Homeಮುಖಪುಟತಮಿಳುನಾಡಿನ ಬಗ್ಗೆ ಸುಳ್ಳು ಸುದ್ದಿ ಹರಡಿ ಬಂಧಿಸಲ್ಪಟ್ಟಿದ್ದ ಯೂಟ್ಯೂಬರ್ ಕಶ್ಯಪ್ ಬಿಜೆಪಿಗೆ ಸೇರ್ಪಡೆ

ತಮಿಳುನಾಡಿನ ಬಗ್ಗೆ ಸುಳ್ಳು ಸುದ್ದಿ ಹರಡಿ ಬಂಧಿಸಲ್ಪಟ್ಟಿದ್ದ ಯೂಟ್ಯೂಬರ್ ಕಶ್ಯಪ್ ಬಿಜೆಪಿಗೆ ಸೇರ್ಪಡೆ

- Advertisement -
- Advertisement -

ಯೂಟ್ಯೂಬರ್ ಮನೀಶ್ ಕಶ್ಯಪ್ ಬಿಜೆಪಿ ಸಂಸದ ಮನೋಜ್ ತಿವಾರಿ ಸಮ್ಮುಖದಲ್ಲಿ ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ. ಬಿಹಾರ ಮೂಲದ ಯೂಟ್ಯೂಬರ್ ಕಶ್ಯಪ್ ಕಳೆದ ವರ್ಷ ನಕಲಿ ಮಾಹಿತಿ ಹರಡಿದ್ದಕ್ಕಾಗಿ ಜೈಲು ಶಿಕ್ಷೆ ಅನುಭವಿಸಿ ಜಾಮೀನಿನ ಮೇಲೆ ಹೊರಗಿದ್ದಾರೆ.

ತಮಿಳುನಾಡಿನಲ್ಲಿ ಬಿಹಾರದ ಕಾರ್ಮಿಕರನ್ನು ಕೊಲ್ಲಲಾಗಿದೆ ಎಂದು ಸುಳ್ಳು ಸುದ್ದಿಯನ್ನು ಹಬ್ಬಿಸಿ ಯ್ಯೂಟ್ಯೂಬರ್‌ ಮನೀಶ್ ಕಶ್ಯಪ್ ಬಂಧಕ್ಕೊಳಪಟ್ಟಿದ್ದರು. ಈ ಕುರಿತು ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿರುವ ಪತ್ರಕರ್ತ ಮೊಹಮ್ಮದ್‌ ಝಬೈರ್‌, ಹಲವಾರು ಬಿಹಾರದ ವಲಸೆ ಕಾರ್ಮಿಕರು ತಮಿಳುನಾಡಿನಲ್ಲಿ ಕೊಲ್ಲಲ್ಪಟ್ಟಿದ್ದಾರೆ ಎಂದು ಹೇಳುವ ಮೂಲಕ ತಮಿಳುನಾಡಿನಲ್ಲಿ ಬಿಹಾರದ ವಲಸೆ ಕಾರ್ಮಿಕರಲ್ಲಿ ಸುರಕ್ಷತೆಯ ಭಯವನ್ನು ಹೆಚ್ಚಿಸಲು ಅತ್ಯುತ್ತಮ ಪ್ರಯತ್ನ ಮಾಡಿದ್ದ ಮನೀಶ್ ಕಶ್ಯಪ್ ನೆನಪಿದೆಯೇ? ಆತನನನ್ನು ಈ ಹಿಂದೆ ಅಪಾಯಕಾರಿ ತಪ್ಪು ಮಾಹಿತಿ ನೀಡಿದ್ದಕ್ಕೆ ಬಂಧಿಸಲಾಗಿತ್ತು. ಇದೀಗ ಅವರನ್ನು ತಮ್ಮ ಪಕ್ಷಕ್ಕೆ ಸೇರಿಸಿಕೊಂಡು ಬಿಜೆಪಿ ಸನ್ಮಾನಿಸಿದೆ. ತಪ್ಪು ಮಾಹಿತಿಯನ್ನು ಹಂಚಿಕೊಳ್ಳುವ ಪ್ರತಿಯೊಬ್ಬ ಪ್ರಭಾವಿಗಳಿಗೆ ಇದು ತುಂಬಾ ಉತ್ತೇಜನಕಾರಿಯಾಗಿದೆ ಎಂದು ಹೇಳಿದ್ದಾರೆ.

ಏನಿದು ಘಟನೆ?

ಮಾರ್ಚ್ 1ರಂದು ತಮಿಳುನಾಡಿನ ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್ ಅವರ ಹುಟ್ಟುಹಬ್ಬ. ಸ್ಟಾಲಿನ್ ಹುಟ್ಟುಹಬ್ಬಕ್ಕೆ ಶುಭ ಕೋರಲೆಂದು ಬಿಹಾರದ ಉಪಮುಖ್ಯಮಂತ್ರಿ ಹಾಗೂ ಆರ್‌ಜೆಡಿ ಪಕ್ಷದ ನಾಯಕ ತೇಜಸ್ವಿ ಯಾದವ್ ತಮಿಳುನಾಡಿಗೆ ಆಗಮಿಸಿದ್ದರು. ಅದೇ ದಿನ ಬಿಹಾರದ ಬಿಜೆಪಿ ಪಕ್ಷದ ಅಧಿಕೃತ ಟ್ವಿಟರ್ ಖಾತೆಯಲ್ಲಿ “ತಮಿಳುನಾಡಿನಲ್ಲಿ ಹಿಂದಿ ಮಾತನಾಡಿದ್ದಕ್ಕಾಗಿ 12 ಜನರನ್ನು ಒಂದೇ ಕೋಣೆಯಲ್ಲಿ ಕೂಡಿಹಾಕಿ ನೇಣು ಬಿಗಿದು ಕೊಲ್ಲಲಾಗಿದೆ” ಎಂದು ಒಂದು ವಿಡಿಯೋವನ್ನು ಹಂಚಿಕೊಳ್ಳಲಾಗಿತ್ತು. ಇದರ ಬೆನ್ನಿಗೆ “ಮನೀಶ್ ಕಶ್ಯಪ್”  ತನ್ನ ಯೂಟ್ಯೂಬ್ ಚಾನೆಲ್ ಮತ್ತು ಫೇಸ್ಬುಕ್ ಅಕೌಂಟ್‌ನಲ್ಲಿ, ’ತಮಿಳುನಾಡಿನಲ್ಲಿ ಬಿಹಾರದ ಕಾರ್ಮಿಕರನ್ನು ಕಂಡಕಂಡಲ್ಲಿ ಮಚ್ಚಿನಿಂದ ಕೊಚ್ಚಿ ಕೊಲ್ಲಲಾಗುತ್ತಿದೆ’ ಎಂದು ಸುದ್ದಿಯನ್ನು ಮಾಡಿದ್ದ. ಆತನ ವಿಡಿಯೋವನ್ನು 6 ಮಿಲಿಯನ್ ಜನ ವೀಕ್ಷಿಸಿದ್ದರು. ಬಿಹಾರದ ವಿಧಾನಸಭೆಯಲ್ಲೂ ಈ ವಿಚಾರವಾಗಿ ಭಾರಿ ಚರ್ಚೆಯಾಗಿತ್ತು. ಅಲ್ಲಿನ ವಿರೋಧ ಪಕ್ಷವಾದ ಬಿಜೆಪಿ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರ ರಾಜೀನಾಮೆಗೆ ಪಟ್ಟುಹಿಡಿದಿತ್ತು.

ವಿರೋಧ ಪಕ್ಷದ ನಾಯಕ ವಿಜಯ್ ಸಿನ್ಹ ಈ ಮನೀಶ್ ಕಶ್ಯಪ್ ಎಂಬ ವ್ಯಕ್ತಿಯ ಯೂಟ್ಯೂಬ್ ಚಾನೆಲ್‌ಗೆ ಸಂದರ್ಶನ ನೀಡಿ ತಮಿಳುನಾಡು ಮುಖ್ಯಮಂತ್ರಿ ಸ್ಟಾಲಿನ್ ಮತ್ತು ಅವರ ಹುಟ್ಟುಹಬ್ಬಕ್ಕೆ ಶುಭಕೋರಿದ್ದ ತೇಜಸ್ವಿ ಯಾದವ್ ಬಗ್ಗೆ ಅವಹೇಳನಕಾರಿಯಾದಂತಹ ಮಾತುಗಳನ್ನಾಡಿದ್ದರು. ಇಂತವರ ಸರ್ಕಾರ ಬಿಹಾರಕ್ಕೆ ಬೇಕೆ? ತೇಜಸ್ವಿ ಯಾದವ್ ಸ್ಟಾಲಿನ್‌ಗೆ ಕೇಕ್ ತಿನ್ನಿಸುವ ದಿನದಲ್ಲೇ ನಮ್ಮ ಬಿಹಾರಿಗಳು ಕೊಲೆಯಾಗುತ್ತಿದ್ದಾರೆ ಎಂದು ಜನರನ್ನು ಪ್ರಚೋದಿಸಿದ್ದರು.

ಇದಲ್ಲದೆ ಬಿಜೆಪಿ ಟ್ವಿಟರ್‌ನಲ್ಲಿ ಈ ವಿಡಿಯೋವನ್ನು ಹಂಚಿಕೊಂಡಿತ್ತು. ಈ ವಿಡಿಯೋ ವೈರಲ್ ಆಗಿದ್ದೆ ತಡ ಇಡೀ ದಿನ ಹಿಂದಿ ಮತ್ತು ಆಂಗ್ಲ ದೃಶ್ಯ ಮಾಧ್ಯಮಗಳು ತಮಿಳುನಾಡಿನ ವಿರುದ್ಧ ಸಾಲುಸಾಲು ವರದಿಗಳನ್ನು ಬಿತ್ತರಿಸಿದವು. ತಮಿಳುನಾಡಿನಲ್ಲಿ ಬಿಹಾರ ಮತ್ತು ಉತ್ತರಪ್ರದೇಶ ಸೇರಿದಂತೆ ಹಿಂದಿ ಭಾಷಿಕರಿಗೆ ರಕ್ಷಣೆ ಇಲ್ಲ, ಅಲ್ಲಿನ ಸರ್ಕಾರವೇ ತಮಿಳು ಉಗ್ರಗಾಮಿಗಳ ಬೆನ್ನಿಗೆ ನಿಂತಿದೆ ಎಂದು ವಿಷಕಾರಲು ಆರಂಭಿಸಿದವು. ಪರಿಣಾಮ ಪ್ರಕರಣದ ತನಿಖೆಗೆ ಸಿಎಂ ನಿತೀಶ್ ಕುಮಾರ್ ಒಂದು ತಂಡವನ್ನು ರಚಿಸಿ ತಮಿಳುನಾಡಿಗೂ ಕಳುಹಿಸಿದ್ದರು.

ಆದರೆ, ಘಟನೆಯ ಮರುದಿನವೇ ಫ್ಯಾಕ್ಟ್‌ಚೆಕ್ ಸಹ ಸಂಸ್ಥಾಪಕ ಮೊಹಮ್ಮದ್ ಜುಬೇರ್ ಇದು ಸುಳ್ಳು ಸುದ್ದಿ ಎಂದು ಕಂಡು ಹಿಡಿದಿದ್ದರು. ಈ ಹಲ್ಲೆ ತಮಿಳುನಾಡಿನಲ್ಲಿ ನಡೆದದ್ದಲ್ಲ. ಇದೊಂದು ಸುಳ್ಳು ಸುದ್ದಿಯಾಗಿದ್ದು, ತಮಿಳುನಾಡಿನಲ್ಲಿ ಯಾವುದೇ ಬಿಹಾರಿ ಕಾರ್ಮಿಕರ ಮೇಲೆ ಹಲ್ಲೆಯಾಗಿಲ್ಲ ಎಂದು ಸಾಕ್ಷಿ ಸಮೇತ ಸರಣಿ ಟ್ವೀಟ್ ಮಾಡಿದ್ದರು. ಈ ಟ್ವೀಟ್ ಮೂಲಕ ಬಿಜೆಪಿಯ ಅಸಲಿ ತಂತ್ರಗಾರಿಕೆ ಜಗಜ್ಜಾಹೀರಾಗಿತ್ತು.

ತಮಿಳುನಾಡಿನ ದೃಶ್ಯ ಮತ್ತು ಮುದ್ರಣ ಮಾಧ್ಯಮಗಳು ಬಿಜೆಪಿಯ ಈ ಸುಳ್ಳು ಸುದ್ದಿಯ ಬಗ್ಗೆ ಬಿಸಿಬಿಸಿ ಚರ್ಚೆ ಶುರು ಮಾಡುತ್ತಿದ್ದಂತೆ ಅಣ್ಣಾಮಲೈ ತನ್ನ ಖಾಸಗಿ ಟ್ವಿಟರ್ ಖಾತೆಯಿಂದ ಆ ವಿಡಿಯೋವನ್ನು ಡಿಲೀಟ್ ಮಾಡಿದ್ದರು. ಇದಾದ ಬಳಿಕ ಸುಳ್ಳು ಸುದ್ದಿಯನ್ನು ಹಬ್ಬಿದ ಕಾರಣಕ್ಕೆ ಮನೀಶ್ ಕಶ್ಯಪ್ ಅವರನ್ನು ಬಂಧಿಸಲಾಗಿತ್ತು.

ಇದನ್ನು ಓದಿ: ಅಮೆರಿಕದ ‘ಪಿತ್ರಾರ್ಜಿತ ಆಸ್ತಿ ತೆರಿಗೆ’ ಬಗ್ಗೆ ಸ್ಯಾಮ್ ಪಿತ್ರೋಡಾ ಕೊಟ್ಟಿದ್ದ ವಿವರಣೆಯನ್ನು ‘ರಾಜಕೀಯ ಅಸ್ತ್ರ’ ಮಾಡಿಕೊಂಡ ಬಿಜೆಪಿ: ಆದರೆ ವಾಸ್ತವವೇನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರತಿಭಟನೆಗೆ ಹೋಗುವ ಮಹಿಳೆಯರು ಗ್ಯಾಂಗ್‌ರೇಪ್‌ ಆನಂದಿಸುತ್ತಾರೆ ಎಂದಿದ್ದ ಟಿ.ಜಿ. ಮೋಹನ್‌ದಾಸ್‌ ವಿರುದ್ಧ ಎಫ್‌ಐಆರ್‌ ದಾಖಲು

ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವವರ ಮೇಲೆ, ನನ್ನ ಕೈಯಲ್ಲಿ ಅಧಿಕಾರವಿದ್ದರೆ ಗುಂಡು ಹಾರಿಸುತ್ತಿದ್ದೆ ಎಂದು ಇತ್ತೀಚಿನ ಯೂಟ್ಯೂಬ್ ವೀಡಿಯೊದಲ್ಲಿ ಹೇಳಿಕೆ ನೀಡಿದ್ದ ಹಿಂದುತ್ವವಾದಿ ಚಿಂತಕ ಟಿ.ಜಿ. ಮೋಹನ್‌ದಾಸ್ ವಿರುದ್ಧ ತಿರುವನಂತಪುರಂ ಸಿಟಿ...

ಫ್ರಾನ್ಸ್‌ನಲ್ಲಿ ಕೆಲಸದ ಸಮಯ ಟ್ರ್ಯಾಕಿಂಗ್ ಲೋಪ: ಇನ್ಫೋಸಿಸ್‌ಗೆ ₹1.9 ಕೋಟಿ ದಂಡ: ನಾರಾಯಣಮೂರ್ತಿಯವರ ‘70 ಗಂಟೆ ಶ್ರಮ’ದ ಮಾದರಿ ಟ್ರೋಲ್

ಭಾರತೀಯ ಐಟಿ ರಫ್ತು ಸೇವಾ ರಂಗದ ಬೃಹತ್ ಸಂಸ್ಥೆಯಾದ ಇನ್ಫೋಸಿಸ್‌ಗೆ ಫ್ರಾನ್ಸ್‌ನಲ್ಲಿ ಹಿನ್ನಡೆಯಾಗಿದೆ. ಉದ್ಯೋಗಿಗಳ ಕೆಲಸದ ಸಮಯವನ್ನು ದಾಖಲಿಸುವ ವ್ಯವಸ್ಥೆಯಲ್ಲಿನ ನ್ಯೂನತೆಗಳು ಹಾಗೂ ಸ್ಥಳೀಯ ಕಾರ್ಮಿಕ ನಿಯಮಾವಳಿಗಳ ಪಾಲನೆಯಲ್ಲಿ ಕಂಡುಬಂದ ಲೋಪಗಳ ಹಿನ್ನೆಲೆಯಲ್ಲಿ...

ವೋಟರ್ ಐಡಿ, ಬ್ಯಾಂಕ್ ಪಾಸ್‌ಬುಕ್, ಆಧಾರ್, ಜಮೀನಿನ ಹಕ್ಕು ಪತ್ರ ಇದ್ದ ಮಾತ್ರಕ್ಕೆ ಭಾರತೀಯ ಪ್ರಜೆಯಾಗಲ್ಲ: ಕಲ್ಕತ್ತಾ ಹೈಕೋರ್ಟ್

ಆಧಾರ್ ಕಾರ್ಡ್, ಪಾನ್ ಕಾರ್ಡ್, ಮತದಾರರ ಗುರುತಿನ ಚೀಟಿ, ಬ್ಯಾಂಕ್ ಪಾಸ್‌ಬುಕ್ ಮತ್ತು ಪಿತ್ರಾರ್ಜಿತ ಜಮೀನಿನ ದಾಖಲೆಗಳು ಭಾರತೀಯ ಪೌರತ್ವವನ್ನು ನಿರೂಪಿಸಲು ಅಂತಿಮ ಅಥವಾ ನಿರ್ಣಾಯಕ ಪುರಾವೆಗಳಲ್ಲ ಎಂದು ಕಲ್ಕತ್ತಾ ಹೈಕೋರ್ಟ್ ಮಹತ್ವದ...

‘ನಿಮ್ಮ ಸಮಯ ಬಂದಿದೆ’: ಟೌನ್‌ಶಿಪ್ ಯೋಜನೆ ವಿರುದ್ಧದ ಪ್ರತಿಭಟನೆಗೆ 500 ದಿನ: ‘Gen-Z’ ಯುವಕರ ಬೆಂಬಲ ಕೋರಿದ ಬಿಡದಿ ರೈತರು

ಬೆಂಗಳೂರು: ಪ್ರಸ್ತಾವಿತ ಬಿಡದಿ ಟೌನ್‌ಶಿಪ್ ಯೋಜನೆ ವಿರುದ್ಧ ಕೃಷಿ ಭೂಮಿ ಉಳಿವಿಗಾಗಿ ನಡೆಯುತ್ತಿರುವ ರೈತರ ಸುದೀರ್ಘ ಹೋರಾಟವು ಇದೀಗ ಒಂದು ಪ್ರಮುಖ ಘಟ್ಟಕ್ಕೆ ಬಂದು ತಲುಪಿದೆ. ಭೂಸ್ವಾಧೀನದ ವಿರುದ್ಧ ಸತತವಾಗಿ ನಡೆಯುತ್ತಿರುವ ಈ...

ಕೊಡಗಿನ ಆದಿವಾಸಿ ಹಾಡಿಗಳಲ್ಲಿ ಎಸ್‌ಐಆರ್ ಅವ್ಯವಸ್ಥೆ : ಬಿಎಲ್‌ಒಗಳಿಗೆ ತರಬೇತಿಯ ಕೊರತೆ, ಇನ್ನೂ ತಲುಪದ ಗಣತಿ ಫಾರಂ

ಕರ್ನಾಟಕದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಬಹಳ ಯಶಸ್ವಿಯಾಗಿ ನಡೆಯುತ್ತಿದೆ, ಮತದಾರರಿಗೆ ಎಲ್ಲಾ ರೀತಿಯ ಸಹಾಯಗಳನ್ನು ಒದಗಿಸಲಾಗುತ್ತಿದೆ ಎಂದು ರಾಜ್ಯ ಮುಖ್ಯ ಚುನಾವಣಾ ಆಯುಕ್ತ ಅನ್ಬುಕುಮಾರ್ ಅವರು ಪದೇ...

SIR: ಉಡುಪಿಯಲ್ಲಿ ಕರ್ತವ್ಯನಿರತ BLO ಮೇಲೆ ಹಲ್ಲೆಗೆತ್ನಿಸಿದ ಮಾಜಿ ಪಂಚಾಯತ್ ಅಧ್ಯಕ್ಷ, FIR ದಾಖಲು

ಚುನಾವಣಾ ಮತದಾರರ ಪಟ್ಟಿ ಪರಿಷ್ಕರಣೆ (SIR) ಕರ್ತವ್ಯದಲ್ಲಿದ್ದ ಅಂಗನವಾಡಿ ಕಾರ್ಯಕರ್ತೆ ಹಾಗೂ ಬಿಎಲ್‌ಒ (BLO) ಮಹಿಳೆ ಮೇಲೆ ಕರ್ತವ್ಯಕ್ಕೆ ಅಡ್ಡಿಪಡಿಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿ, ಕೊಲೆ ಬೆದರಿಕೆ ಹಾಕಿದ ಗಂಭೀರ ಆರೋಪ ಉಡುಪಿ...

ಕೋಟ್ಯಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ NTA ಚೆಲ್ಲಾಟ: RTI ನಲ್ಲಿ ಬಯಲಾಯ್ತು NTA ಕರ್ಮಕಾಂಡ

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಎನ್ನುವ ಈ ಸರ್ಕಾರಿ ಸಂಸ್ಥೆಯ ಮೇಲೆ ಪ್ರತಿವರ್ಷ ಕೋಟ್ಯಂತರ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಕನಸುಗಳನ್ನು ಇಟ್ಟುಕೊಳ್ಳುತ್ತಾರೆ. 2018ರಲ್ಲಿ ಸ್ಥಾಪನೆಯಾದ ದಿನದಿಂದ ಇಲ್ಲಿಯವರೆಗೆ ಎನ್‌ಟಿಎ ಸುಮಾರು 270ಕ್ಕೂ ಹೆಚ್ಚು...

ಬಾಗಲಕೋಟೆ: ಪತಿಯಿಂದ 23 ವರ್ಷದ ಪತ್ನಿಯ ಕ್ರೂರ ಕೊಲೆ, ಪೋಷಕರಿಗೆ ವೀಡಿಯೊ ಕರೆ ಮಾಡಿ ಮಗಳ ಸಾವು-ಬದುಕಿನ ಹೋರಾಟ ತೋರಿಸಿದ ವಿಕೃತ ಪತಿ

ಬಾಗಲಕೋಟೆ: ಪತಿಯೋರ್ವ ತನ್ನ 23 ವರ್ಷದ ಪತ್ನಿಯ ಮೇಲೆ ವಿವಾಹೇತರ ಅನೈತಿಕ ಸಂಬಂಧದ ಶಂಕೆ ವ್ಯಕ್ತಪಡಿಸಿ, ಆಕೆಯ ಮೇಲೆ ಮರದ ದಿಮ್ಮಿಯಿಂದ ಕ್ರೂರವಾಗಿ ಹಲ್ಲೆ ನಡೆಸಿ, ತದನಂತರ ನೇಣಿಗೆ ಬಿಗಿದು ಅತ್ಯಂತ ಅಮಾನವೀಯವಾಗಿ...

ಕಾನೂನು-ಸುವ್ಯವಸ್ಥೆಗೆ ವಿದ್ಯಾರ್ಥಿಗಳು ಸಮಸ್ಯೆಯಾಗುತ್ತಾರೆ ಎಂದು ಪರಿಗಣಿಸಿದ್ದು ಏಕೆ: ಅಭಿಷೇಕ್ ಬ್ಯಾನರ್ಜಿ

ರಾಷ್ಟ್ರ ರಾಜಧಾನಿ ದೆಹಲಿ ಮತ್ತು ದೆಶದಾದ್ಯಂತ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಭಾರೀ ಪೊಲೀಸ್ ಬಲಪ್ರಯೋವನ್ನು ವಿಪಕ್ಷಗಳು ಇಂದು ಲೋಕಸಭೆಯಲ್ಲಿ ಖಂಡಿಸಿವೆ. ವಿದ್ಯಾರ್ಥಿಗಳ...

ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ದ ಮೈಸೂರಿನಲ್ಲಿ ದೂರು ದಾಖಲು

ಸಂವಿಧಾನಬದ್ಧ ಮೀಸಲಾತಿಯ ಕುರಿತು ಅತ್ಯಂತ ನಿಂದನಾತ್ಮಕ, ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ ಹೇಳಿಕೆ ನೀಡಿರುವ 'ಪಬ್ಲಿಕ್ ಟಿವಿ' ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮೈಸೂರಿನಲ್ಲಿ ಕಾನೂನು ಕ್ರಮಕ್ಕೆ ಆಗ್ರಹಿಸಿ ಪೊಲೀಸ್‌...