Homeಮುಖಪುಟ100 ಕೋಟಿ ದಾಟಿದ ಬಿಜೆಪಿಯ ಗೂಗಲ್‌ ಜಾಹೀರಾತು ವೆಚ್ಚ!; ಕರ್ನಾಟಕವೇ ಪ್ರಮುಖ ಟಾರ್ಗೆಟ್‌

100 ಕೋಟಿ ದಾಟಿದ ಬಿಜೆಪಿಯ ಗೂಗಲ್‌ ಜಾಹೀರಾತು ವೆಚ್ಚ!; ಕರ್ನಾಟಕವೇ ಪ್ರಮುಖ ಟಾರ್ಗೆಟ್‌

- Advertisement -
- Advertisement -

ಬಿಜೆಪಿ ದೇಶದಲ್ಲಿ ಗೂಗಲ್‌ ಮತ್ತು ಯೂಟ್ಯೂಬ್‌ನಲ್ಲಿ ರಾಜಕೀಯ ಜಾಹೀರಾತಿಗೆ ಅತಿ ಹೆಚ್ಚು ವೆಚ್ಚಗೊಳಿಸಿರುವುದು ಬಹಿರಂಗವಾಗಿದೆ. ಸರ್ಚ್ ಇಂಜಿನ್‌ ಗೂಗಲ್ ಮತ್ತು ಅದರ ವಿಡಿಯೋ ಪ್ಲಾಟ್‌ಫಾರ್ಮ್ ಯೂಟ್ಯೂಬ್‌ನಲ್ಲಿ ಬಿಜೆಪಿಯ ರಾಜಕೀಯ ಜಾಹೀರಾತುಗಳ ವೆಚ್ಚ 100 ಕೋಟಿ ರೂಪಾಯಿಗಳನ್ನು ದಾಟಿದೆ. ಇಷ್ಟೊಂದು ವೆಚ್ಚದಲ್ಲಿ ಗೂಗಲ್‌ನಲ್ಲಿ ಭಾರತದ ಯಾವುದೇ ರಾಜಕೀಯ ಪಕ್ಷ ಜಾಹೀರಾತು ನೀಡಿಲ್ಲ ಎನ್ನುವುದು ಇದೀಗ ಬಹಿಂಗವಾಗಿದೆ.

ಬಿಜೆಪಿಯ ಡಿಜಿಟಲ್ ಪ್ರಚಾರಗಳ ಪ್ರಚಾರಕ್ಕಾಗಿ 101 ಕೋಟಿ ರೂ.ಗಿಂತ ಹೆಚ್ಚು ವೆಚ್ಚ ಮಾಡಿದ್ದು, ಇದು ಕಾಂಗ್ರೆಸ್, ದ್ರಾವಿಡ ಮುನ್ನೇತ್ರ ಕಳಗಂ (DMK), ಮತ್ತು ರಾಜಕೀಯ ಸಲಹಾ ಸಂಸ್ಥೆ ಇಂಡಿಯನ್ ಪೊಲಿಟಿಕಲ್ ಆಕ್ಷನ್ ಕಮಿಟಿ (I-PAC) ಮೇ 2018ರಿಂದ Google ಜಾಹೀರಾತುಗಳ ಪಾರದರ್ಶಕತೆ ವರದಿಯನ್ನು ಪ್ರಕಟಿಸಲು ಪ್ರಾರಂಭಿಸಿದಾಗಿನಿಂದ ಮಾಡಿದ ವೆಚ್ಚಕ್ಕೆ ಸಮಾನವಾಗಿದೆ.

ಇಂಡಿಯಾ ಟುಡೇ ವಿಶ್ಲೇಷಣೆಯ ಪ್ರಕಾರ, ಮೇ 31, 2018 ಮತ್ತು ಏಪ್ರಿಲ್ 25, 2024 ರ ನಡುವೆ ಪ್ರಕಟವಾದ Google ಜಾಹೀರಾತುಗಳಲ್ಲಿ ಬಿಜೆಪಿಯ ಪಾಲು ಒಟ್ಟು ಖರ್ಚಿನ ಶೇಕಡಾ 26 ರಷ್ಟಿದೆ, ಅಂದರೆ 390 ಕೋಟಿ ರೂ.ಆಗಿದೆ.

Googleನಿಂದ “ರಾಜಕೀಯ ಜಾಹೀರಾತು” ಎಂದು ವಿವರಿಸಲಾದ ಒಟ್ಟು 2,17,992 ವಿಷಯ ತುಣುಕುಗಳಲ್ಲಿ  1,61,000 ಕ್ಕಿಂತ ಹೆಚ್ಚು ಅಂದರೆ 73% ಈ ಅವಧಿಯಲ್ಲಿ ಬಿಜೆಪಿ ಪ್ರಕಟಿಸಿದೆ. ಬಿಜೆಪಿ ಪಕ್ಷದ ಬಹುಪಾಲು ಜಾಹೀರಾತುಗಳು ಕರ್ನಾಟಕದ ನಿವಾಸಿಗಳನ್ನು ಟಾರ್ಗೆಟ್‌ ಮಾಡಿಕೊಂಡು ನೀಡಲಾಗಿದ್ದು, ಇದಕ್ಕೆ 10.8 ಕೋಟಿ ರೂಪಾಯಿಗಳನ್ನು ವೆಚ್ಚ ಮಾಡಲಾಗಿದೆ, ನಂತರ ಉತ್ತರ ಪ್ರದೇಶದಲ್ಲಿ 10.3 ಕೋಟಿ, ರಾಜಸ್ಥಾನದಲ್ಲಿ 8.5 ಕೋಟಿ ರೂ, ಮತ್ತು ದೆಹಲಿಯಲ್ಲಿ 7.6 ಕೋಟಿ ರೂ. ವೆಚ್ಚ ಮಾಡಲಾಗಿದೆ.

ಒಟ್ಟಾರೆಯಾಗಿ, ತಮಿಳುನಾಡನ್ನು ಹೆಚ್ಚು ಟಾರ್ಗೆಟ್‌ ಮಾಡಿಕೊಂಡು ಗೂಗಲ್‌ನಲ್ಲಿ ಹೆಚ್ಚಾಗಿ ‘ರಾಜಕೀಯ ಜಾಹೀರಾತುಗಳನ್ನು’ ನೀಡಲಾಗಿದೆ. ನಂತರದ ಸಾಲಿನಲ್ಲಿ ತೆಲಂಗಾಣ, ಉತ್ತರ ಪ್ರದೇಶ, ಕರ್ನಾಟಕ ಮತ್ತು ಮಧ್ಯಪ್ರದೇಶ ರಾಜ್ಯಗಳಿವೆ ಎಂದು ವಿಶ್ಲೇಷಣೆಯು ತಿಳಿಸಿದೆ.

ಪಾರದರ್ಶಕತೆ ಕೇಂದ್ರದ ಮಾಹಿತಿಯ ಪ್ರಕಾರ, 45 ಕೋಟಿ ರೂಪಾಯಿಗಳೊಂದಿಗೆ, ಗೂಗಲ್ ಜಾಹೀರಾತುಗಳು ಮತ್ತು ವಿಡಿಯೋ ಜಾಹೀರಾತುಗಳೊಂದಿಗೆ ರಾಜಕೀಯ ವೆಚ್ಚದಲ್ಲಿ ಕಾಂಗ್ರೆಸ್ ಎರಡನೇ ಸ್ಥಾನದಲ್ಲಿದೆ. ಕಾಂಗ್ರೆಸ್‌ ಪಾರ್ಟಿ ಈ ಅವಧಿಯಲ್ಲಿ 5,992 ಆನ್‌ಲೈನ್ ಜಾಹೀರಾತುಗಳನ್ನು ಪ್ರಕಟಿಸಿದೆ, ಬಿಜೆಪಿಯ ಜಾಹೀರಾತುಗಳಿಗೆ ಹೋಲಿಕೆ ಮಾಡಿದರೆ ಇದು ಕೇವಲ 3.7 ಪ್ರತಿಶತದಷ್ಟು ಮಾತ್ರವಾಗಿದೆ. ಕಾಂಗ್ರೆಸ್‌ ಜಾಹೀರಾತು ಪ್ರಚಾರಗಳು ಪ್ರಾಥಮಿಕವಾಗಿ ಕರ್ನಾಟಕ ಮತ್ತು ತೆಲಂಗಾಣ ಮತ್ತು ಮಧ್ಯಪ್ರದೇಶದ ಮೇಲೆ ಕೇಂದ್ರೀಕೃತವಾಗಿತ್ತು.

ತಮಿಳುನಾಡಿನ ಆಡಳಿತ ಪಕ್ಷವಾದ ಡಿಎಂಕೆ, ಗೂಗಲ್ ಪ್ಲಾಟ್‌ಫಾರ್ಮ್‌ಗಳಲ್ಲಿ ಮೂರನೇ ಅತಿ ದೊಡ್ಡ ರಾಜಕೀಯ ಜಾಹೀರಾತುದಾರರಾಗಿದ್ದು, ಮೇ 2018 ರಿಂದ 42ಕೋಟಿ ರೂಪಾಯಿಗಳನ್ನು ಖರ್ಚು ಮಾಡಿದೆ. Googleನಲ್ಲಿ ಭಾರತ್ ರಾಷ್ಟ್ರ ಸಮಿತಿಯ (BRS) ನವೆಂಬರ್ 2023ರಲ್ಲಿ ವಿಧಾನ ಸಭೆ ಚುನಾವಣೆ ವೇಳೆ ಜಾಹೀರಾತುಗಳನ್ನು ಪ್ರಕಟಿಸಿರುವುದನ್ನು ವಿಶ್ಲೇಷಣೆಯು ಗಮನಿಸಿದೆ.

ಲೋಕಸಭೆ ಚುನಾವಣೆಯ ಎರಡನೇ ಹಂತದ ಪ್ರಚಾರದ ಸಮಯದಲ್ಲಿ, ರಾಜಕೀಯ ಪಕ್ಷಗಳು ತಮ್ಮ ಪ್ರಣಾಳಿಕೆ, ನೀತಿಗಳು ಮತ್ತು ಸಾಧನೆಗಳನ್ನು ಪ್ರಚಾರ ಮಾಡಲು ಕನಿಷ್ಠ 14.7 ಕೋಟಿ ರೂ.ವೆಚ್ಚ ಮಾಡಿದೆ. ಏಪ್ರಿಲ್ 18 ಮತ್ತು ಏಪ್ರಿಲ್ 24ರ ನಡುವೆ ಕಾಂಗ್ರೆಸ್‌ 5.7 ಕೋಟಿ ರೂಪಾಯಿ ವೆಚ್ಚದೊಂದಿಗೆ ಮೊದಲ ಸ್ಥಾನದಲ್ಲಿದೆ ಮತ್ತು ಬಿಜೆಪಿಯು 5.3 ಕೋಟಿ ರೂಪಾಯಿಗಳೊಂದಿಗೆ ಎರಡನೇ ಸ್ಥಾನದಲ್ಲಿದೆ.

ಇದನ್ನು ಓದಿ: ಚಿಕ್ಕಬಳ್ಳಾಪುರದಲ್ಲಿ 4.8 ಕೋಟಿ ನಗದು ವಶ: ಬಿಜೆಪಿ ಅಭ್ಯರ್ಥಿ ಡಾ. ಕೆ.ಸುಧಾಕರ್‌ ವಿರುದ್ಧ ಪ್ರಕರಣ ದಾಖಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...