿವ ರಾಜಣ್ಣ ಕೀಳು ಮಟ್ಟದ ಹೇಳಿಕೆ ನೀಡಿದ್ದಾರೆಂದು ಹಳೆಯ ವಿಡಿಯೋ ಹಂಚಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನಾಳೆ ನನ್ನ ಮಗನೂ ಮೋದಿ ವಿರುದ್ಧ ಮಾತನಾಡಬಹುದು: ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ

ಅಸ್ಸಾಂ ಸಚಿವರೊಬ್ಬರ ಮಗಳು ಗುವಾಹಟಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು, ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿರುವುದು ರಾಜ್ಯಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ಘಟನೆಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ...

ವಿದ್ಯಾರ್ಥಿಗಳನ್ನು ಗುಂಡಿಕ್ಕಿ ಕೊಲ್ಲಬೇಕಿತ್ತು: ಆರ್‌ಎಸ್‌ಎಸ್ ಸಿದ್ಧಾಂತವಾದಿ ಟಿ.ಜಿ. ಮೋಹನ್‌ದಾಸ್ ವಿಕೃತ ಹೇಳಿಕೆ

ನವದೆಹಲಿ: ಕೇಂದ್ರ ಸರ್ಕಾರದ ಶಿಕ್ಷಣ ನೀತಿಗಳು ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ದೆಹಲಿಯ ಜಂತರ್ ಮಂತರ್‌ನಲ್ಲಿ ಬೃಹತ್ ಪ್ರತಿಭಟನೆ ನಡೆಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿದ್ದ ಯುವಜನರ ವಿರುದ್ಧ...

ಸಿಜೆಪಿ ಪ್ರತಿಭಟನೆ: ವಿದ್ಯಾರ್ಥಿಗಳ ಮೇಲೆ ‘ಪೆಲೆಟ್‌ ಗನ್’ ದಾಳಿ ದೃಢ; ನಿಯಮಾವಳಿಗಳನ್ನು ಉಲ್ಲಂಘಿಸಿ ಬಲಪ್ರಯೋಗ ನಡೆಸಿರುವ RAF

ನವದೆಹಲಿ: ತಮ್ಮ ಹಕ್ಕುಗಳಿಗಾಗಿ ಪ್ರಜಾಸತ್ತಾತ್ಮಕವಾಗಿ ಧ್ವನಿ ಎತ್ತುತ್ತಿದ್ದ ವಿದ್ಯಾರ್ಥಿ ಸಮುದಾಯದ ಮೇಲೆ ಕೇಂದ್ರದ ಸಶಸ್ತ್ರ ಪಡೆಗಳು ಎಸಗಿದ ದೌರ್ಜನ್ಯದ ಕರಾಳ ಮುಖ ಕೊನೆಗೂ ಅನಾವರಣಗೊಂಡಿದೆ. ಜುಲೈ 20ರಂದು ದೆಹಲಿಯ ಕನ್ಹಾಟ್ ಪ್ಲೇಸ್ ಪ್ರದೇಶದಲ್ಲಿ...

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...