Homeಮುಖಪುಟಬಿಲ್ಕಿಸ್ ಪ್ರಕರಣ - ಹದ್ದುಬಸ್ತುಗಳಿಲ್ಲವೇ ಅಮಾನವೀಯತೆಗೆ? : ಡಿ.ಉಮಾಪತಿ

ಬಿಲ್ಕಿಸ್ ಪ್ರಕರಣ – ಹದ್ದುಬಸ್ತುಗಳಿಲ್ಲವೇ ಅಮಾನವೀಯತೆಗೆ? : ಡಿ.ಉಮಾಪತಿ

- Advertisement -
- Advertisement -

ಗರ್ಭಿಣಿಯಾದ ಆಕೆಯ ಮೇಲೆ ಬಿಟ್ಟೂಬಿಡದೆ 22 ಬಾರಿ ಅತ್ಯಾಚಾರ ನಡೆಯುತ್ತದೆ. ಮೂರು ವರ್ಷದ ಮಗಳ ತಲೆಯನ್ನು ನೆಲಕ್ಕೆ ಅಪ್ಪಳಿಸಿ ಕೊಲ್ಲಲಾಗುತ್ತದೆ. ಆಕೆಯ ತಾಯಿಯೂ ಸೇರಿದಂತೆ ಕುಟುಂಬದ ಇತರೆ ಹೆಣ್ಣುಮಕ್ಕಳ ಮೇಲೆ ಅತ್ಯಾಚಾರ ನಡೆಸಿ ಕೊಚ್ಚಿ ಹಾಕಲಾಗುತ್ತದೆ.ಕಣ್ಣೆದುರಿಗೇ ಕುಟುಂಬದ 14 ಹೆಣಗಳು ಉರುಳುತ್ತವೆ. ಈ ಅಪರಾಧವನ್ನು ಹೀನಾತಿಹೀನ ಎಂದು ಒಪ್ಪಿಕೊಳ್ಳಲು ತಯಾರಿಲ್ಲ ಗುಜರಾತ್ ಸರ್ಕಾರ.

ಕೋಮುವಾದಿ ಹಿಂಸೆಯ ದಳ್ಳುರಿಯ ನಡುವೆ ಸಾಮೂಹಿಕ ಅತ್ಯಾಚಾರಕ್ಕೆ ಗುರಿಯಾದ ಬಡ ಹೆಣ್ಣುಮಗಳೊಬ್ಬಳಿಗೆ 50 ಲಕ್ಷರೂಪಾಯಿ ಪರಿಹಾರ ನೀಡುವಂತೆ ಸುಪ್ರೀಮ್‍ ಕೋರ್ಟ್‍ತೀರ್ಪು ನೀಡಿ ನಾಲ್ಕು ತಿಂಗಳುಗಳೇ ಉರುಳಿವೆ. ಈ ಮುನ್ನತನಗೆ ನ್ಯಾಯ ಬೇಡಿ 17 ವರ್ಷಗಳ ಕಾಲ ಕೋರ್ಟುಗಳ ಕಂಬ ಸುತ್ತಿದ್ದಳು ಆಕೆ.

ಬಿಲ್ಕಿಸ್‍ ಗುಜರಾತ್ ಸರ್ಕಾರದ ವಿರುದ್ಧ ಸಲ್ಲಿಸಿದ್ದ ನ್ಯಾಯಾಲಯ ನಿಂದನೆ ಮೊಕದ್ದಮೆ ಕಳೆದ ವಾರ ಸುಪ್ರೀಮ್‍ಕೋರ್ಟ್ ಮುಂದೆ ವಿಚಾರಣೆಗೆ ಬಂದಿತ್ತು. ಪರಿಹಾರದ ಆದೇಶದ ವಿರುದ್ಧ ಮರುವಿಮರ್ಶೆಅರ್ಜಿ ಸಲ್ಲಿಸುವ ಇರಾದೆ ತನಗಿರುವ ಕಾರಣ ಪರಿಹಾರವನ್ನು ನೀಡಿಲ್ಲ ಎಂದು ಗುಜರಾತ್ ಸರ್ಕಾರ ಹೇಳಿಕೊಂಡಿತು. ಒಂದು ಪ್ರಕರಣದಲ್ಲಿ 50 ಲಕ್ಷ ನೀಡಿದರೆ ಇತರೆ ಪ್ರಕರಣಗಳ ಪಾಲಿಗೆ ಅದು ಪೂರ್ವನಿದರ್ಶನ ಆಗುತ್ತದೆಂಬುದು ಗುಜರಾತ್ ಸರ್ಕಾರದ ಬಾಧೆ.

2002ರ ಫೆಬ್ರವರಿ 27ರ ಮುಂಜಾನೆ ಗುಜರಾತಿನ ಗೋಧ್ರಾ ಬಳಿ ಸಾಬರಮತಿ ಎಕ್ಸ್ ಪ್ರೆಸ್‍ನ ಕರಸೇವಕರಿದ್ದ ಬೋಗಿಗೆ ಬೆಂಕಿ ಬಿದ್ದು 59 ಮಂದಿ ಆಹುತಿಯಾಗಿದ್ದರು. ಆಗ ಹೊತ್ತಿಕೊಂಡ ಕೋಮು ಗಲಭೆಗಳ ದಳ್ಳುರಿ ಗುಜರಾತಿನ ಉದ್ದಗಲಕ್ಕೆ ಅಲ್ಪಸಂಖ್ಯಾತರ ಮಾರಣ ಹೋಮಕ್ಕೆ ಕಾರಣವಾಯಿತು.

ಅಹ್ಮದಾಬಾದ್ ನಿಂದ 200 ಕಿ.ಮೀ. ದೂರದ ದಾಹೋದ್ ನ ಒಂದು ಹಳ್ಳಿ ರಾಧಿಕಾಪುರ ಬಿಲ್ಕಿಸ್ ಬಾನುವಿನ ಹುಟ್ಟೂರು. ನೆರೆ ಹೊರೆಯವರು ಮುಸಲ್ಮಾನರಎಲ್ಲ 60 ಮನೆಗಳಿಗೆ ಬೆಂಕಿ ಇಟ್ಟಿದ್ದರು. ಬಿಲ್ಕಿಸ್ ಮತ್ತು ಆಕೆಯ ಕುಟುಂಬ ಬೆದರಿ ಹೊಲಗಳತ್ತ ಪರಾರಿಯಾಗಿತ್ತು. ಒಂದೆಡೆಯಿಂದ ಇನ್ನೊಂದೆಡೆಗೆ ಪರಾರಿಯಾಗುತ್ತಲೇ ತಲೆಮರೆಸಿಕೊಂಡಿದ್ದಾಗ ಆಕೆಯ ರಕ್ತಸಂಬಂಧಿ ಶಮೀಮ್ ಹೆಣ್ಣುಮಗುವನ್ನು ಪ್ರಸವಿಸಿದ್ದಳು.

ಸುತ್ತಮುತ್ತಲ ಅಡವಿಯ ಗಿಡಮರಗಳ ನೆರಳುಗಳಲ್ಲಿ ಅಡಗಿಕೊಳ್ಳುತ್ತಿದ್ದ ಅವರು ಹೇಗಾದರೂ ಮಾಡಿ ಮುಸ್ಲಿಂ ಬಾಹುಳ್ಯದ ವಸತಿಯನ್ನು ತಲುಪಬೇಕಿತ್ತು. ಹೆದ್ದಾರಿಗಳನ್ನು ಹಿಡಿಯುವಂತಿರಲಿಲ್ಲ. ಒಳನಾಡಿನ ಕಚ್ಚಾದಾರಿಗಳಲ್ಲೇ ಸಾಗಬೇಕಿತ್ತು. ಭೀತಿಯ ಪಯಣದಲ್ಲಿಕರುಣೆ ಸಹಾನುಭೂತಿಯುಳ್ಳ ಜನ ಅವರನ್ನು ಕಾಪಾಡಿದ್ದುಂಟು.

ಪನ್ನಿವೇಲ್ ಎಂಬ ಹಳ್ಳಿ ಸೇರಿದ್ದರೆ ಈ ಕುಟುಂಬದ ಪ್ರಾಣಗಳು ಉಳಿಯುತ್ತಿದ್ದವು. ಆದರೆ ಹಾಗಾಗಲಿಲ್ಲ. ಈ ಕುಟುಂಬ ಪಯಣಿಸುತ್ತಿದ್ದ ಟ್ರಕ್‍ನ್ನು ಎರಡು ಟ್ರಕ್‍ಗಳು ಅಡ್ಡ ಹಾಕಿದ್ದವು. 20- 30 ಮಂದಿಯ ಕೈಗಳಲ್ಲಿ ಹಿರಿದಿದ್ದಕತ್ತಿ ಕುಡುಗೋಲುಗಳು. ಬಿಲ್ಕಿಸ್‍ ಅಪ್ಪನಿಗೆ ಚಿಕಿತ್ಸೆ ನೀಡಿದ್ದ, ಅದೇ ಬೀದಿಯ ಎದುರಿಗಿದ್ದ ವೈದ್ಯನ ಮಗ, ಬಳೆ ಅಂಗಡಿ ನಡೆಸುತ್ತಿದ್ದ ವ್ಯಕ್ತಿ, ಹೊಟೇಲು ಇಟ್ಟು ಕೊಂಡಿದ್ದಾತ, ಗ್ರಾಮಪಂಚಾಯಿತಿ ಸದಸ್ಯೆಯಗಂಡ… ಇವರೆಲ್ಲ ಬಿಲ್ಕಿಸ್ ಗೆ ಚಿರ ಪರಿಚಿತರೇ. ಬಾಲ್ಯದಿಂದತನ್ನನ್ನು ಬಲ್ಲವರೇಆದರೂತನ್ನನ್ನು ಎಷ್ಟು ಕ್ರೌರ್ಯದಿಂದ ಉಲ್ಲಂಘಿಸಿದರಲ್ಲ ಎಂಬುದು ಆಕೆಯನ್ನು ಬಹುಕಾಲ ಅಲ್ಲಾಡಿಸಿದ ಕಟು ವಾಸ್ತವ.

ಬಗಲಲ್ಲಿ ಮೂರು ವರ್ಷದ ಮಗಳು ಸಾಲೇಹ. ಅವಳನ್ನು ಕಸಿದುಕೊಂಡು ತಲೆಯನ್ನು ನೆಲಕ್ಕೆ ಅಪ್ಪಳಿಸಿ ಅರೆನಿಮಿಷದಲ್ಲೇಕೊಂದು ಹಾಕಿದನೊಬ್ಬ. ತನ್ನದೇ ಹಳ್ಳಿಯ ಮೂವರು ಪುರುಷರು ಆಕೆಯನ್ನು ಎಳೆದುಕೊಂಡು ಬಟ್ಟೆಗಳನ್ನು ಹರಿದೆಸೆದರು. ಗರ್ಭಿಣಿಯೆಂದು ಆಕೆ ಅಲವತ್ತು ಕೊಂಡಳು. ನೀವೆಲ್ಲ ನನ್ನ ಅಣ್ಣಂದಿರು, ಚಿಕ್ಕಪ್ಪಂದಿರಿದ್ದಂತೆ ಎಂದರೂ ಬಿಡದೆ ಅತ್ಯಾಚಾರ ನಡೆಸಿದರು.

ಹತ್ಯೆಅತ್ಯಾಚಾರದ ಅಮಾನುಷತೆಯ ವಿಕೃತ ವಿಜೃಂಭಣೆಗೆ 14 ಮಂದಿ ಬಲಿಯಾದರು. ಹಿಂದಿನ ದಿನವಷ್ಟೇ ಹೆಣ್ಣುಮಗುವನ್ನು ಹಡೆದಿದ್ದ ಶಮೀಮ್‍ಳನ್ನು ಅವಳ ಹಸುಳೆಯ ಸಹಿತ ಹತ್ಯೆ ಮಾಡಲಾಗಿತ್ತು.ಮೂರ್ಛೆ ಹೋಗಿದ್ದ ಬಿಲ್ಕಿಸ್ ಸತ್ತೇ ಹೋಗಿದ್ದಾಳೆಂದು ಭಾವಿಸಿದ ದಾಳಿಕೋರರು ಮಾರಣಹೋಮದತಾಣವನ್ನುತೊರೆದಿದ್ದರು.

ಎಚ್ಚ ಬಂದಾಗ ಪೂರ್ಣ ಬೆತ್ತಲಾಗಿದ್ದದ್ದು ತಿಳಿಯಿತು. ಸುತ್ತಮುತ್ತಕೊಚ್ಚಿ ಹಾಕಲಾಗಿದ್ದತನ್ನದೇಕುಟುಂಬದ ರಕ್ತಸಿಕ್ತ ಕಳೇಬರಗಳು. ಪೆಟ್ಟಿಕೋಟಿನಿಂದ ಮೈ ಮುಚ್ಚಿಕೊಂಡು ಪಕ್ಕದಲ್ಲಿದ್ದ ಗುಡ್ಡ ಹತ್ತಿ ಅಲ್ಲಿಯೇದುಃಖ ಭೀತಿಯಲ್ಲಿ ಮುಳುಗಿ ಇರುಳು ಕಳೆದಳು. ಮರುದಿನ ನೀರಿಗಾಗಿ ಅರಸುತ್ತಿದ್ದವಳನ್ನು ಕೊಳವೆ ಬಾವಿಯೊಂದರ ಬಳಿ ಕಂಡ ಆದಿವಾಸಿ ಹೆಣ್ಣುಮಗಳು ಬಟ್ಟೆಗಳನ್ನಿತ್ತಳು. ಪೊಲೀಸ್‍ ಅಧಿಕಾರಿಯೊಬ್ಬನನ್ನು ಸಂಪರ್ಕಿಸಿದಳು. ಆತ ಆಕೆಯನ್ನು ತನ್ನ ವಾಹನದಲ್ಲಿ ಲಿಮ್ಖೇಡ ಪೊಲೀಸ್‍ಠಾಣೆಗೆ ಕರೆದೊಯ್ದ.

ಎಂಟು ಸಾಮೂಹಿಕ ಅತ್ಯಾಚಾರಗಳು ಮತ್ತು 14 ಹತ್ಯೆಗಳನ್ನು ನೋಡಿದ ನಂತರವೂ ಪ್ರಾಣಸಹಿತ ಉಳಿದಿದ್ದ ಏಕೈಕ ಸಾಕ್ಷಿ ಬಿಲ್ಕಿಸ್ ಬಾನು.ಆದರೆ ಪೊಲೀಸರುದೂರು ದಾಖಲಿಸಿಕೊಳ್ಳುವುದಿಲ್ಲ. ಒತ್ತಾಯಿಸಿದರೆ ವಿಷದ ಸೂಜಿಮದ್ದು ನೀಡಿಕೊಲ್ಲುವ ಬೆದರಿಕೆ ಹಾಕಲಾಗುತ್ತದೆ. ಪರಿಹಾರ ಶಿಬಿರವೊಂದಕ್ಕೆ ಆಕೆಯನ್ನು ಸಾಗ ಹಾಕಲಾಗುತ್ತದೆ. ಅಲ್ಲಿತನ್ನ ಪತಿಯಾಕೂಬ್‍ರಸೂಲನನ್ನು ಸೇರಿಕೊಳ್ಳುತ್ತಾಳೆ.

ಬಿಲ್ಕಿಸ್‍ ಕುಟುಂಬದ ಹತ್ಯೆ ನಡೆದಎರಡು ದಿನಗಳ ನಂತರಎಂಟು ಶವಗಳನ್ನು ಕಂಡವರು ಕೆಲ ಸ್ಥಳೀಯ ಛಾಯಾ ಚಿತ್ರಕಾರರು. ಪೊಲೀಸರು ಕಾರ್ಯಪ್ರವೃತ್ತರಾಗುತ್ತಾರೆ. ಅತ್ಯಾಚಾರಜರುಗಿದ ನಾಲ್ಕು ದಿನಗಳ ನಂತರ ಗೋಧ್ರಾ ಸಿವಿಲ್ ಆಸ್ಪತ್ರೆಯಲ್ಲಿ ಆಕೆಯ ವೈದ್ಯಕೀಯ ಪರೀಕ್ಷೆ ನಡೆಯಿತು.

ಕಳೇಬರಗಳ ಮಹಜರು ನಡೆಯುವುದಿಲ್ಲ. ಕೊಳೆಯಲು ಬಿಡಲಾಗುತ್ತದೆ. ಮರಣೋತ್ತರ ಪರೀಕ್ಷೆ ಮಾಡಿದ ವೈದ್ಯರು ಮಹತ್ವದ ಸಾಕ್ಷ್ಯ ಪುರಾವೆಗಳಾಗಬೇಕಿದ್ದ ರಕ್ತ ಮತ್ತು ಇತರೆ ಜೈವಿಕ ಸ್ಯಾಂಪಲ್ ಗಳನ್ನು ಸಂಗ್ರಹಿಸಲಿಲ್ಲ. ಶವಗಳನ್ನು ಸಾಮೂಹಿಕವಾಗಿ ದಫನು ಮಾಡಲಾಗುತ್ತದೆ. ಎರಡು ವರ್ಷಗಳ ನಂತರ 2004ರಲ್ಲಿ ಸಿಬಿಐ ಈ ತನಿಖೆಯನ್ನುಕೈಗೆತ್ತಿಕೊಂಡಾಗ ಹೂತಿದ್ದ ಶವಗಳನ್ನು ಹೊರತೆಗೆದಾಗಯಾವ ಶವಕ್ಕೂ ರುಂಡವಿರುವುದಿಲ್ಲ. ಮರಣೋತ್ತರ ಪರೀಕ್ಷೆಯ ನಂತರಗುರುತು ಸಿಗದಿರಲೆಂದು ರುಂಡಗಳನ್ನು ಬೇರ್ಪಡಿಸಲಾಗಿತ್ತು. ಶವಗಳು ಬೇಗನೆ ಕೊಳೆತು ಹೋಗಲೆಂದು ಅವುಗಳ ಮೇಲೆ ಉಪ್ಪು ಸುರಿದು ಹುಗಿಯಲಾಗಿರುತ್ತದೆ.

ಹನ್ನೊಂದು ಮಂದಿ ಅಪರಾಧಿಗಳಿಗೆ ಅಧೀನ ನ್ಯಾಯಾಲಯ ನೀಡಿದ್ದ ಜೀವಾವಧಿ ಶಿಕ್ಷೆಯನ್ನು ಮುಂಬಯಿ ಹೈಕೋರ್ಟ್ 2017ರ ಮೇ 4ರಂದು ಎತ್ತಿ ಹಿಡಿದಿತ್ತು. ಮಹತ್ವದ ಸಾಕ್ಷ್ಯ ಪುರಾವೆಗಳನ್ನು ತಿದ್ದಿದ ಮತ್ತು ನಾಶ ಮಾಡಿದ ಏಳು ಮಂದಿ ಪೊಲೀಸರು ಹಾಗೂ ವೈದ್ಯರಖುಲಾಸೆಯ ಆದೇಶವನ್ನು ತಳ್ಳಿ ಹಾಕಿತ್ತು.

ಮನುಷ್ಯಳಾಗಿ, ನಾಗರಿಕಳಾಗಿ, ಮಹಿಳೆಯಾಗಿ, ತಾಯಿಯಾಗಿ ತನ್ನ ಹಕ್ಕುಗಳನ್ನು ಅತ್ಯಂತ ಪಾಶವೀತನದಿಂದ ಉಲ್ಲಂಘಿಸಲಾಗಿದೆ ಎಂದು ಬಿಲ್ಕಿಸ್ ಬಾನು ನ್ಯಾಯಾಲಯದ ಮುಂದೆ ಅರಿಕೆ ಮಾಡಿಕೊಂಡಿದ್ದಳು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇರಳ | ಆದಿವಾಸಿ ಯುವಕ ಮಧು ಗುಂಪು ಹತ್ಯೆ ಪ್ರಕರಣ : 12 ಮಂದಿ ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿದ ಹೈಕೋರ್ಟ್

ಇಡೀ ದೇಶವನ್ನೇ ಬೆಚ್ಚಿ ಬೀಳಿಸಿದ್ದ ಕೇರಳದ ಆದಿವಾಸಿ ಯುವಕ ಮಧು ಗುಂಪು ಹಲ್ಲೆ ಮತ್ತು ಹತ್ಯೆ ಪ್ರಕರಣದ 12 ಜನ ಅಪರಾಧಿಗಳಿಗೆ ಹೈಕೋರ್ಟ್ ಸೋಮವಾರ (ಮೇ.25) ಜೀವಾವಧಿ ಶಿಕ್ಷೆ ಮತ್ತು ತಲಾ 2...

“ನನ್ನ ಅನುಮತಿ ಇಲ್ಲದೆ ನನ್ನ ಮಗುವನ್ನು ಸುಡಲಾಗಿದೆ”: ಕೊಲೆಯಾದ ಕೊಯಮತ್ತೂರು ಬಾಲಕಿಯ ತಾಯಿ ಅಳಲು

ಕೊಯಮತ್ತೂರು ಬಳಿ ಲೈಂಗಿಕ ದೌರ್ಜನ್ಯಕ್ಕೊಳಗಾಗಿ ಕೊಲೆಯಾದ 10 ವರ್ಷದ ಬಾಲಕಿಯ ತಾಯಿ, ತನ್ನ ಮಗಳ ಮೃತದೇಹದ ಅಂತ್ಯಸಂಸ್ಕಾರಕ್ಕೆ ತಾನು ಅನುಮತಿ ನೀಡಿರಲಿಲ್ಲ ಎಂದು ಹೇಳಿದ್ದಾರೆ. ಮಗುವಿನ ಮರಣೋತ್ತರ ಪರೀಕ್ಷೆಯ ನಂತರ, ತನ್ನ ಪತಿ...

ಅಷ್ಟೊಂದು ‘ಸೆಂಟಿಮೆಂಟ್’ ಬೇಡ: ‘ಕಾಕ್ರೋಚ್ ಅಭಿಯಾನ’ದ ವಿರುದ್ಧದ ಅರ್ಜಿಗೆ ಸಿಜೆಐ ಪ್ರತಿಕ್ರಿಯೆ

"ವ್ಯವಸ್ಥೆಯ ಮೇಲೆ ದಾಳಿ ಮಾಡುವವರ" ಕುರಿತು ತಾವು ನೀಡಿದ್ದ ಹೇಳಿಕೆಗೆ ವ್ಯಂಗ್ಯದ ರೂಪದಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಸೃಷ್ಟಿಯಾಗಿರುವ ‘ಕಾಕ್ರೋಚ್ ಜನತಾ ಪಾರ್ಟಿ’  ವಿವಾದವನ್ನು ಅಷ್ಟೊಂದು "ಭಾವನಾತ್ಮಕವಾಗಿ ತೆಗೆದುಕೊಳ್ಳಬೇಡಿ" ಎಂದು ಭಾರತದ ಮುಖ್ಯ ನ್ಯಾಯಮೂರ್ತಿ ...

ನಾಳೆ ದಿ. ಎಚ್.ಎಸ್ ದೊರೆಸ್ವಾಮಿ ಅವರಿಗೆ ‘ಕರ್ನಾಟಕದ ಗೌರವಾರ್ಪಣೆ’

ಸ್ವಾತಂತ್ರ್ಯ ಸೇನಾನಿ ದಿ. ಎಚ್.ಎಸ್ ದೊರೆಸ್ವಾಮಿ ಅವರಿಗೆ 'ಕರ್ನಾಟಕದ ಗೌರವಾರ್ಪಣೆ' ಕಾರ್ಯಕ್ರಮವನ್ನು ನಾಳೆ, ಅಂದರೆ 2026 ಮೇ 26 ರಂದು ಬೆಳಿಗ್ಗೆ 10.30ಕ್ಕೆ ಬೆಂಗಳೂರಿನ ಜ್ಞಾನಜ್ಯೋತಿ ಸಭಾಂಗಣದಲ್ಲಿ ಆಯೋಜಿಸಲಾಗಿದೆ. ಎಚ್.ಎಸ್‌ ದೊರೆಸ್ವಾಮಿ ಸ್ಮಾರಕ ಪ್ರತಿಷ್ಠಾನ,...

FACT CHECK : ಕಾಕ್ರೋಚ್ ಜನತಾ ಪಾರ್ಟಿಯ ಹೆಚ್ಚಿನ ಫಾಲೋವರ್ಸ್ ಪಾಕಿಸ್ತಾನದವರಾ?

ಇತ್ತೀಚೆಗೆ ಹುಟ್ಟಿಕೊಂಡ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಇನ್‌ಸ್ಟಾಗ್ರಾಮ್ ಪೇಜ್ ಕಾಂಗ್ರೆಸ್‌ನ 13 ಮಿಲಿಯನ್ ಮತ್ತು ಬಿಜೆಪಿಯ 9 ಮಿಲಿಯನ್ ಫಾಲೋವರ್ಸ್‌ಗಳ ಗಡಿಯನ್ನು ದಾಟಿದ್ದು, ಬರೋಬ್ಬರಿ 23 ಮಿಲಿಯನ್ (ಮೇ 24ರಂತೆ) ಫಾಲೋವರ್ಸ್‌...

ಬಾಂಗ್ಲಾ ಗಡಿಯಾಚೆಗೆ ತಳ್ಳಿದವರ ವಾಪಸಾತಿ: ಭಾರತೀಯರನ್ನೇ ಗಡಿಪಾರು ಮಾಡುತ್ತಿರುವ ಕೇಂದ್ರ?

ದಾಖಲೆರಹಿತ ವಲಸಿಗರೆಂದು ಆರೋಪಿಸಿ ಅಧಿಕಾರಿಗಳು ಬಾಂಗ್ಲಾದೇಶದ ಗಡಿಯಾಚೆಗೆ 'ತಳ್ಳಿದ್ದ' ಪಶ್ಚಿಮ ಬಂಗಾಳದ ನಿವಾಸಿಗಳನ್ನು ವಾಪಸ್ ಕರೆ ತರುವುದಾಗಿ ಕೇಂದ್ರ ಸರ್ಕಾರ ಶುಕ್ರವಾರ (ಮೇ 22,2026) ಸುಪ್ರೀಂ ಕೋರ್ಟ್‌ಗೆ ವಾಗ್ದಾನ ಮಾಡಿದೆ ಎಂದು ವರದಿಯಾಗಿದೆ....

SIR ಜಾರಿಯಾದ್ರೆ ಗ್ಯಾರಂಟಿಯನ್ನು ಕಳೆದುಕೊಳ್ತೀರಿ!

"ಬಡವರ ಮತಗಳನ್ನು ಪಟ್ಟಿಯಿಂದ ತೆಗೆಯಲು ಎಸ್‌ಐಆರ್ (SIR) ಮೂಲಕ ದೊಡ್ಡ ಸಂಚು ರೂಪಿಸಲಾಗಿದೆ. ನಾವೆಲ್ಲರೂ ಬಹಳ ಎಚ್ಚರಿಕೆಯಿಂದ ಇರಬೇಕು, ಇಲ್ಲದಿದ್ದರೆ ಮತ ಹಕ್ಕಿನ ಜೊತೆಗೆ ಶಕ್ತಿ, ಗೃಹಲಕ್ಷ್ಮಿಯಂತಹ ಗ್ಯಾರೆಂಟಿ ಯೋಜನೆಯನ್ನು ಕಳೆದುಕೊಳ್ಳಬೇಕಾಗುತ್ತದೆ" ಎಂದು...

ವೈಯಕ್ತಿಕ ಸ್ವಾತಂತ್ರ್ಯ Vs ಕಠಿಣ ಕಾಯ್ದೆ: ಯುಎಪಿಎ ಜಾಮೀನು ಭಿನ್ನಾಭಿಪ್ರಾಯಕ್ಕೆ ಸಿಗುವುದೇ ಸುಪ್ರೀಂ ಪರಿಹಾರ?

ಯುಎಪಿಎ ಅಡಿಯಲ್ಲಿ ದೀರ್ಘಕಾಲದ ಜೈಲುವಾಸದ ಹಿನ್ನೆಲೆ, ಜಾಮೀನು ನೀಡುವ ಕುರಿತು ಸುಪ್ರೀಂ ಕೋರ್ಟ್‌ನ ಎರಡು ನ್ಯಾಯಪೀಠಗಳ ನಡುವೆ ಭಿನ್ನಾಭಿಪ್ರಾಯ ಮೂಡಿದ ಕಾರಣ, ವಿಚಾರವನ್ನು ಸುಪ್ರೀಂ ಕೋರ್ಟ್‌ ವಿಸ್ತೃತ ಪೀಠಕ್ಕೆ ಶಿಫಾರಸು ಮಾಡಲಾಗಿದೆ ಎಂದು...

ತಾಯ್ತನ ಕ್ರೀಡೆಗೆ ಅಡ್ಡಿಯಾಗಬಾರದು: ಕುಸ್ತಿ ಒಕ್ಕೂಟಕ್ಕೆ ದೆಹಲಿ ಹೈಕೋರ್ಟ್ ಚಾಟಿ, ವಿನೇಶ್ ಫೋಗಟ್‌ಗೆ ಬಿಗ್ ರಿಲೀಫ್!

ಖ್ಯಾತ ಮಹಿಳಾ ಕುಸ್ತಿ ಪಟು ವಿನೇಶ್ ಫೋಗಟ್ ಅವರನ್ನು ದೇಶೀಯ ಕ್ರೀಡಾಕೂಟಗಳಲ್ಲಿ ಭಾಗವಹಿಸದಂತೆ "ಅನರ್ಹ" ಎಂದು ಘೋಷಿಸಿದ್ದ ಭಾರತೀಯ ಕುಸ್ತಿ ಒಕ್ಕೂಟದ (WFI) ನಿರ್ಧಾರವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ....

ಗುಜರಾತ್: ಜಾನುವಾರು ಹತ್ಯೆ ಆರೋಪದಲ್ಲಿ ಬಂಧಿಸಿದ 70 ವರ್ಷದ ಮುಸ್ಲಿಂ ವ್ಯಕ್ತಿ ಸಾವು: ‘ತಂದೆಯನ್ನು ಕೊಂದರು’ ಎಂದು ಆರೋಪಿಸಿದ ಮಗ

ಗುಜರಾತ್‌ನ ಅಹಮದಾಬಾದ್ ನಗರದಲ್ಲಿ ಪೊಲೀಸ್ ಕಸ್ಟಡಿಯಲ್ಲಿದ್ದ 70 ವರ್ಷದ ಜಹೀರ್ ಶೇಖ್ ಎಂಬ ಮುಸ್ಲಿಂ ವೃದ್ಧರೊಬ್ಬರು ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾರೆ. ಈ ಘಟನೆಯು ಗುಜರಾತ್‌ನಲ್ಲಿ ತೀವ್ರ ಸಂಚಲನ ಸೃಷ್ಟಿಸಿದ್ದು, ಕಸ್ಟಡಿ ನಿಂದನೆ, ಪೊಲೀಸರ ದೌರ್ಜನ್ಯ...