Homeಮುಖಪುಟಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ಮೊದಲು ಜಾತಿಗಣತಿ ಮಾಡುತ್ತೇವೆ: ರಾಹುಲ್‌ ಗಾಂಧಿ

ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ಮೊದಲು ಜಾತಿಗಣತಿ ಮಾಡುತ್ತೇವೆ: ರಾಹುಲ್‌ ಗಾಂಧಿ

- Advertisement -
- Advertisement -

ಜಾತಿ ಗಣತಿ ನನ್ನ ಜೀವನದ ಪ್ರಮುಖ ಗುರಿಯಾಗಿದೆ. ಕಾಂಗ್ರೆಸ್‌ ಸರಕಾರ ಅಧಿಕಾರಕ್ಕೆ ಬಂದರೆ ಮೊದಲು ಜಾತಿಗಣತಿಯನ್ನು ಮಾಡುತ್ತೇವೆ ಎಂದು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಹೇಳಿದ್ದಾರೆ.

ಸಂಪತ್ತು ಮರುಹಂಚಿಕೆ ವಿವಾದದ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಮತ್ತು ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ ರಾಹುಲ್‌ ಗಾಂಧಿ, ಕಾಂಗ್ರೆಸ್‌ನ ಕ್ರಾಂತಿಕಾರಿ ಪ್ರಣಾಳಿಕೆಯನ್ನು ಓದಿದ ನಂತರ ಅವರು ಭಯಗೊಂಡಿದ್ದಾರೆ. ಬಿಜೆಪಿಯು 22-25 ದೊಡ್ಡ ಉದ್ಯಮಿಗಳಿಗೆ ಮಾಡಿದ ಸಾಲ ಮನ್ನಾದ 16 ಲಕ್ಷ ಕೋಟಿಯನ್ನು ಮರಳಿ ಪಡೆದು ಅದರ ಸಣ್ಣ ಭಾಗವನ್ನು 90ಶೇ.ಜನರಿಗೆ ಪರಿಹಾರ ನೀಡುವ ಗುರಿಯನ್ನು ಕಾಂಗ್ರೆಸ್‌ ಪಕ್ಷ ಹೊಂದಿದೆ ಎಂದು ರಾಹುಲ್‌ ಗಾಂಧಿ ಹೇಳಿದ್ದಾರೆ.

ರಾಷ್ಟ್ರ ರಾಜಧಾನಿಯಲ್ಲಿ ಸಾಮಾಜಿಕ ನ್ಯಾಯ ಸಮ್ಮೇಳನದಲ್ಲಿ ಮಾತನಾಡಿದ ರಾಹುಲ್‌ ಗಾಂಧಿ, ಅನ್ಯಾಯ ಎದುರಿಸುತ್ತಿರುವ ದೇಶದ ಶೇ 90ರಷ್ಟು ಜನರಿಗೆ ನ್ಯಾಯ ದೊರಕಿಸುವುದು ನನ್ನ ಜೀವನದ ಉದ್ದೇಶ. ಜಾತಿ ಗಣತಿ ನನಗೆ ರಾಜಕೀಯವಲ್ಲ, ಅದು ನನ್ನ ಜೀವನದ ಧ್ಯೇಯವಾಗಿದೆ. ಜಾತಿ ಗಣತಿಯನ್ನು ತಡೆಯಲು ಜಗತ್ತಿನ ಯಾವ ಶಕ್ತಿಯಿಂದಲೂ ಸಾಧ್ಯವಿಲ್ಲ. ಕಾಂಗ್ರೆಸ್ ಅಧಿಕಾರಕ್ಕೆ ಆಯ್ಕೆಯಾದಾಗ ನಾವು ತೆಗೆದುಕೊಳ್ಳುವ ಮೊದಲ ಕೆಲಸವೆಂದರೆ ಜನಗಣತಿ. ಇದು ನನ್ನ ಗ್ಯಾರಂಟಿ ಎಂದು ಹೇಳಿದ್ದಾರೆ.

ಸಂಪತ್ತು ಮರುಹಂಚಿಕೆ ವಿವಾದದ ಬಗ್ಗೆ ಮಾತನಾಡಿದ ರಾಹುಲ್‌ ಗಾಂಧಿ, ನಾವು ಇನ್ನೂ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಹೇಳಿಲ್ಲ, ಎಷ್ಟು ಅನ್ಯಾಯವಾಗಿದೆ ಎಂಬುವುದನ್ನು ಮೊದಲು ಕಂಡು ಹಿಡಿಯೋಣ ಎಂದು ನಾನು ಹೇಳುತ್ತಿದ್ದೇನೆ. ಜಾತಿ ಗಣತಿಯು ಕೇವಲ ಜಾತಿ ಸಮೀಕ್ಷೆಯಾಗಿರದೆ “ಆರ್ಥಿಕ” ಮತ್ತು “ಸಾಂಸ್ಥಿಕ” ಅಂಶಗಳನ್ನು ಹೊಂದಿರುತ್ತದೆ. ದಲಿತರು ಮತ್ತು ಬುಡಕಟ್ಟು ಜನಾಂಗದವರ ಇತಿಹಾಸವನ್ನು ಬಿಜೆಪಿ ಅಳಿಸಿ ಹಾಕುತ್ತಿದೆ. ನನಗೆ ಜಾತಿಯಲ್ಲಿ ಆಸಕ್ತಿ ಇಲ್ಲ ಆದರೆ ನ್ಯಾಯದಲ್ಲಿ ಆಸಕ್ತಿ ಇದೆ, ಪ್ರಧಾನಿ ಮೋದಿ ಅವರು ಕಳೆದ ಹತ್ತು ವರ್ಷಗಳಿಂದ ತಾನು ಒಬಿಸಿ ಎಂದು ಹೇಳುತ್ತಿದ್ದಾರೆ ಆದರೆ ನಾನು ಜಾತಿ ಗಣತಿಯ ಬಗ್ಗೆ ಮಾತನಾಡುವಾಗ, ಜಾತಿ ಇಲ್ಲ ಎಂದು ಮೋದಿ ಹೇಳಿದರು. ಜಾತಿ ಇಲ್ಲದಿದ್ದರೆ ನೀವು ಒಬಿಸಿ ಆಗೋದು ಹೇಗೆ? ಭಾರತದಲ್ಲಿ ಬಡವರು ಮತ್ತು ಶ್ರೀಮಂತರು ಎಂಬ ಎರಡು ಜಾತಿಗಳು ಮಾತ್ರ ಇದೆ ಎಂದು ಮೋದಿ ಹೇಳುತ್ತಾರೆ. ಅಗಿದ್ದರೆ ಬಡವರು ಮತ್ತು ಶ್ರೀಮಂತರ ಪಟ್ಟಿಯನ್ನು ಹೊರತನ್ನಿ. ಒಬಿಸಿಗಳು, ದಲಿತರು, ಆದಿವಾಸಿಗಳನ್ನು ಬಡವರ ಪಟ್ಟಿಯಲ್ಲಿ ಕಾಣಬಹುದು ಆದರೆ ಅವರು ಶ್ರೀಮಂತರ ಪಟ್ಟಿಯಲ್ಲಿ ಅವರನ್ನು ಕಾಣಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ.

ರಾಮಮಂದಿರ ಶಂಕುಸ್ಥಾಪನೆ ಸಮಾರಂಭದ ಬಗ್ಗೆ ಮಾತನಾಡಿದ ರಾಹುಲ್‌ ಗಾಂಧಿ, ರಾಮಮಂದಿರ ಮತ್ತು ಸಂಸತ್ತಿನ ಕಟ್ಟಡ ಉದ್ಘಾಟನೆಯಲ್ಲಿ ಒಬ್ಬ ದಲಿತ, ಬುಡಕಟ್ಟು ಜನಾಂಗದವರು ಕೂಡ ಕಾಣಿಸಿಕೊಂಡಿಲ್ಲ, 90% ಜನಸಂಖ್ಯೆಯು ಇದನ್ನು ಅರ್ಥಮಾಡಿಕೊಂಡಿದೆ. ಜನವರಿ 22ರಂದು ನಡೆದ ರಾಮಮಂದಿರ ಸಮಾರಂಭಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಆಹ್ವಾನಿಸದ ಬಿಜೆಪಿ ವಿರುದ್ಧ ಅವರು ಟೀಕಿಸಿದ್ದಾರೆ.

ಮಾಧ್ಯಮಗಳು ನನ್ನನ್ನು ಗಾಂಭೀರ್ಯವಿಲ್ಲದ ರಾಜಕಾರಣಿ ಎಂದು ಬಿಂಬಿಸಿತು. MGNREGA, ಭೂಸ್ವಾಧೀನ ಮಸೂದೆ ವಿರುದ್ಧದ ಹೋರಾಟ ಗಂಭೀರವಲ್ಲದ ವಿಷಯಗಳಾಗಿ ತೋರಿಸಲಾಗಿದೆ. ಆದರೆ ಅಮಿತಾಬ್ ಬಚ್ಚನ್, ಐಶ್ವರ್ಯಾ ರೈ, ವಿರಾಟ್ ಕೊಹ್ಲಿಯನ್ನು ಮಾಧ್ಯಮಗಳು ಗಂಭೀರವಾಗಿ ತೋರಿಸಿವೆ. ನಾನು ಮಾಧ್ಯಮಗಳ ಹೂಡಿಕೆದಾರರನ್ನು ಪರಿಶೀಲಿಸಿದೆ. ಒಬಿಸಿ, ದಲಿತ, ಬುಡಕಟ್ಟು ಸಮುದಾಯದ ಒಬ್ಬ ದೊಡ್ಡ ಆ್ಯಂಕರ್ ಇಲ್ಲ. ಹಾಗಾಗಿ ನಿಮ್ಮ ಧ್ವನಿ ಇಲ್ಲ. ಮಾಧ್ಯಮಗಳಲ್ಲಿ ಇವರಿಗೆ ಪ್ರಾತಿನಿಧ್ಯವಿಲ್ಲ. ಯಾರ ಹಣ ಮಾಧ್ಯಮಕ್ಕೆ ಹೋಗುತ್ತದೆ? ಸರಕಾರಗಳು ಹಣ ನೀಡುತ್ತವೆ. ಜಿಎಸ್‌ಟಿಯಲ್ಲಿ ಯಾರ ಹಣ ಬರುತ್ತದೆ? ಇದು ಶೇ. 90ರಷ್ಟು ಜನರ ಹಣ ಎಂದು ರಾಹುಲ್‌ ಗಾಂಧಿ ಹೇಳಿದ್ದಾರೆ.

ಇದನ್ನು ಓದಿ: ನನ್ನ ತಾಯಿ ದೇಶಕ್ಕಾಗಿ ಮಂಗಳಸೂತ್ರವನ್ನು ತ್ಯಾಗ ಮಾಡಿದ್ದಾರೆ: ಪ್ರಿಯಾಂಕ ಗಾಂಧಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....