Homeಮುಖಪುಟಪತಂಜಲಿ ಪ್ರಕರಣ: ಸುಪ್ರೀಂಕೋರ್ಟ್‌ ಪ್ರಶ್ನೆ ಬಳಿಕ ರಾಮ್‌ದೇವ್‌ ಮತ್ತೆ ಸಾರ್ವಜನಿಕ ಕ್ಷಮೆಯಾಚನೆ

ಪತಂಜಲಿ ಪ್ರಕರಣ: ಸುಪ್ರೀಂಕೋರ್ಟ್‌ ಪ್ರಶ್ನೆ ಬಳಿಕ ರಾಮ್‌ದೇವ್‌ ಮತ್ತೆ ಸಾರ್ವಜನಿಕ ಕ್ಷಮೆಯಾಚನೆ

- Advertisement -
- Advertisement -

ಪ್ರಸ್ತುತ ಸುಪ್ರೀಂಕೋರ್ಟ್‌ ಅಂಗಳದಲ್ಲಿರುವ ‘ತಪ್ಪು ದಾರಿಗೆಳೆಯುವ ಜಾಹೀರಾತುಗಳ’ ಕುರಿತು ಪತಂಜಲಿ ಆಯುರ್ವೇದ, ಆಚಾರ್ಯ ಬಾಲಕೃಷ್ಣ ಮತ್ತು ಸ್ವಾಮಿ ರಾಮ್‌ದೇವ್ ಅವರು ಹೊಸದಾಗಿ ಸಾರ್ವಜನಿಕವಾಗಿ ಕ್ಷಮೆಯಾಚಿಸಿದ್ದಾರೆ.

ನಿನ್ನೆ ಸುಪ್ರೀಂಕೋರ್ಟ್‌, ಪತ್ರಿಕೆಗಳಲ್ಲಿ ಮುದ್ರಿತ ಹಿಂದಿನ ಸಾರ್ವಜನಿಕ ಕ್ಷಮೆಯಾಚನೆಯು ಅವರ ಜಾಹೀರಾತುಗಳಷ್ಟು ದೊಡ್ಡದಾಗಿದೆಯೇ ಎಂದು ಕೇಳಿತ್ತು. ಇದರ ಬೆನ್ನಲ್ಲಿ ಮತ್ತೆ ಪತಂಜಲಿ ಆಯುರ್ವೇದ, ಆಚಾರ್ಯ ಬಾಲಕೃಷ್ಣ ಮತ್ತು ಸ್ವಾಮಿ ರಾಮ್‌ದೇವ್ ಅವರು ಹೊಸ ಸಾರ್ವಜನಿಕ ಕ್ಷಮೆಯಾಚನೆಯನ್ನು ಪ್ರಕಟಿಸಿದ್ದಾರೆ.

ಮಂಗಳವಾರ ಜಾಹೀರಾತುಗಳ ಗಾತ್ರದ ಬಗ್ಗೆ ಸುಪ್ರೀಂಕೋರ್ಟ್‌ ಪ್ರಶ್ನಿಸಿದಾಗ, ಪತಂಜಲಿಯ ಪರ ವಕೀಲ ಮುಕುಲ್ ರೋಹಟಗಿ, 67 ಪತ್ರಿಕೆಗಳಲ್ಲಿ ಜಾಹೀರಾತು ಪ್ರಕಟಿಸಲಾಗಿದೆ ಮತ್ತು ಅದಕ್ಕೆ “ಹತ್ತಾರು ಲಕ್ಷ” ವೆಚ್ಚವಾಗುತ್ತದೆ ಎಂದು ಪೀಠಕ್ಕೆ ತಿಳಿಸಿದ್ದಾರೆ.

ಇದಕ್ಕೆ ಪ್ರತಿಕ್ರಿಯಿಸಿದ ನ್ಯಾಯಮೂರ್ತಿ ಕೊಹ್ಲಿ, ನೀವು ಪ್ರಕಟಿಸಿದ ಪೂರ್ಣ ಪುಟದ ಜಾಹೀರಾತುಗಳಿಗೆ ಸಮಾನವಾದ ವೆಚ್ಚ ಕ್ಷಮೆಯಾಚನೆಯ ಜಾಹೀರಾತಿಗೆ ವೆಚ್ಚವಾಗಿದೆಯಾ ಎಂದು ಪ್ರಶ್ನಿಸಿದ್ದು, ಪತಂಜಲಿಯ ವಕೀಲರು ಪ್ರಕಟಿಸಿದ ಕ್ಷಮಾಪಣೆಯ ಪ್ರತಿಯನ್ನು ನೀಡದಿದ್ದಕ್ಕಾಗಿ ಪೀಠವು ಛೀಮಾರಿ ಹಾಕಿದೆ.

ಭಾರತದ ಕೋವಿಡ್-19 ವ್ಯಾಕ್ಸಿನೇಷನ್ ಮತ್ತು ಪತಂಜಲಿ ಆಯುರ್ವೇದ ಉತ್ಪನ್ನಗಳ ಬಗ್ಗೆ ತಪ್ಪುದಾರಿಗೆಳೆಯುವ ಜಾಹೀರಾತುಗಳು ಸೇರಿದಂತೆ ಆಧುನಿಕ ಔಷಧದ ಬಗ್ಗೆ ರಾಮ್‌ದೇವ್ ಅವರ ವಿವಾದಾತ್ಮಕ ಹೇಳಿಕೆಗಳ ವಿರುದ್ಧದ ಭಾರತೀಯ ವೈದ್ಯಕೀಯ ಸಂಘ ಅರ್ಜಿಗೆ ಸಂಬಂಧಿಸಿದ ವಿಚಾರಣೆ ವೇಳೆ ಕೋರ್ಟ್‌ ಈ ಮಹತ್ವದ ಅಂಶವನ್ನು ಗಮನಿಸಿದೆ.

ನವೆಂಬರ್ 21ರಂದು, ಆಧುನಿಕ ವೈದ್ಯಕೀಯ ವ್ಯವಸ್ಥೆಗಳ ವಿರುದ್ಧ ತಪ್ಪುದಾರಿಗೆಳೆಯುವ ಮಾಹಿತಿ ಮತ್ತು ಜಾಹೀರಾತುಗಳನ್ನು ಪ್ರಕಟಿಸುವುದನ್ನು ತಕ್ಷಣವೇ ನಿಲ್ಲಿಸುವಂತೆ ಪತಂಜಲಿಯನ್ನು ಸುಪ್ರೀಂ ಕೋರ್ಟ್ ಕೇಳಿದೆ, ಇಲ್ಲದಿದ್ದರೆ ಭಾರಿ ದಂಡವನ್ನು ವಿಧಿಸುವುದಾಗಿ ಎಚ್ಚರಿಸಿತ್ತು. ಇದಲ್ಲದೆ ನವೆಂಬರ್ 22ರಂದು ರಾಮ್‌ದೇವ್ ಅವರು ನಡೆಸಿದ ಪತ್ರಿಕಾಗೋಷ್ಠಿಯ ವೀಡಿಯೊ ಕ್ಲಿಪ್‌ನ್ನು IMA ಮತ್ತೆ ಪೀಠದ ಮುಂದಿಟ್ಟಿತ್ತು. ಇದಲ್ಲದೆ, ರಾಮ್‌ದೇವ್ ಅವರ ಸಂಸ್ಥೆಯು ಅಧಿಕ ರಕ್ತದೊತ್ತಡ ಮತ್ತು ಮಧುಮೇಹದಂತಹ ಖಾಯಿಲೆಗಳನ್ನು ಶಾಶ್ವತವಾಗಿ ಗುಣಪಡಿಸುವುದಾಗಿ ಹೇಳಿಕೊಂಡು ಹಲವಾರು ಸುಳ್ಳು ಜಾಹೀರಾತುಗಳನ್ನು ಪ್ರಸಾರ ಮಾಡುವುದನ್ನು ಮುಂದುವರೆಸಿದೆ ಎಂದು ವೈದ್ಯಕೀಯ ಸಂಸ್ಥೆ ಕೊರ್ಟ್‌ ಗಮನಸೆಳೆದಿದೆ.

ಫೆಬ್ರವರಿ 27ರಂದು ಪತಂಜಲಿ ಆಯುರ್ವೇದ್ ಮತ್ತು ಬಾಲಕೃಷ್ಣ ಅವರಿಗೆ ತಪ್ಪು ದಾರಿಗೆಳೆಯುವ ಜಾಹೀರಾತುಗಳನ್ನು ಮುಂದುವರೆಸಿದ್ದಕ್ಕಾಗಿ ಸುಪ್ರೀಂಕೋರ್ಟ್ ನಿಂದನೆ ನೋಟಿಸ್ ಜಾರಿಗೊಳಿಸಿದೆ ಮತ್ತು ತಾತ್ಕಾಲಿಕವಾಗಿ ವೈದ್ಯಕೀಯ ಜಾಹೀರಾತುಗಳನ್ನು ಪ್ರಕಟಿಸದಂತೆ ನಿಷೇಧ ವಿಧಿಸಿತ್ತು. ಜಾಹೀರಾತುಗಳ ಮೇಲೆ ಯಾವುದೇ ಕ್ರಮ ಕೈಗೊಳ್ಳದ ಕೇಂದ್ರ ಸರಕಾರವನ್ನು ಸುಪ್ರೀಂ ಕೋರ್ಟ್ ಕಟುವಾಗಿ ಟೀಕಿಸಿತ್ತು. ಮಾರ್ಚ್ 19, ಏಪ್ರಿಲ್ 2 ಮತ್ತು ಏಪ್ರಿಲ್ 10ರಂದು ವಿಚಾರಣೆಯ ಸಂದರ್ಭದಲ್ಲಿ, ಪೀಠವು ರಾಮ್‌ದೇವ್ ಮತ್ತು ಬಾಲಕೃಷ್ಣ ಅವರನ್ನು ಖುದ್ದಾಗಿ ಕರೆದು, ನ್ಯಾಯಾಲಯದ ನಿಂದನೆಗಾಗಿ ಏಕೆ ಶಿಕ್ಷಿಸಬಾರದು ಎಂದು ಕಾರಣವನ್ನು ನೀಡುವಂತೆ ಹೇಳಿತ್ತು. ನ್ಯಾಯಾಲಯವು ಇಲ್ಲಿಯವರೆಗೆ ರಾಮ್‌ದೇವ್ ಮತ್ತು ಬಾಲಕೃಷ್ಣ ಅವರು ನೀಡಿದ ಎರಡು ಕ್ಷಮೆಯಾಚನೆಗಳನ್ನು ತಿರಸ್ಕರಿಸಿದೆ.

ಇದನ್ನು ಓದಿ: ನೇಹಾ ಕೊಲೆ ಪ್ರಕರಣ: ‘ತನಿಖೆ ದಿಕ್ಕು ತಪ್ಪುತ್ತಿದೆ’ ಎಂದು ಆರೋಪಿಸಿದ್ದ ತಂದೆ ಕ್ಷಮೆಯಾಚನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...