Homeಫ್ಯಾಕ್ಟ್‌ಚೆಕ್FACT CHECK : ಆಂಧ್ರದಲ್ಲಿ ಎಸ್‌ಸಿ, ಎಸ್‌ಟಿ ಮೀಸಲಾತಿ ಕಡಿತಗೊಳಿಸಿ ಮುಸ್ಲಿಮರಿಗೆ ನೀಡಲಾಗಿದೆ ಎಂಬ ಮೋದಿ...

FACT CHECK : ಆಂಧ್ರದಲ್ಲಿ ಎಸ್‌ಸಿ, ಎಸ್‌ಟಿ ಮೀಸಲಾತಿ ಕಡಿತಗೊಳಿಸಿ ಮುಸ್ಲಿಮರಿಗೆ ನೀಡಲಾಗಿದೆ ಎಂಬ ಮೋದಿ ಹೇಳಿಕೆ ಸುಳ್ಳು

- Advertisement -
- Advertisement -

“ಮುಸ್ಲಿಂ ಮೀಸಲಾತಿಯನ್ನು ಜಾರಿಗೊಳಿಸಲು ಕಾಂಗ್ರೆಸ್ ಆಂಧ್ರ ಪ್ರದೇಶದಲ್ಲಿ ಎಸ್‌ಸಿ/ಎಸ್‌ಟಿ ಮೀಸಲಾತಿಯನ್ನು ಕಡಿಮೆ ಮಾಡಿದೆ. ಇದೊಂದು ಪ್ರಮುಖ ಯೋಜನೆಯಾಗಿದ್ದು, ಇದನ್ನು ಇಡೀ ದೇಶದಾದ್ಯಂತ ಜಾರಿಗೆ ತರಲು ಕಾಂಗ್ರೆಸ್ ಬಯಸಿದೆ” ಎಂದು ಟೋಂಕ್‌ನಲ್ಲಿ ಮಂಗಳವಾರ (ಏ.23) ಚುನಾವಣಾ ರ್‍ಯಾಲಿಯನ್ನು ಉದ್ದೇಶಿಸಿ ಮಾತನಾಡುವಾಗ ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

ಪ್ರಧಾನಿ ಮೋದಿಯವರು ಹೇಳಿರುವುದು ನಿಜಾನಾ? ಎಂಬುವುದನ್ನು ನಾನುಗೌರಿ.ಕಾಂ ಸತ್ಯಾಸತ್ಯತೆ ಪರಿಶೀಲನೆ ನಡೆಸಿದೆ.

ಫ್ಯಾಕ್ಟ್‌ಚೆಕ್ : ಅವಿಭಜಿತ ಆಂಧ್ರ ಪ್ರದೇಶದಲ್ಲಿ ಮುಸ್ಲಿಮರಿಗೆ ಮೀಸಲಾತಿ ನೀಡುವ ಪ್ರಕ್ರಿಯೆಯನ್ನು 1993 ಮತ್ತು 1994 ರ ನಡುವಿನ ಕಾಂಗ್ರೆಸ್ ಆಡಳಿತದಲ್ಲಿ ಪ್ರಾರಂಭಿಸಲಾಯಿತು. ಈ ಸಮಯದಲ್ಲಿ ಕೋಟ್ಲಾ ವಿಜಯಭಾಸ್ಕರ್ ರೆಡ್ಡಿ ಅವರು ರಾಜ್ಯದ ಮುಖ್ಯಮಂತ್ರಿಯಾಗಿದ್ದರು. ಅಲ್ಪಸಂಖ್ಯಾತರ ಕಲ್ಯಾಣ ಸಚಿವಾಲಯದ ಸ್ಥಾಪನೆಯ ನಂತರ ಆಗಸ್ಟ್ 1994ರಲ್ಲಿ ಮುಸ್ಲಿಮರಿಗೆ ಮೀಸಲಾತಿ ಸಂಬಂಧ ಆದೇಶ ಹೊರಡಿಸಲಾಯಿತು. ಈ ಮೂಲಕ ಶಿಕ್ಷಣ ಸಂಸ್ಥೆಗಳು ಮತ್ತು ಸರ್ಕಾರಿ ಹುದ್ದೆಗಳಲ್ಲಿ 14 ಇತರ ಜಾತಿಗಳೊಂದಿಗೆ ಮುಸ್ಲಿಮರಿಗೆ 5% ಮೀಸಲಾತಿಯನ್ನು ಕಡ್ಡಾಯಗೊಳಿಸಲಾಯಿತು. ಆದರೆ, 1994 ಮತ್ತು 1999ರ ಚುನಾವಣಾ ಸೋಲಿನಿಂದಾಗಿ ಈ ಆದೇಶವನ್ನು ಜಾರಿಗೆ ತರಲು ಕಾಂಗ್ರೆಸ್‌ಗೆ ಸಾಧ್ಯವಾಗಲಿಲ್ಲ.

2004ರ ಚುನಾವಣೆಯಲ್ಲಿ, ಮುಸ್ಲಿಮರಿಗೆ 5% ಮೀಸಲಾತಿಯನ್ನು ಪುನಃ ಪರಿಚಯಿಸುವುದು ಕಾಂಗ್ರೆಸ್‌ನ ಮಹತ್ವದ ಪ್ರಚಾರ ಭರವಸೆಯಾಗಿತ್ತು. ಸಾಮಾಜಿಕವಾಗಿ ಮತ್ತು ಶೈಕ್ಷಣಿಕವಾಗಿ ಹಿಂದುಳಿದಿರುವ ಮುಸ್ಲಿಮರನ್ನು ಮೇಲೆತ್ತುವುದು ಇದರ ಉದ್ದೇಶವಾಗಿತ್ತು. ವೈಎಸ್ ರಾಜಶೇಖರ ರೆಡ್ಡಿ ನೇತೃತ್ವದಲ್ಲಿ ಚುನಾವಣಾ ಗೆಲುವಿನ ನಂತರ, ಕಾಂಗ್ರೆಸ್ ಎರಡು ತಿಂಗಳೊಳಗೆ ಮೀಸಲಾತಿ ಜಾರಿಗೊಳಿಸುವ ಭರವಸೆ ನೀಡಿತ್ತು. ಕೇಂದ್ರಲ್ಲಿ ಅಧಿಕಾರದಲ್ಲಿದ್ದ ಆಗಿನ ಯುಪಿಎ ಸರ್ಕಾರ ಈ ಕ್ರಮವನ್ನು ಸಂಪೂರ್ಣವಾಗಿ ಬೆಂಬಲಿಸಿತ್ತು. ನಂತರ, ಸಾಮಾಜಿಕ ಆರ್ಥಿಕ ಹಿಂದುಳಿದಿರುವಿಕೆಯನ್ನು ಆಧರಿಸಿ, ಹಿಂದುಳಿದ ವರ್ಗಗಳ ಆಯೋಗ ಗುರುತಿಸಿದ 14 ನಿರ್ದಿಷ್ಟ ಗುಂಪುಗಳಿಗೆ 4% ಮೀಸಲಾತಿ ಜಾರಿಗೊಳಿಸಲಾಯಿತು. ಇದರಲ್ಲಿ ಮುಸ್ಲಿಮರು ಒಳಗೊಂಡಿದ್ದರು.

ಧಾರ್ಮಿಕ ಆಧಾರದ ಮೇಲೆ ಮುಸ್ಲಿಮರಿಗೆ ಮೀಸಲಾತಿ ನೀಡಿಲ್ಲ ಎಂಬುವುದು ಇಲ್ಲಿ ಗಮನಾರ್ಹ ಸಂಗತಿ. ಅಲ್ಲದೆ, ಎಸ್‌ಸಿ, ಎಸ್‌ಟಿ ಸೇರಿದಂತೆ ಯಾವುದೇ ಸಮುದಾಯದ ಮೀಸಲಾತಿ ಕಡಿತಗೊಳಿಸದೆ ಮುಸ್ಲಿಮರಿಗೆ ಮೀಸಲಾತಿ ನೀಡಲಾಗಿತ್ತು. ಸರ್ಕಾರ 5% ಮೀಸಲಾತಿ ನೀಡಲು ಮುಂದಾಗಿದ್ದರೂ, ಒಟ್ಟಾರೆ ಮೀಸಲಾತಿ ಮಿತಿ 50% ಮೀರುವ ಕಾರಣ 4%ಗೆ ಇಳಿಸಲಾಗಿತ್ತು.

ನಂತರ 2004 ರಲ್ಲಿ, ಯುಪಿಎ ಸರ್ಕಾರವು ಧಾರ್ಮಿಕ ಮತ್ತು ಭಾಷಾ ಅಲ್ಪಸಂಖ್ಯಾತರ ರಾಷ್ಟ್ರೀಯ ಆಯೋಗವನ್ನು ಸ್ಥಾಪಿಸಿತು. ಇದನ್ನು ಸಾಮಾನ್ಯವಾಗಿ ರಂಗನಾಥ್ ಮಿಶ್ರಾ ಪ್ಯಾನಲ್ ಎಂದು ಕರೆಯಲಾಗುತ್ತದೆ. ಧಾರ್ಮಿಕ ಮತ್ತು ಭಾಷಿಕ ಅಲ್ಪಸಂಖ್ಯಾತರಲ್ಲಿ ಸಾಮಾಜಿಕವಾಗಿ ಮತ್ತು ಶೈಕ್ಷಣಿಕವಾಗಿ ಹಿಂದುಳಿದ ವರ್ಗಗಳನ್ನು (SEBC) ಗುರುತಿಸಲು, ಕಲ್ಯಾಣ ಕ್ರಮಗಳನ್ನು ಶಿಫಾರಸು ಮಾಡಲು, ಮಾನದಂಡಗಳನ್ನು ವ್ಯಾಖ್ಯಾನಿಸಲು ಈ ಸಮಿತಿಯನ್ನು ನಿಯೋಜಿಸಲಾಗಿತ್ತು. ಇದು ಅಲ್ಪಸಂಖ್ಯಾತರಿಗೆ ನಿರ್ದಿಷ್ಟವಲ್ಲದ ಸರ್ಕಾರಿ ವಲಯಗಳಲ್ಲಿ ಮತ್ತು ಶಿಕ್ಷಣ ಸಂಸ್ಥೆಗಳಲ್ಲಿ ಮುಸ್ಲಿಮರಿಗೆ 10% ಮತ್ತು ಇತರ ಅಲ್ಪಸಂಖ್ಯಾತರಿಗೆ 5% ಮೀಸಲಾತಿಯನ್ನು ಪ್ರಸ್ತಾಪಿಸಿತ್ತು. ಇವುಗಳನ್ನು ಅಸ್ತಿತ್ವದಲ್ಲಿರುವ ಒಬಿಸಿ ಕೋಟಾದಲ್ಲಿ ಅಳವಡಿಸಿಕೊಳ್ಳಬಹುದು ಎಂದು ಸೂಚಿಸಿತ್ತು.

2009ರ ಲೋಕಸಭೆ ಚುನಾವಣೆಯ ತನ್ನ ಪ್ರಣಾಳಿಕೆಯಲ್ಲಿ ಕಾಂಗ್ರೆಸ್ ಪಕ್ಷವು ದೇಶಾದ್ಯಂತ ಉದ್ಯೋಗ ಮತ್ತು ಶಿಕ್ಷಣದಲ್ಲಿ ಒಬಿಸಿಗಳಿಗೆ ಅಸ್ತಿತ್ವದಲ್ಲಿರುವ 27% ಮೀಸಲಾತಿಯೊಳಗೆ ಮುಸ್ಲಿಂ ಉಪ-ಕೋಟಾವನ್ನು ಜಾರಿಗೆ ತರುವುದಾಗಿ ಭರವಸೆ ನೀಡಿತ್ತು.

ಮಾರ್ಚ್ 25, 2010 ರಂದು, ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆಯ ವಿಚಾರಣೆಯ ಸಂದರ್ಭದಲ್ಲಿ ಸುಪ್ರೀಂ ಕೋರ್ಟ್ ಆಂಧ್ರ ಪ್ರದೇಶದಲ್ಲಿ 4% ಮುಸ್ಲಿಂ ಕೋಟಾದ ಅನುಷ್ಠಾನವನ್ನು ತಡೆ ಹಿಡಿಯಿತು. ಆರ್ಥಿಕವಾಗಿ ಹಿಂದುಳಿದ ವರ್ಗೀಕರಣದ ಅಡಿಯಲ್ಲಿ ಈ ಹಿಂದೆ ನಿರ್ದಿಷ್ಟಪಡಿಸಿದ 14 ವರ್ಗಗಳಿಗೆ ಮೀಸಲಾತಿ ಮುಂದುವರೆಸುವಂತೆ ತಿಳಿಸಿತ್ತು.ಈ ವಿಷಯವನ್ನು ಸಾಂವಿಧಾನಿಕ ಪೀಠಕ್ಕೆ ಒಪ್ಪಿಸಲಾಗಿದ್ದು, ಅದು ಇನ್ನೂ ಬಾಕಿ ಉಳಿದಿದೆ.

2011 ರ ವೇಳೆಗೆ, ಯುಪಿಎಯ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವಾಲಯವು ಒಬಿಸಿ ಕೋಟಾದೊಳಗೆ 8.4% ಉಪ-ಕೋಟಾವನ್ನು ಪ್ರಸ್ತಾಪಿಸಿತು. ಇದರಲ್ಲಿ ಮುಸ್ಲಿಮರಿಗೆ 6% ಮೀಸಲಾತಿಯೂ ಸೇರಿದೆ. ಇದು ಮಿಶ್ರಾ ಪ್ಯಾನೆಲ್‌ನ ಶಿಫಾರಸುಗಳೊಂದಿಗೆ ಇದು ಹೊಂದಾಣಿಕೆಯಾಗುತ್ತದೆ. ನಂತರ ಮಂಡಲ್ ಆಯೋಗದ ಮಾರ್ಗಸೂಚಿಗಳನ್ನು ಅನುಸರಿಸಿ ಈ ಶೇಕಡಾವಾರು ಪ್ರಮಾಣವನ್ನು ಎಲ್ಲಾ ಅಲ್ಪಸಂಖ್ಯಾತರಿಗೆ 4.5% ಕ್ಕೆ ಇಳಿಸಲಾಯಿತು.

2012 ರ ಉತ್ತರ ಪ್ರದೇಶ ರಾಜ್ಯ ಚುನಾವಣೆಗಳಿಗೆ ಮುಂಚಿತವಾಗಿ, ಯುಪಿಎ ಸರ್ಕಾರವು ಕೇಂದ್ರ ಸರ್ಕಾರಿ ಉದ್ಯೋಗಗಳು ಮತ್ತು ಶಿಕ್ಷಣ ಸಂಸ್ಥೆಗಳಲ್ಲಿ ಒಬಿಸಿಯ 27% ಮೀಸಲಾತಿಯಲ್ಲಿ 4.5% ಅಲ್ಪಸಂಖ್ಯಾತ ಉಪ-ಕೋಟಾವನ್ನು ಘೋಷಿಸಿತು. ಚುನಾವಣಾ ಸಮಯದಲ್ಲಿ ಚುನಾವಣಾ ಆಯೋಗವು ಮಧ್ಯಪ್ರವೇಶಿಸಿತು, ಉತ್ತರ ಪ್ರದೇಶ ಸೇರಿದಂತೆ ಐದು ರಾಜ್ಯಗಳಲ್ಲಿ ಚುನಾವಣೆ ಮುಗಿಯುವವರೆಗೆ ಇದರ ಅನುಷ್ಠಾನವನ್ನು ತಡೆ ಹಿಡಿಯುವಂತೆ ಮನಮೋಹನ್ ಸಿಂಗ್ ಆಡಳಿತಕ್ಕೆ ಸೂಚಿಸಿತು.

ಆಂಧ್ರ ಪ್ರದೇಶ ಹೈಕೋರ್ಟ್, ಮೇ 2012 ರಲ್ಲಿ, ಕೇಂದ್ರ ಸರ್ಕಾರದ 4.5% ಉಪ-ಕೋಟಾ ಉಪಕ್ರಮವನ್ನು ಅಮಾನ್ಯಗೊಳಿಸಿತು. ಇದು ಇತರ ಗಣನೀಯ ಮಾನದಂಡಗಳನ್ನು ಆಧರಿಸಿದೆ ಬದಲಿಗೆ ಧಾರ್ಮಿಕವಾಗಿ ಪ್ರೇರೇಪಿತವಾಗಿದೆ ಎಂದು ಟೀಕಿಸಿತು. ಈ ತೀರ್ಪಿಗೆ ತಡೆಯಾಜ್ಞೆ ಪಡೆಯುವಲ್ಲಿ ಕೇಂದ್ರ ಸರ್ಕಾರ ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದು ವಿಫಲವಾಗಿತ್ತು.

ಕಾಂಗ್ರೆಸ್ ತನ್ನ 2014 ರ ಸಾರ್ವತ್ರಿಕ ಚುನಾವಣಾ ಪ್ರಣಾಳಿಕೆಯಲ್ಲಿ ಹಿಂದಿನ ಯುಪಿಎ ಆಡಳಿತವು ಹಿಂದುಳಿದ ಅಲ್ಪಸಂಖ್ಯಾತರ ಸ್ಥಿತಿಯನ್ನು ಸುಧಾರಿಸಲು ಪ್ರಯತ್ನಿಸಿದೆ ಎಂದು ಹೈಲೈಟ್ ಮಾಡಿತ್ತು ಮತ್ತು ಶೈಕ್ಷಣಿಕ ವಲಯ ಮತ್ತು ಸಾರ್ವಜನಿಕ ವಲಯದ ಉದ್ಯೋಗಗಳಲ್ಲಿ ಹೆಚ್ಚುವರಿ ಮೀಸಲಾತಿ ಒದಗಿಸುವ ಭರವಸೆ ನೀಡಿತ್ತು.

ನಮ್ಮ ಪರಿಶೀಲನೆಯಲ್ಲಿ ಕಂಡು ಬಂದ ವಿಷಯವೆಂದರೆ, ಅವಿಭಜಿತ ಆಂಧ್ರ ಪ್ರದೇಶದಲ್ಲಿ 2004ರ ವೇಳೆಗೆ ಮುಸ್ಲಿಮರಿಗೆ 4% ಮೀಸಲಾತಿ ನೀಡಲಾಗಿತ್ತು. ಇದನ್ನು ಎಸ್‌ಸಿ, ಎಸ್‌ಟಿ ಮೀಸಲಾತಿಯನ್ನು ಕಡಿತಗೊಳಿಸಿ ನೀಡಿದ್ದಲ್ಲ. ಬದಲಾಗಿ ಪ್ರತ್ಯೇಕವಾಗಿ ನೀಡಿದ್ದು. ಹಾಗಾಗಿ, ಮುಸ್ಲಿಮರಿಗೆ ಮೀಸಲಾತಿ ನೀಡಲು ಎಸ್‌ಸಿ, ಎಸ್‌ಟಿಗಳ ಮೀಸಲಾತಿ ಕಡಿತಗೊಳಿಸಲಾಗಿದೆ ಎಂಬ ಪ್ರಧಾನಿ ಮೋದಿಯವರ ಹೇಳಿಕೆ ಸುಳ್ಳು.

ಅವಿಭಜಿತ ಆಂಧ್ರ ಪ್ರದೇಶದಲ್ಲಿ 1993-94ರಲ್ಲೇ ಮುಸ್ಲಿಮರಿಗೆ ಮೀಸಲಾತಿ ನೀಡುವ ಪ್ರಕ್ರಿಯೆ ಪ್ರಾರಂಭವಾಗಿತ್ತು. ಕಾರಣಾಂತರಗಳಿಂದ ಅದು 2004ರ ವೇಳೆಗೆ ಜಾರಿ ಬಂತು. ಇನ್ನು ಆಂಧ್ರ ಪ್ರದೇಶ ಹೈಕೋರ್ಟ್, ಮೇ 2012 ರಲ್ಲಿ ಕೇಂದ್ರ ಸರ್ಕಾರದ 4.5% ಉಪ-ಕೋಟಾ ಉಪಕ್ರಮವನ್ನು ಅಮಾನ್ಯಗೊಳಿಸಿದೆ.

ಇದನ್ನೂ ಓದಿ : FACT CHECK: ಕರ್ನಾಟಕದಲ್ಲಿ ಎಸ್‌ಸಿ, ಎಸ್‌ಟಿಗಳಿಂದ ಕಿತ್ತುಕೊಂಡು ಮುಸ್ಲಿಮರಿಗೆ ನೀಡಿದ್ದ ಮೀಸಲಾತಿ ರದ್ದುಪಡಿಸಿದ್ದೇವೆ ಎಂಬ ಮೋದಿ ಹೇಳಿಕೆ ಸುಳ್ಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸುಪ್ರೀಂ ಕೋರ್ಟ್ ನಿರ್ದೇಶನದ ಹೊರತಾಗಿಯೂ ಮುಂದುವರೆದ ಬುಲ್ಡೋಝರ್ ಅ’ನ್ಯಾಯ’ : ಯುಪಿ ಸರ್ಕಾರಕ್ಕೆ ಅಲಾಹಾಬಾದ್‌ ಹೈಕೋರ್ಟ್‌ ಛೀಮಾರಿ

ಉತ್ತರ ಪ್ರದೇಶದ ಸರ್ಕಾರದ "ಬುಲ್ಡೋಝರ್ ಅನ್ಯಾಯ" ವಿರುದ್ಧ ಸುಪ್ರೀಂ ಕೋರ್ಟ್ 2024ರ ನವೆಂಬರ್‌ನಲ್ಲಿ ಕಟ್ಟುನಿಟ್ಟಾದ ತೀರ್ಪು ನೀಡಿದ್ದರೂ, ದಂಡನಾತ್ಮಕ ಕ್ರಮವಾಗಿ ಕಟ್ಟಡಗಳನ್ನು ಉರುಳಿಸುವ ಪ್ರಕ್ರಿಯೆ ಇನ್ನೂ ಮುಂದುವರಿಯುತ್ತಿರುವುದರ ಬಗ್ಗೆ ಅಲಹಾಬಾದ್ ಹೈಕೋರ್ಟ್ ತೀವ್ರ...

‘ಕಾಶ್ಮೀರಿಗಳ ವಿರುದ್ಧ ಗುಂಪು ಹಿಂಸಾಚಾರಕ್ಕೆ ರಾಜ್ಯ ಸರ್ಕಾರ ಪ್ರೋತ್ಸಾಹಿಸುತ್ತಿದೆ’: ಮೆಹಬೂಬಾ ಮುಫ್ತಿ ಆರೋಪ

ಶ್ರೀನಗರ: ಕೇಂದ್ರಾಡಳಿತ ಪ್ರದೇಶದ ಹೊರಗೆ ಕಾಶ್ಮೀರಿಗಳ ವಿರುದ್ಧ ಗುಂಪು ಹಿಂಸಾಚಾರಕ್ಕೆ ರಾಜ್ಯ ಸರ್ಕಾರಗಳು ಪ್ರೋತ್ಸಾಹ ನೀಡುತ್ತಿರುವಂತೆ ಕಾಣುತ್ತಿದೆ, ಕಾನೂನಿನ ಆಡಳಿತವನ್ನು ದ್ವೇಷವು ಬದಲಾಯಿಸಲು ಅವಕಾಶ ನೀಡುತ್ತದೆ ಎಂದು ಪಿಡಿಪಿ ಅಧ್ಯಕ್ಷೆ ಮೆಹಬೂಬಾ ಮುಫ್ತಿ...

ಭಾರತ-ಅಮೆರಿಕ ವ್ಯಾಪಾರ ಒಪ್ಪಂದ | ಒತ್ತಡಕ್ಕೆ ಮಣಿದು ಪ್ರಧಾನಿ ರಾಜಿ ಮಾಡಿಕೊಂಡಿದ್ದಾರೆ, ದೇಶವನ್ನು ಮಾರಿದ್ದಾರೆ : ರಾಹುಲ್ ಗಾಂಧಿ

ಭಾರತ-ಅಮೆರಿಕ ವ್ಯಾಪಾರ ಒಪ್ಪಂದ ಸಂಬಂಧ ಪ್ರಧಾನಿ ನರೇಂದ್ರ ಮೋದಿ ವಿರುದ್ದ ವಿಪಕ್ಷ ನಾಯಕ ರಾಹುಲ್ ಗಾಂಧಿ ಮಂಗಳವಾರ (ಫೆ.3) ತೀವ್ರ ವಾಗ್ದಾಳಿ ನಡೆಸಿದ್ದು, "ಪ್ರಧಾನಿ ರಾಜಿ ಮಾಡಿಕೊಂಡಿದ್ದಾರೆ, ದೇಶವನ್ನು ಮಾರಿದ್ದಾರೆ" ಎಂದು ಆರೋಪಿಸಿದರು. ಸಂಸತ್ತಿನ...

ಧರ್ಮಸ್ಥಳ ಪ್ರಕರಣದ ಚರ್ಚೆ ವೇಳೆ ಹಲ್ಲೆಗೆ ಯತ್ನ; ವಸಂತ್ ಗಿಳಿಯಾರ್, ಪುನೀತ್ ಕೆರೆಹಳ್ಳಿ, ಕಿರಿಕ್ ಕೀರ್ತಿ ವಿರುದ್ಧ ಎಫ್‌ಐಆರ್

2025ರ ಅಕ್ಟೋಬರ್‌ನಲ್ಲಿ ‘R.ಕನ್ನಡ’ ಸುದ್ದಿ ವಾಹಿನಿಯಲ್ಲಿ ಧರ್ಮಸ್ಥಳ ಪ್ರಕರಣ ಸಂಬಂಧ ನಡೆದಿದ್ದ ಚರ್ಚಾ ಕಾರ್ಯಕ್ರಮದ ವೇಳೆ ದಾಂಧಲೆ ನಡೆಸಿ, ಹಲ್ಲೆಗೆ ಯತ್ನಿಸಿದ್ದ ಹಿಂದುತ್ವ ಕೋಮುವಾದಿ ಕಾರ್ಯಕರ್ತ ವಸಂತ್ ಗಿಳಿಯಾರ್, ಪುನೀತ್ ಕೆರೆಹಳ್ಳಿ ಹಾಗೂ...

ಲೋಕಸಭೆಯಲ್ಲಿ ನರವಾಣೆ ಆತ್ಮಕಥೆ ಗದ್ದಲ : ವಿಪಕ್ಷಗಳ 8 ಮಂದಿ ಸಂಸದರು ಅಮಾನತು

ಮಾಜಿ ಸೇನಾ ಮುಖ್ಯಸ್ಥ ಮನೋಜ್ ಮುಕುಂದ್ ನರವಾಣೆ ಅವರ ಅಪ್ರಕಟಿತ ಆತ್ಮಕತೆಯ ವಿಚಾರ ಮಂಗಳವಾರ (ಫೆ.3) ಕೂಡ ಲೋಕಸಭೆಯಲ್ಲಿ ತೀವ್ರ ಗದ್ದಲಕ್ಕೆ ಕಾರಣವಾಯಿತು. ಪುಸ್ತಕದ ವಿಷಯಗಳನ್ನು ಪ್ರಸ್ತಾಪಿಸಲು ವಿರೋಧ ಪಕ್ಷದ ನಾಯಕ ರಾಹುಲ್...

ಮನ್ರೇಗಾ ಕಾರ್ಮಿಕರ ಮಹಾ ಪಂಚಾಯತ್ ರಾಷ್ಟ್ರಪತಿಗಳಿಗೆ ಬರೆದ ಮನ ಮುಟ್ಟುವ ಪತ್ರ

ಕೇಂದ್ರ ಸರ್ಕಾರ ವಿಬಿಜಿ- ರಾಮ್ ಜಿ 2025 ಕಾನೂನನ್ನು ವಾಪಸ್ ಪಡೆಯಬೇಕು ಹಾಗೂ ನರೇಗಾ ಯೋಜನೆಯನ್ನು ಮರು ಸ್ಥಾಪಿಸಬೇಕು ಎಂದು ಮನ್ರೇಗಾ ಕಾರ್ಮಿಕರ ಮಹಾ ಪಂಚಾಯತ್‌ ರಾಷ್ಟ್ರಪತಿಗಳಿಗೆ ಮನವಿ ಪತ್ರ ಸಲ್ಲಿಸಿದೆ.  2026 ಫೆಬ್ರವರಿ...

ಗುಜರಾತ್‌| ಕುದುರೆ ಸವಾರಿ ಮಾಡಿದ ದಲಿತ ವರನ ಮೇಲೆ ಕತ್ತಿಯಿಂದ ಹಲ್ಲೆ

ಗುಜರಾತ್‌ನ ಪಠಾನ್ ಜಿಲ್ಲೆಯ ಗ್ರಾಮವೊಂದರಲ್ಲಿ, ಕುದುರೆ ಸವಾರಿ ಮಾಡಿದ ದಲಿತ ವರನ ಮೇಲೆ ಕತ್ತಿಯಿಂದ ಹಲ್ಲೆ ನಡೆಸಿರುವ ಘಟನೆ ನಡೆದಿದೆ. ದಲಿತ ಸಮುದಾಯದ ಯುವಕ ವಿಶಾಲ್ ಚಾವ್ಡಾಗೆ ಮದುವೆಯ ಸಂತೋಷದ ದಿನವು ಜೀವನದ ದುಃಸ್ವಪ್ನವಾಗಿ...

ಗೃಹಲಕ್ಷ್ಮಿ ಯೋಜನೆಯಿಂದ 52 ಸಾವಿರಕ್ಕೂ ಹೆಚ್ಚಿನ ಮಹಿಳೆಯರು ಹೊರಕ್ಕೆ: ಆದಾಯ ತೆರಿಗೆ ಇಲಾಖೆ ದಾಖಲೆಗಳು ಕಾರಣ ಎಂದ ಲಕ್ಷ್ಮಿ ಹೆಬ್ಬಾಳ್ಕರ್

ಬೆಂಗಳೂರು: ರಾಜ್ಯಾದ್ಯಂತ 1.26 ಕೋಟಿ ಫಲಾನುಭವಿಗಳಲ್ಲಿ 52,000 ಕ್ಕೂ ಹೆಚ್ಚು ಮಹಿಳೆಯರನ್ನು ಗೃಹಲಕ್ಷ್ಮಿ ಯೋಜನೆಯಿಂದ ತೆಗೆದುಹಾಕಲಾಗಿದೆ, ಏಕೆಂದರೆ ಅವರು ಜಿಎಸ್ಟಿ ಅಥವಾ ಆದಾಯ ತೆರಿಗೆ ಇಲಾಖೆಗಳ ದಾಖಲೆಗಳಲ್ಲಿ ತೆರಿಗೆದಾರರಾಗಿದ್ದಾರೆ ಎಂದು ಮಹಿಳಾ ಮತ್ತು...

ವಿಬಿ-ಜಿ ರಾಮ್ ಜಿ ಕಾಯ್ದೆ ವಿರುದ್ಧ ವಿಧಾನಸಭೆಯಲ್ಲಿ ನಿರ್ಣಯ ಮಂಡನೆ

ಮನರೇಗಾ ಬದಲಾಗಿ ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಬಿ-ಜಿ ರಾಮ್ ಜಿ ಕಾಯ್ದೆ ವಿರುದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಗಳವಾರ (ಫೆ.3) ವಿಧಾನಸಭೆಯಲ್ಲಿ ನಿರ್ಣಯ ಮಂಡಿಸಿದರು. ರಾಜ್ಯದ ಗ್ರಾಮೀಣ ಜನರ ಬದುಕಿನ ಹಕ್ಕನ್ನು ಕಾಪಾಡುವ ದೃಷ್ಟಿಯಿಂದ,...

‘ಖಾಸಗಿ ಮಾಹಿತಿಯ ಕಳ್ಳತನ’ : ವಿವಾದಾತ್ಮಕ ಗೌಪ್ಯತೆ ನೀತಿ ಸಂಬಂಧ ವಾಟ್ಸಾಪ್, ಮೆಟಾ ವಿರುದ್ಧ ಸುಪ್ರೀಂ ಕೋರ್ಟ್ ಕಿಡಿ

ನಾಗರಿಕರ ಗೌಪ್ಯತೆಯ ಹಕ್ಕನ್ನು ಉಲ್ಲಂಘಿಸಲಾಗಿದೆ ಎಂದು ಮಂಗಳವಾರ ಸುಪ್ರೀಂ ಕೋರ್ಟ್ ವಾಟ್ಸಾಪ್ ಮತ್ತು ಅದರ ಪೋಷಕ ಕಂಪನಿ ಮೆಟಾವನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ. ಡೇಟಾ ಹಂಚಿಕೆಯ ಹೆಸರಿನಲ್ಲಿ ಬಳಕೆದಾರರ ಖಾಸಗಿ ಡೇಟಾವನ್ನು ಬಳಸಿಕೊಳ್ಳಲು...