Homeಕರ್ನಾಟಕನನ್ನ ತಾಯಿ ದೇಶಕ್ಕಾಗಿ ಮಂಗಳಸೂತ್ರವನ್ನು ತ್ಯಾಗ ಮಾಡಿದ್ದಾರೆ: ಪ್ರಿಯಾಂಕ ಗಾಂಧಿ

ನನ್ನ ತಾಯಿ ದೇಶಕ್ಕಾಗಿ ಮಂಗಳಸೂತ್ರವನ್ನು ತ್ಯಾಗ ಮಾಡಿದ್ದಾರೆ: ಪ್ರಿಯಾಂಕ ಗಾಂಧಿ

- Advertisement -
- Advertisement -

‘ನನ್ನ ತಾಯಿ ದೇಶಕ್ಕಾಗಿ ಮಂಗಳಸೂತ್ರವನ್ನು ತ್ಯಾಗ ಮಾಡಿದ್ದಾರೆ’ ಮತ್ತು ‘ನನ್ನ ಅಜ್ಜಿ ಆಡಳಿತದಲ್ಲಿ ದೇಶದ ಯುದ್ಧಕ್ಕಾಗಿ ತಮ್ಮ ಚಿನ್ನವನ್ನು ದಾನ ಮಾಡಿದ್ದಾರೆ’ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಹೇಳಿದ್ದು, ಪ್ರಧಾನಿ ನರೇಂದ್ರ ಮೋದಿ ಅವರು ಸಮಾಜಕ್ಕೆ ಮಹಿಳೆಯರ ಕೊಡುಗೆಯನ್ನು ಅರ್ಥಮಾಡಿಕೊಂಡರೆ ಅಂತಹ “ಅವಹೇಳನಕಾರಿ” ಹೇಳಿಕೆಗಳನ್ನು ಎಂದಿಗೂ ನೀಡುತ್ತಿರಲಿಲ್ಲ ಎಂದು ಹೇಳಿದ್ದಾರೆ.

ಬೆಂಗಳೂರು ದಕ್ಷಿಣ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ಸೌಮ್ಯಾ ರೆಡ್ಡಿ ಪರ ಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರದ ಎಚ್‌ಎಸ್‌ಆರ್‌ ಲೇಔಟ್‌ನಲ್ಲಿರುವ ಅಟಲ್‌ ಬಿಹಾರಿ ವಾಜಪೇಯಿ ಕ್ರೀಡಾಂಗಣದಲ್ಲಿ ನಡೆದ ಚುನಾವಣಾ ಪ್ರಚಾರ ಸಮಾವೇಶದಲ್ಲಿ ಮಾತನಾಡಿದ ಪ್ರಿಯಾಂಕ ಗಾಂಧಿ, ಕಾಂಗ್ರೆಸ್‌ ಪಕ್ಷವು ಅಧಿಕಾರಕ್ಕೆ ಬಂದರೆ ಮಹಿಳೆಯರ ಚಿನ್ನ, ಮಂಗಳಸೂತ್ರವನ್ನು ಕಿತ್ತುಕೊಳ್ಳುತ್ತದೆ ಎಂಬ ಪ್ರಧಾನಿಯ ವಿವಾದಾತ್ಮಕ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಿ, ರೈತ ಪ್ರತಿಭಟನೆಯ ಸಂದರ್ಭದಲ್ಲಿ ಸಾವನ್ನಪ್ಪಿದ 600 ರೈತ ಮಹಿಳೆಯರ ಮಂಗಳಸೂತ್ರಗಳ ಬಗ್ಗೆ ಮೋದಿ ಕಾಳಜಿ ತೋರುತ್ತಿಲ್ಲ. ಕೇವಲ ಮತಕ್ಕಾಗಿ ಮತ್ತು ಮಹಿಳೆಯರನ್ನು ಹೆದರಿಸಲು ಇಂತಹ ಹೇಳಿಕೆಯನ್ನು ನೀಡಲಾಗಿದೆ. ಪ್ರಧಾನಿ ನಾಚಿಕೆಪಡಬೇಕು, ಅವರಿಗೆ ಮಹಿಳೆಯರ ಬಗ್ಗೆ ಕಾಳಜಿ ಇದ್ದರೆ ಅವರ ಮಕ್ಕಳಿಗೆ ಉದ್ಯೋಗ, ವಿದ್ಯಾರ್ಥಿವೇತನ ಮತ್ತು ವ್ಯವಹಾರಗಳಲ್ಲಿ ಸಹಾಯ ಮಾಡುತ್ತಿದ್ದರು ಎಂದು ಹೇಳಿದ್ದಾರೆ.

ಭಾರತದ ಅತ್ಯಂತ ಹೆಚ್ಚು ವಿದ್ಯಾವಂತ ನಗರಗಳಲ್ಲಿ ಒಂದಾದ ಬೆಂಗಳೂರು, ಚುನಾವಣಾ ಸಮಯದಲ್ಲಿ ಉತ್ತಮ ಸಂಭಾಷಣೆಗೆ ಅರ್ಹವಾಗಿದೆ. ಯಾರೂ ಮೂಲಸೌಕರ್ಯ ಅಥವಾ ಸುಸ್ಥಿರ ಅಭಿವೃದ್ಧಿಯ ಬಗ್ಗೆ ಮಾತನಾಡುತ್ತಿಲ್ಲ. ನಾವು ನಿಜವಾಗಿಯೂ ಹಿಂದೂ ಮುಸ್ಲಿಂ ವಿಷಯದ ಮೇಲೆ ಮತ್ತೊಂದು ಚುನಾವಣೆಯನ್ನು ಬಯಸುತ್ತೇವೆಯೇ? ಎಷ್ಟು ವರ್ಷಗಳ ಕಾಲ ಚುನಾವಣೆಯನ್ನು ಧರ್ಮದ ಆಧಾರದಲ್ಲಿ ನಡೆಸುತ್ತೀರಾ? ಈ ಚುನಾವಣೆಯನ್ನು ಬೆಲೆ ಏರಿಕೆ, ನಿರುದ್ಯೋಗ, ಶಿಕ್ಷಣ ಹಾಗೂ ಆರೋಗ್ಯ ಸೌಲಭ್ಯಗಳ ಆಧಾರದ ಮೇಲೆ ಎದುರಿಸಿ ನೋಡೋಣ. ನಿಮಗೆ ನೈತಿಕ ರಾಜಕೀಯ ಬೇಕಾ, ನಾಟಕೀಯ ರಾಜಕೀಯ ಬೇಕಾ, ಆಡಳಿತದ ರಾಜಕೀಯವೋ, ಸತ್ಯದ ರಾಜಕೀಯವೋ, ಪರೋಪಕಾರ ಬೇಕಾ, ಅಹಂಕಾರ ಬೇಕಾ ಎಂಬುದನ್ನು ನೀವೆ ನಿರ್ಧರಿಸಿ ಎಂದು ಪ್ರಿಯಾಂಕ ಗಾಂಧಿ ಕೇಳಿದ್ದಾರೆ.

ಮಣಿಪುರದಲ್ಲಿ ಒಂದು ಹೆಣ್ಣನ್ನು ಬೆತ್ತಲೆ ಮಾಡಿದಾಗ ಮೋದಿ ಎಲ್ಲಿದ್ದರು? ದೇಶದ ಬಗ್ಗೆ ಅವರಿಗೆ ಕಾಳಜಿ ಇಲ್ಲವೇ? ಮೋದಿಯವರಿಗೆ ನಾಚಿಕೆ ಆಗಬೇಕು ಎಂದು ಪ್ರಿಯಾಂಕಾ ಟೀಕಿಸಿದ್ದಾರೆ. ದೇಶದಲ್ಲಿ ಲಾಕ್‌ಡೌನ್‌ ಆದಾಗ ಬಡವರಿಗೆ ಉಟ ಇರಲಿಲ್ಲ. ಎಷ್ಟೋ ಜನ ತಮ್ಮ ಪ್ರಾಣವನ್ನೇ ಕಳೆದುಕೊಂಡರು. ನಿರುದ್ಯೋಗ ಸಮಸ್ಯೆ ಎಲ್ಲರನ್ನೂ ಕಾಡುತ್ತಿದೆ. ಪ್ರಧಾನಿ ಮೋದಿಯವರ 10 ವರ್ಷಗಳ ಆಡಳಿತ ನೋಡಿದ್ದೀರಾ? ನಿಮ್ಮ ಜೀವನದಲ್ಲಿ ಬದಲಾವಣೆ ಆಗಿದೆಯಾ ಎಂದು ಪ್ರಶ್ನೆ ಮಾಡಬೇಕಿದೆ. ನಿಮ್ಮೆಲ್ಲರ ಮುಂದೆ ಸೂಪರ್ ಮ್ಯಾನ್ ರೀತಿ ಬಂದು ಅವರು ನಿಂತಿದ್ದರು ಎಂದು ವ್ಯಂಗ್ಯವಾಡಿದರು.

ಕೇಸರಿ ಪಕ್ಷವು ಕೆಲ ನಾಯಕರನ್ನು ಭ್ರಷ್ಟರೆಂದು ಕರೆದು ಅವರನ್ನು ನಂತರ ತಮ್ಮ ಪಕ್ಷಕ್ಕೆ ಸೇರಿಸಿಕೊಂಡಿದೆ. ಅವರು ಮಾಂತ್ರಿಕವಾಗಿ ಪ್ರಾಮಾಣಿಕರಾದರು ಎಂಬುವುದು ಆಶ್ಚರ್ಯಕರವಾಗಿದೆ. ಭ್ರಷ್ಟಾಚಾರ ಆರೋಪಕ್ಕೂ ಬಿಜೆಪಿಗೂ ವಿಲಕ್ಷಣ ಸಂಬಂಧವಿದೆ. ಇಬ್ಬರು ಮುಖ್ಯಮಂತ್ರಿಗಳನ್ನು ಬಂಧಿಸಿರುವ ಮತ್ತು ಪ್ರತಿಪಕ್ಷಗಳ ಮೇಲೆ ನಿರಂತರ ದಾಳಿ ನಡೆಸುತ್ತಿರುವ ಮೊದಲ ಚುನಾವಣೆ ಇದಾಗಿದೆ ಎಂದು ಅವರು ಹೇಳಿದ್ದಾರೆ.

ಇದನ್ನು ಓದಿ: ಜಾಗತಿಕ ಮಾದ್ಯಮಗಳಲ್ಲಿ ಸುದ್ದಿಯಾದ ಪ್ರಧಾನಿಯ ದ್ವೇಷ ಭಾಷಣ: ಅಂತರಾಷ್ಟ್ರೀಯ ಮಟ್ಟದಲ್ಲಿ ಮತ್ತೆ ಟೀಕೆಗೆ ಗುರಿಯಾದ ಮೋದಿ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರತಿಭಟನೆಗೆ ಹೋಗುವ ಮಹಿಳೆಯರು ಗ್ಯಾಂಗ್‌ರೇಪ್‌ ಆನಂದಿಸುತ್ತಾರೆ ಎಂದಿದ್ದ ಟಿ.ಜಿ. ಮೋಹನ್‌ದಾಸ್‌ ವಿರುದ್ಧ ಎಫ್‌ಐಆರ್‌ ದಾಖಲು

ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವವರ ಮೇಲೆ, ನನ್ನ ಕೈಯಲ್ಲಿ ಅಧಿಕಾರವಿದ್ದರೆ ಗುಂಡು ಹಾರಿಸುತ್ತಿದ್ದೆ ಎಂದು ಇತ್ತೀಚಿನ ಯೂಟ್ಯೂಬ್ ವೀಡಿಯೊದಲ್ಲಿ ಹೇಳಿಕೆ ನೀಡಿದ್ದ ಹಿಂದುತ್ವವಾದಿ ಚಿಂತಕ ಟಿ.ಜಿ. ಮೋಹನ್‌ದಾಸ್ ವಿರುದ್ಧ ತಿರುವನಂತಪುರಂ ಸಿಟಿ...

ಫ್ರಾನ್ಸ್‌ನಲ್ಲಿ ಕೆಲಸದ ಸಮಯ ಟ್ರ್ಯಾಕಿಂಗ್ ಲೋಪ: ಇನ್ಫೋಸಿಸ್‌ಗೆ ₹1.9 ಕೋಟಿ ದಂಡ: ನಾರಾಯಣಮೂರ್ತಿಯವರ ‘70 ಗಂಟೆ ಶ್ರಮ’ದ ಮಾದರಿ ಟ್ರೋಲ್

ಭಾರತೀಯ ಐಟಿ ರಫ್ತು ಸೇವಾ ರಂಗದ ಬೃಹತ್ ಸಂಸ್ಥೆಯಾದ ಇನ್ಫೋಸಿಸ್‌ಗೆ ಫ್ರಾನ್ಸ್‌ನಲ್ಲಿ ಹಿನ್ನಡೆಯಾಗಿದೆ. ಉದ್ಯೋಗಿಗಳ ಕೆಲಸದ ಸಮಯವನ್ನು ದಾಖಲಿಸುವ ವ್ಯವಸ್ಥೆಯಲ್ಲಿನ ನ್ಯೂನತೆಗಳು ಹಾಗೂ ಸ್ಥಳೀಯ ಕಾರ್ಮಿಕ ನಿಯಮಾವಳಿಗಳ ಪಾಲನೆಯಲ್ಲಿ ಕಂಡುಬಂದ ಲೋಪಗಳ ಹಿನ್ನೆಲೆಯಲ್ಲಿ...

ವೋಟರ್ ಐಡಿ, ಬ್ಯಾಂಕ್ ಪಾಸ್‌ಬುಕ್, ಆಧಾರ್, ಜಮೀನಿನ ಹಕ್ಕು ಪತ್ರ ಇದ್ದ ಮಾತ್ರಕ್ಕೆ ಭಾರತೀಯ ಪ್ರಜೆಯಾಗಲ್ಲ: ಕಲ್ಕತ್ತಾ ಹೈಕೋರ್ಟ್

ಆಧಾರ್ ಕಾರ್ಡ್, ಪಾನ್ ಕಾರ್ಡ್, ಮತದಾರರ ಗುರುತಿನ ಚೀಟಿ, ಬ್ಯಾಂಕ್ ಪಾಸ್‌ಬುಕ್ ಮತ್ತು ಪಿತ್ರಾರ್ಜಿತ ಜಮೀನಿನ ದಾಖಲೆಗಳು ಭಾರತೀಯ ಪೌರತ್ವವನ್ನು ನಿರೂಪಿಸಲು ಅಂತಿಮ ಅಥವಾ ನಿರ್ಣಾಯಕ ಪುರಾವೆಗಳಲ್ಲ ಎಂದು ಕಲ್ಕತ್ತಾ ಹೈಕೋರ್ಟ್ ಮಹತ್ವದ...

‘ನಿಮ್ಮ ಸಮಯ ಬಂದಿದೆ’: ಟೌನ್‌ಶಿಪ್ ಯೋಜನೆ ವಿರುದ್ಧದ ಪ್ರತಿಭಟನೆಗೆ 500 ದಿನ: ‘Gen-Z’ ಯುವಕರ ಬೆಂಬಲ ಕೋರಿದ ಬಿಡದಿ ರೈತರು

ಬೆಂಗಳೂರು: ಪ್ರಸ್ತಾವಿತ ಬಿಡದಿ ಟೌನ್‌ಶಿಪ್ ಯೋಜನೆ ವಿರುದ್ಧ ಕೃಷಿ ಭೂಮಿ ಉಳಿವಿಗಾಗಿ ನಡೆಯುತ್ತಿರುವ ರೈತರ ಸುದೀರ್ಘ ಹೋರಾಟವು ಇದೀಗ ಒಂದು ಪ್ರಮುಖ ಘಟ್ಟಕ್ಕೆ ಬಂದು ತಲುಪಿದೆ. ಭೂಸ್ವಾಧೀನದ ವಿರುದ್ಧ ಸತತವಾಗಿ ನಡೆಯುತ್ತಿರುವ ಈ...

ಕೊಡಗಿನ ಆದಿವಾಸಿ ಹಾಡಿಗಳಲ್ಲಿ ಎಸ್‌ಐಆರ್ ಅವ್ಯವಸ್ಥೆ : ಬಿಎಲ್‌ಒಗಳಿಗೆ ತರಬೇತಿಯ ಕೊರತೆ, ಇನ್ನೂ ತಲುಪದ ಗಣತಿ ಫಾರಂ

ಕರ್ನಾಟಕದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಬಹಳ ಯಶಸ್ವಿಯಾಗಿ ನಡೆಯುತ್ತಿದೆ, ಮತದಾರರಿಗೆ ಎಲ್ಲಾ ರೀತಿಯ ಸಹಾಯಗಳನ್ನು ಒದಗಿಸಲಾಗುತ್ತಿದೆ ಎಂದು ರಾಜ್ಯ ಮುಖ್ಯ ಚುನಾವಣಾ ಆಯುಕ್ತ ಅನ್ಬುಕುಮಾರ್ ಅವರು ಪದೇ...

SIR: ಉಡುಪಿಯಲ್ಲಿ ಕರ್ತವ್ಯನಿರತ BLO ಮೇಲೆ ಹಲ್ಲೆಗೆತ್ನಿಸಿದ ಮಾಜಿ ಪಂಚಾಯತ್ ಅಧ್ಯಕ್ಷ, FIR ದಾಖಲು

ಚುನಾವಣಾ ಮತದಾರರ ಪಟ್ಟಿ ಪರಿಷ್ಕರಣೆ (SIR) ಕರ್ತವ್ಯದಲ್ಲಿದ್ದ ಅಂಗನವಾಡಿ ಕಾರ್ಯಕರ್ತೆ ಹಾಗೂ ಬಿಎಲ್‌ಒ (BLO) ಮಹಿಳೆ ಮೇಲೆ ಕರ್ತವ್ಯಕ್ಕೆ ಅಡ್ಡಿಪಡಿಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿ, ಕೊಲೆ ಬೆದರಿಕೆ ಹಾಕಿದ ಗಂಭೀರ ಆರೋಪ ಉಡುಪಿ...

ಕೋಟ್ಯಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ NTA ಚೆಲ್ಲಾಟ: RTI ನಲ್ಲಿ ಬಯಲಾಯ್ತು NTA ಕರ್ಮಕಾಂಡ

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಎನ್ನುವ ಈ ಸರ್ಕಾರಿ ಸಂಸ್ಥೆಯ ಮೇಲೆ ಪ್ರತಿವರ್ಷ ಕೋಟ್ಯಂತರ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಕನಸುಗಳನ್ನು ಇಟ್ಟುಕೊಳ್ಳುತ್ತಾರೆ. 2018ರಲ್ಲಿ ಸ್ಥಾಪನೆಯಾದ ದಿನದಿಂದ ಇಲ್ಲಿಯವರೆಗೆ ಎನ್‌ಟಿಎ ಸುಮಾರು 270ಕ್ಕೂ ಹೆಚ್ಚು...

ಬಾಗಲಕೋಟೆ: ಪತಿಯಿಂದ 23 ವರ್ಷದ ಪತ್ನಿಯ ಕ್ರೂರ ಕೊಲೆ, ಪೋಷಕರಿಗೆ ವೀಡಿಯೊ ಕರೆ ಮಾಡಿ ಮಗಳ ಸಾವು-ಬದುಕಿನ ಹೋರಾಟ ತೋರಿಸಿದ ವಿಕೃತ ಪತಿ

ಬಾಗಲಕೋಟೆ: ಪತಿಯೋರ್ವ ತನ್ನ 23 ವರ್ಷದ ಪತ್ನಿಯ ಮೇಲೆ ವಿವಾಹೇತರ ಅನೈತಿಕ ಸಂಬಂಧದ ಶಂಕೆ ವ್ಯಕ್ತಪಡಿಸಿ, ಆಕೆಯ ಮೇಲೆ ಮರದ ದಿಮ್ಮಿಯಿಂದ ಕ್ರೂರವಾಗಿ ಹಲ್ಲೆ ನಡೆಸಿ, ತದನಂತರ ನೇಣಿಗೆ ಬಿಗಿದು ಅತ್ಯಂತ ಅಮಾನವೀಯವಾಗಿ...

ಕಾನೂನು-ಸುವ್ಯವಸ್ಥೆಗೆ ವಿದ್ಯಾರ್ಥಿಗಳು ಸಮಸ್ಯೆಯಾಗುತ್ತಾರೆ ಎಂದು ಪರಿಗಣಿಸಿದ್ದು ಏಕೆ: ಅಭಿಷೇಕ್ ಬ್ಯಾನರ್ಜಿ

ರಾಷ್ಟ್ರ ರಾಜಧಾನಿ ದೆಹಲಿ ಮತ್ತು ದೆಶದಾದ್ಯಂತ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಭಾರೀ ಪೊಲೀಸ್ ಬಲಪ್ರಯೋವನ್ನು ವಿಪಕ್ಷಗಳು ಇಂದು ಲೋಕಸಭೆಯಲ್ಲಿ ಖಂಡಿಸಿವೆ. ವಿದ್ಯಾರ್ಥಿಗಳ...

ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ದ ಮೈಸೂರಿನಲ್ಲಿ ದೂರು ದಾಖಲು

ಸಂವಿಧಾನಬದ್ಧ ಮೀಸಲಾತಿಯ ಕುರಿತು ಅತ್ಯಂತ ನಿಂದನಾತ್ಮಕ, ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ ಹೇಳಿಕೆ ನೀಡಿರುವ 'ಪಬ್ಲಿಕ್ ಟಿವಿ' ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮೈಸೂರಿನಲ್ಲಿ ಕಾನೂನು ಕ್ರಮಕ್ಕೆ ಆಗ್ರಹಿಸಿ ಪೊಲೀಸ್‌...