Homeಮುಖಪುಟಉತ್ತರಪ್ರದೇಶ: ಮಾದಕ ದ್ರವ್ಯ ಕಳ್ಳಸಾಗಣೆ, ಜುಗಾರಿ,  ಭಿಕ್ಷೆ ಬೇಡುವುದನ್ನು 'ವೃತ್ತಿ' ಎಂದು ಪಟ್ಟಿ ಮಾಡಿದ ಪೊಲೀಸ್‌...

ಉತ್ತರಪ್ರದೇಶ: ಮಾದಕ ದ್ರವ್ಯ ಕಳ್ಳಸಾಗಣೆ, ಜುಗಾರಿ,  ಭಿಕ್ಷೆ ಬೇಡುವುದನ್ನು ‘ವೃತ್ತಿ’ ಎಂದು ಪಟ್ಟಿ ಮಾಡಿದ ಪೊಲೀಸ್‌ ಇಲಾಖೆಯ ಅಧಿಕೃತ ಅಪ್ಲಿಕೇಶನ್!

- Advertisement -
- Advertisement -

ಯೋಗಿ ಆದಿತ್ಯನಾಥ್‌ ನೇತೃತ್ವದ ಉತ್ತರಪ್ರದೇಶ ಸರಕಾರ ಮತ್ತೆ ಮುಜುಗರಕ್ಕೆ ಈಡಾಗಿದ್ದು, ಉತ್ತರಪ್ರದೇಶ ಪೊಲೀಸ್ ಮೊಬೈಲ್ ಅಪ್ಲಿಕೇಶನ್ UPCOPನಲ್ಲಿ ಬಾಡಿಗೆದಾರರ ಪರಿಶೀಲನೆಗಾಗಿ ವೃತ್ತಿ ಬಗ್ಗೆ ಪಟ್ಟಿ ಮಾಡಿದೆ. ಅವುಗಳಲ್ಲಿ ‘ಮಾದಕ ದ್ರವ್ಯಗಳ ಕಳ್ಳಸಾಗಣೆ’, ‘ಜುಗಾರಿ’,  ಮತ್ತು ‘ಭಿಕ್ಷೆ ಬೇಡುವುದನ್ನು ವೃತ್ತಿ ಎಂದು ಪಟ್ಟಿ ಮಾಡಲಾಗಿದೆ.

ಸಾಮಾಜಿಕ ಮಾಧ್ಯಮ ಬಳಕೆದಾರರು ಯುಪಿ ಪೋಲಿಸರ ಈ ವೃತ್ತಿ ಪಟ್ಟಿಯ ಬಗ್ಗೆ ಟೀಕಿಸಿದ್ದಾರೆ. ಅಧಿಕಾರಿಗಳ ಗಮನಕ್ಕೆ ತರುವ ಉದ್ದೇಶದಿಂದ ಈ ಕುರಿತ ಸ್ಕ್ರೀನ್‌ ಶಾಟ್‌ಗಳನ್ನು ಅಪ್‌ಲೋಡ್‌ ಮಾಡಿದ್ದಾರೆ. ಉತ್ತರಪ್ರದೇಶದ ಪೊಲೀಸರು ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡಿದ ಸ್ಕ್ರೀನ್‌ಶಾಟ್‌ಗಳನ್ನು ಗಮನಿಸಿದ್ದು ಅಧಿಕಾರಿಗಳು ಈ ಕುರಿತು ಗಮನ ಹರಿಸಿದ್ದಾರೆ ಎಂದು ಹೇಳಿದ್ದಾರೆ.

ಉತ್ತರಪ್ರದೇಶದ ಪೊಲೀಸರು ತಮ್ಮ ಅಧಿಕೃತ ಎಕ್ಸ್ ಖಾತೆಯಲ್ಲಿ ಈ ಕುರಿತು ಪೋಸ್ಟ್ ಮಾಡಿದ್ದಾರೆ, ಇದನ್ನು ಸೂಚಿಸಿದ್ದಕ್ಕಾಗಿ ಧನ್ಯವಾದಗಳು. ಈ ಅಸಂಗತತೆಯನ್ನು ಸರಿಪಡಿಸಲು ನಾವು ಅಗತ್ಯ ಕ್ರಮವನ್ನು ಕೈಗೊಳ್ಳುತ್ತೇವೆ. ಇದು ಹೇಗೆ ಸಂಭವಿಸಿತು ಎಂಬುವುದರ ಕುರಿತು ಉತ್ತರಪ್ರದೇಶದ ಪೋಲಿಸ್‌ ಅಧಿಕಾರಿಗಳು ಇನ್ನೂ ಸ್ಪಷ್ಟವಾದ ವಿವರಣೆಯನ್ನು ನೀಡಿಲ್ಲ.

ಯುಪಿ ಪೋಲೀಸ್ ಅಪ್ಲಿಕೇಶನ್‌ನಲ್ಲಿ ಮಾಲಿಕರು ಬಾಡಿಗೆ ನೀಡುವಾಗ, ಬಾಡಿಗೆದಾರರ ಹಿನ್ನೆಲೆ ಪರಿಶೀಲನೆಗೆ ʼUPCOPʼ ಆ್ಯಪ್‌ ಬಳಸುತ್ತಾರೆ. ಅದಕ್ಕಾಗಿ ಸಿದ್ಧಪಡಿಸಲಾದ ಡೇಟಾಬೇಸ್‌ನ್ನು ಎನ್‌ಸಿಆರ್‌ಬಿ ಡೇಟಾದಿಂದ ಪಡೆಯಲಾಗಿದೆ.

UPCOP ಅಪ್ಲಿಕೇಶನ್‌ನ್ನು ದೂರುಗಳು, ವರದಿಗಳು ಮತ್ತು ಸಾಮಾನ್ಯ ಎಫ್‌ಐಆರ್‌ಗಳನ್ನು ಸಲ್ಲಿಸಲು ಬಳಸಲಾಗುತ್ತದೆ. ಅಧಿಕಾರಿಯೊಬ್ಬರು ಈ ಬಗ್ಗೆ ಪ್ರತಿಕ್ರಿಯಿಸಿದ್ದು, UPCOPನ್ನು ತಾಂತ್ರಿಕ ಸೇವಾ ವಿಭಾಗವು ಮೇಲ್ವಿಚಾರಣೆ ಮಾಡುತ್ತದೆ, ಇದು ADG ಶ್ರೇಣಿಯ ಅಧಿಕಾರಿಯ ನೇತೃತ್ವದಲ್ಲಿರುತ್ತದೆ. NCRB ಡೇಟಾ ಬದಲಾಗಿಲ್ಲ. ನಾವು ಈ ಬಗ್ಗೆ ಅಗತ್ಯ ಬದಲಾವಣೆಗಳನ್ನು ಸಹ ಬಯಸುತ್ತೇವೆ ಎಂದು ಹೇಳಿದ್ದಾರೆ.

ಉತ್ತರಪ್ರದೇಶ ಸರ್ಕಾರವು ಅಭಿವೃದ್ಧಿಪಡಿಸಿದ UPCOP ಅಪ್ಲಿಕೇಶನನ್ನು ಕೆಲವು ವರ್ಷಗಳ ಹಿಂದೆ ಪೊಲೀಸ್ ಸಹಾಯಕ್ಕಾಗಿ ಆನ್‌ಲೈನ್ ಸೇವೆಗಳನ್ನು ಸುಗಮಗೊಳಿಸಲು ಪ್ರಾರಂಭಿಸಲಾಯಿತು. ಅಪ್ಲಿಕೇಶನ್ ಬಳಕೆದಾರರಿಗೆ ದೂರುಗಳು, ಎಫ್‌ಐಆರ್‌ಗಳು ಮತ್ತು ಸೈಬರ್‌ಕ್ರೈಮ್ ಪ್ರಕರಣಗಳನ್ನು ದಾಖಲಿಸಲು ಅನುಮತಿಸುತ್ತದೆ.

ಇದನ್ನು ಓದಿ: ನನ್ನ ತಾಯಿ ದೇಶಕ್ಕಾಗಿ ಮಂಗಳಸೂತ್ರವನ್ನು ತ್ಯಾಗ ಮಾಡಿದ್ದಾರೆ: ಪ್ರಿಯಾಂಕ ಗಾಂಧಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....