Homeಮುಖಪುಟಬಿಸಿಲಿನ ತಾಪವಿದ್ದರೂ ಬಿಜೆಪಿ ಒತ್ತಡದಿಂದ ಬಂಗಾಳದಲ್ಲಿ 7 ಹಂತದ ಚುನಾವಣೆ: ಅಭಿಷೇಕ್ ಬ್ಯಾನರ್ಜಿ

ಬಿಸಿಲಿನ ತಾಪವಿದ್ದರೂ ಬಿಜೆಪಿ ಒತ್ತಡದಿಂದ ಬಂಗಾಳದಲ್ಲಿ 7 ಹಂತದ ಚುನಾವಣೆ: ಅಭಿಷೇಕ್ ಬ್ಯಾನರ್ಜಿ

- Advertisement -
- Advertisement -

ಪಶ್ಚಿಮ ಬಂಗಾಳದಲ್ಲಿ ಸಾಕಷ್ಟು ಬಿಸಿಲಿನ ತಾಪವಿದ್ದರೂ, ಏಳು ಹಂತಗಳಲ್ಲಿ ಲೋಕಸಭೆ ಚುನಾವಣೆ ಆಯೋಜಿಸುವಂತೆ ಬಿಜೆಪಿ ಚುನಾವಣಾ ಆಯೋಗವನ್ನು ಒತ್ತಾಯಿಸಿದೆ ಎಂದು ಟಿಎಂಸಿಯ ನಾಯಕ ಅಭಿಷೇಕ್ ಬ್ಯಾನರ್ಜಿ ಮಂಗಳವಾರ ಆರೋಪಿಸಿದ್ದಾರೆ.

ಟಿಎಂಸಿಯ ಡಾರ್ಜಿಲಿಂಗ್ ಅಭ್ಯರ್ಥಿ ಗೋಪಾಲ್ ಲಾಮಾ ಅವರನ್ನು ಬೆಂಬಲಿಸಿ ಸಿಲಿಗುರಿಯ ಮತಿಗರಾದಲ್ಲಿ ಚುನಾವಣಾ ರ್ಯಾಲಿಯನ್ನು ಉದ್ದೇಶಿಸಿ ಮಾತನಾಡಿದ ಬ್ಯಾನರ್ಜಿ, “2021ರ ವಿಧಾನಸಭಾ ಚುನಾವಣೆಯಲ್ಲಿ ಎಂಟು ಹಂತಗಳಲ್ಲಿ ಮತದಾನ ನಡೆದಾಗ ಇದೇ ರೀತಿಯ ಘಟನೆ ಸಂಭವಿಸಿದೆ. ಅದರ ನಂತರ, ರಾಜ್ಯದಲ್ಲಿ ಸಾಂಕ್ರಾಮಿಕ ರೋಗದ ಹೊಸ ಅಲೆ ಅಪ್ಪಳಿಸಿತು” ಎಂದರು.

“2021ರಲ್ಲಿ ಉಲ್ಬಣಗೊಳ್ಳುತ್ತಿದ್ದ ಸಾಂಕ್ರಾಮಿಕ ರೋಗದಿಂದ ಉಂಟಾಗುವ ಅಪಾಯಗಳನ್ನೂ ಪರಿಗಣಿಸದೆ, ಕೇಂದ್ರದ ಬಿಜೆಪಿ ನೇತೃತ್ವದ ಸರ್ಕಾರವು ಪಶ್ಚಿಮ ಬಂಗಾಳದಲ್ಲಿ ಎಂಟು ಹಂತಗಳ ವಿಧಾನಸಭಾ ಚುನಾವಣೆಯನ್ನು ನಡೆಸಲು ಚುನಾವಣಾ ಆಯೋಗವನ್ನು ಒತ್ತಾಯಿಸಿತು. ನಂತರ ಏನಾಯಿತು ಎಂಬುದು ನಿಮಗೆಲ್ಲರಿಗೂ ತಿಳಿದಿದೆ; ಮತ್ತೊಂದು ಅಲೆ ಬಂದು ಅನೇಕ ಜೀವಗಳನ್ನು ಬಲಿ ತೆಗೆದುಕೊಂಡಿತು, ಈ ಜೀವಹಾನಿಗೆ ಹೊಣೆ ಯಾರು” ಎಂದು ಅಭಿಷೇಕ್ ಪ್ರಶ್ನಿಸಿದರು.

“ಬಿಜೆಪಿಯ ಆಜ್ಞೆಯ ಮೇರೆಗೆ ಚುನಾವಣಾ ಆಯೋಗವು ಈ ಬಾರಿ ಏಳು ಹಂತಗಳ ಚುನಾವಣೆಯನ್ನು ಆಯೋಜಿಸಿದೆ. ಇದರಿಂದಾಗಿ ದೆಹಲಿಯ ಬಿಜೆಪಿ ನಾಯಕರು ಪ್ರಚಾರದಲ್ಲಿ ಭಾಗವಹಿಸಲು ಸಾಧ್ಯವಾಗುತ್ತದೆ. ಏಳು ಹಂತದ ಚುನಾವಣೆಗಳು ನಡೆಯುತ್ತಿವೆ, ಇದರಿಂದ ಪ್ರಧಾನಿ ನರೇಂದ್ರ ಮೋದಿ ಮತ್ತು ಅಮಿತ್ ಶಾ ಪ್ರತಿ ಹಂತದ ಮೊದಲು ಪ್ರಚಾರ ಮಾಡಬಹುದು. ಆದರೆ, ಅವರ ಸುಳ್ಳನ್ನು ಜನರು ತಿರಸ್ಕರಿಸುತ್ತಾರೆ” ಎಂದು ಅವರು ಹೇಳಿದರು.

ತಮ್ಮ ಪಕ್ಷಕ್ಕೆ ಸತತ ನಾಲ್ಕನೇ ಅವಧಿಗೆ ಸ್ಥಾನವನ್ನು ಉಳಿಸಿಕೊಳ್ಳಲು ಪ್ರಯತ್ನಿಸುತ್ತಿರುವ ಹಾಲಿ ಬಿಜೆಪಿ ಸಂಸದ ರಾಜು ಬಿಸ್ತಾ ವಿರುದ್ಧ ಟಿಎಂಸಿ ಲಾಮಾ ಅವರನ್ನು ಕಣಕ್ಕಿಳಿಸಿದೆ. ಲಾಮಾ ಅವರನ್ನು “ಭೂಮಿಪುತ್ರ” ಅಥವಾ ಮಣ್ಣಿನ ಮಗ ಎಂದು ಬಣ್ಣಿಸಿದ ಬ್ಯಾನರ್ಜಿ, ಬಿಸ್ತಾರನ್ನು “ವಲಸೆ ಹಕ್ಕಿ” ಎಂದು ಕರೆದರು.

ಸಾಂಕ್ರಾಮಿಕ ಸಮಯದಲ್ಲಿ ಬಿಸ್ತಾ ಜನರಿಗೆ ಸಹಾಯ ಮಾಡಲಿಲ್ಲ ಮತ್ತು ದೆಹಲಿಯಲ್ಲಿಯೇ ಇದ್ದರು. ಆದರೆ, ಆ ಸಮಯದಲ್ಲಿ ಟಿಎಂಸಿ ಕಾರ್ಯಕರ್ತರು ಸಾಧ್ಯವಿರುವ ಎಲ್ಲ ರೀತಿಯಲ್ಲಿ ಜನರನ್ನು ಬೆಂಬಲಿಸಿದರು ಎಂದರು.

11 ಗೂರ್ಖಾ ಜನಾಂಗಗಳನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸುವ ಭರವಸೆಯನ್ನು ಬಿಜೆಪಿ ಈಡೇರಿಸಿಲ್ಲ ಎಂದು ಆರೋಪಿಸಿದರು.

ಮೊದಲ ಹಂತದ ಚುನಾವಣೆಗಳಲ್ಲಿ ಬಿಜೆಪಿಯ ಸಾಧನೆ ಕಳಪೆಯಾಗಿತ್ತು ಮತ್ತು ನಂತರದ ಹಂತಗಳಲ್ಲಿ ಅದು ಭಿನ್ನವಾಗಿರುವುದಿಲ್ಲ ಎಂದು ಬ್ಯಾನರ್ಜಿ ಹೇಳಿದ್ದಾರೆ.

ನಂತರ, ಮಾಲ್ಡಾದ ಬೈಸ್ನಾಬ್‌ನಗರದಲ್ಲಿ ರ್ಯಾಲಿಯನ್ನುದ್ದೇಶಿಸಿ ಮಾತನಾಡಿದ ಬ್ಯಾನರ್ಜಿ, ಮಾಲ್ಡಾ ದಕ್ಷಿಣದ ಕಾಂಗ್ರೆಸ್ ಸಂಸದರಾಗಲೀ ಅಥವಾ ಮಾಲ್ಡಾ ಉತ್ತರದ ಬಿಜೆಪಿ ಸಂಸದರಾಗಲೀ ಕೇಂದ್ರದೊಂದಿಗೆ ಎಂಜಿಎನ್‌ಆರ್‌ಇಜಿಎ ಬಾಕಿಯ ವಿಷಯವನ್ನು ಪ್ರಸ್ತಾಪಿಸಲಿಲ್ಲ ಎಂದು ಆರೋಪ ಮಾಡಿದರು.

ಕಾಂಗ್ರೆಸ್‌ನ ಬಹರಂಪುರ ಸಂಸದ ಅಧೀರ್ ರಂಜನ್ ಚೌಧರಿ ಅವರು ರಾಜ್ಯದಲ್ಲಿ ಟಿಎಂಸಿ ಸರ್ಕಾರವನ್ನು ಅಪಖ್ಯಾತಿಗೊಳಿಸಲು ಬಿಜೆಪಿಯೊಂದಿಗೆ ಕೈಜೋಡಿಸಿದ್ದಾರೆ. ಕೇಂದ್ರೀಯ ಸಂಸ್ಥೆಗಳಿಂದ ಟಿಎಂಸಿ ನಾಯಕರಿಗೆ ಕಿರುಕುಳ ನೀಡುವ ಬಿಜೆಪಿಯ ಕಾರ್ಯಸೂಚಿಯನ್ನು ಪಶ್ಚಿಮ ಬಂಗಾಳದ ಕಾಂಗ್ರೆಸ್ ಬೆಂಬಲಿಸುತ್ತಿದೆ ಎಂದು ಅವರು ಆರೋಪಿಸಿದ್ದಾರೆ.

2021ರ ವಿಧಾನಸಭಾ ಚುನಾವಣೆಗೆ ಮುಂಚಿತವಾಗಿ ಟಿಎಂಸಿಯನ್ನು ವಿಭಜಿಸಲು ಬಿಜೆಪಿ ಪಿತೂರಿ ನಡೆಸಿದೆ. ಆದರೆ, ಪ್ರಯತ್ನಗಳನ್ನು ವಿಫಲಗೊಳಿಸಲಾಯಿತು ಎಂದರು.

ಇದನ್ನೂ ಓದಿ; ಸೊರೇನ್ ಜಾಮೀನು ಅರ್ಜಿಗೆ ಉತ್ತರಿಸಲು ಇಡಿಗೆ ಕಾಲಾವಕಾಶ ನೀಡಿದ ಕೋರ್ಟ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...