Homeಮುಖಪುಟನೇಹಾ ಕೊಲೆ ಪ್ರಕರಣ: 'ತನಿಖೆ ದಿಕ್ಕು ತಪ್ಪುತ್ತಿದೆ' ಎಂದು ಆರೋಪಿಸಿದ್ದ ತಂದೆ ಕ್ಷಮೆಯಾಚನೆ

ನೇಹಾ ಕೊಲೆ ಪ್ರಕರಣ: ‘ತನಿಖೆ ದಿಕ್ಕು ತಪ್ಪುತ್ತಿದೆ’ ಎಂದು ಆರೋಪಿಸಿದ್ದ ತಂದೆ ಕ್ಷಮೆಯಾಚನೆ

- Advertisement -
- Advertisement -

ಹುಬ್ಬಳ್ಳಿಯ ನೇಹಾ ಕೊಲೆ ಪ್ರಕರಣದ ತನಿಖೆ ದಿಕ್ಕು ತಪ್ಪುತ್ತಿದೆ ಎಂದು ಆರೋಪಿಸಿದ್ದ ಆಕೆಯ ತಂದೆ ನಿರಂಜನಯ್ಯ ಹಿರೇಮಠ ಇದೀಗ ತಮ್ಮ ಹೇಳಿಕೆಗೆ ಕ್ಷಮೆಯಾಚಿಸಿದ್ದಾರೆ. ಮಾಹಿತಿಯ ಕೊರತೆಯಿಂದ ಮಗಳ ಕೊಲೆ ಪ್ರಕರಣದ ತನಿಖೆ ದಿಕ್ಕು ತಪ್ಪುತ್ತಿದೆ ಎಂದು ಭಾವಿಸಿದ್ದೆ, ನನ್ನಿಂದಾದ ತಪ್ಪಿಗೆ ಕ್ಷಮೆ ಕೇಳುತ್ತಿದ್ದೇನೆ ಎಂದು ಹೇಳಿದ್ದಾರೆ.

ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ನಿರಂಜನಯ್ಯ ಹಿರೇಮಠ, ‘ಮಗಳು ಕೊಲೆಯಾದ ನಂತರ ನಾನು ದುಃಖದಲ್ಲಿ ಇದ್ದೆ. ಮಗಳ ಅಂತ್ಯಕ್ರಿಯೆವರೆಗೂ ನನ್ನ ಜೊತೆಯಲ್ಲಿದ್ದ ನನ್ನವರು, ನಂತರ ಕಂಡಿರಲಿಲ್ಲ. ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದು ಭಾವಿಸಿ, ಮಾಹಿತಿಯ ಕೊರತೆಯಿಂದ ಸರ್ಕಾರದ ವಿರುದ್ಧ ಮಾತನಾಡಿದ್ದೆ. ಪ್ರಕರಣದ ಕುರಿತು ಎಲ್ಲಾ ಮಾಹಿತಿಯನ್ನು ನಮ್ಮ ಪಕ್ಷದವರೇ ಸರ್ಕಾರಕ್ಕೆ ಒದಗಿಸಿದ್ದಾರೆ, ನನ್ನಿಂದ ತಪ್ಪಾಗಿದೆ ಎಂದು ಹೇಳಿದ್ದಾರೆ.

ನಮ್ಮ ಪಕ್ಷದವರು ತೆರೆಮರೆಯಲ್ಲಿ ನನ್ನ ಮಗಳಿಗೆ ನ್ಯಾಯ ಕೊಡಿಸುವಲ್ಲಿ ಪ್ರಯತ್ನ ಮಾಡುತ್ತಿದ್ದಾರೆ. ಇದೀಗ ಪ್ರಕರಣ ಸಿಐಡಿಗೆ ವಹಿಸುವಲ್ಲಿಯೂ ಅವರ ಪಾತ್ರ ವಹಿಸಿದ್ದಾರೆ. ಪೊಲೀಸ್ ಕಮಿಷನರ್ ಕೂಡ ಸರಿಯಾದ ದಿಕ್ಕಿನಲ್ಲಿ ತನಿಖೆ ನಡೆಸುತ್ತಿದ್ದಾರೆ. ಅವರ ವಿರುದ್ಧವೂ ನಾನು ಅಸಮಧಾನ ವ್ಯಕ್ತಪಡಿಸಿದ್ದೆ. ಮಗಳನ್ನು ಕಳೆದುಕೊಂಡ ದುಃಖದಲ್ಲಿದ್ದ ನಾನು ಏನೇ ತಪ್ಪು ಮಾತನಾಡಿದರೂ ಅನ್ಯಥಾ ಭಾವಿಸದೆ ನನ್ನಿಂದಾದ ತಪ್ಪಿಗೆ ಎಲ್ಲರಿಂದಲೂ ಕ್ಷಮೆ ಕೇಳುತ್ತಿದ್ದೇನೆ ಎಂದು ಹೇಳಿದ್ದಾರೆ.

ಇಂತಹ ಪ್ರಕರಣಗಳು ನಡೆದಾಗ ಸೂಕ್ತ ಕ್ರಮ ಕೈಗೊಳ್ಳಲು ವಿಶೇಷ ಕಾನೂನು ರಚಿಸುವ ಕುರಿತು ಸರ್ಕಾರದ ಮೇಲೆ ಒತ್ತಡ ಹೇರಲಾಗುತ್ತಿದೆ. ಆ ಕಾನೂನಿಗೆ ‘ನೇಹಾ ಹಿರೇಮಠ ಕಾಯ್ದೆ’ ಎಂದು ಹೆಸರಿಡಬೇಕು. ಅಂತಹ ಕಾಯ್ದೆ ಜಾರಿಗೆ ಬಂದರೆ ಅಪರಾಧ ಮಾಡುವ ಮನಸ್ಥಿತಿಯವರಿಗೆ ಭಯ ಹುಟ್ಟಿಸುತ್ತದೆ. ಮತ್ತೊಂದು ಇಂತಹ ಪ್ರಕರಣ ಎಲ್ಲಿಯೂ ಮರುಕಳಿಸಬಾರದು. ಎಲ್ಲಾ ಹೆಣ್ಣು ಮಕ್ಕಳು ನಿರ್ಭಯದಿಂದ ಕಾಲೇಜಿಗೆ ಹೋಗುವಂತಾಗಬೇಕು ಎಂದು ಹೇಳಿದ್ದಾರೆ.

ಪ್ರಕರಣ ಸಿಐಡಿ ತನಿಖೆಗೆ: 

ಹುಬ್ಬಳ್ಳಿಯ ವಿದ್ಯಾರ್ಥಿನಿ ನೇಹಾ ಹಿರೇಮಠ ಹತ್ಯೆ ಪ್ರಕರಣದ ತನಿಖೆಯನ್ನು ರಾಜ್ಯ ಸರ್ಕಾರ ಸಿಐಡಿಗೆ ವಹಿಸಿ ಆದೇಶಿಸಿದೆ. ಸಿಐಡಿಯ ಎಸ್ಪಿ ವೆಂಕಟೇಶ್ ನೇತೃತ್ವದಲ್ಲಿ ತನಿಖೆ ಪ್ರಾರಂಭವಾಗಿದೆ.

ಏಪ್ರಿಲ್ 18ರಂದು ಸಂಜೆ ಹುಬ್ಬಳ್ಳಿಯ ಬಿವಿಬಿ ಕಾಲೇಜು ಕ್ಯಾಂಪಸ್‌ನಲ್ಲಿ ವಿದ್ಯಾರ್ಥಿ ನೇಹಾ ಹಿರೇಮಠ ಅವರನ್ನು ಬರ್ಬರವಾಗಿ ಹತ್ಯೆ ಮಾಡಲಾಗಿತ್ತು. ಪ್ರಕರಣ ಸಂಬಂಧ ಫಯಾಝ್ ಬಾಬಾಸಾಹೇಬ್ ಖೊಂಡಾನಾಯಕ್ ಎಂಬಾತನನ್ನು ಹುಬ್ಬಳ್ಳಿಯ ವಿದ್ಯಾನಗರ ಪೊಲೀಸರು ಬಂಧಿಸಿದ್ದರು.

ಇದನ್ನು ಓದಿ: ಜಾಗತಿಕ ಮಾದ್ಯಮಗಳಲ್ಲಿ ಸುದ್ದಿಯಾದ ಪ್ರಧಾನಿಯ ದ್ವೇಷ ಭಾಷಣ: ಅಂತರಾಷ್ಟ್ರೀಯ ಮಟ್ಟದಲ್ಲಿ ಮತ್ತೆ ಟೀಕೆಗೆ ಗುರಿಯಾದ ಮೋದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...