Homeಫ್ಯಾಕ್ಟ್‌ಚೆಕ್FACT CHECK: ಕರ್ನಾಟಕದಲ್ಲಿ ಎಸ್‌ಸಿ, ಎಸ್‌ಟಿಗಳಿಂದ ಕಿತ್ತುಕೊಂಡು ಮುಸ್ಲಿಮರಿಗೆ ನೀಡಿದ್ದ ಮೀಸಲಾತಿ ರದ್ದುಪಡಿಸಿದ್ದೇವೆ ಎಂಬ ಮೋದಿ...

FACT CHECK: ಕರ್ನಾಟಕದಲ್ಲಿ ಎಸ್‌ಸಿ, ಎಸ್‌ಟಿಗಳಿಂದ ಕಿತ್ತುಕೊಂಡು ಮುಸ್ಲಿಮರಿಗೆ ನೀಡಿದ್ದ ಮೀಸಲಾತಿ ರದ್ದುಪಡಿಸಿದ್ದೇವೆ ಎಂಬ ಮೋದಿ ಹೇಳಿಕೆ ಸುಳ್ಳು

- Advertisement -
- Advertisement -

“ಕಾಂಗ್ರೆಸ್ ಸಂವಿಧಾನವನ್ನು ಗೌರವಿಸಲಿಲ್ಲ. ಬಾಬಾ ಸಾಹೇಬ್ ಅಂಬೇಡ್ಕರ್ ಅವರನ್ನು ಗೌರವಿಸಲಿಲ್ಲ. ಕರ್ನಾಟಕದಲ್ಲಿ ಬಿಜೆಪಿ ಸರ್ಕಾರದ ಮೂಲಕ ನಮಗೆ ಅವಕಾಶ ಸಿಕ್ಕಾಗ ನಾವು ಮಾಡಿದ ಮೊದಲ ಕೆಲಸವೆಂದರೆ, ಎಸ್‌ಸಿ, ಎಸ್‌ಟಿಗಳಿಂದ ಕಿತ್ತುಕೊಂಡು ನೀಡಿದ್ದ ಮುಸ್ಲಿಂ ಕೋಟಾವನ್ನು ನಾವು ನಿಲ್ಲಿಸಿದೆವು. ಹಕ್ಕುದಾರರಿಗೆ ಅವರ ಹಕ್ಕುಗಳನ್ನು ನಾವು ಕೊಟ್ಟೆವು” ಎಂದು ರಾಜಸ್ಥಾನದ ಟೋಂಕ್‌ನಲ್ಲಿ ಮಂಗಳವಾರ (ಏ.23) ಚುನಾವಣಾ ರ್ಯಾಲಿಯನ್ನು ಉದ್ದೇಶಿಸಿ ಮಾತನಾಡುವಾಗ ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

ಪ್ರಧಾನಿ ಮೋದಿ ಹೇಳಿದಂತೆ ಕರ್ನಾಟಕದಲ್ಲಿ ಎಸ್‌ಸಿ, ಎಸ್‌ಟಿಗಳಿಂದ ಕಿತ್ತುಕೊಂಡು ಮುಸ್ಲಿಮರಿಗೆ ನೀಡಿದ್ದ 4% ಮೀಸಲಾತಿಯನ್ನು ಬಿಜೆಪಿ ಸರ್ಕಾರ ಇದ್ದಾಗ ರದ್ದುಪಡಿಸಿ, ಅದನ್ನು ಮತ್ತೆ ಎಸ್‌ಸಿ, ಎಸ್‌ಟಿಗಳಿಗೆ ನೀಡಿದ್ದು ನಿಜಾನಾ? ಎಂಬುವುದರ ಸತ್ಯಾಸತ್ಯತೆಯನ್ನು ನಾನುಗೌರಿ.ಕಾಂ ಪರಿಶೀಲನೆ ನಡೆಸಿದೆ.

ಫ್ಯಾಕ್ಟ್‌ಚೆಕ್ : ಮಾರ್ಚ್ 2023ರಲ್ಲಿ, ಕರ್ನಾಟಕದಲ್ಲಿ ವಿಧಾನಸಭಾ ಚುನಾವಣೆಗೆ ಮುಂಚಿತವಾಗಿ, ರಾಜ್ಯದ ಬಿಜೆಪಿ ಸರ್ಕಾರವು “2ಬಿ” ಹಿಂದುಳಿದ ವರ್ಗದ ಅಡಿಯಲ್ಲಿ ಮುಸ್ಲಿಮರಿಗೆ ನೀಡಲಾದ 4% ಮೀಸಲಾತಿಯನ್ನು ರದ್ದುಗೊಳಿಸಿತ್ತು ಮತ್ತು ಸಮುದಾಯವನ್ನು ಸಾಮಾನ್ಯ ವರ್ಗದ EWSನ 10% ಕೋಟಾದಡಿ ತಂದಿತ್ತು.

ಮುಸ್ಲಿಮರಿಗೆ ನೀಡಲಾಗಿದ್ದ 4% ಮೀಸಲಾತಿಯನ್ನು ಒಕ್ಕಲಿಗರು ಮತ್ತು ಲಿಂಗಾಯತರಿಗೆ ಹಂಚಲು ಸರ್ಕಾರ ಮುಂದಾಗಿತ್ತು. ಒಕ್ಕಗಲಿಗರು 3ಎ ಅಡಿ 4 % ಮತ್ತು ಲಿಂಗಾಯತರು 3ಬಿ ಅಡಿ 5% ಮೀಸಲಾತಿ ಹೊಂದಿದ್ದರು. ಸರ್ಕಾರ ಒಕ್ಕಲಿಗರಿಗೆ 2 (ಸಿ) ಅಡಿಯಲ್ಲಿ 6% ಮತ್ತು ಲಿಂಗಾಯತರಿಗೆ 2 (ಡಿ) ಅಡಿಯಲ್ಲಿ 7% ಮೀಸಲಾತಿ ನೀಡಲು ನಿರ್ಧರಿಸಿತ್ತು. ಆದರೆ, ಇದು ಇನ್ನೂ ಜಾರಿಗೆ ಬಂದಿಲ್ಲ. ಸರ್ಕಾರದ ನಿರ್ಧಾರ ಪ್ರಶ್ನಿಸಿ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಲಾಗಿದೆ. ಹಾಗಾಗಿ, ಪ್ರಕರಣ ಈಗ ನ್ಯಾಯಾಲಯದಲ್ಲಿದೆ.

ಇನ್ನು, ‘2ಬಿ’ ಹಿಂದುಳಿದ ವರ್ಗದ ಅಡಿಯಲ್ಲಿ ಸಾಮಾಜಿಕ ಮತ್ತು ಶೈಕ್ಷಣಿಕ ಹಿಂದುಳಿದಿರುವಿಕೆಯ ಆಧಾರದ ಮೇಲೆ ಸರ್ಕಾರಿ ಉದ್ಯೋಗಗಳು ಮತ್ತು ಶಿಕ್ಷಣದಲ್ಲಿ ಮುಸ್ಲಿಮರಿಗೆ 4% ಮೀಸಲಾತಿಯನ್ನು ನೀಡಿದ್ದು, 1994 ರಲ್ಲಿ ಹೆಚ್ ಡಿ ದೇವೇಗೌಡ ನೇತೃತ್ವದ ಸರ್ಕಾರ. ಇದು, 1918 ರಲ್ಲಿ ಅಂದಿನ ಮೈಸೂರು ರಾಜಪ್ರಭುತ್ವದ ಆಳ್ವಿಕೆಯಲ್ಲಿ ಪ್ರಾರಂಭಿಸಿದ ಕ್ರಮದ ಮುಂದುವರಿದ ಭಾಗವಾಗಿತ್ತು ಎಂದು ತಿಳಿದು ಬಂದಿದೆ.

ಸದ್ಯಕ್ಕೆ, ರಾಜ್ಯದಲ್ಲಿ ಮುಸ್ಲಿಮರಿಗೆ ಒಬಿಸಿಯ 2ಬಿ ಅಡಿಯಲ್ಲಿ ನೀಡಲಾಗಿದ್ದ 4% ಮೀಸಲಾತಿ ರದ್ದಾಗಿಲ್ಲ. ಮುಸ್ಲಿಮರನ್ನು 10% ಮೀಸಲಾತಿ ಇರುವ ಇಡಬ್ಯುಎಸ್‌ ಅಡಿ ತರುವ ಪ್ರಯತ್ನವೂ ಸಫಲಗೊಂಡಿಲ್ಲ ಎಂಬ ಮಾಹಿತಿ ಲಭ್ಯವಾಗಿದೆ.

ಇನ್ನು ಎಸ್‌ಸಿ, ಎಸ್‌ಟಿ ವಿಚಾರಕ್ಕೆ ಬಂದರೆ, ಅವರ ಮೀಸಲಾತಿ ಈ ಹಿಂದಿನಿಂದಲೂ ಯಥಾ ಸ್ಥಿತಿಯಲ್ಲಿ ಇದೆ. ಎಸ್‌ಸಿಗಳಿಗೆ 15% ಮತ್ತು ಎಸ್‌ಟಿಗಳಿಗೆ 3% ಮೀಸಲಾತಿ ನೀಡಲಾಗಿದೆ. ಮುಸ್ಲಿಮರಿಗೆ ಒಬಿಸಿಯ 2ಬಿ ಅಡಿ ಪ್ರತ್ಯೇಕವಾಗಿ 4% ನೀಡಲಾಗಿತ್ತೇ ಹೊರತು, ಎಸ್‌ಸಿ, ಎಸ್‌ಟಿಗಳಿಂದ ಕಿತ್ತುಕೊಂಡು ಕೊಟ್ಟಿರಲಿಲ್ಲ. ಹಾಗಾಗಿ,ಎಸ್‌ಸಿ, ಎಸ್‌ಟಿಗಳಿಂದ ಕಿತ್ತು ಮುಸ್ಲಿಮರಿಗೆ ನೀಡಲಾಗಿದ್ದ 4% ಮೀಸಲಾತಿ ರದ್ದುಪಡಿಸಿದ್ದೇವೆ ಎಂಬ ಪ್ರಧಾನಿ ಮೋದಿಯವರ ಹೇಳಿಕೆ ಸುಳ್ಳು.

ಪ್ರಧಾನಿ ಮಾತನಾಡುವಾಗ, ಮುಸ್ಲಿಮರ 4% ಮೀಸಲಾತಿ ರದ್ದುಪಡಿಸಿ ಎಸ್‌ಸಿ, ಎಸ್‌ಟಿಗಳಿಗೆ ಅವರ ಹಕ್ಕು ಕೊಟ್ಟಿದ್ದೇವೆ ಎಂದಿದ್ದಾರೆ. ಇದರರ್ಥ, ಮುಸ್ಲಿಮರಿಂದ ಕಿತ್ತುಕೊಂಡ 4% ಎಸ್‌ಸಿ, ಎಸ್‌ಟಿಗಳಿಗೆ ಮರಳಿಸಿದ್ದೇವೆ ಎಂದು. ಇದು ಸುಳ್ಳು ಹೇಳಿಕೆಯಾಗಿದೆ. ಮುಸ್ಲಿಮರಿಗೆ ನೀಡಲಾಗಿದ್ದ 4% ಮೀಸಲಾತಿ ರದ್ದುಪಡಿಸಿ ಎಸ್‌ಸಿ, ಎಸ್‌ಟಿಗಳಿಗೆ ನೀಡಿಲ್ಲ.

ಪ್ರಧಾನಿ ನೀಡಿರುವ ಮತ್ತೊಂದು ಹೇಳಿಕೆ, ಕರ್ನಾಟಕದಲ್ಲಿ ಬಿಜೆಪಿ ಸರ್ಕಾರದ ಮೂಲಕ ನಮಗೆ ಅವಕಾಶ ಸಿಕ್ಕಾಗ ಮೊದಲು ಮಾಡಿದ ಕೆಲಸ ಮುಸ್ಲಿಮರ 4% ಮೀಸಲಾತಿ ರದ್ದುಪಡಿಸಿದ್ದು ಎಂಬುವುದು. ಆದರೆ, ಇದೂ ಸುಳ್ಳು ಹೇಳಿಕೆಯಾಗಿದೆ. ಬಿಜೆಪಿ ಸರ್ಕಾರ ಮುಸ್ಲಿಮರ ಮೀಸಲಾತಿ ರದ್ದುಪಡಿಸಿದ್ದು, ತಮ್ಮ ಅಧಿಕಾರವದಿಯ ಅಂತ್ಯದಲ್ಲಿ. ಅಂದರೆ, ಮಾರ್ಚ್‌ 2023ರಲ್ಲಿ.

ಗಮನಾರ್ಹ ಸಂಗತಿಯೆಂದರೆ, ಎಸ್‌ಸಿ, ಎಸ್‌ಟಿಗಳಿಂದ ಕಿತ್ತುಕೊಂಡು ಮುಸ್ಲಿಮರಿಗೆ 4% ಮೀಸಲಾತಿಯನ್ನು ನೀಡಲಾಗಿತ್ತು ಎಂದು ಪ್ರಧಾನಿ ಹೇಳಿದ್ದಾರೆ. ಆದರೆ, ಈ ಮೀಸಲಾತಿ ಮುಸ್ಲಿಮರಿಗೆ ನೀಡಿದ್ದು, ಹೆಚ್‌.ಡಿ ದೇವೇಗೌಡರ ನೇತೃತ್ವದ ಜನತಾದಳ ಸರ್ಕಾರ. ಇದೇ ದೇವೇಗೌಡರ ಪಕ್ಷ ಜೆಡಿಎಸ್‌ ಈಗ ಕರ್ನಾಟಕದಲ್ಲಿ ಬಿಜೆಪಿಯ ಮೈತ್ರಿ ಪಕ್ಷವಾಗಿದೆ. ದೇವೇಗೌಡರು ಮತ್ತು ಮೋದಿ ಇತ್ತೀಚೆಗೆ ಪರಸ್ಪರ ಹೊಗಳಿಕೆಯ ಮಾತುಗಳನ್ನಾಡಿದ್ದರು.

ಇದನ್ನೂ ಓದಿ : FACT CHECK: ಜಾತಿ ಗಣತಿ ಕುರಿತ ರಾಹುಲ್ ಗಾಂಧಿಯ ವೈರಲ್ ಕ್ಲಿಪ್ ಎಡಿಟೆಡ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಸಿಲಿನ ಬೆಂಕಿಗೆ ‘ಎಲ್ ನಿನೊ’ ತುಪ್ಪ: 2026ರ ಮುಂಗಾರು ಕಥೆ ಏನು?

ದೇಶಾದ್ಯಂತ ತಾಪಮಾನ ದಿನೇ ದಿನೇ ಏರುತ್ತಿದ್ದು, ಭೀಕರ ಶಾಖದ ಅಲೆಗಳಿಗೆ (Heatwaves) ಜನ ತತ್ತರಿಸಿ ಹೋಗಿದ್ದಾರೆ. ಈ ಹೊತ್ತಿನಲ್ಲಿ ಎಲ್ಲರ ಕಣ್ಣುಗಳು ಸಾವಿರಾರು ಕಿಲೋಮೀಟರ್ ದೂರದ ಪೆಸಿಫಿಕ್ ಮಹಾಸಾಗರದಲ್ಲಿ ಸಂಭವಿಸುತ್ತಿರುವ ಹವಾಮಾನ ಬದಲಾವಣೆಯ...

ಸುಮಾರು 1 ಲಕ್ಷ ಶಾಲೆಗಳಲ್ಲಿ ಬಾಲಕಿಯರಿಗೆ ಶೌಚಾಲಯವಿಲ್ಲ, 61,000 ಶಾಲೆಗಳಲ್ಲಿ ಕ್ರಿಯಾತ್ಮಕ ಶೌಚಾಲಯಗಳಿಲ್ಲ: ನೀತಿ ಆಯೋಗ

ಶಿಕ್ಷಣವು ಒಂದು ದೇಶದ ಅಭಿವೃದ್ಧಿಯ ಬೆನ್ನೆಲುಬು ಅಂತಲೇ ಹೇಳಲಾಗುತ್ತದೆ. ಆದರೆ, ಭಾರತದ ಶಾಲಾ ಶಿಕ್ಷಣದ ಮೂಲಭೂತ ಸೌಕರ್ಯಗಳು ಮತ್ತು ವ್ಯವಸ್ಥೆಯ ಕುರಿತಾಗಿ ನೀತಿ ಆಯೋಗ ಹಾಗೂ ಯುಡಿಐಎಸ್ಇ+ (UDISE+ 2024–25) ಇತ್ತೀಚೆಗೆ ಬಿಡುಗಡೆ...

CJI ಹೇಳಿಕೆಯಿಂದ ರಾತ್ರೋರಾತ್ರಿ ಹುಟ್ಟಿಕೊಂಡ ‘ಕಾಕ್‌ರೋಚ್ ಜನತಾ ಪಾರ್ಟಿ’

ಒಂದು ರಾಜಕೀಯ ಪಕ್ಷವನ್ನು ಕಟ್ಟಿ, ಅದಕ್ಕೊಂದು ರೂಪ ಕೊಡಲು ಎಷ್ಟು ಸಮಯ ಬೇಕಾಗಬಹುದು? ಕೇವಲ 48 ಗಂಟೆಗಳು! ಹೌದು, ಕಳೆದ ಭಾನುವಾರ ನೀವು ಸಾಮಾಜಿಕ ಜಾಲತಾಣಗಳಲ್ಲಿ ಸ್ವಲ್ಪ ಸಮಯ ಕಳೆದಿದ್ದರೆ ನಿಮಗಿದು ಖಂಡಿತ...

ಬೆಂಗಳೂರು: ಗಂಗಸಂದ್ರ ದಲಿತರ ಭೂಮಿ ಕಿತ್ತುಕೊಳ್ಳಲು ಮುಗಿಬಿದ್ದ ಅರಣ್ಯ ಇಲಾಖೆ: ಮಿತಿಮೀರಿದ ಅಧಿಕಾರಿಗಳ ದರ್ಪ

ಕೆಂಗೇರಿ ಬಳಿಯ ಗಂಗಸಂದ್ರ ಗ್ರಾಮದಲ್ಲಿನ ದಲಿತರ ಭೂಮಿಯನ್ನು ಅರಣ್ಯ ಭೂಮಿಯೆಂದು ಅರಣ್ಯ ಇಲಾಖೆಯ ವಶಕ್ಕೆ ಪಡೆಯಲು ಅಧಿಕಾರಿಗಳು ಮುಂದಾಗಿದ್ದಾರೆ. 2026 ಮೇ 19ರ, ಮಂಗಳವಾರ  ಬೆಳ್ಳಂಬೆಳಗ್ಗೆಯೇ ಅಧಿಕಾರಿಗಳ ದರ್ಪ ತಾರಕಕ್ಕೇರಿದೆ. ದಲಿತ ನಿವಾಸಿಗಳ...

ಜನಾಂಗೀಯ ದ್ವೇಷ: ಅಮೆರಿಕಾದ ಸ್ಯಾನ್ ಡಿಯಾಗೋ ಮಸೀದಿ ಸಂಕೀರ್ಣದಲ್ಲಿ ಗುಂಡಿನ ದಾಳಿ: ಮೂವರು ಸಾವು

ಸ್ಯಾನ್ ಡಿಯಾಗೋ: ಅಮೆರಿಕದ ಸ್ಯಾನ್ ಡಿಯಾಗೋ ನಗರದ ಇಸ್ಲಾಮಿಕ್ ಸೆಂಟರ್ ಆಫ್ ಸ್ಯಾನ್ ಡಿಯಾಗೋ (ICSD) ಮಸೀದಿ ಸಂಕೀರ್ಣದಲ್ಲಿ ಸೋಮವಾರ ನಡೆದ ಗುಂಡಿನ ದಾಳಿಯಲ್ಲಿ ಮೂವರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಈ ಘಟನೆಯನ್ನು ಸಂಭಾವ್ಯ...

ರಸ್ತೆಗಳಲ್ಲಿ ಮುಕ್ತವಾಗಿ ಓಡಾಡುವುದು ಜನರ ಹಕ್ಕು: ಬೀದಿ ನಾಯಿಗಳ ದಯಾಮರಣಕ್ಕೂ ಸುಪ್ರೀಂ ಅಸ್ತು

ಸುಪ್ರೀಂ ಕೋರ್ಟ್ ಇಂದು (ಮೇ 19, ಮಂಗಳವಾರ) ಬೀದಿ ನಾಯಿಗಳ ನಿಯಂತ್ರಣ ಮತ್ತು ನಿರ್ವಹಣೆಗೆ ಸಂಬಂಧಿಸಿದ ಎಲ್ಲಾ ಅರ್ಜಿಗಳನ್ನು ವಜಾಗೊಳಿಸಿ ಮಹತ್ವದ ತೀರ್ಪು ನೀಡಿದೆ. ಸಾರ್ವಜನಿಕ ಸ್ಥಳಗಳಲ್ಲಿ ಬೀದಿ ನಾಯಿಗಳ ದಾಳಿಯಿಂದಾಗಿ ಸಾರ್ವಜನಿಕರು...

ಹರಿಯಾಣದ ಕಾರ್ಮಿಕ ನಾಯಕ ಅಜಿತ್ ಸಿಂಗ್ ಬಂಧನ ‘ಅಕ್ರಮ’ ಎಂದ ಕೋರ್ಟ್; ಜಾಮೀನು ಮಂಜೂರು

ಬೆಲ್ಸೋನಿಕಾ ಆಟೋ ಕಾಂಪೊನೆಂಟ್ ಇಂಡಿಯಾ ಎಂಪ್ಲಾಯೀಸ್ ಯೂನಿಯನ್‌ನ ಪ್ರಧಾನ ಕಾರ್ಯದರ್ಶಿ ಅಜಿತ್ ಸಿಂಗ್ ಅವರಿಗೆ ಗುರುಗ್ರಾಮ್ ಜಿಲ್ಲಾ ನ್ಯಾಯಾಲಯವು (ಮೇ 18) ಜಾಮೀನು ನೀಡಿದೆ. ಅವರು ಮಾನೇಸರ್ ಕೈಗಾರಿಕಾ ಪ್ರದೇಶದಲ್ಲಿ ಕಾರ್ಮಿಕರ ಪ್ರತಿಭಟನೆಗಳ...

ಉಮರ್, ಶಾರ್ಜೀಲ್‌ಗೆ ಜಾಮೀನು ನಿರಾಕರಿಸಿದ್ದಕ್ಕೆ ಆಕ್ಷೇಪ : ತನ್ನದೇ ಆದೇಶದ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ದೆಹಲಿ ಗಲಭೆ (2020ರ ಪ್ರಕರಣ) ಹಿಂದಿನ ದೊಡ್ಡ ಮಟ್ಟದ ಪಿತೂರಿ ಆರೋಪದಲ್ಲಿ ಬಂಧಿತರಾಗಿರುವ ಉಮರ್ ಖಾಲಿದ್ ಮತ್ತು ಶಾರ್ಜೀಲ್ ಇಮಾಮ್ ಅವರಿಗೆ ಜಾಮೀನು ನಿರಾಕರಿಸಿ, 2026ರ ಜನವರಿಯಲ್ಲಿ ತನ್ನದೇ ಮತ್ತೊಂದು ದ್ವಿಸದಸ್ಯ ಪೀಠ...

ಮುತ್ತುರಾಜ್ ‘ರಾಜಕುಮಾರ್‍’ ಆದ ಕಥೆ

’ಬೇಡರ ಕಣ್ಣಪ್ಪ’ ಚಿತ್ರದ ಚಿತ್ರೀಕರಣ ಭರದಿಂದ ಸಾಗುತ್ತಿದ್ದ ಸಮಯದಲ್ಲಿ ಒಂದು ದಿನ ನಾನು ಅಂದಿನ ಪತ್ರಿಕೆಯಲ್ಲಿ ಚಿತ್ರಸುದ್ದಿಯನ್ನು ಓದುತ್ತಿದ್ದಾಗ ಗುಬ್ಬಿ ಕರ್ಣಾಟಕ ಸಂಸ್ಥೆಯವರು ನಿರ್ಮಿಸುತ್ತಿರುವ ಬೇಡರ ಕಣ್ಣಪ್ಪ ಚಿತ್ರ ಎಂದು ಸುದ್ದಿ ಪ್ರಾರಂಭವಾಗಿ...

ಬಂಗಾಳ ಎಸ್‌ಐಆರ್ ಅವಾಂತರ ಹಕ್ಕು ಕಳೆದುಕೊಂಡ ಮತದಾರ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್ ಪೂರ್ಣಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...