Homeಮುಖಪುಟ2023ರಲ್ಲಿ ತೀವ್ರ ಹಸಿವಿನಿಂದ ತತ್ತರಿಸಿದ 282 ಮಿಲಿಯನ್ ಜನರು: ಆಹಾರದ ಅಭಾವಕ್ಕೆ ವಿಶ್ವಸಂಸ್ಥೆ ಉಲ್ಲೇಖಿಸಿದ ಕಾರಣವೇನು?

2023ರಲ್ಲಿ ತೀವ್ರ ಹಸಿವಿನಿಂದ ತತ್ತರಿಸಿದ 282 ಮಿಲಿಯನ್ ಜನರು: ಆಹಾರದ ಅಭಾವಕ್ಕೆ ವಿಶ್ವಸಂಸ್ಥೆ ಉಲ್ಲೇಖಿಸಿದ ಕಾರಣವೇನು?

- Advertisement -
- Advertisement -

ಕಳೆದ ವರ್ಷ ಪ್ರಪಂಚದಾದ್ಯಂತ ಆಹಾರ ಅಭದ್ರತೆ ಸ್ಥಿತಿ ಭಾರೀ ಹದಗೆಟ್ಟಿದೆ, 2023ರಲ್ಲಿ ಸುಮಾರು 282 ಮಿಲಿಯನ್ ಜನರು ತೀವ್ರ ಹಸಿವಿನಿಂದ ಬಳಲಿದ್ದಾರೆ, ಇದರಲ್ಲಿ ವಿಶೇಷವಾಗಿ ಯುದ್ಧಪೀಡಿತ ಗಾಝಾ ಮತ್ತು ಸುಡಾನ್‌ನಲ್ಲಿ ಹೆಚ್ಚಿನ ಜನರು ಹಸಿವಿನಿಂದ ಬಳಲಿದ್ದಾರೆ ಎಂದು ‘ವಿಶ್ವಸಂಸ್ಥೆಯ ಅಂಗಸಂಸ್ಥೆಗಳು ಮತ್ತು ಅಭಿವೃದ್ಧಿ ಗುಂಪು’ ಬುಧವಾರ ಬಿಡುಗಡೆ ಮಾಡಿರುವ ವರದಿಯು ತಿಳಿಸಿದೆ.

ಆಹಾರ ಭದ್ರತೆ ಮಾಹಿತಿ ಜಾಲ(ಎಫ್‌ಎಸ್‌ಐಎನ್)ದ ‘ಆಹಾರ ಬಿಕ್ಕಟ್ಟಿನ’ ಕುರಿತ ಇತ್ತೀಚಿನ ಜಾಗತಿಕ ವರದಿಯ ಪ್ರಕಾರ, 2022ಕ್ಕೆ ಹೋಲಿಸಿದರೆ ಹಸಿವಿನಿಂದ ಬಳಲುತ್ತಿರುವವರ ಸಂಖ್ಯೆ 24 ಮಿಲಿಯನ್ ಹೆಚ್ಚಿದೆ. ಇದಕ್ಕೆ ವಿಪರೀತ ಹವಾಮಾನ ವೈಪರಿತ್ಯಗಳು ಮತ್ತು ಆರ್ಥಿಕ ಆಘಾತಗಳು, ಯುದ್ಧದ ಸ್ಥಿತಿ ಕಾರಣ ಎಂದು ವರದಿ ತಿಳಿಸಿದೆ. ಇದಲ್ಲದೆ ಕಳೆದ ವರ್ಷದಲ್ಲಿ ಹಸಿವಿನ ಹೆಚ್ಚಳಕ್ಕೆ ವಿಸ್ತರಿತ ಭೌಗೋಳಿಕ ವ್ಯಾಪ್ತಿ ಮತ್ತು 12 ದೇಶಗಳಲ್ಲಿನ ಹದಗೆಟ್ಟ ಪರಿಸ್ಥಿತಿ ಕಾರಣ ಎಂದು ಹೇಳಲಾಗಿದೆ.

2023ರ ವರ್ಷಾವಧಿಯಲ್ಲಿನ ವರದಿ ನೋಡಿದಾಗ ತೀವ್ರ ಹಸಿವಿನಿಂದ ಬಳಲುತ್ತಿರುವವರ ಜನರ ಸಂಖ್ಯೆಯಲ್ಲಿ ಸತತ ಐದನೇ ವರ್ಷ ಏರಿಕೆಯಾಗಿದೆ. ಜನಸಂಖ್ಯೆಯು ಆಹಾರದ ಅಭಾವವನ್ನು ಎದುರಿಸಿದಾಗ ಅದು ಕಾರಣಗಳು ಅಥವಾ ಅವಧಿಯನ್ನು ಲೆಕ್ಕಿಸದೆ ಜೀವನ ಅಥವಾ ಜೀವನೋಪಾಯಕ್ಕೆ ಬೆದರಿಕೆ ಹಾಕುತ್ತದೆ.

ಸುಡಾನ್ ಮತ್ತು ಗಾಝಾ ಪಟ್ಟಿಯಲ್ಲಿ ಪ್ರಮುಖವಾಗಿ ಆಹಾರ ಬಿಕ್ಕಟ್ಟು ಉಂಟಾಗಿದೆ, ಜನರು ಹಸಿವಿನಿಂದ ತತ್ತರಿಸಿದ್ದಾರೆ ಎಂದು ವಿಶ್ವಸಂಸ್ಥೆಯ ಆಹಾರ ಮತ್ತು ಕೃಷಿ ಸಂಸ್ಥೆ (FAO) ನಲ್ಲಿರುವ ತುರ್ತು ಕಚೇರಿಯ ಉಪ ನಿರ್ದೇಶಕರೋರ್ವರು ಮಾಹಿತಿ ನೀಡಿದ್ದಾರೆ.

ಗಾಝಾದಲ್ಲಿ 600,000 ಜನರು ಸೇರಿದಂತೆ ಸುಮಾರು 700,000 ಜನರು ಕಳೆದ ವರ್ಷ ತೀವ್ರವಾಗಿ ಹಸಿವಿನಿಂದ ಬಳಲಿದ್ದಾರೆ, ಯುದ್ಧಪೀಡಿತ ಫೆಲಸ್ತೀನ್ ಪ್ರದೇಶದಲ್ಲಿ ಈ ಸಂಖ್ಯೆ 1.1 ದಶಲಕ್ಷಕ್ಕೆ ಏರಿದೆ. ಈ ಜಾಗತಿಕ ವರದಿಯನ್ನು 2016ರಲ್ಲಿ ಆರಂಭಿಸಿದ ಬಳಿಕ ಇದುವರೆಗೆ ಆಹಾರ ಅಭದ್ರತೆ ಎದುರಿಸುತ್ತಿರುವವರ ಸಂಖ್ಯೆ 108 ದಶಲಕ್ಷದಿಂದ 282 ದಶಲಕ್ಷಕ್ಕೆ ಹೆಚ್ಚಿದೆ.

ಗ್ಲೋಬಲ್ ಫುಡ್ ಕ್ರೈಸಿಸ್ ನೆಟ್‌ವರ್ಕ್‌ನ 2016ರ ಮೊದಲ ವರದಿಯಿಂದ, ಆಹಾರ-ಅಸುರಕ್ಷಿತ ಜನರ ಸಂಖ್ಯೆ 108 ಮಿಲಿಯನ್‌ನಿಂದ 282 ಮಿಲಿಯನ್‌ಗೆ ಏರಿದೆ. ಇದಲ್ಲದೆ ಸಂಬಂಧಿಸಿದ ಪ್ರದೇಶಗಳಲ್ಲಿ ಹಸಿವಿನಿಂದ ಬಳಲುತ್ತಿರುವ ಜನಸಂಖ್ಯೆಯ ಪಾಲು 11 ಪ್ರತಿಶತದಿಂದ 22 ಪ್ರತಿಶತದಷ್ಟು ದ್ವಿಗುಣಗೊಂಡಿದೆ ಎಂದು ವರದಿ ತಿಳಿಸಿದೆ.

ಅಫ್ಘಾನಿಸ್ತಾನ, ಡೆಮಾಕ್ರಟಿಕ್ ರಿಪಬ್ಲಿಕ್ ಆಫ್ ಕಾಂಗೋ, ಇಥಿಯೋಪಿಯಾ, ನೈಜೀರಿಯಾ, ಸಿರಿಯಾ ಮತ್ತು ಯೆಮೆನ್‌ನಲ್ಲಿ ದೀರ್ಘಕಾಲದ ಪ್ರಮುಖ ಆಹಾರ ಬಿಕ್ಕಟ್ಟುಗಳನ್ನು ಎದುರಿಸುತ್ತಿದೆ. ಜಗತ್ತಿನಲ್ಲಿ, ಸಾಕಷ್ಟು ಮಕ್ಕಳು ಹಸಿವಿನಿಂದ ಸಾಯುತ್ತಿದ್ದಾರೆ ಎಂದು ಯುಎನ್ ಸೆಕ್ರೆಟರಿ ಜನರಲ್ ಆಂಟೋನಿಯೊ ಗುಟೆರಸ್ ವರದಿಯ ಮುನ್ನುಡಿಯಲ್ಲಿ ಬರೆದಿದ್ದಾರೆ.

ಯುದ್ಧ, ಹವಾಮಾನ ಅವ್ಯವಸ್ಥೆ ಮತ್ತು ಜೀವನ ವೆಚ್ಚದ ಬಿಕ್ಕಟ್ಟಿನಿಂದ 2023ರಲ್ಲಿ ಸುಮಾರು 300 ಮಿಲಿಯನ್ ಜನರು ತೀವ್ರ ಆಹಾರ ಬಿಕ್ಕಟ್ಟನ್ನು ಎದುರಿಸಿದ್ದಾರೆ. ಸಹಾಯ ನಿಧಿಯು ಅಗತ್ಯಕ್ಕೆ ಅನುಗುಣವಾಗಿಲ್ಲ, ಅದ್ದರಿಂದ ಇದು ಮತ್ತಷ್ಟು ಸಮಸ್ಯೆಗೆ ಕಾರಣವಾಗಿದೆ. ನೆರವು ಸಾಮಾಗ್ರಿಗಳ ವೆಚ್ಚಗಳು ಹೆಚ್ಚಾಗಿರುವುದರಿಂದ ಇದು ವಿಶೇಷವಾಗಿ ಸತ್ಯವಾಗಿದೆ ಎಂದು ಹೇಳಿದ್ದಾರೆ.

ವರದಿಯ ಪ್ರಕಾರ, ಸಂಘರ್ಷ ಅಥವಾ ಅಭದ್ರತೆ 20 ದೇಶಗಳ 135 ಮಿಲಿಯನ್ ಜನರು ಹಸಿವಿನಿಂದ ಬಳಲು ಕಾರಣ ಎಂದು ಹೇಳಲಾಗಿದೆ. 18 ದೇಶಗಳ 72 ಮಿಲಿಯನ್ ಜನರಿಗೆ ತೀವ್ರ ಆಹಾರ ಅಭದ್ರತೆಗೆ ಪ್ರವಾಹ ಅಥವಾ ಬರಗಾಲದಂತಹ ವಿಪರೀತ ಹವಾಮಾನ ಘಟನೆಗಳು ಮುಖ್ಯ ಕಾರಣವಾಗಿದೆ, ಆರ್ಥಿಕ ಆಘಾತಗಳು 21 ದೇಶಗಳಲ್ಲಿ 75 ಮಿಲಿಯನ್ ಜನರನ್ನು ಈ ಪರಿಸ್ಥಿತಿಗೆ ತಳ್ಳಿದೆ ಎಂದು ವರದಿಯು ತಿಳಿಸಿದೆ.

ಇದನ್ನು ಓದಿ: ಮೋದಿ ದ್ವೇಷ ಭಾಷಣದ ಕುರಿತು ಅಭಿಪ್ರಾಯ ವ್ಯಕ್ತಪಡಿಸಿದ ಬಿಜೆಪಿ ಜಿಲ್ಲಾಧ್ಯಕ್ಷ ಪಕ್ಷದಿಂದಲೇ ಉಚ್ಚಾಟನೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇರಾಕ್‌ನಲ್ಲಿ ಅಪಹರಣಕ್ಕೊಳಗಾಗಿದ್ದ ಅಮೆರಿಕದ ಪತ್ರಕರ್ತೆ ಬಿಡುಗಡೆ

ಇರಾಕಿನ ರಾಜಧಾನಿ ಬಾಗ್ದಾದ್‌ನಲ್ಲಿ ಒಂದು ವಾರದ ಹಿಂದೆ ಅಪಹರಿಸಲ್ಪಟ್ಟಿದ್ದ ಅಮೆರಿಕದ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಬಿಡುಗಡೆ ಮಾಡಲಾಗಿದೆ ಎಂದು ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರೂಬಿಯೊ ತಿಳಿಸಿದ್ದಾರೆ. ಮಾರ್ಚ್ 31ರಂದು ಶೆಲ್ಲಿ...

ಅಸ್ಸಾಂನ ನಾಗಾಂವ್‌ನಲ್ಲಿ ದರೋಡೆ ಶಂಕೆಯ ಮೇಲೆ ಗುಂಪು ದಾಳಿ: ಮೂವರು ಮುಸ್ಲಿಂ ಪುರುಷರು ಸಾವು

ದರೋಡೆಯಲ್ಲಿ ಭಾಗಿಯಾಗಿದ್ದಾರೆಂದು ಶಂಕಿಸಿ ಅಸ್ಸಾಂನ ನಾಗಾಂವ್ ಜಿಲ್ಲೆಯಲ್ಲಿ ಸೋಮವಾರ ಮುಂಜಾನೆ ನಡೆದ ಗುಂಪು ದಾಳಿಯಲ್ಲಿ ಮೂವರು ಮುಸ್ಲಿಂ ಪುರುಷರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಮೃತರನ್ನು ಸೈಫುಲ್ಲಾ, ಅಜೀಬುರ್ ಅಲಿಯಾಸ್ ಖೈರುಲ್ ಮತ್ತು ಇನಾಮುಲ್...

ಏ.10ರಂದು ಇಸ್ಲಾಮಾಬಾದ್‌ನಲ್ಲಿ ಅಮೆರಿಕ-ಇರಾನ್ ಶಾಂತಿ ಮಾತುಕತೆ : 10 ಷರತ್ತುಗಳನ್ನು ಮುಂದಿಟ್ಟ ಇರಾನ್

ಅಮೆರಿಕ ಮತ್ತು ಇರಾನ್ ನಡುವಿನ ಉದ್ವಿಗ್ನತೆಯನ್ನು ಕಡಿಮೆ ಮಾಡಲು ಪಾಕಿಸ್ತಾನದ ಮಧ್ಯಸ್ಥಿಕೆಯಲ್ಲಿ ಇಸ್ಲಾಮಾಬಾದ್‌ನಲ್ಲಿ ಶಾಂತಿ ಮಾತುಕತೆ ಆಯೋಜಿಸಲಾಗಿದೆ. ಅಮೆರಿಕ ಮತ್ತು ಇರಾನ್ ನಿಯೋಗಗಳ ನಡುವಿನ ಈ ಮಹತ್ವದ ಮಾತುಕತೆಯು 2026ರ ಏಪ್ರಿಲ್ 10ರಂದು (ಶುಕ್ರವಾರ) ಇಸ್ಲಾಮಾಬಾದ್‌ನಲ್ಲಿ ನಡೆಯಲಿದೆ ಎಂದು ಪಾಕಿಸ್ತಾನದ...

ಕದನ ವಿರಾಮ | ಟ್ರಂಪ್ ನಿರ್ಧಾರಕ್ಕೆ ಇಸ್ರೇಲ್ ಬೆಂಬಲ; ಲೆಬನಾನ್‌ಗೆ ಅನ್ವಯಿಸುವುದಿಲ್ಲ ಎಂದ ನೆತನ್ಯಾಹು!

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಘೋಷಿಸಿರುವ ಎರಡು ವಾರಗಳ ಕದನ ವಿರಾಮಕ್ಕೆ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಬೆಂಬಲ ಸೂಚಿಸಿದ್ದಾರೆ. ಆದರೆ, ಈ ಕದನ ವಿರಾಮವು ಕೇವಲ ಇರಾನ್‌ಗೆ ಮಾತ್ರ ಸೀಮಿತವಾಗಿದ್ದು, ಲೆಬನಾನ್‌ಗೆ ಅನ್ವಯಿಸುವುದಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ. ಇರಾನ್ ತಕ್ಷಣವೇ ಹಾರ್ಮುಝ್...

ಹಾರ್ಮುಝ್ ಜಲಸಂಧಿಯ ಮೂಲಕ ಎರಡು ವಾರಗಳ ಸುರಕ್ಷಿತ ಸಂಚಾರಕ್ಕೆ ಅವಕಾಶ : ಇರಾನ್ ಭರವಸೆ

ಅಮೆರಿಕ ಮತ್ತು ಇರಾನ್ ನಡುವೆ ಏರ್ಪಟ್ಟಿರುವ ಎರಡು ವಾರಗಳ ತಾತ್ಕಾಲಿಕ ಕದನ ವಿರಾಮದ ಹಿನ್ನೆಲೆ, ಹಾರ್ಮುಝ್ ಜಲಸಂಧಿ  ಮೂಲಕ ಹಡಗುಗಳ ಸುರಕ್ಷಿತ ಸಂಚಾರಕ್ಕೆ ಅವಕಾಶ ನೀಡುವುದಾಗಿ ಇರಾನ್ ಭರವಸೆ ನೀಡಿದೆ. ವಿಶ್ವದ ಒಟ್ಟು ಪೆಟ್ರೋಲಿಯಂ ರಫ್ತಿನ...

ಇರಾನ್ ಮೇಲಿನ ದಾಳಿ ಸ್ಥಗಿತ : ಎರಡು ವಾರಗಳ ಕದನ ವಿರಾಮ ಘೋಷಿಸಿದ ಟ್ರಂಪ್

ಇರಾನ್ ಮೇಲೆ ನಡೆಸುತ್ತಿರುವ ಬಾಂಬ್ ದಾಳಿ ಹಾಗೂ ಮಿಲಿಟರಿ ಕಾರ್ಯಾಚರಣೆಯನ್ನು ಎರಡು ವಾರಗಳ ಕಾಲ ಸ್ಥಗಿತಗೊಳಿಸುವ ಕದನ ವಿರಾಮಕ್ಕೆ ಒಪ್ಪಿಕೊಂಡಿರುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಬುಧವಾರ (ಭಾರತೀಯ ಕಾಲಮಾನ ಏ.8) ಹೇಳಿದ್ದಾರೆ. ಪಾಕಿಸ್ತಾನ...

‘ಸಂಯಮ ಮುಗಿದಿದೆ’: ಟ್ರಂಪ್ ಬೆದರಿಕೆಗೆ ಜಗ್ಗದ ಇರಾನ್; ಪ್ರದೇಶವನ್ನು ಮೀರಿ ಪ್ರತಿಕ್ರಿಯೆ ನೀಡುವುದಾಗಿ ಎಚ್ಚರಿಕೆ ನೀಡಿದ ಐಆರ್‌ಜಿಸಿ

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಇರಾನಿಗೆ ನೀಡಿದ್ದ ಗಡುವು ಕೆಲವೇ ಗಂಟೆಗಳು ಬಾಕಿ ಇರುವಾಗ, ಟ್ರಂಪ್ ಬೆದರಿಕೆಯನ್ನು ಧಿಕ್ಕರಿಸಿದ ಇರಾನ್ "ಸಂಯಮ ಮುಗಿದಿದೆ" ಎಂದು ಹೇಳಿದೆ ಮತ್ತು ಅದು ಈಗ ಈ ಪ್ರದೇಶದಲ್ಲಿನ...

ಒಡಿಶಾ| ಬಾಕ್ಸೈಟ್ ಗಣಿಗೆ ರಸ್ತೆ ನಿರ್ಮಾಣ; ಬುಡಕಟ್ಟು ಜನಾಂಗ – ಪೊಲೀಸರ ನಡುವೆ ಘರ್ಷಣೆ

ಒಡಿಶಾದ ರಾಯಗಡ ಜಿಲ್ಲೆಯಲ್ಲಿ ಸಿಜಿಮಾಲಿ ಬಾಕ್ಸೈಟ್ ಗಣಿಗೆ ರಸ್ತೆ ನಿರ್ಮಾಣದ ಬಗ್ಗೆ ಮಂಗಳವಾರ (ಏಪ್ರಿಲ್ 7) ಸ್ಥಳೀಯ ಬುಡಕಟ್ಟು ಜನಾಂಗದವರೊಂದಿಗಿನ ಘರ್ಷಣೆಯಲ್ಲಿ 40 ಭದ್ರತಾ ಸಿಬ್ಬಂದಿ ಸೇರಿದಂತೆ ಸುಮಾರು 50 ಜನರು ಗಾಯಗೊಂಡಿದ್ದಾರೆ. ಜಿಲ್ಲೆಯ...

ಮಹಿಳೆಯರ ಶಬರಿಮಲೆ ಪ್ರವೇಶಕ್ಕೆ ಅನುಮತಿಸಿದ್ದ ತೀರ್ಪು ತಪ್ಪು : 9 ನ್ಯಾಯಾಧೀಶರ ಸುಪ್ರೀಂ ಕೋರ್ಟ್‌ ಪೀಠದ ಮುಂದೆ ಕೇಂದ್ರ ಸರ್ಕಾರ ಹೇಳಿಕೆ-ವರದಿ

ಶಬರಿಮಲೆ ಪ್ರಕರಣದ ವಿಚಾರಣೆಯ ಸಂದರ್ಭದಲ್ಲಿ, ಎಲ್ಲಾ ವಯಸ್ಸಿನ ಮಹಿಳೆಯರಿಗೆ ಶಬರಿಮಲೆ ದೇವಸ್ಥಾನ ಪ್ರವೇಶಿಸಲು ಅನುಮತಿ ನೀಡಿದ 2018ರ ತೀರ್ಪು ತಪ್ಪಾಗಿದೆ ಮತ್ತು ಅದನ್ನು ತಪ್ಪು ಕಾನೂನು ಎಂದು ಘೋಷಿಸಲು ಅರ್ಹವಾಗಿದೆ ಎಂಬುವುದಾಗಿ ಕೇಂದ್ರ...

ಕೇರಳದಲ್ಲಿ ಬಿಜೆಪಿ ಅಭ್ಯರ್ಥಿಯಿಂದ ‘ಲವ್ ಜಿಹಾದ್’ ಹೇಳಿಕೆ; ಜಿಲ್ಲಾಧಿಕಾರಿಯಿಂದ ವರದಿ ಕೇಳಿದ ಚುನಾವಣಾ ಆಯೋಗ

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಎಡ ಪ್ರಜಾಸತ್ತಾತ್ಮಕ ರಂಗ ಅಥವಾ ಯುನೈಟೆಡ್ ಪ್ರಜಾಸತ್ತಾತ್ಮಕ ರಂಗದ ಗೆಲುವು ರಾಜ್ಯದಲ್ಲಿ "ಲವ್ ಜಿಹಾದ್" ಘಟನೆಗಳಿಗೆ ಕಾರಣವಾಗುತ್ತದೆ ಎಂದು ಬಿಜೆಪಿ ಅಭ್ಯರ್ಥಿ ಪಿ ಕೆ ಕೃಷ್ಣದಾಸ್ ನೀಡಿದ ಹೇಳಿಕೆಯ...