Homeಫ್ಯಾಕ್ಟ್‌ಚೆಕ್FACT CHECK: ಕರ್ನಾಟಕದಲ್ಲಿ ಎಸ್‌ಸಿ, ಎಸ್‌ಟಿಗಳಿಂದ ಕಿತ್ತುಕೊಂಡು ಮುಸ್ಲಿಮರಿಗೆ ನೀಡಿದ್ದ ಮೀಸಲಾತಿ ರದ್ದುಪಡಿಸಿದ್ದೇವೆ ಎಂಬ ಮೋದಿ...

FACT CHECK: ಕರ್ನಾಟಕದಲ್ಲಿ ಎಸ್‌ಸಿ, ಎಸ್‌ಟಿಗಳಿಂದ ಕಿತ್ತುಕೊಂಡು ಮುಸ್ಲಿಮರಿಗೆ ನೀಡಿದ್ದ ಮೀಸಲಾತಿ ರದ್ದುಪಡಿಸಿದ್ದೇವೆ ಎಂಬ ಮೋದಿ ಹೇಳಿಕೆ ಸುಳ್ಳು

- Advertisement -
- Advertisement -

“ಕಾಂಗ್ರೆಸ್ ಸಂವಿಧಾನವನ್ನು ಗೌರವಿಸಲಿಲ್ಲ. ಬಾಬಾ ಸಾಹೇಬ್ ಅಂಬೇಡ್ಕರ್ ಅವರನ್ನು ಗೌರವಿಸಲಿಲ್ಲ. ಕರ್ನಾಟಕದಲ್ಲಿ ಬಿಜೆಪಿ ಸರ್ಕಾರದ ಮೂಲಕ ನಮಗೆ ಅವಕಾಶ ಸಿಕ್ಕಾಗ ನಾವು ಮಾಡಿದ ಮೊದಲ ಕೆಲಸವೆಂದರೆ, ಎಸ್‌ಸಿ, ಎಸ್‌ಟಿಗಳಿಂದ ಕಿತ್ತುಕೊಂಡು ನೀಡಿದ್ದ ಮುಸ್ಲಿಂ ಕೋಟಾವನ್ನು ನಾವು ನಿಲ್ಲಿಸಿದೆವು. ಹಕ್ಕುದಾರರಿಗೆ ಅವರ ಹಕ್ಕುಗಳನ್ನು ನಾವು ಕೊಟ್ಟೆವು” ಎಂದು ರಾಜಸ್ಥಾನದ ಟೋಂಕ್‌ನಲ್ಲಿ ಮಂಗಳವಾರ (ಏ.23) ಚುನಾವಣಾ ರ್ಯಾಲಿಯನ್ನು ಉದ್ದೇಶಿಸಿ ಮಾತನಾಡುವಾಗ ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

ಪ್ರಧಾನಿ ಮೋದಿ ಹೇಳಿದಂತೆ ಕರ್ನಾಟಕದಲ್ಲಿ ಎಸ್‌ಸಿ, ಎಸ್‌ಟಿಗಳಿಂದ ಕಿತ್ತುಕೊಂಡು ಮುಸ್ಲಿಮರಿಗೆ ನೀಡಿದ್ದ 4% ಮೀಸಲಾತಿಯನ್ನು ಬಿಜೆಪಿ ಸರ್ಕಾರ ಇದ್ದಾಗ ರದ್ದುಪಡಿಸಿ, ಅದನ್ನು ಮತ್ತೆ ಎಸ್‌ಸಿ, ಎಸ್‌ಟಿಗಳಿಗೆ ನೀಡಿದ್ದು ನಿಜಾನಾ? ಎಂಬುವುದರ ಸತ್ಯಾಸತ್ಯತೆಯನ್ನು ನಾನುಗೌರಿ.ಕಾಂ ಪರಿಶೀಲನೆ ನಡೆಸಿದೆ.

ಫ್ಯಾಕ್ಟ್‌ಚೆಕ್ : ಮಾರ್ಚ್ 2023ರಲ್ಲಿ, ಕರ್ನಾಟಕದಲ್ಲಿ ವಿಧಾನಸಭಾ ಚುನಾವಣೆಗೆ ಮುಂಚಿತವಾಗಿ, ರಾಜ್ಯದ ಬಿಜೆಪಿ ಸರ್ಕಾರವು “2ಬಿ” ಹಿಂದುಳಿದ ವರ್ಗದ ಅಡಿಯಲ್ಲಿ ಮುಸ್ಲಿಮರಿಗೆ ನೀಡಲಾದ 4% ಮೀಸಲಾತಿಯನ್ನು ರದ್ದುಗೊಳಿಸಿತ್ತು ಮತ್ತು ಸಮುದಾಯವನ್ನು ಸಾಮಾನ್ಯ ವರ್ಗದ EWSನ 10% ಕೋಟಾದಡಿ ತಂದಿತ್ತು.

ಮುಸ್ಲಿಮರಿಗೆ ನೀಡಲಾಗಿದ್ದ 4% ಮೀಸಲಾತಿಯನ್ನು ಒಕ್ಕಲಿಗರು ಮತ್ತು ಲಿಂಗಾಯತರಿಗೆ ಹಂಚಲು ಸರ್ಕಾರ ಮುಂದಾಗಿತ್ತು. ಒಕ್ಕಗಲಿಗರು 3ಎ ಅಡಿ 4 % ಮತ್ತು ಲಿಂಗಾಯತರು 3ಬಿ ಅಡಿ 5% ಮೀಸಲಾತಿ ಹೊಂದಿದ್ದರು. ಸರ್ಕಾರ ಒಕ್ಕಲಿಗರಿಗೆ 2 (ಸಿ) ಅಡಿಯಲ್ಲಿ 6% ಮತ್ತು ಲಿಂಗಾಯತರಿಗೆ 2 (ಡಿ) ಅಡಿಯಲ್ಲಿ 7% ಮೀಸಲಾತಿ ನೀಡಲು ನಿರ್ಧರಿಸಿತ್ತು. ಆದರೆ, ಇದು ಇನ್ನೂ ಜಾರಿಗೆ ಬಂದಿಲ್ಲ. ಸರ್ಕಾರದ ನಿರ್ಧಾರ ಪ್ರಶ್ನಿಸಿ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಲಾಗಿದೆ. ಹಾಗಾಗಿ, ಪ್ರಕರಣ ಈಗ ನ್ಯಾಯಾಲಯದಲ್ಲಿದೆ.

ಇನ್ನು, ‘2ಬಿ’ ಹಿಂದುಳಿದ ವರ್ಗದ ಅಡಿಯಲ್ಲಿ ಸಾಮಾಜಿಕ ಮತ್ತು ಶೈಕ್ಷಣಿಕ ಹಿಂದುಳಿದಿರುವಿಕೆಯ ಆಧಾರದ ಮೇಲೆ ಸರ್ಕಾರಿ ಉದ್ಯೋಗಗಳು ಮತ್ತು ಶಿಕ್ಷಣದಲ್ಲಿ ಮುಸ್ಲಿಮರಿಗೆ 4% ಮೀಸಲಾತಿಯನ್ನು ನೀಡಿದ್ದು, 1994 ರಲ್ಲಿ ಹೆಚ್ ಡಿ ದೇವೇಗೌಡ ನೇತೃತ್ವದ ಸರ್ಕಾರ. ಇದು, 1918 ರಲ್ಲಿ ಅಂದಿನ ಮೈಸೂರು ರಾಜಪ್ರಭುತ್ವದ ಆಳ್ವಿಕೆಯಲ್ಲಿ ಪ್ರಾರಂಭಿಸಿದ ಕ್ರಮದ ಮುಂದುವರಿದ ಭಾಗವಾಗಿತ್ತು ಎಂದು ತಿಳಿದು ಬಂದಿದೆ.

ಸದ್ಯಕ್ಕೆ, ರಾಜ್ಯದಲ್ಲಿ ಮುಸ್ಲಿಮರಿಗೆ ಒಬಿಸಿಯ 2ಬಿ ಅಡಿಯಲ್ಲಿ ನೀಡಲಾಗಿದ್ದ 4% ಮೀಸಲಾತಿ ರದ್ದಾಗಿಲ್ಲ. ಮುಸ್ಲಿಮರನ್ನು 10% ಮೀಸಲಾತಿ ಇರುವ ಇಡಬ್ಯುಎಸ್‌ ಅಡಿ ತರುವ ಪ್ರಯತ್ನವೂ ಸಫಲಗೊಂಡಿಲ್ಲ ಎಂಬ ಮಾಹಿತಿ ಲಭ್ಯವಾಗಿದೆ.

ಇನ್ನು ಎಸ್‌ಸಿ, ಎಸ್‌ಟಿ ವಿಚಾರಕ್ಕೆ ಬಂದರೆ, ಅವರ ಮೀಸಲಾತಿ ಈ ಹಿಂದಿನಿಂದಲೂ ಯಥಾ ಸ್ಥಿತಿಯಲ್ಲಿ ಇದೆ. ಎಸ್‌ಸಿಗಳಿಗೆ 15% ಮತ್ತು ಎಸ್‌ಟಿಗಳಿಗೆ 3% ಮೀಸಲಾತಿ ನೀಡಲಾಗಿದೆ. ಮುಸ್ಲಿಮರಿಗೆ ಒಬಿಸಿಯ 2ಬಿ ಅಡಿ ಪ್ರತ್ಯೇಕವಾಗಿ 4% ನೀಡಲಾಗಿತ್ತೇ ಹೊರತು, ಎಸ್‌ಸಿ, ಎಸ್‌ಟಿಗಳಿಂದ ಕಿತ್ತುಕೊಂಡು ಕೊಟ್ಟಿರಲಿಲ್ಲ. ಹಾಗಾಗಿ,ಎಸ್‌ಸಿ, ಎಸ್‌ಟಿಗಳಿಂದ ಕಿತ್ತು ಮುಸ್ಲಿಮರಿಗೆ ನೀಡಲಾಗಿದ್ದ 4% ಮೀಸಲಾತಿ ರದ್ದುಪಡಿಸಿದ್ದೇವೆ ಎಂಬ ಪ್ರಧಾನಿ ಮೋದಿಯವರ ಹೇಳಿಕೆ ಸುಳ್ಳು.

ಪ್ರಧಾನಿ ಮಾತನಾಡುವಾಗ, ಮುಸ್ಲಿಮರ 4% ಮೀಸಲಾತಿ ರದ್ದುಪಡಿಸಿ ಎಸ್‌ಸಿ, ಎಸ್‌ಟಿಗಳಿಗೆ ಅವರ ಹಕ್ಕು ಕೊಟ್ಟಿದ್ದೇವೆ ಎಂದಿದ್ದಾರೆ. ಇದರರ್ಥ, ಮುಸ್ಲಿಮರಿಂದ ಕಿತ್ತುಕೊಂಡ 4% ಎಸ್‌ಸಿ, ಎಸ್‌ಟಿಗಳಿಗೆ ಮರಳಿಸಿದ್ದೇವೆ ಎಂದು. ಇದು ಸುಳ್ಳು ಹೇಳಿಕೆಯಾಗಿದೆ. ಮುಸ್ಲಿಮರಿಗೆ ನೀಡಲಾಗಿದ್ದ 4% ಮೀಸಲಾತಿ ರದ್ದುಪಡಿಸಿ ಎಸ್‌ಸಿ, ಎಸ್‌ಟಿಗಳಿಗೆ ನೀಡಿಲ್ಲ.

ಪ್ರಧಾನಿ ನೀಡಿರುವ ಮತ್ತೊಂದು ಹೇಳಿಕೆ, ಕರ್ನಾಟಕದಲ್ಲಿ ಬಿಜೆಪಿ ಸರ್ಕಾರದ ಮೂಲಕ ನಮಗೆ ಅವಕಾಶ ಸಿಕ್ಕಾಗ ಮೊದಲು ಮಾಡಿದ ಕೆಲಸ ಮುಸ್ಲಿಮರ 4% ಮೀಸಲಾತಿ ರದ್ದುಪಡಿಸಿದ್ದು ಎಂಬುವುದು. ಆದರೆ, ಇದೂ ಸುಳ್ಳು ಹೇಳಿಕೆಯಾಗಿದೆ. ಬಿಜೆಪಿ ಸರ್ಕಾರ ಮುಸ್ಲಿಮರ ಮೀಸಲಾತಿ ರದ್ದುಪಡಿಸಿದ್ದು, ತಮ್ಮ ಅಧಿಕಾರವದಿಯ ಅಂತ್ಯದಲ್ಲಿ. ಅಂದರೆ, ಮಾರ್ಚ್‌ 2023ರಲ್ಲಿ.

ಗಮನಾರ್ಹ ಸಂಗತಿಯೆಂದರೆ, ಎಸ್‌ಸಿ, ಎಸ್‌ಟಿಗಳಿಂದ ಕಿತ್ತುಕೊಂಡು ಮುಸ್ಲಿಮರಿಗೆ 4% ಮೀಸಲಾತಿಯನ್ನು ನೀಡಲಾಗಿತ್ತು ಎಂದು ಪ್ರಧಾನಿ ಹೇಳಿದ್ದಾರೆ. ಆದರೆ, ಈ ಮೀಸಲಾತಿ ಮುಸ್ಲಿಮರಿಗೆ ನೀಡಿದ್ದು, ಹೆಚ್‌.ಡಿ ದೇವೇಗೌಡರ ನೇತೃತ್ವದ ಜನತಾದಳ ಸರ್ಕಾರ. ಇದೇ ದೇವೇಗೌಡರ ಪಕ್ಷ ಜೆಡಿಎಸ್‌ ಈಗ ಕರ್ನಾಟಕದಲ್ಲಿ ಬಿಜೆಪಿಯ ಮೈತ್ರಿ ಪಕ್ಷವಾಗಿದೆ. ದೇವೇಗೌಡರು ಮತ್ತು ಮೋದಿ ಇತ್ತೀಚೆಗೆ ಪರಸ್ಪರ ಹೊಗಳಿಕೆಯ ಮಾತುಗಳನ್ನಾಡಿದ್ದರು.

ಇದನ್ನೂ ಓದಿ : FACT CHECK: ಜಾತಿ ಗಣತಿ ಕುರಿತ ರಾಹುಲ್ ಗಾಂಧಿಯ ವೈರಲ್ ಕ್ಲಿಪ್ ಎಡಿಟೆಡ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಜೆಪಿ MLC ರವಿಕುಮಾರ್‌ ವಿರುದ್ಧ ಜಾಮೀನು ರಹಿತ ವಾರಂಟ್‌

ಕಲಬುರಗಿ ಜಿಲ್ಲಾಧಿಕಾರಿ ಫೌಜಿಯಾ ತರನ್ನಮ್ ವಿರುದ್ಧ ಅವಹೇಳನಕಾರಿ ಹಾಗೂ ಕೋಮು ಪ್ರಚೋದಕ ಹೇಳಿಕೆ ನೀಡಿದ ಆರೋಪಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ, ವಿಚಾರಣೆಗೆ ಹಾಜರಾಗದ ಬಿಜೆಪಿ ವಿಧಾನ ಪರಿಷತ್ ಸದಸ್ಯ ಎನ್. ರವಿಕುಮಾರ್ ವಿರುದ್ಧ ಬೆಂಗಳೂರಿನ...

20 ಬಂಡಾಯ ಸಂಸದರ ಅನರ್ಹತೆಗೆ ಒತ್ತಾಯ: ಶೀಘ್ರ ನಿರ್ಧಾರ ಕೈಗೊಳ್ಳುವಂತೆ ಕೋರಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಟಿಎಂಸಿ ಕಾರ್ಯದರ್ಶಿ ಅಭಿಷೇಕ್ ಬ್ಯಾನರ್ಜಿ

ತಮ್ಮ ಪಕ್ಷದಿಂದ ಪ್ರತ್ಯೇಕಗೊಂಡಿರುವ 20 ಬಂಡಾಯ ಸಂಸದರನ್ನು ಅನರ್ಹಗೊಳಿಸುವಂತೆ ಕೋರಿ ಸಲ್ಲಿಸಲಾದ ಅರ್ಜಿಗಳ ಕುರಿತು ಲೋಕಸಭೆಯ ಸ್ಪೀಕರ್ ಓಂ ಬಿರ್ಲಾ ಅವರು ಶೀಘ್ರ ನಿರ್ಧಾರ ಕೈಗೊಳ್ಳುವಂತೆ ನಿರ್ದೇಶನ ನೀಡಲು ಕೋರಿ ತೃಣಮೂಲ ಕಾಂಗ್ರೆಸ್...

ದೆಹಲಿ, ಬಿಹಾರದಲ್ಲಿ ನೀಟ್ ಪ್ರತಿಭಟನಾಕಾರರ ಮೇಲೆ ಪೆಲೆಟ್, ಅಶ್ರುವಾಯು, ವಿದ್ಯುತ್ ಶಾಕ್ ಲಾಠಿ ಪ್ರಹಾರ ನಡೆದಿರುವುದು ಸತ್ಯ: ಅಮ್ನೆಸ್ಟಿ ವರದಿಯಲ್ಲಿ ಕಳವಳಕಾರಿ ವಿಷಯಗಳು ಬಹಿರಂಗ

ದೆಹಲಿ ಮತ್ತು ಬಿಹಾರದಲ್ಲಿ ವಿದ್ಯಾರ್ಥಿಗಳು ಹಾಗೂ ಯುವಜನರ ನೇತೃತ್ವದಲ್ಲಿ ನಡೆದ ನೀಟ್ (NEET) ಪರೀಕ್ಷಾ ವಿವಾದಕ್ಕೆ ಸಂಬಂಧಿಸಿದ ಪ್ರತಿಭಟನೆಗಳ ಸಂದರ್ಭದಲ್ಲಿ ಭಾರತೀಯ ಪೊಲೀಸರು ಪ್ರತಿಭಟನಾಕಾರರ ವಿರುದ್ಧ ಕಾನೂನುಬಾಹಿರ ಮತ್ತು ಅತಿಯಾದ ಬಲಪ್ರಯೋಗ ಮಾಡಿದ್ದಾರೆ...

ರಾಜ್ಯ ಚುನಾವಣಾ ಆಯೋಗದಿಂದ ಎಸ್‌ಐಆರ್ ಕರಡು ಪಟ್ಟಿ ಪ್ರಕಟ; ದಾವಣಗೆರೆಯಲ್ಲಿ ಅತಿ ಕಡಿಮೆ- ಬೆಂಗಳೂರು ನಗರದಲ್ಲಿ 9.46 ಲಕ್ಷ ಜನರಿಗೆ ನೋಟಿಸ್‌!

ರಾಜ್ಯ ಚುನಾವಣಾ ಆಯೋಗವು ಇಂದು ಎಸ್‌ಐಆರ್ ಕರಡು ಪಟ್ಟಿ ಪ್ರಕಟಿಸಿದ್ದು, 'ಲಾಜಿಕಲ್ ಡಿಸ್ಕ್ರಿಪೆನ್ಸಿ' ಹೆಸರಿನಲ್ಲಿ ದಾವಣಗೆರೆ ಜಿಲ್ಲೆಯಲ್ಲಿ ಅತಿ ಕಡಿಮೆ, ಅಂದರೆ 7,088 ಜನರಿಗೆ ನೋಟಿಸ್‌ ನೀಡಲು ಸಿದ್ಧತೆ ನಡೆಸಲಾಗಿದೆ. ಬೆಂಗಳೂರು ನಗರದಲ್ಲಿ...

ಮಹಾರಾಷ್ಟ್ರದ ಅಮರಾವತಿಯಲ್ಲಿ ದಾರುಣ ದುರಂತ: ಸರ್ಕಾರಿ ಆಸ್ಪತ್ರೆಯ ವೆಂಟಿಲೇಟರ್ ಸ್ಫೋಟಗೊಂಡು ಮೂವರು ನವಜಾತ ಶಿಶುಗಳ ಸಾವು

ಅಮರಾವತಿ: ಮಹಾರಾಷ್ಟ್ರದ ಅಮರಾವತಿ ಜಿಲ್ಲಾ ಸರ್ಕಾರಿ ಮಹಿಳಾ ಆಸ್ಪತ್ರೆಯ ನವಜಾತ ಶಿಶುಗಳ ತೀವ್ರ ನಿಗಾ ಘಟಕದಲ್ಲಿ ಸೋಮವಾರ ಮುಂಜಾನೆ ಭೀಕರ ಅಗ್ನಿ ಅವಘಡ ಸಂಭವಿಸಿದ್ದು ವೆಂಟಿಲೇಟರ್‌ನಲ್ಲಿ ಉಂಟಾದ ಸ್ಫೋಟದಿಂದಾಗಿ ಬೆಂಕಿ ಮತ್ತು ದಟ್ಟ...

‘ಮೋದಿ ಅವರ ‘ದಿಮಾಗಿ ನಕ್ಸಲ್’ ಹೇಳಿಕೆಯು ಮುಂಬರುವ ಯುವ ಭಿನ್ನಾಭಿಪ್ರಾಯದ ಅಲೆಯನ್ನು ‘ರಾಷ್ಟ್ರವಿರೋಧಿ’ ಎಂದು ಬಿಂಬಿಸುವ ಪ್ರಯತ್ನವಾಗಿದೆ’: ಆನಂದ್ ತೇಲ್ತುಂಬ್ಡೆ

ಜೆನ್ ಝೀ ಅಲೆಯ ಹೊಸ ರೀತಿಯ ಪ್ರತಿಭಟನೆಗೆ ಬೆಚ್ಚಿಬಿದ್ದಿರುವ ಪ್ರಧಾನಿ ಮೋದಿಯವರ 'ದಿಮಾಗಿ ನಕ್ಸಲ್' ಹೇಳಿಕೆಯ ಮುಖವಾಡವನ್ನು 'ದಿ ವೈರ್' ಲೇಖನದಲ್ಲಿ ಪ್ರಸಿದ್ಧ ಚಿಂತಕ ಡಾ. ಆನಂದ್ ತೇಲ್ತುಂಬ್ಡೆ ಬಿಚ್ಚಿಟ್ಟಿದ್ದಾರೆ. ಆಡಳಿತದ ವಿಫಲ...

SIR : ಮೂರು ದೇಶಗಳಿಗೆ ಭಾರತದ ರಾಯಭಾರಿಯಾಗಿದ್ದ ನವದೀಪ್ ಸೂರಿಗೆ ಪೌರತ್ವ ಸಾಬೀತುಪಡಿಸುವ ಸವಾಲು!

ಪಂಜಾಬ್‌ನಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯಲ್ಲಿ ಪೌರತ್ವ ಸಾಬೀತುಪಡಿಸುವ ವಿಧಾನದ ಕುರಿತು ಮಾಜಿ ರಾಜತಾಂತ್ರಿಕ ನವದೀಪ್ ಸೂರಿ ಅವರು ಭಾನುವಾರ (ಆ.23) ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ....

ಸೊಹ್ರಾಬುದ್ದೀನ್ ಶೇಖ್ ಎನ್‌ಕೌಂಟರ್ ಪ್ರಕರಣ : 22 ಆರೋಪಿಗಳ ಖುಲಾಸೆ ಪ್ರಶ್ನಿಸಿ ಸುಪ್ರೀಂ ಮೆಟ್ಟಿಲೇರಿದ ಸಹೋದರ

ಸೊಹ್ರಾಬುದ್ದೀನ್ ಶೇಖ್ ಮತ್ತು ಅವರ ಪತ್ನಿ ಕೌಸರ್ ಬಿ ಹಾಗೂ ಆಪ್ತ ತುಳಸಿರಾಮ್ ಪ್ರಜಾಪತಿ ಅವರ 2005ರ ನಕಲಿ ಎನ್‌ಕೌಂಟರ್ ಪ್ರಕರಣದಲ್ಲಿ ಗುಜರಾತ್, ರಾಜಸ್ಥಾನ ಮತ್ತು ಆಂಧ್ರಪ್ರದೇಶದ 21 ಪೊಲೀಸರು ಸೇರಿದಂತೆ ಒಟ್ಟು...

ಉತ್ತರ ಪ್ರದೇಶ| ಚಲಿಸುವ ರೈಲಿನಲ್ಲಿ ಮದರಸಾ ವಿದ್ಯಾರ್ಥಿ ಮೇಲೆ ಹಲ್ಲೆ; ಬಲವಂತವಾಗಿ ಮದ್ಯ ಕುಡಿಸಿದ ದುಷ್ಕರ್ಮಿಗಳು

ಪಶ್ಚಿಮ ಉತ್ತರ ಪ್ರದೇಶದಲ್ಲಿ ಶನಿವಾರ ರಾತ್ರಿ ಚಲಿಸುತ್ತಿದ್ದ ರೈಲಿನಲ್ಲಿ ಮದರಸಾ ವಿದ್ಯಾರ್ಥಿಯೊಬ್ಬನ ಮೇಲೆ ಕುಡಿದ ಮತ್ತಿನಲ್ಲಿದ್ದ ಯುವಕರ ಗುಂಪೊಂದು ಹಲ್ಲೆ ನಡೆಸಿ, ಆತನ ಧಾರ್ಮಿಕ ಗುರುತನ್ನು ನಿಂದಿಸಿ, ಬಲವಂತವಾಗಿ ಮದ್ಯ ಕುಡಿಸಿರುವ ಘಟನೆ...

ಶೈಕ್ಷಣಿಕ ಬೇಡಿಕೆಗಳಿಗಾಗಿ ವಾರ್ಧಾ ಎಂಜಿಎಎಚ್‌ವಿಯಲ್ಲಿ ವಿದ್ಯಾರ್ಥಿಗಳ ಅಹೋರಾತ್ರಿ ಸತ್ಯಾಗ್ರಹ: 47ನೇ ದಿನಕ್ಕೆ ಕಾಲಿಟ್ಟ ಪ್ರತಿಭಟನೆ, 6 ವಿದ್ಯಾರ್ಥಿಗಳ ವಿರುದ್ಧ ಎಫ್‌ಐಆರ್

ವಾರ್ಧಾ (ಮಹಾರಾಷ್ಟ್ರ): ಮಹಾರಾಷ್ಟ್ರದ ವಾರ್ಧಾದಲ್ಲಿರುವ ಪ್ರತಿಷ್ಠಿತ ಮಹಾತ್ಮ ಗಾಂಧಿ ಅಂತರರಾಷ್ಟ್ರೀಯ ಹಿಂದಿ ವಿಶ್ವವಿದ್ಯಾಲಯದಲ್ಲಿ (ಎಂಜಿಎಎಚ್‌ವಿ) ಶೈಕ್ಷಣಿಕ ಹಾಗೂ ವಿದ್ಯಾರ್ಥಿ ಕಲ್ಯಾಣಕ್ಕೆ ಸಂಬಂಧಿಸಿದ ವಿವಿಧ ಮೂಲಭೂತ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ವಿದ್ಯಾರ್ಥಿಗಳು ನಡೆಸುತ್ತಿರುವ ಸತ್ಯಾಗ್ರಹವು...