Homeಫ್ಯಾಕ್ಟ್‌ಚೆಕ್FACT CHECK : ಫೇಸ್‌ಬುಕ್, ಇನ್‌ಸ್ಟಾಗ್ರಾಮ್‌ ವೀಕ್ಷಿಸುತ್ತಾ ಬೀದಿಯಲ್ಲಿ ತಿರುಗಾಡುವ ಯುವಕರ ಖಾತೆಗಳಿಗೆ ಹಣ ಹಾಕುತ್ತೇವೆಂದು...

FACT CHECK : ಫೇಸ್‌ಬುಕ್, ಇನ್‌ಸ್ಟಾಗ್ರಾಮ್‌ ವೀಕ್ಷಿಸುತ್ತಾ ಬೀದಿಯಲ್ಲಿ ತಿರುಗಾಡುವ ಯುವಕರ ಖಾತೆಗಳಿಗೆ ಹಣ ಹಾಕುತ್ತೇವೆಂದು ರಾಹುಲ್ ಗಾಂಧಿ ಹೇಳಿಲ್ಲ

- Advertisement -
- Advertisement -

“ಇನ್‌ಸ್ಟಾಗ್ರಾಮ್ ಮತ್ತು ಫೇಸ್‌ಬುಕ್‌ಗಳನ್ನು ಬಳಸಿಕೊಂಡು ಬೀದಿಗಳಲ್ಲಿ ತಿರುಗುತ್ತಿರುವ ನಮ್ಮ ಯುವಕರ ಬ್ಯಾಂಕ್ ಖಾತೆಗಳಿಗೆ ವಾರ್ಷಿಕ ಒಂದು ಲಕ್ಷ ರೂಪಾಯಿ ಮತ್ತು ತಿಂಗಳಿಗೆ 8,500 ರೂಪಾಯಿಗಳನ್ನು ಜಮಾ ಮಾಡಲಾಗುತ್ತದೆ ಎಂದು ರಾಹುಲ್‌ ಗಾಂಧಿ ಹೇಳಿದ್ದಾರೆ” ಎಂಬ ವಿಡಿಯೋವೊಂದನ್ನು ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದೆ.

ಬಲಪಂಥೀಯ ಫೇಸ್‌ಬುಕ್ ಖಾತೆ ಪೋಸ್ಟ್‌ ಕಾರ್ಡ್‌ ಕನ್ನಡದಲ್ಲಿ “ಇದು ಯುವಜನತೆಯ ಸಬಲೀಕರಣವೋ ಅಥವಾ ಸರ್ವನಾಶವೋ ಎಂಬ ಶೀರ್ಷಿಕೆಯೊಂದಿಗೆ ಪೋಸ್ಟರ್‌ ಅನ್ನು ಹಂಚಿಕೊಂಡಿದೆ. 24*7 ಇನ್‌ಸ್ಟಾಗ್ರಾಮ್‌ ಮತ್ತು ಫೇಸ್‌ಬುಕ್ ವೀಕ್ಷಿಸುತ್ತಾ ಬೀದಿಯಲ್ಲಿ ತಿರುಗುವ ಯುವಕರ ಖಾತೆಗಳಿಗೆ ನಾವು ಪ್ರತಿ ವರ್ಷ ಒಂದು ಲಕ್ಷ ರೂ ಅಥವಾ ಪ್ರತಿ ತಿಂಗಳೂ 8,500 ರೂಪಾಯಿ ಹಾಕುತ್ತೇವೆ. ಎಲ್ಲರೂ ಕೆಲಸ ಬಿಟ್ಟು ಮನೆಯಲ್ಲಿ ಕೂರಲು ಸಿದ್ದರಾಗಿ” ಎಂದು ರಾಹುಲ್ ಗಾಂಧಿ ಹೇಳಿದ್ದಾರೆ ಎಂದಿದೆ.

Megh Updates (@MeghUpdates) ಎಂಬ ಬಲಪಂಥೀಯ ಎಕ್ಸ್‌ ಖಾತೆಯಲ್ಲಿ ಈ ವಿಡಿಯೋ ಹಂಚಿಕೊಳ್ಳಲಾಗಿದ್ದು, “ಇನ್‌ಸ್ಟಾಗ್ರಾಮ್ ಮತ್ತು ಫೇಸ್‌ಬುಕ್ ಅನ್ನು 24×7 ವೀಕ್ಷಿಸುವ ಮೂಲಕ ಬೇಸರದ ಕೆಲಸವನ್ನು ಮಾಡುತ್ತಿರುವ ಸಾಮಾನ್ಯ ಯುವಕರ ಖಾತೆಗಳಿಗೆ ಪ್ರತಿ ತಿಂಗಳು 8,500 ರೂಗಳನ್ನು ಟಕಾ ಟಕ್ ಟಕಾ ಟಕ್‌ ಜಮಾ ಮಾಡುತ್ತೇವೆ” ಎಂದು ಬರೆದುಕೊಂಡಿದ್ದಾರೆ.

ಪೋಸ್ಟ್ ಲಿಂಕ್ ಇಲ್ಲಿದೆ 

ಸದಾ ಸುಳ್ಳು ಸುದ್ದಿಗಳನ್ನೇ ಹಬ್ಬುವ Rishi Bagree (@rishibagree)ಎಂಬ ಬಲ ಪಂಥೀಯ ಎಕ್ಸ್ ಬಳಕೆದಾರ ಕೂಡ ವಿಡಿಯೋ ಹಂಚಿಕೊಂಡಿದ್ದು, “ನಿರುದ್ಯೋಗವನ್ನು ತೊಡೆದುಹಾಕಲು ರಾಹುಲ್ ಗಾಂಧಿಯವರ ಆಲೋಚನೆಯು ಹಣದ ಮೂಲಕ ನಿರುದ್ಯೋಗವನ್ನು ಉತ್ತೇಜಿಸುವುದು” ಎಂದು ಬರೆದುಕೊಂಡಿದ್ದಾರೆ.

ಪೋಸ್ಟ್ ಲಿಂಕ್ ಇಲ್ಲಿದೆ 

ಫ್ಯಾಕ್ಟ್‌ಚೆಕ್ : ರಾಹುಲ್ ಗಾಂಧಿ ಮಾತನಾಡಿರುವ ವೈರಲ್ ವಿಡಿಯೋದ ಸತ್ಯಾಸತ್ಯೆ ತಿಳಿಯುವ ಸಲುವಾಗಿ ನಾವು ಮೂಲ ವಿಡಿಯೋ ಹುಡುಕಾಡಿದ್ದೇವೆ. ಈ ವೇಳೆ 20 ಏಪ್ರಿಲ್‌ 2024ರಂದು ರಾಹುಲ್ ಗಾಂಧಿಯವರ ಅಧಿಕೃತ ಯೂಟ್ಯೂಬ್ ಚಾನೆಲ್‌ನಲ್ಲಿ ಅಪ್ಲೋಡ್ ಮಾಡಲಾದ “LIVE: Lok Sabha 2024 Campaign | Public Meeting | Bhagalpur, Bihar” ಎಂಬ ಶೀರ್ಷಿಕೆಯ ನೇರ ಪ್ರಸಾರದ ವಿಡಿಯೋ ದೊರೆತಿದೆ.

ವಿಡಿಯೋ ಲಿಂಕ್ ಇಲ್ಲಿದೆ 

ಮೂಲ ವಿಡಿಯೋದಲ್ಲಿ “ನರೇಂದ್ರ ಮೋದಿಯವರು ದೇಶವನ್ನು ನಿರುದ್ಯೋಗದ ಕೇಂದ್ರವನ್ನಾಗಿ ಮಾರ್ಪಡಿಸಿದ್ದಾರೆ. ಯುವ ಜನರಲ್ಲಿ ಕೇಳಿ ನೀವು ಏನು ಮಾಡುತ್ತಿದ್ದೀರಾ? ಎಂದು ಅದಕ್ಕೆ ಅವರ ಉತ್ತರ ಏನೂ ಇಲ್ಲ ಎಂದು ಇರುತ್ತದೆ. ಇಂದು ಭಾರತದಲ್ಲಿ ಯುವಕರು ಇನ್‌ಸ್ಟಾಗ್ರಾಮ್‌, ಫೇಸ್‌ಬುಕ್‌ ನೋಡಿಕೊಂಡು ಬೀದಿಗಳಲ್ಲಿ ತಿರುಗುತ್ತಿದ್ದಾರೆ. ಏಕೆಂದರೆ, ಅವರಿಗೆ ಉದ್ಯೋಗವಿಲ್ಲ” ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.

“ನಮ್ಮ ಸರ್ಕಾರ ಅಧಿಕಾರಕ್ಕೆ ಬಂದರೆ ಸರ್ಕಾರಿ ಮತ್ತು ಖಾಸಗಿ ಸಂಸ್ಥೆಗಳನ್ನು ಕೆಲ ತಿಂಗಳು ವೇತನ ಸಹಿತ ತರಬೇತಿಯನ್ನು ನಾವು ಕೊಡುತ್ತೇವೆ. ಒಂದು ವೇಳೆ ಉದ್ಯೋಗದ ಕೊರತೆ ಎದುರಾದರೆ, ಅವರಿಗೆ ಹಣದ ನೆರವನ್ನು ನೀಡುವ ಮೂಲಕ ಸ್ವಉದ್ಯೋಗಕ್ಕೆ ಪ್ರೇರಣೆ ನೀಡುತ್ತೇವೆ” ಎಂದು ತಿಳಿಸಿದ್ದಾರೆ.

ಮುಂದುವರೆಸಿದ ರಾಹುಲ್ ಗಾಂಧಿ “ಪ್ರಧಾನಿ ಮೋದಿಯಿಂದಾಗಿ ಇವತ್ತು ಯಾರೆಲ್ಲ ನಿರುದ್ಯೋಗದಿಂದ ಬೀದಿಯಲ್ಲಿ ಇನ್ಸ್‌ಸ್ಟಾಗ್ರಾಮ್‌, ಫೇಸ್‌ಬುಕ್‌ ನೋಡುತ್ತಾ ಕುಳಿತಿರುತ್ತಾರೋ ಅವರ ಖಾತೆಗೆ ನಾವು ವರ್ಷಕ್ಕೆ 1 ಲಕ್ಷ ರೂ. ತಿಂಗಳಿಗೆ 8,500 ರೂ. ಹಾಕುತ್ತೇವೆ” ಎಂದು ಹೇಳಿಕೆ ನೀಡಿದ್ದಾರೆ. ಈ ಹೇಳಿಕೆಯ ವಿಡಿಯೋವನ್ನು ಎಡಿಟ್‌ ಮಾಡಿ ಸುಳ್ಳು ಮಾಹಿತಿಯೊಂದಿಗೆ ಹಂಚಿಕೊಳ್ಳಲಾಗುತ್ತಿದೆ.

ಇದನ್ನೂ ಓದಿ : FACT CHECK : ಆಂಧ್ರದಲ್ಲಿ ಎಸ್‌ಸಿ, ಎಸ್‌ಟಿ ಮೀಸಲಾತಿ ಕಡಿತಗೊಳಿಸಿ ಮುಸ್ಲಿಮರಿಗೆ ನೀಡಲಾಗಿದೆ ಎಂಬ ಮೋದಿ ಹೇಳಿಕೆ ಸುಳ್ಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರೂರ್ ಕಾಲ್ತುಳಿತ : ಸಿಬಿಐ ಮುಂದೆ ವಿಚಾರಣೆಗೆ ಹಾಜರಾದ ನಟ ವಿಜಯ್

ಕರೂರ್ ಕಾಲ್ತುಳಿತ ಘಟನೆಗೆ ಸಂಬಂಧಪಟ್ಟಂತೆ ನಟ ಹಾಗೂ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ಮುಖ್ಯಸ್ಥ ವಿಜಯ್ ಸೋಮವಾರ (ಜ.12) ದೆಹಲಿಯ ಕೇಂದ್ರ ತನಿಖಾ ದಳ (ಸಿಬಿಐ) ಕಚೇರಿಗೆ ವಿಚಾರಣೆಗೆ ಹಾಜರಾಗಿದ್ದಾರೆ. ಚಾರ್ಟರ್ಡ್ ವಿಮಾನದಲ್ಲಿ...

ಜೂನ್‌ ಅಂತ್ಯದೊಳಗೆ ಜಿಬಿಎ ವ್ಯಾಪ್ತಿಯ ಪಾಲಿಕೆಗಳಿಗೆ ಚುನಾವಣೆ : ಗಡುವು ವಿಧಿಸಿದ ಸುಪ್ರೀಂ ಕೋರ್ಟ್

ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ವ್ಯಾಪ್ತಿಯ ಐದು ನಗರ ಪಾಲಿಕೆಗಳಿಗೆ ಜೂನ್ ಅಂತ್ಯದೊಳಗೆ ಚುನಾವಣೆ ನಡೆಸುವಂತೆ ರಾಜ್ಯ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಸೋಮವಾರ (ಜ.12) ನಿರ್ದೇಶನ ನೀಡಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ಮತ್ತು...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಸುಪ್ರೀಂ ಕೋರ್ಟ್ ನಲ್ಲಿ ಮಮತಾ ವಿರುದ್ಧ ಎಫ್‌ಐಆರ್ ದಾಖಲಿಸಲು ನಿರ್ದೇಶನ ಕೋರಿ ಅರ್ಜಿ ಸಲ್ಲಿಸಿದ ಇಡಿ

ನವದೆಹಲಿ: ಐ-ಪಿಎಸಿ ವಿರುದ್ಧದ ಬಹು-ರಾಜ್ಯ ಹಣ ವರ್ಗಾವಣೆ ಪ್ರಕರಣದಲ್ಲಿ ತನಿಖೆಗೆ ಅಡ್ಡಿಪಡಿಸಿದ, ಸಾಕ್ಷ್ಯಗಳನ್ನು ತಿರುಚಿದ ಮತ್ತು ನಾಶಪಡಿಸಿದ ಆರೋಪದ ಮೇಲೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಡಿಜಿಪಿ ಮತ್ತು ಕೋಲ್ಕತ್ತಾ ಪೊಲೀಸ್...

ಭಾರತಕ್ಕಿಂತ ಯಾವುದೇ ಪಾಲುದಾರ ದೇಶ ಮುಖ್ಯವಲ್ಲ, ವ್ಯಾಪಾರ ಮಾತುಕತೆ ಪುನರಾರಂಭ: ಅಮೆರಿಕ ರಾಯಭಾರಿ ಸೆರ್ಗಿಯೊ ಗೋರ್

"ವಾಷಿಂಗ್ಟನ್‌ಗೆ ಭಾರತಕ್ಕಿಂತ ಅಗತ್ಯವಾದ ದೇಶ ಇನ್ನೊಂದಿಲ್ಲ ಮತ್ತು ಎರಡೂ ಕಡೆಯವರು ವ್ಯಾಪಾರ ಒಪ್ಪಂದವನ್ನು ದೃಢೀಕರಿಸುವಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ" ಎಂದು ಅಮೆರಿಕದ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್ ಸೋಮವಾರ ಹೇಳಿದ್ದಾರೆ. ಅಮೆರಿಕ ರಾಯಭಾರ ಕಚೇರಿಯ ನೌಕರರು...

ಬಿಷಪ್ ಫ್ರಾಂಕೊ ಮುಲಕ್ಕಲ್ ಅತ್ಯಾಚಾರ ಪ್ರಕರಣ : ಒಂಬತ್ತು ವರ್ಷಗಳ ಬಳಿಕ ಮೌನ ಮುರಿದ ಸಂತ್ರಸ್ತೆ, ಕಾನೂನು ಹೋರಾಟ ಮುಂದುವರಿಸುವುದಾಗಿ ಹೇಳಿಕೆ

ಬಿಷಪ್ ಫ್ರಾಂಕೊ ಮುಲಕ್ಕಲ್ ವಿರುದ್ದದ ಅತ್ಯಾಚಾರ ಪ್ರಕರಣದ ಸಂತ್ರಸ್ತೆ ಕ್ರೈಸ್ತ ಸನ್ಯಾಸಿನಿ ಒಂಬತ್ತು ವರ್ಷಗಳ ನಂತರ ಮೊದಲ ಬಾರಿಗೆ ಸಾರ್ವಜನಿಕವಾಗಿ ಮಾತನಾಡಿದ್ದು, ಫ್ರಾಂಕೊ ಮುಲಕ್ಕಲ್ ಅವರನ್ನು ನ್ಯಾಯಾಲಯ ಖುಲಾಸೆಗೊಳಿಸಿದ್ದಕ್ಕೆ ನಾನು ದಂಗಾಗಿದ್ದೇನೆ. ನ್ಯಾಯಕ್ಕಾಗಿ...

‘ವೆನೆಜುವೆಲಾದ ಹಂಗಾಮಿ ಅಧ್ಯಕ್ಷ’ ಎಂದು ಘೋಷಿಸಿಕೊಂಡ ಡೊನಾಲ್ಡ್ ಟ್ರಂಪ್ 

ಸೋಮವಾರ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಟ್ರುತ್ ಸೋಶಿಯಲ್‌ನಲ್ಲಿ ತಮ್ಮದೇ ಆದ ವಿಕಿಪೀಡಿಯಾ ಪುಟದ ಫೋಟೋವನ್ನು ಪೋಸ್ಟ್ ಮಾಡಿದ್ದಾರೆ, ಅದರಲ್ಲಿ "ವೆನೆಜುವೆಲಾದ ಹಂಗಾಮಿ ಅಧ್ಯಕ್ಷ" ಎಂಬ ಹುದ್ದೆಯನ್ನು ಹೊಂದಿರುವ ಅವರ ಚಿತ್ರವಿದೆ. ಪೋಸ್ಟ್‌ನಲ್ಲಿ ಟ್ರಂಪ್...

ಪೊಲೀಸ್ ತುರ್ತು ವಾಹನದ ಚಾಲಕ ಸೇರಿ ಐವರಿಂದ ಯುವತಿ ಮೇಲೆ ಅತ್ಯಾಚಾರ!

ಪೊಲೀಸ್ ತುರ್ತು ಸೇವೆ (112) ವಾಹನದ ಚಾಲಕ ಸೇರಿದಂತೆ ಐವರು ಪುರುಷರು 19 ವರ್ಷದ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ಛತ್ತೀಸ್‌ಗಢದ ಕೋರ್ಬಾ ಜಿಲ್ಲೆಯ ಬಂಕಿಮೊಂಗ್ರ ಪ್ರದೇಶದಲ್ಲಿ ನಡೆದಿದೆ. ಜನವರಿ...

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...