Homeಮುಖಪುಟಉತ್ತರಪತ್ರಿಕೆಯಲ್ಲಿ ‘ಜೈ ಶ್ರೀರಾಮ್‌' ಬರೆದಿದ್ದ ವಿದ್ಯಾರ್ಥಿಗಳಿಗೆ 50% ಅಂಕ: ಮರುಮೌಲ್ಯಮಾಪನ ಮಾಡಿದಾಗ ಶೂನ್ಯಕ್ಕಿಳಿದ ಅಂಕ

ಉತ್ತರಪತ್ರಿಕೆಯಲ್ಲಿ ‘ಜೈ ಶ್ರೀರಾಮ್‌’ ಬರೆದಿದ್ದ ವಿದ್ಯಾರ್ಥಿಗಳಿಗೆ 50% ಅಂಕ: ಮರುಮೌಲ್ಯಮಾಪನ ಮಾಡಿದಾಗ ಶೂನ್ಯಕ್ಕಿಳಿದ ಅಂಕ

- Advertisement -
- Advertisement -

ಪರೀಕ್ಷೆಗಳಿಗೆ ಬರೆದಿರುವ ಉತ್ತರಗಳ ಗುಣಮಟ್ಟದ ಆಧಾರದಲ್ಲಿ ಅಂಕಗಳನ್ನು ನೀಡಲಾಗುತ್ತದೆ. ಆದರೆ ಉತ್ತರಪ್ರದೇಶದ  ಜೌನ್‌ಪುರದಲ್ಲಿರುವ ವೀರ್‌ ಬಹದ್ದೂರ್‌ ಸಿಂಗ್‌ ಪೂರ್ವಾಂಚಲ ವಿಶ್ವವಿದ್ಯಾಲಯದಲ್ಲಿನ ಪರೀಕ್ಷೆಯಲ್ಲಿನ ಉತ್ತರ ಪತ್ರಿಕೆಯಲ್ಲಿ ‘ಜೈ ಶ್ರೀರಾಮ್‌’ ಮತ್ತು ಕ್ರಿಕೆಟ್‌ ಆಟಗಾರರ ಹೆಸರುಗಳನ್ನು ಬರೆದಿರುವ ವಿದ್ಯಾರ್ಥಿಗಳಿಗೆ ಮೌಲ್ಯಮಾಪಕರು ಶೇ.50 ಅಂಕ ನೀಡಿದ್ದಾರೆ.

ಮೂಲಗಳ ಪ್ರಕಾರ, ಅಂಕಗಳನ್ನು ನೀಡಿದ ಇಬ್ಬರು ಶಿಕ್ಷಕರನ್ನು ವಜಾಗೊಳಿಸಲು ವಿಶ್ವವಿದ್ಯಾಲಯವು ಶಿಫಾರಸು ಮಾಡಿದೆ. ವಿಶ್ವವಿದ್ಯಾನಿಲಯದ ಫಾರ್ಮಸಿ ಕೋರ್ಸ್‌ನ ನಾಲ್ವರು ವಿದ್ಯಾರ್ಥಿಗಳ ಉತ್ತರ ಪುಸ್ತಕಗಳನ್ನು ಆರ್‌ಟಿಐ ಅರ್ಜಿಯ ನಂತರ ಮರು ಪರಿಶೀಲಿಸಿದಾಗ ವಿಷಯ ಬೆಳಕಿಗೆ ಬಂದಿದೆ. ಈ ಕುರಿತು ವಿಶ್ವವಿದ್ಯಾಲಯ ಮಾಜಿ ವಿದ್ಯಾರ್ಥಿ ದಿವ್ಯಾಾಂಶು ಸಿಂಗ್ ಆರ್‌ಟಿಐ ಅರ್ಜಿ ಸಲ್ಲಿಸಿದ್ದರು.

ಮೂಲಗಳ ಪ್ರಕಾರ, ಡಿ.ಫಾರ್ಮಾ (ಡಿಪ್ಲೊಮಾ ಇನ್ ಫಾರ್ಮಸಿ) ಕೋರ್ಸ್‌ನ ನಾಲ್ವರು ವಿದ್ಯಾರ್ಥಿಗಳ ಉತ್ತರ ಪತ್ರಿಕೆಗಳಲ್ಲಿ ಹಲವೆಡೆ ‘ಜೈ ಶ್ರೀ ರಾಮ್’ ಎಂಬ ಘೋಷಣೆ ಇರುವುದು ಕಂಡುಬಂದಿದೆ ಮತ್ತು ಅನೇಕ ಪ್ರಮುಖ ಭಾರತೀಯ ಮತ್ತು ಅಂತರಾಷ್ಟ್ರೀಯ ಕ್ರಿಕೆಟಿಗರ ಹೆಸರೂ ಇದೆ.

ಈ ನಾಲ್ವರು ವಿದ್ಯಾರ್ಥಿಗಳು ಶೇಕಡಾ 50ಕ್ಕಿಂತ ಹೆಚ್ಚು ಅಂಕಗಳನ್ನು ಪಡೆದಿದ್ದಾರೆ ಎಂದು ಆರ್‌ಟಿಐ ಮಾಹಿತಿ ಬಹಿರಂಗಪಡಿಸಿದೆ. ಉತ್ತರ ಪುಸ್ತಕಗಳನ್ನು ಮರು ಮೌಲ್ಯಪನ ಮಾಡಿದಾಗ ನಾಲ್ಕು ವಿದ್ಯಾರ್ಥಿಗಳಿಗೆ ಶೂನ್ಯ ಅಂಕಗಳನ್ನು ನೀಡಲಾಗಿದೆ.

ಆರ್‌ಟಿಐ ಮಾಹಿತಿ ಪಡೆದ ಮಾಜಿ ವಿದ್ಯಾರ್ಥಿಯು ವಿವಿಯ ಕುಲಪತಿಯಾಗಿರುವ ರಾಜ್ಯಪಾಲರಿಗೆ ಈ ಕುರಿತು  ವಿವರಗಳನ್ನು ಕಳುಹಿಸಿದ್ದು,  ಸಮಗ್ರ ತನಿಖೆಗೆ ಒತ್ತಾಯಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ. ಈ ವಿಚಾರ ತಿಳಿಯುತ್ತಿದ್ದಂತೆ ರಾಜಭವನ ತನಿಖೆಗೆ ಆದೇಶಿಸಿದೆ. ತನಿಖೆಗೆ ವಿಶ್ವವಿದ್ಯಾಲಯದಿಂದ ಸಮಿತಿಯೊಂದನ್ನು ರಚಿಸಲಾಗಿದ್ದು, ಸಮಿತಿಯ ವರದಿಯನ್ನು ಆಧರಿಸಿ, ಸಂಬಂಧಪಟ್ಟ ಇಲಾಖೆಯ ಇಬ್ಬರು ಅಧ್ಯಾಪಕರ ವಿರುದ್ಧ ಕ್ರಮಕ್ಕೆ ಶಿಫಾರಸು ಮಾಡಲಾಗಿದೆ.

ಫಾರ್ಮಸಿ ವಿಭಾಗದ ಇಬ್ಬರು ಅಧ್ಯಾಪಕರನ್ನು ವಜಾಗೊಳಿಸುವಂತೆ ನಾವು ಶಿಫಾರಸು ಮಾಡಿದ್ದೇವೆ.  ರಾಜಭವನದಿಂದ ಅನುಮತಿ ಪಡೆದ ನಂತರ ಅವರನ್ನು ವಜಾಗೊಳಿಸಲಾಗುವುದು ಎಂದು ವಿವಿಯ ಹಿರಿಯ ಅಧಿಕಾರಿಯೊಬ್ಬರು ಜೌನ್‌ಪುರದಲ್ಲಿ ತಿಳಿಸಿದ್ದಾರೆ.

ಇದನ್ನು ಓದಿ: ದ್ವೇಷ ಭಾಷಣ: ಮೋದಿಗೆ ಕಳುಹಿಸುವ ಬದಲು ‘ಜೆ.ಪಿ.ನಡ್ಡಾ’ಗೆ ನೊಟೀಸ್‌ ನೀಡಿದ ಚುನಾವಣಾ ಆಯೋಗ!

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳದ ಬಿಸಿಯೂಟ ಇಸ್ಕಾನ್‌ಗೆ ಹಸ್ತಾಂತರವಿಲ್ಲ: ಸರ್ಕಾರದ ಸ್ಪಷ್ಟನೆ, ಕಲ್ಕತ್ತಾ ಹೈಕೋರ್ಟ್‌ನಿಂದ ಅಫಿಡವಿಟ್‌ಗೆ ನಿರ್ದೇಶನ 

ಕೋಲ್ಕತ್ತಾ: ರಾಜ್ಯದ ಶಾಲೆಗಳಲ್ಲಿ ಜಾರಿಯಲ್ಲಿರುವ ಪಿಎಂ-ಪೋಷಣ್ (ಮಧ್ಯಾಹ್ನದ ಬಿಸಿಯೂಟ) ಯೋಜನೆಯ ನಿರ್ವಹಣೆಯನ್ನು ಇಸ್ಕಾನ್ ಸಂಸ್ಥೆಗೆ ಹಸ್ತಾಂತರಿಸುವ ಯಾವುದೇ ಅನುಮೋದಿತ ಪ್ರಸ್ತಾಪ ಸರ್ಕಾರಕ್ಕಿಲ್ಲ ಎಂದು ಪಶ್ಚಿಮ ಬಂಗಾಳ ಸರ್ಕಾರ ಸ್ಪಷ್ಟಪಡಿಸಿದೆ. ಈ ಕುರಿತು ಅಫಿಡವಿಟ್...

ಗಾಜಿಯಾಬಾದ್‌| ಗೋಮಾಂಸ ಸಾಗಾಣಿಕೆ ಆರೋಪ; ವ್ಯಕ್ತಿ ಮೇಲೆ ಗುಂಪಿನಿಂದ ಹಲ್ಲೆ

ಉತ್ತರ ಪ್ರದೇಶದ ಗಾಜಿಯಾಬಾದ್‌ ನಗರದ ಶಾಸ್ತ್ರಿ ನಗರದಲ್ಲಿ ಗೋಮಾಂಸ ಸಾಗಿಸುತ್ತಿದ್ದಾರೆ ಎಂಬ ಅನುಮಾನದ ಮೇಲೆ ಸಲೀಂ ಎಂದು ಗುರುತಿಸಲಾದ ವ್ಯಕ್ತಿಯ ಮೇಲೆ ನಕಲಿ ಗೋರಕ್ಷಕರ ಗುಂಪೊಂದು ಹಲ್ಲೆ ನಡೆಸಿದೆ. ಸಾಮಾಜಿಕ ಮಾಧ್ಯಮದಲ್ಲಿ ವೀಡಿಯೊ...

ಬಾಂಗ್ಲಾ ಗಡಿಯಾಚೆಗೆ ತಳ್ಳಿದ್ದ ನಾಲ್ವರು ಭಾರತೀಯರನ್ನು ವಾಪಸ್ ಕರೆತಂದ ಕೇಂದ್ರ ಸರ್ಕಾರ

ವರ್ಷದ ಹಿಂದೆ, ಅಂದರೆ 2025ರ ಜೂನ್ ತಿಂಗಳಲ್ಲಿ ಬಾಂಗ್ಲಾದೇಶದ ಗಡಿಯಾಚೆಗೆ ತಳ್ಳಿದ್ದ ನಾಲ್ವರು ಭಾರತೀಯರು ಬುಧವಾರ (ಜು.8) ಪಶ್ಚಿಮ ಬಂಗಾಳದ ಬೀರ್‌ಭೂಮ್ ಜಿಲ್ಲೆಯ ತಮ್ಮ ಗ್ರಾಮಕ್ಕೆ ಹಿಂದಿರುಗಿದ್ದಾರೆ ಎಂದು ವರದಿಯಾಗಿದೆ. ಸುನಾಲಿ...

ಬೆಂಗಳೂರಿನ ಜ್ವಲಂತ ನಾಗರಿಕ ಸಮಸ್ಯೆಗಳ ವಿರುದ್ಧ ಜುಲೈ 12ಕ್ಕೆ ಬೃಹತ್ ‘ಜನಾಕ್ರೋಶ ಸಮಾವೇಶ

ಸಿಲಿಕಾನ್ ಸಿಟಿ ಬೆಂಗಳೂರಿನ ನಾಗರಿಕರು ಪ್ರತಿನಿತ್ಯ ಎದುರಿಸುತ್ತಿರುವ ನರಕಸದೃಶ ಸಮಸ್ಯೆಗಳ ವಿರುದ್ಧ ಮತ್ತು ಆಡಳಿತ ವ್ಯವಸ್ಥೆಯ ಭ್ರಷ್ಟಾಚಾರವನ್ನು ಖಂಡಿಸಿ ಭಾರತ ಕಮ್ಯುನಿಸ್ಟ್ ಪಕ್ಷ (ಮಾರ್ಕ್ಸ್‌ವಾದಿ) ಬೃಹತ್ ‘ಜನಾಕ್ರೋಶ ಸಮಾವೇಶ’ವನ್ನು ಹಮ್ಮಿಕೊಂಡಿದೆ. ಈ ‘ಜನಾಕ್ರೋಶ...

ಭೀಕರ ಪ್ರವಾಹಕ್ಕೆ ಕೊಚ್ಚಿಹೋದ 3 ಸಾವಿರ LPG ಸಿಲಿಂಡರ್

ಮಹಾರಾಷ್ಟ್ರದಲ್ಲಿ ವಾರದಿಂದ ಸುರಿಯುತ್ತಿರುವ ಮಳೆ ಇಡೀ ಜನಜೀವನವನ್ನು ಅಸ್ತವ್ಯಸ್ತಗೊಳಿಸಿದ್ದು, ಪ್ರಕೃತಿಯ ವಿಕೋಪದ ನಡುವೆ ರಾಯಗಢ ಜಿಲ್ಲೆಯಿಂದ ಅತ್ಯಂತ ಆಘಾತಕಾರಿ ವಿಡಿಯೋವೊಂದು ವೈರಲ್ ಆಗಿದೆ. ಇಲ್ಲಿನ ಎಚ್‌ಪಿಸಿಎಲ್ (HPCL) ಪಾತಾಳಗಂಗಾ ಎಲ್‌ಪಿಜಿ ಬಾಟ್ಲಿಂಗ್...

ಹೈದರಾಬಾದ್‌| ಪವನ್‌ ಕಲ್ಯಾಣ್‌ ಟೀಕಿಸಿದ ಯೂಟ್ಯೂಬರ್ ರಾವಣ್ ಮೇಲೆ ಯುಎಪಿಎ ಕೇಸ್; ನಿವಾಸದಲ್ಲಿ ಪೊಲೀಸರ ಶೋಧ

ತೆಲುಗು ಯೂಟ್ಯೂಬರ್, ಸಾಮಾಜಿಕ ಕಾರ್ಯಕರ್ತ ರಾವಣ್‌ (ಬಚಲಕೂರಿ ಜೋಸೆಫ್) ಅವರನ್ನು ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯ್ದೆ (ಯುಎಪಿಎ) ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಪೊಲೀಸರು ಬಂಧಿಸಿದ್ದು, ಆಂಧ್ರಪ್ರದೇಶ ಪೊಲೀಸರು ಹೈದರಾಬಾದ್‌ನಲ್ಲಿರುವ ಯೂಟ್ಯೂಬರ್ ರಾವಣ್ ನಿವಾಸದಲ್ಲಿ...

ಬೀದಿಬದಿ ವ್ಯಾಪಾರಿಗಳ ಒಕ್ಕಲೆಬ್ಬಿಸುವಿಕೆ ಖಂಡಿಸಿ ಸರ್ಕಾರದ ವಿರುದ್ದ ಬೃಹತ್ ಪ್ರತಿಭಟನೆ

ಬೆಂಗಳೂರು ನಗರದಲ್ಲಿ ಫುಟ್‌ಪಾತ್ ಒತ್ತುವರಿ ತೆರವಿನ ಹೆಸರಿನಲ್ಲಿ ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ನಡೆಸುತ್ತಿರುವ ಏಕಪಕ್ಷೀಯ ಕಾರ್ಯಾಚರಣೆ ಬಡ ಬೀದಿಬದಿ ವ್ಯಾಪಾರಿಗಳ ಬದುಕನ್ನು ಬೀದಿಗೆ ತಳ್ಳಿದೆ. ಪ್ರಾಧಿಕಾರದ ಈ ಜನವಿರೋಧಿ ‘ಆಪರೇಷನ್’ ಖಂಡಿಸಿ,...

ಬಿಹಾರ| ಹಿಜಾಬ್ ತೆಗೆದು ಹಣೆಗೆ ಸಿಂಧೂರ ಇಟ್ಟುಕೊಳ್ಳುವಂತೆ ಮುಸ್ಲಿಂ ಮಹಿಳೆಗೆ ಒತ್ತಾಯಿಸಿದ ಗುಂಪು

ಪುರುಷರ ಗುಂಪೊಂದು ದಾರಿಯಲ್ಲಿ ಹೋಗುತ್ತಿದ್ದ ಮುಸ್ಲಿಂ ಮಹಿಳೆಯನ್ನು ತಡೆದು ದೌರ್ಜನ್ಯ ಎಸಗಿದ್ದು, ಆಕೆ ಧರಿಸಿದ್ದ ಹಿಜಾಬ್ ತಗೆದು ಹಣೆಗೆ ಸಿಂಧೂರ ಇಟ್ಟುಕೊಳ್ಳುವಂತೆ ಹಿಂದುತ್ವ ಕಿಡಿಗೇಡಿಗಳು ಒತ್ತಾಯಿಸಿರುವ ವಿಡಿಯೊ ವೈರಲ್ ಆಗಿದೆ. ಜುಲೈ 8 ರ...

ಕೃಷಿ ಭೂಮಿ ಉಳಿಸಲು ರೈತ ಸಂಘಟನೆಗಳಿಂದ ಜುಲೈ 11ಕ್ಕೆ ‘ಬಿಡದಿ ಚಲೋ’

ಬಿಡದಿ ಉಪನಗರ (ಟೌನ್‌ಶಿಪ್) ಯೋಜನೆಗಾಗಿ ರೈತರ ಫಲವತ್ತಾದ ಕೃಷಿ ಭೂಮಿಯನ್ನು ವಶಪಡಿಸಿಕೊಳ್ಳಲು ಮುಂದಾಗಿರುವ ರಾಜ್ಯ ಸರ್ಕಾರದ ಜನವಿರೋಧಿ ಧೋರಣೆಯನ್ನು ಖಂಡಿಸಿ, ಜುಲೈ 11 ರಂದು ಬೃಹತ್ ‘ಬಿಡದಿ ಚಲೋ’ ಹಸಿರು ಹೆದ್ದಾರಿ ಪ್ರತಿಭಟನೆಯನ್ನು...

ಅಮೆರಿಕ-ಇರಾನ್ ನಡುವೆ ಮತ್ತೆ ಕಾಳಗ : ಕದನ ವಿರಾಮ ಮುಕ್ತಾಯಗೊಂಡಿದೆ ಎಂದ ಟ್ರಂಪ್

ಮಂಗಳವಾರ ರಾತ್ರಿಯಿಂದ (ಭಾರತೀಯ ಕಾಲಮಾನ) ಅಮೆರಿಕ-ಇರಾನ್ ನಡುವೆ ಮತ್ತೆ ಕಾಳಗ ಶುರುವಾಗಿದ್ದು, ಕದನ ವಿರಾಮ ಮುಕ್ತಾಯಗೊಂಡಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಟರ್ಕಿಯಲ್ಲಿ ನಡೆದ ನ್ಯಾಟೋ ಶೃಂಗಸಭೆಯಲ್ಲಿ ಮಾತನಾಡಿದ ಟ್ರಂಪ್...