Homeಕರ್ನಾಟಕಬೆಂಗಳೂರು: ಬರ ಪರಿಹಾರ ಬಿಡುಗಡೆಗೆ ಆಗ್ರಹಿಸಿ ಕಾಂಗ್ರೆಸ್‌ನಿಂದ ಪ್ರತಿಭಟನೆ

ಬೆಂಗಳೂರು: ಬರ ಪರಿಹಾರ ಬಿಡುಗಡೆಗೆ ಆಗ್ರಹಿಸಿ ಕಾಂಗ್ರೆಸ್‌ನಿಂದ ಪ್ರತಿಭಟನೆ

- Advertisement -
- Advertisement -

ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಕರ್ನಾಟಕವನ್ನು ಮತ್ತು ಕರ್ನಾಟಕದ ರೈತರನ್ನು ದ್ವೇಷಿಸುತ್ತಾರೆ. ಕರ್ನಾಟಕಕ್ಕೆ ನ್ಯಾಯ ಕೊಡಿ ಎಂದು ಕೇಳಿದ್ದರೂ, ಇದುವರೆಗೂ ಕೇಂದ್ರ ಸರ್ಕಾರ ಸ್ಪಂದಿಸಿಲ್ಲ. ಅದಕ್ಕಾಗಿ ಪ್ರತಿಭಟನೆ ಹಮ್ಮಿಕೊಂಡು ರಾಜ್ಯ ಹಾಗೂ ದೇಶದ ಜನರ ಗಮನ ಸೆಳೆಯುವ ಪ್ರಯತ್ನ ಮಾಡಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಇಂದು (ಏಪ್ರಿಲ್ 23) ವಿಧಾನಸೌಧದ ಆವರಣದಲ್ಲಿರುವ ಗಾಂಧಿ ಪ್ರತಿಮೆ ಮುಂದೆ ಕೇಂದ್ರ ಸರ್ಕಾರದಿಂದ ರಾಜ್ಯ ಸರ್ಕಾರಕ್ಕೆ ಬರಬೇಕಾಗಿರುವ ಬರ ಪರಿಹಾರ ನೀಡದಿರುವುದನ್ನು ಖಂಡಿಸಿ ಆಯೋಜಿಸಿದ್ದ ಪ್ರತಿಭಟನೆಯಲ್ಲಿ ಪಾಲ್ಗೊಂಡ ನಂತರ ಅವರು ಮಾಧ್ಯಮಗಳೊಂದಿಗೆ ಮಾತನಾಡಿದರು.

“ಸೆಪ್ಟೆಂಬರ್ 22, 2023ರಂದು ಬರದ ಕುರಿತು ನಾವು ಕೇಂದ್ರ ಸರ್ಕಾರಕ್ಕೆ ಮನವಿಯನ್ನು ಸಲ್ಲಿಸಿದ್ದೆವು. ಬಳಿಕ ಕೇಂದ್ರದ ತಂಡ ರಾಜ್ಯಕ್ಕೆ ಬಂದು 4 ದಿನಗಳ ಕಾಲ ಪರಿಶೀಲನೆ ಮಾಡಿ ಕೇಂದ್ರಕ್ಕೆ ವರದಿಯನ್ನು ಸಲ್ಲಿಸಿತ್ತು. ಈ ಮಧ್ಯೆ ಸಚಿವರಾದ ಕೃಷ್ಣ ಬೈರೇಗೌಡ, ಚೆಲುವರಾಯಸ್ವಾಮಿ ಮತ್ತು ಪ್ರಿಯಾಂಕ್ ಖರ್ಗೆ ಸಂಬಂಧಪಟ್ಟ ಕೇಂದ್ರ ಸಚಿವರನ್ನು ಭೇಟಿ ಮಾಡಿ ಕರ್ನಾಟಕ ಎದುರಿಸುತ್ತಿರುವ ಬರಗಾಲದ ಬಗ್ಗೆ ವಿವರಿಸಿದ್ದರು. ರಾಜ್ಯದಲ್ಲಿ ಭೀಕರ ಬರಗಾಲವಿದ್ದು, 240 ತಾಲೂಕುಗಳ ಪೈಕಿ 223 ತಾಲೂಕುಗಳನ್ನು ಬರಗಾಲ ಪೀಡಿತ ಎಂದು ಘೋಷಣೆ ಮಾಡಿದ್ದೇವೆ. 100 ವರ್ಷಗಳ ನಂತರ ಇಂತಹ ಬರಗಾಲ ಎದುರಾಗಿದೆ ಎಂದು ನಾವು ಮನವಿ ಕೊಟ್ಟಿದ್ದರೂ ಕೂಡ ಅಮಿತ್ ಶಾ ಚನ್ನಪಟ್ಟಣಕ್ಕೆ ಬಂದಿದ್ದ ಸಂದರ್ಭದಲ್ಲಿ ಮನವಿಯನ್ನು ವಿಳಂಬವಾಗಿ ಸಲ್ಲಿಸಿದ್ದಾರೆ ಎಂದಿದ್ದರು” ಎಂದು ಸಿಎಂ ಹೇಳಿದರು.

ಗ್ಯಾರಂಟಿಗಳಿಗೆ ಒಂದು ಪೈಸೆಯನ್ನೂ ಕೇಂದ್ರದಿಂದ ಕೇಳಿಲ್ಲ:

“ನಿರ್ಮಲಾ ಸೀತಾರಾಮನ್ ಅವರು ಗ್ಯಾರಂಟಿ ಯೋಜನೆಗಳಿಗೆ ಹಣ ಕೇಳುತ್ತಿದ್ದಾರೆ, ಬರಗಾಲಕ್ಕೆ ಅಲ್ಲ ಎಂದು ಸುಳ್ಳು ಹೇಳಿದ್ದಾರೆ. ನಾವು ಗ್ಯಾರಂಟಿಗಳಿಗೆ ಒಂದೇ ಒಂದು ಪೈಸೆಯನ್ನೂ ಕೇಂದ್ರದಿಂದ ಕೇಳಿಲ್ಲ. ನಮಗೆ ಬೇಕಾಗಿಯೂ ಇಲ್ಲ” ಎಂದು ಸಿಎಂ ತಿಳಿಸಿದರು.

ಬರಗಾಲವನ್ನು ಈವರೆಗೆ ಸಮರ್ಥವಾಗಿ ಎದುರಿಸಿದ್ದೇವೆ:

“ಗ್ಯಾರಂಟಿಗಳಿಗೆ ನಮ್ಮ ಸಂಪನ್ಮೂಲದಿಂದಲೇ ವೆಚ್ಚ ಭರಿಸಿದ್ದೇವೆ. 36 ಸಾವಿರ ಕೋಟಿ ರೂಪಾಯಿಗಳನ್ನು ಕಳೆದ ವರ್ಷ ಹಾಗೂ 52 ಸಾವಿರ ಕೋಟಿ ರೂಪಾಯಿಗಳನ್ನು ಮುಂದಿನ ಸಾಲಿಗೆ ಮೀಸಲಿರಿಸಿದ್ದೇವೆ. ಬರಗಾಲಕ್ಕೆ 48 ಸಾವಿರ ಹೆಕ್ಟೇರ್ ಪ್ರದೇಶ ಬೆಳೆ ನಷ್ಟವಾಗಿದೆ. ರೈತರು ಕಷ್ಟದಲ್ಲಿದ್ದಾರೆ. ನಮ್ಮ ಸರ್ಕಾರ 2 ಸಾವಿರ ರೂ.ವರೆಗೆ 34 ಲಕ್ಷ ರೈತರಿಗೆ ಪರಿಹಾರ ನೀಡಿದೆ. ಇದಕ್ಕಾಗಿ 650 ಕೋಟಿ ರೂ. ವೆಚ್ಚ ಮಾಡಲಾಗಿದೆ. ಬರಗಾಲವನ್ನು ಈವರೆಗೆ ಸಮರ್ಥವಾಗಿ ಎದುರಿಸಿದ್ದೇವೆ. ಕುಡಿಯುವ ನೀರು, ಮೇವು, ಜನರಿಗೆ ಕೆಲಸ, ಗುಳೇ ಹೋಗುವುದನ್ನು ತಪ್ಪಿಸುವುದು, ರೈತರಿಗೆ ಮೊದಲ ಕಂತಿನ ಪರಿಹಾರ ನೀಡುವುದನ್ನು ಮಾಡಿದ್ದೇವೆ ಎಂದು ಸಿಎಂ ವಿವರಿಸಿದರು.

ನರೇಂದ್ರ ಮೋದಿ, ಅಮಿತ್ ಶಾ ಯಾವ ಮುಖ ಇಟ್ಟುಕೊಂಡು ಕರ್ನಾಟಕಕ್ಕೆ ಬರುತ್ತಾರೆ?

ನಾವು 18,172 ಕೋಟಿ ರೂಪಾಯಿ ಬರ ಪರಿಹಾರವನ್ನು ಎನ್‌ಡಿಆರ್‌ಎಫ್‌ನಿಂದ ಬಿಡುಗಡೆ ಮಾಡುವಂತೆ ಕೋರಿದ್ದೇವೆ. ಈ ಸಂಬಂಧ ಮನವಿ ಸಲ್ಲಿಸಿ 7 ತಿಂಗಳಾಗಿವೆ. ನಾನೇ ಸ್ವತಃ ಪ್ರಧಾನ ಮಂತ್ರಿಗಳನ್ನು ಭೇಟಿಯಾಗಿದ್ದೇನೆ. ಸಂಬಂಧಪಟ್ಟವರಿಗೆ ತಿಳಿಸಿ ಕೂಡಲೇ ಹಣ ಬಿಡುಗಡೆ ಮಾಡುವಂತೆ ಹೇಳುವುದಾಗಿ ಪ್ರಧಾನಿ ಹೇಳಿದ್ದರು. ನಂತರ ನಾನು, ಕೃಷ್ಣಬೈರೇಗೌಡ ಡಿಸೆಂಬರ್ 20, 2023ರಂದು ಅಮಿತ್ ಶಾ ಅವರನ್ನು ಭೇಟಿ ಮಾಡಿದ್ದೆವು. ಡಿಸೆಂಬರ್ 23ಕ್ಕೆ ಸಭೆ ಕರೆದು ಇತ್ಯರ್ಥ ಮಾಡುವುದಾಗಿ ಅವರು ಭರವಸೆ ನೀಡಿದ್ದರು. ಆದರೆ ಈವರೆಗೆ ಏನೂ ಮಾಡಿಲ್ಲ. ಹೀಗಿರುವಾಗ ನರೇಂದ್ರ ಮೋದಿ, ಅಮಿತ್ ಶಾ ಯಾವ ಮುಖ ಇಟ್ಟುಕೊಂಡು ಕರ್ನಾಟಕಕ್ಕೆ ಬರುತ್ತಾರೆ? ರಾಜ್ಯಕ್ಕೆ ಮೇಲಿಂದ ಮೇಲೆ ಬರಲು ಅವರಿಗೆ ಯಾವುದೇ ನೈತಿಕತೆ ಇಲ್ಲ ಎಂದು ಹೇಳಿ ಪ್ರತಿಭಟಿಸಿ ಅವರ ಗಮನಕ್ಕೆ ತರುವ ಕೆಲಸ ಮಾಡಿದ್ದೇವೆ ಎಂದರು.

ಗೋ ಬ್ಯಾಕ್ ನರೇಂದ್ರ ಮೋದಿ, ಅಮಿತ್ ಶಾ

ಭದ್ರಾ ಮೇಲ್ದಂಡೆ ಯೋಜನೆಗೆ 5,300 ಕೋಟಿ ನೀಡುವುದಾಗಿ ನಿರ್ಮಲಾ ಸೀತಾರಾಮನ್ ಅವರು ತಮ್ಮ ಬಜೆಟ್ ನಲ್ಲಿ ಘೋಷಿಸಿದ್ದಾರೆ. ಬಜೆಟ್ ಸಂಸತ್ತಿನಲ್ಲಿ ಅನುಮೋದನೆಯಾಗಿದೆ. ಬೊಮ್ಮಾಯಿಯವರೂ ಕೂಡ ತಮ್ಮ ಬಜೆಟ್‌ನಲ್ಲಿ ಧನ್ಯವಾದ ಹೇಳಿ ಭದ್ರಾ ಮೇಲ್ದಂಡೆ ಯೋಜನೆಯನ್ನು ರಾಷ್ಟ್ರೀಯ ಯೋಜನೆಯನ್ನಾಗಿ ಮಾಡುವುದಾಗಿ ಘೋಷಿಸಿದ್ದಾರೆ. ಆದರೆ, ಇಂದಿನವರೆಗೆ ಯಾವುದೂ ಆಗಿಲ್ಲ. ಅದರ ಜೊತೆಗೆ 15ನೇ ಹಣಕಾಸು ಆಯೋಗ ಶಿಫಾರಸ್ಸು ಮಾಡಿರುವ 5,495 ಕೋಟಿ ವಿಶೇಷ ಅನುದಾನವನ್ನೂ ಕೊಟ್ಟಿಲ್ಲ. ಕೊಡದೇ ಇರಲು ಕಾರಣ ನಿರ್ಮಲಾ ಸೀತಾರಾಮನ್ ಮತ್ತು ನರೇಂದ್ರ ಮೋದಿ ಎಂದು ಕಿಡಿಕಾರಿದರು.

ಬೆಂಗಳೂರಿನ ಪೆರಿ ಫೆರಲ್ ರಿಂಗ್ ರಸ್ತೆಗೆ 3 ಸಾವಿರ ಕೋಟಿ ಹಾಗೂ ಬೆಂಗಳೂರಿನ ಅಭಿವೃದ್ಧಿಗೆ 3 ಸಾವಿರ ಕೋಟಿ ಕೊಡಿ ಎಂದು ಹಣಕಾಸು ಆಯೋಗ ಶಿಫಾರಸು ಮಾಡಿದೆ. ಅದನ್ನೂ ಕೊಟ್ಟಿಲ್ಲ. ನರೇಂದ್ರ ಮೋದಿಯವರಿಗೆ ಕರ್ನಾಟಕ ನೆನಪಾಗುವುದು ಚುನಾವಣೆ ಸಂದರ್ಭದಲ್ಲಿ ಮಾತ್ರ. ಪ್ರವಾಹ, ಭೀಕರ ಬರಗಾಲದಲ್ಲಿ ಬರಲಿಲ್ಲ. ಈಗ ಕರ್ನಾಟಕದ ಮತದಾರರಿಂದ ಮತ ಕೇಳಲು ಬರುತ್ತಿದ್ದಾರೆ. ಹಾಗಾಗಿ, ಗೋ ಬ್ಯಾಕ್ ನರೇಂದ್ರ ಮೋದಿ, ಗೂ ಬ್ಯಾಕ್ ಅಮಿತ್ ಶಾ ಎಂದು ಹೇಳುತ್ತಿದ್ದೇವೆ ಎಂದರು.

ಅಮಿತ್ ಶಾ ಬರ ಪರಿಹಾರ ಕೊಟ್ಟು ರಾಜ್ಯಕ್ಕೆ ಬರಲಿ

ಇಂದು ಬರುತ್ತಿರುವ ಅಮಿತ್ ಶಾ ಅವರು ಸಭೆ ನಡೆಸಿ 18,171 ಕೋಟಿ ರೂ. ರಾಜ್ಯದ ಬರ ಪರಿಹಾರ ಕೊಟ್ಟು ಆಮೇಲೆ ಬರಲಿ. ನಿಮಗೆ ಯಾವುದೇ ಮತ ಕೇಳುವ ಹಕ್ಕು ಇಲ್ಲ ಎಂದು ಅವರಿಗೆ ಹೇಳುತ್ತೇವೆ. ನ್ಯಾಯಯುತ ಬೇಡಿಕೆ ಇಟ್ಟಿದ್ದೇವೆ ಎಂದು ಸಿಎಂ ಹೇಳಿದರು.

ಅನಿವಾರ್ಯವಾಗಿ ಸುಪ್ರೀಂ ಕೋರ್ಟ್ ಕದ ತಟ್ಟಬೇಕಾದ ಸ್ಥಿತಿ

ರಾಜ್ಯ ಸರ್ಕಾರ ಅನಿವಾರ್ಯವಾಗಿ ಸುಪ್ರೀಂ ಕೋರ್ಟ್ ಕದ ತಟ್ಟಬೇಕಾದ ಪರಿಸ್ಥಿತಿ ಬಂತು. ಅಲ್ಲಿ ಅಟಾರ್ನಿ ಜನರಲ್ ಅವರು ನರೇಂದ್ರ ಮೋದಿ ಹಾಗೂ ನಿರ್ಮಲಾ ಸೀತಾರಾಮನ್ ಅವರು ಹೇಳಿದ ಸುಳ್ಳಿನ ಬಗ್ಗೆ ಪ್ರಸ್ತಾಪ ಮಾಡಲಿಲ್ಲ. ತೆರಿಗೆ ಅನ್ಯಾಯದ ಬಗ್ಗೆ ರಾಜ್ಯ ಸರ್ಕಾರ ಸೂಕ್ತವಾದ ಹಾಗೂ ಸತ್ಯಾಂಶವನ್ನು ಮಂಡಿಸಿದ್ದರಿಂದ ಕರ್ನಾಟಕದ ಮೇಲೆ ನ್ಯಾಯಾಲಯ ಕರುಣೆ ತೋರಿತು. ಒಂದು ವೇಳೆ ನಾವು ಸರ್ವೋಚ್ಚ ನ್ಯಾಯಾಲಯಕ್ಕೆ ಹೋಗದೇ ಇದ್ದಿದ್ದರೆ, ಒಂದು ರೂ.ಪರಿಹಾರ ಕೂಡ ನೀಡುತ್ತಿರಲಿಲ್ಲ ಎಂದರು.

ನ್ಯಾಯ ಕೇಳಲು ಜನತಾ ನ್ಯಾಯಾಲಯದ ಮೊರೆ : ಸುರ್ಜೇವಾಲ

ರಾಜ್ಯದ ಪರವಾಗಿ, ನರೇಂದ್ರ ಮೋದಿ ಮತ್ತು ಅಮಿತ್ ಶಾ ಅವರ ಭಾರತೀಯ ಚೆಂಬು ಪಕ್ಷದ ಸುಳ್ಳುಗಳನ್ನು ಜನತೆಗೆ ತೋರಿಸುತ್ತೇವೆ. ಈಗಾಗಲೇ ಸರ್ವೋಚ್ಚ ನ್ಯಾಯಾಲಯಕ್ಕೇ ಹೋಗಿದ್ದೇವೆ. ನ್ಯಾಯವನ್ನು ಕೇಳಲು ಜನತಾ ನ್ಯಾಯಾಲಯದ ಮೊರೆ ಹೋಗುತ್ತೇವೆ. ಮೋದಿ ಸರ್ಕಾರವನ್ನು ಕರ್ನಾಟಕದಿಂದ ಮಾತ್ರವಲ್ಲದೆ ಭಾರತದ ಇತರೆಡೆಗಳಿಂದಲೂ ಕಿತ್ತು ಹಾಕಲು ಪ್ರಯತ್ನಿಸುತ್ತೇವೆ ಎಂದು ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸುರ್ಜೇವಾಲ ಹೇಳಿದರು.

ಅನ್ಯಾಯ ಸಹಿಸಲು ಸಾಧ್ಯವಿಲ್ಲ

ರಾಜಕೀಯ ಸಂಘರ್ಷ ಮುಂದುವರೆದರೆ ರಾಜ್ಯಕ್ಕೆ ಬರಬೇಕಾದ ಅಭಿವೃದ್ಧಿ ಕಾರ್ಯಗಳಿಗೆ ಹಿನ್ನಡೆಯಾಗುವ ಸಾಧ್ಯತೆ ಇಲ್ಲವೇ? ತೊಂದರೆಯಾಗುವುದಿಲ್ಲವೇ? ಎಂಬ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿ, ಹಾಗಾದರೆ ನ್ಯಾಯ ಕೊಡಲಿ. ಅನ್ಯಾಯ ಸಹಿಸಲು ಸಾಧ್ಯವಿಲ್ಲ ಎಂದರು.

ಪ್ರತಿಭಟನೆಯಲ್ಲಿ ಸಚಿವರಾದ ಕೃಷ್ಣಬೈರೇಗೌಡ, ಕೆ.ಜೆ.ಜಾರ್ಜ್, ರಾಮಲಿಂಗಾರೆಡ್ಡಿ, ಬೈರತಿ ಸುರೇಶ್ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

ಇದನ್ನೂ ಓದಿ : ನೇಹಾ ಹತ್ಯೆ ಪ್ರಕರಣದ ತನಿಖೆ ಸಿಐಡಿ ಹೆಗಲಿಗೆ: ತ್ವರಿತ ವಿಚಾರಣೆಗೆ ವಿಶೇಷ ನ್ಯಾಯಾಲಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...