Homeಫ್ಯಾಕ್ಟ್‌ಚೆಕ್FACT CHECK : ಕಾಂಗ್ರೆಸ್ ಪ್ರಣಾಳಿಕೆ ಕುರಿತು ಬಿಜೆಪಿ ಹಾಕಿರುವ ಪೋಸ್ಟ್ ಸುಳ್ಳು

FACT CHECK : ಕಾಂಗ್ರೆಸ್ ಪ್ರಣಾಳಿಕೆ ಕುರಿತು ಬಿಜೆಪಿ ಹಾಕಿರುವ ಪೋಸ್ಟ್ ಸುಳ್ಳು

- Advertisement -
- Advertisement -

“ಕಾಂಗ್ರೆಸ್ ಪ್ರಾಣಾಳಿಕೆಯಾ ಅಥವಾ ಮುಸ್ಲಿಂ ಲೀಗ್ ಪ್ರಣಾಳಿಕೆಯಾ?”

“ಶಿಕ್ಷಣ ಸಂಸ್ಥೆಗಳಲ್ಲಿ ಹಿಜಾಬ್ ಜಾರಿ, ಮುಸ್ಲಿಮರಿಗೆ ಸಂಪತ್ತಿನ ಹಂಚಿಕೆ, ಮುಸ್ಲಿಮರಿಗೆ ವಿಶೇಷ ಮೀಸಲಾತಿ, ವೈಯಕ್ತಿಕ ಕಾನೂನುಗಳನ್ನು ಅಭ್ಯಾಸ ಮಾಡುವ ಸ್ವಾತಂತ್ರ್ಯ, ಮುಸ್ಲಿಮರನ್ನು ನೇರವಾಗಿ ನ್ಯಾಯಾಧೀಶರಾಗಿ ನೇಮಿಸಬೇಕು, ಮುಸ್ಲಿಮರನ್ನು ನೇಮಿಸಿಕೊಳ್ಳಲು ಸಾರ್ವಜನಿಕ ಮತ್ತು ಖಾಸಗಿ ಸಂಸ್ಥೆಗಳಿಗೆ ಆದೇಶ ಮತ್ತು ಇನ್ನೂ ಅನೇಕ ವಿಭಜಿಸುವ ಕಾರ್ಯಸೂಚಿಗಳು”

“ಕಾಂಗ್ರೆಸ್‌ನ ಕೆಟ್ಟ ಉದ್ದೇಶ ಸ್ಪಷ್ಟವಾಗಿದೆ: ಭಾರತೀಯರು ಕಷ್ಟಪಟ್ಟು ದುಡಿದ ಹಣವನ್ನು ತೆಗೆದುಕೊಂಡು ಅದನ್ನು ಮುಸ್ಲಿಮರಿಗೆ ಉಡುಗೊರೆಯಾಗಿ ನೀಡುವುದು. ಅವರು ನಮ್ಮ ಭೂಮಿ, ಸಂಪತ್ತು ಮತ್ತು ಹಕ್ಕುಗಳನ್ನು ವಶಪಡಿಸಿಕೊಳ್ಳುತ್ತಾರೆ, ಅವುಗಳನ್ನು ‘ಶಾಂತಿಯುತರಿಗೆ’ ಉಡುಗೊರೆಯಾಗಿ ನೀಡುತ್ತಾರೆ”

“ವಾಸ್ತವವಾಗಿ, ಸಿಎಂ ಸಿದ್ದರಾಮಯ್ಯ ಅವರು ಈಗಾಗಲೇ ಎಸ್‌ಸಿ/ಎಸ್‌ಟಿ ನಿಧಿಯನ್ನು ಕಸಿದುಕೊಂಡು ಮುಸ್ಲಿಮರಿಗೆ ‘ಸಂಪತ್ತು ವಿತರಣೆ’ ಆರಂಭಿಸಿದ್ದಾರೆ” ಈ ರೀತಿ ಪೋಸ್ಟ್ ಒಂದನ್ನು ಬಿಜೆಪಿ ಕರ್ನಾಟಕ ತನ್ನ ಅಧಿಕೃತ ಎಕ್ಸ್ ಖಾತೆಯಲ್ಲಿ ಹಾಕಿದೆ. ಜೊತೆಗೆ ಕಾಂಗ್ರೆಸ್ ಪಕ್ಷದ ಚುನಾವಣಾ ಪ್ರಣಾಳಿಕೆಯ ಕೆಲ ಸ್ಕ್ರೀನ್ ಶಾಟ್‌ಗಳನ್ನು ಹಂಚಿಕೊಂಡಿದೆ.

ಪೋಸ್ಟ್ ಲಿಂಕ್ ಇಲ್ಲಿದೆ 

ಫ್ಯಾಕ್ಟ್‌ಚೆಕ್ : ಬಿಜೆಪಿ ಹೇಳಿರುವಂತೆ ಕಾಂಗ್ರೆಸ್ ಪ್ರಾಣಾಳಿಕೆಯಲ್ಲಿ ಮುಸ್ಲಿಂ ಪರ ಭರವಸೆಗಳನ್ನು ನೀಡಲಾಗಿದೆಯಾ? ಎಂಬುವುದರ ಸತ್ಯಾಸತ್ಯತೆಯನ್ನು ನಾನುಗೌರಿ.ಕಾಂ ಪರಿಶೀಲನೆ ನಡೆಸಿದೆ.

ಇದಕ್ಕಾಗಿ ನಾವು, ಕಾಂಗ್ರೆಸ್‌ ಬಿಡುಗಡೆ ಮಾಡಿರುವ ಲೋಕಸಭೆ ಚುನಾವಣೆಯ ಪ್ರಣಾಳಿಕೆಯನ್ನು ಪರಿಶೀಲಿಸಿದ್ದೇವೆ. ಕಾಂಗ್ರೆಸ್‌ ಅಧಿಕೃತ ವೆಬ್‌ಸೈಟ್‌ನಲ್ಲಿರುವ ಪ್ರಣಾಳಿಕೆಯ 7 ಮತ್ತು 8ನೇ ಪುಟಗಳಲ್ಲಿ ‘ಭಾಷೆ ಮತ್ತು ಧಾರ್ಮಿಕ ಅಲ್ಪ ಸಂಖ್ಯಾತರಿಗೆ’ ಸಂಬಂಧಪಟ್ಟಂತೆ ಭರವಸೆಗಳನ್ನು ನೀಡಲಾಗಿದೆ. ಅವುಗಳು ಹೀಗಿವೆ..

1. ಸಂವಿಧಾನದ 15, 16, 25, 26, 28, 29 ಮತ್ತು 30ನೇ ವಿಧಿಗಳ ಅಡಿಯಲ್ಲಿ ಒಬ್ಬರ ನಂಬಿಕೆಯನ್ನು ಆಚರಿಸುವ ಮೂಲಭೂತ ಹಕ್ಕು ಮತ್ತು ಧಾರ್ಮಿಕ ಅಲ್ಪಸಂಖ್ಯಾತರಿಗೆ ಖಾತರಿಪಡಿಸಿದ ಹಕ್ಕುಗಳನ್ನು ನಾವು ಗೌರವಿಸುತ್ತೇವೆ ಮತ್ತು ಎತ್ತಿ ಹಿಡಿಯುತ್ತೇವೆ.

2. ಸಂವಿಧಾನದ 15, 16, 29 ಮತ್ತು 30 ನೇ ವಿಧಿಗಳ ಅಡಿಯಲ್ಲಿ ಖಾತರಿಪಡಿಸಿದ ಭಾಷಾ ಅಲ್ಪಸಂಖ್ಯಾತರ ಹಕ್ಕುಗಳನ್ನು ನಾವು ಗೌರವಿಸುತ್ತೇವೆ ಮತ್ತು ಎತ್ತಿ ಹಿಡಿಯುತ್ತೇವೆ.

3. ಶಿಕ್ಷಣ, ಉದ್ಯೋಗ, ವ್ಯವಹಾರ, ಸೇವೆಗಳು, ಕ್ರೀಡೆ, ಕಲೆ ಮತ್ತು ಇತರ ಕ್ಷೇತ್ರಗಳಲ್ಲಿ ಹೆಚ್ಚುತ್ತಿರುವ ಅವಕಾಶಗಳ ಸಂಪೂರ್ಣ ಲಾಭವನ್ನು ಪಡೆಯಲು ಅಲ್ಪಸಂಖ್ಯಾತರಿಗೆ ಸೇರಿದ ವಿದ್ಯಾರ್ಥಿಗಳು ಮತ್ತು ಯುವಕರನ್ನು ನಾವು ಪ್ರೋತ್ಸಾಹಿಸುತ್ತೇವೆ ಮತ್ತು ಸಹಾಯ ಮಾಡುತ್ತೇವೆ.

4. ನಾವು ವಿದೇಶದಲ್ಲಿ ಅಧ್ಯಯನಕ್ಕಾಗಿ ಮೌಲಾನಾ ಆಜಾದ್ ವಿದ್ಯಾರ್ಥಿವೇತನವನ್ನು ಪುನಃ ಸ್ಥಾಪಿಸುತ್ತೇವೆ ಮತ್ತು ವಿದ್ಯಾರ್ಥಿವೇತನದ ಸಂಖ್ಯೆಯನ್ನು ಹೆಚ್ಚಿಸುತ್ತೇವೆ.

5. ಅಲ್ಪಸಂಖ್ಯಾತರ ಆರ್ಥಿಕ ಸಬಲೀಕರಣವು ಭಾರತವು ತನ್ನ ಸಂಪೂರ್ಣ ಸಾಮರ್ಥ್ಯವನ್ನು ಅರಿತುಕೊಳ್ಳಲು ಅಗತ್ಯವಾದ ಹೆಜ್ಜೆಯಾಗಿದೆ. ಬ್ಯಾಂಕ್‌ಗಳು ಅಲ್ಪಸಂಖ್ಯಾತರಿಗೆ ಯಾವುದೇ ತಾರತಮ್ಯವಿಲ್ಲದೆ ಸಾಂಸ್ಥಿಕ ಸಾಲವನ್ನು ಒದಗಿಸುತ್ತವೆ ಎಂದು ನಾವು ಖಚಿತಪಡಿಸುತ್ತೇವೆ.

6. ಅಲ್ಪಸಂಖ್ಯಾತರು ಶಿಕ್ಷಣ, ಆರೋಗ್ಯ, ಸಾರ್ವಜನಿಕ ಉದ್ಯೋಗ, ಲೋಕೋಪಯೋಗಿ ಒಪ್ಪಂದಗಳು, ಕೌಶಲ್ಯ ಅಭಿವೃದ್ಧಿ, ಕ್ರೀಡೆ ಮತ್ತು ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ತಾರತಮ್ಯವಿಲ್ಲದೆ ತಮ್ಮ ನ್ಯಾಯಯುತ ಪಾಲನ್ನು ಪಡೆಯುವುದನ್ನು ನಾವು ಖಚಿತಪಡಿಸುತ್ತೇವೆ.

7. ಪ್ರತಿಯೊಬ್ಬ ನಾಗರಿಕನಂತೆ, ಅಲ್ಪಸಂಖ್ಯಾತರಿಗೂ ಉಡುಗೆ, ಆಹಾರ, ಭಾಷೆ ಮತ್ತು ವೈಯಕ್ತಿಕ ಕಾನೂನುಗಳ ಆಯ್ಕೆಯ ಸ್ವಾತಂತ್ರ್ಯವಿದೆ ಎಂದು ಕಾಂಗ್ರೆಸ್ ಖಚಿತಪಡಿಸುತ್ತೇವೆ.

8. ನಾವು ವೈಯಕ್ತಿಕ ಕಾನೂನುಗಳ ಸುಧಾರಣೆಯನ್ನು ಪ್ರೋತ್ಸಾಹಿಸುತ್ತೇವೆ. ಅಂತಹ ಸುಧಾರಣೆಯನ್ನು ಸಂಬಂಧಪಟ್ಟ ಸಮುದಾಯಗಳ ಭಾಗವಹಿಸುವಿಕೆ ಮತ್ತು ಒಪ್ಪಿಗೆಯೊಂದಿಗೆ ಕೈಗೊಳ್ಳಬೇಕು.

9. ಸಂವಿಧಾನದ ಎಂಟನೇ ಪರಿಚ್ಛೇದಕ್ಕೆ ಹೆಚ್ಚಿನ ಭಾಷೆಗಳನ್ನು ಸೇರಿಸುವ ದೀರ್ಘಕಾಲದ ಬೇಡಿಕೆಗಳನ್ನು ಈಡೇರಿಸುವುದಾಗಿ ಕಾಂಗ್ರೆಸ್ ಭರವಸೆ ನೀಡಿದೆ.

‘ನ್ಯಾಯಪತ್ರ’ ಎಂಬ ಹೆಸರಿನ 48 ಪುಟಗಳ ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಎಲ್ಲೂ ಬಿಜೆಪಿ ಹೇಳಿದಂತೆ “ಶಿಕ್ಷಣ ಸಂಸ್ಥೆಗಳಲ್ಲಿ ಹಿಜಾಬ್ ಜಾರಿ, ಮುಸ್ಲಿಮರಿಗೆ ಸಂಪತ್ತಿನ ಹಂಚಿಕೆ, ಮುಸ್ಲಿಮರಿಗೆ ವಿಶೇಷ ಮೀಸಲಾತಿ, ವೈಯಕ್ತಿಕ ಕಾನೂನುಗಳನ್ನು ಅಭ್ಯಾಸ ಮಾಡುವ ಸ್ವಾತಂತ್ರ್ಯ, ಮುಸ್ಲಿಮರನ್ನು ನೇರವಾಗಿ ನ್ಯಾಯಾಧೀಶರಾಗಿ ನೇಮಿಸಬೇಕು, ಮುಸ್ಲಿಮರನ್ನು ನೇಮಿಸಿಕೊಳ್ಳಲು ಸಾರ್ವಜನಿಕ ಮತ್ತು ಖಾಸಗಿ ಸಂಸ್ಥೆಗಳಿಗೆ ಆದೇಶ” ಎಂಬ ಭರವಸೆಗಳನ್ನು ನೀಡಿಲ್ಲ.

ಬಿಜೆಪಿ ತನ್ನ ಎಕ್ಸ್ ಪೋಸ್ಟ್‌ನಲ್ಲಿ ಕಾಂಗ್ರೆಸ್ ಪ್ರಣಾಳಿಕೆಯ 5 ಸ್ಕ್ರೀನ್‌ ಶಾಟ್‌ಗಳನ್ನು ಹಂಚಿಕೊಂಡಿದೆ. ಅದರಲ್ಲೂ ಬಿಜೆಪಿ ಉಲ್ಲೇಖಿಸಿದ ಅಂಶಗಳು ಇಲ್ಲ.

1. ಬಿಜೆಪಿ ಹಂಚಿಕೊಂಡ ಸ್ಕ್ರೀನ್ ಶಾಟ್‌ಗಳಲ್ಲಿ ಸಾಮಾಜಿಕ ಆರ್ಥಿಕ ಮತ್ತು ಜಾತಿ ಗಣತಿ ನಡೆಸುತ್ತೇವೆ. ಅದರ ಆಧಾರದ ಮೇಲೆ ಯೋಜನೆಗಳನ್ನು ರೂಪಿಸುತ್ತೇವೆ.

2. ಸಂವಿಧಾನಕ್ಕೆ ತಿದ್ದುಪಡಿ ತಂದು ಎಸ್‌ಸಿ, ಎಸ್‌ಟಿ, ಒಬಿಸಿ ಮೀಸಲಾತಿಯ 50 ಶೇ. ಮಿತಿಯನ್ನು ತೆಗೆಯುತ್ತೇವೆ.

3. ಅಲ್ಪಸಂಖ್ಯಾತರ ಆರ್ಥಿಕ ಸಬಲೀಕರಣವು ಭಾರತವು ತನ್ನ ಸಂಪೂರ್ಣ ಸಾಮರ್ಥ್ಯವನ್ನು ಅರಿತುಕೊಳ್ಳಲು ಅಗತ್ಯವಾದ ಹೆಜ್ಜೆಯಾಗಿದೆ. ಬ್ಯಾಂಕ್‌ಗಳು ಅಲ್ಪಸಂಖ್ಯಾತರಿಗೆ ಯಾವುದೇ ತಾರತಮ್ಯವಿಲ್ಲದೆ ಸಾಂಸ್ಥಿಕ ಸಾಲವನ್ನು ಒದಗಿಸುತ್ತವೆ ಎಂದು ನಾವು ಖಚಿತಪಡಿಸುತ್ತೇವೆ.

4. ಕಾಂಗ್ರೆಸ್ ವೈವಿಧ್ಯ ಆಯೋಗ ಸ್ಥಾಪಿಸಲಿದೆ, ಮಹಿಳೆಯರು ಮತ್ತು ಎಸ್‌ಸಿ ,ಎಸ್‌ಟಿ ಮತ್ತು ಒಬಿಸಿ ಮತ್ತು ಅಲ್ಪ ಸಂಖ್ಯಾತ ವರ್ಗದ ಹೆಚ್ಚು ಜನರನ್ನು ಹೈಕೋರ್ಟ್ ಮತ್ತು ಸುಪ್ರೀಂ ಕೋರ್ಟ್ ನ್ಯಾಯಾಧೀಶರನ್ನಾಗಿ ನೇಮಿಸುತ್ತೇವೆ ಎಂದು ಭರವಸೆ ನೀಡುತ್ತೇವೆ ಎಂದು ಹೇಳಿದೆ.

ಪ್ರಮುಖ ವಿಷಯವೆಂದರೆ, ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಭಾಷೆ ಮತ್ತು ಧಾರ್ಮಿಕ ಅಲ್ಪ ಸಂಖ್ಯಾತರಿಗೆ ನೀಡಿದ ಭರವಸೆಗಳಲ್ಲಿ ಎಸ್‌ಸಿ, ಎಸ್‌ಟಿ, ಒಬಿಸಿ ಮತ್ತು ಇತರ ಅಲ್ಪ ಸಂಖ್ಯಾತರು ಎಂದು ಉಲ್ಲೇಖಿಸಿದೆಯೇ ಹೊರತು, ಎಲ್ಲೂ ಮುಸ್ಲಿಮರಿಗೆ ಎಂದು ಹೇಳಿಲ್ಲ. ಭಾರತದಲ್ಲಿ ಅಲ್ಪ ಸಂಖ್ಯಾತರು ಎಂದರೆ ಕೇವಲ ಮುಸ್ಲಿಮರಲ್ಲ. ಮುಸ್ಲಿಂ, ಕ್ರಿಶ್ಚಿಯನ್, ಜೈನ, ಬೌದ್ಧ, ಪಾರ್ಸಿಗಳು ಈ ದೇಶದ ಅಲ್ಪ ಸಂಖ್ಯಾತರು. ಹಾಗಾಗಿ, ಪ್ರಣಾಳಿಕೆಯಲ್ಲಿ ಅಲ್ಪ ಸಂಖ್ಯಾತರು ಎಂದರೂ, ಅದು ಕೇವಲ ಮುಸ್ಲಿಮರು ಎಂದು ಆಗುವುದಿಲ್ಲ.

ಹಾಗಾಗಿ, ಬಿಜೆಪಿ ತನ್ನ ಎಕ್ಸ್ ಖಾತೆಯಲ್ಲಿ ಕಾಂಗ್ರೆಸ್ ಪ್ರಣಾಳಿಕೆ ಕುರಿತು ಹಾಕಿರುವ ಪೋಸ್ಟ್ ಸಂಪೂರ್ಣ ಸುಳ್ಳು. ಇದೇ ರೀತಿಯ ಸುಳ್ಳು ಪೋಸ್ಟ್ ಅನ್ನು ಕೆಲ ದಿನಗಳ ಹಿಂದೆ ಸ್ಟಾರ್ ಬಾಯ್ ತರುಣ್ ಎಂಬ ಎಕ್ಸ್ ಬಳಕೆದಾರನೊಬ್ಬ ಹಾಕಿದ್ದ. “ಕಾಂಗ್ರೆಸ್ ಪ್ರಣಾಳಿಕೆ ಭಯಾನಕವಾಗಿದೆ. ನನ್ನ ಜೀವನದಲ್ಲಿ ಇಂತಹ ಅಪಾಯಕಾರಿ ಪ್ರಣಾಳಿಕೆಯನ್ನು ನೋಡಿಲ್ಲ” ಎಂದಿದ್ದ. ಆಗ ನಾನುಗೌರಿ. ಕಾಂ ಸತ್ಯಾಸತ್ಯತೆ ಪರಿಶೀಲನೆ ನಡೆಸಿದೆ. ಅದರ ಲಿಂಕ್ ಕೆಳಗಿದೆ.

Fact Check: ಕಾಂಗ್ರೆಸ್‌ ಪ್ರಣಾಳಿಕೆ ದೇಶಕ್ಕೆ ಅಪಾಯಕಾರಿ ಎಂದು ಸುಳ್ಳು ಸುದ್ದಿ ಹಂಚಿಕೆ

ಬಿಜೆಪಿ ತನ್ನ ಪೋಸ್ಟ್‌ನಲ್ಲಿ “ವಾಸ್ತವವಾಗಿ, ಸಿಎಂ ಸಿದ್ದರಾಮಯ್ಯ ಅವರು ಈಗಾಗಲೇ ಎಸ್‌ಸಿ/ಎಸ್‌ಟಿ ನಿಧಿಯನ್ನು ಕಸಿದುಕೊಂಡು ಮುಸ್ಲಿಮರಿಗೆ ‘ಸಂಪತ್ತು ವಿತರಣೆ’ ಆರಂಭಿಸಿದ್ದಾರೆ” ಎಂದು ಹೇಳಿದೆ. ಈ ಆರೋಪಕ್ಕೆ ಯಾವುದೇ ಪುರಾವೆಗಳಿಲ್ಲ.

ಆದರೆ, “ದೇಶದ ಸಂಪತ್ತನ್ನು ಮುಸಲ್ಮಾನರಿಗೆ ಹಂಚುತ್ತೇನೆ” ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ ಎಂದು ಟಿವಿ9 ಸುದ್ದಿ ವಾಹಿನಿಯ ಹಳೆಯ ವಿಡಿಯೋವೊಂದನ್ನು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಹಂಚಿಕೊಂಡಿದ್ದರು. ಈ ಬಗ್ಗೆಯೂ ನಾನುಗೌರಿ.ಕಾಂ ಸತ್ಯಾಸತ್ಯತೆ ಪರಿಶೀಲನೆ ನಡೆಸಿದೆ. ಅದರ ಲಿಂಕ್ ಕೆಳಗಿದೆ.

FACT CHECK : ‘ದೇಶದ ಸಂಪತ್ತನ್ನು ಮುಸಲ್ಮಾನರಿಗೆ ಹಂಚುತ್ತೇನೆ’ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ರಾ?  

ಇದನ್ನೂ ಓದಿ : FACT CHECK: ದೇವೇಗೌಡರ ಕುರಿತು ಸಚಿವ ರಾಜಣ್ಣ ಕೀಳು ಮಟ್ಟದ ಹೇಳಿಕೆ ನೀಡಿದ್ದಾರೆಂದು ಹಳೆಯ ವಿಡಿಯೋ ಹಂಚಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...