Homeಕರ್ನಾಟಕಮೀಸಲಾತಿ ಹೇಳಿಕೆ: ಆಧಾರ ಸಹಿತ ಸಾಬೀತುಪಡಿಸುವಂತೆ ಪ್ರಧಾನಿ ಮೋದಿಗೆ ಸಿಎಂ ಸಿದ್ದರಾಮಯ್ಯ ಸವಾಲು

ಮೀಸಲಾತಿ ಹೇಳಿಕೆ: ಆಧಾರ ಸಹಿತ ಸಾಬೀತುಪಡಿಸುವಂತೆ ಪ್ರಧಾನಿ ಮೋದಿಗೆ ಸಿಎಂ ಸಿದ್ದರಾಮಯ್ಯ ಸವಾಲು

- Advertisement -
- Advertisement -

ಹಿಂದುಳಿದ ಜಾತಿ ಮತ್ತು ದಲಿತರ ಮೀಸಲಾತಿಯನ್ನು ಕಿತ್ತು ಮುಸ್ಲಿಮರಿಗೆ ನೀಡಲು ಕಾಂಗ್ರೆಸ್ ಹೊರಟಿದೆ ಎಂಬ ಹೇಳಿಕೆಯನ್ನು ಆಧಾರ ಸಹಿತ ಸಾಬೀತುಪಡಿಸಬೇಕು. ಇಲ್ಲದಿದ್ದರೆ ದೇಶದ ಜನರ ಕ್ಷಮೆ ಕೇಳಬೇಕು ಎಂದು ಪ್ರಧಾನಿ ನರೇಂದ್ರ ಮೋದಿಯವರಿಗೆ ಸಿಎಂ ಸಿದ್ದರಾಮಯ್ಯ ಸವಾಲು ಹಾಕಿದ್ದಾರೆ.

ಪ್ರಧಾನಿ ಹೇಳಿಕೆಗೆ ಎಕ್ಸ್‌ನಲ್ಲಿ ಪ್ರತಿಕ್ರಿಯೆ ನೀಡಿರುವ ಸಿಎಂ, ಹಿಂದುಳಿದ ಜಾತಿ ಮತ್ತು ದಲಿತರ ಮೀಸಲಾತಿಯನ್ನು ಕಿತ್ತು ಮುಸ್ಲಿಮರಿಗೆ ನೀಡಲು ಕಾಂಗ್ರೆಸ್ ಹೊರಟಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳುತ್ತಿರುವ ಹಸಿ ಸುಳ್ಳು. ಇದು ಅವರ ಅಜ್ಞಾನವನ್ನಷ್ಟೇ ಅಲ್ಲ, ಸೋಲಿನ ಭೀತಿಯಲ್ಲಿರುವ ಅವರ ಹತಾಶೆಯನ್ನೂ ಸೂಚಿಸುತ್ತದೆ. ದೇಶದಲ್ಲಿ ಇಲ್ಲಿಯವರೆಗಿನ ಯಾರೂ ಕೂಡಾ ಪ್ರಧಾನಿ ಪಟ್ಟವನ್ನು ಇಂತಹ ಕೀಳು ಮಟ್ಟಕ್ಕೆ ಇಳಿಸಿಲ್ಲ ಎಂದಿದ್ದಾರೆ.

ಜವಾಬ್ದಾರಿ ಸ್ಥಾನದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಅವರು ಒಂದೋ ಈ ಬೇಜವಾಬ್ದಾರಿತನದ ಆರೋಪವನ್ನು ಆಧಾರಗಳನ್ನು ನೀಡಿ ಸಾಬೀತುಪಡಿಸಬೇಕು. ಇಲ್ಲದೆ ಇದ್ದರೆ ದೇಶದ ಜನರ ಕ್ಷಮೆ ಕೇಳಬೇಕು ಎಂದು ಸಿಎಂ ಆಗ್ರಹಿಸಿದ್ದಾರೆ.

ಹಿಂದುಳಿದ ಜಾತಿ ಮತ್ತು ಎಸ್‌ಸಿ / ಎಸ್‌ಟಿ ಮೀಸಲಾತಿಯನ್ನು ಕಿತ್ತು ಮುಸ್ಲಿಮರಿಗೆ ನೀಡುವುದಾಗಿ ಕಾಂಗ್ರೆಸ್ ಎಲ್ಲಿ ಹೇಳಿದೆ? ಯಾವ ರಾಜ್ಯದ ಕಾಂಗ್ರೆಸ್ ಸರ್ಕಾರ ಮಾಡಿದೆ? ಅದಕ್ಕೆ ಸಂಬಂಧಿಸಿದ ಸರ್ಕಾರಿ ಆದೇಶದ ಪತ್ರ ಇದೆಯೇ? ಈ ಎಲ್ಲ ವಿವರವನ್ನು ಪ್ರಧಾನಿಯವರು ದೇಶದ ಮುಂದೆ ಇಡಬೇಕು ಎಂದು ಸಿಎಂ ಒತ್ತಾಯಿಸಿದ್ದಾರೆ.

ಸಂವಿಧಾನದತ್ತವಾದ ಮೀಸಲಾತಿಯನ್ನು ಮನ ಬಂದಂತೆ ಬದಲಾವಣೆ ಮಾಡಲು ಸಾಧ್ಯ ಇಲ್ಲ. ಸಾಮಾಜಿಕ ಮತ್ತು ಆರ್ಥಿಕ ಸಮೀಕ್ಷೆಯ ವರದಿ ಆಧಾರದಲ್ಲಿ ಮಾತ್ರ ಮೀಸಲಾತಿಯ ಪರಿಷ್ಕರಣೆ ಸಾಧ್ಯ. ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಮೀಸಲಾತಿಯನ್ನು ಪರಿಷ್ಕರಿಸುವ ಅಧಿಕಾರ ರಾಜ್ಯ ಸರ್ಕಾರದ ಕೈಯಲ್ಲಿಯೂ ಇಲ್ಲ. ಇದಕ್ಕಾಗಿ ಸಂಸತ್‌ನ ಉಭಯ ಸದನಗಳ ಒಪ್ಪಿಗೆಯೊಂದಿಗೆ ಸಂವಿಧಾನ ತಿದ್ದುಪಡಿ ಮಾಡಬೇಕಾಗುತ್ತದೆ. ಇಂತಹದ್ದೊಂದು ಕನಿಷ್ಠ ಜ್ಞಾನ ಒಬ್ಬ ಪ್ರಧಾನಮಂತ್ರಿಗೆ ಇಲ್ಲದಿರುವುದು ಈ ದೇಶದ ದುರಂತವೇ ಸರಿ ಎಂದಿದ್ದಾರೆ.

ಕರ್ನಾಟಕದಲ್ಲಿ ರಾಜ್ಯ ಸರ್ಕಾರ ಸ್ಥಾಪಿಸಿದ ಚಿನ್ನಪ್ಪ ರೆಡ್ಡಿ ಆಯೋಗದ ವರದಿ ಆಧಾರದಲ್ಲಿ ಸಾಮಾಜಿಕ ಮತ್ತು ಆರ್ಥಿಕ ಸ್ಥಿತಿಗತಿಯನ್ನು ಗಮನಕ್ಕೆ ತೆಗೆದುಕೊಂಡು ಮುಸ್ಲಿಮರನ್ನು ಹಿಂದುಳಿದ ಜಾತಿಗಳ 2ಬಿ ವರ್ಗಕ್ಕೆ ಸೇರಿಸಲಾಗಿರುವುದು ನಿಜ. ಕಳೆದ ಮೂರು ದಶಕಗಳಿಂದ ರಾಜ್ಯದಲ್ಲಿ ಈ ಮೀಸಲಾತಿ ಜಾರಿಯಲ್ಲಿದೆ. ಕೇಂದ್ರದಲ್ಲಿ ಹಿಂದೆ ಅಧಿಕಾರದಲ್ಲಿದ್ದ ಬಿಜೆಪಿ ಸರ್ಕಾರವಾಗಲಿ, ಕಳೆದ ಹತ್ತು ವರ್ಷಗಳಿಂದ ಅಧಿಕಾರದಲ್ಲಿರುವ ನರೇಂದ್ರ ಮೋದಿ ನೇತೃತ್ವದ ಸರ್ಕಾರವಾಗಲಿ ಇಲ್ಲಿಯ ವರೆಗೆ ಈ ಮೀಸಲಾತಿಯನ್ನು ಪ್ರಶ್ನಿಸಿಲ್ಲ. ಬಿಜೆಪಿಯೂ ಸೇರಿದಂತೆ ಯಾರೂ ಕೂಡಾ ಇದನ್ನು ನ್ಯಾಯಾಲಯದಲ್ಲೂ ಪ್ರಶ್ನಿಸಿಲ್ಲ ಎಂದು ಸಿಎಂ ವಿವರಿಸಿದ್ದಾರೆ.

ಕಳೆದ ವಿಧಾನಸಭಾ ಚುನಾವಣೆಯ ಪೂರ್ವದಲ್ಲಿ ಧರ್ಮದ ಆಧಾರದಲ್ಲಿ ಮತ ವಿಭಜನೆಯ ಏಕೈಕ ದುರುದ್ದೇಶದಿಂದ ಬಸವರಾಜ ಬೊಮ್ಮಾಯಿ ನೇತೃತ್ವದ ಸರ್ಕಾರ ಮೀಸಲಾತಿಯನ್ನು ಅಡ್ಡಾದಿಡ್ಡಿಯಾಗಿ ಪರಿಷ್ಕರಿಸಲು ಹೊರಟು ಸುಪ್ರೀಂ ಕೋರ್ಟಿನಿಂದ ಛೀಮಾರಿಗೆ ಗುರಿಯಾಗಿರುವುದನ್ನು ಪ್ರಧಾನಿ ಮೋದಿಯವರು ಮರೆತಂತೆ ಕಾಣುತ್ತಿದೆ. ಮುಸ್ಲಿಮರಿಗೆ ಇದ್ದ ಶೇಕಡಾ ನಾಲ್ಕರ ಮೀಸಲಾತಿಯನ್ನು ರದ್ದು ಮಾಡಿ ಅದನ್ನು ಒಕ್ಕಲಿಗ ಮತ್ತು ಲಿಂಗಾಯತರಿಗೆ ಹಂಚಿರುವ ತೀರ್ಮಾನಕ್ಕೆ ಸುಪ್ರೀಂ ಕೋರ್ಟ್ ತಡೆ ನೀಡಿದ್ದು, ಮುಂದಿನ ಆದೇಶದ ವರೆಗೆ ಪರಿಷ್ಕೃತ ಮೀಸಲಾತಿಯನ್ನು ಜಾರಿಗೊಳಿಸಬಾರದೆಂದು ಆದೇಶ ನೀಡಿದೆ. ಇಂತಹದ್ದೊಂದು ಪ್ರಮುಖ ಮಾಹಿತಿ ಕೂಡಾ ಪ್ರಧಾನಮಂತ್ರಿಯವರ ಗಮನದಲ್ಲಿ ಇಲ್ಲದೆ ಇರುವುದು ವಿಷಾದನೀಯ ಎಂದು ಸಿಎಂ ಹೇಳಿದ್ದಾರೆ.

ರಾಜ್ಯದಲ್ಲಿ ಪರಿಶಿಷ್ಟ ಜಾತಿಯ ಮೀಸಲಾತಿಯನ್ನು ಹದಿನೈದರಿಂದ ಹದಿನೇಳಕ್ಕೆ ಮತ್ತು ಪರಿಶಿಷ್ಟ ಪಂಗಡಗಳ ಮೀಸಲಾತಿಯನ್ನು ಮೂರರಿಂದ ಐದಕ್ಕೆ ಹೆಚ್ಚಿಸುವುದಾಗಿ ಹಿಂದಿನ ಬಿಜೆಪಿ ಸರ್ಕಾರ ಘೋಷಿಸಿತ್ತು. ಈ ಬಗ್ಗೆ ಕೇಂದ್ರ ಬಿಜೆಪಿ ಸರ್ಕಾರಕ್ಕೂ ಪತ್ರ ಬರೆದಿರುವುದಾಗಿಯೂ ತಿಳಿಸಿತ್ತು. ಆದರೆ, ಇಂತಹ ಯಾವ ಪತ್ರ ಕೂಡಾ ರಾಜ್ಯದ ಬಿಜೆಪಿ ಸರ್ಕಾರದಿಂದ ತಮಗೆ ಬಂದಿಲ್ಲ. ಆ ರೀತಿಯ ಮೀಸಲಾತಿ ಏರಿಕೆಯ ಪ್ರಸ್ತಾವ ತಮ್ಮ ಪರಿಶೀಲನೆಯಲ್ಲಿ ಇಲ್ಲ ಎಂದು 2023ರ ಮಾರ್ಚ್ 14ರಂದು ಕೇಂದ್ರ ಸರ್ಕಾರದ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವ ನಾರಾಯಣ ಸ್ವಾಮಿ ಅವರೇ ಲೋಕಸಭೆಗೆ ತಿಳಿಸಿದ್ದರು. ಸರ್ಕಾರದ ಈ ನಿರ್ಧಾರ ಪ್ರಧಾನಿ ಮೋದಿಯವರ ಗಮನಕ್ಕೆ ಬಂದಿರಲಿಲ್ಲವೇ? ಎಂದು ಸಿಎಂ ಪ್ರಶ್ನಿಸಿದ್ದಾರೆ.

ಕಳೆದ ಹತ್ತು ವರ್ಷಗಳ ಕಾಲ ಆಡಳಿತ ನಡೆಸಿದರೂ, ತಮ್ಮ ಸಾಧನೆಯ ಬಗ್ಗೆ ಹೇಳಲು ಏನೂ ಇಲ್ಲದಿರುವುದು ಪ್ರಧಾನಿ ಮೋದಿಯವರು ಒಬ್ಬ ವಿಫಲ ಪ್ರಧಾನಿ ಎನ್ನುವುದನ್ನು ಸಾಬೀತುಪಡಿಸಿದೆ. ಒಬ್ಬ ಅನಕ್ಷರಸ್ಥ ಮಾತ್ರ ಈ ರೀತಿಯ ಆಧಾರ ರಹಿತ ಆರೋಪಗಳನ್ನು ಮಾಡಲು ಸಾಧ್ಯ. ಪ್ರಧಾನಿಯವರು ಸ್ವಯಂ ಪ್ರದರ್ಶಿಸುತ್ತಿರುವ ಅಜ್ಞಾನವನ್ನು ನೋಡಿದರೆ ಇವರ ಪದವಿ ಶಿಕ್ಷಣದ ಬಗೆಗಿನ ಸಂಶಯಗಳು ನಿಜ ಇರುವಂತೆ ಕಾಣಿಸುತ್ತದೆ ಎಂದು ಸಿಎಂ ಕಿಡಿಕಾರಿದ್ದಾರೆ.

ಮುಸ್ಲಿಂ ಮೀಸಲಾತಿಯನ್ನು ವಿರೋಧಿಸುತ್ತಿರುವ ಪ್ರಧಾನಿ ಮೋದಿಯವರು ಹೇಳಿಕೆ ಬಗ್ಗೆ ಮೋದಿಯವರ ಆಪ್ತಮಿತ್ರ ಮತ್ತು ಬಿಜೆಪಿಯ ಹೊಸ ಸಂಗಾತಿಯಾಗಿರುವ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ಪ್ರತಿಕ್ರಿಯೆ ಏನು ಎನ್ನುವುದನ್ನು ನಾನು ತಿಳಿದುಕೊಳ್ಳಬಯಸುತ್ತೇನೆ. ಕರ್ನಾಟಕದಲ್ಲಿ ಮುಸ್ಲಿಂ ಮೀಸಲಾತಿಯನ್ನು ಜಾರಿಗೊಳಿಸಿದ್ದೇ ನಾನು ಎಂದು ಕೊಚ್ಚಿಕೊಳ್ಳುತ್ತಿದ್ದ ದೇವೇಗೌಡರು, ಈಗಲೂ ತಮ್ಮ ನಿಲುವಿಗೆ ಬದ್ಧರಾಗಿದ್ದಾರಾ? ಇಲ್ಲವೇ ನರೇಂದ್ರ ಮೋದಿಯವರಿಗೆ ಶರಣಾಗಿ ತಮ್ಮ ಹಿಂದಿನ ನಿಲುವನ್ನು ಬದಲಾಯಿಸಿಕೊಳ್ಳುತ್ತರಾ? ಎಂಬುದನ್ನು ಅವರು ರಾಜ್ಯದ ಜನತೆಗೆ ಸ್ಪಷ್ಟಪಡಿಸಬೇಕು ಎಂದು ಸಿಎಂ ಹೇಳಿದ್ದಾರೆ.

ಇದನ್ನೂ ಓದಿ : ಮಂಗಳೂರು: ‘ಶೂದ್ರ ವರ್ಗದವ ನಮ್ಮನ್ನು ಆಳಲು ಹೊರಟರೆ, ಬಂಟರು ಸಹಿಸುವುದಕ್ಕೆ ಸಾಧ್ಯವಿದೆಯೇ?’: ಬಿಜೆಪಿಗೆ ಮತ ಹಾಕುವಂತೆ ಆಗ್ರಹಿಸಿದ ‘ಕರಪತ್ರ’!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರತಿಭಟನೆಗೆ ಹೋಗುವ ಮಹಿಳೆಯರು ಗ್ಯಾಂಗ್‌ರೇಪ್‌ ಆನಂದಿಸುತ್ತಾರೆ ಎಂದಿದ್ದ ಟಿ.ಜಿ. ಮೋಹನ್‌ದಾಸ್‌ ವಿರುದ್ಧ ಎಫ್‌ಐಆರ್‌ ದಾಖಲು

ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವವರ ಮೇಲೆ, ನನ್ನ ಕೈಯಲ್ಲಿ ಅಧಿಕಾರವಿದ್ದರೆ ಗುಂಡು ಹಾರಿಸುತ್ತಿದ್ದೆ ಎಂದು ಇತ್ತೀಚಿನ ಯೂಟ್ಯೂಬ್ ವೀಡಿಯೊದಲ್ಲಿ ಹೇಳಿಕೆ ನೀಡಿದ್ದ ಹಿಂದುತ್ವವಾದಿ ಚಿಂತಕ ಟಿ.ಜಿ. ಮೋಹನ್‌ದಾಸ್ ವಿರುದ್ಧ ತಿರುವನಂತಪುರಂ ಸಿಟಿ...

ಫ್ರಾನ್ಸ್‌ನಲ್ಲಿ ಕೆಲಸದ ಸಮಯ ಟ್ರ್ಯಾಕಿಂಗ್ ಲೋಪ: ಇನ್ಫೋಸಿಸ್‌ಗೆ ₹1.9 ಕೋಟಿ ದಂಡ: ನಾರಾಯಣಮೂರ್ತಿಯವರ ‘70 ಗಂಟೆ ಶ್ರಮ’ದ ಮಾದರಿ ಟ್ರೋಲ್

ಭಾರತೀಯ ಐಟಿ ರಫ್ತು ಸೇವಾ ರಂಗದ ಬೃಹತ್ ಸಂಸ್ಥೆಯಾದ ಇನ್ಫೋಸಿಸ್‌ಗೆ ಫ್ರಾನ್ಸ್‌ನಲ್ಲಿ ಹಿನ್ನಡೆಯಾಗಿದೆ. ಉದ್ಯೋಗಿಗಳ ಕೆಲಸದ ಸಮಯವನ್ನು ದಾಖಲಿಸುವ ವ್ಯವಸ್ಥೆಯಲ್ಲಿನ ನ್ಯೂನತೆಗಳು ಹಾಗೂ ಸ್ಥಳೀಯ ಕಾರ್ಮಿಕ ನಿಯಮಾವಳಿಗಳ ಪಾಲನೆಯಲ್ಲಿ ಕಂಡುಬಂದ ಲೋಪಗಳ ಹಿನ್ನೆಲೆಯಲ್ಲಿ...

ವೋಟರ್ ಐಡಿ, ಬ್ಯಾಂಕ್ ಪಾಸ್‌ಬುಕ್, ಆಧಾರ್, ಜಮೀನಿನ ಹಕ್ಕು ಪತ್ರ ಇದ್ದ ಮಾತ್ರಕ್ಕೆ ಭಾರತೀಯ ಪ್ರಜೆಯಾಗಲ್ಲ: ಕಲ್ಕತ್ತಾ ಹೈಕೋರ್ಟ್

ಆಧಾರ್ ಕಾರ್ಡ್, ಪಾನ್ ಕಾರ್ಡ್, ಮತದಾರರ ಗುರುತಿನ ಚೀಟಿ, ಬ್ಯಾಂಕ್ ಪಾಸ್‌ಬುಕ್ ಮತ್ತು ಪಿತ್ರಾರ್ಜಿತ ಜಮೀನಿನ ದಾಖಲೆಗಳು ಭಾರತೀಯ ಪೌರತ್ವವನ್ನು ನಿರೂಪಿಸಲು ಅಂತಿಮ ಅಥವಾ ನಿರ್ಣಾಯಕ ಪುರಾವೆಗಳಲ್ಲ ಎಂದು ಕಲ್ಕತ್ತಾ ಹೈಕೋರ್ಟ್ ಮಹತ್ವದ...

‘ನಿಮ್ಮ ಸಮಯ ಬಂದಿದೆ’: ಟೌನ್‌ಶಿಪ್ ಯೋಜನೆ ವಿರುದ್ಧದ ಪ್ರತಿಭಟನೆಗೆ 500 ದಿನ: ‘Gen-Z’ ಯುವಕರ ಬೆಂಬಲ ಕೋರಿದ ಬಿಡದಿ ರೈತರು

ಬೆಂಗಳೂರು: ಪ್ರಸ್ತಾವಿತ ಬಿಡದಿ ಟೌನ್‌ಶಿಪ್ ಯೋಜನೆ ವಿರುದ್ಧ ಕೃಷಿ ಭೂಮಿ ಉಳಿವಿಗಾಗಿ ನಡೆಯುತ್ತಿರುವ ರೈತರ ಸುದೀರ್ಘ ಹೋರಾಟವು ಇದೀಗ ಒಂದು ಪ್ರಮುಖ ಘಟ್ಟಕ್ಕೆ ಬಂದು ತಲುಪಿದೆ. ಭೂಸ್ವಾಧೀನದ ವಿರುದ್ಧ ಸತತವಾಗಿ ನಡೆಯುತ್ತಿರುವ ಈ...

ಕೊಡಗಿನ ಆದಿವಾಸಿ ಹಾಡಿಗಳಲ್ಲಿ ಎಸ್‌ಐಆರ್ ಅವ್ಯವಸ್ಥೆ : ಬಿಎಲ್‌ಒಗಳಿಗೆ ತರಬೇತಿಯ ಕೊರತೆ, ಇನ್ನೂ ತಲುಪದ ಗಣತಿ ಫಾರಂ

ಕರ್ನಾಟಕದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಬಹಳ ಯಶಸ್ವಿಯಾಗಿ ನಡೆಯುತ್ತಿದೆ, ಮತದಾರರಿಗೆ ಎಲ್ಲಾ ರೀತಿಯ ಸಹಾಯಗಳನ್ನು ಒದಗಿಸಲಾಗುತ್ತಿದೆ ಎಂದು ರಾಜ್ಯ ಮುಖ್ಯ ಚುನಾವಣಾ ಆಯುಕ್ತ ಅನ್ಬುಕುಮಾರ್ ಅವರು ಪದೇ...

SIR: ಉಡುಪಿಯಲ್ಲಿ ಕರ್ತವ್ಯನಿರತ BLO ಮೇಲೆ ಹಲ್ಲೆಗೆತ್ನಿಸಿದ ಮಾಜಿ ಪಂಚಾಯತ್ ಅಧ್ಯಕ್ಷ, FIR ದಾಖಲು

ಚುನಾವಣಾ ಮತದಾರರ ಪಟ್ಟಿ ಪರಿಷ್ಕರಣೆ (SIR) ಕರ್ತವ್ಯದಲ್ಲಿದ್ದ ಅಂಗನವಾಡಿ ಕಾರ್ಯಕರ್ತೆ ಹಾಗೂ ಬಿಎಲ್‌ಒ (BLO) ಮಹಿಳೆ ಮೇಲೆ ಕರ್ತವ್ಯಕ್ಕೆ ಅಡ್ಡಿಪಡಿಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿ, ಕೊಲೆ ಬೆದರಿಕೆ ಹಾಕಿದ ಗಂಭೀರ ಆರೋಪ ಉಡುಪಿ...

ಕೋಟ್ಯಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ NTA ಚೆಲ್ಲಾಟ: RTI ನಲ್ಲಿ ಬಯಲಾಯ್ತು NTA ಕರ್ಮಕಾಂಡ

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಎನ್ನುವ ಈ ಸರ್ಕಾರಿ ಸಂಸ್ಥೆಯ ಮೇಲೆ ಪ್ರತಿವರ್ಷ ಕೋಟ್ಯಂತರ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಕನಸುಗಳನ್ನು ಇಟ್ಟುಕೊಳ್ಳುತ್ತಾರೆ. 2018ರಲ್ಲಿ ಸ್ಥಾಪನೆಯಾದ ದಿನದಿಂದ ಇಲ್ಲಿಯವರೆಗೆ ಎನ್‌ಟಿಎ ಸುಮಾರು 270ಕ್ಕೂ ಹೆಚ್ಚು...

ಬಾಗಲಕೋಟೆ: ಪತಿಯಿಂದ 23 ವರ್ಷದ ಪತ್ನಿಯ ಕ್ರೂರ ಕೊಲೆ, ಪೋಷಕರಿಗೆ ವೀಡಿಯೊ ಕರೆ ಮಾಡಿ ಮಗಳ ಸಾವು-ಬದುಕಿನ ಹೋರಾಟ ತೋರಿಸಿದ ವಿಕೃತ ಪತಿ

ಬಾಗಲಕೋಟೆ: ಪತಿಯೋರ್ವ ತನ್ನ 23 ವರ್ಷದ ಪತ್ನಿಯ ಮೇಲೆ ವಿವಾಹೇತರ ಅನೈತಿಕ ಸಂಬಂಧದ ಶಂಕೆ ವ್ಯಕ್ತಪಡಿಸಿ, ಆಕೆಯ ಮೇಲೆ ಮರದ ದಿಮ್ಮಿಯಿಂದ ಕ್ರೂರವಾಗಿ ಹಲ್ಲೆ ನಡೆಸಿ, ತದನಂತರ ನೇಣಿಗೆ ಬಿಗಿದು ಅತ್ಯಂತ ಅಮಾನವೀಯವಾಗಿ...

ಕಾನೂನು-ಸುವ್ಯವಸ್ಥೆಗೆ ವಿದ್ಯಾರ್ಥಿಗಳು ಸಮಸ್ಯೆಯಾಗುತ್ತಾರೆ ಎಂದು ಪರಿಗಣಿಸಿದ್ದು ಏಕೆ: ಅಭಿಷೇಕ್ ಬ್ಯಾನರ್ಜಿ

ರಾಷ್ಟ್ರ ರಾಜಧಾನಿ ದೆಹಲಿ ಮತ್ತು ದೆಶದಾದ್ಯಂತ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಭಾರೀ ಪೊಲೀಸ್ ಬಲಪ್ರಯೋವನ್ನು ವಿಪಕ್ಷಗಳು ಇಂದು ಲೋಕಸಭೆಯಲ್ಲಿ ಖಂಡಿಸಿವೆ. ವಿದ್ಯಾರ್ಥಿಗಳ...

ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ದ ಮೈಸೂರಿನಲ್ಲಿ ದೂರು ದಾಖಲು

ಸಂವಿಧಾನಬದ್ಧ ಮೀಸಲಾತಿಯ ಕುರಿತು ಅತ್ಯಂತ ನಿಂದನಾತ್ಮಕ, ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ ಹೇಳಿಕೆ ನೀಡಿರುವ 'ಪಬ್ಲಿಕ್ ಟಿವಿ' ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮೈಸೂರಿನಲ್ಲಿ ಕಾನೂನು ಕ್ರಮಕ್ಕೆ ಆಗ್ರಹಿಸಿ ಪೊಲೀಸ್‌...