Homeಮುಖಪುಟಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ಮೊದಲು ಜಾತಿಗಣತಿ ಮಾಡುತ್ತೇವೆ: ರಾಹುಲ್‌ ಗಾಂಧಿ

ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ಮೊದಲು ಜಾತಿಗಣತಿ ಮಾಡುತ್ತೇವೆ: ರಾಹುಲ್‌ ಗಾಂಧಿ

- Advertisement -
- Advertisement -

ಜಾತಿ ಗಣತಿ ನನ್ನ ಜೀವನದ ಪ್ರಮುಖ ಗುರಿಯಾಗಿದೆ. ಕಾಂಗ್ರೆಸ್‌ ಸರಕಾರ ಅಧಿಕಾರಕ್ಕೆ ಬಂದರೆ ಮೊದಲು ಜಾತಿಗಣತಿಯನ್ನು ಮಾಡುತ್ತೇವೆ ಎಂದು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಹೇಳಿದ್ದಾರೆ.

ಸಂಪತ್ತು ಮರುಹಂಚಿಕೆ ವಿವಾದದ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಮತ್ತು ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ ರಾಹುಲ್‌ ಗಾಂಧಿ, ಕಾಂಗ್ರೆಸ್‌ನ ಕ್ರಾಂತಿಕಾರಿ ಪ್ರಣಾಳಿಕೆಯನ್ನು ಓದಿದ ನಂತರ ಅವರು ಭಯಗೊಂಡಿದ್ದಾರೆ. ಬಿಜೆಪಿಯು 22-25 ದೊಡ್ಡ ಉದ್ಯಮಿಗಳಿಗೆ ಮಾಡಿದ ಸಾಲ ಮನ್ನಾದ 16 ಲಕ್ಷ ಕೋಟಿಯನ್ನು ಮರಳಿ ಪಡೆದು ಅದರ ಸಣ್ಣ ಭಾಗವನ್ನು 90ಶೇ.ಜನರಿಗೆ ಪರಿಹಾರ ನೀಡುವ ಗುರಿಯನ್ನು ಕಾಂಗ್ರೆಸ್‌ ಪಕ್ಷ ಹೊಂದಿದೆ ಎಂದು ರಾಹುಲ್‌ ಗಾಂಧಿ ಹೇಳಿದ್ದಾರೆ.

ರಾಷ್ಟ್ರ ರಾಜಧಾನಿಯಲ್ಲಿ ಸಾಮಾಜಿಕ ನ್ಯಾಯ ಸಮ್ಮೇಳನದಲ್ಲಿ ಮಾತನಾಡಿದ ರಾಹುಲ್‌ ಗಾಂಧಿ, ಅನ್ಯಾಯ ಎದುರಿಸುತ್ತಿರುವ ದೇಶದ ಶೇ 90ರಷ್ಟು ಜನರಿಗೆ ನ್ಯಾಯ ದೊರಕಿಸುವುದು ನನ್ನ ಜೀವನದ ಉದ್ದೇಶ. ಜಾತಿ ಗಣತಿ ನನಗೆ ರಾಜಕೀಯವಲ್ಲ, ಅದು ನನ್ನ ಜೀವನದ ಧ್ಯೇಯವಾಗಿದೆ. ಜಾತಿ ಗಣತಿಯನ್ನು ತಡೆಯಲು ಜಗತ್ತಿನ ಯಾವ ಶಕ್ತಿಯಿಂದಲೂ ಸಾಧ್ಯವಿಲ್ಲ. ಕಾಂಗ್ರೆಸ್ ಅಧಿಕಾರಕ್ಕೆ ಆಯ್ಕೆಯಾದಾಗ ನಾವು ತೆಗೆದುಕೊಳ್ಳುವ ಮೊದಲ ಕೆಲಸವೆಂದರೆ ಜನಗಣತಿ. ಇದು ನನ್ನ ಗ್ಯಾರಂಟಿ ಎಂದು ಹೇಳಿದ್ದಾರೆ.

ಸಂಪತ್ತು ಮರುಹಂಚಿಕೆ ವಿವಾದದ ಬಗ್ಗೆ ಮಾತನಾಡಿದ ರಾಹುಲ್‌ ಗಾಂಧಿ, ನಾವು ಇನ್ನೂ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಹೇಳಿಲ್ಲ, ಎಷ್ಟು ಅನ್ಯಾಯವಾಗಿದೆ ಎಂಬುವುದನ್ನು ಮೊದಲು ಕಂಡು ಹಿಡಿಯೋಣ ಎಂದು ನಾನು ಹೇಳುತ್ತಿದ್ದೇನೆ. ಜಾತಿ ಗಣತಿಯು ಕೇವಲ ಜಾತಿ ಸಮೀಕ್ಷೆಯಾಗಿರದೆ “ಆರ್ಥಿಕ” ಮತ್ತು “ಸಾಂಸ್ಥಿಕ” ಅಂಶಗಳನ್ನು ಹೊಂದಿರುತ್ತದೆ. ದಲಿತರು ಮತ್ತು ಬುಡಕಟ್ಟು ಜನಾಂಗದವರ ಇತಿಹಾಸವನ್ನು ಬಿಜೆಪಿ ಅಳಿಸಿ ಹಾಕುತ್ತಿದೆ. ನನಗೆ ಜಾತಿಯಲ್ಲಿ ಆಸಕ್ತಿ ಇಲ್ಲ ಆದರೆ ನ್ಯಾಯದಲ್ಲಿ ಆಸಕ್ತಿ ಇದೆ, ಪ್ರಧಾನಿ ಮೋದಿ ಅವರು ಕಳೆದ ಹತ್ತು ವರ್ಷಗಳಿಂದ ತಾನು ಒಬಿಸಿ ಎಂದು ಹೇಳುತ್ತಿದ್ದಾರೆ ಆದರೆ ನಾನು ಜಾತಿ ಗಣತಿಯ ಬಗ್ಗೆ ಮಾತನಾಡುವಾಗ, ಜಾತಿ ಇಲ್ಲ ಎಂದು ಮೋದಿ ಹೇಳಿದರು. ಜಾತಿ ಇಲ್ಲದಿದ್ದರೆ ನೀವು ಒಬಿಸಿ ಆಗೋದು ಹೇಗೆ? ಭಾರತದಲ್ಲಿ ಬಡವರು ಮತ್ತು ಶ್ರೀಮಂತರು ಎಂಬ ಎರಡು ಜಾತಿಗಳು ಮಾತ್ರ ಇದೆ ಎಂದು ಮೋದಿ ಹೇಳುತ್ತಾರೆ. ಅಗಿದ್ದರೆ ಬಡವರು ಮತ್ತು ಶ್ರೀಮಂತರ ಪಟ್ಟಿಯನ್ನು ಹೊರತನ್ನಿ. ಒಬಿಸಿಗಳು, ದಲಿತರು, ಆದಿವಾಸಿಗಳನ್ನು ಬಡವರ ಪಟ್ಟಿಯಲ್ಲಿ ಕಾಣಬಹುದು ಆದರೆ ಅವರು ಶ್ರೀಮಂತರ ಪಟ್ಟಿಯಲ್ಲಿ ಅವರನ್ನು ಕಾಣಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ.

ರಾಮಮಂದಿರ ಶಂಕುಸ್ಥಾಪನೆ ಸಮಾರಂಭದ ಬಗ್ಗೆ ಮಾತನಾಡಿದ ರಾಹುಲ್‌ ಗಾಂಧಿ, ರಾಮಮಂದಿರ ಮತ್ತು ಸಂಸತ್ತಿನ ಕಟ್ಟಡ ಉದ್ಘಾಟನೆಯಲ್ಲಿ ಒಬ್ಬ ದಲಿತ, ಬುಡಕಟ್ಟು ಜನಾಂಗದವರು ಕೂಡ ಕಾಣಿಸಿಕೊಂಡಿಲ್ಲ, 90% ಜನಸಂಖ್ಯೆಯು ಇದನ್ನು ಅರ್ಥಮಾಡಿಕೊಂಡಿದೆ. ಜನವರಿ 22ರಂದು ನಡೆದ ರಾಮಮಂದಿರ ಸಮಾರಂಭಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಆಹ್ವಾನಿಸದ ಬಿಜೆಪಿ ವಿರುದ್ಧ ಅವರು ಟೀಕಿಸಿದ್ದಾರೆ.

ಮಾಧ್ಯಮಗಳು ನನ್ನನ್ನು ಗಾಂಭೀರ್ಯವಿಲ್ಲದ ರಾಜಕಾರಣಿ ಎಂದು ಬಿಂಬಿಸಿತು. MGNREGA, ಭೂಸ್ವಾಧೀನ ಮಸೂದೆ ವಿರುದ್ಧದ ಹೋರಾಟ ಗಂಭೀರವಲ್ಲದ ವಿಷಯಗಳಾಗಿ ತೋರಿಸಲಾಗಿದೆ. ಆದರೆ ಅಮಿತಾಬ್ ಬಚ್ಚನ್, ಐಶ್ವರ್ಯಾ ರೈ, ವಿರಾಟ್ ಕೊಹ್ಲಿಯನ್ನು ಮಾಧ್ಯಮಗಳು ಗಂಭೀರವಾಗಿ ತೋರಿಸಿವೆ. ನಾನು ಮಾಧ್ಯಮಗಳ ಹೂಡಿಕೆದಾರರನ್ನು ಪರಿಶೀಲಿಸಿದೆ. ಒಬಿಸಿ, ದಲಿತ, ಬುಡಕಟ್ಟು ಸಮುದಾಯದ ಒಬ್ಬ ದೊಡ್ಡ ಆ್ಯಂಕರ್ ಇಲ್ಲ. ಹಾಗಾಗಿ ನಿಮ್ಮ ಧ್ವನಿ ಇಲ್ಲ. ಮಾಧ್ಯಮಗಳಲ್ಲಿ ಇವರಿಗೆ ಪ್ರಾತಿನಿಧ್ಯವಿಲ್ಲ. ಯಾರ ಹಣ ಮಾಧ್ಯಮಕ್ಕೆ ಹೋಗುತ್ತದೆ? ಸರಕಾರಗಳು ಹಣ ನೀಡುತ್ತವೆ. ಜಿಎಸ್‌ಟಿಯಲ್ಲಿ ಯಾರ ಹಣ ಬರುತ್ತದೆ? ಇದು ಶೇ. 90ರಷ್ಟು ಜನರ ಹಣ ಎಂದು ರಾಹುಲ್‌ ಗಾಂಧಿ ಹೇಳಿದ್ದಾರೆ.

ಇದನ್ನು ಓದಿ: ನನ್ನ ತಾಯಿ ದೇಶಕ್ಕಾಗಿ ಮಂಗಳಸೂತ್ರವನ್ನು ತ್ಯಾಗ ಮಾಡಿದ್ದಾರೆ: ಪ್ರಿಯಾಂಕ ಗಾಂಧಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...