Homeಮುಖಪುಟದ್ವೇಷ ಭಾಷಣ: ಮೋದಿಗೆ ಕಳುಹಿಸುವ ಬದಲು 'ಜೆ.ಪಿ.ನಡ್ಡಾ'ಗೆ ನೊಟೀಸ್‌ ನೀಡಿದ ಚುನಾವಣಾ ಆಯೋಗ!

ದ್ವೇಷ ಭಾಷಣ: ಮೋದಿಗೆ ಕಳುಹಿಸುವ ಬದಲು ‘ಜೆ.ಪಿ.ನಡ್ಡಾ’ಗೆ ನೊಟೀಸ್‌ ನೀಡಿದ ಚುನಾವಣಾ ಆಯೋಗ!

- Advertisement -
- Advertisement -

ಪ್ರಧಾನಿ ನರೇಂದ್ರ ಮೋದಿ ವಿರುದ್ಧದ ದೂರುಗಳ ಆಧಾರದ ಮೇಲೆ ಚುನಾವಣಾ ಆಯೋಗವು ಮಾದರಿ ನೀತಿ ಸಂಹಿತೆ ಉಲ್ಲಂಘನೆಗಾಗಿ ನೋಟಿಸ್ ನೀಡಿದೆ. ಆದರೆ, ಈ ನೊಟೀಸ್‌ನ್ನು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರಿಗೆ ಕಳುಹಿಸಲಾಗಿದ್ದು, ಮೋದಿಗೆ ಅಲ್ಲ ಎನ್ನುವುದು ಬಯಲಾಗಿದೆ.

ವಾಸ್ತವವಾಗಿ, ನೋಟೀಸ್‌ನಲ್ಲಿ ಪ್ರಧಾನಿಯ ಹೆಸರನ್ನು ಉಲ್ಲೇಖಿಸಲಾಗಿಲ್ಲ. ನೋಟಿಸ್‌ಗೆ ಮೋದಿಯ ರಾಜಸ್ಥಾನದ ಬನ್ಸ್ವಾರಾದ ದುರುದ್ದೇಶಪೂರಿತ ಚುನಾವಣಾ ಭಾಷಣ ವಿರುದ್ಧದ ಕಾಂಗ್ರೆಸ್‌ನ ದೂರುಗಳು, ಜೊತೆಗೆ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾರ್ಕ್ಸ್‌ವಾದಿ) ನೀಡಿರುವ ದೂರುಗಳ ಪ್ರತಿಯನ್ನು ಲಗತ್ತಿಸಲಾಗಿದೆ.

ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಗೆ, ಕಾಂಗ್ರೆಸ್‌ ನಾಯಕ ರಾಹುಲ್ ಗಾಂಧಿ ಅವರ ವಿರುದ್ಧದ  ದೂರುಗಳಿಗೆ ಸಂಬಂಧಿಸಿದಂತೆ ಇದೇ ರೀತಿಯ ನೋಟಿಸ್ ನೀಡಲಾಗಿದೆ.

ಪ್ರಧಾನ ಮಂತ್ರಿಯೊಬ್ಬರ ವಿರುದ್ಧದ ದೂರನ್ನು ಸಮಿತಿಯು ಪರಿಗಣನೆಗೆ ತೆಗೆದುಕೊಂಡಿರುವುದು ಇತ್ತೀಚಿನ ಇತಿಹಾಸದಲ್ಲಿ ಇದೇ ಮೊದಲು ಎಂದು ಚುನಾವಣಾ ಅಧಿಕಾರಿಗಳು ತಿಳಿಸಿದ್ದಾರೆ. 2019ರ ಲೋಕಸಭೆ ಚುನಾವಣೆಯಲ್ಲಿ, ವಿರೋಧ ಪಕ್ಷಗಳು ನೀಡಿದ ದೂರಿಗೆ ಸಂಬಂಧಿಸಿ ಚುನಾವಣಾ ಆಯೋಗ ಮೋದಿಗೆ ಕ್ಲೀನ್ ಚಿಟ್ ನೀಡಿತ್ತು. ಅಂದಿನ ಚುನಾವಣಾ ಆಯುಕ್ತ ಅಶೋಕ್ ಲಾವಾಸಾ ಅವರು ಪ್ರಧಾನಿ ವಿರುದ್ಧದ ದೂರುಗಳಿಗೆ ಸಂಬಂಧಿಸಿದಂತೆ ಚುನಾವಣಾ ಆಯೋಗ ತೆಗೆದುಕೊಂಡ ಕೆಲವು ನಿರ್ಧಾರಗಳ ಬಗ್ಗೆ ಭಿನ್ನಾಭಿಪ್ರಾಯವನ್ನು ವ್ಯಕ್ತಪಡಿಸಿದ್ದರು.

ಅಚ್ಚರಿಯೆಂದರೆ ಚುನಾವಣಾ ಆಯೋಗವು ಗುರುವಾರದ ನೋಟಿಸ್‌ಗಳನ್ನು ನೇರವಾಗಿ ಸಂಬಂಧಪಟ್ಟ ವ್ಯಕ್ತಿಗಳಿಗೆ ನೀಡುವ ಬದಲು ಆಯಾ ಪಕ್ಷದ ಅಧ್ಯಕ್ಷರಿಗೆ ನೀಡಿದೆ. ಈ ಚುನಾವಣಾ ಆರಂಭದಿಂದಲೂ, ಆಯೋಗವು, ಕಾಂಗ್ರೆಸ್ ನಾಯಕಿ ಸುಪ್ರಿಯಾ ಶ್ರಿನಾಟೆ, ಪಶ್ಚಿಮ ಬಂಗಾಳದ ಬಿಜೆಪಿ ಸಂಸದ ದಿಲೀಪ್ ಘೋಷ್, ಆಮ್ ಆದ್ಮಿ ಪಕ್ಷದ ನಾಯಕ ಅತಿಶಿ, ಕಾಂಗ್ರೆಸ್ ನಾಯಕ ರಣದೀಪ್ ಸಿಂಗ್ ಸುರ್ಜೆವಾಲಾ ಮತ್ತು ಭಾರತ್ ರಾಷ್ಟ್ರ ಸಮಿತಿ ಮುಖ್ಯಸ್ಥ ಕೆ. ಚಂದ್ರಶೇಖರ್ ರಾವ್ ಅವರಿಗೆ ಶೋಕಾಸ್ ನೋಟಿಸ್ ಜಾರಿ ಮಾಡಿದೆ. ಆದರೆ ಈ ಎಲ್ಲಾ ಪ್ರಕರಣಗಳಲ್ಲಿ ನೊಟೀಸ್‌ನ್ನು ಆಪಾದಿತ ವ್ಯಕ್ತಿಗಳಿಗೆ ನೀಡಿತ್ತು.

ಚುನಾವಣಾ ಆಯೋಗವು ಬಿಜೆಪಿ ಅಧ್ಯಕ್ಷರಿಗೆ ನೀಡಿದ ನೋಟಿಸ್‌ನಲ್ಲಿ, ರಾಜಕೀಯ ಭಾಷಣದ ವೇಳೆ ಗುಣಮಟ್ಟ ಕಾಪಾಡಲು ಮತ್ತು ಮಾದರಿ ನೀತಿ ಸಂಹಿತೆಯ ನಿಬಂಧನೆಗಳನ್ನು ಅನುಸರಿಸಲು ಪಕ್ಷದ ಎಲ್ಲಾ ಸ್ಟಾರ್ ಪ್ರಚಾರಕರಿಗೆ ಸೂಚಿಸಲು ಹೇಳಿದೆ. ವೈಯಕ್ತಿಕ ಸ್ಟಾರ್ ಪ್ರಚಾರಕರು ಮಾಡಿದ ಭಾಷಣಗಳಿಗೆ ಅವರೇ ಜವಾಬ್ದಾರರಾಗಿ ಉಳಿಯುತ್ತಾರೆ, ಉನ್ನತ ಹುದ್ದೆಯಲ್ಲಿರುವವರು ಮಾಡಿದ ಪ್ರಚಾರ ಭಾಷಣಗಳು ಹೆಚ್ಚು ಗಂಭೀರ ಪರಿಣಾಮಗಳನ್ನು ಬೀರುತ್ತವೆ ಎಂದು ಆಯೋಗವು ಹೇಳಿದೆ.

ಮೋದಿ ದ್ವೇಷ ಭಾಷಣದ ಬಗ್ಗೆ ಪ್ರಮುಖ ದೂರುದಾರರಾಗಿರುವ ಕಾಂಗ್ರೆಸ್‌ ಈ ಬಗ್ಗೆ ಪ್ರತಿಕ್ರಿಯಿಸಿದ್ದು,  ಚುನಾವಣಾ ಆಯೋಗವು ನೋಟಿಸನ್ನು ಮೋದಿಗೆ ಕೊಡದೆ ನಡ್ಡಾ ಅವರಿಗೆ ಕಳುಹಿಸಿದೆ. ಚುನಾವಣಾ ಆಯೋಗ ಸೂಪರ್, ಪ್ರಧಾನ ಮಂತ್ರಿಯ ವಿಷಯಕ್ಕೆ ಬಂದಾಗ ಅವರು ತುಂಬಾ ಜಾಗರೂಕರಾಗಿದ್ದಾರೆ, ಗೃಹ ಸಚಿವರ ವಿಷಯಕ್ಕೆ ಬಂದಾಗ ಅವರು ತುಂಬಾ ಜಾಗರೂಕರಾಗಿದ್ದಾರೆ. ಆಯೋಗವು ನಿಷ್ಪಕ್ಷಪಾತವಾಗಿ ಕಾರ್ಯನಿರ್ವಹಿಸುತ್ತದೆ ಮತ್ತು ಅಗತ್ಯವಿರುವಾಗ ನೋಟಿಸ್‌ಗಳನ್ನು ನೀಡುತ್ತದೆ ಎಂದು ಕಾಂಗ್ರೆಸ್ ನಿರೀಕ್ಷಿಸುತ್ತದೆ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಹೇಳಿದ್ದಾರೆ.

ಹಿಂದಿನ ಪ್ರಧಾನಿಗಳಾದ ನರಸಿಂಹರಾವ್, ಅಟಲ್ ಬಿಹಾರಿ ವಾಜಪೇಯಿ ಮತ್ತು ಮನಮೋಹನ್ ಸಿಂಗ್ ವಿರುದ್ಧ ಯಾವುದೇ ದೂರುಗಳು ಇರಲಿಲ್ಲ. ನಾವು ಪ್ರಧಾನಿ ಮೋದಿ ವಿರುದ್ಧ ಎರಡನೇ ಬಾರಿ ದೂರು ನೀಡಿದ್ದೇವೆ. ಈ ಹಿಂದೆ ಗೃಹ ಸಚಿವ ಅಮಿತ್ ಶಾ ಅವರ ವಿರುದ್ಧ ದೂರು ನೀಡಿದ್ದರೂ ಯಾವುದೇ ಕ್ರಮ ಕೈಗೊಂಡಿರಲಿಲ್ಲ ಎಂದು ಹೇಳಿದ್ದಾರೆ.

ಇದೇ ರೀತಿ ಖರ್ಗೆ ಅವರಿಗೆ ಕಳುಹಿಸಿರುವ ನೋಟಿಸ್‌ನಲ್ಲಿ ಬಿಜೆಪಿ ಸಲ್ಲಿಸಿದ ದೂರುಗಳನ್ನುಚುನಾವಣಾ ಆಯೋಗ ಲಗತ್ತಿಸಿದೆ. ಅದರಲ್ಲಿ ರಾಹುಲ್‌ ಗಾಂಧಿ ಅವರು ಏಪ್ರಿಲ್ 18ರಂದು ಕೊಟ್ಟಾಯಂನಲ್ಲಿ ಮಾಡಿದ ಭಾಷಣದಲ್ಲಿ ಪ್ರಧಾನಿ ವಿರುದ್ಧ ಸುಳ್ಳು ಆರೋಪಗಳನ್ನು ಮಾಡುವ ಮೂಲಕ ನೀತಿ ಸಂಹಿತೆ ಉಲ್ಲಂಘಿಸಿದ್ದಾರೆ ಎಂದು ಆರೋಪಿಸಲಾಗಿದೆ.

ಇದನ್ನು ಓದಿ: ತೆಲಂಗಾಣದಲ್ಲಿ ಮುಸ್ಲಿಮರಿಗೆ ನೀಡಿದ್ದ ಮೀಸಲಾತಿಯನ್ನು ರದ್ದುಪಡಿಸುತ್ತೇವೆ: ಅಮಿತ್‌ ಶಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮತಕ್ಕಾಗಿ ನಗದು ಪ್ರಕರಣ: ಪಾಲಕ್ಕಾಡ್‌ನಲ್ಲಿ ಎನ್‌ಡಿಎ ಕಾರ್ಯಕರ್ತರ ವಿರುದ್ಧ ಎಫ್‌ಐಆರ್

ಮತದಾನದ ಒಂದು ದಿನಕ್ಕೆ ಮುಂಚಿತವಾಗಿ ಮತದಾರರಿಗೆ ಲಂಚ ನೀಡಿದ ಆರೋಪದ ಮೇಲೆ ಪಾಲಕ್ಕಾಡ್ ಕ್ಷೇತ್ರದ ಬಿಜೆಪಿ ನೇತೃತ್ವದ ಎನ್‌ಡಿಎ ಪ್ರತಿನಿಧಿಗಳ ವಿರುದ್ಧ ಬುಧವಾರ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಏಪ್ರಿಲ್ 8 ರಂದು ಬೆಳಿಗ್ಗೆ 10...

ಮಾದಕ ವ್ಯಸನ : 10 ವರ್ಷದಲ್ಲಿ ಐವರು ಗಂಡು ಮಕ್ಕಳನ್ನು ಕಳೆದುಕೊಂಡ ವೃದ್ಧ ದಂಪತಿ

ಡ್ರಗ್ ಕಾರಣದಿಂದ ವೃದ್ದ ದಂಪತಿ ತನ್ನ ಐವರು ಗಂಡು ಮಕ್ಕಳನ್ನು ಕಳೆದುಕೊಂಡ ಹೃದಯ ವಿದ್ರಾವಕ ಮತ್ತು ಆಘಾತಕಾರಿ ವರದಿ ಪಂಜಾಬ್‌ನ ಕಪುರ್ಥಲಾ ಜಿಲ್ಲೆಯ ಸುಲ್ತಾನ್‌ಪುರ ಲೋಧಿಯಿಂದ ಬಂದಿದೆ. ಸುಲ್ತಾನ್‌ಪುರ ಲೋಧಿಯ ಪಂಡೋರಿ ಮೊಹಲ್ಲಾ ಎಂಬ ಪ್ರದೇಶದಲ್ಲಿ ವಾಸಿಸುತ್ತಿರುವ...

ಜಮ್ಮು-ಕಾಶ್ಮೀರ: 28 ವರ್ಷಗಳ ಕಾಲ ಸೇನಾ ಕಸ್ಟಡಿಯಲ್ಲಿದ್ದ ವ್ಯಕ್ತಿ ಸಾವನ್ನಪ್ಪಿದ್ದಾನೆ ಎಂದು ಘೋಷಿಸಿದ ಶ್ರೀನಗರ ನ್ಯಾಯಾಲಯ

1997 ರಲ್ಲಿ ಸೇನಾ ಕಸ್ಟಡಿಗೆ ತೆಗೆದುಕೊಂಡ ಸುಮಾರು 28 ವರ್ಷಗಳ ನಂತರ ಶ್ರೀನಗರ ನ್ಯಾಯಾಲಯವು ಒಬ್ಬ ವ್ಯಕ್ತಿಯನ್ನು ಸತ್ತನೆಂದು ಘೋಷಿಸಿದೆ. ಬಂಧನದಲ್ಲಿದ್ದಾಗ ಕೊಲ್ಲಲ್ಪಟ್ಟಿದ್ದಾನೆ ಎಂಬ ತನಿಖಾ ಸಂಶೋಧನೆಗಳನ್ನು ಉಲ್ಲೇಖಿಸಿ ಮತ್ತು ಸಾವಿನ ಕಾನೂನುಬದ್ಧ...

ದೆಹಲಿ: ವೇತನ ಕೇಳಿದ್ದಕ್ಕೆ ಅಪಾಯಕಾರಿ ಚರಂಡಿ ಸ್ವಚ್ಛಗೊಳಿಸಲು ಒತ್ತಾಯ; ಸುರಕ್ಷತಾ ಸಾಧನಗಳಿಲ್ಲದೆ ಚರಂಡಿಗಿಳಿದ ನೈರ್ಮಲ್ಯ ಕಾರ್ಮಿಕ ಸಾವು

ವಾಲ್ಮೀಕಿ ಸಮುದಾಯದ ಗುತ್ತಿಗೆ ನೈರ್ಮಲ್ಯ ಕಾರ್ಮಿಕ ರಾಹುಲ್ (32) ಮಾರ್ಚ್ 30 ರಂದು ದಿಲ್ಶಾದ್ ಗಾರ್ಡನ್‌ನ ತಹಿರ್‌ಪುರದಲ್ಲಿ 8 ರಿಂದ 10 ಅಡಿ ಆಳದ ಚರಂಡಿಯನ್ನು ಹಸ್ತಚಾಲಿತವಾಗಿ ಹೂಳು ತೆಗೆಯುವಾಗ ಯಾವುದೇ ಸುರಕ್ಷತಾ...

ಗಾಝಾ | ಇಸ್ರೇಲ್ ದಾಳಿಯಲ್ಲಿ ಅಲ್‌-ಜಝೀರಾ ಪತ್ರಕರ್ತ ಸಾವು : ತೀವ್ರ ಖಂಡನೆ ವ್ಯಕ್ತಪಡಿಸಿದ ಮಾಧ್ಯಮ ಸಂಸ್ಥೆ

ಗಾಝಾ ಪಟ್ಟಿಯಲ್ಲಿ ಇಸ್ರೇಲ್ ನಡೆಸಿದ ಡ್ರೋನ್ ದಾಳಿಯಲ್ಲಿ ಅಲ್-ಜಝೀರಾ ಮಾಧ್ಯಮ ಸಂಸ್ಥೆಯ ಪತ್ರಕರ್ತ ಮೊಹಮ್ಮದ್ ವಿಶಾಹ್ ಸಾವನ್ನಪ್ಪಿದ್ದಾರೆ. ಗಾಝಾ ನಗರದ ಪಶ್ಚಿಮ ಭಾಗದಲ್ಲಿರುವ ಕರಾವಳಿ ರಸ್ತೆಯಾದ ಅಲ್-ರಶೀದ್ ಸ್ಟ್ರೀಟ್‌ನಲ್ಲಿ ಬುಧವಾರ (ಏ.8) ಕಾರಿನ...

ಅಸ್ಸಾಂ : ಮತದಾನದ ಹಿಂದಿನ ದಿನ ಪಕ್ಷಕ್ಕೆ ರಾಜೀನಾಮೆ ನೀಡಿದ ಕಾಂಗ್ರೆಸ್ ಅಭ್ಯರ್ಥಿ!

ಅಸ್ಸಾಂ ವಿಧಾನಸಭೆ ಚುನಾವಣೆಗೆ ಕೇವಲ ಒಂದು ದಿನ ಬಾಕಿ ಇರುವಾಗ, ಉದಲ್ಗುರಿ (ಎಸ್‌ಟಿ) ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಸುರೇನ್ ದೈಮರಿ ಅವರು ಪಕ್ಷಕ್ಕೆ ರಾಜೀನಾಮೆ ನೀಡಿ ತಮ್ಮ ಉಮೇದುವಾರಿಕೆಯನ್ನು ಹಿಂಪಡೆದಿದ್ದಾರೆ ಎಂದು ವರದಿಯಾಗಿದೆ. ಪಕ್ಷದ ನಾಯಕತ್ವದಿಂದ...

ವಿಧಾನಸಭೆ ಚುನಾವಣೆ : ಅಸ್ಸಾಂ, ಕೇರಳ, ಪುದುಚೇರಿಯಲ್ಲಿ ಇಂದು ಮತದಾನ

ಅಸ್ಸಾಂ, ಕೇರಳ ಮತ್ತು ಪುದುಚೇರಿ ವಿಧಾನಸಭೆಯ ಚುನಾವಣೆಯ ಮತದಾನ ಇಂದು (ಏ.9, 2026) ಒಂದೇ ಹಂತದಲ್ಲಿ ನಡೆಯಲಿದೆ. ಈಗಾಗಲೇ ಮತದಾನ ಆರಂಭಗೊಂಡಿದೆ. ಅಸ್ಸಾಂನ 126 ಸದಸ್ಯ ಬಲದ ವಿಧಾನಸಭೆಗೆ ನಡೆಯಲಿರುವ ಚುನಾವಣೆಯು...

‘ಯುದ್ಧ ಮುಂದುವರಿಸಲು ಸಾಧ್ಯವಾಗದೆ ಅಮೆರಿಕ ಬಲವಂತವಾಗಿ ಕದನ ವಿರಾಮ ಘೋಷಿಸಿತು’: ಭಾರತದಲ್ಲಿ ಇರಾನ್ ಸುಪ್ರೀಂ ಲೀಡರ್ ಪ್ರತಿನಿಧಿ

ನವದೆಹಲಿ: ಸಂಘರ್ಷವನ್ನು ಮುುಂದುವರಿಸಲು ವಿಫಲವಾದ ನಂತರ ಅಮೆರಿಕವು ಇರಾನ್ ಜೊತೆ ಕದನ ವಿರಾಮ ಘೋಷಿಸಲು ಒತ್ತಾಯಿಸಲ್ಪಟ್ಟಿತು ಮತ್ತು ನಿರಂತರ ಹಗೆತನವು ವಾಷಿಂಗ್ಟನ್‌ಗೆ ಮತ್ತಷ್ಟು ಹಿನ್ನಡೆಗೆ ಕಾರಣವಾಗುತ್ತಿತ್ತು ಎಂದು ಇರಾನ್‌ನ ಸರ್ವೋಚ್ಚ ನಾಯಕನ ಭಾರತದಲ್ಲಿನ...

ಶಾರದಾ ಚಿಟ್ ಫಂಡ್ ಹಗರಣ: 13 ವರ್ಷಗಳ ನಂತರ ಪ್ರಮುಖ ಆರೋಪಿ ಸುದೀಪ್ತ ಸೇನ್ ಗೆ ಜಾಮೀನು ಮಂಜೂರು ಮಾಡಿದ ಕೊಲ್ಕತ್ತಾ ಹೈಕೋರ್ಟ್

ಕೊಲ್ಕತ್ತಾ ಹೈಕೋರ್ಟ್ ಬುಧವಾರ ಬಹುಕೋಟಿ ಶಾರದಾ ಚಿಟ್ ಫಂಡ್ ಹಗರಣದ ಪ್ರಮುಖ ಆರೋಪಿ ಸುದೀಪ್ತ ಸೇನ್ ಗೆ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದ್ದು, 13 ವರ್ಷಗಳ ನಂತರ ಜೈಲಿನಿಂದ ಬಿಡುಗಡೆಯಾಗಲು ದಾರಿ ಸುಗಮವಾಗಿದೆ. ಪಶ್ಚಿಮ...

ಇಂದೋರ್: ಪೊಲೀಸರಿಂದ ಹಣಕ್ಕಾಗಿ ಬೇಡಿಕೆ, ಹಲ್ಲೆ ಆರೋಪ; 25 ವರ್ಷದ ಟ್ಯಾಕ್ಸಿ ಚಾಲಕ ಆತ್ಮಹತ್ಯೆ: ಪೊಲೀಸ್ ಅಮಾನತು

ಇಂದೋರ್: ಪೊಲೀಸರ ಹಲ್ಲೆ ಮತ್ತು ಭ್ರಷ್ಟಾಚಾರವನ್ನು ಆರೋಪಿಸಿ ವೀಡಿಯೊ ರೆಕಾರ್ಡ್ ಮಾಡಿದ ನಂತರ 25 ವರ್ಷದ ಟ್ಯಾಕ್ಸಿ ಚಾಲಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿದ್ದು, ಅಧಿಕಾರಿಗಳು ಸಬ್ ಇನ್ಸ್‌ಪೆಕ್ಟರ್‌ನನ್ನು ಅಮಾನತುಗೊಳಿಸಿದ್ದಾರೆ ಎಂದು ಅಧಿಕಾರಿಯೊಬ್ಬರು ಬುಧವಾರ ತಿಳಿಸಿದ್ದಾರೆ. ಅಭಿಷೇಕ್...