Homeಕರ್ನಾಟಕಮಂಗಳೂರು: 'ಶೂದ್ರ ವರ್ಗದವ ನಮ್ಮನ್ನು ಆಳಲು ಹೊರಟರೆ, ಬಂಟರು ಸಹಿಸುವುದಕ್ಕೆ ಸಾಧ್ಯವಿದೆಯೇ?': ಬಿಜೆಪಿಗೆ ಮತ ಹಾಕುವಂತೆ...

ಮಂಗಳೂರು: ‘ಶೂದ್ರ ವರ್ಗದವ ನಮ್ಮನ್ನು ಆಳಲು ಹೊರಟರೆ, ಬಂಟರು ಸಹಿಸುವುದಕ್ಕೆ ಸಾಧ್ಯವಿದೆಯೇ?’: ಬಿಜೆಪಿಗೆ ಮತ ಹಾಕುವಂತೆ ಆಗ್ರಹಿಸಿದ ‘ಕರಪತ್ರ’!

- Advertisement -
- Advertisement -

ಲೋಕಸಭೆ ಚುನಾವಣೆ ಹಿನ್ನೆಲೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮತದಾನಕ್ಕೆ 24 ಗಂಟೆಗಳು ಮಾತ್ರ ಬಾಕಿ ಉಳಿದಿದೆ. ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಬಂಟ ಸಮುದಾಯದ  ಕ್ಯಾಪ್ಟನ್ ಬ್ರಿಜೇಶ್ ಚೌಟ ಮತ್ತು ಕಾಂಗ್ರೆಸ್‌ ಅಭ್ಯರ್ಥಿಯಾಗಿ ಬಿಲ್ಲವ ಸಮುದಾಯದ ಪದ್ಮರಾಜ್ ಪೂಜಾರಿ ಕಣದಲ್ಲಿದ್ದಾರೆ. ಹಿಂದುತ್ವದ ಮತ್ತು ಬಿಜೆಪಿಯ ಭದ್ರಕೋಟೆ ಎನ್ನಲಾಗುತ್ತಿದ್ದ ಕರವಾಳಿಯ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಈ ಬಾರಿ ಬಿಜೆಪಿಗೆ ದೊಡ್ಡ ಸವಾಲು ಎದುರಾಗಿದೆ. ಬಂಟ ಸಮುದಾಯದ ನಳಿನ್‌ ಕುಮಾರ್‌ ಕಟೀಲ್‌ ವಿರುದ್ಧ ಪಕ್ಷದೊಳಗಿದ್ದ ಅಸಮಾಧಾನದಿಂದ ಈ ಬಾರಿ ಅದೇ ಸಮುದಾಯಕ್ಕೆ ಸೇರಿದ ಕ್ಯಾಪ್ಟನ್ ಬ್ರಿಜೇಶ್ ಚೌಟಗೆ ಬಿಜೆಪಿ ಟಿಕೆಟ್‌ ನೀಡಲಾಗಿತ್ತು. ಆದರೆ ಕಾಂಗ್ರೆಸ್‌ ಬಿಲ್ಲವ ಸಮುದಾಯದ ಪದ್ಮರಾಜ್ ಪೂಜಾರಿ ಅವರಿಗೆ ಟಿಕೆಟ್‌ ನೀಡಿದೆ. ಇದರಿಂದಾಗಿ ಕ್ಷೇತ್ರದಲ್ಲಿ ನಿರ್ಣಾಯಕ ಮತದಾರರ ಸಂಖ್ಯೆಯನ್ನು ಹೊಂದಿರುವ ಬಿಲ್ಲವರ ಮತಗಳು ಈ ಬಾರಿ ಪದ್ಮರಾಜ್ ಪೂಜಾರಿ ಪಾಲಾಗುವ ಸಾಧ್ಯತೆ ಇದ್ದು, ಬಿಜೆಪಿಗೆ ದೊಡ್ಡ ಸವಾಲಾಗಿದೆ. ಇದರ ಬೆನ್ನಲ್ಲಿ ಬಂಟ ಬ್ರಿಗೇಡ್’ ಹೆಸರಲ್ಲಿ ಕರಪತ್ರವೊಂದು ಸೋಷಿಯಲ್ ಮೀಡಿಯಾಗಳಲ್ಲಿ ಹರಿದಾಡುತ್ತಿದ್ದು, ‘ನಮ್ಮ ಸಮುದಾಯದ ಬ್ರಿಜೇಶ್‌ ಚೌಟರನ್ನು ಗೆಲ್ಲಿಸಲು ಬಂಟ ಮತದಾರರಿಗೆ ಮನವಿ’ ಎಂಬ ಶೀರ್ಷಿಕೆಯ ಕರಪತ್ರದಲ್ಲಿ ‘ಶೂದ್ರ ವರ್ಗದ ಜನರು ನಮ್ಮನ್ನು ಆಳಲು ಹೊರಟರೆ ಅದನ್ನು ಸ್ವಾಭಿಮಾನಿಗಳಾದ ನಾವು ಬಂಟರು ಸಹಿಸುವುದಕ್ಕೆ ಸಾಧ್ಯವಿದೆಯೇ?’ಎಂದು ಉಲ್ಲೇಖಿಸಲಾಗಿದೆ. ಈ ಕರಪತ್ರ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ.

ಈ ಕರಪತ್ರದಲ್ಲಿ, ಮತವನ್ನು ದುಡ್ಡು ನೀಡಿ ಖರೀದಿಸುವ ಆವಕಾಶ ಸಿಕ್ಕರೆ, ಮತದಾರರಿಗೆ ಆಮಿಷ ಒಡ್ಡಿಯಾದರೂ ಕಾಂಗ್ರೆಸ್ಸಿಗೆ ಬೀಳುವ ಮತವನ್ನು ಬಿಜೆಪಿಗೆ ಹಾಕಿಸುವ ಕೆಲಸ ಮಾಡುವ ಮೂಲಕ ನಮ್ಮ ಸಮಾಜಕ್ಕೆ ಶಕ್ತಿ ತುಂಬುವ ಕೆಲಸವನ್ನು ಮಾಡಬೇಕು ಎಂದು ಉಲ್ಲೇಖಿಸಲಾಗಿದೆ.

ಒಂದು ಕಾಲದಲ್ಲಿ ಗರಡಿಗಳಿಗೆ, ದೇವಸ್ಥಾನಗಳಿಗೆ ಪ್ರವೇಶವೇ ಇಲ್ಲದ ಇಂತಹ ಶೂದ್ರ ಜಾತಿಯವರು ಜನಾರ್ದನ ಪೂಜಾರಿಗೆ ಅಧಿಕಾರ ಸಿಕ್ಕ ಮೇಲೆ ನಮ್ಮ ಗರಡಿಗಳ ಮೇಲೆ, ನಮ್ಮ ದೇವಸ್ಥಾನಗಳ ಮೇಲೆ ಯಾವ ರೀತಿಯ ಪಾರಮ್ಯ ಮೆರೆದು ದೇವಸ್ಥಾನಗಳಿಗೆ ಪ್ರವೇಶವನ್ನು ಗಿಟ್ಟಿಸಿಕೊಂಡಿದ್ದಾರೆ ಎನ್ನುವ ಬಗ್ಗೆ ಪೀಳಿಗೆಗೆ ತಿಳಿಸುವ ಕೆಲಸವನ್ನು ಮಾಡಬೇಕಾಗಿದೆ ಎಂದು ಕೂಡ ಉಲ್ಲೇಖಿಸಲಾಗಿದೆ.

ಕರಪತ್ರದ ವಿಶೇಷ ಸೂಚನೆಯಲ್ಲಿ ನಮ್ಮ ಸಮುದಾಯಕ್ಕೆ ಮಾತ್ರ ನೀಡಬೇಕು ಎಂದು ಉಲ್ಲೇಖಿಸಲಾಗಿದ್ದು, ಕೊನೆಗೆ ಅಧ್ಯಕ್ಷರು, ಪದಾಧಿಕಾರಿಗಳು ಮತ್ತು ಸರ್ವಸದಸ್ಯರು ಬಂಟ ಬ್ರಿಗೇಡ್‌ ದಕ್ಷಿಣ ಕನ್ನಡ ಮಂಗಳೂರು ಎಂದು ಬರೆಯಲಾಗಿದೆ.

ವೈರಲ್‌ ಆದ ಕರಪತ್ರದಲ್ಲಿ ಏನೇನಿದೆ?

ಪ್ರೀತಿಯ ಸ್ವಜಾತಿ ಬಾಂಧವರೇ, ಚುನಾವಣೆಯ ಅಂತಿಮ ಘಟ್ಟದಲ್ಲಿ ನಾವಿದ್ದೇವೆ. ನಮ್ಮ ಸಮಾಜಕ್ಕೆ ಸೇರಿದ ಬ್ರಿಜೇಶ್ ಚೌಟರವರು ಭಾರತೀಯ ಜನತಾ ಪಕ್ಷದಿಂದ ಅಭ್ಯರ್ಥಿಯಾಗಿ ಕಾಂಗ್ರೆಸ್ ಪಕ್ಷಕ್ಕೆ ಎದುರಾಳಿಯಾಗಿದ್ದಾರೆ. ಒಂದು ಕಾಲದಲ್ಲಿ ಬಂಟ ನಾಯಕರನ್ನು ಮೂಲೆಗೆ ಸರಿಸಿ ಬಿಲ್ಲವರು ಮೆರೆದಾಡಿದ್ದ ಕ್ಷೇತ್ರ ನಂತರದ ದಿನದಲ್ಲಿ ನಮ್ಮ ಬಂಟರ ತೆಕ್ಕೆಗೆ ಬಂದಿದೆ. ನಳಿನ್ ಕುಮಾರ್ ಕಟೀಲ್ ಸತತ ಮೂರು ಬಾರಿ ಗೆಲ್ಲುವ ಮೂಲಕ ನಾವು ನಮ್ಮ ಒಗ್ಗಟ್ಟನ್ನು ಸಾಬೀತುಪಡಿಸಿದ್ದೇವೆ.

ಆದರೆ ಒಂದು ಕಾಲದಲ್ಲಿ ನಮ್ಮ ಒಕ್ಕಲಿನಲ್ಲಿದ್ದ ಬಿಲ್ಲವರು, ಜನಾರ್ದನ ಪೂಜಾರಿಯವರು ಸಂಸದರಾದ ನಂತರ ದೊಡ್ಡ ದೊಡ್ಡ ಉದ್ಯಮದಲ್ಲಿ ತೊಡಗಿಸಿಕೊಂಡು ಊರಿಗೆ, ಜಿಲ್ಲೆಗೆ, ಪರ ಊರಿನಲ್ಲಿ ಪ್ರಭಾವಿಯಾಗಿದ್ದ ನಮ್ಮ ಸಮಾಜದವರ ಪ್ರಭಾವವನ್ನು ತಗ್ಗಿಸಿ ಮೆರೆದಾಡತೊಡಗಿದ್ದರು. ಇಂತಹ ಶೂದ್ರ ವರ್ಗದ ಜನರು ನಮ್ಮನ್ನು ಆಳಲು ಹೊರಟರೆ ಅದನ್ನು ಸ್ವಾಭಿಮಾನಿಗಳಾದ ನಾವು ಬಂಟರು ಸಹಿಸುವುದಕ್ಕೆ ಸಾಧ್ಯವಿದೆಯೇ? ಎನ್ನುವ ಪ್ರಶ್ನೆ ನಮ್ಮನ್ನು ಕಾಡುತ್ತಿದೆ. ಸೇಂದಿ ತೆಗೆದು, ಕೂಲಿ ನಾಲಿ ಮಾಡಿಕೊಂಡು ಬದುಕುತ್ತಿದ್ದವರು. ಇಂದು ನಮ್ಮ ಮೇಲೆ ಅಧಿಕಾರವನ್ನು ಚಲಾಯಿಸಲು ಹೊರಟರೆ ಅವರ ಕೈಕೆಳಗೆ ಬಾಳುವುದಕ್ಕೆ ನಮಗೆ ಸಾಧ್ಯವಿದೆಯೇ ಎನ್ನುವುದನ್ನು ಸ್ವಾಭಿಮಾನಿಗಳಾದ ನಾವು ಆತ್ಮವಿಮರ್ಶೆ ಮಾಡಿಕೊಳ್ಳಬೇಕಾಗಿದೆ. ಜನಾರ್ದನ ಪೂಜಾರಿಯ ನಂತರ ಮತ್ತೊಮ್ಮೆ ಅವರ ಶಿಷ್ಯನಿಗೆ ಕಾಂಗ್ರೆಸ್ ಪಕ್ಷ ಟಿಕೆಟ್ ನೀಡುವ ಮೂಲಕ ನಮ್ಮ ಬಂಟ ಸಮಾಜಕ್ಕೆ ಸವಾಲನ್ನು ಎಸೆದಿದೆ. ಈ ಸವಾಲನ್ನು ನಾವು ಸ್ವೀಕರಿಸುವ ಮೂಲಕ ನಮ್ಮ ಸಮಾಜಕ್ಕೆ ಸೇರಿದ ಬ್ರಿಜೇಶ್ ಚೌಟರನ್ನು ಲಕ್ಷ ಲಕ್ಷ ಬಹುಮತದಿಂದ ಗೆಲ್ಲಿಸುವುದಕ್ಕೆ ರಾತ್ರಿ ಹಗಲೆನ್ನದೆ ದುಡಿಯಬೇಕಾಗಿದೆ

ಒಂದು ವೇಳೆ ಶೂದ್ರ ವರ್ಗಕ್ಕೆ ಸೇರಿದವ ಗೆದ್ದು ಬಂದರೆ ಮುಂದಿನ ದಿನದಲ್ಲಿ ಇತರ ಶೂದ್ರ ವರ್ಗಕ್ಕೆ ಸೇರಿದವರು ಗೌಡರು, ಕುಲಾಲ್, ಕೊಟ್ಟಾರಿ, ಗಾಣಿಗ, ಭಂಡಾರಿ, ನಾಯ್ಕ, ಎಸ್ಸಿ-ಎಸ್ಟಿಗಳು ಒಗ್ಗಟ್ಟಾಗಿ ನಮ್ಮನ್ನು ಆಳಲು ಹೊರಟರೆ, ಬೇರೆ ಬೇರೆ ಚುನಾವಣೆಗಳಲ್ಲಿ ಸ್ಪರ್ಧಿಸಿ ನಮ್ಮವರನ್ನು ಮೂಲೆಗುಂಪು ಮಾಡಿದರೆ ಅದನ್ನು ನಮಗೆ ಸಹಿಸುವುದಕ್ಕೆ ಸಾಧ್ಯವಿದೆಯೇ? ಊರಿಗೆ ಪಟೇಲರಾಗಿ ವಿವಿಧ ಸ್ಥರಗಳಲ್ಲಿ ಜನಪ್ರತಿನಿಧಿಗಳಾಗಿ ಮೆರೆದಿದ್ದ ನಮ್ಮ ಸಮಾಜ ಇಂತಹ ಸಮಾಜದ ಶೂದ್ರರ ಮುಂದೆ ಕೈಕಟ್ಟಿಕೊಂಡು ನಿಲ್ಲಬೇಕೆ?

ಒಂದು ಕಾಲದಲ್ಲಿ ಗರಡಿಗಳಿಗೆ, ದೇವಸ್ಥಾನಗಳಿಗೆ ಪ್ರವೇಶವೇ ಇಲ್ಲದ ಇಂತಹ ಶೂದ್ರ ಜಾತಿಯವರು ಜನಾರ್ದನ ಪೂಜಾರಿಗೆ ಅಧಿಕಾರ ಸಿಕ್ಕ ಮೇಲೆ ನಮ್ಮ ಗರಡಿಗಳ ಮೇಲೆ, ನಮ್ಮ ದೇವಸ್ಥಾನಗಳ ಮೇಲೆ ಯಾವ ರೀತಿಯ ಪಾರಮ್ಯ ಮೆರೆದು ದೇವಸ್ಥಾನಗಳಿಗೆ ಪ್ರವೇಶವನ್ನು ಗಿಟ್ಟಿಸಿಕೊಂಡಿದ್ದಾರೆ ಎನ್ನುವ ಸತ್ಯವನ್ನು ನಾವು ನಮ್ಮ ಮುಂದಿನ ಪೀಳಿಗೆಗೆ ತಿಳಿಸುವ ಕೆಲಸವನ್ನು ಮಾಡಬೇಕಾಗಿದೆ. ಜನಾರ್ದನ ಪೂಜಾರಿ ಗೆದ್ದ ನಂತರದ ಪರಿಸ್ಥಿತಿ ಅವರ ಶಿಷ್ಯ ಗೆದ್ದ ನಂತರ ನಮಗೆ ಬಾರದಿರಲಿ ಎನ್ನುವುದಾದರೆ ನಮ್ಮ ಸಮಾಜದ ಸೈನಿಕ ಬ್ರಿಜೇಶ್ ಚೌಟ ಗೆಲ್ಲಲೇಬೇಕು.

ಸತ್ಯಜಿತ್ ಸುರತ್ಕಲ್, ಬಿರುವೆರ್ ಕುಡ್ಲದ ಉದಯ ಪೂಜಾರಿ ಬಲ್ಲಾಲ್ ಭಾಗ್ ಇಂತಹವರು ವಿವಿಧ ಸಂಘಟನೆಗಳನ್ನು ಕಟ್ಟಿಕೊಂಡು ನಮ್ಮವರಿಗೆ ಯಾವ ರೀತಿಯಲ್ಲಿ ಮಗ್ಗುಲ ಮುಳ್ಳಾಗಿದ್ದಾರೆ ಎನ್ನುವುದನ್ನು ನಾವು ಮರೆಯಲಾಗುತ್ತದೆಯೇ?

ನಮ್ಮ ಸಮಾಜದ ಒಬ್ಬ ಯುವಕನನ್ನು ಗೆಲ್ಲಿಸುವುದಕ್ಕೆ ಬೇರೆ ಬೇರೆ ರೀತಿಯಲ್ಲಿ ನಮ್ಮ ಸಮಾಜದ ಹಿರಿಯರ ಸೂಚನೆಯಂತೆ ಕೆಲಸ ಮಾಡಲಾಗಿದೆ. ನಮ್ಮ ಅಭ್ಯರ್ಥಿಯಾದ ಚೌಟರಿಗೆ ದೊಡ್ಡ ಮೊತ್ತದ ಹಣದ ನೆರವನ್ನು ಕೂಡ ನೀಡಲಾಗಿದೆ. ಇದು ಸಾಲದು. ನಮ್ಮ ಕೃಷಿ ಕಾರ್ಯದಲ್ಲಿ, ನಮ್ಮ ಮನೆಯ ಕೂಲಿ ಕೆಲಸದಲ್ಲಿ, ನಮ್ಮ ಉದ್ಯಮಗಳಲ್ಲಿ, ನಮ್ಮಲ್ಲಿ ಒಕ್ಕಲು ಇರುವವರನ್ನು ನಮ್ಮ ಪ್ರಭಾವವನ್ನು ಬಳಸಿಕೊಂಡು ಚೌಟರಿಗೆ ಮತದಾನ ಮಾಡಿಸುವ ದೊಡ್ಡ ಜವಾಬ್ದಾರಿಯನ್ನು ನಮ್ಮ ಸಮಾಜದವರು ನಿರ್ವಹಣೆ ಮಾಡಿ, ಶೂದ್ರನೊಬ್ಬ ನಮ್ಮನ್ನು ಆಳದಂತೆ ಎಚ್ಚರಿಕೆಯ ಹೆಜ್ಜೆ ಇಡಬೇಕಾಗಿದೆ.

ನಿಮ್ಮ ವಾರ್ಡ್, ಗ್ರಾಮ ವ್ಯಾಪ್ತಿಯಲ್ಲಿ ಮತವನ್ನು ದುಡ್ಡು ನೀಡಿ ಖರೀದಿಸುವ ಆವಕಾಶ ಸಿಕ್ಕರೆ, ಮತದಾರರಿಗೆ ಆಮಿಷ ಒಡ್ಡಿಯಾದರೂ ಕಾಂಗ್ರೆಸ್ಸಿಗೆ ಬೀಳುವ ಮತವನ್ನು ಬಿಜೆಪಿಗೆ ಹಾಕಿಸುವ ಕೆಲಸ ಮಾಡುವ ಮೂಲಕ ನಮ್ಮ ಸಮಾಜಕ್ಕೆ ಶಕ್ತಿ ತುಂಬುವ ಕೆಲಸವನ್ನು ನಾವೆಲ್ಲರೂ ಮಾಡಬೇಕಾಗಿ ತಮ್ಮಲ್ಲಿ ಕಳಕಳಿಯ ವಿನಂತಿಯನ್ನು ಮಾಡುತ್ತಿದ್ದೇವೆ. ಸಮಾಜಕ್ಕೆ ಶಕ್ತಿ ತುಂಬುವ ಕೆಲಸವನ್ನು ನಾವೆಲ್ಲರೂ ಮಾಡಬೇಕಾಗಿ ತಮ್ಮಲ್ಲಿ ಕಳಕಳಿಯ ವಿನಂತಿಯನ್ನು ಮಾಡುತ್ತಿದ್ದೇವೆ ಎಂದು ಕರಪತ್ರದಲ್ಲಿ ಬರೆಯಲಾಗಿದೆ.

ಇದನ್ನು ಓದಿ: 2023ರಲ್ಲಿ ತೀವ್ರ ಹಸಿವಿನಿಂದ ತತ್ತರಿಸಿದ 282 ಮಿಲಿಯನ್ ಜನರು: ಆಹಾರದ ಅಭಾವಕ್ಕೆ ವಿಶ್ವಸಂಸ್ಥೆ ಉಲ್ಲೇಖಿಸಿದ ಕಾರಣವೇನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. Nange yaw rithiya desha bhaktha pradani sikkidru… Namma e silly buddi bidadidre… Uddara illa…vnammolage heege ide… Innu Muslim navru yenadru madidre thappu helthiri… Yentha cheap mentality marre Karapatra maadiddu…yentha raajamanetganalla aalvike yella helike shoodra varga yella helike…just prabapranhithvakke bembala needi… Olle nayakannu gouravisi… Adu bittu shoodra bhanta yen nimdu.. useless things

LEAVE A REPLY

Please enter your comment!
Please enter your name here

- Advertisment -

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....