Homeಮುಖಪುಟಅಮೇಥಿಯಲ್ಲಿ 'ಅಬ್ ಕಿ ಬಾರ್ ರಾಬರ್ಟ್ ವಾದ್ರಾ' ಪೋಸ್ಟರ್; ಪ್ರಿಯಾಂಕಾ ಪತಿ ಸ್ಪರ್ಧೆಗೆ ಹೆಚ್ಚಿದ ಒತ್ತಡ

ಅಮೇಥಿಯಲ್ಲಿ ‘ಅಬ್ ಕಿ ಬಾರ್ ರಾಬರ್ಟ್ ವಾದ್ರಾ’ ಪೋಸ್ಟರ್; ಪ್ರಿಯಾಂಕಾ ಪತಿ ಸ್ಪರ್ಧೆಗೆ ಹೆಚ್ಚಿದ ಒತ್ತಡ

- Advertisement -
- Advertisement -

2019ರ ಲೋಕಸಭಾ ಚುನಾವಣೆ ಸೋಲಿನ ನಂತರ ರಾಹುಲ್ ಗಾಂಧಿ ತಮ್ಮ ಕ್ಷೇತ್ರವನ್ನು ಅಮೇಥಿಯಿಂದ ಕೇರಳದ ವಯನಾಡಿಗೆ ಸ್ಥಳಾಂತರಿಸಿದ್ದಾರೆ. ಆದರೆ, ಬಿಜೆಪಿ ಹಾಲಿ ಸಂಸದೆ ಸ್ಮೃತಿ ಇರಾನಿ ವಿರುದ್ಧ ಸ್ಪರ್ಧಿಸುವ ಕಾಂಗ್ರೆಸ್ ಅಭ್ಯರ್ಥಿ ಯಾರು ಎಂಬುದು ಮಾತ್ರ ಇನ್ನೂ ಅಂತಿಮವಾಗಿಲ್ಲ. ಈ ನಡುವೆ, ಕ್ಷೇತ್ರದಲ್ಲಿ ರಾಬರ್ಟ್‌ ವಾದ್ರಾ ಕಣಕ್ಕಿಳಿಯಬೇಕು ಎಂದು ಪೋಸ್ಟರ್ ಅಭಿಯಾನ ಆರಂಭವಾಗಿದೆ.

ಕಾಂಗ್ರೆಸ್‌ನ ಅಮೇಥಿ ಅಭ್ಯರ್ಥಿ ಯಾರಾಗಲಿದ್ದಾರೆ ಎಂಬ ಕೂತೂಹಲದ ನಡುವೆ, ಸ್ಥಳೀಯ ಪಕ್ಷದ ಕಚೇರಿಯ ಹೊರಗೆ ಪ್ರಿಯಾಂಕಾ ಗಾಂಧಿ ವಾದ್ರಾ ಅವರ ಪತಿ ರಾಬರ್ಟ್ ವಾದ್ರಾ ಅವರಿಗೆ ಚುನಾವಣಾ ಪ್ರವೇಶಕ್ಕೆ ಒತ್ತಾಯಿಸುವ ಪೋಸ್ಟರ್‌ಗಳು ಕಂಡುಬಂದಿವೆ. ಪೋಸ್ಟರ್‌ಗಳಲ್ಲಿ “ಅಮೇಥಿ ಕಿ ಜನತಾ ಕರೇ ಪುಕಾರ್, ರಾಬರ್ಟ್ ವಾದ್ರಾ ಅಬ್ ಕಿ ಬಾರ್”, ಅಂದರೆ “ಅಮೇಥಿಯ ಜನರು ಈ ಬಾರಿ ರಾಬರ್ಟ್ ವಾದ್ರಾ ಅವರನ್ನು ಬಯಸುತ್ತಾರೆ” ಎಂದು ಬರೆಯಲಾಗಿದೆ.

ಲೋಕಸಭೆ ಚುನಾವಣೆಯ ಐದನೇ ಹಂತದ ಮತದಾನದಲ್ಲಿ ಮೇ 20 ರಂದು ಅಮೇಥಿ ಮತದಾನ ನಡೆಯಲಿದ್ದು, ಮೇ 3 ರಂದು ನಾಮಪತ್ರ ಸಲ್ಲಿಸಲು ಕೊನೆಯ ದಿನವಾಗಿದೆ. ಬಿಜೆಪಿ ಹಾಲಿ ಸಂಸದೆ ಮತ್ತು ಕೇಂದ್ರ ಸಚಿವೆ ಸ್ಮೃತಿ ಇರಾನಿ ಅವರನ್ನು ತನ್ನ ಅಭ್ಯರ್ಥಿ ಎಂದು ಘೋಷಿಸಿದ್ದರೂ, ಕಾಂಗ್ರೆಸ್ ತನ್ನ ಆಯ್ಕೆಯನ್ನು ಇನ್ನೂ ಹೆಸರಿಸಿಲ್ಲ.

ಅಮೇಥಿಯು ಗಾಂಧಿ ಕುಟುಂಬದ ಸ್ಥಾನವಾಗಿದ್ದು, ಹಿಂದೆ ಸಂಜಯ್ ಗಾಂಧಿ, ರಾಜೀವ್ ಗಾಂಧಿ, ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಪ್ರತಿನಿಧಿಸಿದ್ದರು. 2019ರ ಚುನಾವಣೆಯಲ್ಲಿ, ಕೇರಳದ ವಯನಾಡಿನಲ್ಲಿ ಗೆಲುವು ಸಾಧಿಸಲು ಯಶಸ್ವಿಯಾದ ರಾಹುಲ್ ಗಾಂಧಿ ವಿರುದ್ಧ ಅಮೇಥಿಯಲ್ಲಿ ಸ್ಮೃತಿ ಇರಾನಿ ಅದ್ಭುತ ಜಯ ಸಾಧಿಸಿದರು. ಈ ವರ್ಷವೂ, ರಾಹುಲಗ ಗಾಂಧಿ ಶುಕ್ರವಾರ ಮತ ಚಲಾಯಿಸುವ ವಯನಾಡ್‌ನಿಂದ ಸ್ಪರ್ಧಿಸುತ್ತಿದ್ದಾರೆ. ಮೇ 3 ರವರೆಗೆ ಅಮೇಥಿಗೆ ನಾಮಪತ್ರ ಸಲ್ಲಿಸಲು ಅವಕಾಶವಿದ್ದು, ಕೇರಳದ ಚುನಾವಣೆಯ ನಂತರ ಗಾಂಧಿ ಅವರು ತಮ್ಮ ನಾಮಪತ್ರ ಸಲ್ಲಿಸಬಹುದು ಎನ್ನಲಾಗುತ್ತಿದೆ. ಇತ್ತೀಚೆಗಷ್ಟೇ ಅಮೇಥಿಯಲ್ಲೂ ಅವರೇ ಕಾಂಗ್ರೆಸ್ ಅಭ್ಯರ್ಥಿಯಾಗುತ್ತೀರಾ ಎಂದು ಕೇಳಲಾಗಿತ್ತು. ಪಕ್ಷ ಏನು ಆದೇಶ ನೀಡುತ್ತದೋ ಅದನ್ನು ಮಾಡುತ್ತೇನೆ ಎಂದು ಉತ್ತರಿಸಿದರು.

ಈ ಎಲ್ಲ ಬೆಳವಣಿಗೆಗಳ ನಡುವೆ, “ವಾದ್ರಾ ಅವರು ಅಮೇಥಿಯಲ್ಲಿ ಸ್ಪರ್ಧಿಸಿದರೆ,ಸ್ಮೃತಿ ಆಯ್ಕೆ ಮಾಡುವ ತಮ್ಮ ತಪ್ಪನ್ನು ಸರಿಪಡಿಸುವ ಆಯ್ಕೆ ಜನರಿಗೆ ಇರುತ್ತದೆ ಎಂದು ಅಮೇಥಿಯ ಜನರು ಭಾವಿಸುತ್ತಾರೆ ಎಂದು ಕಾಂಗ್ರೆಸ್ ನಾಯಕರು ಹೇಳಿದ್ದರು. ಬಳಿಕ, ವಾದ್ರಾ ಕಾಂಗ್ರೆಸ್ ಅಭ್ಯರ್ಥಿ ಎಂದು ಆಗ್ರಹಿಸಿ ಕೆಲವು ಪೋಸ್ಟರ್‌ಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡತೊಡಗಿದವು.

ಕ್ಷೇತ್ರದಲ್ಲಿ ಇರಾನಿ ಅವರ ಪ್ರಚಾರವು ಭರದಿಂದ ಸಾಗುತ್ತಿದೆ, ಕಾಂಗ್ರೆಸ್ ತನ್ನ ಅಭ್ಯರ್ಥಿಯನ್ನು ಘೋಷಿಸುವಲ್ಲಿ ವಿಳಂಬವಾಗಿದೆ ಎಂದು ಟೀಕಿಸಿದ್ದಾರೆ. ರಾಹುಲ್ ಗಾಂಧಿ ಮತ್ತು ಅವರ ಬಾವ ವಾದ್ರಾ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

“ಜಿಜಾಜಿ ಕಿ ನಜರ್ ಹೈ, ಸಾಲೇ ಸಾಹಬ್ ಕ್ಯಾ ಕರೆಂಗೆ. (ಬಾವ ಸೀಟಿನ ಮೇಲೆ ಕಣ್ಣಿಟ್ಟಿದ್ದಾರೆ, ಅವರು (ಗಾಂಧಿ) ಏನು ಮಾಡುತ್ತಾರೆ?) ಬಸ್‌ಗಳಲ್ಲಿ ಪ್ರಯಾಣಿಸುವ ಜನರು ತಮ್ಮ ಆಸನವನ್ನು ಗುರುತಿಸಲು ತಮ್ಮ ಕರವಸ್ತ್ರವನ್ನು ಬಿಡುವ ಕಾಲವಿತ್ತು. ಅವರ ಬಾವ ಈ ಆಸನದ ಮೇಲೆ ಕಣ್ಣಿಟ್ಟಿರುವ ಕಾರಣ ರಾಹುಲ್ ಗಾಂಧಿ ಕೂಡ ತಮ್ಮ ಆಸನವನ್ನು ಗುರುತಿಸಲು ಬರುವುದಿಲ್ಲ” ಎಂದು ಅವರು ಇತ್ತೀಚೆಗೆ ಅಮೇಥಿಯಲ್ಲಿ ಹೇಳಿದರು.

“ಇದು ಎಂದಾದರೂ ನಡೆದಿದೆಯೇ? ಚುನಾವಣೆಗೆ ಕೇವಲ 27 ದಿನಗಳು ಉಳಿದಿವೆ. ಆದರೆ, ಕಾಂಗ್ರೆಸ್ ತನ್ನ ಅಭ್ಯರ್ಥಿಯನ್ನು ಘೋಷಿಸಿಲ್ಲ. ನಾನು ಐದು ವರ್ಷಗಳಲ್ಲಿ ಮಾಡಿದ್ದನ್ನು, ರಾಹುಲ್ ಗಾಂಧಿ 15 ವರ್ಷಗಳಲ್ಲಿ ಮಾಡಲು ಸಾಧ್ಯವಾಗಲಿಲ್ಲ” ಎಂದು ಅವರು ಹೇಳಿದರು.

ಏಪ್ರಿಲ್ 26ರ ನಂತರ ರಾಹುಲ್ ಗಾಂಧಿ ಅಮೇಥಿಗೆ ಬರುತ್ತಾರೆ ಮತ್ತು ಜಾತಿಯ ಹೆಸರಿನಲ್ಲಿ ಜನರನ್ನು ಒಡೆಯಲು ಪ್ರಯತ್ನಿಸುತ್ತಾರೆ ಎಂದು ಕೇಂದ್ರ ಸಚಿವರು ಆರೋಪಿಸಿದ್ದಾರೆ.

“ಏಪ್ರಿಲ್ 26 ರಂದು ವಯನಾಡಿನಲ್ಲಿ ಮತದಾನದ ನಂತರ, ರಾಹುಲ್ ಗಾಂಧಿ ಇಲ್ಲಿಗೆ ಬಂದು ಅಮೇಥಿ ತನ್ನ ಕುಟುಂಬ ಎಂದು ಎಲ್ಲರಿಗೂ ಹೇಳಲು ಮತ್ತು ಜಾತಿವಾದದ ಬೆಂಕಿಯನ್ನು ಹೊತ್ತಿಸಲಿದ್ದಾರೆ. ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್ ಪಕ್ಷವು ಅಯೋಧ್ಯೆಯಲ್ಲಿ ಭಗವಾನ್ ಶ್ರೀರಾಮನ ಪ್ರತಿಷ್ಠಾಪನಾ ಸಮಾರಂಭದ ಆಹ್ವಾನವನ್ನು ತಿರಸ್ಕರಿಸಿದೆ. ಆದರೆ, ಅವರು ಅಮೇಠಿಯಲ್ಲಿ ದೇವಸ್ಥಾನಗಳ ಸುತ್ತಲೂ ತಿರುಗಾಡುವುದನ್ನು ಕಾಣಬಹುದು, ಆದ್ದರಿಂದ ಎಚ್ಚರಿಕೆಯಿಂದ ಮತ್ತು ಜಾಗರೂಕರಾಗಿರಬೇಕು” ಎಂದು ಅವರು ಸ್ಥಳೀಯ ಸಭೆಯಲ್ಲಿ ಹೇಳಿದರು.

ಇದನ್ನೂ ಓದಿ; ಬಿಸಿಲಿನ ತಾಪವಿದ್ದರೂ ಬಿಜೆಪಿ ಒತ್ತಡದಿಂದ ಬಂಗಾಳದಲ್ಲಿ 7 ಹಂತದ ಚುನಾವಣೆ: ಅಭಿಷೇಕ್ ಬ್ಯಾನರ್ಜಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...