Homeಫ್ಯಾಕ್ಟ್‌ಚೆಕ್FACT CHECK : ಸಿದ್ದರಾಮಯ್ಯ ಸರ್ಕಾರ ಮುಸ್ಲಿಮರನ್ನು ಒಬಿಸಿ ಪಟ್ಟಿಗೆ ಸೇರಿಸಿದ್ದು ನಿಜಾನಾ?

FACT CHECK : ಸಿದ್ದರಾಮಯ್ಯ ಸರ್ಕಾರ ಮುಸ್ಲಿಮರನ್ನು ಒಬಿಸಿ ಪಟ್ಟಿಗೆ ಸೇರಿಸಿದ್ದು ನಿಜಾನಾ?

- Advertisement -
- Advertisement -

ಕರ್ನಾಟಕದಲ್ಲಿ ಮುಸ್ಲಿಮರನ್ನು ಹಿಂದುಳಿದ ವರ್ಗಕ್ಕೆ ಸೇರಿಸುವ ಮೂಲಕ ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಹಿಂದುಳಿದ ವರ್ಗಗಳ 36 ಜಾತಿಗಳಿಗೆ ಅನ್ಯಾಯ ಮಾಡಿದೆ ಎಂದು ಬಿಜೆಪಿ ಆರೋಪಿಸಿದೆ. ಸಿದ್ದರಾಮಯ್ಯ ಸರ್ಕಾರ ಹಿಂದುಳಿದ ವರ್ಗಗಳಿಗೆ ಐತಿಹಾಸಿಕ ಅನ್ಯಾಯವೆಸಗಿದೆ ಮತ್ತು ಹಿಂದುಳಿದ ವರ್ಗಗಳ ಸಾಂವಿಧಾನಿಕ ಹಕ್ಕನ್ನು ಕಸಿದುಕೊಂಡು ಮುಸ್ಲಿಮರಿಗೆ ನೀಡಿದೆ ಎಂದು ಬಿಜೆಪಿ ಹೇಳಿದೆ.

ಇದಕ್ಕೂ ಮುನ್ನ ಹೇಳಿಕೆ ಕೊಟ್ಟಿದ್ದ ಹಿಂದುಳಿದ ವರ್ಗಗಳ ರಾಷ್ಟ್ರೀಯ ಆಯೋಗ (ಎನ್‌ಸಿಬಿಸಿ) ಅಧ್ಯಕ್ಷ ಹಂಸರಾಜ್ ಅಹಿರ್, ರಾಜ್ಯದಲ್ಲಿ ಮೀಸಲಾತಿ ಉದ್ದೇಶಗಳಿಗಾಗಿ ಇಡೀ ಮುಸ್ಲಿಂ ಸಮುದಾಯವನ್ನು ಹಿಂದುಳಿದ ವರ್ಗಕ್ಕೆ ಸೇರಿಸುವ ಮೂಲಕ ಸಿದ್ದರಾಮಯ್ಯ ಸರ್ಕಾರ ಸಾಮಾಜಿಕ ನ್ಯಾಯದ ತತ್ವಗಳನ್ನು ಹಾಳು ಮಾಡಿದೆ ಎಂದಿದ್ದರು. ಸಾಮಾಜಿಕ ನ್ಯಾಯದ ಒಟ್ಟಾರೆ ಚೌಕಟ್ಟಿನ ಮೇಲೆ, ವಿಶೇಷವಾಗಿ ಸ್ಥಳೀಯ ಸಂಸ್ಥೆಗಳ ಚುನಾವಣೆಯ ಸಂದರ್ಭದಲ್ಲಿ ಇಂತಹ ಮೀಸಲಾತಿಗಳ ಪ್ರಭಾವವನ್ನು ಅವರು ಪ್ರಶ್ನಿಸಿದ್ದರು.

 

ಹಾಗಾದರೆ, ಸಿದ್ದರಾಮಯ್ಯ ಸರ್ಕಾರ ನಿಜವಾಗಿಯೂ ಹಿಂದುಳಿದ ವರ್ಗಗಳ ಸಾಂವಿಧಾನಿಕ ಹಕ್ಕನ್ನು ಕಸಿದು ಮುಸ್ಲಿಮರಿಗೆ ನೀಡಿದೆಯಾ? ಎಂಬುವುದರ ವಾಸ್ತವ ಇಲ್ಲಿದೆ.

ಫ್ಯಾಕ್ಟ್‌ಚೆಕ್ : ವಾಸ್ತವ ಏನೆಂದರೆ, 1977ರಿಂದ ಕರ್ನಾಟಕದಲ್ಲಿ ಮುಸ್ಲಿಮರು ಹಿಂದುಳಿದ ವರ್ಗಗಳ ಪಟ್ಟಿಯಲ್ಲಿದ್ದಾರೆ.

ಕರ್ನಾಟಕದಲ್ಲಿ ಮುಸ್ಲಿಮರಿಗೆ ಮೀಸಲಾತಿಯ ಇತಿಹಾಸ :

ಕರ್ನಾಟಕ ಹಿಂದುಳಿದ ವರ್ಗಗಳ ಕುರಿತು ಎಲ್‌ಜಿ ಹಾವನೂರ್ ಅವರು 1975 ರಲ್ಲಿ ಸರ್ಕಾರಕ್ಕೆ ಸಲ್ಲಿಸಿದ್ದ ವರದಿಯಲ್ಲಿ ಮುಸ್ಲಿಮರನ್ನು ಹಿಂದುಳಿದ ವರ್ಗ ಎಂದು ಗುರುತಿಸಲಾಗಿತ್ತು. ವರದಿಯ ಶಿಫಾರಸುಗಳ ಆಧಾರದ ಮೇಲೆ, ಮುಸ್ಲಿಮರನ್ನು ಹಿಂದುಳಿದ ಸಮುದಾಯಗಳ ಅಡಿಯಲ್ಲಿ ವರ್ಗೀಕರಿಸಲಾಯಿತು (ಇತರ ವರ್ಗಗಳು ಹಿಂದುಳಿದ ಜಾತಿ, ಹಿಂದುಳಿದ ಬುಡಕಟ್ಟು ಮತ್ತು ವಿಶೇಷ ಗುಂಪು) ಮತ್ತು ಮುಸ್ಲಿಮರು ಸೇರಿದಂತೆ ಹಿಂದುಳಿದ ವರ್ಗಕ್ಕೆ ಮೀಸಲಾತಿ ನೀಡಲು ಮಾರ್ಚ್ 1977 ರಲ್ಲಿ ಆದೇಶ ನೀಡಲಾಯಿತು. ಮೇ 1979 ರಲ್ಲಿ ಹೊರಡಿಸಿದ ಆದೇಶದ ಪ್ರಕಾರ, ಮುಸ್ಲಿಮರನ್ನು ಹಿಂದುಳಿದ ಸಮುದಾಯಗಳ ಗುಂಪಿನಲ್ಲಿ ಇರಿಸಲಾಯಿತು.

ನಂತರ ವೆಂಕಟ ಸ್ವಾಮಿ ನೇತೃತ್ವದ ಆಯೋಗವು ಮುಸ್ಲಿಮರನ್ನು ಮೀಸಲಾತಿಗೆ ಅರ್ಹರಾದ ಹಿಂದುಳಿದ ವರ್ಗ ಎಂದು ಗುರುತಿಸಿದಾಗ ಗುಂಪುಗಳನ್ನು ಬದಲಾಯಿಸಲಾಯಿತು. ಈ ಆಯೋಗದ ಶಿಫಾರಸುಗಳ ಆಧಾರದ ಮೇಲೆ ಮುಸ್ಲಿಮರನ್ನು ಸಿ ಗುಂಪಿನ ಅಡಿಯಲ್ಲಿ ವರ್ಗೀಕರಿಸಲಾಯಿತು.

ನಂತರ, ನ್ಯಾಯಮೂರ್ತಿ ಒ.ಚಿನಪ್ಪ ರೆಡ್ಡಿ ನೇತೃತ್ವದ ಆಯೋಗವು ಹಿಂದುಳಿದ ವರ್ಗಗಳನ್ನು ಪ್ರವರ್ಗ 1 (ಅತ್ಯಂತ ಹಿಂದುಳಿದ), ಪ್ರವರ್ಗ 2ಎ (ತುಲನಾತ್ಮಕವಾಗಿ ಹೆಚ್ಚು ಹಿಂದುಳಿದ), ಪ್ರವರ್ಗ 2ಬಿ (ಹೆಚ್ಚು ಹಿಂದುಳಿದ), ಪ್ರವರ್ಗ 3ಎ (ಹಿಂದುಳಿದ), ಪ್ರವರ್ಗ 3ಬಿ (ತುಲನಾತ್ಮಕವಾಗಿ ಹಿಂದುಳಿದ) ಮತ್ತು ವರ್ಗ 4 (ಔದ್ಯೋಗಿಕ ಗುಂಪು) ಎಂದು ವರ್ಗೀಕರಿಸಿತ್ತು. ಸೆಪ್ಟೆಂಬರ್ 1994 ರಲ್ಲಿ ಈ ಸಂಬಂಧ ಆದೇಶವನ್ನು ಹೊರಡಿಸಲಾಯಿತು. ಅಲ್ಲಿ ಮುಸ್ಲಿಮರನ್ನು ವರ್ಗ 2 ಬಿ ಅಡಿಯಲ್ಲಿ ಇರಿಸಲಾಯಿತು. ಅಂದರೆ, ಪ್ರಸ್ತುತ ಇರುವ ಮೀಸಲಾತಿಯನ್ನು 30 ವರ್ಷಗಳ ಹಿಂದೆಯೇ ಜಾರಿಗೆ ತರಲಾಗಿದೆ.

ನಂತರ ಪ್ರೊ.ರವಿವರ್ಮ ಕುಮಾರ್ ನೇತೃತ್ವದ ಆಯೋಗವು ಔದ್ಯೋಗಿಕ ಗುಂಪು ವರ್ಗವನ್ನು ತೆಗೆದು ಹಾಕಿತು ಮತ್ತು ಅದನ್ನು ಇತರ ಗುಂಪುಗಳಿಗೆ ಒಳಪಡಿಸಲಾಯಿತು. ಮುಸ್ಲಿಮರನ್ನು 2 ಬಿ ವರ್ಗದಲ್ಲಿ ಇರಿಸಲಾಯಿತು. ಹದಿನೇಳು ಮುಸ್ಲಿಂ ಸಮುದಾಯಗಳನ್ನು ವರ್ಗ 1 (ಅತ್ಯಂತ ಹಿಂದುಳಿದ) ಮತ್ತು 19 ಮುಸ್ಲಿಂ ಸಮುದಾಯಗಳನ್ನು 2ಎ (ತುಲನಾತ್ಮಕವಾಗಿ ಹೆಚ್ಚು ಹಿಂದುಳಿದ) ಅಡಿಯಲ್ಲಿ ವರ್ಗೀಕರಿಸಲಾಗಿದೆ.

ರಾಜ್ಯದಲ್ಲಿ ಒಬಿಸಿ ವರ್ಗವು 32% ಮೀಸಲಾತಿಯನ್ನು ಹೊಂದಿದೆ. ವಿಭಾಗ 1 ಮತ್ತು 2ಎ ನಲ್ಲಿ ಪಟ್ಟಿ ಮಾಡಲಾದ 36 ಮುಸ್ಲಿಂ ಸಮುದಾಯಗಳು ಕೂಡ ಒಬಿಸಿಗಳ ಮೂಲ ಪಟ್ಟಿಯಲ್ಲಿ ಪಟ್ಟಿ ಮಾಡಲಾಗಿದೆ. ‘ಕ್ರೀಮಿ ಲೇಯರ್’ (8 ಲಕ್ಷ ವಾರ್ಷಿಕ ಆದಾಯ ಅಥವಾ ಅದಕ್ಕಿಂತ ಹೆಚ್ಚು) ಇರಬಾರದು ಎಂದು ನಿರ್ಧರಿಸಿದವರು ಮಾತ್ರ ಒಬಿಸಿ ವರ್ಗದ ಅಡಿಯಲ್ಲಿ ಮೀಸಲಾತಿಗೆ ಅರ್ಹರಾಗಿರುತ್ತಾರೆ.

2023ರಲ್ಲಿ ವಿಧಾನಸಭೆ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಬಸವರಾಜ ಬೊಮ್ಮಾಯಿ ಸರ್ಕಾರ 2ಬಿ ಅಡಿಯಲ್ಲಿ ಮುಸ್ಲಿಮರಿಗೆ ನೀಡಲಾಗಿದ್ದ ಶೇ.4ರಷ್ಟು ಮೀಸಲಾತಿಯನ್ನು ತೆಗೆದು ಹಾಕಿ ಒಕ್ಕಲಿಗರನ್ನು 2ಸಿ ವರ್ಗದಲ್ಲಿ ಮತ್ತು ಲಿಂಗಾಯತರನ್ನು 2ಡಿ ವರ್ಗದಲ್ಲಿ ವಿಭಜಿಸಿ ಅವರ ಮೀಸಲಾತಿ ಹೆಚ್ಚಿಸಲು ನಿರ್ಧರಿಸಿತು. ವರ್ಗ 1 ಮತ್ತು 2ಎ ಅಡಿಯಲ್ಲಿ ಮುಸ್ಲಿಮರು ಒಬಿಸಿ ಮೀಸಲಾತಿಯ ಪ್ರಯೋಜನ ಪಡೆಯುವುದನ್ನು ಮುಂದುವರಿಸಲಿದ್ದಾರೆ ಎಂದು ಅಂದಿನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭರವಸೆ ನೀಡಿದ್ದರು.

ಮುಸ್ಲಿಮರ 4% ಮೀಸಲಾತಿ ರದ್ದುಗೊಳಿಸಿರುವುದನ್ನು ಸುಪ್ರೀಂ ಕೋರ್ಟ್‌ನಲ್ಲಿ ಪ್ರಶ್ನಿಸಲಾಗಿತ್ತು. ಆಗ ನ್ಯಾಯಾಲಯಕ್ಕೆ ಪ್ರತಿಕ್ರಿಯಿಸಿದ್ದ ರಾಜ್ಯ ಸರ್ಕಾರ ಮೀಸಲಾತಿ ರದ್ದುಗೊಳಿಸುವುದಿಲ್ಲ ಹಿಂದಿನ ನೀತಿಯು ಮುಂದಿನ ಆದೇಶಗಳವರೆಗೆ ಮುಂದುವರಿಯಲಿದೆ ಎಂದು ಭರವಸೆ ನೀಡಿತ್ತು. ಈ ಪ್ರಕರಣ ಇನ್ನೂ ಸುಪ್ರೀಂ ಕೋರ್ಟ್‌ನಲ್ಲಿ ಬಾಕಿ ಇರುವ ಕಾರಣ, ಸಿದ್ದರಾಮಯ್ಯ ಸರ್ಕಾರ ಅದೇ ಆದೇಶದ ಅಡಿಯಲ್ಲಿ ಮೀಸಲಾತಿಯನ್ನು ಮುಂದುವರೆಸಿದೆ.

ಸಾಂವಿಧಾನಿಕ ಬಲ :

ಹಿಂದುಳಿದ ವರ್ಗಗಳ ಅಭಿವೃದ್ದಿಗಾಗಿ ಮೀಸಲಾತಿ ಒದಗಿಸುವುದು ರಾಜ್ಯ ಪಟ್ಟಿಯ ಅಡಿಯಲ್ಲಿ ಬರುತ್ತದೆ. ಮೀಸಲಾತಿಯ ಶೇಕಡಾವಾರು ಪ್ರತಿ ರಾಜ್ಯದಲ್ಲಿ ಬದಲಾಗುತ್ತದೆ. ಮೀಸಲಾತಿಯು ಧರ್ಮಾಧಾರಿತವಲ್ಲ, ಸಾಮಾಜಿಕ ಮತ್ತು ಶೈಕ್ಷಣಿಕ ಹಿಂದುಳಿದಿರುವಿಕೆಯನ್ನು ಆಧರಿಸಿದೆ. ಕೆಲವು ರಾಜ್ಯಗಳು ಒಟ್ಟಾರೆಯಾಗಿ ಮುಸ್ಲಿಮರಿಗೆ ಮೀಸಲಾತಿ ನೀಡಿದರೆ, ಇತರ ರಾಜ್ಯಗಳು ಕೆಲವು ವರ್ಗದ ಮುಸ್ಲಿಮರಿಗೆ ಮಾತ್ರ ಮೀಸಲಾತಿಯನ್ನು ಒದಗಿಸುತ್ತವೆ.

ಯಾವುದೇ ಸಾಮಾಜಿಕವಾಗಿ ಮತ್ತು ಶೈಕ್ಷಣಿಕವಾಗಿ ಹಿಂದುಳಿದ ವರ್ಗಗಳ ನಾಗರಿಕರ ಅಥವಾ ಪರಿಶಿಷ್ಟ ಜಾತಿಗಳು ಮತ್ತು ಪರಿಶಿಷ್ಟ ಪಂಗಡಗಳ ಪ್ರಗತಿಗಾಗಿ ವಿಶೇಷ ನಿಬಂಧನೆಗಳನ್ನು ರೂಪಿಸಲು ಸಂವಿಧಾನದ 15 (4) ನೇ ವಿಧಿ ರಾಜ್ಯಕ್ಕೆ ಅವಕಾಶ ನೀಡುತ್ತದೆ.

ಸಂವಿಧಾನ ವಿಧಿ 16 (4) ಕೂಡ ರಾಜ್ಯಕ್ಕೆ ಈ ಅವಕಾಶ ನೀಡುತ್ತದೆ. ಈ ವಿಧಿಯು ರಾಜ್ಯವು ಯಾವುದೇ ಹಿಂದುಳಿದ ವರ್ಗದ ನಾಗರಿಕರ ಪರವಾಗಿ ನೇಮಕಾತಿಗಳು ಅಥವಾ ಹುದ್ದೆಗಳ ಮೀಸಲಾತಿಗೆ ಯಾವುದೇ ನಿಬಂಧನೆ ರೂಪಿಸುವುದನ್ನು ತಡೆಯುವುದಿಲ್ಲ.

ಮಾಹಿತಿ ಕೃಪೆ : ದಿ ನ್ಯೂಸ್‌ ಮಿನಿಟ್ 

ಇದನ್ನೂ ಓದಿ : FACT CHECK : ಅಧಿಕಾರಕ್ಕೆ ಬಂದರೆ ‘ಪಿತ್ರಾರ್ಜಿತ ಆಸ್ತಿ ತೆರಿಗೆ’ ಜಾರಿಗೊಳಿಸುವುದಾಗಿ ಕಾಂಗ್ರೆಸ್ ಹೇಳಿಲ್ಲ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರತಿಭಟನೆಗೆ ಹೋಗುವ ಮಹಿಳೆಯರು ಗ್ಯಾಂಗ್‌ರೇಪ್‌ ಆನಂದಿಸುತ್ತಾರೆ ಎಂದಿದ್ದ ಟಿ.ಜಿ. ಮೋಹನ್‌ದಾಸ್‌ ವಿರುದ್ಧ ಎಫ್‌ಐಆರ್‌ ದಾಖಲು

ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವವರ ಮೇಲೆ, ನನ್ನ ಕೈಯಲ್ಲಿ ಅಧಿಕಾರವಿದ್ದರೆ ಗುಂಡು ಹಾರಿಸುತ್ತಿದ್ದೆ ಎಂದು ಇತ್ತೀಚಿನ ಯೂಟ್ಯೂಬ್ ವೀಡಿಯೊದಲ್ಲಿ ಹೇಳಿಕೆ ನೀಡಿದ್ದ ಹಿಂದುತ್ವವಾದಿ ಚಿಂತಕ ಟಿ.ಜಿ. ಮೋಹನ್‌ದಾಸ್ ವಿರುದ್ಧ ತಿರುವನಂತಪುರಂ ಸಿಟಿ...

ಫ್ರಾನ್ಸ್‌ನಲ್ಲಿ ಕೆಲಸದ ಸಮಯ ಟ್ರ್ಯಾಕಿಂಗ್ ಲೋಪ: ಇನ್ಫೋಸಿಸ್‌ಗೆ ₹1.9 ಕೋಟಿ ದಂಡ: ನಾರಾಯಣಮೂರ್ತಿಯವರ ‘70 ಗಂಟೆ ಶ್ರಮ’ದ ಮಾದರಿ ಟ್ರೋಲ್

ಭಾರತೀಯ ಐಟಿ ರಫ್ತು ಸೇವಾ ರಂಗದ ಬೃಹತ್ ಸಂಸ್ಥೆಯಾದ ಇನ್ಫೋಸಿಸ್‌ಗೆ ಫ್ರಾನ್ಸ್‌ನಲ್ಲಿ ಹಿನ್ನಡೆಯಾಗಿದೆ. ಉದ್ಯೋಗಿಗಳ ಕೆಲಸದ ಸಮಯವನ್ನು ದಾಖಲಿಸುವ ವ್ಯವಸ್ಥೆಯಲ್ಲಿನ ನ್ಯೂನತೆಗಳು ಹಾಗೂ ಸ್ಥಳೀಯ ಕಾರ್ಮಿಕ ನಿಯಮಾವಳಿಗಳ ಪಾಲನೆಯಲ್ಲಿ ಕಂಡುಬಂದ ಲೋಪಗಳ ಹಿನ್ನೆಲೆಯಲ್ಲಿ...

ವೋಟರ್ ಐಡಿ, ಬ್ಯಾಂಕ್ ಪಾಸ್‌ಬುಕ್, ಆಧಾರ್, ಜಮೀನಿನ ಹಕ್ಕು ಪತ್ರ ಇದ್ದ ಮಾತ್ರಕ್ಕೆ ಭಾರತೀಯ ಪ್ರಜೆಯಾಗಲ್ಲ: ಕಲ್ಕತ್ತಾ ಹೈಕೋರ್ಟ್

ಆಧಾರ್ ಕಾರ್ಡ್, ಪಾನ್ ಕಾರ್ಡ್, ಮತದಾರರ ಗುರುತಿನ ಚೀಟಿ, ಬ್ಯಾಂಕ್ ಪಾಸ್‌ಬುಕ್ ಮತ್ತು ಪಿತ್ರಾರ್ಜಿತ ಜಮೀನಿನ ದಾಖಲೆಗಳು ಭಾರತೀಯ ಪೌರತ್ವವನ್ನು ನಿರೂಪಿಸಲು ಅಂತಿಮ ಅಥವಾ ನಿರ್ಣಾಯಕ ಪುರಾವೆಗಳಲ್ಲ ಎಂದು ಕಲ್ಕತ್ತಾ ಹೈಕೋರ್ಟ್ ಮಹತ್ವದ...

‘ನಿಮ್ಮ ಸಮಯ ಬಂದಿದೆ’: ಟೌನ್‌ಶಿಪ್ ಯೋಜನೆ ವಿರುದ್ಧದ ಪ್ರತಿಭಟನೆಗೆ 500 ದಿನ: ‘Gen-Z’ ಯುವಕರ ಬೆಂಬಲ ಕೋರಿದ ಬಿಡದಿ ರೈತರು

ಬೆಂಗಳೂರು: ಪ್ರಸ್ತಾವಿತ ಬಿಡದಿ ಟೌನ್‌ಶಿಪ್ ಯೋಜನೆ ವಿರುದ್ಧ ಕೃಷಿ ಭೂಮಿ ಉಳಿವಿಗಾಗಿ ನಡೆಯುತ್ತಿರುವ ರೈತರ ಸುದೀರ್ಘ ಹೋರಾಟವು ಇದೀಗ ಒಂದು ಪ್ರಮುಖ ಘಟ್ಟಕ್ಕೆ ಬಂದು ತಲುಪಿದೆ. ಭೂಸ್ವಾಧೀನದ ವಿರುದ್ಧ ಸತತವಾಗಿ ನಡೆಯುತ್ತಿರುವ ಈ...

ಕೊಡಗಿನ ಆದಿವಾಸಿ ಹಾಡಿಗಳಲ್ಲಿ ಎಸ್‌ಐಆರ್ ಅವ್ಯವಸ್ಥೆ : ಬಿಎಲ್‌ಒಗಳಿಗೆ ತರಬೇತಿಯ ಕೊರತೆ, ಇನ್ನೂ ತಲುಪದ ಗಣತಿ ಫಾರಂ

ಕರ್ನಾಟಕದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಬಹಳ ಯಶಸ್ವಿಯಾಗಿ ನಡೆಯುತ್ತಿದೆ, ಮತದಾರರಿಗೆ ಎಲ್ಲಾ ರೀತಿಯ ಸಹಾಯಗಳನ್ನು ಒದಗಿಸಲಾಗುತ್ತಿದೆ ಎಂದು ರಾಜ್ಯ ಮುಖ್ಯ ಚುನಾವಣಾ ಆಯುಕ್ತ ಅನ್ಬುಕುಮಾರ್ ಅವರು ಪದೇ...

SIR: ಉಡುಪಿಯಲ್ಲಿ ಕರ್ತವ್ಯನಿರತ BLO ಮೇಲೆ ಹಲ್ಲೆಗೆತ್ನಿಸಿದ ಮಾಜಿ ಪಂಚಾಯತ್ ಅಧ್ಯಕ್ಷ, FIR ದಾಖಲು

ಚುನಾವಣಾ ಮತದಾರರ ಪಟ್ಟಿ ಪರಿಷ್ಕರಣೆ (SIR) ಕರ್ತವ್ಯದಲ್ಲಿದ್ದ ಅಂಗನವಾಡಿ ಕಾರ್ಯಕರ್ತೆ ಹಾಗೂ ಬಿಎಲ್‌ಒ (BLO) ಮಹಿಳೆ ಮೇಲೆ ಕರ್ತವ್ಯಕ್ಕೆ ಅಡ್ಡಿಪಡಿಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿ, ಕೊಲೆ ಬೆದರಿಕೆ ಹಾಕಿದ ಗಂಭೀರ ಆರೋಪ ಉಡುಪಿ...

ಕೋಟ್ಯಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ NTA ಚೆಲ್ಲಾಟ: RTI ನಲ್ಲಿ ಬಯಲಾಯ್ತು NTA ಕರ್ಮಕಾಂಡ

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಎನ್ನುವ ಈ ಸರ್ಕಾರಿ ಸಂಸ್ಥೆಯ ಮೇಲೆ ಪ್ರತಿವರ್ಷ ಕೋಟ್ಯಂತರ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಕನಸುಗಳನ್ನು ಇಟ್ಟುಕೊಳ್ಳುತ್ತಾರೆ. 2018ರಲ್ಲಿ ಸ್ಥಾಪನೆಯಾದ ದಿನದಿಂದ ಇಲ್ಲಿಯವರೆಗೆ ಎನ್‌ಟಿಎ ಸುಮಾರು 270ಕ್ಕೂ ಹೆಚ್ಚು...

ಬಾಗಲಕೋಟೆ: ಪತಿಯಿಂದ 23 ವರ್ಷದ ಪತ್ನಿಯ ಕ್ರೂರ ಕೊಲೆ, ಪೋಷಕರಿಗೆ ವೀಡಿಯೊ ಕರೆ ಮಾಡಿ ಮಗಳ ಸಾವು-ಬದುಕಿನ ಹೋರಾಟ ತೋರಿಸಿದ ವಿಕೃತ ಪತಿ

ಬಾಗಲಕೋಟೆ: ಪತಿಯೋರ್ವ ತನ್ನ 23 ವರ್ಷದ ಪತ್ನಿಯ ಮೇಲೆ ವಿವಾಹೇತರ ಅನೈತಿಕ ಸಂಬಂಧದ ಶಂಕೆ ವ್ಯಕ್ತಪಡಿಸಿ, ಆಕೆಯ ಮೇಲೆ ಮರದ ದಿಮ್ಮಿಯಿಂದ ಕ್ರೂರವಾಗಿ ಹಲ್ಲೆ ನಡೆಸಿ, ತದನಂತರ ನೇಣಿಗೆ ಬಿಗಿದು ಅತ್ಯಂತ ಅಮಾನವೀಯವಾಗಿ...

ಕಾನೂನು-ಸುವ್ಯವಸ್ಥೆಗೆ ವಿದ್ಯಾರ್ಥಿಗಳು ಸಮಸ್ಯೆಯಾಗುತ್ತಾರೆ ಎಂದು ಪರಿಗಣಿಸಿದ್ದು ಏಕೆ: ಅಭಿಷೇಕ್ ಬ್ಯಾನರ್ಜಿ

ರಾಷ್ಟ್ರ ರಾಜಧಾನಿ ದೆಹಲಿ ಮತ್ತು ದೆಶದಾದ್ಯಂತ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಭಾರೀ ಪೊಲೀಸ್ ಬಲಪ್ರಯೋವನ್ನು ವಿಪಕ್ಷಗಳು ಇಂದು ಲೋಕಸಭೆಯಲ್ಲಿ ಖಂಡಿಸಿವೆ. ವಿದ್ಯಾರ್ಥಿಗಳ...

ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ದ ಮೈಸೂರಿನಲ್ಲಿ ದೂರು ದಾಖಲು

ಸಂವಿಧಾನಬದ್ಧ ಮೀಸಲಾತಿಯ ಕುರಿತು ಅತ್ಯಂತ ನಿಂದನಾತ್ಮಕ, ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ ಹೇಳಿಕೆ ನೀಡಿರುವ 'ಪಬ್ಲಿಕ್ ಟಿವಿ' ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮೈಸೂರಿನಲ್ಲಿ ಕಾನೂನು ಕ್ರಮಕ್ಕೆ ಆಗ್ರಹಿಸಿ ಪೊಲೀಸ್‌...