Homeಕರ್ನಾಟಕನನ್ನ ತಾಯಿ ದೇಶಕ್ಕಾಗಿ ಮಂಗಳಸೂತ್ರವನ್ನು ತ್ಯಾಗ ಮಾಡಿದ್ದಾರೆ: ಪ್ರಿಯಾಂಕ ಗಾಂಧಿ

ನನ್ನ ತಾಯಿ ದೇಶಕ್ಕಾಗಿ ಮಂಗಳಸೂತ್ರವನ್ನು ತ್ಯಾಗ ಮಾಡಿದ್ದಾರೆ: ಪ್ರಿಯಾಂಕ ಗಾಂಧಿ

- Advertisement -
- Advertisement -

‘ನನ್ನ ತಾಯಿ ದೇಶಕ್ಕಾಗಿ ಮಂಗಳಸೂತ್ರವನ್ನು ತ್ಯಾಗ ಮಾಡಿದ್ದಾರೆ’ ಮತ್ತು ‘ನನ್ನ ಅಜ್ಜಿ ಆಡಳಿತದಲ್ಲಿ ದೇಶದ ಯುದ್ಧಕ್ಕಾಗಿ ತಮ್ಮ ಚಿನ್ನವನ್ನು ದಾನ ಮಾಡಿದ್ದಾರೆ’ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಹೇಳಿದ್ದು, ಪ್ರಧಾನಿ ನರೇಂದ್ರ ಮೋದಿ ಅವರು ಸಮಾಜಕ್ಕೆ ಮಹಿಳೆಯರ ಕೊಡುಗೆಯನ್ನು ಅರ್ಥಮಾಡಿಕೊಂಡರೆ ಅಂತಹ “ಅವಹೇಳನಕಾರಿ” ಹೇಳಿಕೆಗಳನ್ನು ಎಂದಿಗೂ ನೀಡುತ್ತಿರಲಿಲ್ಲ ಎಂದು ಹೇಳಿದ್ದಾರೆ.

ಬೆಂಗಳೂರು ದಕ್ಷಿಣ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ಸೌಮ್ಯಾ ರೆಡ್ಡಿ ಪರ ಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರದ ಎಚ್‌ಎಸ್‌ಆರ್‌ ಲೇಔಟ್‌ನಲ್ಲಿರುವ ಅಟಲ್‌ ಬಿಹಾರಿ ವಾಜಪೇಯಿ ಕ್ರೀಡಾಂಗಣದಲ್ಲಿ ನಡೆದ ಚುನಾವಣಾ ಪ್ರಚಾರ ಸಮಾವೇಶದಲ್ಲಿ ಮಾತನಾಡಿದ ಪ್ರಿಯಾಂಕ ಗಾಂಧಿ, ಕಾಂಗ್ರೆಸ್‌ ಪಕ್ಷವು ಅಧಿಕಾರಕ್ಕೆ ಬಂದರೆ ಮಹಿಳೆಯರ ಚಿನ್ನ, ಮಂಗಳಸೂತ್ರವನ್ನು ಕಿತ್ತುಕೊಳ್ಳುತ್ತದೆ ಎಂಬ ಪ್ರಧಾನಿಯ ವಿವಾದಾತ್ಮಕ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಿ, ರೈತ ಪ್ರತಿಭಟನೆಯ ಸಂದರ್ಭದಲ್ಲಿ ಸಾವನ್ನಪ್ಪಿದ 600 ರೈತ ಮಹಿಳೆಯರ ಮಂಗಳಸೂತ್ರಗಳ ಬಗ್ಗೆ ಮೋದಿ ಕಾಳಜಿ ತೋರುತ್ತಿಲ್ಲ. ಕೇವಲ ಮತಕ್ಕಾಗಿ ಮತ್ತು ಮಹಿಳೆಯರನ್ನು ಹೆದರಿಸಲು ಇಂತಹ ಹೇಳಿಕೆಯನ್ನು ನೀಡಲಾಗಿದೆ. ಪ್ರಧಾನಿ ನಾಚಿಕೆಪಡಬೇಕು, ಅವರಿಗೆ ಮಹಿಳೆಯರ ಬಗ್ಗೆ ಕಾಳಜಿ ಇದ್ದರೆ ಅವರ ಮಕ್ಕಳಿಗೆ ಉದ್ಯೋಗ, ವಿದ್ಯಾರ್ಥಿವೇತನ ಮತ್ತು ವ್ಯವಹಾರಗಳಲ್ಲಿ ಸಹಾಯ ಮಾಡುತ್ತಿದ್ದರು ಎಂದು ಹೇಳಿದ್ದಾರೆ.

ಭಾರತದ ಅತ್ಯಂತ ಹೆಚ್ಚು ವಿದ್ಯಾವಂತ ನಗರಗಳಲ್ಲಿ ಒಂದಾದ ಬೆಂಗಳೂರು, ಚುನಾವಣಾ ಸಮಯದಲ್ಲಿ ಉತ್ತಮ ಸಂಭಾಷಣೆಗೆ ಅರ್ಹವಾಗಿದೆ. ಯಾರೂ ಮೂಲಸೌಕರ್ಯ ಅಥವಾ ಸುಸ್ಥಿರ ಅಭಿವೃದ್ಧಿಯ ಬಗ್ಗೆ ಮಾತನಾಡುತ್ತಿಲ್ಲ. ನಾವು ನಿಜವಾಗಿಯೂ ಹಿಂದೂ ಮುಸ್ಲಿಂ ವಿಷಯದ ಮೇಲೆ ಮತ್ತೊಂದು ಚುನಾವಣೆಯನ್ನು ಬಯಸುತ್ತೇವೆಯೇ? ಎಷ್ಟು ವರ್ಷಗಳ ಕಾಲ ಚುನಾವಣೆಯನ್ನು ಧರ್ಮದ ಆಧಾರದಲ್ಲಿ ನಡೆಸುತ್ತೀರಾ? ಈ ಚುನಾವಣೆಯನ್ನು ಬೆಲೆ ಏರಿಕೆ, ನಿರುದ್ಯೋಗ, ಶಿಕ್ಷಣ ಹಾಗೂ ಆರೋಗ್ಯ ಸೌಲಭ್ಯಗಳ ಆಧಾರದ ಮೇಲೆ ಎದುರಿಸಿ ನೋಡೋಣ. ನಿಮಗೆ ನೈತಿಕ ರಾಜಕೀಯ ಬೇಕಾ, ನಾಟಕೀಯ ರಾಜಕೀಯ ಬೇಕಾ, ಆಡಳಿತದ ರಾಜಕೀಯವೋ, ಸತ್ಯದ ರಾಜಕೀಯವೋ, ಪರೋಪಕಾರ ಬೇಕಾ, ಅಹಂಕಾರ ಬೇಕಾ ಎಂಬುದನ್ನು ನೀವೆ ನಿರ್ಧರಿಸಿ ಎಂದು ಪ್ರಿಯಾಂಕ ಗಾಂಧಿ ಕೇಳಿದ್ದಾರೆ.

ಮಣಿಪುರದಲ್ಲಿ ಒಂದು ಹೆಣ್ಣನ್ನು ಬೆತ್ತಲೆ ಮಾಡಿದಾಗ ಮೋದಿ ಎಲ್ಲಿದ್ದರು? ದೇಶದ ಬಗ್ಗೆ ಅವರಿಗೆ ಕಾಳಜಿ ಇಲ್ಲವೇ? ಮೋದಿಯವರಿಗೆ ನಾಚಿಕೆ ಆಗಬೇಕು ಎಂದು ಪ್ರಿಯಾಂಕಾ ಟೀಕಿಸಿದ್ದಾರೆ. ದೇಶದಲ್ಲಿ ಲಾಕ್‌ಡೌನ್‌ ಆದಾಗ ಬಡವರಿಗೆ ಉಟ ಇರಲಿಲ್ಲ. ಎಷ್ಟೋ ಜನ ತಮ್ಮ ಪ್ರಾಣವನ್ನೇ ಕಳೆದುಕೊಂಡರು. ನಿರುದ್ಯೋಗ ಸಮಸ್ಯೆ ಎಲ್ಲರನ್ನೂ ಕಾಡುತ್ತಿದೆ. ಪ್ರಧಾನಿ ಮೋದಿಯವರ 10 ವರ್ಷಗಳ ಆಡಳಿತ ನೋಡಿದ್ದೀರಾ? ನಿಮ್ಮ ಜೀವನದಲ್ಲಿ ಬದಲಾವಣೆ ಆಗಿದೆಯಾ ಎಂದು ಪ್ರಶ್ನೆ ಮಾಡಬೇಕಿದೆ. ನಿಮ್ಮೆಲ್ಲರ ಮುಂದೆ ಸೂಪರ್ ಮ್ಯಾನ್ ರೀತಿ ಬಂದು ಅವರು ನಿಂತಿದ್ದರು ಎಂದು ವ್ಯಂಗ್ಯವಾಡಿದರು.

ಕೇಸರಿ ಪಕ್ಷವು ಕೆಲ ನಾಯಕರನ್ನು ಭ್ರಷ್ಟರೆಂದು ಕರೆದು ಅವರನ್ನು ನಂತರ ತಮ್ಮ ಪಕ್ಷಕ್ಕೆ ಸೇರಿಸಿಕೊಂಡಿದೆ. ಅವರು ಮಾಂತ್ರಿಕವಾಗಿ ಪ್ರಾಮಾಣಿಕರಾದರು ಎಂಬುವುದು ಆಶ್ಚರ್ಯಕರವಾಗಿದೆ. ಭ್ರಷ್ಟಾಚಾರ ಆರೋಪಕ್ಕೂ ಬಿಜೆಪಿಗೂ ವಿಲಕ್ಷಣ ಸಂಬಂಧವಿದೆ. ಇಬ್ಬರು ಮುಖ್ಯಮಂತ್ರಿಗಳನ್ನು ಬಂಧಿಸಿರುವ ಮತ್ತು ಪ್ರತಿಪಕ್ಷಗಳ ಮೇಲೆ ನಿರಂತರ ದಾಳಿ ನಡೆಸುತ್ತಿರುವ ಮೊದಲ ಚುನಾವಣೆ ಇದಾಗಿದೆ ಎಂದು ಅವರು ಹೇಳಿದ್ದಾರೆ.

ಇದನ್ನು ಓದಿ: ಜಾಗತಿಕ ಮಾದ್ಯಮಗಳಲ್ಲಿ ಸುದ್ದಿಯಾದ ಪ್ರಧಾನಿಯ ದ್ವೇಷ ಭಾಷಣ: ಅಂತರಾಷ್ಟ್ರೀಯ ಮಟ್ಟದಲ್ಲಿ ಮತ್ತೆ ಟೀಕೆಗೆ ಗುರಿಯಾದ ಮೋದಿ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...